Tag: ಮಠ

  • ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಹಾವೇರಿ: ಧಾರಾಕಾರ ಮಳೆ (Rain) ಸುರಿದ ಪರಿಣಾಮ ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು (Savanur) ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದೆ.

    ಪಂಡರಾಪುರಕ್ಕೆ ತೆರಳುತ್ತಿದ್ದ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದ 30 ಭಕ್ತರು ಭಾನುವಾರ ತಡರಾತ್ರಿ ಬರದೂರಿನ ಹೊರವಲಯದಲ್ಲಿರುವ ರಾಮಲಿಂಗ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ತಡರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಮಠ ಜಲಾವೃತಗೊಂಡು ಭಕ್ತರು ನೀರಿನಲ್ಲಿ ಸಿಲುಕಿಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ – ಎಲ್ಲಿ ಏನಾಗಿದೆ?

    ಸ್ಥಳಕ್ಕೆ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಭೇಟಿ ನೀಡಿ ಭಕ್ತರನ್ನು ರಕ್ಷಿಸಿದ್ದಾರೆ. ಭಾರಿ ಪ್ರಮಾಣದ ನೀರಿನಿಂದ ಗ್ರಾಮಸ್ಥರಿಗೆ ದಿಕ್ಕು ತೋಚದಂತಾಗಿದೆ. ಇದನ್ನೂ ಓದಿ: ಧಾರವಾಡ| ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳಗಳು

  • ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ

    ನಮ್ಮ ಮಠಾಧಿಪತಿಗಳ ಕೈಗೆ ಆಯುಧ ಕೊಡ್ಬೇಕು: ದಿಂಗಾಲೇಶ್ವರ ಸ್ವಾಮೀಜಿ

    ಹುಬ್ಬಳ್ಳಿ: ಜಗದೀಶ್ ಶೆಟ್ಟರ್ (Jagadeesh Shettar Birthday) ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಪ್ರಚೋದಾನಾಕಾರಿ ಭಾಷಣವನ್ನು ಮಾಡಿದ್ದಾರೆ.

    ನಮ್ಮ ಸಮಾಜದ ನಾಯಕರು, ಮಠಾಧೀಪತಿಗಳ ಕೈಯಲ್ಲಿ ಆಯುಧ ಕೊಡಬೇಕು. ಆಯುಧ ಕೊಟ್ಟು ಮಠ ಮಾನ್ಯಗಳು, ಗಣ್ಯರ ರಕ್ಷಣೆ ಮಾಡಬೇಕು ಎಂದು ಪುರಾಣದ ಮಾತು ಉಲ್ಲೇಖಿಸಿ ಆಯುಧ ಕೊಡಬೇಕು ಎಂದು ಸ್ವಾಮೀಜಿ ಹೇಳಿದ್ದು, ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ದೇವಿ ಕಡೆ ಸ್ವತಂತ್ರ ಆಯುಧ ಇರಲಿಲ್ಲ. ಎಲ್ಲರೂ ಒಂದು ಆಯುಧ ಕೊಟ್ಟಿರುವ ಕಾರಣಕ್ಕೆ ದುಷ್ಟರ ಸಂಹಾರ ಮಾಡಿದಳು. ಇದನ್ನು ಹೇಳೋಕೆ ಕಾರಣ, ನಮ್ಮ ನಾಯಕರುಗಳಿಗೆ ಒಬ್ಬೊಬ್ಬರು ಆಯುಧ ಕೊಡಬೇಕು. ಸಮಾಜದಲ್ಲಿ ಬಲಿಷ್ಠ ಆಗುವ ವ್ಯಕ್ತಿಗಳಿಗೆ ತೊಂದರೆ ಕೊಡುವ ಕೆಲಸ ಈ ನಾಡಿನಲ್ಲಿದೆ. ಮಠಾಧಿಪತಿಗಳಿಗೂ ಇದು ತಪ್ಪಿಲ್ಲ. ಮಠಾಧಿಪತಿಗಳನ್ನು ತೇಜೋವಧೆ ಮಾಡುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್‌ ಬ್ರ್ಯಾಂಡ್ ಲೀಡರ್ಸ್

    ನಮ್ಮ ಮಠಗಳನ್ನ (Mutt) ನಾಶ ಮಾಡುವುದರ ಜೊತೆಗೆ ಎರಡನೇ ಹಂತದ ನಾಯಕರನ್ನು ರಾಜಕೀಯವಾಗಿ ನಾಶ ಮಾಡುವ ವ್ಯವಸ್ಥೆ ಇದೆ. ಹುಟ್ಟುಹಬ್ಬದಲ್ಲಿ ಇದನ್ನು ಹೇಳಬೇಕೋ ಬೇಡವೋ, ಆದರೆ ನಮ್ಮ ಭಾವನೆ ಹೇಳುತ್ತೇನೆ. ಯಾರ ಅಧಃಪತನವನ್ನೂ ನಾವು ಸಹಿಸಬಾರದು. ಮಠಾಧೀಪತಿಗಳು, ರಾಜಕೀಯ ನಾಯಕರು ಸಮಾಜಕ್ಕೆ ಆಧಾರಸ್ತಂಭವಿದ್ದಂತೆ. ಲಿಂಗಾಯತ ನಾಯಕರು ಕಂಬ ಗಟ್ಟಿಯಾಗಿರಬೇಕು ಎಲ್ಲರೂ ಎಚ್ಚೆತ್ತುಕೊಳ್ಳೋ ಕಾಲ ಬಂದಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

  • ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಹಾಲಶ್ರೀ ಮಠದಲ್ಲಿ ಮಹಜರು

    ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಹಾಲಶ್ರೀ ಮಠದಲ್ಲಿ ಮಹಜರು

    ವಿಜಯನಗರ: ರಾಜ್ಯದಲ್ಲಿ ಚೈತ್ರಾ ಕುಂದಾಪುರ (Chaitra Kundapur) 5 ಕೋಟಿ ರೂ. ವಂಚನೆ ಪ್ರಕರಣ ಹೆಚ್ಚು ಸದ್ದು ಮಾಡುತ್ತಿದೆ. ಪ್ರಕರಣದ ಎ3 ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು (Halashree Swamiji) ಅರೆಸ್ಟ್ ಮಾಡಿದ ಸಿಸಿಬಿ ಪೊಲೀಸರು (CCB Police) ಬುಧವಾರ ರಾತ್ರಿ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಗಡಗಲಿ ಮಠದಲ್ಲಿ ಮಹಜರು ನಡೆಸಿದ್ದಾರೆ.

    ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಮಹಾಸಂಸ್ಥಾನ ಮಠದಲ್ಲಿ 2 ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದರು. ಮಠಕ್ಕೆ ಎಂಟ್ರಿಯಾಗುತ್ತಿದ್ದಂತೆ ತೆಂಗಿನಕಾಯಿ ಒಡೆದು ಸ್ವಾಗತ ಮಾಡಿದರು. ಮಠದ ಒಳಗೆ ಹೋಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿಯನ್ನೊಬ್ಬರನ್ನೇ ರೂಂ ನೊಳಗೆ ಕರೆದುಕೊಂಡು ಹೋಗಿ ಮಹಜರು ಮಾಡಿದ್ದಾರೆ.

    ಹಾಲಶ್ರೀ ಇರುತ್ತಿದ್ದ ರೂಂನೊಳಗೆ ಸಿಸಿಬಿ ಪೊಲೀಸರು ಕುಟುಂಬಸ್ಥರನ್ನು ಒಳಗಡೆ ಬಿಡದೆ ಹಾಲಶ್ರೀ ಜೊತೆಗೆ ಮಹಜರು ನಡೆಸಿದರು. ಹಾಲಶ್ರೀ ಜೊತೆಗೆ ಕುಟುಂಬಸ್ಥರು ಮಾತನಾಡಲು ಅವಕಾಶ ಕೇಳಿದರು. ಒಳಗಡೆ ಅವಕಾಶ ಇಲ್ಲ, ಹೊರಗಡೆ ಬಂದಾಗಲೇ ಮಾತನಾಡಲು ಹೇಳಿದರು. ಆದರೆ ಕುಟುಂಬಸ್ಥರ ಜೊತೆಗೆ ಮಾತನಾಡಲು ಹಾಲಶ್ರೀ ಮುಜುಗರಗೊಂಡು, ಕುಟುಂಬಸ್ಥರು ಏನೇ ಕೇಳಿದರೂ ಉತ್ತರಿಸಲಿಲ್ಲ. ಇದನ್ನೂ ಓದಿ: ಬಟ್ಟೆ ಅಂಗಡಿ ಹೆಸ್ರಲ್ಲಿ ವಂಚನೆ ಆರೋಪ- ಚೈತ್ರಾ ವಿಚಾರಣೆಗೆ ಒಪ್ಪಿಸುವಂತೆ ಕೋಟ ಪೊಲೀಸರ ಮನವಿ

    ಊಟ ಮಾಡಿ ಹೋಗಿ ಎಂದು ಮನವಿ ಮಾಡಿದಾಗ, ಇಲ್ಲ ಅವರ ಊಟ ಆಗಿದೆ. ನಾವು ಯಾರೂ ಊಟ ಮಾಡಲ್ಲ ನಮ್ಮ ಊಟ ಆಗಿದೆ ಎಂದು ಹೇಳಿ ಹಾಲಶ್ರೀ ಯನ್ನು ಮಹಜರು ಮಾಡಿ ಕರೆದುಕೊಂಡು ಹೋದರು. ಮಹಜರು ವೇಳೆ ಏನೆಲ್ಲಾ ಮಾಡಿದರು ಎಂಬುವುದರ ಬಗ್ಗೆ ಕುಟುಂಬಸ್ಥರಿಗೆ ಸುಳಿವು ಸಹ ಸಿಸಿಬಿ ಪೊಲೀಸರು ಬಿಟ್ಟುಕೊಟ್ಟಿಲ್ಲ. ಪತ್ನಿ, ತಂದೆ ಹಾಗೂ ಚಿಕ್ಕಪ್ಪಂದಿರು ಏನೇ ಕೇಳಿದರೂ, ಹಾಲಶ್ರೀ ಉತ್ತರಿಸದೆ ಕೈ ಸನ್ನೆ ಮಾಡಿದರೆ ಹೊರತು, ಮಾತನಾಡಿಲ್ಲ. ಹಾಕಿಕೊಂಡಿದ್ದ ಮಾಸ್ಕ್ ಸಹ ಕುಟುಂಬಸ್ಥರ ಮುಂದೆ ತೆಗೆಯದೆ ಹಾಗೆಯೇ ಸಿಸಿಬಿ ಪೊಲೀಸರ ಜೊತೆಗೆ ತೆರಳಿದರು. ಇದನ್ನೂ ಓದಿ: ಮಗಳ ಅಪಹರಣ ಕೇಸನ್ನು ಹಿಂಪಡೆಯುವಂತೆ ಹಲ್ಲೆಗೈದು ಮಹಿಳೆಗೆ ಒತ್ತಡ ಹೇರಿದ ಪೊಲೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    ಹಾಲಶ್ರೀ ಮಠಕ್ಕೆ 54 ಲಕ್ಷ ಹಣ ತಂದಿಟ್ಟ ಮೈಸೂರಿನ ವಕೀಲ

