Tag: ಮಂದಿರ

  • ಹಾರರ್‌ ಕಥೆ ಹೇಳಲು ಸಜ್ಜಾದ ಸನ್ನಿ ಲಿಯೋನ್

    ಹಾರರ್‌ ಕಥೆ ಹೇಳಲು ಸಜ್ಜಾದ ಸನ್ನಿ ಲಿಯೋನ್

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ (Sunny Leone) ಸದ್ಯ ಬಾಲಿವುಡ್ ಸಿನಿಮಾಗಳ ಜೊತೆ ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಸದ್ಯ ಸನ್ನಿ ಬೆಚ್ಚಿ ಬೀಳಿಸಲು ಬರುತ್ತಿದ್ದಾರೆ. ‘ಮಂದಿರ’ (Mandira Film) ಚಿತ್ರದ ಮೂಲಕ ಹಾರರ್ ಕಥೆ ಹೇಳೋಕೆ ರೆಡಿಯಾಗಿದ್ದಾರೆ.

    ‘ಮಂದಿರ’ ಚಿತ್ರದಲ್ಲಿನ ಸನ್ನಿ ಪೋಸ್ಟರ್ ರಿವೀಲ್ ಆಗಿದೆ. ರಾಣಿಯ ಲುಕ್‌ನಲ್ಲಿ ನಟಿ ಕಂಗೊಳಿಸಿದ್ದಾರೆ. ತಲೆಯ ಮೇಲೆ ಕಿರೀಟ ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಖ್ಯಾತ ಕಿರುತೆರೆ ನಟಿ ದಿವ್ಯಾಂಕಾಗೆ ಅಪಘಾತ: ಕಾಲಿಗೆ ಶಸ್ತ್ರ ಚಿಕಿತ್ಸೆ

    ಸನ್ನಿ ಲಿಯೋನ್ (Sunny Leone) ಇದೀಗ ಸೌತ್ ಸಿನಿಮಾಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುತ್ತಿದ್ದಾರೆ. ಸದ್ಯ ‘ಮಂದಿರ’ ಎಂಬ ಸಿನಿಮಾವನ್ನು ನಟಿ ಒಪ್ಪಿಕೊಂಡಿದ್ದಾರೆ. ಹಾರರ್ ಕಮ್ ಕಾಮಿಡಿ ರೂಪದಲ್ಲಿ ಸಿನಿಮಾ ಮೂಡಿ ಬರಲಿದೆ. ಚಿತ್ರದಲ್ಲಿ ವಿಭಿನ್ನ ಗೆಟಪ್‌ನಲ್ಲಿ ನಟಿ ಕಾಣಿಸಿಕೊಳ್ತಿದ್ದಾರೆ.

    ಸನ್ನಿ ನಟನೆಯ ‘ಮಂದಿರ’ (Mandira Film) ಚಿತ್ರಕ್ಕೆ ಆರ್. ಯುವನ್ ಎಂಬುವವರು ನಿರ್ದೇಶನ ಮಾಡುತ್ತಿದ್ದಾರೆ. ಸಾಯಿ ಸುಧಾಕರ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಿದೆ ಚಿತ್ರತಂಡ.

  • ಸಾಯಿಬಾಬಾ ಮಂದಿರ ನಿರ್ಮಿಸಿ ತಾಯಿ ಕನಸು ಈಡೇರಿಸಿದ ನಟ ವಿಜಯ್

    ಸಾಯಿಬಾಬಾ ಮಂದಿರ ನಿರ್ಮಿಸಿ ತಾಯಿ ಕನಸು ಈಡೇರಿಸಿದ ನಟ ವಿಜಯ್

    ಳಪತಿ ವಿಜಯ್ (Vijay) ಮತ್ತೊಂದು ಅಪರೂಪದ ಕೆಲಸ ಮಾಡಿದ್ದಾರೆ. ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ (Saibaba) ಮಂದಿರವನ್ನು (Mandir) ಕಟ್ಟಿದ್ದಾರೆ. ಈ ಮೂಲಕ ತಮ್ಮ ತಾಯಿ ಕನಸನ್ನು ಈಡೇರಿಸಿದ್ದಾರೆ.

    ಚೆನ್ನೈನಲ್ಲಿ ಅವರದ್ದೊಂದು ಪುಟ್ಟ ನಿವೇಶನವಿತ್ತು. ಅಲ್ಲಿಯೇ ಸುಂದರವಾದ ಸಾಯಿಬಾಬಾ ಮಂದಿರ ಕಟ್ಟಬೇಕು ಎನ್ನುವುದು ತಾಯಿ ಕನಸಾಗಿತ್ತು. ಆ ನಿವೇಶನವನ್ನು ಹಾಗೇ ಉಳಿಸಿಕೊಂಡು ಬಂದಿದ್ದರು ಅವರ ತಾಯಿ. ಅವರ ತಾಯಿ ಸಾಯಿಬಾಬಾನ ಮಹಾನ್ ಭಕ್ತರೂ ಆಗಿರೋದ್ರಿಂದ ಈ ಕೆಲಸ ನೆರವೇರಿದೆ.

