Tag: ಮಂಜು ಮಾಂಡವ್ಯ

  • ಲಾಕ್ ಡೌನ್ ನಿಂದ ಬೇಸರ ಎಂಬುವವರಿಗೆ ‘ಶ್ರೀ ಭರತ ಬಾಹುಬಲಿ’ಯಿಂದ ಮನರಂಜನೆ!

    ಲಾಕ್ ಡೌನ್ ನಿಂದ ಬೇಸರ ಎಂಬುವವರಿಗೆ ‘ಶ್ರೀ ಭರತ ಬಾಹುಬಲಿ’ಯಿಂದ ಮನರಂಜನೆ!

    ಮಂಜು ಮಾಂಡವ್ಯ ನಾಯಕನಾಗಿ ಮೊದಲ ಬಾರಿಗೆ ಎಂಟ್ರಿಕೊಟ್ಟ ಸಿನಿಮಾ ‘ಶ್ರೀ ಭರತ ಬಾಹುಬಲಿ’. ಚಿಕ್ಕಣ್ಣ ಹಾಗೂ ಮಂಜು ಮಾಂಡವ್ಯ ಭರತ-ಬಾಹುಬಲಿಯಾಗಿ ಜನರನ್ನು ಮನರಂಜಿಸಿದ್ದ ಸಿನಿಮಾ. ಅದೆಷ್ಟೋ ಜನ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡಲು ಆಗಲಿಲ್ಲ ಎಂಬ ಬೇಸರವನ್ನು ವ್ಯಕ್ತಪಡಿಸುತ್ತಿದ್ರು. ಇದೀಗ ಆ ಬೇಸರವನ್ನ ಹೋಗಲಾಡಿಸುವಂತ ಸಮಯ ಬಂದಿದೆ. ಹೌದು ಅಮೆಜಾನ್ ಪ್ರೈಮ್ ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ನೋಡುಗರಿಗೆ ಸಿಕ್ತಾ ಇದೆ.

    ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಪ್ರೈಮ್ ನಲ್ಲಿ ನೋಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ ಚಿತ್ರಮಂದಿರದಲ್ಲಿ ಇಂತ ಒಳ್ಳೆ ಮನರಂಜನೆಯ ಸಿನಿಮಾ ನೋಡುವುದಕ್ಕೆ ಆಗಲಿಲ್ಲವಲ್ಲ ಎಂಬ ಬೇಸರವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ಈ ಕೊರೋನಾ ವೈರಸ್ ನಿಂದಾಗಿ ಎಲ್ಲೆಡೆ ಲಾಕ್ ಡೌನ್ ಮುಂದುವರಿದಿದೆ. ಈಗ ಏನಿದ್ರು ಮನೆಯಲ್ಲಿ ಲಾಕ್ ಆಗಿ ಟೈಮ್ ಪಾಸ್ ಗೆ ಏನಾದ್ರೂ ಮಾಡ್ಬೇಕು ಅಂತ ಹುಡುಕ್ತಾ ಇರ್ತಾರೆ. ಇಷ್ಟು ದಿನ ಮನೆಯಲ್ಲೇ ಲಾಕ್ ಆಗಿ ಬೇಸರವೆನಿಸಿದ ಮನಸ್ಸಿಗೆ ಮುದ ನೀಡಿ, ನಕ್ಕ ನಲಿಸಲು ‘ಶ್ರೀ ಭರತ ಬಾಹುಬಲಿ’ ಸೂಕ್ತವಾದ ಸಿನಿಮಾ. ಮನೆ ಮಂದಿಯೆಲ್ಲಾ ಒಂದೆಡೆ ಕುಳಿತು ನಗು ಬಯಸುವವರಿಗಾಗಿ ‘ಶ್ರೀ ಭರತ ಬಾಹುಬಲಿ’ಯನ್ನು ಪ್ರೈಮ್ ನಲ್ಲಿ ಬಿಡುಗಡೆ ಮಾಡಲಾಗಿದೆ.

    ‘ಮಾಸ್ಟರ್ ಪೀಸ್’ ಅಂತ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕನ ನಟನೆ ಒಂದು ಕಡೆ, ಹಾಸ್ಯದಲ್ಲಿ ಖ್ಯಾತಿ ಪಡೆದಿರುವ ಚಿಕ್ಕಣ್ಣ ಇನ್ನೊಂದು ಕಡೆ. ಸೀರಿಯಸ್ ಮ್ಯಾಟರ್ ಇಟ್ಟುಕೊಂಡು ಕಾಮಿಡಿ ಕಾನ್ಸೆಪ್ಟ್ ನಲ್ಲಿ ಮನರಂಜನೆ ನೀಡಿದ ಸಿನಿಮಾವಿದು. ಮಂಜು ಮಾಂಡವ್ಯ, ಚಿಕ್ಕಣ್ಣ, ಸಾರಾ ಹರೀಶ್, ಶ್ರೇಯಾ ಶೆಟ್ಟಿ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ. ಮಂಜು ಮಾಂಡವ್ಯ ಹೊಸಬರನ್ನೇ ತೆರೆ ಮೇಲೆ ತಂದಿದ್ದರು, ಅವರ ನಟನೆ ಅದ್ಭುತವಾಗಿ ಮೂಡಿ ಬಂದಿದೆ. ಒಟ್ಟಿನಲ್ಲಿ ಈ ಸಿನಿಮಾ ಕಂಪ್ಲೀಟ್ ಮನರಂಜನೆಯ ಜೊತೆಗೆ ಒಂದೊಳ್ಳೆ ಸಿನಿಮಾ ನೋಡಿದ ಖುಷಿ ನೀಡುವುದರಲ್ಲಿ ಅನುಮಾನವಿಲ್ಲ.

  • ಉಢಾಳರಾದರೂ ಉರುಳಾಡಿಸಿ ನಗಿಸುತ್ತಾರೆ ಭರತ ಬಾಹುಬಲಿ!

    ಉಢಾಳರಾದರೂ ಉರುಳಾಡಿಸಿ ನಗಿಸುತ್ತಾರೆ ಭರತ ಬಾಹುಬಲಿ!

