Tag: ಮಕರ ಜ್ಯೋತಿ

  • ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ

    ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ

    ತಿರುವನಂತಪುರಂ: ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ.

    ಸಂಜೆ 6.30ರಿಂದ 6.45ರ ವೇಳೆಗೆ ದೀಪಾರಾಧನೆ ವೇಳೆ ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನವಾಗಿದೆ. ಮಕರ ಜ್ಯೋತಿ ದರ್ಶನವನ್ನು ಶಬರಿಮಲೆ ಪಡೆದುಕೊಂಡಿದೆ. ಇದನ್ನೂ ಓದಿ:  190 ವರ್ಷದ ಆಮೆ- ಗಿನ್ನಿಸ್ ಪುಟಕ್ಕೆ ಸೇರ್ಪಡೆ

    ಪೊನ್ನಂಬಲ ಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ. ಭಕ್ತರು ಜ್ಯೋತಿ ರೂಪದಲ್ಲಿ ದರ್ಶನ ಪಡೆದು ಕಣ್ತುಂಬಿಕೊಂಡಿದ್ದಾರೆ. ‘ಮಕರ ವಿಳಕ್ಕು’ ದರ್ಶನವನ್ನು ಭಕ್ತರು ಪಡೆದುಕೊಂಡಿದ್ದಾರೆ. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಕಾಣಿಸಿಕೊಂಡಿದ್ದಾನೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ- ವಿಸ್ಮಯ ಕಣ್ತುಂಬಿಕೊಂಡ ಭಕ್ತಗಣ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ- ವಿಸ್ಮಯ ಕಣ್ತುಂಬಿಕೊಂಡ ಭಕ್ತಗಣ

    ತಿರುವನಂತಪುರಂ: ಶಬರಿಮಲೆಯಲ್ಲಿ ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಗೋಚರವಾಗಿದ್ದು, ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ.

    ಇಂದು ಸಂಜೆ 6.42ಕ್ಕೆ ಸರಿಯಾಗಿ ಪೊನ್ನಂಬಲಮೇಡು ಗಿರಿಯಲ್ಲಿ ಮಕರ ಜ್ಯೋತಿ ಗೋಚರವಾಗಿದೆ. ಜ್ಯೋತಿ ಕಾಣುತ್ತಿದ್ದಂತೆ ಸಾವಿರಾರು ಭಕ್ತರು ಸಂತಸಗೊಂಡು, ಕಣ್ತುಂಬಿಕೊಂಡಿದ್ದಾರೆ. ಅಯ್ಯಪ್ಪನ ನಾಮಸ್ಮರಣೆ ಹಾಗೂ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕೊರೊನಾ ಹಿನ್ನೆಲೆ ಕಡಿಮೆ ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಇಂದು ಹಲವರು ಜ್ಯೋತಿಯನ್ನು ನೋಡಿದ್ದಾರೆ.

    ಕೊರೊನಾ ಹಿನ್ನೆಲೆ ಈ ಬಾರಿ ಶಬರಿಮಲೆ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಮಕರ ಜ್ಯೋತಿ ದರ್ಶನಕ್ಕೆ ಸಹ ಕೇವಲ 5 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದವರಿಗೆ ಮಾತ್ರ ದೇವಾಲಯ ಹಾಗೂ ಜ್ಯೋತಿ ನೋಡಲು ಅವಕಾಶ ಕಲ್ಪಿಸಲಾಗಿತ್ತು.

    ದೇವಸ್ಥಾನದಿಂದ 8 ಕಿ.ಮೀ ದೂರದಲ್ಲಿ ಪೊನ್ನಂಬಲಮೇಡು ಗಿರಿ ಇದ್ದು, ಪ್ರತಿ ವರ್ಷದಂತೆ ಈ ವರ್ಷವೂ ಮಕರ ಜ್ಯೋತಿ ಗೋಚರಿಸಿದೆ. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಸಾವಿರಾರು ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿಯಾಗಿ `ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಹೇಳಿ ಘೋಷಣೆ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

    ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು.

    ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

    ಪ್ರತಿ ವರ್ಷ ಜನವರಿ 14ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ಆದರೆ ಈ ಬಾರಿ ಮಕರ ಜ್ಯೋತಿ ಜನವರಿ 15ರಂದು ಕಾಣಿಸಿಕೊಂಡಿದೆ. ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಶಬರಿಮಲೆಗೆ ಬರುವ ಭಕ್ತರು, ಅಯ್ಯಪ್ಪನ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

    ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು.

    ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಮಾಡಿದರು.

    ಪ್ರತಿ ವರ್ಷ ಜನವರಿ 14 ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಆಗಮಿಸುವ ಭಕ್ತರು, ಅಯ್ಯಪ್ಪ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

  • ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

    ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

    ಶವರಿಮಲೆ/ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು.

    ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು. ಈ ವಿಶೇಷವು ಪ್ರತಿ ವರ್ಷ ಜನವರಿ 14 ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ಜ್ಯೋತಿ ಕಾಣಿಸಿಕೊಂಡ ತಕ್ಷಣ ನೆರೆದಿದ್ದ ಭಕ್ತ ಸಮೂಹ ಗಟ್ಟಿ ಸ್ವರದಲ್ಲಿ ಅಯ್ಯಪ್ಪ ಸ್ವಾಮಿಯ ಹೆಸರನ್ನು ಹೇಳಿ ಜಯಘೋಷ ಮಾಡಿದರು.

    ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಆಗಮಿಸುವ ಭಕ್ತರು, ಅಯ್ಯಪ್ಪ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

    ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಈ ವೇಳೆ ಪೊನ್ನಂಬಲ ಬೆಟ್ಟದಲ್ಲಿ ಜ್ಯೋತಿ ಭಕ್ತರಿಗೆ ದರ್ಶನವಾಗುತ್ತದೆ.

    ಗಂಗಾಧರನಿಗೆ ಭಾಸ್ಕರನ ಪೂಜೆ:
    ಗವಿ ಗಂಗಾಧರ ನ ಸನ್ನಿಧಿಯಲ್ಲಿ ಸಂಜೆ 5.15 ರಿಂದ 5.30ರ ತನಕ ಭಾಸ್ಕರ ಮತ್ತು ಶಿವನ ಮುಖಾಮುಖಿಯಾಗಿದೆ. ಆದರೆ ಸಾಮಾನ್ಯವಾಗಿ ಮುವತ್ತು ಸೆಕೆಂಡ್ ಗಳ ಕಾಲ ಶಿವನನ್ನು ಆವರಿಸಿ ಪಥ ಬದಲಿಸುವ ಸೂರ್ಯ ಇಂದು ಬರೋಬ್ಬರಿ ಒಂದು ನಿಮಿಷ ಏಳು ಸೆಕೆಂಡ್ ಗಳ ಕಾಲ ಗಂಗಾಧರನನ್ನು ಬೆಳಕಿನಿಂದ ತೋಯಿಸಿ ಬಿಟ್ಟಿದ್ದ. ಈ ಘಟನೆಗೆ ಮುಖ್ಯ ಅರ್ಚಕರೇ ಅಚ್ಚರಿ ವ್ಯಕ್ತ ಪಡಿಸಿದ್ದು ಇದು ಸಾಮಾನ್ಯ ಪೂಜೆಯಲ್ಲ, ಮುಂದೆ ಬರುವ ರಕ್ತ ಚಂದನ ಎನ್ನುವ ಭೀಕರ ಗ್ರಹಣದ ಅಪಾಯವನ್ನು ಈ ಸೂರ್ಯನ ಪೂಜೆ ತಡೆಯಲಿದೆ ಎಂದು ವಿಶ್ಲೇಷಣೆ ನೀಡಿದ್ದಾರೆ.