Tag: ಮಂಗಗಳು

  • ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ಮಂಗಗಳ ಸಾವು – 3 ದಿನ ನೀರು ಕುಡಿದ ಗ್ರಾಮಸ್ಥರಲ್ಲಿ ಆತಂಕ

    ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ಮಂಗಗಳ ಸಾವು – 3 ದಿನ ನೀರು ಕುಡಿದ ಗ್ರಾಮಸ್ಥರಲ್ಲಿ ಆತಂಕ

    ರಾಯಚೂರು: ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ (Drinking Water Tank) ಮಂಗಗಳು (Monkeys) ಸತ್ತು ಬಿದ್ದಿದ್ದು 3 ದಿನಗಳ ಕಾಲ ತಿಳಿಯದೇ ಅದೇ ನೀರನ್ನು ಗ್ರಾಮಸ್ಥರು ಕುಡಿದಿರುವ ಘಟನೆ ರಾಯಚೂರಿನ (Raichur) ದೇವದುರ್ಗ ತಾಲೂಕಿನ ಖಾನಾಪುರದಲ್ಲಿ ನಡೆದಿದೆ.

    ತೆರೆದ ವಾಟರ್ ಟ್ಯಾಂಕ್‌ನಲ್ಲಿ ನೀರು ಕುಡಿಯಲು ಹೋಗಿ 2 ಮಂಗಗಳು ಮೃತಪಟ್ಟಿವೆ. ಟ್ಯಾಂಕ್ ಒಳಗೆ ಇಳಿದ ಮಂಗಗಳು ಮೇಲೆ ಬರಲು ದಾರಿ ಕಾಣದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ.

    ಇದೇ ಟ್ಯಾಂಕ್‌ನಿಂದ ಇಡೀ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಮಂಗಳವಾರ ಟ್ಯಾಂಕ್ ಸ್ವಚ್ಛಗೊಳಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ ಟ್ಯಾಂಕ್ ಸ್ವಚ್ಛಗೊಳಿಸಲು ಹೋದವರು ಮುಚ್ಚಳ ಮುಚ್ಚದೇ ಬಂದಿದ್ದರಿಂದ ಮಂಗಗಳು ಅದರಲ್ಲಿ ಮುಳುಗಿ ಸಾವನ್ನಪ್ಪಿವೆ. ಇದನ್ನೂ ಓದಿ: ಮಡಿಕೇರಿಯಲ್ಲಿ ಇಲಿ ಜ್ವರಕ್ಕೆ ಯುವಕ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

    ಯಮನಾಳ ಗ್ರಾಮ ಪಂಚಾಯಿತಿ ಸಿಬ್ಬಂದಿ ಖಾನಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಬಗ್ಗೆ ಸರಿಯಾದ ಕ್ರಮವಹಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ಯಾಂಕ್‌ನಲ್ಲಿ ಮಂಗಗಳು ಸತ್ತು ಬಿದ್ದಿರುವ ವಿಷಯ ತಿಳಿದು ಕೆಲವರಿಗೆ ಹೊಟ್ಟೆ ತೊಳಸಿದಂತಾಗಿ ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಕು ನಾಯಿ ಬಾಯಿಗೆ ಆಹಾರವಾದ ಮಂಗನಮರಿ- ಕಂದನ ಕಳೆದುಕೊಂಡ ನೋವಿನಲ್ಲಿ ಗ್ರಾಮಸ್ಥರ ಮೇಲೆ ದಾಳಿ

    ಸಾಕು ನಾಯಿ ಬಾಯಿಗೆ ಆಹಾರವಾದ ಮಂಗನಮರಿ- ಕಂದನ ಕಳೆದುಕೊಂಡ ನೋವಿನಲ್ಲಿ ಗ್ರಾಮಸ್ಥರ ಮೇಲೆ ದಾಳಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದಲ್ಲಿ ಮಂಗಗಳು ಊರಿನ ಜನರ ಮೇಲೆ ದಾಳಿ ಇಡುತ್ತಿದ್ದು, ಮಂಗನ ದಾಳಿಯಿಂದಾಗಿ ಗ್ರಾಮದ ಹತ್ತಕ್ಕೂ ಹೆಚ್ಚು ಜನರು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

