Tag: ಮಂಕಾಳು ವೈದ್ಯ

  • ಇನ್ಮುಂದೆ ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ: ಮಂಕಾಳು ವೈದ್ಯ

    ಇನ್ಮುಂದೆ ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ: ಮಂಕಾಳು ವೈದ್ಯ

    ಕಾರವಾರ: ಇನ್ಮುಂದೆ ಗೋಹತ್ಯೆ (Cow Slaughter) ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ (Mankal Vaidya) ಗುಡುಗಿದ್ದಾರೆ.

    ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಮನೆಯಲ್ಲಿ ಪಿ.ರಾಜೀವ್ ಗುಪ್ತ ಮೀಟಿಂಗ್

    ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತ ಇರಲಿ. ದಿನಕರ ಶೆಟ್ಟಿ ಈಗ ಏನು ದಿನಕರ ಖಾನ್ ಆಗಿದ್ದಾರಾ? ದಿನಕರ ಶೆಟ್ಟಿ ಅವರೇ ನಮ್ಮ ಸಿಎಂ ಬಗ್ಗೆ, ಸಚಿವರ ಬಗ್ಗೆ ಬಾಯಿಗೆ ಬಂದಂಗೆ ಮಾತನಾಡಬೇಡಿ. ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಆರೋಪಿಗಳನ್ನ ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇನೆ. ಪೊಲೀಸರು ಆರೋಪಿಗಳನ್ನ ಬಂಧಿಸಿ ಅದರ ಮುಂದೆ ಇನ್ನೊಂದ ಹೆಜ್ಜೆ ಇಟ್ಟಿದ್ದಾರೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಗೋಹತ್ಯೆ ಆಗಬಾರದು. ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡ ಹಾಕ್ತೀವಿ ಎಂದು ಎಚ್ಚರಿಸಿದ್ದಾರೆ.

    ದುಡಿದುಕೊಂಡು ತಿನ್ನೋಕೆ ಬಹಳಷ್ಟು ದಾರಿ ಇದೆ. ಬದುಕಿ ಜೀವನ ಮಾಡಿ, ಗೋಹತ್ಯೆ ಮಾಡಿ ಜೀವನ ಮಾಡುವುದನ್ನ ನಿಲ್ಲಿಸಿ. ಈ ಕೃತ್ಯದ ಹಿಂದೆ ಯಾವುದೇ ಧರ್ಮದವರಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ವಾರದಲ್ಲಿ ಪಕ್ಷದ ಗೊಂದಲಗಳಿಗೆ ತೆರೆ – ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ : ವಿಜಯೇಂದ್ರ ವಿಶ್ವಾಸ

  • ಸೆಟ್ಲ್‌ಮೆಂಟ್‌ ಆರೋಪ ಮಾಡಿದ್ದ ಸಚಿವ ಮಂಕಾಳು ವೈದ್ಯ – ಉ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬದಲಾವಣೆ

    ಸೆಟ್ಲ್‌ಮೆಂಟ್‌ ಆರೋಪ ಮಾಡಿದ್ದ ಸಚಿವ ಮಂಕಾಳು ವೈದ್ಯ – ಉ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬದಲಾವಣೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಗುತ್ತಿಗೆ ಕಂಪನಿಯೊಂದಿಗೆ ಸೆಟ್ಲ್‌ಮೆಂಟ್‌ ಮಾಡಿಕೊಳ್ಳುತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬದಲಾವಣೆ ಮಾಡಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಎಸ್.ಕಲ್ಪನಾ ಆದೇಶ ಹೊರಡಿಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರ ಸ್ಥಾನಕ್ಕೆ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅವರನ್ನು ನೇಮಿಸಲಾಗಿದೆ.

    ಸಚಿವರ ಆರೋಪ ಏನಾಗಿತ್ತು?
    ನ.1 ರಂದು ಕಾರವಾರ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ರಾಷ್ಟ್ರೀಯ ಹೆದ್ದಾರಿ 766E ಕಾಮಗಾರಿ ನಿಮಿತ್ತ ಶಿರಸಿ-ಕುಮಟಾ ಹೆದ್ದಾರಿ ಬಂದ್ ಮಾಡುವ ಕುರಿತು ಮಾತನಾಡಿ, ಇಲ್ಲಿ ಉಸ್ತುವಾರಿ ನೋಡಿಕೊಳ್ಳಲು ಒಬ್ಬರಿದ್ದಾರೆ. ರಿತೇಶ್ ಕುಮಾರ್ ಸಿಂಗ್ ಎಂದು ಇಲ್ಲಿ ಉಸ್ತುವಾರಿನೋ ಅಥವಾ ಆರ್‌ಎನ್‌ಎಸ್ , IRB ಕಂಪನಿಗಳ ಸೆಟ್ಲ್‌ಮೆಂಟ್‌ಗೆ ಬರುತ್ತಾರೋ ಗೊತ್ತಿಲ್ಲ. ನಮ್ಮ ಯಾವ ಮೀಟಿಂಗ್‌ಗೂ ಬಂದಿಲ್ಲ.

