Tag: ಮಂಗಳೂರು ವಿಮಾನ ನಿಲ್ದಾಣ

  • ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

    ಉಡುಪಿ: ಮಲ್ಪೆಯಲ್ಲಿ (Malpe)  ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು (Bangladesh Citizen) ಉಡುಪಿ ಪೊಲೀಸರು ಬಂಧಿಸಿದ್ದಾರೆ.

    ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪೈಕಿ ಉಸ್ಮಾನ್ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದರು.

     

    ಸಿಕ್ಕಿಬಿದ್ದಿದ್ದು ಹೇಗೆ?
    ಬಂಧನಕ್ಕೆ ಒಳಗಾಗಿರುವ ಮಾಣಿಕ್‌ ಹುಸೈನ್‌ ನಕಲಿ ಪಾಸ್‌ಪೋರ್ಟ್‌ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ. ವಿಮಾನ‌ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಈ ವೇಳೆ ಆತ ಅಕ್ರಮವಾಗಿ ಬಾಂಗ್ಲಾದೇಶದಿಂದ ನುಸುಳಿ ನಕಲಿ ಆಧಾರ್‌ ಕಾರ್ಡ್‌, ಪಾಸ್‌ಪೋರ್ಟ್‌ ಪಡೆದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಈತನ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈತನನ್ನು ಬಂಧಿಸಿದ ಬಳಿಕ ಈತನೊಂದಿಗೆ ಮತ್ತಷ್ಟು ಜನ ಬಾಂಗ್ಲಾದೇಶಿ ಪ್ರಜೆಗಳು ದೇಶದೊಳಗೆ ನುಸುಳಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈತ ನೀಡಿದ ಮಾಹಿತಿ ಆಧಾರದಲ್ಲಿ ಮತ್ತೆ 6 ಮಂದಿಯನ್ನು ಉಡುಪಿಯ (Udupi) ಮಲ್ಪೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಯುತ್ತಿದೆ.

  • ಮಂಗಳೂರು ಏರ್‌ಪೋರ್ಟ್‌ಗೆ ‘ಕೋಟಿ-ಚೆನ್ನಯ್ಯ’ ಹೆಸರಿಡಲು ಸಿಎಂಗೆ ಮನವಿ

    ಮಂಗಳೂರು ಏರ್‌ಪೋರ್ಟ್‌ಗೆ ‘ಕೋಟಿ-ಚೆನ್ನಯ್ಯ’ ಹೆಸರಿಡಲು ಸಿಎಂಗೆ ಮನವಿ

    – ನಾಮಕರಣಕ್ಕೆ‌ ಮನವಿ‌ ಮಾಡಿದ ಕರಾವಳಿ ಶಾಸಕರ ನಿಯೋಗ

    ಮಂಗಳೂರು: ತುಳುನಾಡಿನ ವೀರಪುರುಷರಾದ ಅವಳಿ ಸಹೋದರರಾದ ಕೋಟಿ-ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಕರಾವಳಿಯ ಶಾಸಕರು ಒತ್ತಾಯಿಸಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಿಭಜಿತ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

    ತುಳುನಾಡಿನಲ್ಲಿ ಇತಿಹಾಸ ಸೃಷ್ಟಿಸಿ ಬಾಳಿ ಬದುಕಿದ ವೀರಪುರುಷರಾದ ಕೋಟಿ-ಚೆನ್ನಯ್ಯನವರು ಇಂದಿಗೂ ಸಾವಿರಾರು ಕಡೆಗಳಲ್ಲಿ ಆರಾಧನೆಗೊಳ್ಳುತ್ತಿದ್ದಾರೆ. ಇವರ ಹೆಸರನ್ನು ಈ ವಿಮಾನ ನಿಲ್ದಾಣಕ್ಕೆ ಇಡೋದ್ರಿಂದ ದೇಶ ವಿದೇಶಗಳಲ್ಲಿ ಈ ಅವಳಿ ವೀರ ಪುರುಷರ ಹೆಸರು ಅಜರಾಮರವಾಗಿ ಉಳಿಯುವಂತಾಗುತ್ತದೆ. ವಿಶ್ವದೆಲ್ಲೆಡೆ ಇರುವ ತುಳುವರಿಗೂ ಇವರ ಹೆಸರಿಡೋದ್ರಿಂದ ಭಾವನಾತ್ಮಕ ಸಂಬಂಧ ಇರುತ್ತದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ‌ ಮುಖ್ಯಮಂತ್ರಿ ಮನವಿ ಸಲ್ಲಿಸಬೇಕೆಂದು ನಿಯೋಗದ ಸದಸ್ಯರು ಒತ್ತಾಯಿಸಿದರು.

    ನಿಯೋಗದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಸಭೆಯ ಮುಖ್ಯ ಸಚೇತಕರಾದ ಸುನೀಲ್ ಕುಮಾರ್ ಕಾರ್ಕಳ, ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಉಡುಪಿ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.