    ಮಂಜು ಮಾಂಡವ್ಯ, ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಶ್ರೀ ಭರತ ಬಾಹುಬಲಿ ಟೀಸರ್, ಟ್ರೇಲರ್ ಮತ್ತು ಹಾಡುಗಳ ಮೂಲಕ ಗಣನೀಯ ಪ್ರಮಾಣದಲ್ಲಿ ನಿರೀಕ್ಷೆ ಮೂಡಿಸಿತ್ತು. ಯಾವ ಸ್ಟಾರ್ ಡಮ್ ಕೂಡಾ ಇಲ್ಲದ ಈ ಸಿನಿಮಾ ಸುದ್ದಿಯಾಗಿದ್ದದ್ದೇ ಕ್ರಿಯೇಟಿವ್ ಅಂಶಗಳಿಂದ. ಭರತ ಬಾಹುಬಲಿಯದ್ದೊಂದು ವಿಶೇಷವಾದ ಕಥನ ಎಂಬ ನಂಬಿಕೆ ಬಿಡುಗಡೆಯ ಹೊತ್ತಿಗೆಲ್ಲ ಪ್ರೇಕ್ಷಕರ ಮನದಲ್ಲಿ ಪ್ರತಿಷ್ಠಾಪಿತಗೊಂಡು ಬಿಟ್ಟಿತ್ತು. ಆ ಎಲ್ಲ ನಿರೀಕ್ಷೆ, ಕಾತರಗಳನ್ನು ನಿಜವಾಗಿಸುವಂತೆ ಭರಪೂರ ಮನರಂಜನೆಯೊಂದಿಗೆ ಈ ಚಿತ್ರವೀಗ ತೆರೆಗಂಡಿದೆ. ಭರತ ಬಾಹುಬಲಿಯ ಕಾಮಿಡಿ ಝಲಕ್ಕಿನಿಂದಾಗಿ ಪ್ರೇಕ್ಷಕರೆಲ್ಲ ನಗುವಿನಲೆಯಲ್ಲಿ ಮಿಂದೆದ್ದು ಒಂದೊಳ್ಳೆ ಮನರಂಜನಾತ್ಮಕ ಸಿನಿಮಾ ನೀಡಿದ ತೃಪ್ತ ಭಾವದಿಂದ ಖುಷಿಗೊಂಡಿದ್ದಾರೆ.

    ಈ ಹಿಂದೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಮಾಸ್ಟರ್ ಪೀಸ್’ ಸಿನಿಮಾ ನಿರ್ದೇಶಕನಾಗಿ ತಮ್ಮ ಪ್ರತಿಭೆ ತೋರಿದ್ದ ಮಂಜು ಮಾಂಡವ್ಯ ಈ ಚಿತ್ರದ ಮೂಲಕ ನಾಯಕನಾಗಲೂ ಸೈ ಅನ್ನೋದನ್ನು ಪ್ರೂವ್ ಮಾಡಿದ್ದಾರೆ. ಚಿಕ್ಕಣ್ಣ, ಮಂಜು ಮಾಂಡವ್ಯ ಜುಗಲ್ ಬಂದಿ ತೆರೆ ಮೇಲೆ ಜಾದು ಸೃಷ್ಟಿಸಿದೆ. ಹೊಸ ರೀತಿಯ ಸ್ಕ್ರೀನ್ ಫ್ಲೇ, ಯಾವ ಹಂತದಲ್ಲಿಯೂ ಸಡಿಲಗೊಳ್ಳದ ಕಥೆ, ಪ್ರತಿ ಹಂತದಲ್ಲಿಯೂ ನಗುವಿನ ಸಿಂಚನ ಮಾಡುತ್ತಲೇ ಸಾಗುವ ಎಫೆಕ್ಟೀವ್ ಸಂಭಾಷಣೆಗಳೊಂದಿಗೆ ಈ ಚಿತ್ರ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ನಿಖರವಾಗಿ ಹೇಳಬೇಕೆಂದರೆ ಈ ಭರತ ಬಾಹುಬಲಿ ಉಢಾಳರಾದರೂ ಉರುಳಾಡಿ ನಗುವಂತೆ ಮಾಡುತ್ತಾರೆ.

    ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಭರತ, ಬಾಹುಬಲಿ ಪಾತ್ರದಲ್ಲಿ ಮಿಂಚಿದ್ದಾರೆ. ಅವೆರಡೂ ಹಳ್ಳಿ ಕಂಪು ಹೊದ್ದುಕೊಂಡಿರುವಂಥಾ ಪಾತ್ರಗಳು. ಅದಕ್ಕೆ ಜೀವ ತುಂಬಿರೋ ರೀತಿಯೇ ಇಡೀ ಕಥೆಯ ನಿಜವಾದ ಜೀವಾಳ. ಪುಂಡ ಪೋಲಿಗಳಾಗಿ ತಲೆಹರಟೆ ಮಾಡಿಕೊಂಡು ಊರ ತುಂಬಾ ಅಂಡಲೆಯೋದೇ ಭರತ ಬಾಹುಬಲಿಯ ಫುಲ್ ಟೈಂ ಡ್ಯೂಟಿ. ಈ ನಡುವೆ ಹುಡುಗಾಟದಲ್ಲಿ ಮಾಡಿದ ಕೆಲಸವೇ ಅವರಿಬ್ಬರನ್ನು ಕಾನೂನಿನ ಸರಪಳಿಯಲ್ಲಿ ಬಂಧಿಗಳಾಗುವಂತೆ ಮಾಡುತ್ತದೆ. ಅಪ್ರಾಪ್ತ ಸ್ನೇಹಿತನಿಗೆ ಮದುವೆ ಮಾಡಿಸಿ ಜೈಲಿಗೆ ಸೇರೊ ಭರತ ಬಾಹುಬಲಿ ಬದುಕಿಗೆ ಎಂಟ್ರಿ ಕೊಡುವ ಶ್ರೀ ಇಡೀ ಚಿತ್ರದ ಚಿತ್ರಣವನ್ನೇ ಬದಲಿಸುತ್ತಾಳೆ. ಆ ನಂತರದಲ್ಲಿ ಕಥೆ ಮತ್ತಷ್ಟು ಓಘ ಪಡೆದುಕೊಳ್ಳುತ್ತದೆ. ಮುಂದೆ ಭರತ ಬಾಹುಬಲಿ ತಮ್ಮ ಪೋಲಿತನ ಬಿಟ್ಟು ಸರಿ ಹೋಗ್ತಾರಾ, ಭರತ ಬಾಹುಬಲಿ ಲೈಫಲ್ಲಿ ಏನೇನೆಲ್ಲ ಘಟಿಸುತ್ತವೆ ಅನ್ನೋ ಕುತೂಹಲ ನಿಮಗಿದ್ದರೆ ಈ ಚಿತ್ರವನ್ನು ಖಂಡಿತವಾಗಿಯೂ ಮಿಸ್ ಮಾಡದೆ ನೋಡಲೇಕು. ಇದನ್ನು ಓದಿ: ಗೆಳೆಯನ ಯಶಸ್ಸಿಗೆ ಹಾರೈಸಿದ ಯಶ್