    ಇಡೀ ಕಿನ್ನರ ಗ್ರಾಮದ ರಸ್ತೆಗಳಲ್ಲಿ ಜನರು ಓಡಾಡಿದರೆ ಮಂಗಗಳು ಮರದಿಂದ ಹಾರಿ ಬಂದು ಜನರ ಮೇಲೆ ಎರಗುತಗತ್ತಿವೆ. ಹಲವರಿಗೆ ಕಾಲು, ಕೈಗಳಿಗೆ ಕಚ್ಚಿ ಗಾಸಿ ಮಾಡಿದರೆ, ಇನ್ನೂ ಕೆಲವರಿಗೆ ಗಂಭೀರ ಸ್ವರೂಪದ ಗಾಯ ಮಾಡಿವೆ. ಈ ಮಂಗಗಳ ವಿಚಿತ್ರ ವರ್ತನೆಗೆ ಬೆದರಿದ ಗ್ರಾಮಸ್ಥರು, ಕಾರವಾರದ ಅರಣ್ಯ ಇಲಾಖೆಗೆ ದೂರು ನೀಡಿದ್ದು, ಮಂಗಗಳನ್ನು ಹಿಡಿದು ಬೇರೆಡೆ ಬಿಡುವಂತೆ ಒತ್ತಾಯಿಸಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಮಂಗನ ಹಿಡಿಯಲು ಬೋನ್ ಇಟ್ಟಿದ್ದು, ಕಾರ್ಯಾಚರಣೆಗೆ ಇಳಿದಿದ್ದಾರೆ.

    ಏಕಾ ಏಕಿ ಮಂಗಗಳ ದಾಳಿಗೆ ಕಾರಣವೇನು?
    ಕಿನ್ನರ ಗ್ರಾಮದ ಭಾಗದಲ್ಲಿ ಒಂದುಕಡೆ ಕಾಳಿ ನದಿ ಹರಿಯುತ್ತದೆ, ಮತ್ತೊಂದು ಕಡೆ ದಟ್ಟ ಅರಣ್ಯವಿದ್ದು, ಕಾಡುಪ್ರಾಣಿಗಳ ವಾಸ ಸ್ಥಳವಾಗಿದೆ. ಇದು ಕಪ್ಪು ಹಾಗೂ ಕೆಂಪು ಮಂಗಗಳ ಆವಾಸ ಸ್ಥಾನ ಕೂಡ. ಹೀಗಾಗಿ ಈ ಭಾಗದ ಅರಣ್ಯ ಭಾಗದಲ್ಲಿ ಮಂಗಗಳು ಸಾಮಾನ್ಯ. ಇನ್ನು ಮಳೆಗಾಲವಾದ್ದರಿಂದ ಕಾಡಿನಿಂದ ಅಲ್ಲಿಯೇ ಇರುವ ಅಕ್ಕ ಪಕ್ಕದ ಗ್ರಾಮಗಳಿಗೆ ಮಂಗಗಳು ಆಹಾರ ಅರಸಿ ಬರುತ್ತವೆ. ಹೀಗಿರುವಾಗ ಮಂಗಗಳ ದಾಳಿ ತಪ್ಪಿಸಲು ಮನೆಯಲ್ಲಿ ನಾಯಿಗಳನ್ನು ಸಾಕುತ್ತಾರೆ. ಮಂಗಗಳು ಬಂದಾಗ ನಾಯಿಗಳನ್ನು ಬಿಟ್ಟು ಓಡಿಸುವುದು ಸಾಮಾನ್ಯ.

    ಕಳೆದ ಕೆಲವು ದಿನಗಳ ಹಿಂದೆ ಹೀಗೆ ಆಹಾರ ಅರಸಿ ಗ್ರಾಮದ ಕಡೆ ಬಂದಿದ್ದ ಮಂಗಗಳ ಗುಂಪೊಂದರಲ್ಲಿ ಮಂಗನ ಮರಿಗಳನ್ನು ನಾಯಿಗಳು ಬೇಟೆಯಾಡಿವೆ. ತಮ್ಮ ಕರುಳು ಬಳ್ಳಿಯನ್ನು ಕಣ್ಣೆದುರೇ ಕಳೆದುಕೊಂಡ ಮಂಗಗಳು ಇದೀಗ ಗ್ರಾಮದಲ್ಲಿ ಯಾರೇ ಓಡಾಡಿದರೂ ದಾಳಿ ಇಡುತ್ತಿದ್ದು, ಹಲವರಿಗೆ ಗಾಯ ಮಾಡಿವೆ. ಇದರಿಂದಾಗಿ ಇದೀಗ ಗ್ರಾಮದ ಜನರು ಮಂಗಗಳು ಎಂದರೆ ಭಯ ಪಡುವಂತಾಗಿದೆ. ಸದ್ಯ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಂಗಗಳನ್ನು ಹಿಡಿದು ಬೇರೆಡೆ ಬಿಡಲು ಹರಸಾಹಸ ಪಡುತಿದ್ದಾರೆ.