    ಬೆಂಗಳೂರು: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ (Fraud Case) ಅಭಿನವ ಹಾಲಶ್ರೀ (Abhinava Halashree) ಸ್ವಾಮೀಜಿ ಅರೆಸ್ಟ್ ಬೆನ್ನಲ್ಲೇ, ಮೈಸೂರಿನ (Mysuru) ವಕೀಲರೊಬ್ಬರು (Lawyer) ಹಿರೇಹಡಗಲಿಯ ಮಠಕ್ಕೆ (Mutt) 56 ಲಕ್ಷ ರೂ. ಹಣ ತಂದಿಟ್ಟಿದ್ದಾರೆ. ಈ ಹಣದ ಮೂಲ ಯಾವುದು? ಎಲ್ಲಿಂದ ಬಂತು ಎನ್ನುವ ಬಗ್ಗೆ ವಕೀಲ ಪ್ರಣವ್ ಪ್ರಸಾದ್ ಡಿಸಿಪಿಯವರಿಗೆ (DCP) ಪತ್ರ ಬರೆದಿದ್ದಾರೆ.

    ಇಷ್ಟು ಮಾತ್ರವಲ್ಲದೇ ಹಣದ ಕುರಿತು ಪ್ರಣವ್ ಪ್ರಸಾದ್ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಡಿಸಿಪಿಯವರಿಗೆ ಪ್ರಣವ್ ಪ್ರಸಾದ್ ಬರೆದ ಪತ್ರದಲ್ಲಿ (Letter) ಮಠಕ್ಕೆ ಹಣ ಬಂದ ಬಗ್ಗೆ ಉಲ್ಲೇಖವಾಗಿದ್ದು, ಪತ್ರದಲ್ಲಿನ ಸಂಪೂರ್ಣ ಸಾರಾಂಶ ಇಲ್ಲಿದೆ. ಇದನ್ನೂ ಓದಿ: ಕಾಂತರಾಜು ವರದಿ ಸರ್ಕಾರ ಸ್ವೀಕಾರ ಮಾಡುತ್ತದೆ: ಶಿವರಾಜ್ ತಂಗಡಗಿ

    ಪತ್ರದಲ್ಲಿ ಏನಿದೆ?
    ಪ್ರಣವ್ ಪುಸಾದ್ 53 ವರ್ಷ, ಆದ ನಾನು ಮೈಸೂರಿನನಲ್ಲಿ ನೆಲೆಸಿದ್ದು ವಕೀಲ ವೃತ್ತಿ ಮಾಡಿಕೊಂಡಿರುತ್ತೇನೆ. ಚೈತ್ರ ಕುಂದಾಪುರ ಪಕರಣದಲ್ಲಿ ಸುದ್ದಿಯಲ್ಲಿರುವ ಅಭಿನವ ಹಾಲಶ್ರೀ ಸ್ವಾಮಿಜಿಗಳು ನನಗೂ ಮತ್ತು ನನ್ನ ಕುಟುಂಬಸ್ಥರಿಗೂ ಪರಿಚಯವಿದ್ದು, ಕಳೆದ ಎಂಟು ತಿಂಗಳಿನಿಂದ ನಮ್ಮ ಒಡನಾಟದಲ್ಲಿ ಇದ್ದರು. ಇದನ್ನೂ ಓದಿ: ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದು ಮಾಡಿ ರೈತರ ಹಿತ ಕಾಪಾಡಬೇಕು: ರಾಜೂ ಗೌಡ

    ಇವರು ನಮ್ಮ ಮನೆಗೆ ಬರುವುದು, ಆಶೀರ್ವಚನ ನೀಡುವುದು, ಪ್ರಸಾದ ಸ್ವೀಕರಿಸುವುದು ಮಾಡುತ್ತಾ ಬಂದಿದ್ದರು. ಹೀಗಾಗಿ ಇವರ ಬಗ್ಗೆ ನನಗೆ ವಿಶ್ವಾಸ ಹಾಗೂ ಗೌರವ ಇತ್ತು. ಇವರು ನಿಜವಾದ ಧರ್ಮಭೀರು ಸ್ವಾಮೀಜಿ ಎಂದು ನಾವು ಇದುವರೆಗೆ ನಂಬಿದ್ದೆವು. ಆದರೆ, ಮಾಧ್ಯಮಗಳಲ್ಲಿ ವರದಿಯಾದ ವಿಚಾರ ನೋಡಿ ನಮಗೆ ಆಘಾತವಾಯಿತು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ಸದಾ ಸ್ವಾಮೀಜಿಯ ಜೊತೆಗೆ ನಮ್ಮ ಮನೆಗೆ ಬರುತ್ತಿದ್ದ ಚಾಲಕ ರಾಜು ಎಂಬಾತ ನಾಲ್ಕು ದಿನಗಳ ಹಿಂದೆ ನಮ್ಮ ಕಚೇರಿಗೆ ಬಂದಿದ್ದ. ಅಂದು ಅವನು ಒಂದು ಬ್ಯಾಗನ್ನು ಬಿಟ್ಟು ಹೋಗಿದ್ದ. ಯಾವುದೋ ಲಗೇಜ್ ಇರಬೇಕೆಂದು ನಾವು ಸುಮ್ಮನಾಗಿದ್ದೆವು. ಇದನ್ನೂ ಓದಿ: ಶಿವಕುಮಾರ್ ಒಬ್ಬ ನೀರಿನ ಕಳ್ಳ, ಆಯೋಗ್ಯ: ಈಶ್ವರಪ್ಪ ಕಿಡಿ