    ಇಂಥಾ ನಿರೀಕ್ಷೆ ಹೊತ್ತು ಯಾರೇ ಚಿತ್ರಮಂದಿರ ಹೊಕ್ಕರೂ ಭರತ ಬಾಹುಬಲಿ ಖಂಡಿತಾ ನಿರಾಸೆ ಮಾಡುವುದಿಲ್ಲ. ಇಲ್ಲಿರೋದು ತುಂಬ ಸರಳವಾದ ಕಥೆ. ಇಂಟ್ರಸ್ಟಿಂಗ್ ವೇನಲ್ಲಿ ಸ್ಕ್ರೀನ್ ಪ್ಲೇ ಹೆಣೆದು ಅದನ್ನು ತೆರೆ ಮೇಲೆ ಅಷ್ಟೇ ಚೆಂದವಾಗಿ ಪ್ರೊಜೆಕ್ಟ್ ಮಾಡುವ ಮೂಲಕ ನಿರ್ದೇಶಕ ಮಂಜು ಮಾಂಡವ್ಯ ಎಲ್ಲವನ್ನೂ ವಿಶೇಷವಾಗಿಸಿದ್ದಾರೆ. ನಟನಾಗಿಯೂ ಸೈ ಎನಿಸಿಕೊಂಡಿರೋ ಮಂಜು ಮಾಂಡವ್ಯ ಅದಕ್ಕಾಗಿ ತುಂಬಾನೇ ತಾಲೀಮು ನಡೆಸಿರೋದು ತೆರೆ ಮೇಲೆ ಸ್ಪಷ್ಟವಾಗಿಯೇ ಕಾಣಿಸುತ್ತದೆ. ಎಂದಿನಂತೆ ಚಿಕ್ಕಣ್ಣ ಎಲ್ಲರಿಗೂ ಇಷ್ಟವಾಗುತ್ತಾರೆ. ನಾಯಕಿ ಪಾತ್ರದಲ್ಲಿ ಸಾರಾ ಮಹೇಶ್ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಮಣಿಕಾಂತ್ ಕದ್ರಿ ಮ್ಯೂಸಿಕ್, ಫರ್ವೇಜ್ ಕೆ ಸಿನಿಮಾಟೋಗ್ರಫಿ ಎಲ್ಲರ ಮನಸೆಳೆಯುತ್ತದೆ. ಒಟ್ಟಾರೆಯಾಗಿ ಶ್ರೀ ಭರತ ಬಾಹುಬಲಿ ನಿರೀಕ್ಷೆ ಮೀರಿದ ಫೀಲ್ ಕೊಡುವಂತೆ ಮೂಡಿ ಬಂದಿದೆ.

    ಚಿತ್ರ: ಶ್ರೀ ಭರತ ಬಾಹುಬಲಿ
    ನಿರ್ದೇಶನ: ಮಂಜು ಮಾಂಡವ್ಯ
    ನಿರ್ಮಾಪಕ: ಟಿ. ಶ್ರೀನಿವಾಸ್
    ಸಂಗೀತ: ಮಣಿಕಾಂತ್ ಕದ್ರಿ
    ತಾರಾಬಳಗ: ಮಂಜು ಮಾಂಡವ್ಯ, ಚಿಕ್ಕಣ್ಣ, ಸಾರಾ ಮಹೇಶ್, ಶ್ರೀನಿವಾಸ್ ಮೂರ್ತಿ, ಇತರರು.

    ರೇಟಿಂಗ್: 3.5/5

  • ಬಿಡುಗಡೆಯಾಯ್ತು ಶ್ರೀ ಭರತಬಾಹುಬಲಿ – ಗೆಳೆಯನ ಯಶಸ್ಸಿಗೆ ಹಾರೈಸಿದ ಯಶ್

    ಬಿಡುಗಡೆಯಾಯ್ತು ಶ್ರೀ ಭರತಬಾಹುಬಲಿ – ಗೆಳೆಯನ ಯಶಸ್ಸಿಗೆ ಹಾರೈಸಿದ ಯಶ್

    ಬೆಂಗಳೂರು: ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಮಂಜು ಮಾಂಡವ್ಯ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ ಶ್ರೀ ಭರತಬಾಹುಬಲಿ ಚಿತ್ರ ಇಂದು ಬಿಡುಗಡೆಯಾಗಿದ್ದು, ಗೆಳೆಯನ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಶುಭಹಾರೈಸಿದ್ದಾರೆ.

    ‘ಶ್ರೀ ಭರತಬಾಹುಬಲಿ’ ಚಿತ್ರದಲ್ಲಿ ನಾಯಕನಾಗಿರುವ ಗೆಳೆಯನಿಗೆ ಯಶ್ ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಮಂಜು ಅವರ ಜೊತೆಗಿರುವ ಫೋಟೋ ಶೇರ್ ಮಾಡಿಕೊಂಡು ಯಶ್ ಗೆಳೆಯನ ಹೊಸ ಹೆಜ್ಜೆಗೆ ಸಾಥ್ ಕೊಟ್ಟಿದ್ದಾರೆ.

    ಈ ಹಿಂದೆ ಕೂಡ ರಾಕಿಂಗ್ ಸ್ಟಾರ್ ಯಶ್ ಗೆಳೆಯನ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದರು. ಟ್ರೈಲರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಮಣಿಕಾಂತ್ ಕದ್ರಿ ಸಂಗೀತವಿರುವ ಚಿತ್ರದ ಹಾಡುಗಳು ಕೂಡ ಸಖತ್ ಸೌಂಡ್ ಮಾಡಿದ್ದು, ಇಂದು ಶ್ರೀ ಭರತ ಬಾಹುಬಲಿ ಚಿತ್ರ ತೆರೆಕಂಡಿದೆ. ಟಿ. ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