  • ‘ಕೊರೊನಾ ಟೆಸ್ಟ್ ನೆಗೆಟಿವ್ ರಿಪೋರ್ಟ್ ಇದ್ದರೆ ಬನ್ನಿ’- ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ

    ‘ಕೊರೊನಾ ಟೆಸ್ಟ್ ನೆಗೆಟಿವ್ ರಿಪೋರ್ಟ್ ಇದ್ದರೆ ಬನ್ನಿ’- ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ

    ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಮಾಡಲಾಗುವುದು. ಬೆಂಗಳೂರು ಮಾರ್ಗಸೂಚಿ ಮಂಗಳೂರಿಗೂ ಅನ್ವಯ ಮಾಡುತ್ತೇವೆ. ಕೆಲ ಬದಲಾವಣೆ ಮಾಡಿ ತಕ್ಷಣ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯ, ಹೊರ ದೇಶದಿಂದ ಬಂದವರ ವಿಚಾರಕ್ಕೆ ಮಾರ್ಗಸೂಚಿ ಇದೆ. ವಿಮಾನ ಮೂಲಕ ಬರುವವರು ಮೊದಲೇ ರಿಜಿಸ್ಟರ್ ಮಾಡಬೇಕು. ಐಸಿಎಂಆರ್ ಗೈಡ್ ಲೈನ್ ಫಾಲೋ ಮಾಡಬೇಕು. ಬರುವ 48 ಗಂಟೆ ಒಳಗೆ ಕೊರೊನಾ ಟೆಸ್ಟ್ ನೆಗೆಟಿವ್ ವರದಿ ತರಬೇಕು. ಈ ಕಾನೂನನ್ನು ಮಂಗಳೂರು ವಿಮಾನ ನಿಲ್ದಾಣ ದಲ್ಲೂ ಜಾರಿಗೆ ತರುತ್ತೇವೆ ಎಂದು ವಿವರಿಸಿದರು.

    ರಾಜ್ಯದ ಗ್ರಾಮಾಂತರದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ರಚನೆ ಆಗಿದೆ. ನಗರದ ವಾರ್ಡ್ ಮತ್ತು ಬೂತ್ ವಾರು ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಮಾಡುತ್ತಿದೆ. ಹೊಸ ವ್ಯಕ್ತಿ ಅಥವಾ ಸೋಂಕಿತ ಬಂದಾಗ ವಿವರ ಸಂಗ್ರಹಿಸಲಾಗುವುದು. ರಾಜ್ಯದಲ್ಲಿ 10 ಲಕ್ಷ ಜನ ಸೋಂಕಿತರಾದರೂ ಕಟ್ಟೆಚ್ಚರ ವಹಿಸಬಹುದು ಎಂದು ಮಾಹಿತಿ ನೀಡಿದರು.

    ನಮ್ಮಲ್ಲಿ ತಂತ್ರಜ್ಞಾನ ಸಿದ್ಧವಾಗಿದೆ. ಜನರ ನಡುವೆ ಕೊರೊನಾ ಕಳಂಕ ಬೇಡ. ವೈರಾಣುವಿನಿಂದ ದೂರವಿರಿ ವ್ಯಕ್ತಿಗಳಿಂದ ಅಲ್ಲ. ಹೊರ ರಾಜ್ಯದಿಂದ ಜನರನ್ನು ಕರೆದುಕೊಂಡು ಬರುವುದು ಸುಪ್ರೀಂ ಕೋರ್ಟ್ ಆದೇಶ. ಅದನ್ನು ನಾವು ಅನುಸರಿಸುತ್ತೇವೆ. ಆಯಾ ರಾಜ್ಯದವರು ಆ ರಾಜ್ಯಕ್ಕೆ ಬಿಟ್ಟುಕೊಳ್ಳಬೇಕಾಗುತ್ತದೆ ಎಂದರು.

  • ಮಂಗಳೂರು ಬಾಂಬರ್ ಮೇಲೆ ಮತ್ತೊಂದು ಕೇಸ್ ದಾಖಲು

    ಮಂಗಳೂರು ಬಾಂಬರ್ ಮೇಲೆ ಮತ್ತೊಂದು ಕೇಸ್ ದಾಖಲು

    ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಆದಿತ್ಯ ರಾವ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.

    ಬಜ್ಪೆ ವಿಮಾನ ನಿಲ್ದಾಣದ ಸಿಬ್ಬಂದಿ ಅಬ್ದುಲ್ ಹಮೀದ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಆದಿತ್ಯ ರಾವ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಜ.20ರ ಮಧ್ಯಾಹ್ನ 2.30ಕ್ಕೆ ಆದಿತ್ಯರಾವ್ ಇಂಡಿಗೋ ಮ್ಯಾನೇಜರ್ ಅವರಿಗೆ, ಹೈದರಾಬಾದಿಗೆ ತೆರಳುತ್ತಿರುವ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಕೆ ಕರೆ ಮಾಡಿದ್ದ. ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಇದನ್ನೂ ಓದಿ: ಬಾಂಬರ್ ಆದಿತ್ಯರಾವ್ ಮಾಸ್ಟರ್ ಪ್ಲಾನ್ ಕೇಳಿ ದಂಗಾದ ಬೆಂಗಳೂರು ಪೊಲೀಸರು

    ಮಧ್ಯಾಹ್ನ 2.15ಕ್ಕೆ ಹೈದರಾಬಾದ್‍ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನ ಮರಳಿ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್‍ಗೆ ತೆರಳಬೇಕಿತ್ತು. ಚೆಕ್ ಇನ್ ಆಗಿ ಎಲ್ಲ ಪ್ರಯಾಣಿಕರನ್ನು ವಿಮಾನದ ಒಳಗಡೆ ಕಳುಹಿಸಲಾಗಿತ್ತು.

    ವಿಮಾನ ಟೇಕಾಫ್ ಆಗಲು ಸಿದ್ಧತೆ ನಡೆಯುತ್ತಿದ್ದಾಗ ಇಂಡಿಗೋ ಕಚೇರಿಗೆ ದೂರವಾಣಿ ಕರೆ ಬಂದಿತ್ತು. ಹೈದರಾಬಾದ್‍ಗೆ ತೆರಳುವ ಇಂಡಿಗೋ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಆಗಂತುಕನೊಬ್ಬ ಕರೆ ಮಾಡಿ ಬೆದರಿಸಿದ್ದ.