  • ವರದಾ ನದಿ ಪ್ರವಾಹದಲ್ಲಿ ವಾನರಸೇನೆ ಸಿಲುಕಿ ಪರದಾಟ

    ವರದಾ ನದಿ ಪ್ರವಾಹದಲ್ಲಿ ವಾನರಸೇನೆ ಸಿಲುಕಿ ಪರದಾಟ

    – ಮಾವಿನ ಮರವೇರಿ ಕುಳಿತ ಮಂಗಗಳು

    ಹಾವೇರಿ: ಜಿಲ್ಲೆಯಲ್ಲಿ ಮಳೆ ನಿಂತರೂ, ನೀರಿನ ಪ್ರಮಾಣ ಕಡಿಮೆಯಾಗುತ್ತಿಲ್ಲ. ವರದಾ ನದಿಯ ಪ್ರವಾಹದಲ್ಲಿ ವಾನರಸೇನೆ ಸಿಲುಕಿ ಪರದಾಡುತ್ತಿರುವ ಘಟನೆ ಹಾವೇರಿ ತಾಲೂಕಿನ ಹಂದಿಗನೂರು ಗ್ರಾಮದಲ್ಲಿ ನಡೆದಿದೆ.

    ಮರದ ಸುತ್ತ ನೀರು ಆವರಿಸಿರುವುದರಿಂದ ಮರದಲ್ಲಿ ಸಿಲುಕಿಕೊಂಡು ಮಂಗಗಳು ಪರದಾಡುತ್ತಿವೆ. ಗ್ರಾಮದ ಬಳಿ ಇರುವ ಮಾವಿನ ಮರದಲ್ಲಿ ವಾನರಸೇನೆ ಬಿಡಾರ ಹೂಡಿದ್ದ ವೇಳೆ ಏಕಾಏಕಿ ವರದಾ ನದಿ ಪ್ರವಾಹ ಉಂಟಾಗಿದೆ.

    ಮರದ ಸುತ್ತ ನೀರು ಆವರಿಸಿದ್ದರಿಂದ ಮರದಲ್ಲಿ ಸಿಲುಕಿ 10ಕ್ಕೂ ಅಧಿಕ ಮಂಗಗಳು ಪರದಾಡುತ್ತಿವೆ. ನೀರಿನ ಹರಿವು ಹೆಚ್ಚಾಗಿದ್ದರಿಂದ ಮರದ ಬಳಿ ತೆರಳಿ ಮಂಗಗಳಿಗೆ ಹಣ್ಣು ಹಂಪಲು ವಿತರಿಸಲು ಸಾಧ್ಯವಾಗುತ್ತಿಲ್ಲ. ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮಂಗಗಳನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ದಿಕ್ಕು ತೋಚದೆ ಮರದಲ್ಲಿನ ಮಾವಿನ ಸೊಪ್ಪು ತಿಂದು ಮಂಗಗಳು ಕಾಲ ಕಳೆಯುತ್ತಿವೆ.

  • ಮಂಗನ ಕಾಟಕ್ಕೆ ಬೆಚ್ಚಿಬಿದ್ದ ಮಸ್ಕಿ ಜನ- ಒಂದೇ ದಿನ ನಾಲ್ಕು ಜನರ ಮೇಲೆ ದಾಳಿ

    ಮಂಗನ ಕಾಟಕ್ಕೆ ಬೆಚ್ಚಿಬಿದ್ದ ಮಸ್ಕಿ ಜನ- ಒಂದೇ ದಿನ ನಾಲ್ಕು ಜನರ ಮೇಲೆ ದಾಳಿ

    ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಜನ ಮಂಗಗಳ ಕಾಟಕ್ಕೆ ಬೆಚ್ಚಿಬಿದ್ದಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಏಕಾಏಕಿ ದಾಳಿ ನಡೆಸಿದ ಮಂಗಗಳು ಸಿಕ್ಕಸಿಕ್ಕವರ ಮೇಲೆರಗಿ ಕಚ್ಚಿ ಗಾಯಗೊಳಿಸಿವೆ.

    ಪಟ್ಟಣದ ರಥ ಬೀದಿಯಲ್ಲಿ ಇಂದು ಒಂದೇ ದಿನ ನಾಲ್ಕು ಜನರ ಮೇಲೆ ದಾಳಿ ಮಾಡಿರುವ ಮಂಗಗಳು, ಮಕ್ಕಳು ಹಾಗೂ ದಾರಿ ಹೋಕರಿಗೆ ಕೈ, ಕಾಲಿಗೆ ಮನಬಂದಂತೆ ಕಚ್ಚಿ ಗಾಯಗೊಳಿಸಿವೆ. ಗಾಯಾಳುಗಳು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಮಲ್ಲಿಕಾರ್ಜುನಸ್ವಾಮಿ ದೇವಾಲಯದ ಸುತ್ತಮುತ್ತ ಓಡಾಡಿಕೊಂಡಿರುವ ಮಂಗಗಳ ಹಾವಳಿ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಲಾಕ್‍ಡೌನ್ ಎಫೆಕ್ಟ್ ಶಿವಗಂಗೆ ಬೆಟ್ಟದಲ್ಲಿ ಹಸಿವಿನಿಂದ ಮಂಗಗಳ ಪರದಾಟ- ಸ್ಥಳೀಯರ ನೆರವು