    ಅದಾದ ನಂತರ ಕರೆ ಮಾಡಿದ ಚಾಲಕ ರಾಜು, ಆ ಬ್ಯಾಗನ್ನು ಮೈಸೂರಿನ ಯಾರಿಗೋ ಕೊಡಲು ಹೇಳಿದ್ದರು. ಜೊತೆಗೆ ವಕೀಲರಿಗೆ ಒಂದಷ್ಟು ಬ್ಯಾಗ್ ತಲುಪಿಸಲು ಹೇಳಿದ್ದರು. ಆದರೆ ಆ ವಕೀಲರು ನನಗೆ ಸಿಗದ ಕಾರಣ ಆ ಬ್ಯಾಗನ್ನು ನಿಮ್ಮ ಕಚೇರಿಯಲ್ಲಿ ಇಟ್ಟಿದ್ದೇನೆ ಎಂದರು. ಕೂಡಲೇ ಅವನನ್ನು ಗದರಿಸಿ ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಸೂಚನೆ ಕೊಟ್ಟೆ. ಅದಾದ ನಂತರ ಆ ಬ್ಯಾಗ್‌ನಿಂದ ನಾಲ್ಕು ಲಕ್ಷ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದೇನೆ. ಉಳಿದ ಹಣವನ್ನು ದಯಮಾಡಿ ನಮ್ಮ ಮಠದ ಪೂಜಾರಿ ಹಾಲಸ್ವಾಮಿಯವರಿಗೆ ತಲುಪಿಸಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ ಎಂದು ಹೇಳಿದ. ಆ ಬ್ಯಾಗನ್ನು ತೆಗೆದುಕೊಂಡು ಹೋಗಲು ಅವರಿಗೆ ಹಲವು ಬಾರಿ ಹೇಳಿದ. ಮೂರ್ನಾಲ್ಕು ದಿನವಾದರೂ ಅವರು ಯಾರು ಈ ಕಡೆ ತಲೆಹಾಕಲಿಲ್ಲ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ಸ್ವಾಮೀಜಿ ಹೇಳಿದಂತೆ ಮಠದಲ್ಲಿ ಹಾಲಸ್ವಾಮಿ ಎಮಬವರಿಗೆ ಈ ಹಣವನ್ನು ಇಂದು ಬೆಳಗ್ಗೆ ತಲುಪಿಸಿ ಬಂದಿರುತ್ತೇನೆ. ಈ ಸ್ವಾಮೀಜಿಯವರ ವ್ಯವಹಾರಗಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ತಮ್ಮ ಗಮನಕ್ಕೆ ಈ ವಿಚಾರಗಳನ್ನು ತರುತ್ತಿದ್ದು, ಈ ವಿಚಾರಗಳು ಮುಂದಿನ ತನಿಖೆಗೆ ಅನುಕೂಲವಾಗುವುದು ಎಂಬ ಉದ್ದೇಶದಿಂದ ಹಂಚಿಕೊಳ್ಳುತ್ತಿದ್ದೇನೆ. ನನಗೆ ಜೀವ ಭಯವಿದ್ದು ರಕ್ಷಣೆ ನೀಡಬೇಕೆಂದು ಡಿಸಿಪಿಯವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಿಥುನ್ ರೈ ವಿವಾದ :  ಬಕೆಟ್ ಅಲ್ಲ, ಟ್ಯಾಂಕ್ ಹಿಡೀತಿನಿ ಎಂದ ರಕ್ಷಿತ್ ಶೆಟ್ಟಿ

    ಮಿಥುನ್ ರೈ ವಿವಾದ : ಬಕೆಟ್ ಅಲ್ಲ, ಟ್ಯಾಂಕ್ ಹಿಡೀತಿನಿ ಎಂದ ರಕ್ಷಿತ್ ಶೆಟ್ಟಿ

    ಡುಪಿ (Udupi) ಮಠಕ್ಕೆ (Math) ಜಾಗ ಕೊಟ್ಟಿದ್ದು ಮುಸ್ಲಿಂ ಎಂದು ಹೇಳುವ ಮೂಲಕ ವಿವಾದಕ್ಕೆ (Controversy) ಕಾರಣವಾಗಿದ್ದ ಮಿಥುನ್ ರೈ (Mithun Rai) ಮಾತಿಗೆ ಬೆಳಗ್ಗೆಯಷ್ಟೇ ನಟ ರಕ್ಷಿತ್ ಶೆಟ್ಟಿ (Rakshit Shetty) ಸೋಷಿಯಲ್ ಮೀಡಿಯಾ ಮೂಲಕ ತಿರುಗೇಟು ನೀಡಿದ್ದರು. ಸಾವಿರಾರು ವರ್ಷ ಇತಿಹಾಸವಿರುವ ದೇವಸ್ಥಾನದ ಬಗ್ಗೆ ತಿಳಿದುಕೊಂಡು ಮಾತನಾಡುವಂತೆ ಸಲಹೆ ಕೂಡ ನೀಡಿದ್ದರು. ರಕ್ಷಿತ್ ಮಾಡಿದ್ದ ಟ್ವೀಟ್ ಇದೀಗ ಪರ ವಿರೋಧಕ್ಕೆ ಕಾರಣವಾಗಿದೆ.

    ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ಜೊತೆ ನಟಿಸಿದ್ದಕ್ಕೆ ಲಕ್ಕಿ ಎಂದ ಉಪೇಂದ್ರ

    ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಅದರಲ್ಲೂ ಒಬ್ಬರು ‘ರಕ್ಷಿತ್ ಶೆಟ್ರೆ ಜಾಸ್ತಿ ಯಾರಿಗೂ ಬಕೆಟ್ ಹಿಡಿಯೋಕೆ ಹೋಗ್ಬೇಡಿ. ದೇವರು ಮೆಚ್ಚುವಂಥ ಕೆಲಸ ಮಾಡಿ ಅಷ್ಟು ಸಾಕು’ ಎಂದು ಸಲಹೆ ನೀಡಿದ್ದರು.

    ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ರಕ್ಷಿತ್ ಶೆಟ್ಟಿ, ‘ಉಡುಪಿ ನನ್ನ ಜನ್ಮಸ್ಥಳ. ಬಕೆಟ್ ಅಲ್ಲಾ ಟ್ಯಾಂಕರ್ ಹಿಡಿತೀನಿ. ಅವರು ಯಾವ ಭೂಮಿಯ ಬಗ್ಗೆ ಮಾತನಾಡುತ್ತಿದ್ದಾರೆಂಬುದು ಖಚಿತವಾಗಿಲ್ಲ. ಕಾರ್ ಸ್ಟ್ರೀಟ್ ನಲ್ಲಿರುವ ಜಮೀನು ಖಂಡಿತವಾಗಿಯೂ ಅಲ್ಲ. ಅನಂತೇಶ್ವರ ದೇವಸ್ಥಾನವು ಕೃಷ್ಣಮಠಕ್ಕಿಂತಲೂ ಹಳೆಯದು. ಚಂದ್ರಮೌಳೀಶ್ವರ ದೇವಸ್ಥಾನ ಇನ್ನೂ ಹಳೆಯದು’ ಎಂದು ಇತಿಹಾಸ ಪಾಠ ಮಾಡಿದ್ದಾರೆ.

  • ಕಾಂಗ್ರೆಸ್ ಮುಖಂಡ ಮಿಥುನ್ ರೈರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ

    ಕಾಂಗ್ರೆಸ್ ಮುಖಂಡ ಮಿಥುನ್ ರೈರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ

    ಡುಪಿ (Udupi) ದೇಗುಲಕ್ಕೆ (Math) ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ (Mithun Rai) ವಿವಾದಾತ್ಮಕ (Controversy) ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂರು ಎಂದು ಮಿಥುನ್ ಹೇಳಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಪರ ವಿರೋಧದ ಮಾತುಗಳು ಕೇಳಿ ಬಂದಿದ್ದವು. ಸಾವಿರಾರು ವರ್ಷ ಇತಿಹಾಸವಿರುವ ದೇವಸ್ಥಾನದ ಬಗ್ಗೆ ತಿಳಿದುಕೊಂಡು ಮಾತನಾಡಿ ಎಂದು ಸ್ವತಃ ಸ್ವಪಕ್ಷಿಯರೇ ಕಿವಿಹಿಂಡಿದ್ದರು. ಈ ಪ್ರಕರಣ ಕುರಿತಂತೆ ನಟ ರಕ್ಷಿತ್ ಶೆಟ್ಟಿ  (Rakshit Shetty)ಕೂಡ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರೆಟ್ರೋ ಲುಕ್‌ನಲ್ಲಿ ಕಂಗೊಳಿಸಿದ ರಕ್ಷಿತ್ ಶೆಟ್ಟಿ ನಾಯಕಿ

    ಸೋಷಿಯಲ್ ಮೀಡಿಯಾದ ತಮ್ಮ ಖಾತೆಯಲ್ಲಿ ರಕ್ಷಿತ್ ಶೆಟ್ಟಿ ಈ ವಿವಾದದ ಕುರಿತಂತೆ ಬರೆದುಕೊಂಡಿದ್ದು, ಮಿಥುನ್ ರೈ ಹೆಸರನ್ನು ಬಳಸದೇ ತರಾಟೆಗೆ ತಗೆದುಕೊಂಡಿದ್ದಾರೆ. ‘ಉಡುಪಿ ದೇವಸ್ಥಾನಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ನಾನ್ ಸೆನ್ಸ್ ರೀತಿಯಲ್ಲಿ ಮಾತಾನಾಡೋದು ಯಾಕೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಿಥುನ್ ರೈ ಹೆಸರು ಬಳಸದೇ ಇದ್ದರೂ, ಇವರಿಗೆ ಕೊಟ್ಟ ಪ್ರತಿಕ್ರಿಯೆ ಎನ್ನುವುದು ಸ್ಪಷ್ಟವಾಗುತ್ತದೆ.

    ಸಾಮಾನ್ಯವಾಗಿ ರಾಜಕೀಯ ವ್ಯಕ್ತಿಗಳ ಹೇಳಿಕೆಗಳಿಗೆ ರಕ್ಷಿತ್ ಶೆಟ್ಟಿ ಈವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಸ್ವತಃ ತಮ್ಮ ಮೇಲೆಯೇ ಹಲವರು ನೆಗೆಟಿವ್ ಕಾಮೆಂಟ್ ಮಾಡಿದಾಗಲೂ ರಕ್ಷಿತ್ ಮೌನವಹಿಸಿದ್ದರು. ಆದರೆ, ಉಡುಪಿ ಮಠಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್ ಪೋಸ್ಟ್ ಗೆ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

  • ಅರೆಸ್ಟ್‌ ಆದ ಮೂರೇ ಗಂಟೆಯಲ್ಲಿ ಗುರುಪ್ರಸಾದ್‌ಗೆ ಬೇಲ್

    ಅರೆಸ್ಟ್‌ ಆದ ಮೂರೇ ಗಂಟೆಯಲ್ಲಿ ಗುರುಪ್ರಸಾದ್‌ಗೆ ಬೇಲ್

    ನ್ನಡದ ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ನಿರ್ದೇಶಕ ಗುರುಪ್ರಸಾದ್  ಅವರಿಗೆ 21ನೇ ಎಸಿಎಂಎಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

    ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು  ಗುರುಪ್ರಸಾದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಗುರುಪ್ರಸಾದ್‌ ಅವರ ಜೊತ ಕೆಲಸ ಮಾಡಿದ್ದ ಶ್ರೀನಿವಾಸ್ ಅವರ ದೂರಿನ ಹಿನ್ನೆಲೆಯಲ್ಲಿ ಗುರುಪ್ರಸಾದ್‌ ವಿರುದ್ಧ ಕೇಸ್‌ ದಾಖಲಾಗಿತ್ತು. ಇದನ್ನೂ ಓದಿ:‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ಗುರುಪ್ರಸಾದ್ 2015-16 ರಲ್ಲಿ ಶ್ರೀನಿವಾಸ್ ಬಳಿ 30 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಗುರುಪ್ರಸಾದ್ ಪಡೆದಿದ್ದ ಸಾಲವನ್ನು ಮರು ಪಾವತಿಸಿರಲಿಲ್ಲ. ಗುರುಪ್ರಸಾದ್ ಶ್ರೀನಿವಾಸ್ ಗೆ ನೀಡಿದ್ದ ಮೂರು ಚೆಕ್‌ಗಳು ಬೌನ್ಸ್ ಆಗಿದ್ದವು. ಹಾಗಾಗಿ ಶ್ರೀನಿವಾಸ್ ನ್ಯಾಯಾಲದ ಮೊರೆ ಹೋಗಿದ್ದರು.

    ಕೋರ್ಟ್ ಗುರುಪ್ರಸಾದ್ ಗೆ ವಾರಂಟ್ ಜಾರಿ ಮಾಡಿತ್ತು. ಆದರೂ ಕೂಡ ಗುರುಪ್ರಸಾದ್ ಕೋರ್ಟ್ ಹಾಜರಾಗದ ಕಾರಣ ಇಂದು ಗುರುಪ್ರಸಾದ್ ಇದ್ದ ಕಡೆ ಗಿರಿನಗರ ಪೊಲೀಸರು ಹುಡುಕಿಕೊಂಡು ಹೋಗಿ ಬಂಧಿಸಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್ (Guruprasad) ಅವರನ್ನು ಗಿರಿನಗರ (Girinagar) ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್ (Check Bounce) ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು (Arrest), ನಂತರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

    ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎನ್ನುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಿನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್, ನಂತರ ಹಣ ಕೊಡದೇ ವಂಚಿಸಿದ್ದರು. ಹಣ ಕೇಳುವುದಕ್ಕೆ ಹೋದವರ ಮೇಲೆಯೇ ಸುಳ್ಳು ಕೇಸ್ ಅನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳ ಸಮಾಗಮ: ವೈಷ್ಣವಿ ಜೊತೆ ದಿವ್ಯಾ- ಅರವಿಂದ್ ಕೆ.ಪಿ ಜೋಡಿ

    ಶ್ರೀನಿವಾಸ್ ದೂರು ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಎನ್.ಬಿ ಡಬ್ಲ್ಯು ಜಾರಿ ಆಗಿತ್ತು. ಎನ್.ಐ ಆಕ್ಟ್ ಅಡಿ ಗುರುಪ್ರಸಾದ್ ವಿರುದ್ದ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರೆಂಟ್ ಜಾರಿ ಆಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ,  ಮೆಡಿಕಲ್ ಟೆಸ್ಟ್ ನಂತರ ಕೋರ್ಟ್ ಮುಂದೆ ಹಾಜರು ಪಡಿಸಲು ಕರೆದುಕೊಂಡು ಹೋಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿನಿಮಾದಲ್ಲಿ ಹಿಂದೂ `ಮಠ’ಗಳ ಅವಹೇಳನ – ಚೀಪ್ ಪಬ್ಲಿಸಿಟಿ ನನಗೆ ಬೇಡ ಎಂದ ನಿರ್ದೇಶಕ

    ಸಿನಿಮಾದಲ್ಲಿ ಹಿಂದೂ `ಮಠ’ಗಳ ಅವಹೇಳನ – ಚೀಪ್ ಪಬ್ಲಿಸಿಟಿ ನನಗೆ ಬೇಡ ಎಂದ ನಿರ್ದೇಶಕ

    ಬೆಂಗಳೂರು: ಕನ್ನಡ ಸಿನಿಮಾ (Kannada Cinema) ರಂಗದಲ್ಲಿ `ಮಠ’ದ (Math) ಹೆಸರಿನಲ್ಲಿ ಮತ್ತೊಂದು ಸಿನಿಮಾ ಮೂಡಿ ಬಂದಿದೆ. ರವೀಂದ್ರ ವಂಶಿ (Ravindra Vamshi) ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಮೊದಲ ಮಠ ಸಿನಿಮಾ ಮಾಡಿದ್ದ ಗುರುಪ್ರಸಾದ್ (Guruprasad), ತಬಲಾ ನಾಣಿ, ಮಂಡ್ಯ ರಮೇಶ್ (Mandya Ramesh) ಸೇರಿದಂತೆ ಹಲವರು ನಟಿಸಿದ್ದಾರೆ.

    ಸಿನಿಮಾ ಬಗ್ಗೆ ಈಗ ಹಲವು ವಿವಾದಗಳು ಭುಗಿಲೆದ್ದಿದೆ. ಇತ್ತೀಚೆಗೆ ಮಠದ ಸ್ವಾಮೀಜಿಗಳಿಗೆ ಅವಮಾನಿಸಲಾಗಿದೆ ಎಂದು ಹೇಳಿದ್ದ ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಇದೀಗ, ಹಿಂದೂ ಮಠಗಳ ಬಗ್ಗೆ ಸಿನಿಮಾದಲ್ಲಿ ಕೀಳಾಗಿ ತೋರಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ರಿಷಬ್‌ಗೆ ಕಾಲಿಗೆ ಬಿದ್ದು ಬನ್ನಿ- ‘ಮಠ’ ನಿರ್ದೇಶಕನಿಗೆ ರಿಷಿ ಕುಮಾರ ಸ್ವಾಮಿ ಕ್ಲಾಸ್

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ಚಿತ್ರತಂಡದ (Film Team) ವಿರುದ್ಧ ದೂರು ನೀಡಿರುವ ರಿಷಿಕುಮಾರ ಸ್ವಾಮೀಜಿ (Rishikumara Swamy), `ಮಠ’ ಟ್ರೇಲರ್ ಸಂಭಾಷಣೆಗಳಿಗೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚಿತ್ರತಂಡದೊಂದಿಗೆ ಮುಖಾಮುಖಿಯಾಗಿ ಚರ್ಚಿಸಿದ್ದಾರೆ. ಇದನ್ನೂ ಓದಿ: ಟಾಲಿವುಡ್ ಲೆಜೆಂಡ್‌ ಬಾಲಯ್ಯ ಮುಂದೆ ಅಬ್ಬರಿಸಲಿದ್ದಾರೆ `ಕೆಜಿಎಫ್ 2′ ನಟ

    ಇದಕ್ಕೆ ಖಡಕ್ಕಾಗಿ ಕ್ಲ್ಯಾರಿಟಿ ಕೊಟ್ಟಿರೋ ನಿರ್ದೇಶಕ ರವೀಂದ್ರ ವಂಶಿ (Ravindra Vamshi), ನಾನು ಸುಮ್ಮನೆ ಸಿನಿಮಾ ಮಾಡಿಲ್ಲ, ನಾನು 149 ದಿನ, 70ಕ್ಕೂ ಹೆಚ್ಚು ಮಠಗಳಲ್ಲಿ ಶೂಟ್ ಮಾಡಿದ್ದೀನಿ. ನನಗೆ ಎಲ್ಲ ಧರ್ಮ, ಪರಂಪರೆಗಳ ಬಗ್ಗೆ ಗೌರವವಿದೆ. ನೀವು ಮೊದಲು ಸಿನಿಮಾ ನೋಡಿ ಮಾತನಾಡಿ. ನಾನು ಸಾಕಷ್ಟು ಅಧ್ಯಯನ ಮಾಡಿಯೇ ಸಿನಿಮಾ ಮಾಡಿದ್ದೀನಿ. ನನ್ನ ಸಿನಿಮಾಗೆ ಚೀಪ್ ಪಬ್ಲಿಸಿಟಿ ಅಗತ್ಯವಿಲ್ಲ. ನನ್ನ ಮಠ ಚಿತ್ರಕ್ಕೆ ಸುಳ್ಳು ಪ್ರಚಾರ ಬೇಕಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಿಷಬ್‌ಗೆ ಕಾಲಿಗೆ ಬಿದ್ದು ಬನ್ನಿ- ‘ಮಠ’ ನಿರ್ದೇಶಕನಿಗೆ ರಿಷಿ ಕುಮಾರ ಸ್ವಾಮಿ ಕ್ಲಾಸ್

    ರಿಷಬ್‌ಗೆ ಕಾಲಿಗೆ ಬಿದ್ದು ಬನ್ನಿ- ‘ಮಠ’ ನಿರ್ದೇಶಕನಿಗೆ ರಿಷಿ ಕುಮಾರ ಸ್ವಾಮಿ ಕ್ಲಾಸ್

    ನ್ನಡ ಸಿನಿಮಾ ರಂಗದಲ್ಲಿ ಮತ್ತೊಂದು ಮಠದ ಹೆಸರಿನಲ್ಲಿ ಸಿನಿಮಾ ಮೂಡಿ ಬಂದಿದೆ. ರವೀಂದ್ರ ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಮೊದಲ ಮಠ ಸಿನಿಮಾ ಮಾಡಿದ್ದ ಗುರುಪ್ರಸಾದ್, ತಬಲಾ ನಾಣಿ, ಮಂಡ್ಯ ರಮೇಶ್ ಸೇರಿದಂತೆ ಹಲವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಮಠಗಳಿಗೆ ಮತ್ತು ಸ್ವಾಮೀಜಿಗಳಿಗೆ ಅವಮಾನಿಸಲಾಗಿದೆ ಎನ್ನುವ ಕಾರಣಕ್ಕಾಗಿ ಕಾಳಿಮಠದ ರಿಷಿಕುಮಾರ್ ಸ್ವಾಮೀಜಿ ಗರಂ ಆಗಿದ್ದಾರೆ.

    ಮಠ ಸಿನಿಮಾದ ಬಗ್ಗೆ ಮಾತನಾಡಿರುವ ರಿಷಿ ಕುಮಾರ್ ಸ್ವಾಮೀಜಿ, ನಿರ್ದೇಶಕನ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ‘ತಾಕತ್ತು ಇದ್ದರೆ ಹಿಂದೂ ಗುರುಗಳ ಬದಲು, ಮೌಲಿಗಳ ಬಗ್ಗೆ ಸಿನಿಮಾ ಮಾಡಿ. ಚರ್ಚೆ ಫಾದರ್ ಗಳ ಬಗ್ಗೆ ಚಿತ್ರ ಮಾಡಲಿ. ಇವರಿಗೆ ಹಿಂದೂ ಧರ್ಮಗುರುಗಳು ಟಾರ್ಗೆಟ್ ಯಾಕೆ?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಮಠ ಸಿನಿಮಾದಲ್ಲಿ ಏನೆಲ್ಲ ಆವಾಂತರಗಳು ಆಗಿವೆ ನ್ನುವುದನ್ನು ಬಲ್ಲೆ ಎಂದದ್ದಾರೆ. ಇದನ್ನೂ ಓದಿ:ಗಡಿನಾಡ ಕನ್ನಡಿಗ ಎಂದ ರೂಪೇಶ್‌ ಶೆಟ್ಟಿಗೆ ಬೆದರಿಕೆ, ದೂರು ದಾಖಲಿಸಿದ ಕುಟುಂಬದವರು

    ‘ಮೌಲಿಗಳ ಬಗ್ಗೆ ಸಿನಿಮಾ ಮಾಡಲಿ ಚರ್ಚ್  ಫಾದರ್ ಗಳ ಬಗ್ಗೆ ಸಿನಿಮಾ ಮಾಡಲಿ. ಹಿಂದು ಸ್ವಾಮಿಗಳ ಬಗ್ಗೆ ಸಿನಿಮಾ ಮಾಡಿ ಕಾಸು ಮಾಡ್ಬೇಡಿ. ಈ ಸಿನಿಮಾ ರಿಲೀಸ್ ಆಗದಂತೆ ನೋಡಿ ಕೊಳ್ಳಿ ಅಂತ ಸ್ವಾಮಿಜಿಗಳಿಗೆ ರಿಷಿಕುಮಾರ್ ಮನವಿ ಮಾಡಿದ್ದಾರೆ. ಮಠ ಸಿನಿಮಾನ ಸ್ವಾಮಿಜಿಗಳಿಗೆ ತೋರಿಸಿ ಆಮೇಲೆ ರಿಲೀಸ್ ಮಾಡ್ಬೇಕು ಅಂತ ಸಲಹೆ ನೀಡಿದ್ದಾರೆ. ಹಿಂದು ಮಠ ಹಿಂದು ಸ್ವಾಮಿಜಿಗಳ ಬಗ್ಗೆ ತಾತ್ಸಾರ ಹೆಚ್ಚಾಗ್ತಿದೆ. ಲಾವಿದರ ಮೂಲಕ ಮಠಗಳ ಬಗ್ಗೆ ತಪ್ಪು ಹೇಳಿಕೆಗಳನ್ನ ಹೇಳಿಸ್ತಿದ್ದಾರೆ. ಕಾಂತಾರ ಸಿನಿಮಾ ನೋಡಿ ರಿಷಬ್ ಕಾಲಿಗೆ ಬಿದ್ದು ಬನ್ನಿ’ ಅಂತ ರಿಷಿಕುಮಾರ್ ಸ್ವಾಮೀಜಿ ಹೇಳಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Math, Kaliswami, Rishi Kumar, Vida, Guru Prasad