     

    ಸದ್ಯ ಗೋಟ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ ವಿಜಯ್. ಈ ನಡುವೆ ರಾಜಕೀಯ ಪಕ್ಷವನ್ನೂ ಅವರು ಕಟ್ಟಿದ್ದಾರೆ. ಮುಂದಿನ ತಮಿಳುನಾಡ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಿನಿಂದಲೇ ಅವರು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

  • ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ: ಪ್ರಮೋದ್ ಮುತಾಲಿಕ್

    ಧಾರವಾಡ: ಮಠ-ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಮನವಿ ಮಾಡಿದರು.

    ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

    ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ, ಮಾತೆ ಎಂದು ಹೇಳುತ್ತಿದ್ದರು. ಅದಕ್ಕಾಗಿ ಗೋ ಹತ್ಯೆ ಕಾನೂನು ತಂದಿದ್ದಾರೆ. ಆದರೂ ಗೋಹತ್ಯೆ ನಡೆಯುತ್ತಿದೆ. ಆದರೆ ಒಂದೂ ಗೋಹತ್ಯೆ ಆಗದಂತೆ ಮಾಡುವ ಶಕ್ತಿ ಹಿಂದೂ ಸಂಘಟನೆಗಳಿಗಿದೆ. ಆದ್ದರಿಂದ ಹಿಂದೂ ಸಂಘಟನೆಗಳಿಗೆ ಸಮಾಜ ಬಲ ಕೊಡಬೇಕು ಎಂದು ತಿಳಿಸಿದರು.

    ಅಂದು ಹಿಂದುತ್ವದ ಹೋರಾಟಗಳು ಯಶಸ್ವಿಯಾಗಿದ್ದವು. ಇಂದು ಅದು ಆಗುತ್ತಿಲ್ಲ. ಅವತ್ತು ಶುದ್ಧ, ಚಾರಿತ್ರ್ಯ, ತ್ಯಾಗ, ಬಲಿದಾನದ ನಾಯಕರಿದ್ದರು. ಅದರ ಪರಿಣಾಮದಿಂದ ದುಷ್ಟ ಶಕ್ತಿಗಳ ನಾಶವಾಯಿತು. ಹಿಂದವೀ ಸಮಾಜ ನಿರ್ಮಾಣ ಆಗಿತ್ತು. ಅದಕ್ಕೆ ಛತ್ರಪತಿ ಶಿವಾಜಿ ಮಹಾರಾಜರೇ ಉದಾಹರಣೆಯಾಗಿದ್ದಾರೆ. ಆದರೆ ಇವತ್ತಿನ ನಾಯಕರು ಯಾರು ಎಂದು ಪ್ರಶ್ನಿಸಿದ ಅವರು, ನೀಚ, ನಿರ್ಲಜ್ಜ, ಲೂಟಿಕೋರರಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡ್ತೀವಿ – ಚಕ್ರವರ್ತಿ ಸೂಲಿಬೆಲೆ

    ಇಂದಿನ ನಾಯಕರು ಈ ದೇಶವನ್ನು ಬರ್ಬಾದ್ ಮಾಡುತ್ತಿದ್ದಾರೆ. ಈ ದೇಶವನ್ನು ಹಾಳು ಮಾಡುತ್ತಿದ್ದಾರೆ. ಅವರು ಇವರು ಅಲ್ಲ, ಎಲ್ಲರೂ ಅವರೇ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಾವು ಯೋಚನೆ ಮಾಡಬೇಕಿದೆ. ಇವತ್ತು ನಾವು ಯಾವ ರೀತಿ ನಾಯಕರು ಬೇಕು ಅಂತಾ ವಿಚಾರ ಮಾಡಬೇಕಿದೆ. ಶಿವಾಜಿಯಂತಹ ನಾಯಕರು ಬೇಕೋ?, ಅಥವಾ ಲೂಟಿಕೋರರು ಬೇಕೋ? ಅಂತಾ ನಿಶ್ಚಯ ಮಾಡಬೇಕಿದೆ. ಎಲ್ಲರಲ್ಲೂ ಇವತ್ತು ವೇದನೆ ಇದೆ. ಎಲ್ಲೋ ತಪ್ಪುತ್ತಿದ್ದೇವೆ ಎನ್ನುವ ವೇದನೆ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವಿದ್ಯುತ್ ಶಾಕ್‍ನಿಂದ ದಂಪತಿ ಸಾವು- ಪತ್ನಿ ಉಳಿಸಲು ಹೋಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ

    ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ

    ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.