    https://www.facebook.com/TheOfficialYash/posts/2813680548859338

    ಪೋಸ್ಟ್ ನಲ್ಲಿ ಏನಿದೆ?
    ಬರಹಗಾರನಾಗಿ ತನ್ನದೇ ಆದ ವಿಶಿಷ್ಠ ಛಾಪು ಮೂಡಿಸಿ, ನಿರ್ದೇಶಕನಾಗಿ ಜನಮನಗೆದ್ದ ಗೆಳೆಯ ಮಂಜುಮಾಂಡವ್ಯ ಮೊದಲ ಬಾರಿಗೆ ನಾಯಕನಾಗಿ ಶ್ರೀ ಭರತಬಾಹುಬಲಿ ಅವತಾರದಲ್ಲಿ ನಿಮ್ಮುಂದೆ ಬಂದಿದ್ದಾರೆ. ಚಿಕ್ಕನೂ ಜೊತೆಗಿದ್ದಾನೆ ಇಬ್ಬರಿಗೂ ಒಳ್ಳೆಯದಾಗಲಿ. ಶ್ರೀ ಭರತಬಾಹುಬಲಿ ಯಶಸ್ವಿಯಾಗಲಿ ಎಂದು ಬರೆದು ಫೋಟೋ ಹಾಕಿ ಯಶ್ ಅಪ್ಲೋಡ್ ಮಾಡಿದ್ದಾರೆ. ಈ ಪೋಸ್ಟ್ ಗೆ ಯಶ್ ಅಭಿಮಾನಿಗಳು ಕಮೆಂಟ್ ಮಾಡಿ ಮಂಜು ಹಾಗೂ ಅವರ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

    ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನಕ್ಕೂ ಸೈ, ನಟನೆಗೂ ಸೈ ಎನ್ನುತ್ತಿದ್ದಾರೆ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ನಟನಾಗಿಯೂ ಛಾಪು ತೋರಿಸಲು ಸಿದ್ದರಾಗಿದ್ದಾರೆ ಮಂಜು ಮಾಂಡವ್ಯ. ನಟನೆ ಜೊತೆಗೆ ಸ್ವತಃ ತಾವೇ ಚಿತ್ರಕ್ಕೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.

    ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಶ್ರೀ ಭರತ ಬಾಹುಬಲಿ ಟೈಟಲ್ಲೇ ವಿಭಿನ್ನವಾಗಿದ್ದು ರೊಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಚಿತ್ರದಲ್ಲಿದ್ದು, ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.

  • ನಕ್ಕು ನಗಿಸಲು ಬರ್ತಿದ್ದಾರೆ ಶ್ರೀ ಭರತ ಬಾಹುಬಲಿ

    ನಕ್ಕು ನಗಿಸಲು ಬರ್ತಿದ್ದಾರೆ ಶ್ರೀ ಭರತ ಬಾಹುಬಲಿ

    ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಜುಗಲ್‍ಬಂದಿಯಾಗಿ ನಟಿಸಿರೋ ಶ್ರೀ ಭರತ ಬಾಹುಬಲಿ ಚಿತ್ರ ಜನವರಿ 17ಕ್ಕೆ ರಾಜ್ಯದ್ಯಂತ ತೆರೆ ಕಾಣುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಜನಪ್ರಿಯರಾಗಿದ್ದ ಮಂಜು ಮಾಂಡವ್ಯ ನಟನಾಗಿ ಅಭಿನಯಿಸುತ್ತಿರುವ ಚಿತ್ರವಿದು.

    ನಟನೆ ಜೊತೆಗೆ ಚಿತ್ರಕ್ಕೆ ನಿರ್ದೇಶನ ಕೂಡ ಮಂಜು ಮಾಂಡವ್ಯ ಮಾಡಿದ್ದಾರೆ. ಒಂದೊಳ್ಳೆ ಟೀಂ ಕಟ್ಟಿಕೊಂಡು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಇರೋ ಚಿತ್ರವನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾರೆ ಮಂಜು ಮಾಂಡವ್ಯ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.

    ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಟ್ರೈಲರ್ ಕೂಡ ಒಳ್ಳೆಯ ಟಾಕ್ ಕ್ರಿಯೇಟ್ ಮಾಡಿದ್ದು ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ. ಮಣಿಕಾಂತ್ ಕದ್ರಿ ಮ್ಯೂಸಿಕ್, ಪರ್ವೇಜ್.ಕೆ ಸಿನಿಮಾಟೋಗ್ರಾಫಿ ಶ್ರೀ ಭರತ ಬಾಹುಬಲಿ ಚಿತ್ರಕ್ಕಿದೆ. ಶ್ರೀನಿವಾಸ್ ಮೂರ್ತಿ, ಪುಷ್ಪಲತಾ, ಕರಿಸುಬ್ಬು, ಶ್ರೇಯಾ ಶೆಟ್ಟಿ, ಅಚ್ಯುತ್ ರಾವ್ ಚಿತ್ರದಲ್ಲಿ ನಟಿಸಿದ್ದಾರೆ. ಜನವರಿ 17ಕ್ಕೆ ಭರತ ಬಾಹುಬಲಿ ಕಥೆ ನೋಡಲು ರೆಡಿಯಾಗಿ.

  • ಚಿಕ್ಕಣ್ಣ-ಮಂಜು ಮಾಂಡವ್ಯ ಜುಗಲ್‍ಬಂದಿಯ ಚಿತ್ರ ಈ ವಾರ ತೆರೆಗೆ!

    ಚಿಕ್ಕಣ್ಣ-ಮಂಜು ಮಾಂಡವ್ಯ ಜುಗಲ್‍ಬಂದಿಯ ಚಿತ್ರ ಈ ವಾರ ತೆರೆಗೆ!

    ಮಾಸ್ಟರ್ ಪೀಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿ ಸೈ ಎನಿಸಿಕೊಂಡಿದ್ದ ನಿರ್ದೇಶಕ ಈಗ ತಾವೇ ಕ್ಯಾಮೆರಾ ಮುಂದೆ ಬಂದು ಡೈಲಾಗ್ ಹೇಳ್ತಿದ್ದಾರೆ.

    ಹೌದು, ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನಕ್ಕೂ ಸೈ, ನಟನೆಗೂ ಸೈ ಎನ್ನುತ್ತಿದ್ದಾರೆ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ನಟನಾಗಿಯೂ ಛಾಪು ತೋರಿಸಲು ಸಿದ್ದರಾಗಿದ್ದಾರೆ ಮಂಜು ಮಾಂಡವ್ಯ. ನಟನೆ ಜೊತೆಗೆ ಸ್ವತಃ ತಾವೇ ಚಿತ್ರಕ್ಕೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ.