    ಅವರು ಬಂದ್ ಮಾಡಿಸುವಂತೆ ಮಾಡಲು ಕೊಟ್ಟು ಹೋಗಿದ್ದಾರೆ. ಕಳೆದ ತಿಂಗಳು ಬಂದ್ ಆಗಬೇಕಿತ್ತು. ನ.1 ರಲ್ಲಿ ಬಂದ್ ಮಾಡಿಸುವಂತೆ ಕೊಟ್ಟಿದ್ದಾರೆ. ಉಸ್ತುವಾರಿ ಎಂದು ಇದ್ದಾರೆ. ನಮ್ಮಲ್ಲಿ ಯಾವುದು ಉಸ್ತುವಾರಿ ಎಂದು ನೋಡಬೇಕು. ಸೆಟ್ಲ್‌ಮೆಂಟ್‌ ಉಸ್ತುವಾರಿಯೋ ಏನು ಎಂದು ತಿಳಿದುಕೊಳ್ತೇನೆ. ಯಾವುದೇ ಕಾರಣಕ್ಕೆ ಶಿರಸಿ-ಕುಮಟಾ ರಸ್ತೆ ಬಂದ್ ಆಗಬಾರದು. ಕಂಪನಿಗೆ 3 ವರ್ಷ ಅಗ್ರಿಮೆಂಟ್ ಮಾಡಿ ಕೊಟ್ಟಿದ್ರೂ ಕೆಲಸ ಆಗಲಿಲ್ಲ.

    ಪುನಃ ಅಗ್ರಿಮೆಂಟ್ ಮಾಡಿಕೊಟ್ಟಿದ್ದಾರೆ. ಯಾವುದೇ ಅಗ್ರಿಮೆಂಟ್‌ನಲ್ಲಿ ಬಂದ್ ಮಾಡಿ ಕೊಡಬೇಕು ಎಂದು ಇಲ್ಲ. ಸಂಸದರು ಬಂದ್ ಮಾಡಬೇಕು ಎಂದು ಹೇಳಿತ್ತಿದ್ದಾರೆ. ಅವರ ಆಸಕ್ತಿ ಏನಿದೆ ಗೊತ್ತಿಲ್ಲ. ನಮ್ಮ ಶಾಸಕರೂ ಬೆಂಬಲ ಕೊಡ್ತಾ ಇದ್ದಾರೆ. ಅವರು ಆ ರೀತಿ ಬೆಂಬಲ ಕೊಡುತ್ತಿರುವುದರಿಂದ ನಾನೂ ಸುಮ್ಮನಿದ್ದೇನೆ ಎಂದ ಸಚಿವ ಮಂಕಾಳು ವೈದ್ಯ ಹೇಳಿದ್ದರು.

    ಇದರ ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಸಚಿವರ ಯಾವುದೇ ಸಭೆಗೆ ಹಾಜುರಾಗದ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯ ಕರ್ತವ್ಯದ ಬಗ್ಗೆ ಉಸ್ತುವಾರಿ ಸಚಿವರೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು. ಈ ಘಟನೆ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಡುವೆ ವೈಮನಸ್ಸು ಉಂಟಾಗಿತ್ತು. ಇದೀಗ ಕಾರ್ಯದರ್ಶಿ ಬದಲಾವಣೆ ಸಹ ಮಾಡಲಾಗಿದೆ.

  • ಕರ್ನಾಟಕ ಸರ್ಕಾರ ಆರ್ಥಿಕವಾಗಿ ಸುಭದ್ರ.. ಗ್ಯಾರಂಟಿ ಯೋಜನೆಗೆ ಹಣದ ಕೊರತೆ ಇಲ್ಲ: ಸಚಿವ ಮಂಕಾಳು ವೈದ್ಯ

    ಕರ್ನಾಟಕ ಸರ್ಕಾರ ಆರ್ಥಿಕವಾಗಿ ಸುಭದ್ರ.. ಗ್ಯಾರಂಟಿ ಯೋಜನೆಗೆ ಹಣದ ಕೊರತೆ ಇಲ್ಲ: ಸಚಿವ ಮಂಕಾಳು ವೈದ್ಯ

    ಕಾರವಾರ: ಗ್ಯಾರಂಟಿ ಯೋಜನೆ ಸರ್ಕಾರ ಹಾಗೂ ‌ಡಿ.ಕೆ.ಶಿವಕುಮಾರ್ ಅವರ ಕನಸ್ಸಿನ‌ ಯೋಜನೆ. ಯಾವ ಗ್ಯಾರಂಟಿಯನ್ನೂ ಸರ್ಕಾರ ಬಂದ್ ಮಾಡುವುದಿಲ್ಲ ಎಂದು ಸಚಿವ ಮಂಕಾಳು ವೈದ್ಯ (Mankal Vaidya) ತಿಳಿಸಿದರು.

    ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಜನರಿಗೆ ಅವಶ್ಯಕತೆ ಇದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಅವಶ್ಯಕತೆ ಇರುವ ಯೋಜನೆ ಬಂದ್ ಮಾಡುವುದಿಲ್ಲ. ಸರ್ಕಾರದ ಬಳಿ ಗ್ಯಾರಂಟಿಗೆ ಹಣದ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 17 ಕೆರೆ ತುಂಬಿಸಿದವ್ರನ್ನ ಭಗೀರಥ ಅನ್ನೋದಾದ್ರೆ 107 ಕೆರೆ ತುಂಬಿಸಿದ ನನ್ನನ್ನು ಏನಂತೀರಿ? – ಹೆಚ್‌ಡಿಕೆ