    ಲಾಕ್‍ಡೌನ್ ಎಫೆಕ್ಟ್ ಶಿವಗಂಗೆ ಬೆಟ್ಟದಲ್ಲಿ ಹಸಿವಿನಿಂದ ಮಂಗಗಳ ಪರದಾಟ- ಸ್ಥಳೀಯರ ನೆರವು

    ಬೆಂಗಳೂರು: ಮಾರಣಾಂತಿಕ ಕೋವಿಡ್ ನಿಂದಾಗಿ ರಾಜ್ಯಾದ್ಯಂತ ಲಾಕ್‍ಡೌನ್ ವೀಧಿಸಲಾಗಿದ್ದು, ಪ್ರವಾಸಿ ತಾಣಗಳನ್ನು ಸಹ ಬಂದ್ ಮಾಡಲಾಗಿದೆ. ಹೀಗಾಗಿ ದಕ್ಷಿಣ ಕಾಶಿ ಶಿವಗಂಗೆಯಲ್ಲಿ ಮಂಗಗಳಿಗೆ ಆಹಾರ ಇಲ್ಲದಂತಾಗಿದ್ದು, ಹಸಿವಿಂದ ಪರದಾಡುತ್ತಿವೆ. ಸ್ಥಳೀಯರೇ ಮಂಗಗಳಿಗೆ ಆಹರ ನೀಡುವ ಮೂಲಕ ನೆರವಾಗಿದ್ದಾರೆ.

    ನಗರದ ಹೊರವಲಯದ ನೆಲಮಂಗಲ ತಾಲೂಕಿನ ಶ್ರೀ ಕ್ಷೇತ್ರ ದಕ್ಷಿಣಕಾಶಿ ಶಿವಗಂಗೆಯಲ್ಲಿ ಮಂಗಗಳಿಗೆ ಆಹಾರವಿಲ್ಲದೆ ಪರದಾಡುತ್ತಿವೆ. ಇದನ್ನು ಗಮನಿಸಿದ ಸ್ಥಳೀಯರು, ಮೂಕ ವೇದನೆ ಪಡುತ್ತಿದ್ದ ಪ್ರಾಣಿ ವರ್ಗಕ್ಕೆ ಆಹಾರ ನೀಡಿದ್ದಾರೆ. ಈ ಮೂಲಕ ಮಂಗಗಳ ಹೊಟ್ಟೆಯನ್ನು ತುಂಬಿಸುತ್ತಿದ್ದಾರೆ.

    ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಿದ್ದರಿಂದ ಆಹಾರ ಸಿಗುತ್ತಿತ್ತು. ಆದರೆ ಲಾಕ್‍ಡೌನ್ ನಿಂದ ಶಿವಗಂಗೆಗೆ ಯಾರೂ ಆಗಮಿಸುತ್ತಿಲ್ಲ. ಈ ಹಿನ್ನಲೆ ಶಿವಗಂಗೆ ಬೆಟ್ಟದಲ್ಲಿ ಸಾವಿರಾರು ಕೋತಿಗಳಿಗೆ ಆಹಾರವಿಲ್ಲದಂತಾಗಿದೆ. ಹೀಗಾಗಿ ಸ್ಥಳೀಯರೇ ಆಹಾರ ವ್ಯವಸ್ಥೆ ಮಾಡುತ್ತಿದ್ದಾರೆ. ಶಿವಗಂಗೆ ಗ್ರಾಮಸ್ಥರು, ಸ್ವಯಂ ಸೇವಾ ಸಂಸ್ಥೆ ನೆರವಿನಿಂದ ಮಂಗಗಳಿಗೆ ನೆರವಾಗಿದ್ದಾರೆ. ಹಲಸಿನ ಹಣ್ಣು, ಮಾವಿನ ಹಣ್ಣು, ಬಾಳೆ ಹಣ್ಣು, ಇನ್ನೀತರ ಆಹಾರ ನೀಡುತ್ತಿದ್ದಾರೆ.

  • ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್

    ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್

    ಮುಂಬೈ: ಮಹಾರಾಷ್ಟ್ರಾದ್ಯಂತ ಕೋವಿಡ್-19 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಕೆಲವು ಮಂಗಗಳು ಮನುಷ್ಯರು ನಡೆಸುತ್ತಿದ್ದ ಐಷಾರಾಮಿ ಜೀವನವನ್ನು ನಡೆಸುತ್ತಿದೆ. ಹೌದು ಮಹಾಬಲೇಶ್ವರದಲ್ಲಿರುವ ರೆಸಾರ್ಟ್ ನಲ್ಲಿರುವ ಸ್ವಿಮ್ಮಿಂಗ್ ಪೂಲ್‍ನಲ್ಲಿ ಕೋತಿಗಳು ಸ್ವಿಮ್ಮಿಂಗ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಕೋತಿಗಳು ರೆಸಾರ್ಟ್ ನಲ್ಲಿ ಯಾರು ಇಲ್ಲದೇ ಇರುವುದನ್ನು ಕಂಡು ಈಜುಕೊಳಕ್ಕೆ ಜಿಗಿಯುವ ಮೂಲಕ ಬಿಸಿಲಿನ ಶಾಖದಿಂದ ತಂಪು ಮಾಡಿಕೊಂಡಿದೆ.

    ವೀಡಿಯೋದಲ್ಲಿ ಕೋತಿಗಳು ಸ್ವಿಮ್ಮಿಂಗ್ ಪೂಲ್ ಬಳಿ ನೆರಳಿಗಾಗಿ ಹಾಕಿರುವ ದೊಡ್ಡದೊಂದು ಛತ್ರಿ ಮೇಲೆ ಏರಿ ಅದರ ಮೇಲಿಂದ ಈಜುಕೊಳಕ್ಕೆ ಜಿಗಿಯುತ್ತದೆ. ಮತ್ತೆ ಮೇಲೆ ಎದ್ದು ಬಂದು ಮತ್ತೆ ಸ್ವಿಮ್ಮಿಂಗ್ ಪೂಲ್ ಒಳಗೆ ಜಿಗಿದು ಆನಂದಿಸುತ್ತಿರುವುದನ್ನು ಕಾಣಬಹುದಾಗಿದೆ.

    ಈ ವೀಡಿಯೋವನ್ನು ಎನ್‍ಬಿಇಎ ಸ್ಟಾರ್ ರೆಕ್ಸ್ ಚಾಪ್ಮನ್ ಎಂಬ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, 27 ಲಕ್ಷಕ್ಕಿಂತ ಹೆಚ್ಚು ವ್ಯೂವ್ ಆಗಿದೆ. 1 ಲಕ್ಷಕ್ಕೂ ಅಧಿಕ ಲೈಕ್ಸ್ ಮತ್ತು 21,000 ರಿಟ್ವೀಟ್‍ಗಳು ಆಗಿದೆ.

  • ವಿಷವುಣಿಸಿ 40 ಮಂಗಗಳನ್ನು ಕೊಂದ ಪಾಪಿಗಳು

    ವಿಷವುಣಿಸಿ 40 ಮಂಗಗಳನ್ನು ಕೊಂದ ಪಾಪಿಗಳು

    – ಸ್ಥಳೀಯರ ಮೇಲೆ ಅಧಿಕಾರಿಗಳ ಅನುಮಾನ
    – ಮಂಗಗಳ ಹಾವಳಿಯಿಂದ ಕೃತ್ಯ ಎಸಗಿರುವ ಶಂಕೆ

    ಹೈದರಾಬಾದ್: ಸುಮಾರು 50 ಮಂಗಗಳಿಗೆ ವಿಷವುಣಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಮಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.

    ವಿಷವುಣಿಸಿ ಬರೋಬ್ಬರಿ 40 ಮಂಗಗಳನ್ನು ಕೊಲೆ ಮಾಡಲಾಗಿದ್ದು, ಮೃತದೇಹಗಳನ್ನು ಗೋಣಿ ಚೀಲಗಳಲ್ಲಿ ತುಂಬಿ ಎಸೆಯಲಾಗಿದೆ. ಸಾನಿಗಾಪುರಂ ಗ್ರಾಮದ ಸಮೀಪವಿರುವ ಬೆಟ್ಟದ ಮೇಲೆ ಮೃತದೇಹಗಳು ಪತ್ತೆಯಾಗಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ದೇಹಗಳು ಸಂಪೂರ್ಣವಾಗಿ ಕೊಳೆತಿದ್ದರಿಂದ ಮಂಗಗಳ ಮರಣೋತ್ತರ ಪರೀಕ್ಷೆಯನ್ನು ಮಾಡಲು ಸಾಧ್ಯವಾಗಲಿಲ್ಲ. ಆದರೆ ವಿಷ ಉಣಿಸಿ ಮಂಗಗಳನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಪರಿಪ್ರಮಾಣದಲ್ಲಿ ಮಂಗಗಳನ್ನು ಏಕೆ ಸಾಯಿಸಲಾಗಿದೆ ಎಂಬುದು ತಿಳಿದು ಬಂದಿಲ್ಲ ಎಂದು ತಿಳಿಸಿದ್ದಾರೆ.