    ಬೆಳಗ್ಗೆ 10:30ಕ್ಕೆ ಶ್ರೀರಂಗಪಟ್ಟಣದ ಕುವೆಂಪು ಪ್ರತಿಮೆಯಿಂದ ಜಾಮಿಯಾ ಮಸೀದಿವರಗೆ ಶಾಂತಿಯುತವಾಗಿ ಮೆರವಣಿಗೆ ನಡೆಸ್ತೇವೆ. ಮಸೀದಿಯ ಒಳಭಾಗಕ್ಕೆ ಹನುಮ ಭಕ್ತರು ಹೋಗಿ ಆಂಜನೇಯಸ್ವಾಮಿಯ ಪೂಜೆ ಮಾಡ್ತೇವೆ ಎಂದು ಹಿಂದೂ ಸಂಘಟನೆ ನಾಯಕರು ಹೇಳ್ತಿದ್ದಾರೆ. ಒಂದೊಮ್ಮೆ, ಮೆರವಣಿಗೆ ಮಾಡಲು ಪೊಲೀಸರು ಅವಕಾಶ ನೀಡದಿದ್ದಲ್ಲಿ ಕುವೆಂಪು ಪ್ರತಿಮೆಯ ಬಳಿ ಕೂತು ಹನುಮಾನ್ ಚಾಲಿಸ್ ಪಠಣೆ ಮಾಡುವುದಾಗಿಯೂ ನಿರ್ಧಾರ ಮಾಡಿವೆ.

    ಈ ಹೋರಾಟದಲ್ಲಿ ಮಂಡ್ಯ, ಮೈಸೂರು ಭಾಗದಿಂದ ಸಾವಿರಾರು ಹನುಮ ಭಕ್ತರು ಮಾಲೆ ಧರಿಸಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂದು ಜಿಲ್ಲಾಡಳಿತ ಶ್ರೀರಂಗಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಭಾರೀ ಪ್ರಮಾಣದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವರ್ ತಡರಾತ್ರಿ ಶ್ರೀರಂಗಪಟ್ಟಣಕ್ಕೆ ಭೇಟಿ ಕೊಟ್ಟು, ಎಸ್‍ಪಿ ಯತೀಶ್‍ರಿಂದ ಭದ್ರತಾ ವ್ಯವಸ್ಥೆಯ ಮಾಹಿತಿ ಪಡೆದರು. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಸದ್ಯ ಶ್ರೀರಂಗಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವಿಎಚ್‍ಪಿಯಿಂದ ಪ್ರತಿಭಟನಾ ಮೆರವಣಿಗೆ ವಿಫಲಗೊಳಿಸಲು ಪೊಲೀಸರ ಸನ್ನದ್ದ ಮಾಡಿಕೊಂಡಿದ್ದಾರೆ. ಎಸ್‍ಪಿ, ಇಬ್ಬರು ಡಿವೈಎಸ್‍ಪಿ, 5 ಸಿಪಿಐ, 10 ಪಿಎಸ್‍ಐ ಸೇರಿದಂತೆ 300 ಮಂದಿ ಪೊಲೀಸ್ ಪೇದೆ, 2 ಕೆಎಸ್‍ಆರ್‍ಪಿ, 4 ಡಿಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಿಷೇದಾಜ್ಞೆ ನಡುವೆಯು ಶ್ರೀರಂಗಪಟ್ಟಣ ಚಲೋ ಮಾಡೇ ಮಾಡ್ತೀವಿ ಎಂದು ಹೇಳ್ತಿರುವ ವಿಎಚ್‍ಪಿ ಮುಖಂಡರು ಪಟ್ಟುಹಿಡಿದಿದ್ದಾರೆ.

    ಹಿಂದೂ ಕಾರ್ಯಕರ್ತರು ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಕರ ಪತ್ರ ಹಂಚಿದ್ದಾರೆ. 144 ಸೆಕ್ಷನ್ ಜಾರಿ ಹಿನ್ನೆಲೆ, ಒಂದೆಡೆ ಹಿಂದೂ ಕಾರ್ಯಕರ್ತರು ಸೇರಿದರೆ ಬಂಧಿಸುವ ಸಾಧ್ಯತೆ ಇದೆ. ಪ್ರತಿಭಟನೆಗೆ ಮುಂದಾದ್ರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಂಡ್ಯ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ.