    ಬೆದರಿಕೆ ಕರೆ ಬಂದ ಬಗ್ಗೆ ಸಿಬ್ಬಂದಿ ನಿಲ್ದಾಣದ ಭದ್ರತಾ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಕೂಡಲೇ ಜಾಗೃತರಾದ ನಿಲ್ದಾಣದ ಭದ್ರತಾ ಸಿಬ್ಬಂದಿ ಇಂಡಿಗೋ ವಿಮಾನ ಸಂಚಾರಕ್ಕೆ ತಡೆ ನೀಡಿ ಎಲ್ಲ ಪ್ರಯಾಣಿಕರನ್ನು ಮರಳಿ ಟರ್ಮಿನಲ್‍ಗೆ ಕರೆತಂದಿದ್ದರು.

    ವಿಮಾನದಲ್ಲಿದ್ದ ಪ್ರತಿಯೊಂದು ಬ್ಯಾಗ್‍ನ್ನು ಹೊರತೆಗೆದು ಕೂಲಂಕಷವಾಗಿ ತಪಾಸಣೆ ಮಾಡಲಾಯಿತು. ಸಂಜೆ 4 ಗಂಟೆಗೆ ಆರಂಭಗೊಂಡ ತಪಾಸಣೆ ರಾತ್ರಿ 7.30ರವರೆಗೂ ನಡೆದಿತ್ತು. ತಪಾಸಣೆ ಪೂರ್ಣಗೊಂಡ ಬಳಿಕ ಇದೊಂದು ಹುಸಿ ಕರೆ ಎಂಬ ತೀರ್ಮಾನಕ್ಕೆ ಭದ್ರತಾ ಸಿಬ್ಬಂದಿ ಬಂದ ನಂತರ ಇಂಡಿಗೋ ವಿಮಾನ ಹೈದರಾಬಾದಿಗೆ ಪ್ರಯಾಣ ಬೆಳೆಸಿತ್ತು.

  • ಮಂಗಳೂರು ಬಾಂಬ್ ಪ್ರಕರಣ ತನಿಖೆಯ ನಂತರವೇ ಎಲ್ಲವೂ ಹೊರಬರಬೇಕು: ಬೊಮ್ಮಾಯಿ

    ಮಂಗಳೂರು ಬಾಂಬ್ ಪ್ರಕರಣ ತನಿಖೆಯ ನಂತರವೇ ಎಲ್ಲವೂ ಹೊರಬರಬೇಕು: ಬೊಮ್ಮಾಯಿ

    ಧಾರವಾಡ/ಹುಬ್ಬಳ್ಳಿ: ಮಂಗಳೂರು ಬಾಂಬ್ ಪ್ರಕರಣ ಹಿನ್ನೆಲೆಯಲ್ಲಿ ಆದಿತ್ಯ ರಾವ್ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ. ತನಿಖೆಯಿಂದಲೇ ಎಲ್ಲವೂ ಹೊರಬರಬೇಕು. ಬಂಧನವಾದ ಆರೋಪಿಯ ಸಮಗ್ರವಾದ ತನಿಖೆ ಆದ ಮೇಲೆ ಅವನ ಜತೆ ಯಾರಿದ್ದಾರೆಂದು ತಿಳಿಯುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಬಾಂಬ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯಿಂದಲೂ ತನಿಖೆಗಳು ಆಗುತ್ತದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಮಾನಸಿಕ ಅಸ್ವಸ್ಥ ಎಂದಿರುವ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

    ಬಾಂಬ್ ಇಟ್ಟ ಯುವಕನ ಹಿನ್ನೆಲೆಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಂಬ್ ಸಿಕ್ಕ ತಕ್ಷಣ ಸಿಸಿಟಿವಿ ದೃಶ್ಯ ಕಲೆ ಹಾಕಿ ಮೂರು ತಂಡಗಳನ್ನ ರಚನೆ ಮಾಡಲಾಗಿತ್ತು. ಅಲ್ಲದೇ ಅವನ ಮನೆಯವರು ಹಲವಾರು ವಿಚಾರಗಳನ್ನ ಆತನ ಬಗ್ಗೆ ಹೇಳಿದ್ದಾರೆ. ಆದರೆ ಯಾವುದೂ ಕೂಡ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಅವನು ಮಾನಸಿಕ ಅಸ್ವಸ್ಥ ಎಂದು ಎಲ್ಲಿಯೂ ನಾನು ಹೇಳಿಲ್ಲ, ತನಿಖೆ ಆಗದ ಹೊರತು ನಿಖರವಾಗಿ ಏನೂ ಹೇಳುವುದಿಲ್ಲ ಎಂದರು.

    ಕುಮಾರಸ್ವಾಮಿಯವರು ಎಫ್‍ಎಸ್‍ಎಲ್ ತಜ್ಞರಂತೆ ಮಾತನಾಡುತ್ತಿದ್ದಾರೆ. ಅವರು ಸರ್ಟಿಫಿಕೇಟ್ ಕೊಡಲಿಕ್ಕೆ ಬರುತ್ತಾ? ಕುಮಾರಸ್ವಾಮಿಯವರು ಅಲ್ಪಸಂಖ್ಯಾತ ಓಲೈಕೆ ರಾಜಕಾರಣದಲ್ಲಿ ಕಾಂಗ್ರೆಸ್ ಜೊತೆ ಪೈಪೋಟಿ ಮಾಡ್ತಾ ಇದ್ದಾರೆ. ಹೀಗಾಗಿ ಅವರು ತೀವ್ರ ಗತಿಯಲ್ಲಿ ರಿಯಾಕ್ಟ್ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಪೊಲೀಸರ ಬಗ್ಗೆ ಮಾತನಾಡುತ್ತಾರೆ, ನಾವು ಅಲ್ಲಿ ಪೊಲೀಸರನ್ನು ನೇಮಕ ಮಾಡಿಲ್ಲ. ಎಲ್ಲರೂ ಕುಮಾರಸ್ವಾಮಿ ಸಿಎಂ ಇದ್ದ ಅವಧಿಯಲ್ಲಿ ನೇಮಕವಾದವರು ಎಂದರು.