    ವಿಪರೀತ ದುರ್ವಾಸನೆ ಬರುತ್ತಿದ್ದರಿಂದ ಆ ಪ್ರದೇಶದಲ್ಲಿ ಹುಡುಕಾಟ ನಡೆಸಿದೆವು. ಬಳಿಕ ಮಂಗಗಳ ಮೃತದೇಹಗಳು ತುಂಬಿರುವ ಚೀಲಗಳು ಪತ್ತೆಯಾದವು ಎಂದು ಸ್ಥಳೀಯರು ವಿವರಿಸಿದ್ದಾರೆ. ಐಪಿಸಿ ಸೆಕ್ಷನ್ 429 (ಪ್ರಾಣಿ ಕೊಲ್ಲುವ ಅಥವಾ ದುರ್ಬಲಗೊಳಿಸುವ ಕೃತ್ಯ) ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(ಎಲ್) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಕೃತ್ಯ ನಡೆದು ಐದಾರು ದಿನಗಳು ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಹಬುಬಬಾದ್ ಗ್ರಾಮಾಂತರ ಎಸ್‍ಐ ಸಿ.ಎಚ್.ರಮೇಶ್ ಬಾಬು ಅವರು ಈ ಕುರಿತು ಮಾಹಿತಿ ನಿಡಿ, ಇದು ದುರಂತ ಮಾತ್ರವಲ್ಲ ಅಪಾಯಕಾರಿ ಕೃತ್ಯ. ಸೆಕ್ಷನ್ 429(ಪ್ರಾಣಿಗಳ ಕೊಲೆ ಹಾಗೂ ವಿಷವುಣಿಸಿರುವುದು) ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(ಎಲ್) ಅಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ.

    ಜಿಲ್ಲಾ ಅರಣ್ಯಾಧಿಕಾರಿ ಪೊಲೋಜು ಕೃಷ್ಣಮಾಚಾರಿ ಮಾತನಾಡಿ, ಮಂಗಗಳ ಹಾವಳಿಯಿಂದ ಬೇಸರಗೊಂಡ ಕೆಲವು ಸ್ಥಳೀಯರ ಮೇಲೆ ನನಗೆ ಅನುಮಾನವಿದೆ. ಈ ಕುರಿತು ಇಲಾಖೆ ತನಿಖೆ ಆರಂಭಿಸಿದ್ದು, ಸುತ್ತಲ ಗ್ರಾಮಗಳಲ್ಲಿ ತನಿಖೆ ನಡೆಸಲಿದೆ. ಇಲಾಖೆ ವತಿಯಿಂದಲೇ ಮಂಗಗಳ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

  • ಭಾರೀ ಮಳೆ, ರಣ ಗಾಳಿ- ಆಹಾರವಿಲ್ಲದೆ ಪರದಾಡುತ್ತಿದೆ ವಾನರ ಸಂತತಿ

    ಭಾರೀ ಮಳೆ, ರಣ ಗಾಳಿ- ಆಹಾರವಿಲ್ಲದೆ ಪರದಾಡುತ್ತಿದೆ ವಾನರ ಸಂತತಿ

    ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ರಣ ಗಾಳಿ ಕೇವಲ ಜನಸಾಮಾನ್ಯರಿಗಷ್ಟೇ ಅಲ್ಲ. ಪ್ರಾಣಿ-ಪಕ್ಷಿಗಳಿಗೂ ತೀವ್ರ ಸಂಕಷ್ಟ ತಂದೊಡ್ಡಿದೆ. ವಾನ ಸಂತತಿಯಂತೂ ಆಹಾರವಿಲ್ಲದೆ ಪರದಾಡುವಂತಾಗಿದೆ.

    ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನೂರಾರು ವರ್ಷಗಳಿಂದ ಬದುಕುತ್ತಿರು ವಾನರ ಸಂತಿತಿ ಇದೀಗ ಅನ್ನ-ಆಹಾರ ಇಲ್ಲದೆ ಪರದಾಡುತ್ತಿದೆ. ಭಾರೀ ಮಳೆಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಖ್ಯೆಯೂ ತೀರಾ ಕಡಿಮೆ ಇದೆ. ಇದರಿಂದಾಗಿ ಕೋತಿಗಳಿಗೆ ಆಹಾರ ಹಾಕುವವರ ಸಂಖ್ಯೆಯೂ ಕಡಿಮೆಯಾಗಿದೆ. ಇದರಿಂದ ಮಂಗಗಳು ಯಾರಾದರೂ ವಾಹನ ನಿಲ್ಲಸಿದ ಕೂಡಲೇ ಏನಾದ್ರು ಕೊಡುತ್ತಾರೆಂದು ವಾಹನದಿಂದ ಇಳಿದವರ ಕೈಯನ್ನೇ ನೋಡುವ ದೃಶ್ಯ ಮನಕಲಕುವಂತಿದೆ.

