Tag: ಮಂಗಳವಾರ

  • ‘ನಿನ್ನಲ್ಲಿ ನಾ’ ಎನ್ನುತ್ತಾ ಬೋಲ್ಡ್ ಆಗಿ ಕಾಣಿಸಿಕೊಂಡ ಪಾಯಲ್

    ‘ನಿನ್ನಲ್ಲಿ ನಾ’ ಎನ್ನುತ್ತಾ ಬೋಲ್ಡ್ ಆಗಿ ಕಾಣಿಸಿಕೊಂಡ ಪಾಯಲ್

    ಆರ್​ಎಕ್ಸ್​ 100 ಸಿನಿಮಾ ಬಳಿಕ ನಿರ್ದೇಶಕ ಅಜಯ್ ಭೂಪತಿ ಆ್ಯಕ್ಷನ್​-ಕಟ್ ಹೇಳಿರುವ ‘ಮಂಗಳವಾರಂ’ (Mangalavaram) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 17ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಎರಡನೇ ಹಾಡು (Song) ಅನಾವರಣಗೊಂಡಿದೆ. ನಿನ್ನಲ್ಲಿ ನಾ ಎಂಬ ಸಾಹಿತ್ಯದ ಹಾಡಿಗೆ  ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರ್ಷಿಕಾ ದೇವನಾಥ್ ಧ್ವನಿಯಾಗಿದ್ದು, ಕಾಂತಾರ ಖ್ಯಾತಿಯ ಬಿ ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ನಿನ್ನಲ್ಲಿ ನಾ ಮಧುರ ಗೀತೆಯಲ್ಲಿ ಪಾಯಲ್ ಬೋಲ್ಡ್ ಅಗಿ ಕಾಣಿಸಿಕೊಂಡಿದ್ದರು. ಮುದ್ದಾದ ಜೋಡಿ ನಡುವಿನ ರೋಮ್ಯಾಂಟಿಕ್ ಹಾಡು ಇದಾಗಿದೆ.

    ಟಾಲಿವುಡ್​ನಲ್ಲಿ ನಿರ್ದೇಶಕ ಅಜಯ್ ಭೂಪತಿ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಆರ್​ಎಕ್ಸ್ 100’ ಚಿತ್ರದಿಂದ ಅವರಿಗೆ ಅಂತಹ ಜನಪ್ರಿಯತೆ ಸಿಕ್ಕಿದೆ. ಈಗ ಅವರು ‘ಮಂಗಳವಾರಂ’ ಸಿನಿಮಾದ ಮೂಲಕ ತೆಲುಗು ಚಿತ್ರರಂಗ ಮಾತ್ರವಲ್ಲದೇ ದೇಶಾದ್ಯಂತ ಹವಾ ಮಾಡಲು ಹೊರಟಿದ್ದಾರೆ. ಸ್ವಾತಿ ಗುಣಪತಿ ಹಾಗೂ ಸುರೇಶ್ ವರ್ಮಾ ಅವರ ‘ಮುದ್ರಾ ಮೀಡಿಯಾ ವರ್ಕ್ಸ್’ ಮತ್ತು ಅಜಯ್ ಭೂಪತಿ ಒಡೆತನದ ‘ಎ ಕ್ರಿಯೇಟಿವ್ ವರ್ಕ್ಸ್’ ಸಂಸ್ಥೆಗಳು ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ.

    ಪಾಯಲ್ ರಜಪೂತ್ ಜೊತೆ ಶ್ರೀತೇಜ್, ಅಜಯ್ ಘೋಷ್, ಚೈತನ್ಯ ಕೃಷ್ಣ, ಲಕ್ಷ್ಮಣ್ ಸೇರಿದಂತೆ ಹಲವು ಕಲಾವಿದರು ‘ಮಂಗಳವಾರಂ’ ಸಿನಿಮಾದಲ್ಲಿ ನಟಿಸಿದ್ದಾರೆ. ದಶರಥಿ ಶಿವೇಂದ್ರ ಅವರ ಛಾಯಾಗ್ರಹಣ, ರಘು ಕುಲಕರ್ಣಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಾಯಿಕುಮಾರ್ ಯಡವಲ್ಲಿ ಅವರು ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇದೊಂದು ರಗಡ್​ ಆ್ಯಕ್ಷನ್-ಥ್ರಿಲ್ಲರ್ ಚಿತ್ರವಾಗಿದೆ.  ಅಜನೀಶ್​ ಲೋಕನಾಥ್​ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