    ಮಂಜು ಮಾಂಡವ್ಯ, ಕಾಮಿಡಿ ಕಿಂಗ್ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ. ಶ್ರೀ ಭರತ ಬಾಹುಬಲಿ ಟೈಟಲ್ಲೇ ವಿಭಿನ್ನವಾಗಿದ್ದು ರೋಮ್ಯಾಂಟಿಕ್ ಕಾಮಿಡಿ ಎಲಿಮೆಂಟ್ ಚಿತ್ರದಲ್ಲಿದೆಯಂತೆ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ನಟಿಸಿದ್ದಾರೆ.

    ರಾಕಿಂಗ್ ಸ್ಟಾರ್ ಯಶ್ ಗೆಳೆಯನ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ್ದು, ಟ್ರೈಲರ್ ಮೆಚ್ಚುಗೆ ಪಡೆದುಕೊಂಡಿದೆ. ಮಣಿಕಾಂತ್ ಕದ್ರಿ ಸಂಗೀತವಿರುವ ಚಿತ್ರದ ಹಾಡುಗಳು ಕೂಡ ಸಖತ್ ಸೌಂಡ್ ಮಾಡ್ತಿವೆ. ಜನವರಿ 17ಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ತೆರೆಗೆ ಬರಲು ರೆಡಿಯಾಗಿದ್ದು, ಟಿ. ಶ್ರೀನಿವಾಸ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

  • ‘ಭರತ ಬಾಹುಬಲಿ’ಯಲ್ಲಿ ರಿಷಿಗೇನು ಕೆಲಸ?

    ‘ಭರತ ಬಾಹುಬಲಿ’ಯಲ್ಲಿ ರಿಷಿಗೇನು ಕೆಲಸ?

    ‘ಮಾಸ್ಟರ್ ಪೀಸ್’ ಚಿತ್ರದ ಮೂಲಕ ರಾಕಿಂಗ್ ಸ್ಟಾರ್ ಯಶ್ ಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಮಂಜು ಮಾಂಡವ್ಯ ನಾಯಕರಾಗಿ ‘ಭರತ ಬಾಹುಬಲಿ’ಯಾಗಿ ತೆರೆಮೇಲೆ ಬರ್ತಿರೋದು ಗೊತ್ತಿರೋ ವಿಚಾರ. ಈಗಾಗಲೇ ಚಿತ್ರವು ಭರ್ಜರಿ ಮೇಕಿಂಗ್ ಸೆಟ್‍ನಿಂದ ಸೆಂಟರ್ ಆಫ್ ಅಟ್ಯ್ರಾಕ್ಷನ್ ಆಗ್ತಿದೆ. ರಿಲೀಸ್ ಆದ ಟ್ರೈಲರ್ ಹಾಗೂ ವೀಡಿಯೋ ಸಾಂಗ್ ನೋಡಿದ ಪ್ರೇಕ್ಷಕ ಸಿನೆಮಾ ನೋಡೋಕೆ ಕಾತುರನಾಗಿದ್ದಾನೆ.

    ಚಿತ್ರದಲ್ಲಿ ಹಲವು ವಿಶೇಷತೆಗಳಿದ್ದು, ‘ಆಪರೇಷನ್ ಅಲಮೇಲಮ್ಮ’ ಹಾಗೂ ಕವಲು ದಾರಿ ಚಿತ್ರ ಖ್ಯಾತಿಯ ರಿಷಿ ಸಹ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಮಂಜು ಮಾಂಡವ್ಯ ಹಾಗೂ ರಿಷಿ ನಡುವಿನ ಫ್ರೆಂಡ್ ಶಿಪ್ ಗಾಗಿ ವಿಶೇಷ ಪಾತ್ರವೊಂದನ್ನ ಮಾಡಿದ್ದಾರಂತೆ. ಇನ್ನುಳಿದಂತೆ ಮಂಜು ಅವರಿಗೆ ಸಾರಾ ಮಹೇಶ್ ನಾಯಕಿಯಾಗಿದ್ದು, ಚಿಕ್ಕಣ್ಣನ ಕಾಮಿಡಿ ತೆರೆಮೇಲೆ ಮೋಡಿ ಮಾಡೋದ್ರ ಜೊತೆ, ಶೃತಿ ಪ್ರಕಾಶ್ ಅವರ ಡ್ಯಾನ್ಸ್ ನಿದ್ದೆಕೆಡಿಸತ್ತೆ.

    ಇನ್ನು ಸದ್ಯ ಬ್ಯುಸಿಯಾಗಿರೋ ರಿಷಿ, ಭರತ ಬಾಹುಬಲಿಯಲ್ಲಿ ಏನ್ ಮಾಡಿದ್ದಾರೆ ಅನ್ನೋ ಪ್ರಶ್ನೆಗೆ 17 ರಂದು ಚಿತ್ರ ರಿಲೀಸ್ ಆದ್ಮೇಲೇನೇ ಉತ್ತರ ಸಿಗಲಿದೆ. ಇದನ್ನು ಓದಿ: ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

  • ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

    ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

    ಮಾಸ್ಟರ್ ಪೀಸ್ ನಂತಹ ಸೂಪರ್ ಹಿಟ್ ಚಿತ್ರ ಕೊಟ್ಟ ಮಂಜು ಮಾಂಡವ್ಯ ನಟನಾಗಿ ಬರ್ತಾ ಇರೋದು ಎಲ್ಲರಿಗೂ ಗೊತ್ತೆ ಇದೆ. ನಿರ್ದೇಶನದಿಂದ ಬಡ್ತಿ ಪಡೆದು ‘ಶ್ರೀ ಭರತ ಬಾಹುಬಲಿ’ಯಾಗಿ ಕಂಗೊಳಿಸಲು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಗಿದಿದ್ದು, ತೆರೆಗೆ ಬರಲು ಸಿದ್ಧತೆ ನಡೆಸಿದೆ. ಇದೇ ತಿಂಗಳು 17ರಂದು ಚಿತ್ರಮಂದಿರಕ್ಕೆ ‘ಭರತ ಬಾಹುಬಲಿ’ ಅಬ್ಬರಿಸಲಿದ್ದಾನೆ.