  • ಶಾಹಿ ಮಸೀದಿಯನ್ನು ಬ್ರಾಹ್ಮಣರು, ಮುಸ್ಲಿಮರು ಸೇರಿಯೇ ಕಟ್ಟಿದ್ದಾರೆ: ದಸ್ತಗೀರ್ ಅಗಾ

    ಶಾಹಿ ಮಸೀದಿಯನ್ನು ಬ್ರಾಹ್ಮಣರು, ಮುಸ್ಲಿಮರು ಸೇರಿಯೇ ಕಟ್ಟಿದ್ದಾರೆ: ದಸ್ತಗೀರ್ ಅಗಾ

    ಬೆಳಗಾವಿ: ನಗರದ ಬಾಪಟ್ ಗಲ್ಲಿಯಲ್ಲಿರುವ ಶಾಹಿ ಮಸೀದಿಯನ್ನು ಬ್ರಾಹ್ಮಣರು, ಮುಸ್ಲಿಮರು ಸೇರಿಯೇ ಕಟ್ಟಿದ್ದಾರೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ ಹೇಳಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಪಟ್ ಅನ್ನುವುದು ಬ್ರಾಹ್ಮಣ ಮನೆತನದ ಹೆಸರು. ಬಾಪಟ್ ಗಲ್ಲಿಯಲ್ಲಿ ಈ ಮೊದಲು ವಾತಾವರಣ ಬಹಳ ಕೆಟ್ಟಿತ್ತು. ಇಂತಹ ಕೆಟ್ಟ ವಾತಾವರಣ ಅಳಿಸಿ ಹಾಕಲು ಎಲ್ಲರೂ ಪ್ರಯತ್ನಿಸಿದ್ದರು. ಬ್ರಾಹ್ಮಣರು-ಮುಸ್ಲಿಮರು ಸೇರಿ ಶಾಹಿ ಮಸೀದಿ ಕಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಭಾರತೀಯ ಶಿಲ್ಪಿಗಳು ಮಸೀದಿ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಧರ್ಮಗಳ ಮಧ್ಯೆ ಸಂಘರ್ಷ ತರುವುದು ಒಳ್ಳೆಯದಲ್ಲ. ನಾವು ಸಹ ಇಂದು ಅಥವಾ ನಾಳೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗುತ್ತೇವೆ. ಮಸೀದಿ ಕುರಿತಂತೆ ಶಾಸಕ ಅಭಯ್ ಪಾಟೀಲ್ ಮನವಿ ತಿರಸ್ಕರಿಸುವಂತೆ ಕೋರುತ್ತೇವೆ ಎಂದರು. ಇದನ್ನೂ ಓದಿ: ಕಣ್ಣು ಮಂಕಾಗ್ತಿದೆ, ಬೆರಳು ಅಲುಗಾಡ್ತಿದೆ – ಪುಟಿನ್ ಬದುಕಿರೋದು ಇನ್ನೂ ಮೂರೇ ವರ್ಷ!

    PETROL

    ಬಿಜೆಪಿ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿದೆ. ತೈಲ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ನಿವಾರಿಸಲು ವಿಫಲವಾಗಿದೆ. ಇಂತಹ ವಿಷಯಗಳನ್ನು ಮುಚ್ಚಿಡಲು ಮಂದಿರ, ಮಸೀದಿ ವಿವಾದಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಅಭಯ್ ಪಾಟೀಲ್ ರಾಜಕೀಯ ಲಾಭಕ್ಕಾಗಿ ಆರೋಪ ಮಾಡುತ್ತಿದ್ದಾರೆ. 10 ತಿಂಗಳಲ್ಲಿ ಚುನಾವಣೆ ಬರುವುದಿದೆ. ಹೀಗಾಗಿ ಇಂತಹ ವಿಚಾರ ಮುಂದೆ ತರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಜೆಡಿಎಸ್‍ಗೆ ಸಿದ್ದರಾಮಯ್ಯ ಚೆಕ್ – ಬಿಜೆಪಿಗೆ ಕುದುರುತ್ತಾ ಲಕ್?

  • ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್

    ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್

    ಬೆಳಗಾವಿ: ರಾಮದೇವ ಗಲ್ಲಿಯಲ್ಲಿ ಒಂದು ಪುರಾತನ ದೇವಾಲಯ ಇದೆ. ಆ ದೇವಾಲಯವನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಾಣ ಮಾಡಿದ್ದಾರೆ. ಅದು ಮರಳಿ ದೇವಾಲಯ ಆಗಬೇಕು ಎಂಬುದು ಎಲ್ಲ ಹಿಂದೂಗಳ ಭಾವನೆಯಾಗಿದೆ ಎಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

    ಇಡೀ ದೇಶಾದ್ಯಂತ ಮಸೀದಿ-ದೇವಸ್ಥಾನಗಳ ವಿವಾದ ಬುಗಿಲೆದ್ದಿರುವ ಮಧ್ಯದಲ್ಲಿ ಶಾಸಕ ಅಭಯ್ ಪಾಟೀಲ್ ನಗರದಲ್ಲಿ ಪಬ್ಲಿಕ್‌ಟಿವಿ ಜೊತೆ ಮಾತನಾಡಿ, ಬೆಳಗಾವಿ ರಾಮದೇವ ಗಲ್ಲಿಯ ಹನುಮನ ಮಂದಿರದ ಪಕ್ಕದಲ್ಲಿಯೇ ಗುಡಿ ಇದೆ. ಇದರ ಬಗ್ಗೆ ಪೂರ್ಣವಾಗಿ ಪರಿಶೀಲನೆ ಮಾಡುತ್ತಿದ್ದೇನೆ. ಇನ್ನು ಕೆಲವೊಂದು ಮಾಹಿತಿಗಳು ಎರಡ್ಮೂರು ದಿನಗಳಲ್ಲಿ ಸಿಗಲಿದೆ. ಯಾವಾಗ ಅದನ್ನು ಕೆಡವಿ ಮಸೀದಿ ಮಾಡಿದ್ರು? ಅಲ್ಲಿ ಯಾವ ಗುಡಿ ಇತ್ತು? ಎನ್ನುವುದು ತಿಳಿಯಲಿದೆ. ಅಲ್ಲಿನ ಹಿರಿಯರು ಇದು ಪುರಾತನ ಮಂದಿರ ಎಂದು ಭಾವನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

    ದೇವಸ್ಥಾನ ಸುಮಾರು ಐನೂರು ವರ್ಷದ ಹಿಂದಿನದು ಇರಬಹುದು. ಗರ್ಭಗುಡಿಗಳಿಗೆ ಬಾಗಿಲುಗಳಿವೆ. ಒಳಗೆ ಬಹಳಷ್ಟು ಚಿತ್ರಗಳನ್ನು ಕೆತ್ತಿ ತೆಗೆಯುವ ಕೆಲಸ ಆಗಿದೆ. ಹೊರಗಿನ ಒಂದು ಸೈಡ್ ನೋಡಿದರೆ ಅದು ಯಾವ ರೀತಿಯ ಕಟ್ಟಡವಾಗಿದೆ ಎಂದು ಗೊತ್ತಾಗುತ್ತದೆ. ಮಸೀದಿಯಲ್ಲಿ ಕಲ್ಲಿನ ಬಾಗಿಲುಗಳು, ಒಳಗೆ ದೊಡ್ಡ ಕಂಬಗಳಿವೆ. ಹಲಸಿ ಸೇರಿ ಬೇರೆ ದೇವಸ್ಥಾನಗಳಲ್ಲಿ ಇರುವ ಹಾಗೇ ಮಸೀದಿ ಒಳಗಡೆ ಕಂಬಗಳು ಇದ್ದಂತೆ ಮೇಲ್ನೋಟಕ್ಕೆ ಇಲ್ಲಿಯೂ ಕಾಣಿಸುತ್ತವೆ. ಹೀಗಾಗಿ ಜಿಲ್ಲಾಡಳಿತ ತ್ವರಿತವಾಗಿ ಪರಿಶೀಲನೆ ನಡೆಸಿ ಇತಿಹಾಸದಲ್ಲಿ ಆಗಿರುವ ಪ್ರಮಾದವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:  ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

    ಶಾಸಕನಾಗಿ ನಾನೇ ಒಳಗೆ ಹೋಗಿ ಪರಿಶೀಲನೆ ಮಾಡುತ್ತಿಲ್ಲ. ನಮ್ಮ ಗಮನಕ್ಕೆ ಬಂದಿರುವುದನ್ನು ತಿಳಿಸಿದ್ದೇನೆ. ಸರ್ವೇ ಮಾಡಿರಿ, ಇಲ್ಲವಾದರೆ ಇದನ್ನು ಜಿಲ್ಲಾಡಳಿತ ಸಾಬೀತು ಮಾಡಬೇಕು. ಮೇಲ್ನೋಟಕ್ಕೆ ನೂರಕ್ಕೆ ನೂರರಷ್ಟು ಇದು ಮಂದಿರವಾಗಿದೆ. ಸರ್ವೇ ಆದ ನಂತರ ಸತ್ಯಾಂಶ ತಿಳಿಯಲಿದೆ. ಬೆಳಗಾವಿಯಲ್ಲಿ ಅನೇಕ ಪೂಜಾಕೇಂದ್ರಗಳು, ಶ್ರದ್ಧಾ ಕೇಂದ್ರಗಳಿವೆ, ಅವುಗಳನ್ನು ಸರ್ವೇ ಮಾಡಿ ಎಂದು ನಾವು ಹೇಳುತ್ತಿಲ್ಲ. ಅದೇ ರೀತಿ ಜನರು ಇನ್ನು ಎರಡು ನನ್ನ ಗಮನಕ್ಕೆ ತಂದಿದ್ದಾರೆ. ಆದರೆ ಸ್ವತಃ ನಾನೇ ಗಮನಿಸಿದ ನಂತರ ಅವುಗಳನ್ನು ನಿಮ್ಮ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಎಂದರು.