    ಗ್ಯಾರಂಟಿಗಾಗಿ ಬಜೆಟ್‌ನಲ್ಲಿ ತಗಲುವುದು ಶೇ.20 ರಷ್ಟು ಹಣ ಮಾತ್ರ. ನಮ್ಮ ರಾಜ್ಯದಲ್ಲಿ ಐದು ಗ್ಯಾರಂಟಿ ಜಾರಿಗೆ ತಂದ ಬಳಿಕ ಸರ್ಕಾರ ದಿವಾಳಿ ಆಗಿಲ್ಲ. ಬೇರೆ ರಾಜ್ಯದಲ್ಲಿ ಜಾರಿಗೆ ತರುವಾಗ ಬಜೆಟ್ ನೊಡುವಂತೆ ಖರ್ಗೆಯವರು ಹೇಳಿದ್ದಾರೆ. ಕರ್ನಾಟಕ ಸರ್ಕಾರ ಆರ್ಥಿಕವಾಗಿ ಸುಭದ್ರವಾಗಿದೆ. ನಮ್ಮ ಸರ್ಕಾರದ 20% ಬಜೆಟ್ ಮಾತ್ರ ಗ್ಯಾರಂಟಿಗೆ ಬಳಸುತ್ತಿದ್ದೇವೆ. ಉಳಿದ ಹಣದಲ್ಲಿ ಎಂದಿನಂತೆ ರಾಜ್ಯದ ಅಭಿವೃದ್ದಿ ಕಾರ್ಯ ಮುಂದುವರೆದಿದೆ ಎಂದರು.

  • ಗ್ಯಾರಂಟಿ ಯೋಜನೆಯ ಫಲವನ್ನು ಆರ್ಥಿಕ ಸ್ಥಿತಿವಂತರು ಬಿಡಬೇಕು :ಸಚಿವ ಮಂಕಾಳು ವೈದ್ಯ

    ಗ್ಯಾರಂಟಿ ಯೋಜನೆಯ ಫಲವನ್ನು ಆರ್ಥಿಕ ಸ್ಥಿತಿವಂತರು ಬಿಡಬೇಕು :ಸಚಿವ ಮಂಕಾಳು ವೈದ್ಯ

    ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳು (Congress Guarantee) ರಾಜ್ಯದ ಎಲ್ಲರಿಗೂ ಉಚಿತ ಎಂದು ಪ್ರಚಾರ ಮಾಡಿದ್ದ ಕಾಂಗ್ರೆಸ್‌ ನಾಯಕರು ಈಗ ನಿಧಾನವಾಗಿ ತಮ್ಮ ವರಸೆಯನ್ನು ಬದಲಾಯಿಸುತ್ತಿದ್ದು ಇದಕ್ಕೆ ಹೊಸದಾಗಿ ಮಂಕಾಳು ವೈದ್ಯ (Mankala Vaidya) ಸೇರ್ಪಡೆಯಾಗಿದ್ದಾರೆ.

    ಆರ್ಥಿಕ ಸ್ಥಿತಿವಂತರು ಗ್ಯಾರಂಟಿ ಯೋಜನೆಯ (Guarantee scheme) ಲಾಭ ಪಡೆಯದೇ ಬಡವರಿಗೆ ಅವಕಾಶ ಮಾಡಿಕೊಡಬೇಕು ಎಂದು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.

    ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಮಂಕಾಳು ವೈದ್ಯ, ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಹೆಚ್ಚು ಹೊರೆಯಾಗುತ್ತಿದೆ. ಹೀಗಾಗಿ ಆರ್ಥಿಕವಾಗಿ ಸ್ಥಿತಿವಂತರಿರುವ ಜನ ಇದರ ಲಾಭ ಪಡೆಯದೇ ಬಿಡಬೇಕು. ಬಡವರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ‘ಗ್ಯಾರಂಟಿ’ಗಾಗಿ ಭೂಮಿ ಮಾರಲು ಮುಂದಾಯ್ತಾ ಸರ್ಕಾರ?

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕೆಲಸ ಮಾಡಿಲ್ಲ. ಜನ ತಮಗೆ ಬೇಕಾದವರನ್ನು ಆಯ್ಕೆ ಮಾಡಿದ್ದಾರೆ. ಗ್ಯಾರಂಟಿ ಕಾರ್ಡ್‌ ನೀಡಿದಂತೆ ಜನರ ಬಳಿಯೂ ಕಾಂಗ್ರೆಸ್‌ಗೆ ಮತ ಹಾಕುವಂತೆ ಬರೆಸಿಕೊಂಡಿದ್ದರೆ ಪಕ್ಷ ಗೆಲ್ಲುತಿತ್ತೇನೋ ಎಂದು ಹೇಳಿದರು.

    ನಮಗೆ ಮತ ಹಾಕಬೇಕು ಎಂಬ ಕಾರಣಕ್ಕೆ ಗ್ಯಾರಂಟಿ ಯೋಜನೆ ತಂದಿಲ್ಲ. ಎಷ್ಟೋ ಜನ ಬಡವರು ವಿದ್ಯುತ್ ಬಿಲ್ ಸಹ ಕಟ್ಟಲಾಗದಿದ್ದನ್ನು ನಾವು ಕಂಡಿದ್ದೇವೆ. ಅಂತವರಿಗೆ ಸಹಾಯ ಆಗಬೇಕು, ಬಡವರಿಗೆ ಇದರಿಂದ ಸಹಾಯವಾಗಬೇಕು ಎಂದು ತಂದಿದ್ದೇವೆ ಎಂದರು‌. ಇದನ್ನೂ ಓದಿ: ಅನುದಾನ ಸಿಗುತ್ತಿಲ್ಲ – ಸರ್ಕಾರದ ವಿರುದ್ಧವೇ ಕೈ ಶಾಸಕ ನಾಡಗೌಡ ಅಸಮಾಧಾನ