    ಸಿನಿಮಾ ಮಾಡೋದು ಎಷ್ಟು ಕಷ್ಟನೋ ಜನರನ್ನು ಚಿತ್ರಮಂದಿರಕ್ಕೆ ಕರೆತರುವುದು ಅಷ್ಟೇ ಕಷ್ಟ. ಹೀಗಾಗಿ ಎಲ್ಲಾ ಸಿನಿಮಾಗಳ ನಡುವೆ ‘ಭರತ ಬಾಹುಬಲಿ’ಯನ್ನು ನೋಡುವಂತೆ ಮಾಡಲು, ಚಿತ್ರತಂಡ ಹೊಸ ಪ್ಲಾನ್ ಒಂದನ್ನು ಹೆಣೆದಿದೆ. ಈ ಸಿನಿಮಾ ನೋಡುಗರಿಗೆ  ಒಂದು ಕೋಟಿ ರೂಪಾಯಿ ಮೊತ್ತದ ಬಹುಮಾನವನ್ನು ಘೋಷಿಸಿದೆ. ಬಹುಮಾನದಲ್ಲಿ 5 ಲಕ್ಷ ಬೆಲೆ ಬಾಳುವ 10 ಕಾರುಗಳು ಹಾಗೂ 5 ಲಕ್ಷ ಬೆಲೆಬಾಳುವ 10 ಚಿನ್ನದ ಆಭರಣಗಳನ್ನು ಚಿತ್ರತಂಡ ಘೋಷಿಸಿದೆ. 20 ಜನ ಅದೃಷ್ಟವಂತ ಪ್ರೇಕ್ಷಕರಿಗೆ ಈ ಬಹುಮಾನ ಸಿಗಲಿದೆ.

    ಬಹುಮಾನ ಗೆಲ್ಲಬೇಕೆಂಬ ಪ್ರೇಕ್ಷಕರು ಮಾಡಬೇಕಾಗಿರುವುದು ಇಷ್ಟೇ, ಕರ್ನಾಟಕದ ಯಾವುದೇ ಚಿತ್ರಮಂದಿರದಲ್ಲಾದರೂ ‘ಭರತ ಬಾಹುಬಲಿ’ ಚಿತ್ರವನ್ನು ನೋಡಿ. ಈ ವೇಳೆ ಚಿತ್ರತಂಡ ಸಿನಿಮಾ ಟಿಕೆಟ್ ಜೊತೆಗೆ ನೀಡಲಾಗುವ ಕೂಪನ್ ಜೊತೆಗಿಟ್ಟುಕೊಂಡರೆ ಸಾಕು. ಚಿತ್ರ ತಂಡವು ಲಕ್ಕಿ ಪಿಕ್ ನಲ್ಲಿ 20 ಜನ ಅದೃಷ್ಟವಂತರನ್ನು ಆಯ್ಕೆ ಮಾಡಿ ನಂಬರ್ ಘೋಷಿಸುತ್ತದೆ. ಬಳಿಕ ಕಾರು ಹಾಗೂ ಆಭರಣಗಳನ್ನು ಅದೃಷ್ಟವಂತ ಪ್ರೇಕ್ಷಕರಿಗೆ ನೀಡಲಾಗುತ್ತದೆ.

    ಭರತ ಬಾಹುಬಲಿಗಾಗಿ ಈಗಾಗಲೇ ಕೋಟಿ ಕೋಟಿ ಹಣ ಖರ್ಚಾಗಿದೆ. ಪ್ರೇಕ್ಷಕರನ್ನು ಕರೆತರಲು ಮತ್ತೆ ನಿರ್ಮಾಪಕರಾದ ಟಿ. ಶಿವಪ್ರಕಾಶ್ ಕೋಟಿ ಹಣ ಖರ್ಚು ಮಾಡಲು ಮುಂದಾಗಿದ್ದಾರೆ. ಸಿನಿಮಾ ಅದ್ಭುತವಾಗಿ ಮೂಡಿ ಬಂದಿದ್ದು, ಇಂತದ್ದೊಂದು ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ, ಖುಷಿ ಪಡಲಿ ಅನ್ನೋದು ನನ್ನ ಉದ್ದೇಶ. ಒಳ್ಳೆ ಸಿನಿಮಾವನ್ನ ಜನ ಮಿಸ್ ಮಾಡಿಕೊಳ್ಳಬಾರದಲ್ವಾ ಅನ್ನೋದು ನಿರ್ಮಾಪಕರ ಮಾತು

    ಈಗಾಗಲೇ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸದ್ದು ಮಾಡುತ್ತಿದೆ. ಬಿಡುಗಡೆಯಾಗಿರುವ ಹಾಡು, ಟ್ರೈಲರ್ ನೋಡಿದ್ರೇನೆ ಸಿನಿಮಾದ ಕ್ವಾಲಿಟಿ ಗೊತ್ತಾಗುತ್ತೆ. ಟ್ರೈಲರ್ ನೋಡಿದರವರಿಗೆ ಸಿನಿಮಾದ ಮೇಲೆ ಮತ್ತಷ್ಟು ಭರವಸೆ ಹೆಚ್ಚಾಗಿದೆ. ಜನವರಿ 17ರಂದು ಎಲ್ಲಾ ಥಿಯೇಟರ್ ಗೆ ಲಗ್ಗೆ ಇಡ್ತಾ ಇದೆ. ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ, ನೀವೂ ಆ ಅದೃಷ್ಟವಂತರಲ್ಲಿ ಒಬ್ಬರಾದ್ರೂ ಆಗಬಹುದು.

  • ವರ್ಷಾಂತ್ಯಕ್ಕೆ ಭರತ ಬಾಹುಬಲಿಯ ಮಸ್ತ್ ಹಾಡಿನ ಕೊಡುಗೆ

    ವರ್ಷಾಂತ್ಯಕ್ಕೆ ಭರತ ಬಾಹುಬಲಿಯ ಮಸ್ತ್ ಹಾಡಿನ ಕೊಡುಗೆ

    ಮಾಸ್ಟರ್ ಫೀಸ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ ನಿರ್ದೇಶಕ ಮಂಜು ಮಾಂಡವ್ಯ. ಶ್ರೀ ಭರತ ಬಾಹುಬಲಿ ಚಿತ್ರದ ಮೂಲಕ ಡೈರೆಕ್ಷನ್ ಕ್ಯಾಪ್ ಜೊತೆ ನಟನಾಗಿ ಬೆಳ್ಳಿತೆರೆಯಲ್ಲಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಮಂಜು ಮಾಂಡವ್ಯ, ಚಿಕ್ಕಣ್ಣ ಮುಖ್ಯ ಭೂಮಿಕೆಯ ಈ ಚಿತ್ರದ ಟಪ್ಪಾಂಗೋಚಿ ಸಾಂಗ್ ರಿಲೀಸ್ ಆಗಿದೆ. ಕ್ಯಾಚಿ ಲಿರಿಕ್ಸ್ ಇರೋ ಈ ಸಾಂಗ್ ಎಲ್ಲರನ್ನೂ ರಂಜಿಸುತ್ತಿದೆ. ಈ ಹಾಡಿಗೆ ಮಂಜು ಮಾಂಡವ್ಯ ಲಿರಿಕ್ಸ್ ಬರೆಯೋದರ ಜೊತೆ ಹಾಡು ಹಾಡಿ ಸ್ಟೆಪ್ಪು ಹಾಕಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಟಪ್ಪಾಂಗೋಚಿ ಸಾಂಗ್‍ಗೆ ಮಸ್ತ್ ಸ್ಟೆಪ್ ಹಾಕಿದ್ದು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

    ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಹಾಕಿರೋ ಸೆಟ್‍ನಲ್ಲಿ ಕಲರ್ ಫುಲ್ ಆಗಿ ಮೂಡಿಬಂದಿರೋ ಈ ಹಾಡಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರದ ಮೆಲೋಡಿ ಸಾಂಗ್ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿದೆ. ವರ್ಷಾಂತ್ಯಕ್ಕೆ ರಿಲೀಸ್ ಆಗಿರೋ ಈ ಹಾಡು ಇಯರ್ ಎಂಡ್ ಸೆಲೆಬ್ರೇಷನ್‍ಗೆ ಹೇಳಿ ಮಾಡಿಸಿದಂತಿದೆ.

    ಜನವರಿ ಹದಿನೇಳಕ್ಕೆ ಶ್ರೀ ಭರತ ಬಾಹುಬಲಿ ಚಿತ್ರ ರಿಲೀಸ್ ಮಾಡಲು ಚಿತ್ರತಂಡ ಸಿದ್ಧವಾಗಿದೆ. ನಿರ್ದೇಶನ, ನಟನೆ, ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿರೋ ನಿರ್ದೇಶಕ ಮಂಜು ಮಾಂಡವ್ಯ ಈಗ ಹಾಡುಗಾರರಾಗಿಯೂ ಬಡ್ತಿ ಪಡೆದಿರೋದು ವಿಶೇಷ ಸಂಗತಿ.

  • ನಡುವೆ ಅಂತರವಿಲ್ಲದ ದೃಶ್ಯಗಳಲ್ಲಿ ಐಶಾನಿ ಶೆಟ್ಟಿ!

    ನಡುವೆ ಅಂತರವಿಲ್ಲದ ದೃಶ್ಯಗಳಲ್ಲಿ ಐಶಾನಿ ಶೆಟ್ಟಿ!

    ಬೆಂಗಳೂರು: ಐಶಾನಿ ಶೆಟ್ಟಿ ಗೊತ್ತಲ್ಲ? ನೀನಾಸಂ ಸತೀಶ್ ಅವರ ರಾಕೆಟ್ ಮೂಲಕ ಮುಖ್ಯ ನಾಯಕ ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ನೆಲೆ ನಿಂತವರು. ಅದಾದ ನಂತರವೂ ಸಾಕಷ್ಟು ಸಿನಿಮಾಗಳಲ್ಲಿ ಹೀರೋಯಿನ್ ಆಗಿ ಕಾಣಿಸಿಕೊಳ್ಳುತ್ತಿರುವ ಐಶಾನಿ ಇತ್ತೀಚೆಗಷ್ಟೇ `ಕಾಜಿ’ ಎನ್ನುವ ಕಿರುಚಿತ್ರವನ್ನು ನಿರ್ದೇಶಿಸಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದರು.

    ಸದ್ಯ ಪ್ರಖ್ಯಾತ್ ಪರಮೇಶ್ ಎಂಬ ಹೊಸ ಹುಡುಗ ನಾಯಕನಾಗಿರುವ ‘ನಡುವೆ ಅಂತರವಿರಲಿ’ ಚಿತ್ರದಲ್ಲಿ ಐಶಾನಿ ಶೆಟ್ಟಿ ನಾಯಕನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೆಸರಿಗೆ ನಡುವೆ ಅಂತರವಿರಲಿ ಎಂದಿದ್ದರೂ ಈ ಚಿತ್ರದ ಫೋಟೋಗಳು ಸಖತ್ ಹಾಟ್ ಆಗಿವೆ. ಅಂತರವಿರದ ದೃಶ್ಯಗಳಲ್ಲಿ ಐಶಾನಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಪರದೆ ಹಂಚಿಕೊಂಡಿದ್ದಾರೆ. ಈ ಚಿತ್ರ ಈಗಿನ ಜನರೇಷನ್ ನೈಜ ಘಟನೆಯ ಕಥಾವಸ್ತು, ಪ್ರೀಮೆಚ್ಯೂರ್ಡ್ ಲವ್ ಸ್ಟೋರಿಯಾಗಿರುತ್ತೆ ಅನ್ನೋದು ನಿರ್ದೇಶಕರ ವಿವರಣೆ. ಹಾಗಾದರೆ ಹದಿಹರೆಯದ ಹುಡುಗ ಹುಡುಗಿಯ ಹುಡುಗಾಟಿಕೆ ಸ್ವಲ್ಪ ಜಾಸ್ತೀನೇ ಇರಬಹುದು!

    ಬೃಂದಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವೀನ್-ಜಿ.ಕೆ. ನಾಗರಾಜು ನಿರ್ಮಾಣದ, ‘ನಡುವೆ ಅಂತರವಿರಲಿ’ ಚಿತ್ರೀಕರಣ ಸದ್ದುಗದ್ದಲವಿಲ್ಲದೆ ಪೂರೈಸಿ ಮುಂದಿನ ತಿಂಗಳು ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಚಿತ್ರದ ಚಿತ್ರ ಕಥೆ-ನಿರ್ದೇಶನ ರವೀನ್, ಸಂಭಾಷಣೆ – ಮಂಜು ಮಾಂಡವ್ಯ, ಛಾಯಾಗ್ರಹಣ-ಯೋಗಿ, ಸಂಗೀತ-ಕದ್ರಿ ಮಣಿಕಾಂತ್, ಸಂಕಲನ-ಗಣೇಶ್ ಮಲ್ಲಯ್ಯ, ಸಾಹಸ-ರವಿವರ್ಮ, ನೃತ್ಯ – ಮುರಳಿ, ಸಾಹಿತ್ಯ-ಡಾ.ವಿ. ನಾಗೇಂದ್ರ ಪ್ರಸಾದ್, ಯೋಗರಾಜ್ ಭಟ್, ಗೌಸ್‍ಫೀರ್. ಸಹನಿರ್ದೇಶನ-ರಾಮಕೃಷ್ಣ, ನಿರ್ವಹಣೆ- ಮೈಸೂರ್ ಕೃಷ್ಣ, ತಾರಾಗಣದಲ್ಲಿ – ಪ್ರಖ್ಯಾತ್ ಪರಮೇಶ್, ಐಶಾನಿ ಶೆಟ್ಟಿ, ಚಿಕ್ಕಣ್ಣ, ರಕ್ಷಿತ್ ಕುಮಾರ್, ತುಳಸಿ ಶಿವಮಣಿ, ಅರುಣಾ ಬಾಲರಾಜ್, ಶ್ರೀನಿವಾಸಪ್ರಭು, ಮಂಜು ಮಾಂಡವ್ಯ ಮುಂತಾದವರಿದ್ದಾರೆ.