    ಸರ್ವೇ ಆದ ನಂತರ ನೂರಕ್ಕೆ ನೂರು ಅದು ದೇವಸ್ಥಾನ ಎನ್ನುವುದು ಖಚಿತವಾಗುತ್ತದೆ. ಅದಾದ ಬಳಿಕ ಮರಳಿ ದೇವಸ್ಥಾನ ಪುನರ್ ಸ್ಥಾಪನೆ ಆಗಬೇಕು. ಪಕ್ಕದಲ್ಲಿಯೇ ಆಂಜನೇಯ ದೇವಸ್ಥಾನವಿದೆ. ಅದು ಯಾವ ದೇವಸ್ಥಾನ ಎಂಬ ಬಗ್ಗೆ ನಾನು ಮಾಹಿತಿ ಕಲೆ ಹಾಕುತ್ತಿದ್ದೇವೆ. ಅಲ್ಲಿನ ಜನರು ಹೇಳಿದಂತೆ ನಾನು ಹೊರಗೆ ಹೋಗಿ ನೋಡಿ ಬಂದಿದ್ದೇನೆ. 80-90 ವರ್ಷದವರು ಹೇಳುತ್ತಿರುವುದು ನೂರಕ್ಕೆ ನೂರು ನಿಜವಾಗಿದೆ. ನಾವು ಮಂದಿರ ಇತ್ತು ಎಂದು ಹೇಳಿದ್ದೇವೆ. ಅದನ್ನು ಜಿಲ್ಲಾಡಳಿತ ಸರ್ವೇ ಮಾಡಿ ಹೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಜಲ ವಿವಾದ ಬಗೆಹರಿಸಲು ಪಾಕಿಸ್ತಾನದ ನಿಯೋಗ ಭಾರತಕ್ಕೆ ಭೇಟಿ

    ಮಸೀದಿ ಕುರಿತು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ, ವಿಷಯ ತಿಳಿಸುತ್ತೇನೆ. ಒಂದು ವಾರದಲ್ಲಿ ಏನೂ ಕ್ರಮ ತೆಗೆದುಕೊಳ್ಳದಿದ್ದರೆ ಮತ್ತೊಮ್ಮೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ತಿಳಿಸುತ್ತೇವೆ. ಆಗಲೂ ಆಗದಿದ್ದರೆ ಸಮಾಜದ ಎಲ್ಲ ಬಾಂಧವರು, ಪಕ್ಷದ ಪ್ರಮುಖರ ಜೊತೆಗೆ ಚರ್ಚಿಸಿ ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದರು.

  • ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗ್ಬೇಡಿ- ಸುಧಾಕರ್ ಮನವಿ

    ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗ್ಬೇಡಿ- ಸುಧಾಕರ್ ಮನವಿ

    – ಏರ್‌ಪೋರ್ಟ್‌ ಸಮೀಪದ ಹೋಟೆಲ್‍ಗಳಲ್ಲಿ ಕ್ವಾರೆಂಟೈನ್ ಕೇಂದ್ರ
    – ಕರ್ನಾಟಕ ಬಂದ್ ವಿಸ್ತರಣೆ

    ಬೆಂಗಳೂರು: ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

    ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಭೆ ನಡೆಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

    ಕರ್ನಾಟಕ ಬಂದ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅಷ್ಟೇ ಅಲ್ಲದೆ ಸೋಂಕಿತರಿಗೆ ನಿಖರ ಚಿಕಿತ್ಸೆ, ಔಷಧಿ ಇಲ್ಲದೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಬಂದ್ ವಿಸ್ತರಣೆ ಮಾಡವುದು ಅಗತ್ಯವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊರೊನಾ ಎಫೆಕ್ಟ್- ಹಾಸ್ಟೆಲ್, ಪಿಜಿಗಳನ್ನು ಖಾಲಿ ಮಾಡಿ