    ಉಗ್ರ ನಿಗ್ರಹ ದಳದ ಕುರಿತು ಮಾತನಾಡಿದ ಅವರು, ಉಗ್ರ ನಿಗ್ರಹ ದಳ ರಾಜ್ಯಕ್ಕೆ ಒಂದಿದೆ, ಅದನ್ನ ಇನ್ನಷ್ಟು ಬಲ ಪಡಿಸುತ್ತೆವೆ ಎಂದರು.

  • ಹೆಚ್‍ಡಿಕೆ ಮಾನಸಿಕ ಸ್ಥಿಮಿತಕ್ಕೆ ಸರ್ಕಾರದಿಂದಲೇ ಚಿಕಿತ್ಸೆ ನೀಡಬೇಕಿದೆ: ಯತ್ನಾಳ್

    ಹೆಚ್‍ಡಿಕೆ ಮಾನಸಿಕ ಸ್ಥಿಮಿತಕ್ಕೆ ಸರ್ಕಾರದಿಂದಲೇ ಚಿಕಿತ್ಸೆ ನೀಡಬೇಕಿದೆ: ಯತ್ನಾಳ್

    -ಕರ್ನಾಟಕದ ಓವೈಸಿಯಾಗಲು ಹೆಚ್‍ಡಿಕೆ ಪ್ರಯತ್ನ
    -ಇಮ್ರಾನ್ ಖಾನ್ ಅಳಿಯ ಕುಮಾರಸ್ವಾಮಿ
    -ಸಿಎಂ ಇಬ್ರಾಹಿಂ ಒರಿಜಿನಲ್ ಮುಸ್ಲಿಂ ಅಲ್ಲ

    ವಿಜಯಪುರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಸರ್ಕಾರದ ವತಿಯಿಂದಲೇ ಅವರಿಗೆ ಮಾನಸಿಕ ಚಿಕಿತ್ಸೆ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

    ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕ ಬಾಂಬ್ ಅಣಕು ಪ್ರದರ್ಶನದಂತಿದೆ ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನಾಚಿಗೇಡಿತನ ಹಾಗೂ ಬೇಜವಾಬ್ದಾರಿ ಹೇಳಿಕೆಯಾಗಿದೆ. ಅವರು ಸಿಎಂ ಆಗಿದ್ದೇ ಅಣಕು ಪ್ರದರ್ಶನದಂತಿದೆ. ಕುಮಾರಸ್ವಾಮಿ ಅವರ ಜೀವನ ಹಾಗೂ ರಾಜಕೀಯ ಅಣುಕು ಪ್ರದರ್ಶನದಂತಿದೆ ಎಂದು ವ್ಯಂಗ್ಯವಾಡಿದರು. ಅವರಿಗೆ ದೇಶ, ಸೈನಿಕರು, ರಾಜ್ಯದ ಹಿತ ಯಾವುದೂ ಕಾಣಿಸಲ್ಲಾ. ಕುಮಾರಸ್ವಾಮಿ ಕರ್ನಾಟಕದ ಓವೈಸಿ ಆಗಲು ಈ ಮೂಲಕ ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಆದಿತ್ಯ ರಾವ್ ಓರ್ವ ಬ್ಲಾಕ್ ಮೇಲರ್. ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾನೆ. ಆತ ಓರ್ವ ಹಿಂದೂ, ಆತನ ಬಂಧನವಾಗಿದೆ. ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು. ಸರ್ಕಾರ ಮತ್ತು ಗೃಹ ಇಲಾಖೆ ಬಾಂಬ್ ಪತ್ತೆ ವಿಚಾರದಲ್ಲಿ ಗಂಭೀರವಾಗಿವೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆಂದು ತಿಳಿಸಿದರು.

    ಕಲಬುರಗಿಯಲ್ಲಿ ನಡೆದ ಪೌರತ್ವ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಕುಮಾರಸ್ವಾಮಿ, ಪಾಕಿಸ್ತಾನ ಲೀಡರ್ ಮಾತನಾಡಿದಂತೆ ಮಾತನಾಡಿದ್ದಾರೆ. ದಾವುದ್ ಇಬ್ರಾಹಿಂ ತಮ್ಮ ಇಮ್ರಾನ್ ಖಾನ್, ಇಮ್ರಾನ್ ಖಾನ್ ತಮ್ಮ ರಾಹುಲ್ ಗಾಂಧಿ, ಇಮ್ರಾನ್ ಖಾನ್ ಅಳಿಯ ಕುಮಾರಸ್ವಾಮಿ ಎಂಬಂತೆ ಅವರು ಮಾತನಾಡಿದ್ದಾರೆಂದು ಕಿಡಿಕಾರಿದರು.

    ಕುಮಾರಸ್ವಾಮಿ ಈಗಾಗಲೇ ಅಸ್ತಿತ್ವ ಕಳೆದುಕೊಳ್ಳುತ್ತಿದ್ದಾರೆ. ನಾಳೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದರೆ ಹಳೆ ಮೈಸೂರು ಭಾಗದ ಅಸ್ತಿತ್ವ ಕಳೆದುಕೊಳ್ಳುತ್ತಾರೆ. ಇನ್ನು ನಮ್ಮ ದೇಶದ ಅನ್ನ ತಿನ್ನುವ ಅಧಿಕಾರಿಗಳು ರಾಜಕಾರಣಿಗಳು ಪಾಕಿಸ್ತಾನದ ಎಜೆಂಟರಾಗಿ ಕೆಲಸ ಮಾಡಿದ ಉದಾಹರಣೆಗಳಿವೆ. ಮೋದಿ ಸರ್ಕಾರ ಬಂದ ಬಳಿಕ ಇವೆಲ್ಲ ಬಹಿರಂಗವಾಗುತ್ತಿವೆ ಎಂದರು.