    ಚಾರ್ಮಾಡಿಯಲ್ಲಿ ಭಾರೀ ಗಾಳಿ-ಮಳೆ ಸುರಿಯುತ್ತಿದ್ದು, ವಾನರ ಸಂತತಿ ಮಳೆಯಲ್ಲಿ ನೆನೆದು ಚಳಿಯಲ್ಲಿ ನಡುಗುತ್ತಿದೆ. ಪುಟ್ಟ ಮಂಗಗಳು ಮರದಿಂದ ಮರಕ್ಕೆ ಹಾರಿ ಆಹಾರ ಹುಡುಕುವ ಪರಿ ಕೂಡ ಬೇಸರ ಮೂಡಿಸುವಂತಿದೆ. ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದ ಪ್ರವಾಸಿಗರ ಸಂಖ್ಯೆ ಸಹ ಕಡಿಮೆಯಾಗಿದೆ. ಹೀಗಾಗಿ ಮಂಗಗಳಿಗೆ ಆಹಾರ ಹಾಕುವವರೇ ಇಲ್ಲದಂತಾಗಿದ್ದು, ಮರದಿಂದ ಮರಕ್ಕೆ ಜಿಗಿದು ಆಹಾರವನ್ನು ಹುಡುಕುತ್ತಿವೆ. ಸಿಕ್ಕ ಹಣ್ಣುಗಳನ್ನೇ ತಿಂದು ಜೀವಿಸುತ್ತಿವೆ.

    ಮಲೆನಾಡು ಭಾಗದಲ್ಲಿ ಭಾರೀ ಗಾಳಿಯಿಂದಾಗಿ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದೆ. ತಾಲೂಕಿನ ಜಾವಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೂಡಿಗೆರೆಯಿಂದ ಕಳಸ- ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಮಲೆನಾಡಲ್ಲಿ ಮಳೆ ಪ್ರಮಾಣ ತಗ್ಗಿದೆ. ಆದರೆ ವಿಪರೀತ ಗಾಳಿ ಬೀಸುತ್ತಿದೆ. ಇದರಿಂದ ಸಮುದ್ರದಲ್ಲಿ ಸಹ ಕಡಲ್ಕೊರೆತ ಉಂಟಾಗಿದೆ.

  • ಸುತ್ತಲೂ ಪ್ರವಾಹ, ಮರಗಳಲ್ಲೇ ಸಿಲುಕಿದ ಮುಷ್ಯಗಳು- ಅರಣ್ಯ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

    ಸುತ್ತಲೂ ಪ್ರವಾಹ, ಮರಗಳಲ್ಲೇ ಸಿಲುಕಿದ ಮುಷ್ಯಗಳು- ಅರಣ್ಯ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

    – ಮುಷ್ಯಗಳನ್ನು ರಕ್ಷಿಸಲು ಹರಸಾಹಸಪಟ್ಟ ಸಿಬ್ಬಂದಿ

    – ಮರಗಳಿಂದ ದಡದವರೆಗೂ ಹಗ್ಗ ಕಟ್ಟಿ ರಕ್ಷಣೆ

    ದಾವಣಗೆರೆ: ಸುತ್ತಲೂ ಪ್ರವಾಹವಿದ್ದು, ಮರಗಳ ಮೇಲೆಯೇ ಮುಷ್ಯಗಳು ಸಿಲುಕಿವೆ. ಇನ್ನೇನು ಮಾಡುವುದಪ್ಪ ಎಂದು ಮುಷ್ಯಗಳು ಯೋಚಿಸುತ್ತಿರುವಾಗಲೇ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.
    ಜಿಲ್ಲೆಯ ಹರಿಹರದ ಬಳಿ ಇರುವ ತುಂಗಾಭದ್ರಾ ನದಿ ತಟದಲ್ಲಿ ಮುಷ್ಯಗಳು ಸಿಲುಕಿದ್ದು, ಇವುಗಳನ್ನು ಹೊರ ತರಲು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ. ನದಿ ನೀರು ಏಕಾಏಕಿ ಬಂದ ಕಾರಣ ಮುಷ್ಯಗಳು ಮರದಲ್ಲೇ ಸಿಲುಕಿವೆ. ಬೆಳಗ್ಗೆಯಿಂದಲೇ ಮುಷ್ಯಗಳನ್ನು ರಕ್ಷಿಸುವ ಕಾರ್ಯ ನಡೆಸುತ್ತಿದ್ದು, ಜನರು ಜಾಸ್ತಿ ಇರುವ ಕಾರಣ ಭಯಪಟ್ಟು ಮುಷ್ಯಗಳು ಮರದಿಂದ ಕೆಳಗೆ ಬಂದಿಲ್ಲ. ಹೀಗಾಗಿ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
    ಮುಷ್ಯಗಳು ಮರಗಳಿಂದ ಕೆಳಗಿಳಿಯದ ಕಾರಣ ಅಗ್ನಿಶಾಮಕ ಸಿಬ್ಬಂದಿ ಮರದಿಂದ ದಡದ ವರೆಗೂ ಹಗ್ಗ ಕಟ್ಟಿದ್ದಾರೆ. ನಂತರ ಮುಷ್ಯಗಳನ್ನು ಬೆದರಿಸಿ ದಡಕ್ಕೆ ಓಡಿಸಿದ್ದಾರೆ. ಒಟ್ಟಿನಲ್ಲಿ ಹೆರಸಾಹಸಪಟ್ಟು ಪೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ.
  • ಮೀಸಲು ಅರಣ್ಯದಲ್ಲಿನ ಮಂಗಗಳಿಗೆ ಆಹಾರ ಹಾಕಿದ್ರೆ ಬೀಳುತ್ತೆ ಕೇಸ್