    ರಾಜ್ಯದಲ್ಲಿಯೇ ಬೆಂಗಳೂರಿಗೆ ವಿದೇಶಗಳಿಂದ ಹೆಚ್ಚು ಜನರು ಬರುತ್ತಾರೆ. ಹೀಗಾಗಿ ವಿಮಾನ ನಿಲ್ದಾಣ ಸಮೀಪದ ಹೋಟೆಲ್‍ಗಳಲ್ಲಿ ಕ್ವಾರೆಂಟೈನ್ ಸೆಂಟರ್ ಸ್ಥಾಪಿಸಿ, ಅಲ್ಲಿ ಅವರನ್ನು ಇರಿಸಿ ನಿಗಾ ಇಡಲಾಗುತ್ತದೆ. ಈ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಹಿರಿಯ ನಾಯಕರು ದೆಹಲಿಯಿಂದ ಫೋನ್ ಮಾಡಿ ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಅವರು ಒಪ್ಪಿದರೆ ಕ್ವಾರೆಂಟೈನ್ ಸೆಂಟರ್ ತೆರೆಯಲಾಗುತ್ತದೆ. ವಿಕ್ಟೋರಿಯಾ ಆಸ್ಪತ್ರೆಯಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.

    ಬೆಂಗಳೂರಿನಲ್ಲಿ ಒಂದು ಕೋಟಿಗೂ ಅಧಿಕ ಜನರು ವಾಸಿಸುತ್ತಾರೆ. ಹಾಗಾಗಿ ಸಹಜವಾಗಿಯೇ ಬೆಂಗಳೂರು ಮಹಾನಗರ ಪಾಲಿಕೆ ನಮಗೆ ದೊಡ್ಡ ಸಮಸ್ಯೆ ಹಾಗೂ ಸವಾಲಾಗಿ ಪರಿಣಮಿಸಿದೆ. ಕಲಬುರಗಿಯಲ್ಲಿ ಓರ್ವರಿಂದ ಅನೇಕರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಈಗಾಗಲೇ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದನ್ನು ನಿಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಗದಗದಲ್ಲಿ ಮೂರುವರೆ ವರ್ಷದ ಕಂದಮ್ಮನಿಗೆ ಕೊರೊನಾ ಸೋಂಕಿರುವ ಶಂಕೆ

  • ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ

    ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ

    ಲಕ್ನೋ: ಆಯೋಧ್ಯೆ ರಾಮಮಂದಿರ- ಬಾಬ್ರಿ ಮಸೀದಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‍ಬಿ) ಹೇಳಿದೆ.

    ನಾವು ಸುಪ್ರೀಂ ಕೋರ್ಟ್ ಸಲಹೆಯನ್ನು ಸ್ವಾಗತಿಸಿದ್ದು, ಕೋರ್ಟ್ ಹೊರಗಡೆ ವಿವಾದವನ್ನು ಬಗೆ ಹರಿಸಲು ಸಿದ್ಧರಿದ್ದೇವೆ ಎಂದು ಎಐಎಂಪಿಎಲ್‍ಬಿಯ ಮೌಲನಾ ಖಲೀದ್ ರಶೀದ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ಸುಪ್ರೀಂ ಸಲಹೆಯನ್ನು ಆರ್‍ಎಸ್‍ಎಸ್ ಸ್ವಾಗತಿಸಿತ್ತು. ಆದರೆ ವಕ್ಫ್ ಬೋರ್ಡ್ ಸುಪ್ರೀಂ ಸಲಹೆಯನ್ನು ತಿರಸ್ಕರಿಸಿತ್ತು.

    ನ್ಯಾಯಾಲಯದ ಹೊರಗಡೆ ಈ ವಿವಾದವನ್ನು ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಲಯ ವ್ಯಾಪ್ತಿಯಲ್ಲೇ ಈ ವಿವಾದ ಪರಿಹಾರವಾಗಬೇಕು ಎಂದು ಬಾಬ್ರಿ ಮಸೀದಿ ಕಾರ್ಯಕಾರಿ ಸಮಿತಿ(ಬಿಎಂಎಸಿ) ಸಮನ್ವಯಕಾರ ಜಿಲಾನಿ ತಿಳಿಸಿದ್ದಾರೆ.

