Tag: ಮಂಗಳೂರು ಪ್ರಕರಣ

  • ಸಿಎಂ ನೋಡಲು ಡೀಸೆಂಟ್ ಆದರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್: ಸುಧಾಕರ್

    ಸಿಎಂ ನೋಡಲು ಡೀಸೆಂಟ್ ಆದರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್: ಸುಧಾಕರ್

    ಚಿಕ್ಕಬಳ್ಳಾಪುರ: ಸಿಎಂ ನೋಡಲು ಡೀಸೆಂಟ್ ಆದರೆ, ನಿರ್ಣಯಗಳು ತುಂಬಾ ಸ್ಟ್ರಾಂಗ್ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ವಿರೋಧ ಪಕ್ಷಗಳಿಗೆ ತಿರುಗೇಟು ಕೊಟ್ಟರು.

    ಪ್ರವೀಣ್ ಹತ್ಯೆ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆಯುತ್ತಿರುವ ಹತ್ಯೆ ಪ್ರಕರಣಗಳು ನೋವು ತಂದಿವೆ. ಅಶಾಂತಿ ಉಂಟು ಮಾಡುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ರಾಜ್ಯ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್

    ಕ್ರಮ ಎಷ್ಟು ತ್ವರಿತವಾಗಿ ಆಗಲಿದೆ ಎಂದು ರಾಜ್ಯದ ಜನ ನೋಡ್ತಾರೆ. ಮಂಗಳೂರಿಗೆ ಹೋಗಿ ಸೂಚನೆಗಳನ್ನ ಕೊಟ್ಟು ಸಿಎಂ ಬೊಮ್ಮಾಯಿ ಬಂದಿದ್ದಾರೆ. ಒಂದೆರೆಡು ದಿನದಲ್ಲಿ ಎಲ್ಲವೂ ಕೂಡ ಹೊರಗೆ ಬರಲಿದೆ. ಇದು ಪುನಾರಾವರ್ತನೆ ಆಗದಂತೆ ವಿಶೇಷ ತಂಡ ರಚನೆ ಮಾಡಲು ಚರ್ಚೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

    22 ಜನರನ್ನ ಬಸವರಾಜ ಬೊಮ್ಮಾಯಿ ಅವರು ತಿಹಾರ್ ಜೈಲಿಗೆ ಕಳುಹಿಸಿದ್ದಾರೆ. ಸಿಎಂ ಬಹಳ ಗಟ್ಟಿ ತೀರ್ಮಾನ ತೆಗೆದುಕೊಳ್ಳುವ ವ್ಯಕ್ತಿ. ನೋಡಲು ಸುಮ್ಮನೆ ಡಿಸೇಂಟ್ ಆಗಿದ್ದಾರೆ. ಆದರೆ ಅವರ ನಿರ್ಣಯಗಳು ತುಂಬಾ ಸ್ಟ್ರಾಂಗ್. ಸಿಎಂ ಆದವರು ಜೋರು ಮಾತನಾಡೋದಲ್ಲ, ವಿರೋಧ ಪಕ್ಷದ ನಾಯಕರು ಜೋರು ಮಾಡೋದಲ್ಲ. ಅವೇಷದಿಂದ ಮಾತಾಡಿದ್ರೆ ಏನೂ ಆಗಲ್ಲ. ಸಿಎಂ ಏನು ಮಾಡ್ತಾರೆ ಕಾದು ನೋಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ:  ಸಿದ್ದು ಮೂಸೆ ವಾಲಾ ಮುಖವನ್ನ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡ ತಂದೆ 