  • ಅಲಮೇಲಮ್ಮನ ‘ರಿಶಿ’ ಈಗ ಭರತ ಬಾಹುಬಲಿ!

    ಅಲಮೇಲಮ್ಮನ ‘ರಿಶಿ’ ಈಗ ಭರತ ಬಾಹುಬಲಿ!

    ಬೆಂಗಳೂರು: ಸಿಂಪಲ್ ಸುನಿ ನಿರ್ದೇಶನದ ಆಪರೇಷನ್ ಅಲಮೇಲಮ್ಮ ಚಿತ್ರದ ನಾಯಕನಾಗಿ ನಟಿಸಿದ್ದ ರಿಶಿ ಆ ನಂತರದಲ್ಲಿ ಒಂದಷ್ಟು ಅವಕಾಶಗಳನ್ನು ಪಡೆದುಕೊಂಡಿದ್ದರು. ಆದರೆ ಶಶಾಂಕ್ ಬ್ಯಾನರಿನಲ್ಲಿನ ಚಿತ್ರವೂ ಸೇರಿದಂತೆ ರಿಶಿಯ ಸಿನಿ ಕೆರಿಯರ್ ಅದೇಕೋ ಥಂಡಾ ಹೊಡೆದಂತಿತ್ತು. ಹೀಗಿರುವಾಗಲೇ ಆತ ಹೊಸಾ ಚಿತ್ರವೊಂದರ ಮೂಲಕ ಮತ್ತೆ ಸುದ್ದಿ ಕೇಂದ್ರಕ್ಕೆ ಬಂದಿದ್ದಾರೆ!

    ರಾಕಿಂಗ್ ಸ್ಟಾರ್ ಯಶ್ ನಟಿಸಿದ್ದ ಮಾಸ್ಟರ್ ಪೀಸ್ ಚಿತ್ರದ ನಿರ್ದೇಶಕ ಮಂಜು ಮಾಂಡವ್ಯ ಅವರ ಹೊಸಾ ಚಿತ್ರಕ್ಕೆ ರಿಶಿ ನಾಯಕನಾಗಿ ಆಯ್ಕೆಯಾಗಿದ್ದಾನೆ. ಈ ಚಿತ್ರಕ್ಕೆ ಭರತ ಬಾಹುಬಲಿ ಎಂಬ ಟೈಟಲ್ ಅನ್ನೂ ಫೈನಲ್ ಮಾಡಲಾಗಿದೆ. ಇದರ ಜೊತೆಗೇ ಸಾರಾ ಹರೀಶ್ ರಿಶಿಗೆ ನಾಯಕಿಯಾಗಿಯೂ ಆಯ್ಕೆಯಾಗಿದ್ದಾಳೆ!

     

    ಶೀರ್ಷಿಕೆ, ನಾಯಕಿ ಸೇರಿದಂತೆ ಎಲ್ಲ ಆಯ್ಕೆಗಳೂ ಪೂರ್ಣಗೊಂಡಿರೋ ‘ಭರತ ಬಾಹುಬಲಿ’ ಮಂಜು ಮಾಂಡವ್ಯ ಸಾರಥ್ಯದಲ್ಲಿ ಇಷ್ಟರಲ್ಲಿಯೇ ಚಿತ್ರೀಕರಣಕ್ಕೆ ತೆರಳಲಿದ್ದಾನೆ. ಮಾಸ್ಟರ್ ಪೀಸ್ ನಂಥಾ ಹಿಟ್ ಚಿತ್ರ ಕೊಟ್ಟಿದ್ದ ಮಂಜು ಮಾಂಡವ್ಯ ಅವರ ಈ ಹೊಸ ಚಿತ್ರದ ಬಗ್ಗೆ ಪ್ರೇಕ್ಷಕರೂ ಕೂಡಾ ಕಣ್ಣಿಟ್ಟು ಕಾಯುತ್ತಿದ್ದಾರೆ. ಆಪರೇಷನ್ ಅಲಮೇಲಮ್ಮ ಚಿತ್ರದಲ್ಲಿ ತನ್ನ ವಿಶಿಷ್ಟವಾದ ನಟನೆಯ ಮೂಲಕ ಗಮನ ಸೆಳೆದಿದ್ದ ರಿಶಿ ಈ ಮೂಲಕ ಮತ್ತೊಂದು ಹಿಟ್ ಚಿತ್ರ ಕೊಡುವ ಹುಮ್ಮಸ್ಸಿನಿಂದ ರೆಡಿಯಾಗುತ್ತಿದ್ದಾನೆ.

    ಆದರೆ ಶಶಾಂಕ್ ಬ್ಯಾನರಿನ ಚಿತ್ರದ ಕಥೆ ಏನಾಯಿತೆಂಬ ಪ್ರಶ್ನೆಯೊಂದು ಪ್ರೇಕ್ಷಕರ ಮನಸಲ್ಲಿದೆ. ಹೊಸಬರಿಗೆ ಅವಕಾಶ ಕೊಡುವ ಸದುದ್ದೇಶದಿಂದ ಶಶಾಂಕ್ ಸ್ವಂತ ಬ್ಯಾನರ್ ತೆರೆದಿದ್ದರಲ್ಲಾ? ಅದರಲ್ಲಿ ರಿಶಿ ನಾಯಕನಾಗಿರೋ ಒಂದು ಚಿತ್ರವನ್ನೂ ಘೋಷಣೆ ಮಾಡಲಾಗಿತ್ತು. ಆ ಚಿತ್ರವೂ ಬಂದರೆ ರಿಶಿ ಪಾಲಿಗೆ ಈ ವರ್ಷ ಡಬಲ್ ಧಮಾಕಾ ಎಂಬುದರಲ್ಲಿ ಯಾವುದೇ ಸಂಶಯಗಳಿಲ್ಲ!