    2010ರ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸಲ್ಲಿಸಿ ಪ್ರಶ್ನಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಪ್ರತ್ಯೇಕ ಪೀಠವನ್ನು ಸ್ಥಾಪಿಸುವಂತೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂ ನಲ್ಲಿ ನಡೆಯಿತು. ಈ ವೇಳೆ ಆಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದ ಸಂಬಂಧ ನ್ಯಾಯಾಲಯ ನೀಡುವ ತೀರ್ಪಿಗಿಂತಲೂ ಹೊರಗಡೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಮುಖ್ಯ ನ್ಯಾ.ಜಗದೀಶ್ ಸಿಂಗ್ ಖೇಹರ್, ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಸಂಜಯ್ ಕಿಶನ್ ಕೌಲ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿತ್ತು,

    ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ಸೂಕ್ಷ್ಮ ಮತ್ತು ಭಾವನಾತ್ಮಕ ವಿಚಾರವಾಗಿರುವುದರಿಂದ ಎರಡೂ ಪಂಗಡದ ನಾಯಕರು ಸಭೆ ನಡೆಸಿ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಕೋರ್ಟ್ ಸಲಹೆ ನೀಡಿತ್ತು.

  • ರಾಮಮಂದಿರ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ: ಸುಪ್ರೀಂ

    ರಾಮಮಂದಿರ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ: ಸುಪ್ರೀಂ

    ನವದೆಹಲಿ: ಆಯೋಧ್ಯೆ ರಾಮಮಂದಿರ ಭೂಮಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

    2010ರ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸಲ್ಲಿಸಿ ಪ್ರಶ್ನಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಪ್ರತ್ಯೇಕ ಪೀಠವನ್ನು ಸ್ಥಾಪಿಸುವಂತೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಆಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದ ಸಂಬಂಧ ನ್ಯಾಯಾಲಯ ನೀಡುವ ತೀರ್ಪಿಗಿಂತಲೂ ಹೊರಗಡೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಮುಖ್ಯ ನ್ಯಾ.ಜಗದೀಶ್ ಸಿಂಗ್ ಖೇಹರ್, ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಸಂಜಯ್ ಕಿಶನ್ ಕೌಲ್ ಅವರನ್ನು ಒಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.

    ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ಸೂಕ್ಷ್ಮ ಮತ್ತು ಭಾವನಾತ್ಮಕ ವಿಚಾರವಾಗಿರುವುದರಿಂದ ಎರಡೂ ಪಂಗಡದ ನಾಯಕರು ಸಭೆ ನಡೆಸಿ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಕೋರ್ಟ್ ಸೂಚಿಸಿದೆ.

    ಈ ಪ್ರಕರಣದ ಸಮಸ್ಯೆ ಬಗೆ ಹರಿಸಲು ನೀವು ಯಾರನ್ನು ಬೇಕಾದರು ಆರಿಸಿಕೊಳ್ಳಬಹುದು. ನಾನು ಮಧ್ಯಸ್ಥಿಕೆ ವಹಿಸಬೇಕು ಎಂದು ನೀವು ಬಯಸಿದ್ದಲ್ಲಿ ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ. ನಿಮಗೆ ಬೇರೆ ನ್ಯಾಯಾಧೀಶರು ಬೇಕಾದರೆ ಅವರನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು ಎಂದು ಮುಖ್ಯ, ನ್ಯಾ. ಖೇಹರ್ ದೂರುದಾರ ಸುಬ್ರಮಣಿಯನ್ ಸ್ವಾಮಿ ಅವರಿಗೆ ತಿಳಿಸಿದರು.

    ಎರಡು ಪಂಗಡದ ನಾಯಕರ ಜೊತೆ ಮಾತುಕತೆ ನಡೆಸಿ ಮಾರ್ಚ್ 31ರಂದು ನಿರ್ಧಾರವನ್ನು ತಿಳಿಸುವಂತೆ ಕೋರ್ಟ್ ಸುಬ್ರಮಣಿಯನ್ ಸ್ವಾಮಿ ಅವರಿಗೆ ಸೂಚಿಸಿದೆ.

    ಕೋರ್ಟ್ ಹೊರಗಡೆ ಎರಡೂ ಪಂಗಡಗಳು ಮಾತುಕತಡೆ ನಡೆಸಿ ಈ ವಿಚಾರವನ್ನು ಬಗೆಹರಿಸಿಕೊಳ್ಳುವುದು ಬಹಳ ಕಷ್ಟ. ಈ ಪ್ರಕರಣ ನ್ಯಾಯಾಲಯದಲ್ಲೇ ಇತ್ಯರ್ಥವಾಗಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ನ್ಯಾಯಾಲಯದ ಹೊರಗಡೆ ವಿವಾದವನ್ನು ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಅಭಿಪ್ರಾಯವನ್ನು ಪ್ರಕರಣದ ದೂರುದಾರ ವಕ್ಫ್ ಬೋರ್ಡ್‍ನ ಜಿಲಾನಿ ತಿರಸ್ಕರಿಸಿದ್ದಾರೆ.