    ಮೀಸಲು ಅರಣ್ಯದಲ್ಲಿನ ಮಂಗಗಳಿಗೆ ಆಹಾರ ಹಾಕಿದ್ರೆ ಬೀಳುತ್ತೆ ಕೇಸ್

    ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಅರಣ್ಯ ಪ್ರದೇಶಕ್ಕೆ ಭೇಟಿ ಕೊಟ್ಟರೆ ಅಲ್ಲಿನ ಮಂಗಗಳಿಗೆ ಎಲ್ಲರು ಹಣ್ಣುಗಳನ್ನು ಹಾಕುತ್ತಾರೆ. ಆದರೆ ಇನ್ಮುಂದೆ ಹೀಗೆ ಮಂಗಗಳಿಗೆ ಹಣ್ಣು ಹಾಕಿದರೆ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ಹಾಕಲು ಮುಂದಾಗಿದ್ದಾರೆ.

    ಇತ್ತೀಚೆಗೆ ಹಸಿದ ಮಂಗಗಳಿಗೆ ಆರ್.ಟಿ.ಐ ಕಾರ್ಯಕರ್ತ ಸಿದ್ದರಾಮಯ್ಯ ಹೀರೆಮಠ ಬಾಳೆಹಣ್ಣು ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು. ವನ್ಯಜೀವು ಕಾಯ್ದೆ ಪ್ರಕಾರ ಕೊಂಚಾವರಂ ಮೀಸಲು ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ನುಗ್ಗಿ, ಪ್ರಾಣಿಗಳಿಗೆ ಆಹಾರ ನೀಡುವ ಮೂಲಕ ಅವುಗಳ ಸಾವಿಗೆ ಕಾರಣವಾಗಿದ್ದಾರೆ ಎಂದು ತಿಪ್ಪಣ್ಣಪ್ಪ ಹಾಗೂ ಪ್ರವೀಣ ಜಿಲ್ಲೆಯ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

    ಈ ದೂರಿನ ಆಧಾರದ ಮೇಲೆ ವನ್ಯಜೀವು ಸಂರಕ್ಷಣಾ ಕಾಯ್ದೆ 1972, ಸೆಕ್ಷನ್ 27 ಮತ್ತು 51ರ ಅಡಿ ಚಿಂಚೋಳಿ ತಾಲೂಕಿನ ಶಾದಿಪುರ ಶಾಖೆಯ ವನ್ಯಜೀವಿ ವಲಯದ ಚಿಂಚೋಳಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತಮ್ಮ ಫೇಸ್ ಬುಕ್‍ನಲ್ಲಿ ಸ್ಪಷ್ಟನೆ ನೀಡಿರುವ ಆರ್.ಟಿ.ಐ ಕಾರ್ಯಕರ್ತ ಸಿದ್ದರಾಮಯ್ಯ, ಇದು ದುರುದ್ದೇಶದಿಂದ ನನ್ನ ಮೇಲೆ ಹಾಕಲಾಗಿರುವ ಪ್ರಕರಣವಾಗಿದೆ. ಒಂದು ವೇಳೆ ಅರಣ್ಯಾಧಿಕಾರಿಗಳು ಇದರ ಬಗ್ಗೆ ನೋಟಿಸ್ ನೀಡಿದರೆ ಹಾಜರಾಗಿ ಸ್ಪಷ್ಟನೆ ನೀಡುವುದಾಗಿ ಹೇಳಿದ್ದಾರೆ.