    ಮೋದಿ ಅವರ ಕುಟುಂಬದ ಹಿನ್ನಲೆ ಮಾತನಾಡಿದ್ದ ಇಬ್ರಾಹಿಂ ಮುತ್ತಜ್ಜ ಯಾವ ಜಾತಿಯವನಿದ್ದ ಎಂದು ಇಬ್ರಾಹಿಂಗೆ ಕೇಳಿ. ಆತ ಪಕ್ಕಾ ಮುಸ್ಲಿಂ ಅಲ್ಲಾ. ಅರಬಸ್ಥಾನದಿಂದ ಬಂದ ಒರಿಜನಲ್ ಮುಸ್ಲಿಂ ಅಲ್ಲಾ. ಟಿಪ್ಪು ದಾಳಿಯ ಕಾಲದಲ್ಲಿ ಮತಾಂತರದಲ್ಲಿ ಮುಸ್ಲಿಂ ಆಗಿರುವ ಹೇಡಿಗಳು. ಅವರ ಬಗ್ಗೆ ಅವರಿಗೆ ಗೊತ್ತಿಲ್ಲ. ಇವರೇನು ಮೋದಿ ಅವರ ಬಗ್ಗೆ ಕೇಳೋದು ಎಂದು ಸಿಎಂ ಇಬ್ರಾಹಿಂ ವಿರುದ್ಧ ಆಕ್ರೋಶ ಹೊರಹಾಕಿದರು.

  • ಮೊದಲೇ ಮಾಹಿತಿ ಸಿಕ್ಕಿತ್ತು, ಪೊಲೀಸರ ತನಿಖೆಗೆ ಭಯಗೊಂಡು ಆರೋಪಿ ಶರಣಾಗಿದ್ದಾನೆ: ಬೊಮ್ಮಾಯಿ

    ಮೊದಲೇ ಮಾಹಿತಿ ಸಿಕ್ಕಿತ್ತು, ಪೊಲೀಸರ ತನಿಖೆಗೆ ಭಯಗೊಂಡು ಆರೋಪಿ ಶರಣಾಗಿದ್ದಾನೆ: ಬೊಮ್ಮಾಯಿ

    ಬೆಂಗಳೂರು: ಪೊಲೀಸರು ತನಿಖೆ ನಡೆಸಿದ ರೀತಿಯಿಂದಲೇ ಆರೋಪಿ ಶರಣಾಗಿದ್ದಾನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಆರೋಪಿಯ ವಿರುದ್ಧ ಸಿಕ್ಕ ಸಿಸಿಟಿವಿ ದೃಶ್ಯಾವಳಿ, ಆಟೋ ಹಾಗೂ ಇತರೆ ಸಾಕ್ಷ್ಯಗಳ ಜಾಲವನ್ನು ಹುಡುಕಿ ಹೊರಟಾಗ ಆದಿತ್ಯ ರಾವ್ ಬಗ್ಗೆ ಮಾಹಿತಿ ಸಿಕ್ಕಿತ್ತು. ಉಡುಪಿಯಲ್ಲಿರುವ ಆತನ ಮನೆಗೆ ಹೋಗಿ ತಂದೆ, ತಾಯಿ ಹಾಗೂ ಕುಟುಂಬಸ್ಥರ ಬಳಿ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದರು. ಆ ಬಳಿಕ ಮೂರು ತನಿಖಾ ತಂಡ ರಚಿಸಿ ಈ ಸಂಬಂಧ ತನಿಖೆ ನಡೆಸಲಾಗುತ್ತಿತ್ತು. ಆದರೆ ಆರೋಪಿ ಉಡುಪಿಯಿಂದ ಬೆಂಗಳೂರಿಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಈ ಕೃತ್ಯವೆಸಗಲು ಏನು ಕಾರಣ? ಆತನ ಹಿಂದೆ ಯಾರಿದ್ದಾರೆ? ಎನ್ನುವ ಎಲ್ಲಾ ಮಾಹಿತಿ ತನಿಖೆ ಬಳಿಕ ತಿಳಿದು ಬರಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಹೌದು, ಬಾಂಬ್ ಇಟ್ಟಿದ್ದು ನಾನೇ – ತಪ್ಪೊಪ್ಪಿಕೊಂಡ ಆದಿತ್ಯ ರಾವ್

    ಈ ಪ್ರಕರಣದಲ್ಲಿ ನಮ್ಮ ಪೊಲೀಸರು ಕ್ಷಿಪ್ರವಾಗಿ ಕೆಲಸ ಮಾಡಿರುವುದು ಅವರ ದಕ್ಷತೆ ಮತ್ತು ಪ್ರಾಮಾಣಿಕತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಹೀಗಾಗಿ ಅನಾವಶ್ಯಕವಾಗಿ ಪೊಲೀಸರ ಬಗ್ಗೆ ಟೀಕೆ ಮಾಡಿ ಅವರ ನೈತಿಕತೆಯನ್ನು ಕುಗ್ಗಿಸುವ ಕೆಲಸವನ್ನು ಯಾರು ಮಾಡಬಾರದು. ಪೊಲೀಸರು ತನಿಖೆ ನಡೆಸಿದ ರೀತಿಯಿಂದಲೇ ಆರೋಪಿ ಶರಣಾಗಿದ್ದಾನೆ. ಅದಕ್ಕೆ ನಾವು ಮೊದಲು ಆರೋಪಿ ಇಂತಹ ಸಂಘಟನೆಗೆ ಸೇರಿದವರು ಅಥವಾ ಇಂತಹ ವ್ಯಕ್ತಿ ಎಂದು ಹೇಳಿರಲಿಲ್ಲ. ಯಾರೇ ಆರೋಪಿ ಇದ್ದರು ಅವನನ್ನು ಕಂಡು ಹಿಡಿಯುತ್ತೇನೆ ಎಂದಿದ್ದೆವು. ಆ ಪ್ರಕಾರ ಪೊಲೀಸರು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಗೃಹ ಸಚಿವರು ಪೊಲೀಸರನ್ನು ಶ್ಲಾಘಿಸಿದರು. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ

    ಆರೋಪಿ ಬೇರೆ ಬೇರೆ ಮಾರ್ಗದಿಂದ ಬೆಂಗಳೂರಿಗೆ ಬಂದಿದ್ದಾನೆ. ಸರ್ಕಾರಿ ಬಸ್ ಅಥವಾ ಸಾಮಾನ್ಯ ಬಸ್‍ಗಳಲ್ಲಿ ಆತ ಬೆಂಗಳೂರಿಗೆ ಬಂದಿಲ್ಲ. ಪೊಲೀಸರ ಕಣ್ತಪ್ಪಿಸಿ ರಾತ್ರೋರಾತ್ರಿ ಬೆಂಗಳೂರಿಗೆ ಬಂದಿದ್ದಾನೆ. ಉಗ್ರ ಸಂಘಟನೆ ಜೊತೆ ಆರೋಪಿಗೆ ಲಿಂಕ್ ಇದೆಯೇ? ಇಲ್ಲವಾ? ಎನ್ನೋದು ಮುಂದಿನ ತನಿಖೆಯಲ್ಲಿ ಪತ್ತೆಯಾಗುತ್ತೆ ಎಂದರು.

    ಸಾಮಾನ್ಯವಾಗಿ ಬಾಂಬ್ ಪತ್ತೆ, ಬ್ಲಾಸ್ಟ್ ಪ್ರಕರಣ ನಡೆದಾಗ ಕೇಂದ್ರ ಸರ್ಕಾರಕ್ಕೆ ಮಾಹಿತಿ ತಲುಪಿರುತ್ತದೆ. ಈಗಾಗಲೇ ಎನ್‍ಎಸ್‍ಜಿ(ರಾಷ್ಟ್ರೀಯ ಭದ್ರತಾ ಗಾರ್ಡ್) ಸಿಬ್ಬಂದಿ ಮಂಗಳೂರು ಏರ್‌ಪೋರ್ಟ್‌ ಹಾಗೂ ಇತರೆ ಪ್ರದೇಶಗಳಲ್ಲಿ ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ತನಿಖೆ ಮೇಲೆ ಏನು ಬಯಲಾಗುತ್ತದೋ ಅದರ ಆಧಾರದ ಮೇಲೆ ಕ್ರಮ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು ಮಾಹಿತಿ ನೀಡಿದರು. ಇದನ್ನೂ ಓದಿ: ಮಂಗ್ಳೂರು ಸ್ಫೋಟ ಪ್ರಕರಣ- ಪಬ್ಲಿಕ್ ಟಿವಿಗೆ ಶಂಕಿತ ಉಗ್ರನ ವಿಡಿಯೋಗಳು ಲಭ್ಯ

    ಆರೋಪಿಯು ಪದವಿಧರನಾಗಿದ್ದು, ಮಂಗಳೂರಿನಲ್ಲಿ ಕೆಲಸ ಪಡೆಯುವಲ್ಲಿ ವಿಫಲವಾಗಿದ್ದನು. ಈ ಹಿಂದೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಆಗಿ ಕೆಲಸಕ್ಕೆ ಸೇರಲು ಪ್ರಯತ್ನಿಸಿದ್ದ. ಮುಂಜಾನೆ ಆರೋಪಿ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಲಿದೆ.

  • ಬಾಂಬ್ ಸ್ಫೋಟಿಸಿದ್ದು ಹೇಗೆ? ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಏನಾಯ್ತು? – ಇಲ್ಲಿದೆ ಪೂರ್ಣ ವಿವರ

    ಬಾಂಬ್ ಸ್ಫೋಟಿಸಿದ್ದು ಹೇಗೆ? ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಏನಾಯ್ತು? – ಇಲ್ಲಿದೆ ಪೂರ್ಣ ವಿವರ

    ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ 10 ಕೆಜಿ ತೂಕವುಳ್ಳ ಸಜೀವ ಬಾಂಬ್ ಅನ್ನು ಸ್ಫೋಟಿಸುವ ಮೂಲಕವೇ ನಿಷ್ಕ್ರಿಯಗೊಳಿಸಲಾಯ್ತು. ಬಾಂಬ್ ಸ್ಫೋಟಗೊಂಡ ಬಳಿಕ ಕಡಿಮೆ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಬಹುತೇಕ ಸಣ್ಣ ಪ್ರಮಾಣ ಸ್ಫೋಟಕ ವಸ್ತು ಇತ್ತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಆದ್ರೆ 12 ಅಡಿ ಆಳದಲ್ಲಿ ಬಾಂಬ್ ಸ್ಫೋಟಿಸಿರುವದರಿಂದ ಅದರ ತೀವ್ರತೆ ಅಷ್ಟಾಗಿ ಕಾಣಿಸಿಕೊಂಡಿಲ್ಲ.

    ಒಂದು ವೇಳೆ ವಿಮಾನ ನಿಲ್ದಾಣ ಅಥವಾ ಬಯಲಿನಲ್ಲಿ ಈ ಬಾಂಬ್ ಸ್ಫೋಟಗೊಂಡಿದ್ದರೆ ಸುಮಾರು 500 ಮೀಟರ್ ವ್ಯಾಪ್ತಿಯ ಪ್ರದೇಶ ಹಾನಿ ಆಗುವ ಸಾಧ್ಯತೆಗಳಿದ್ದವು. ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ 12 ಅಡಿ ಆಳದಲ್ಲಿರಿಸಿ ಸ್ಫೋಟಿಸಿದೆ.