    ಇಷ್ಟು ವರ್ಷಗಳ ಕಾಲ ನಿರ್ದೇಶಕನಾಗಿ ಗಮನ ಸೆಳೆದಿದ್ದ ಅಜಯ್ ಭೂಪತಿ ಅವರು ‘ಮಂಗಳವಾರಂ’ ಸಿನಿಮಾದಿಂದ ನಿರ್ಮಾಪಕರಾಗಿಯೂ ಬಡ್ತಿ ಪಡೆಯುತ್ತಿದಾರೆ. ಟೀಸರ್ ಮೂಲಕ ಗಮನಸೆಳೆದಿರುವ ಚಿತ್ರತಂಡ ಈಗ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ನವೆಂಬರ್ 17ರಂದು ತೆಲುಗಿನ ಜೊತೆ ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲಿ ‘ಮಂಗಳವಾರಂ’ ಬಿಡುಗಡೆ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಯಲ್ ರಜಪೂತ್ ನಟನೆಯ ‘ಮಂಗಳವಾರಂ’ ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್

    ಪಾಯಲ್ ರಜಪೂತ್ ನಟನೆಯ ‘ಮಂಗಳವಾರಂ’ ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್

    ‘ಆರ್ ಎಕ್ಸ್ 100′ (Rx 100) ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ ನಿರ್ದೇಶಕ ಅಜಯ್ ಭೂಪತಿ (Ajay Bhupathi) ಪ್ಯಾನ್ ಇಂಡಿಯಾ ಸಿನಿಮಾ ಮಂಗಳವಾರಂ ಚಿತ್ರದ ಮೂಲಕ ಸದ್ದು ಮಾಡ್ತಿದ್ದಾರೆ. ಸ್ವಾತಿ ಗುಣಪತಿ- ಸುರೇಶ್ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್ ಹಾಗೂ ಅಜಯ್ ಭೂಪತಿ ಅವರ ಎ ಕ್ರಿಯೇಟಿವ್ ವರ್ಕ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ.

    ನಿರ್ದೇಶಕರಾಗಿ ಗಮನ ಸೆಳೆದಿದ್ದ ಅಜಯ್ ಭೂಪತಿ, ‘ಮಂಗಳವಾರಂ’ (Mangalavaram) ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮಂಗಳವಾರಂ ಸಿನಿಮಾ ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಲಿದೆ. ಇದನ್ನೂ ಓದಿ:ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಸೌತ್ ಬ್ಯೂಟಿ ಪಾಯಲ್ ರಜಪೂತ್ (Payal Rajput) ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ವಿಭಿನ್ನ ಪಾತ್ರದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಆರ್‌ಎಕ್ಸ್ 100 ಚಿತ್ರದ ಬಳಿಕ ಮತ್ತೆ ಡೈರೆಕ್ಟರ್ ಅಜಯ್ ಭೂಪತಿ ಜೊತೆ ಪಾಯಲ್ ಕೈಜೋಡಿಸಿದ್ದಾರೆ.

    ‘ಮಂಗಳವಾರಂ’ (Mangalavaram) ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್, ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ‘ಮಂಗಳವಾರಂ’ ಚಿತ್ರಕ್ಕೆ ಕನ್ನಡದ ಅಜನೀಶ್ ಲೋಕನಾಥ್ (Ajaneesh Lokanath) ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿರಲಿದೆ. ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಾಪ್‌ಲೆಸ್ ಆಗಿ ಪೋಸ್ ನೀಡಿದ ಕನ್ನಡದ ʻಹೆಡ್‌ಬುಷ್ʼ ನಟಿ ಪಾಯಲ್

    ಟಾಪ್‌ಲೆಸ್ ಆಗಿ ಪೋಸ್ ನೀಡಿದ ಕನ್ನಡದ ʻಹೆಡ್‌ಬುಷ್ʼ ನಟಿ ಪಾಯಲ್

    RX 100 ಸಿನಿಮಾ ಮೂಲಕ ಪಾಯಲ್‌ ರಜಪೂತ್ ಟಾಲಿವುಡ್‌ಗೆ ನಾಯಕಿಯಾಗಿ ಪಾದಾಪಣೆ ಮಾಡಿದ್ದರು. ಇದೀಗ‌ ಮತ್ತೆ ಚೊಚ್ಚಲ ಸಿನಿಮಾ ನಿರ್ದೇಶಕನ ಜೊತೆ ಪಾಯಲ್ ಕೈಜೊಡಿಸಿದ್ದಾರೆ. ಟಾಪ್‌ಲೆಸ್ ಅವತಾರದ ಮೂಲಕ ‘ಹೆಡ್‌ಬುಷ್’ ಬ್ಯೂಟಿ ಎಂಟ್ರಿ ಕೊಟ್ಟಿದ್ದಾರೆ.

    ಕನ್ನಡದ ‘ಹೆಡ್‌ಬುಷ್’ ನಟಿ ಪಾಯಲ್ ರಜಪೂತ್ (Payal Rajput) ಅವರು RX 100 ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು ಕೂಡ ಹೇಳಿಕೊಳ್ಳುವಂತಹ ಬ್ರೇಕ್ ಅವರಿಗೆ ಸಿಗಲಿಲ್ಲ. ಆದರೂ ಪಾಯಲ್ ರಜಪೂತ್‌ಗೆ ಬೇಡಿಕೆ ಕಮ್ಮಿಯಾಗಿಲ್ಲ. ಕೈತುಂಬಾ ಸಿನಿಮಾಗಳು ಅವರ ಕೈಯಲ್ಲಿದೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಇದೀಗ ತಮ್ಮ ಮೊದಲ ಸಿನಿಮಾ ನಿರ್ದೇಶಕ ಅಜಯ್ ಭೂಪತಿ (Ajay Bhupathi) ಜೊತೆ ‘ಮಂಗಳವಾರಂ’ (Mangalavaram) ಚಿತ್ರಕ್ಕೆ ಪಾಯಲ್ ಸಾಥ್ ನೀಡಿದ್ದಾರೆ. ನೀವು ನೋಡಿದರೆ ಈ ನೋಟವೇ ಸಾಕಷ್ಟು ವಿಷಯ ಹೇಳುತ್ತದೆ ಎಂಬ ಕ್ಯಾಪ್ಷನ್‌ನೊಂದಿಗೆ ಪಾಯಲ್ ರಜಪೂತ್ ಅವರು ಈ ಪೋಸ್ಟರ್ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಸಿನಿಮಾ ಬಗ್ಗೆ ಕೌತುಕ ಮೂಡಿಸಿದ್ದಾರೆ.

    ಚಿತ್ರದ ಪೋಸ್ಟರ್‌ನಲ್ಲಿ ನಟಿ ಅರೆ ಬೆತ್ತಲಾಗಿ ಕಾಣಿಸಿಕೊಂಡಿದ್ದಾರೆ. ನಟಿ ಬೋಲ್ಡ್ ಲುಕ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಏಬ್ಬಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ಅಂದಹಾಗೆ, ಪಾಯಲ್ ಕಳೆದ ವರ್ಷ ಡಾಲಿ (Daali) ನಟನೆ, ನಿರ್ಮಾಣದ ‘ಹೆಡ್‌ಬುಷ್’ (Head Bush) ಸಿನಿಮಾದಲ್ಲಿ ನಟಿಸಿದ್ದರು. ಈ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದರು.

  • ಕೊಡಗಿನಲ್ಲಿ ಅಗತ್ಯ ವಸ್ತುಗಳಿಗಾಗಿ ಮುಗಿಬಿದ್ದ ಜನ

    ಕೊಡಗಿನಲ್ಲಿ ಅಗತ್ಯ ವಸ್ತುಗಳಿಗಾಗಿ ಮುಗಿಬಿದ್ದ ಜನ

    ಮಡಿಕೇರಿ: ಕೊಡಗಿನಲ್ಲಿ ಮಂಗಳವಾರ ಮತ್ತು ಶುಕ್ರವಾರ ಬೆಳಿಗ್ಗೆ 6 ರಿಂದ 12 ಗಂಟೆಯವರೆಗೆ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಮುಗಿಬಿದ್ದಿದ್ದರು.

    ನಗರದ ಚೌಕಿ, ಇಂದಿರಾಗಾಂಧಿ ವೃತ್ತ ಕಾಲೇಜು ಜನರಲ್ ತಿಮ್ಮಯ್ಯ ರಸ್ತೆಗಳಲ್ಲಿ ಬೆಳಿಗ್ಗೆಯಿಂದಲೂ ಟ್ರಾಫಿಕ್ ಜಾಮ್ ಕಂಡು ಬಂದಿತು. ಅಷ್ಟೇ ಅಲ್ಲದೆ ಅಂಗಡಿಗಳಲ್ಲಿ ಸಾಲುಗಟ್ಟಿ ಜನರು ಅಗತ್ಯ ವಸ್ತುಗಳ ಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಬಂದಿದ್ದರು. ಕೆಲವೆಡೆ ಸಾಮಾಜಿಕ ಅಂತರವಿಲ್ಲದೆ ನುಗ್ಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡುಬಂದಿತು. ಇನ್ನೆರಡು ದಿನ ಏನು ಕೊಳ್ಳಲಾಗುವುದಿಲ್ಲ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಧಾವಿಸಿದ್ದರು.

    ಇಂದಿನಿಂದ ಕೊಡಗು ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆ ಹನ್ನೆರಡು ಗಂಟೆಗೂ ಮುನ್ನವೇ ಅಂಗಡಿ ಮುಗ್ಗಟ್ಟುಗಳನ್ನು ವರ್ತಕರು ಬಂದ್ ಮಾಡುವ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡಿದರು. ಹನ್ನೆರಡು ಗಂಟೆಗೂ ಮುನ್ನವೇ ನಗರದ ಪೊಲೀಸರು ಲಾಠಿ ಹಿಡಿದು ಫೀಲ್ಡಿಗಿಳಿದರು. ಮಡಿಕೇರಿ ಸರ್ಕಲ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ ಮತ್ತು ಟೀಂ ಕಾರ್ಯಚರಣೆ ನಡೆಸುತ್ತಾ, ನಗರದ ಹಲವೆಡೆ ಅನಗತ್ಯ ಓಡಾಟ ನಡೆಸುತ್ತಿದರಿಗೆ ಎಚ್ಚರಿಕೆ ನೀಡಿದರು. ಇನ್ನೂ ಮೂರು ದಿನಗಳ ಕಾಲ ಸ್ಥಬ್ಧವಾಗಲಿರುವ ಕೊಡಗು ಇನ್ನು ಶುಕ್ರವಾರದವರೆಗೆ ಬಂದ್ ಆಗಲಿದೆ.

    ಮಡಿಕೇರಿ ನಗರಸಭೆ ನೂತನ ಸದಸ್ಯ ಮುಸ್ತಫಾ ಅವರಿಂದ ಮಡಿಕೇರಿ ನಗರದ ಅನೇಕ ವಾಡ್9ಗಳಿಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಿದರು. ಮಡಿಕೇರಿ ನಗರಸಭೆ ಜೆಡಿಎಸ್ ನೂತನ ಸದಸ್ಯ ಮುಸ್ತಫಾ ಹಾಗೂ ಅವರ ತಂಡದ ಸದಸ್ಯರು ನಗರದ ಮಾರ್ಕೆಟ್ ರೋಡ್, ಕಾಲೇಜು ರಸ್ತೆ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸರ್ ಸಿಂಪಡಣೆ ಮಾಡಿದರು. ಬೆಳಿಗ್ಗೆಯಿಂದ ಜನರು ಓಡಾಡಿದ್ದ ಹಿನ್ನೆಲೆ ಎಲ್ಲೆಡೆ ಸ್ಯಾನಿಟೈಸರ್ ಸಿಂಪರಣೆ ಮಾಡಿ ಸಾರ್ವಜನಿಕರ ಮೆಚ್ಚುಗೆ ಪಾತ್ರರದರು.

  • ಮಂಗಳವಾರದಿಂದ ಒಂದು ವಾರ ಲಾಕ್‍ಡೌನ್- ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ

    ಮಂಗಳವಾರದಿಂದ ಒಂದು ವಾರ ಲಾಕ್‍ಡೌನ್- ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ

    ಬೆಂಗಳೂರು: ಕೊರೊನಾ ತಡೆಗಾಗಿ ಬೆಂಗಳೂರು ಮತ್ತು ಗ್ರಾಮಾಂತರ ಭಾಗದಲ್ಲಿ ಒಂದು ವಾರ ಲಾಕ್‍ಡೌನ್ ಮಾಡಲು ಸರ್ಕಾರ ನಿರ್ಧರಿಸಿ ಅಧಿಕೃತ ಘೋಷಣೆ ಮಾಡಿದೆ.

    ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ 14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ ಕಾಲ ಅಂದರೆ 23.07.2020 ರ ಬೆಳಗ್ಗೆ 5.00 ಗಂಟೆಯವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.

    ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

    ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್‍ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು. ತಾವು ಲಾಕ್‍ಡೌನ್ ಸಂಧರ್ಬದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಿ ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.