    ವಿಶೇಷ ಕಮಾಂಡೋ ಪಡೆ ರಚನೆ ಮಾಡಲು ಸಿಎಂ ತೀರ್ಮಾನ ಮಾಡಿದ್ದಾರೆ. ಯಾವುದೇ ಕಾರ್ಯಕರ್ತರು ಕಾನೂನು ಕೈಗೆ ತೆಗೆದುಕೊಳ್ಳುವುದು ಬೇಡ. ಶಾಂತಿ ಕಾಪಾಡಿ, ರಾಜ್ಯ ಸರ್ಕಾರ ಮೂಲಭೂತವಾದ ಸಂಘಟನೆಗಳ ಹೆಡೆಮುರಿ ಕಟ್ಟಲಿದೆ. ಫಾಝಿಲ್ ಕೊಲೆಗೆ ಕಾರಣ ಏನು ಎಂಬುದು ಕಾದು ನೋಡೋಣ ತನಿಖೆ ಆಗಲಿ. ಇನ್ನೂ ಪ್ರವೀಣ್ ಹತ್ಯೆ ನಂತರ ಬಿಜೆಪಿಯ ಕೆಲವು ಕಾರ್ಯಕರ್ತರು ಭಾವನಾತ್ಮಕವಾಗಿ ರಾಜೀನಾಮೆ ಕೊಟ್ಟಿದ್ದಾರೆ. ಆದ್ರೆ ಅವರಿಗೆ ಗೊತ್ತಿದೆ ಬಿಜೆಪಿ ಪಕ್ಷ ಕಾರ್ಯಕರ್ತರ ಪರವಾಗಿದೆ ಎಂದು ವಿವರಿಸಿದರು.

    Live Tv
    [brid partner=56869869 player=32851 video=960834 autoplay=true]

  • ದೇಶದ ಬದ್ಧತೆಗೆ ಧಕ್ಕೆ ತಂದವರು ದೇಶ ದ್ರೋಹಿಗಳೇ: ಕಾರಜೋಳ

    ದೇಶದ ಬದ್ಧತೆಗೆ ಧಕ್ಕೆ ತಂದವರು ದೇಶ ದ್ರೋಹಿಗಳೇ: ಕಾರಜೋಳ

    ಚಿಕ್ಕೋಡಿ(ಬೆಳಗಾವಿ): ದೇಶದ ಏಕತೆ ಹಾಗೂ ಬದ್ಧತೆಗೆ ಧಕ್ಕೆ ತಂದರೆ ಅವರು ದೇಶ ದ್ರೋಹಿಗಳೇ. ಅವರು ಯಾವುದೇ ಸಮುದಾಯದವರು ಆಗಲಿ, ಅವರು ದೇಶ ದ್ರೋಹಿಗಳೇ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

    ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಬಾಂಬರ್ ಆದಿತ್ಯ ರಾವ್ ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗಲಿದೆ. ಆದಿತ್ಯ ರಾವ್, ಪ್ರಭಾಕರ್ ಭಟ್ ಜೊತೆಗಿನ ಫೋಟೋ ವಿಚಾರವಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ನನ್ನೊಂದಿಗೂ ಬಹಳ ಜನ ಫೋಟೋ ತೆಗೆದುಕೊಂಡಿದ್ದಾರೆ. ಅವರು ಏನಾದರೂ ಮಾಡಿದರೆ ನಾನು ಜವಾಬ್ದಾರಿ ಆಗ್ತೀನಾ ಎಂದು ಪ್ರಶ್ನಿಸಿದರು.

    ಇದೇ ವೇಳೆ ಪ್ರವಾಹ ಸಂತ್ರಸ್ತರ ವಿಚಾರವಾಗಿ ಮಾತನಾಡಿದ ಅವರು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡುವ ವಿಚಾರಕ್ಕೆ ಸರ್ಕಾರ ಬದ್ಧವಾಗಿದೆ. ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎಂಬ ಆರೋಪ ಸುಳ್ಳು. ಕೇಂದ್ರಕ್ಕಿಂತ ಹೆಚ್ಚುವರಿಯಾಗಿ ಪರಿಹಾರ ಕೊಡುತ್ತಿದ್ದೇವೆ. ಎನ್.ಡಿ.ಆರ್.ಎಫ್ ಮಾನದಂಡಕ್ಕಿಂತ ಹೆಚ್ಚು ಪರಿಹಾರ ಕೊಟ್ಟಿದ್ದೇವೆ. ಕೆಲವೆಡೆ ತಾಂತ್ರಿಕ ತೊಂದರೆಯಿಂದಾಗಿ ಪರಿಹಾರ ವಿಳಂಬ ಆಗಿದೆ. ಆದರೆ ನೆರೆ ಪರಿಹಾರ ವಿಷಯದಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.

    ಇದೇ ವೇಳೆ ಪರಿಹಾರ ವಿಚಾರವಾಗಿ ಡಿಸಿಎಂ ಕಾರಿಜೋಳ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿ ತಕ್ಷಣವೇ ಬಾಕಿ ಇರುವ ಸಂತ್ರಸ್ತರ ಪರಿಹಾರ ಬಿಡುಗಡೆ ಮಾಡುವಂತೆ ಸೂಚನೆ ನೀಡಿದರು.

  • ಮಂಗಳೂರು ಬಾಂಬ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಕ್ರಮ: ಕೆ.ಎಸ್ ಈಶ್ವರಪ್ಪ

    ಮಂಗಳೂರು ಬಾಂಬ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಕ್ರಮ: ಕೆ.ಎಸ್ ಈಶ್ವರಪ್ಪ

    – ಬಿಜೆಪಿ ವಿರೋಧಿಗಳು ಪೌರತ್ವ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ

    ಶಿವಮೊಗ್ಗ: ಮಂಗಳೂರು ಬಾಂಬ್ ಪ್ರಕರಣ ಸಂಬಂಧ ಚರ್ಚೆಗಳಾಗುತ್ತಿವೆ. ಯಾರೇ ತಪ್ಪಿತಸ್ಥರಿದ್ದರೂ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು ಮಂಗಳೂರು ಪ್ರಕರಣದಲ್ಲಿ ಆರೋಪಿಗಳು ಯಾರೇ ಇರಲಿ ಅವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ಆದರೆ ಮಾಜಿ ಸಿಎಂ ಕುಮಾರಸ್ವಾಮಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆ ನೀಡಬಾರದು ಎಂದು ಸಚಿವರು ಮಾಜಿ ಸಿಎಂಗೆ ಕಿವಿ ಮಾತು ಹೇಳಿದ್ದಾರೆ.

    ನಾವು ಪೊಲೀಸರ ಜೊತೆ ಇದ್ದೇವೆ ಎಂಬ ಧೈರ್ಯ ತುಂಬುವ ಮಾತನಾಡಬೇಕು. ಹಗಲು ರಾತ್ರಿ ಕಷ್ಟ ಪಟ್ಟು, ಜನರ ಜೀವವನ್ನು ರಕ್ಷಿಸುವ ಪೊಲೀಸರ ವಿರುದ್ಧ ನಾವುಗಳು ಮಾತನಾಡಬಾರದು. ಪೊಲೀಸ್ ಇಲಾಖೆಯೇ ಬಾಂಬ್ ಇಟ್ಟಿದ್ದಾರೆ ಎಂಬ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲರೂ ಒಟ್ಟಿಗೆ ಸೇರಿ ದುಷ್ಕರ್ಮಿಗಳ ವಿರುದ್ಧ ದಿಟ್ಟ ಹೆಜ್ಜೆ ಇಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಮುನ್ನಡೆಯುತ್ತಿದೆ. ಯಾರ ಬಗ್ಗೆಯೂ ಸಮರ್ಥನೆ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ಸಚಿವರು ತಿಳಿಸಿದರು.

    ಬಿಜೆಪಿ ವಿರೋಧಿಗಳು ಮತ್ತು ದೇಶದ್ರೋಹಿಗಳು ಈ ಎನ್.ಆರ್.ಸಿ. ಮತ್ತು ಸಿಎಎ ಬಗ್ಗೆ ಮಾತನಾಡುತ್ತ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸಹ ಸಿಎಎ ಹಾಗೂ ಎನ್ ಆರ್ ಸಿ ವಿರೋಧ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.

    ಪಾಕಿಸ್ಥಾನ, ಬಾಂಗ್ಲದೇಶ ಮತ್ತು ಆಫ್ಘಾನಿಸ್ತಾನದಿಂದ ಉಟ್ಟ ಬಟ್ಟೆಯಲ್ಲಿ ಬಂದಿರುವ ಮುಸಲ್ಮಾನರಿಗೆ ಪೌರತ್ವ ನೀಡುವ ಕಾಯ್ದೆ ಜಾರಿಗೆ ತರಲಾಗಿದೆ. ಆದರೆ, ಭಾರತದಲ್ಲಿರುವ ಒಬ್ಬನೇ ಒಬ್ಬ ಮುಸಲ್ಮಾನರಿಗೂ ತೊಂದರೆಯಾಗುವುದಿಲ್ಲ. ಇದು ಗೊತ್ತಿದ್ದು ಕೂಡ ದೇವೆಗೌಡರು ಸೇರಿದಂತೆ, ಕಾಂಗ್ರೆಸ್ಸಿಗರು ಈ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕಾಯ್ದೆಯ ಬಗ್ಗೆ ದೇಶದ ಜನತೆಗೆ ಇಂದಲ್ಲ, ನಾಳೆ ಅರ್ಥವಾಗಿ ಕಾಯ್ದೆಯನ್ಬು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

    ಸಂಪುಟ ವಿಸ್ತರಣೆ ವರಿಷ್ಠರು ತೀರ್ಮಾನ
    ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ಮತ್ತು ರಾಜ್ಯದ ವರಿಷ್ಠರು ಚರ್ಚೆ ಮಾಡಿ ಶೀಘ್ರ ತೀರ್ಮಾನ ಕೈಗೊಳ್ಳುತ್ತಾರೆ. 17 ಜನ ಕಾಂಗ್ರೆಸ್, ಜೆಡಿಎಸ್‍ನಿಂದ ಬಂದಿರುವ ಶಾಸಕರಿಂದಲೇ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಅವರ ಋಣವನ್ನು ನಾವು ತೀರಿಸುತ್ತೇವೆ. ಮುಂದಿನ ಒಂದು ವಾರದೊಳಗೆ ಸಂಪುಟ ವಿಸ್ತರಣೆ ಗೊಂದಲ ಬಗೆಹರಿಯಲಿದೆ ಎಂದರು.

    ಏನೂ ಸಮಸ್ಯೆ ಇರಲಿಲ್ಲ ಎಂದರೆ ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಕಾರ್ಯ ಮುಗಿಯುತ್ತಿತ್ತು. ಪೂರ್ಣ ಬಹುಮತ ಬಿಜೆಪಿಗೆ ಬಂದಿದ್ದರೆ ಈ ಸಮಸ್ಯೆ ಸಹ ಇರುತ್ತಿರಲಿಲ್ಲ. ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಬೇಕಾಗಿ ಬಂದರೆ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು ಸೂಚಿಸಿದರೆ ತ್ಯಾಗ ಮಾಡಲೇಬೇಕು. ಆದರೆ ನಮ್ಮಲ್ಲಿ ಮೂಲ ಹಾಗೂ ವಲಸಿಗ ಎಂಬ ಬೇಧ ಭಾವವಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಿಜೆಪಿಗೆ ಬಂದಿರುವ ಶಾಸಕರು ಬಿಜೆಪಿಯೊಂದಿಗೆ ಹಾಲು ಸಕ್ಕರೆ ರೀತಿ ಬೆರೆತುಕೊಳ್ಳುತ್ತಾರೆ. ಕಾಂಗ್ರೆಸ್ ನಲ್ಲಿ ಮೂಲ ಮತ್ತು ವಲಸಿಗ ಎಂಬುದು ತಾರಕಕ್ಕೇರಿದೆ. ಹೀಗಾಗಿಯೇ ಸಿದ್ದರಾಮಯ್ಯ ಅವರನ್ನೇ ಹೊರಗೆ ಹಾಕಬೇಕು ಎಂದು ಡಿಕೆಶಿ, ಪರಮೇಶ್ವರ್ ಕಾಯುತ್ತಿದ್ದಾರೆ ಎಂದರು.

    ಕಾಂಗ್ರೆಸ್‍ನವರು ಹಾಲು, ಸಕ್ಕರೆಯಾಗದೇ, ವಿಷ ಮತ್ತು ಹಾಲಿನ ರೀತಿಯಲ್ಲಿ ಇದ್ದಾರೆ. ಅವರಲ್ಲಿನ ಗುಂಪುಗಾರಿಕೆ ಸರಿಪಡಿಸಿಕೊಳ್ಳದೇ ಕೇವಲ ಬಿಜೆಪಿ ವಿರುದ್ಧ ಟೀಕೆ ಮಾಡುವುದಷ್ಟೇ ಮಾಡುತ್ತಿದ್ದಾರೆ. ಆದರೆ ಅವರು ಇದರಲ್ಲಿಯೂ ಯಶಸ್ವಿಯಾಗುವುದಿಲ್ಲ ಎಂದು ಈಶ್ವರಪ್ಪ ಕೈ ನಾಯಕರ ವಿರುದ್ಧ ವ್ಯಂಗ್ಯವಾಡಿದರು.