    ಮಧ್ಯಾಹ್ನದ ಬಳಿಕ 2 ಕಿಲೋಮೀಟರ್ ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್ ಪ್ರತಿರೋಧಕ ವಾಹನವನ್ನು ಎಚ್ಚರಿಕೆಯಿಂದ ಸಾಗಿಸಲಾಗಿತ್ತು. 2 ಗಂಟೆ ನಿರಂತರ ಪ್ರಯತ್ನ ಮಾಡಿದ್ರೂ ಕೂಡ ಬಾಂಬ್ ನಿಷ್ಕ್ರಿಯಗೊಳಿಸಲು ಸಾಧ್ಯವಾಗಲೇ ಇಲ್ಲ. ಕೊನೆಗೆ ಇದು ಸಾಧ್ಯವಾಗದಿದ್ದಾಗ ಸಂಜೆಯ ಹೊತ್ತಿಗೆ 12 ಅಡಿ ಆಳದ ಗುಂಡಿಯಲ್ಲಿ ಮರಳು ಚೀಲಗಳನ್ನು ಇಟ್ಟು ಅದರ ಮಧ್ಯೆ ಬಾಂಬ್ ಇರಿಸಿ, ರಿಮೋಟ್ ಮೂಲಕ ಸ್ಫೋಟಿಸಲಾಯ್ತು. ಇದರೊಂದಿಗೆ ಮಂಗಳೂರು ಸೇರಿ ಇಡೀ ರಾಜ್ಯದ ಜನತೆ ನಿಟ್ಟುಸಿರು ಬಿಟ್ಟರು. ಇದರ ಜೊತೆಗೆ ವಿಮಾನ ನಿಲ್ದಾಣದಲ್ಲಿ ಮತ್ತೆರಡು ಬಾಂಬ್ ಇರಿಸಲಾಗಿದೆ ಎಂಬ ಹುಸಿ ಕರೆಯಿಂದ ಆತಂಕ ಎದುರಾಗಿತ್ತು. ಒಂದು ವಿಮಾನದ ಹಾರಾಟ ಕೂಡ ಕ್ಯಾನ್ಸಲ್ ಆಯ್ತು. ಬೆಳಗ್ಗೆಯಿಂದ ಏನೇನಾಯ್ತು ಎಂಬುದರ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

    * ಬೆಳಗ್ಗೆ 8.45 – ಬಜ್ಪೆ ಏರ್ ಪೋರ್ಟ್‍ಗೆ ಆಟೋದಲ್ಲಿ ಬಂದ ಅಪರಿಚಿತ
    (ಮಂಗಳೂರಿನಿಂದ ಖಾಸಗಿ ಬಸ್‍ನಲ್ಲಿ, ಕೆಂಜಾರು ಬಸ್ ನಿಲ್ದಾಣದಿಂದ ಆಟೋದಲ್ಲಿ ಪಯಣ)
    * ಬೆಳಗ್ಗೆ 9.00 – ಟಿಕೆಟ್ ಕೌಂಟರ್ ಬಳಿ ಬಾಂಬ್ ಇದ್ದ ಲ್ಯಾಪ್‍ಟಾಪ್ ಬ್ಯಾಗ್ ಇರಿಸಿ ಎಸ್ಕೇಪ್
    * ಬೆಳಗ್ಗೆ 9.30 – ಸಹ ಪ್ರಯಾಣಿಕರ ಗಮನಕ್ಕೆ ಬಂದ ವಾರಸುದಾರರಿಲ್ಲದ ಬ್ಯಾಗ್
    * ಬೆಳಗ್ಗೆ 9.40 – ಏರ್ ಪೋರ್ಟ್ ಭದ್ರತಾ ಸಿಬ್ಬಂದಿಯಿಂದ ಪರಿಶೀಲನೆ, ಪ್ರಯಾಣಿಕರನ್ನು ನಿಲ್ದಾಣದಿಂದ ಖಾಲಿ ಮಾಡಿಸಿದ ಸಿಬ್ಬಂದಿ
    * ಬೆಳಗ್ಗೆ 11.00 – ಬಾಂಬ್ ಇದ್ದ ಬ್ಯಾಗ್ ಸ್ಕ್ಯಾನ್ ಮಾಡಿದ ಬಾಂಬ್ ಸ್ಕ್ವಾಡ್
    * ಬೆಳಗ್ಗೆ 11.10 – ಬಾಂಬ್ ಪ್ರತಿರೋಧಕ ವಾಹನಕ್ಕೆ ಬಾಂಬ್ ಬ್ಯಾಗ್ ಶಿಫ್ಟ್
    * ಮಧ್ಯಾಹ್ನ 2.00 – ಕೆಂಜಾರು ಮೈದಾನದತ್ತ ಬಾಂಬ್ ಪ್ರತಿರೋಧಕ ವಾಹನ
    * ಮಧ್ಯಾಹ್ನ 2.40 – ಕೆಂಜಾರು ಮೈದಾನ ತಲುಪಿದ ಬಾಂಬ್ ಪ್ರತಿರೋಧಕ ವಾಹನ
    * ಮಧ್ಯಾಹ್ನ 3.30 – ಮರಳಿನ ಚೀಲಗಳ ನಡುವೆ ಬಾಂಬ್ ಇರಿಸಿದ ಬಾಂಬ್ ನಿಷ್ಕ್ರಿಯ ಪಡೆ (12 ಅಡಿ ಆಳದಲ್ಲಿ ಬಾಂಬ್ ಹುದುಗಿಸಿಡಲಾಗಿತ್ತು)
    * ಸಂಜೆ 5.35 – ರಿಮೋಟ್ ಮೂಲಕ ಟಿಫನ್ ಕ್ಯಾರಿಯರ್ ನಲ್ಲಿದ್ದ ಐಇಡಿ ಬಾಂಬ್ ಸ್ಫೋಟ


  • ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ

    ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ

    ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್ ನ್ನು ಸ್ಫೋಟಿಸುವ ಮೂಲಕ ನಿಷ್ಕ್ರಿಯಗೊಳಿಸಲಾಗಿದೆ.