  • ಮಂಗನಕಾಯಿಲೆಗೆ 9 ಮಂದಿ ಸಾವು- ಶೀಘ್ರ ಪರಿಹಾರಕ್ಕಾಗಿ ಮಂಕಾಳು ವೈದ್ಯ ತಾಕೀತು

    ಮಂಗನಕಾಯಿಲೆಗೆ 9 ಮಂದಿ ಸಾವು- ಶೀಘ್ರ ಪರಿಹಾರಕ್ಕಾಗಿ ಮಂಕಾಳು ವೈದ್ಯ ತಾಕೀತು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ (Kyasanur Forest Disease (KFD) 9 ಜನ ಸಾವನ್ನಪ್ಪಿದ್ದು, ಶೀಘ್ರವೇ ಪರಿಹಾರ ನೀಡುವಂತೆ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಆಗ್ರಹಿಸಿದ್ದಾರೆ.

    ಇಂದು ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರು ಮಂಗನಕಾಯಿಲೆಯಿಂದ ಮೃತರಾದವರಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.

    ಒಟ್ಟು 112 ಜನ ಅನಾರೋಗ್ಯಕ್ಕೊಳಗಾಗಿದ್ದರು. ಈ ಹಿಂದೆ ಸಾವು ಕಂಡವರಿಗೆ ಸರ್ಕಾರ ಪರಿಹಾರ ನೀಡಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಾದವರಿಗೆ ಯಾವುದೇ ಪರಿಹಾರ ನೀಡಿರಲಿಲ್ಲ. ಈ ಬಾರಿ ಕೂಡ 9 ಮಂದಿ ಬಲಿಯಾಗಿದ್ದಾರೆ. ಹೀಗಿದ್ದರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

  • ಬಿಜೆಪಿಯವರದ್ದು ಬೋಗಸ್ ಪ್ರೀತಿ, ಇವೆಲ್ಲಾ ನಾಟಕ ಬಂದ್ ಮಾಡಲಿ: ಮಂಕಾಳು ವೈದ್ಯ

    ಬಿಜೆಪಿಯವರದ್ದು ಬೋಗಸ್ ಪ್ರೀತಿ, ಇವೆಲ್ಲಾ ನಾಟಕ ಬಂದ್ ಮಾಡಲಿ: ಮಂಕಾಳು ವೈದ್ಯ

    ಕಾರವಾರ: ಬಿಜೆಪಿಯವರು (BJP) ರಾಜಕಾರಣಕ್ಕೋಸ್ಕರ (Politics) ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿಯವರದ್ದು ಮೂರು ಅಜೆಂಡಾವಿದೆ. ಸುಳ್ಳು ಹೇಳೋದು, ಗಲಭೆ ಮಾಡೋದು, ದೇವರ ಹೆಸರಲ್ಲಿ ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವುದು ಎಂದು ಉತ್ತರ ಕನ್ನಡ (Uttara Kannada) ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಅಯೋಧ್ಯೆ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾರ್ಯಕ್ರಮದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರದ್ದು ಬೋಗಸ್ ಭಕ್ತಿ. ರಾಮಮಂದಿರ ಉದ್ಘಾಟನೆ ಆಗದೇ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ಪೂಜೆಯೇ ಆಗದೇ ಮಂತ್ರಾಕ್ಷತೆ ಹೇಗೆ ಕೊಡುತ್ತಾರೆ? ಅಕ್ಷತೆ ಕೊಟ್ಟು, ಮಂತ್ರಾಕ್ಷತೆ ಕೊಟ್ಟು ಕರೆಯುವುದೇನೋ ಸರಿ. ಯಾಕೆ ಮೋದಿ ಫೋಟೋ, ಕಟೌಟ್ ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಅಕ್ಷತೆ ಕೊಡುವಲ್ಲಿ ಮೋದಿ ವಿಚಾರ ಏಕೆ ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನ ಕರೆದು ಸಿಎಂ ಬುದ್ಧಿ ಮಾತು ಹೇಳಲಿ: ಹೆಚ್‌ಡಿಕೆ

    ಇದು ಯಾರ ದುಡ್ಡು? ಹಣ ನಾವು ಕೂಡ ಕೊಟ್ಟಿದ್ದೇವೆ. ಇದೆಲ್ಲಾ ನಾಟಕವನ್ನು ಬಿಜೆಪಿಯವರು ಬಂದ್ ಮಾಡುವುದು ಒಳ್ಳೆಯದು. ಬಿಜೆಪಿಯವರು ಸತ್ಯ ಹೇಳುವುದಿಲ್ಲ. ಸುಳ್ಳನ್ನೇ ಹೇಳುತ್ತಾರೆ. ಯಾವ ಎಲೆಕ್ಷನ್‌ನಲ್ಲೂ ಗಲಭೆ ಮಾಡದೇ ಇಲ್ಲ. ರಾಮನ ನಿಜಭಕ್ತರಾದರೇ ಹೀಗೆ ಮಾಡುವುದಿಲ್ಲ. ನಿಜವಾದ ಭಕ್ತರು ಗಲಾಟೆ ಮಾಡುವುದಿಲ್ಲ. ನಾವು ಕೂಡ ರಾಜ್ಯದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದೇವೆ ಎಂದರು. ಇನ್ನೂ ಬಿಕೆ ಹರಿಪ್ರಸಾದ್ ಅವರು ನೀಡಿದ ಗೋಧ್ರಾ ಹತ್ಯೆ ಹೇಳಿಕೆ ಸರಿಯಾಗಿದ್ದು, ಅವರು ಜನರಲ್ಲಿ ಜಾಗೃತಿ ಮೂಡಿಸಲು ಗೋಧ್ರಾ ಹತ್ಯೆ ಹೇಳಿಕೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಬೆಂ-ಮೈ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ 688 ಕೋಟಿ ವ್ಯಯಿಸಲು ಕೇಂದ್ರ ನಿರ್ಧಾರ

  • ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ – 13 ಐಲ್ಯಾಂಡ್ ಅಭಿವೃದ್ಧಿ: ಮಂಕಾಳ್ ವೈದ್ಯ

    ಮಂಗಳೂರು, ಕಾರವಾರದಲ್ಲಿ ಬಂದರು ನಿರ್ಮಾಣ – 13 ಐಲ್ಯಾಂಡ್ ಅಭಿವೃದ್ಧಿ: ಮಂಕಾಳ್ ವೈದ್ಯ

    ಬೆಂಗಳೂರು: ಮಂಗಳೂರು (Mangaluru) ಮತ್ತು ಕಾರವಾರದಲ್ಲಿ (Karawara) ಬಂದರು ನಿರ್ಮಾಣ ಮಾಡಲಾಗುತ್ತದೆ ಎಂದು ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ್ ವೈದ್ಯ (Mankal Vaidya) ತಿಳಿಸಿದ್ದಾರೆ.

    ಉತ್ತರ ಕನ್ನಡ,  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆ ವಿಧಾನಸೌಧದಲ್ಲಿ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಮಂಕಾಳ್ ವೈದ್ಯ, ಕಾರವಾರ, ಮಂಗಳೂರಿನಲ್ಲಿ ಬಂದರು ಮಾಡಲು ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ. 1 ಕೋಟಿ ರೂ. ನಿಂದ 1 ಸಾವಿರ ಕೋಟಿ ರೂ.ನಲ್ಲಿ ಬಂದರು (Port) ಮಾಡಬಹುದು. ಯಾವ ಮಾದರಿಯಲ್ಲಿ ಬಂದರು ಮಾಡಬೇಕು ಎಂದು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ. ಮಾರುಕಟ್ಟೆ ಮತ್ತು ಪ್ರವಾಸೋದ್ಯಮ ಗಮನದಲ್ಲಿಟ್ಟುಕೊಂಡು ಬಂದರು ಮಾಡಲು ಚರ್ಚೆಯಾಗಿದೆ. ಆದಷ್ಟು ಬೇಗ ಇದಕ್ಕೆ ಬ್ಲೂ ಪ್ರಿಂಟ್ ರೆಡಿ ಮಾಡುವುದಾಗಿ ತಿಳಿಸಿದರು.

    ಮೀನುಗಾರರಿಗೆ 200 ಲೀಟರ್ ಡೀಸೆಲ್ ಕೊಡುವುದಾಗಿ ಹೇಳಿದ್ದೇವೆ ಅದನ್ನು ಕೊಡುತ್ತೇವೆ. ಮೀನುಗಾರರಿಗೆ ಸೀಮೆಎಣ್ಣೆ ಬಗ್ಗೆ ಸಮಸ್ಯೆ ‌ಇತ್ತು. ಇದರಿಂದ ಮೀನುಗಾರಿಗೆ ಸಮಸ್ಯೆ ಆಗುತ್ತಿತ್ತು. ಹೀಗಾಗಿ 10 ತಿಂಗಳು ಬಿಳಿ ಸೀಮೆಎಣ್ಣೆಯನ್ನು ಸರ್ಕಾರವೇ ಖರೀದಿ ಮಾಡಿ 35 ರೂಪಾಯಿ ಸಬ್ಸಿಡಿ ದರದಲ್ಲಿ ಮೀನುಗಾರಿಕೆ (Fishing) ಮಾಡುವವರಿಗೆ ಕೊಡುತ್ತಿದ್ದೇವೆ. ಕೇಂದ್ರ ಸರ್ಕಾರ ಸೀಮೆಎಣ್ಣೆ ಕೊಡುತ್ತಿಲ್ಲ. ಹೀಗಾಗಿ ದೇಶದಲ್ಲಿ ‌ಮೊದಲ ಬಾರಿಗೆ ನಾವೇ ಸೀಮೆಎಣ್ಣೆ ‌ಕೊಡುತ್ತಿದ್ದೇವೆ. ಸರ್ಕಾರ 300 ಲೀಟರ್ ನೀಡಲು ಸಿದ್ದ ಎಂದು ಹೇಳಿದರು.  ಇದನ್ನೂ ಓದಿ: ಬ್ರಿಟನ್‌ನಲ್ಲಿ ಹಿಂದೂಗಳೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ರಿಷಿ ಸುನಾಕ್‌, ಪತ್ನಿ ಅಕ್ಷತಾ ಮೂರ್ತಿ

    ಬೆಂಗಳೂರಿನಲ್ಲಿ ನವೆಂಬರ್ 21 ರಂದು ವಿಶ್ವ ಮೀನುಗಾರಿಕೆ ದಿನ ಕಾರ್ಯಕ್ರಮ ಮಾಡುತ್ತಿದ್ದೇವೆ. ಅಂದು 8 ಲಕ್ಷ ಮೌಲ್ಯದ ಮೀನುಗಾರರಿಗೆ ಮೀನು ಮಾರಾಟ ಮಾಡುವ ಗಾಡಿ ಕೊಡುತ್ತಿದ್ದೇವೆ. 300 ಗಾಡಿ ಪೈಕಿ ಬೆಂಗಳೂರಿಗೆ 150 ಗಾಡಿ ಕೊಡುತ್ತಿದ್ದೇವೆ. ಸರ್ಕಾರ ಸೆಕ್ಯುರಿಟಿ ಫಂಡ್ ಹೆಸರಿನಲ್ಲಿ ಫಲಾನುಭವಿಗಳಿಂದ 2 ಲಕ್ಷ ರೂ. ಡೆಪಾಸಿಟ್ ಪಡೆದುಕೊಳ್ಳುತ್ತದೆ. ಎಸ್‌ಸಿ ಎಸ್‌ಟಿ ಫಲಾನುಭವಿಗಳಿಂದ 1.5 ಲಕ್ಷ ರೂ. ಡೆಪಾಸಿಟ್‌ ತೆಗೆದುಕೊಳ್ಳುತ್ತೇವೆ ಎಂದರು.

     

    3 ಜಿಲ್ಲೆಗಳಲ್ಲಿ 13 ಐಲ್ಯಾಂಡ್ ಗುರುತಿಸಿದ್ದು, ಅಭಿವೃದ್ಧಿ ಮಾಡಲು ಪಿಪಿಪಿ ಮಾಡೆಲ್ ಮಾಡಬೇಕಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ. ಐಲ್ಯಾಂಡ್ ಅಭಿವೃದ್ಧಿ ಮಾಡಿದರೆ ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆ. ಈ‌ ನಿಟ್ಟಿನಲ್ಲಿ ಇವತ್ತಿನ ಸಭೆಯಲ್ಲಿ ಚರ್ಚೆಯಾಗಿದೆ ಎಂದರು. ಅಂಕೋಲದಲ್ಲಿ (Ankola)‌ ವಿಮಾನ ನಿಲ್ದಾಣಕ್ಕೆ (Air Port) ಬೇಕಾದ ಜಮೀನು ಖರೀದಿಯ ಪ್ರಕ್ರಿಯೆಗಳು ನಡೆಯುತ್ತಿವೆ. ಭೂಮಿ ಕೊಡುವವರಿಗೆ ಪರ್ಯಾಯ ಭೂಮಿ ನೀಡಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

  • ಕಾಂಗ್ರೆಸ್‍ನವರಿಗೆ ಏನೂ ಮಾಡಲು ಸಾಧ್ಯವಿಲ್ಲ, ಜೆಡಿಎಸ್‍ನೊಂದಿಗೆ ಗೆಲ್ಲಲು ಹೋಗಿದ್ದಾರೆ: ಮಂಕಾಳು ವೈದ್ಯ ಯಡವಟ್

    ಕಾಂಗ್ರೆಸ್‍ನವರಿಗೆ ಏನೂ ಮಾಡಲು ಸಾಧ್ಯವಿಲ್ಲ, ಜೆಡಿಎಸ್‍ನೊಂದಿಗೆ ಗೆಲ್ಲಲು ಹೋಗಿದ್ದಾರೆ: ಮಂಕಾಳು ವೈದ್ಯ ಯಡವಟ್

    ಕಾರವಾರ: ಭಾಷಣ ಮಾಡುವಾಗ ಕಾಂಗ್ರೆಸ್‍ನವರಿಗೆ (Congress) ಏನೂ ಮಾಡಲು ಸಾಧ್ಯವಾಗುವುದಿಲ್ಲ, ಜೆಡಿಎಸ್ (JDS) ಜೊತೆ ಸೇರಿ ಗೆಲ್ಲಲು ಹೋಗಿದ್ದಾರೆ ಎಂದು ಹೇಳುವ ಮೂಲಕ ಮೀನುಗಾರಿಕಾ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಯಡವಟ್ ಮಾಡಿಕೊಂಡಿದ್ದಾರೆ.

    ಮುರ್ಡೇಶ್ವರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಒಟ್ಟಾದರೂ ನಮಗೆ ಏನೂ ತೊಂದರೆ ಆಗುವುದಿಲ್ಲ. ನಾವು ಎಲ್ಲಾ ರೀತಿಯಲ್ಲೂ ತಯಾರಾಗಿದ್ದೇವೆ ಎಂದು ಬಾಯಿತಪ್ಪಿ ಹೇಳಿದ್ದಾರೆ. ಬಳಿಕ ತಮ್ಮ ತಪ್ಪಿನ ಅರಿವಾಗಿ, ಕೂಡಲೇ ಎಚ್ಚೆತ್ತುಕೊಂಡು ಕಾಂಗ್ರೆಸ್ ಯಾರೇ ಒಟ್ಟಾದರೂ ಗೆಲ್ಲಲಿದೆ ಎಂದಿದ್ದಾರೆ. ಇದನ್ನೂ ಓದಿ: ಸ್ವಾವಲಂಬಿ ಭಾರತವನ್ನು ರಚಿಸಲು ಬದ್ಧರಾಗಿ: ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

    ಮುಂದುವರೆದು ಬಿಜೆಪಿ (BJP) ವಿರುದ್ಧ ಹರಿಹಾಯ್ದ ಅವರು, ಬಿಜೆಪಿ ಹಿಂದುತ್ವದ ಅಜೆಂಡಾ ಸೃಷ್ಟಿ ಮಾಡಿದವರು. ಹಿಂದೂಗಳು ಹಿಂದುತ್ವ ಅಜೆಂಡಾವನ್ನು ಯಾವ ಪಕ್ಷಕ್ಕೂ ಮಾರಿಕೊಂಡಿಲ್ಲ. ಹಿಂದೂಗಳು ಸ್ವಾಭಿಮಾನಕ್ಕೆ ಧಕ್ಕೆಯಾಗದ ಹಾಗೆ ಹೇಗೆ ಬದುಕಬೇಕು, ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂದು ಗೊತ್ತಿದೆ. ನಾವು ಸಹ ಹಿಂದೂಗಳೇ ಬಿಜೆಪಿಯವರು ಮಾತ್ರ ಹಿಂದೂಗಳಲ್ಲ. ಬಿಜೆಪಿಯವರು ರಾಜಕಾರಣಕ್ಕೆ ಮಾತ್ರ ಹಿಂದುತ್ವ ಎಂದು ಹೇಳಿಕೊಳ್ಳುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.

    ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಸ್ತಾಪಿಸಿದ ಅವರು ಬಿಜೆಪಿಯವರು ಚುನಾವಣೆ ಬಂದ ಸಂದರ್ಭದಲ್ಲಿ ಏನಾದರೂ ಗಲಾಟೆ ಗೌಜು ಮಾಡಿಕೊಂಡು ರಾಜಕಾರಣ ಮಾಡುವುದು ಬಿಟ್ಟರೆ ಬೇರೆ ಯಾವ ನೈತಿಕತೆಯೂ ಅವರಿಗಿಲ್ಲ. ನೈತಿಕತೆ ಇದ್ದಿದ್ದರೇ ಇಂತಹ ಕ್ಷುಲ್ಲಕ ಕೆಲಸ ಮಾಡಲು ಹೋಗುತ್ತಿರಲಿಲ್ಲ. ಅಂತಹ ನೀಚ ಕೆಲಸ ಮಾಡಿದವರು ಬಿಜೆಪಿಗರು. ನಮ್ಮ ಕ್ಷೇತ್ರದಲ್ಲೂ 2018 ರಲ್ಲಿ ಅವರೇ ಕೊಲೆ ಮಾಡಿ, ಅವರೇ ಕೇಸ್ ಮಾಡಿ ಅವರೇ ಸಿಬಿಐಗೆ ಕೊಡಬೇಕು ಎಂದು ಕೊಟ್ಟು ಅವರದ್ದೇ ಸಿಬಿಐ ಸಹಜ ಸಾವು ಎಂದು ವರದಿ ಕೊಟ್ಟಿದೆ. ಇದಕ್ಕಿಂತ ಬೇರೆಯ ಉದಾಹರಣೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.

    ಲಿಂಗಾಯಿತ ಸಿಎಂ ವಿಚಾರವಾಗಿ ಬಸವರಾಜ್ ರಾಯರೆಡ್ಡಿ ಹೇಳಿಕೆ ಅವರ ವಯಕ್ತಿಕವಾದದ್ದು. ಇದು ಕಾಂಗ್ರೆಸ್‍ಗೆ ಸಂಬಂಧ ಇಲ್ಲ. ರಾಜ್ಯದ ಎಲ್ಲಾ ಸಮುದಾಯವನ್ನು ಕಾಂಗ್ರೆಸ್ ಸಮಾನವಾಗಿ ನೋಡಿಕೊಂಡು ಕೆಲಸ ಮಾಡಿದೆ ಎಂದರು.

    ಬಿಜೆಪಿಯಿಂದ ಕಾಂಗ್ರೆಸ್‍ಗೆ ಬರುವವರ ವಿಚಾರವಾಗಿ, ಬಿಜೆಪಿಯ ಕತೆ ಮುಗಿಯಿತು ಎಂದು ಹೇಳಿ ಬರುವವರಿಗೆ ನಮ್ಮ ಸ್ವಾಗತವಿದೆ. ನಮ್ಮ ತತ್ವ ಸಿದ್ಧಾಂತವನ್ನು ಒಪ್ಪಿ ಬರುವವರಿಗೆ ಯಾವಾಗಲೂ ಸ್ವಾಗತವಿದೆ. ನಾವು ಆಪರೇಷನ್ ಮಾಡುವವರಲ್ಲ. ಹೆಬ್ಬಾರ್ ಅವರಿಗೆ ಇವತ್ತೇ ನಮ್ಮ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ಅವರು ಆಪರೇಷನ್ ಮಾಡಿಕೊಂಡು ಹೋಗಿದ್ದರು. ಅವರಿಗೆ ಅಲ್ಲಿ ಆಪರೇಷನ್ ಸಕ್ಸಸ್ ಆಗಲಿಲ್ಲ ನಾವು ಇಲ್ಲಿ ಮೆಡಿಸಿನ್ ಕೊಟ್ಟು ಸರಿ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ತ.ನಾಡಿಗೆ ಕಾವೇರಿ ನೀರು ಹರಿಸದಂತೆ ಮನವಿ – ಗಜೇಂದ್ರ ಸಿಂಗ್ ಭೇಟಿಯಾದ ರಾಜ್ಯ ರೈತರ ನಿಯೋಗ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾಂಗ್ರೆಸ್ ಗೆದ್ದ ಬೆನ್ನಲ್ಲೇ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಿದ ಯುವಕ

    ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್ (Congress) ಭರ್ಜರಿಯಾಗಿ ಜಯಗಳಿಸಿದ್ದು, ಇದರ ಬೆನ್ನಲ್ಲೇ ಕೇಸರಿ ಬಾವುಟದ ಪಕ್ಕ ಇಸ್ಲಾಂ ಬಾವುಟ ಹಾರಿಸಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkala) ನಡೆದಿದೆ.

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದ್ದು, ಅಭ್ಯರ್ಥಿ ಮಂಕಾಳು ವೈದ್ಯರಿಗೆ ಗೆಲುವಾಗಿದೆ. ಹೀಗಾಗಿ ಭಟ್ಕಳದ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ನಗರದ ಬೀದಿಯಲ್ಲಿ ಸಂಭ್ರಮಿಸಿದ್ದಲ್ಲದೇ ಭಟ್ಕಳ ಸಂಶುದ್ದೀನ್ ಸರ್ಕಲ್ ಮೇಲೆ ನಿಂತು ಕೇಸರಿ ಬಾವುಟದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಿಡಿದು ಸಂಭ್ರಮಾಚರಣೆ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನಿಲ್ ನಾಯಕ್ ವಿರುದ್ಧ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯರ ಗೆಲುವನ್ನು ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ

    ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

    ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು:
    ಕಾಂಗ್ರೆಸ್‌ಗೆ ಬಹುಮತ ಬರುತ್ತಿದ್ದಂತೆ ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್ ಎಂದು ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಮುನ್ನಡೆ LIVE Updates

  • ನಾಡ ಬಾಂಬ್ ಎಸೆದು ಕಾಂಗ್ರೆಸ್ ಶಾಸಕನ ಹತ್ಯೆಗೆ ಯತ್ನ- ಬಾಂಬ್ ಎಸೆಯಲೆತ್ನಿಸಿದ ವ್ಯಕ್ತಿಯ ಕೈಯಲ್ಲೇ ಸ್ಫೋಟ

    ನಾಡ ಬಾಂಬ್ ಎಸೆದು ಕಾಂಗ್ರೆಸ್ ಶಾಸಕನ ಹತ್ಯೆಗೆ ಯತ್ನ- ಬಾಂಬ್ ಎಸೆಯಲೆತ್ನಿಸಿದ ವ್ಯಕ್ತಿಯ ಕೈಯಲ್ಲೇ ಸ್ಫೋಟ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಹೊಸಾಡ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಕಾಂಗ್ರೆಸ್ ಶಾಸಕರೊಬ್ಬರನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

    ಕೃತ್ಯ ಎಸಗಲು ಮುಂದಾದ ವ್ಯಕ್ತಿಯನ್ನು ರೈಮಂಡ್ ಮಿರಂಡ್ ಎಂದು ಗುರುತಿಸಲಾಗಿದೆ. ಶಾಸಕ ಮಂಕಾಳು ವೈದ್ಯ ಅವರು ಹೊಸಾಡ್ ಗ್ರಾಮದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಕಾರ್ಯಕ್ರಮದ ಉದ್ಘಾಟನೆ ಮಾಡಲು ಆಗಮಿಸಿದ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು.

    ಕಾರ್ಯಕ್ರಮ ನಡೆಯುತ್ತಿರುವ ವೇಳೆ ರೈಮಂಡ್ ಮಿರಂಡ್ ತನ್ನ ಕೈಯಲ್ಲಿ ನೆಲ ಬಾಂಬ್ ಹಿಡಿದುಕೊಂಡಿದ್ದನು. ಕೆಲ ಸಮಯದ ಬಳಿಕ ಅದನ್ನು ಶಾಸಕರ ಕಡೆ ಎಸೆಯಲು ಮುಂದಾಗಿದ್ದು, ನೆಲಬಾಂಬ್ ಎಸೆಯುವ ವೇಳೆ ಆತನ ಕೈಯಲ್ಲೇ ಸ್ಫೋಟಗೊಂಡಿದೆ. ಬಳಿಕ ಆರೋಪಿ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದ. ತಕ್ಷಣ ಎಚ್ಚೆತ್ತ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಾಂಬ್ ಸ್ಫೋಟದಿಂದ ಆರೋಪಿಯ ಕೈ ಸಂಪೂರ್ಣ ಜಖಂ ಆಗಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

    ಕೃತ್ಯ ನೆಡೆಸಲು ಪ್ರಯತ್ನಿಸಿದ ವ್ಯಕ್ತಿಯ ಕೈಯಲ್ಲೇ ನೆಲಬಾಂಬ್ ಸ್ಫೋಟವಾದ್ದರಿಂದ ಶಾಸಕ ಮಂಕಾಳ ವೈದ್ಯ ಅಪಾಯದಿಂದ ಪಾರಾಗಿದ್ದಾರೆ. ಈ ಹಿಂದೆ ಕೂಡ ಬಿಜೆಪಿಯ ಭಟ್ಕಳ ಶಾಸಕರಾಗಿದ್ದ ಡಾ. ಚಿತ್ತರಂಜನರವರನ್ನ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಅದಾದ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಶಾಸಕ ಮಂಕಾಳು ವೈದ್ಯರ ಹತ್ಯೆಗೆ ಪ್ರಯತ್ನ ನಡೆದಿದೆ.

    ಈ ಸಂಬಂಧ ಹೊನ್ನಾವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.