    ಇಂದು ಬೆಳಗ್ಗೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಸಜೀವ ಬಾಂಬ್ ನ್ನು ಕೆಂಜಾರು ಮೈದಾನದಲ್ಲಿ ಬಾಂಬ್ ಸ್ಕ್ವಾಡ್ ಸ್ಫೋಟಿಸಿ, ಭಾರೀ ದುರಂತವೊಂದನ್ನು ತಪ್ಪಿಸಿದ್ದಾರೆ. ಆಟೋದಲ್ಲಿ ಬಂದ ಅಪರಿಚಿತ ಟಿಕೆಟ್ ಕೌಂಟರ್ ಬಳಿ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬುಕ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಹಾಗೆಯೇ ಶಂಕಿತ ಬಂದಿದ್ದ ಎನ್ನಲಾದ ಆಟೋದ ಎರಡು ಫೋಟೋಗಳು ಸಹ ಪಬ್ಲಿಕ್ ಟಿವಿಗೆ ಲಭಿಸಿವೆ.

    ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಬಹುತೇಕ ನಗರಗಳಲ್ಲಿ ಕಚ್ಚೆಚ್ಚರ ವಹಿಸಲಾಗಿದೆ. ಶಂಕಿತ ಉಡುಪಿ ಮೂಲಕವೇ ಬೇರೆ ಕಡೆ ತೆರಳಿರುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಈ ಸಂಬಂಧ ಉಡುಪಿ ಪ್ರಮುಖ ರಸ್ತೆ, ಕೃಷ್ಣ ಮಠ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    ಇತ್ತ ಮಂಗಳೂರಿನಿಂದ ಉಡುಪಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರದ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಶಂಕಿತ ಮಂಗಳೂರಿನಿಂದ ಉಡುಪಿಗೆ ರೈಲ್ವೇ ಮೂಲಕ ಪ್ರಯಾಣ ಬೆಳೆಸಿರುವ ಅನುಮಾನದ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ದಿನಗಳ ಹಿಂದ ತಮಿಳುನಾಡಿನ ಪೊಲೀಸ್ ಅಧಿಕಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಹೀಗಾಗಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡದ ಅಕ್ಕಪಕ್ಕ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

  • ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ಇವನೇನಾ?

    ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ಇವನೇನಾ?

    ಮಂಗಳೂರು: ಇಂದು ಬೆಳಗ್ಗೆ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಇರಿಸಲಾಗಿದ್ದ ಶಂಕಿತ ವ್ಯಕ್ತಿಯ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಆಟೋದಲ್ಲಿ ಬಂದ ಅಪರಿಚಿತ ಟಿಕೆಟ್ ಕೌಂಟರ್ ಬಳಿ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬುಕ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಹಾಗೆಯೇ ಶಂಕಿತ ಬಂದಿದ್ದ ಎನ್ನಲಾದ ಆಟೋದ ಎರಡು ಫೋಟೋಗಳು ಸಹ ಪಬ್ಲಿಕ್ ಟಿವಿಗೆ ಲಭಿಸಿವೆ.

    ಸಜೀವ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಬಹುತೇಕ ನಗರಗಳಲ್ಲಿ ಕಚ್ಚೆಚ್ಚರ ವಹಿಸಲಾಗಿದೆ. ಶಂಕಿತ ಉಡುಪಿ ಮೂಲಕವೇ ಬೇರೆ ಕಡೆ ತೆರಳಿರುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಈ ಸಂಬಂಧ ಉಡುಪಿ ಪ್ರಮುಖ ರಸ್ತೆ, ಕೃಷ್ಣ ಮಠ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ 10 ಕೆಜಿ ತೂಕವುಳ್ಳ ಸಜೀವ ಬಾಂಬ್ ನ್ನು ಕೆಂಜಾರು ಮೈದಾನದಲ್ಲಿ ನಿಷ್ಕ್ರಿಯಗೊಳಿಸಲು ತೆಗೆದುಕೊಂಡು ಹೋಗಲಾಗಿದೆ. ಬಾಂಬ್ ನಿಷ್ಕ್ರಿಯಗೊಳ್ಳದ ಹಿನ್ನೆಲೆಯಲ್ಲಿ ರಿಮೋಟ್ ಕಂಟ್ರೋಲರ್ ಮೂಲಕ ಸ್ಫೋಟಿಸುವ ಸಾಧ್ಯತೆಗಳು ಹೆಚ್ಚಿವೆ.

    ಒಂದೆಡೆ ಕೆಂಜಾರು ಮೈದಾನದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದರೆ, ಇಂಡಿಗೋ ವಿಮಾನಯಾನ ಸಂಸ್ಥೆಗೆ ಬೆದರಿಕೆ ಕರೆಯೊಂದು ಬಂದಿದೆ. ಬೆದರಿಕೆ ಕರೆ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಮಂಗಳೂರಿನಿಂದ ಹೈದರಾಬಾದ್ ಗೆ ಟೇಕಾಫ್ ಆಗುತ್ತಿದ್ದ ವಿಮಾನವನ್ನು ತಡೆದಿದ್ದಾರೆ. ಮುಂಜಾಗ್ರತ ಕ್ರಮವಾಗಿ ವಿಮಾನದಲ್ಲಿದ್ದ ಎಲ್ಲ 126 ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸಲಾಗಿದೆ.