Tag: ಮಠಾಧೀಶರು

  • ಬೇಲೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಾಜಶೇಖರ ಪರ ಮಠಾಧೀಶರ ಲಾಬಿ

    ಬೇಲೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಾಜಶೇಖರ ಪರ ಮಠಾಧೀಶರ ಲಾಬಿ

    ನವದೆಹಲಿ: ಹಾಸನದ (Hassan) ಬೇಲೂರು (Belur) ವಿಧಾನಸಭಾ ಕ್ಷೇತ್ರದಲ್ಲಿ ರಾಜಶೇಖರ್ (S.H.Rajshekar) ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಲಿಂಗಾಯತ ಸ್ವಾಮೀಜಿಗಳು ಲಾಬಿ ಆರಂಭಿಸಿದ್ದಾರೆ. ದೆಹಲಿಯಲ್ಲಿ (New Delhi) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಭೇಟಿ ಮಾಡಿರುವ ಸ್ವಾಮೀಜಿಗಳ ನಿಯೋಗ ರಾಜಶೇಖರ್ ಪರ ಬ್ಯಾಟಿಂಗ್ ಮಾಡಿದ್ದಾರೆ.

    ನಿಯೋಗದಲ್ಲಿ ವಿಶ್ವಧರ್ಮ ಮಠ ಜಯಬಸವಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಾಸನದ ವಿವಿಧ ತಾಲೂಕುಗಳ ವೀರಶೈವ ಲಿಂಗಾಯತ ಸ್ವಾಮೀಗಳು, ಬೌದ್ಧ ಬಿಕ್ಕು ಭಂತೆ ಭೋದಿ ಪ್ರಗ್ಯಾನಂದ, ಮುಸ್ಲಿಂ‌ ಸಮುದಾಯದ ಸೋಯೇಲ್ ಭಾಗಿಯಾಗಿದ್ದರು. ಇದನ್ನೂ ಓದಿ: 4ನೇ ಬಾರಿ ಗೆಲ್ತಾರಾ ಸುಧಾಕರ್‌? – ಬ್ರೇಕ್ ಹಾಕಲು ಜೆಡಿಎಸ್, ಕಾಂಗ್ರೆಸ್ ಪೈಪೋಟಿ

    ಕಾಂಗ್ರೆಸ್ ನಾಯಕರ ಭೇಟಿ ಬಳಿಕ ಮಾತನಾಡಿದ ವಿಶ್ವಧರ್ಮ ಮಠ ಜಯಬಸವಾನಂದ ಸ್ವಾಮಿಗಳು, ಹಾಸನದಲ್ಲಿ ಲಿಂಗಾಯತ ಸಮುದಾಯ ಮತದಾರರು ಹೆಚ್ಚಿದ್ದಾರೆ. ಬೇಲೂರು ಕ್ಷೇತ್ರದಲ್ಲಿ ರಾಜಶೇಖರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಸರ್ವಧರ್ಮದ ಜನರನ್ನು ಸಮಾನ ರೀತಿಯಲ್ಲಿ ಕೊಂಡೊಯ್ಯುತ್ತಾರೆ. ರಾಜಶೇಖರ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಲಿಂಗಾಯತರಿಗೆ ಅವಕಾಶ ನೀಡಿದರೆ ಹಾಸನದ ಎಲ್ಲಾ ಕ್ಷೇತ್ರಗಳಲ್ಲೂ ಪರಿಣಾಮ ಬೀರಲಿದೆ ಎಂದು ಹೇಳಿದರು‌.

    ಬೌದ್ಧ ಬಿಕ್ಕು ಭಂತೆ ಭೋದಿ ಪ್ರಗ್ಯಾನಂದ ಮಾತನಾಡಿ, ಎರಡು ಬಾರಿ ಬಿಜೆಪಿಗೆ ಮತ ಚಲಾಯಿಸಿದೆ. ಮಠ-ಮಾನ್ಯಗಳಿಗೆ ಸರಿಯಾದ ರಾಜಾಶ್ರಯ ಸಿಗುತ್ತಿಲ್ಲ. ಹೀಗಾಗಿ ವ್ಯವಸ್ಥೆ ಬದಲಾಗಬೇಕಿದೆ. ರಾಜಶೇಖರ್ ಸಾಕಷ್ಟು ಕೆಲಸ ಮಾಡಿದ್ದಾರೆ. ನಮಗೂ ಸಾಕಷ್ಟು ದಾನ ನೀಡಿದ್ದಾರೆ. ಅವರ ಪರವಾಗಿ ಜನಾಭಿಪ್ರಾಯ ಇದೆ. ಹೀಗಾಗಿ ಕಾಂಗ್ರೆಸ್ ಅವರನ್ನು ಪರಿಗಣಿಸಬೇಕು ಎಂದರು. ಇದನ್ನೂ ಓದಿ: ಮೋದಿಯನ್ನು ಪ್ರಕರಣದಲ್ಲಿ ಸಿಲುಕಿಸುವಂತೆ ನನ್ನ ಮೇಲೆ ಸಿಬಿಐ ಒತ್ತಡ ಹೇರಿತ್ತು: ಅಮಿತ್ ಶಾ

    ಮುಸ್ಲಿಂ‌ ಸಮುದಾಯದ ಸೋಯೇಲ್ ಮಾತನಾಡಿ, ನಾವು ರಾಜಶೇಖರ್ ಅವರಿಗೆ ಟಿಕೆಟ್ ಕೇಳಲು ಬಂದಿದ್ದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಅವರು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಅವರಿಗೆ ಟಿಕೆಟ್ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

  • ಮಠಾಧೀಶರಿಗೂ ಬಿಜೆಪಿ ಟಿಕೆಟ್? – ಬಿಜೆಪಿ ಲೆಕ್ಕಾಚಾರಕ್ಕೆ ಒಪ್ಪುವ ಮಠಾಧೀಶರು ಯಾರು!

    ಮಠಾಧೀಶರಿಗೂ ಬಿಜೆಪಿ ಟಿಕೆಟ್? – ಬಿಜೆಪಿ ಲೆಕ್ಕಾಚಾರಕ್ಕೆ ಒಪ್ಪುವ ಮಠಾಧೀಶರು ಯಾರು!

    ಬೆಂಗಳೂರು: ಅಸ್ತ್ರಗಳ ಮೇಲೆ ಅಸ್ತ್ರ. ತಂತ್ರಗಳ ಮೇಲೆ ತಂತ್ರ..! ಇದು ಬಿಜೆಪಿ (BJP) ಹೈಕಮಾಂಡ್ ಮಾಸ್ಟರ್ ಗೇಮ್. ಮೋದಿ (Narendra Modi) ಬ್ರಹ್ಮಾಸ್ತ್ರದ ನಡುವೆಯೂ ಮಠಾಧೀಶರ ಅಸ್ತ್ರವೂ ಸಿದ್ಧಪಡಿಸಲು ಬಿಜೆಪಿ ಪ್ಲ್ಯಾನ್ ಮಾಡ್ತಿದೆ. ರಾಜ್ಯದ ನಾಲ್ಕು ಭಾಗಗಳಲ್ಲಿ ನಾಲ್ಕು ಸಮುದಾಯಗಳನ್ನೇ ಟಾರ್ಗೆಟ್ ಮಾಡಿಕೊಂಡು ನಾಲ್ಕು ಕ್ಷೇತ್ರಗಳಲ್ಲಿ ಮಠಾಧೀಶರಿಗೆ ಬಿಜೆಪಿ ಟಿಕೆಟ್ (Ticket) ಕಾಯ್ದಿರಿಸುವ ಕುರಿತು ಪ್ರಸ್ತಾಪ ನಡೆದಿದೆ ಎನ್ನಲಾಗಿದೆ.

    ಹಿಂದುತ್ವದ ಲೆಕ್ಕಚಾರ. ಯೋಗಿ ಆದಿತ್ಯನಾಥ್ ಮಾದರಿ ವರ. ಇದು ಬಿಜೆಪಿಯ ಎಲೆಕ್ಷನ್ ನಯಾ ತಂತ್ರ. 2019ರ ಲೋಕಸಭೆ ಚುನಾವಣೆ ವೇಳೆಯೇ ರಾಜ್ಯದಲ್ಲಿ ನೂತನ ಪ್ರಯೋಗಕ್ಕೆ ಬಿಜೆಪಿ ಮುಂದಾಗಿತ್ತು. ಚಿತ್ರದುರ್ಗ ಜಿಲ್ಲೆಯ ಮಠಾಧೀಶರೊಬ್ಬರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ಮಾಡಿತ್ತು. ಆದ್ರೆ ಹೈಕಮಾಂಡ್ ಪ್ಲ್ಯಾನ್‍ಗೆ ಕಡೇ ಕ್ಷಣದಲ್ಲಿ ಆ ಮಠಾಧೀಶರು ಒಪ್ಪದೇ ಎಲ್ಲ ಉಲ್ಟಾ ಆಯ್ತು. ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

    ಈಗ ಬಿಜೆಪಿ ವೇದಿಕೆಯಲ್ಲಿ ಮತ್ತೆ ಮಠಾಧೀಶರಿಗೆ ಟಿಕೆಟ್ ಕೊಡುವ ಪ್ರಸ್ತಾಪದ ಬಿಸಿ ಬಿಸಿ ಚರ್ಚೆ ಶುರು ಆಗಿದೆ. ಹಳೇ ಮೈಸೂರು ಭಾಗ, ಮಧ್ಯಕರ್ನಾಟಕ ಭಾಗದಲ್ಲಿ ತಲಾ ಎರಡು ಕ್ಷೇತ್ರಗಳಲ್ಲಿ ಮಠಾಧೀಶರಿಗೆ ಮೀಸಲಿಡುವ ಚರ್ಚೆ ನಡೆದಿದ್ರೆ, ಮುಂಬೈ, ಕರ್ನಾಟಕ, ಹೈದರಾಬಾದ್ ಕರ್ನಾಟಕದಲ್ಲಿ ಎರಡು ಕ್ಷೇತ್ರಗಳಲ್ಲಿ ಮೀಸಲಿಡುವ ಬಗೆಯೂ ಚರ್ಚೆ ಆಗಿದೆ. ಇನ್ನುಳಿದಂತೆ ಕರಾವಳಿ ಭಾಗದಲ್ಲಿ ಹಿಂದುತ್ವ ಅಜೆಂಡಾ ಬಲವಾಗಿರುವ ಕಾರಣ ಅಲ್ಲಿ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದನ್ನೂ ಓದಿ: ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್‌ ಬಳಸಬೇಡಿ: WHO

    ಈ ಸಲ ಬಿಜೆಪಿ ಹೈಕಮಾಂಡ್ ಮಠಾಧೀಶರಿಗೆ ಟಿಕೆಟ್ ಕೊಟ್ಟೇ ಕೊಡಬೇಕು ಎಂಬ ಹಠಕ್ಕೆ ಬೀಳುತ್ತಾ? ಫೆಬ್ರವರಿ ಮೊದಲ ವಾರದ ಎಲೆಕ್ಷನ್ ಸರ್ವೇ ಆಧರಿಸಿ ತೀರ್ಮಾನ ತೆಗೆದುಕೊಳ್ಳುತ್ತಾ? ಎಂಬ ಕುತೂಹಲ ರಾಜ್ಯ ಬಿಜೆಪಿಯಲ್ಲಿ ಮನೆ ಮಾಡಿದೆ. ಇನ್ನೊಂದೆಡೆ ಬಿಜೆಪಿ ಲೆಕ್ಕಚಾರಕ್ಕೆ ಮಠಾಧೀಶರು ಕೈಗೆ ಸಿಗ್ತಾರಾ? ಲೋಕಸಭೆ ಚುನಾವಣೆಯಲ್ಲಿ ಆದಂತೆ ಕೈ ಕೊಡ್ತಾರಾ? ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಮುರುಘಾ ಶ್ರೀ ಕೇಸ್ – ಜಡ್ಜ್ ಮುಂದೆ ಹೇಳಿಕೆ ನೀಡಿದ ವಿದ್ಯಾರ್ಥಿಗಳು

    ಚಿತ್ರದುರ್ಗ: ಮುರುಘಾ ಶ್ರೀಗಳ ಮೇಲಿನ ಪೋಕ್ಸೋ ಕೇಸ್ ತನಿಖೆ ತೀವ್ರಗೊಂಡಿದೆ. ಪ್ರಕರಣ ವರದಿಯಾದ ಮೂರು ದಿನಗಳ ಬಳಿಕ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ಚಿತ್ರದುರ್ಗದ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.

    CRPC 164 ಅಡಿ ಸಂತ್ರಸ್ತರು, ಮಹಿಳಾ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ನ್ಯಾಯಾಧೀಶರ ಸಮ್ಮುಖದಲ್ಲಿ ಸಂತ್ರಸ್ತ ಬಾಲಕಿಯರ ರಕ್ತದ ಮಾದರಿಯನ್ನು ಆರೋಗ್ಯ ಇಲಾಖೆ ಸಂಗ್ರಹಿಸಿದೆ. ಸದ್ಯ ಮುಚ್ಚಿದ ಲಕೋಟೆಯಲ್ಲಿರುವ ಸಂತ್ರಸ್ತರ ಹೇಳಿಕೆಯನ್ನು ಗೌಪ್ಯವಾಗಿ ಇರಿಸಲಾಗಿದೆ. ಸಂತ್ರಸ್ತ ಬಾಲಕಿಯರ ಈ ಹೇಳಿಕೆ ಮೇಲೆ ಮುರುಘಾ ಶರಣರ ಭವಿಷ್ಯ ನಿರ್ಧಾರವಾಗಲಿದೆ. ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಮುಂದಿನ ಪೀಳಿಗೆ ಭವಿಷ್ಯವನ್ನು ಉಜ್ವಲಗೊಳಿಸಲಿದೆ: ರಾಜ್ಯಪಾಲರು

    ಇಂದು ಕೋರ್ಟ್ ಮುಂದೆ ಪರ-ವಿರೋಧಿ ಪ್ರತಿಭಟನೆಗಳು ನಡೆದಿದ್ದು, ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಬೇಕಾಯ್ತು. ಈ ಮಧ್ಯೆ, ಸಂತ್ರಸ್ತ ಬಾಲಕಿಯರ ಪೈಕಿ ಒಬ್ಬರು ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಿದೆ. ಈ ಮಧ್ಯೆ, 20ಕ್ಕೂ ಹೆಚ್ಚು ಸ್ವಾಮೀಜಿಗಳು ಸುದ್ದಿಗೋಷ್ಟಿ ನಡೆಸಿ, ಮುರುಘಾ ಮಠದ ಶ್ರೀಗಳಿಗೆ ಬೆಂಬಲ ಸೂಚಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿಧ ಮಠದ ಶ್ರೀಗಳು, ಮುರುಘಾ ಶರಣರು ಮಕ್ಕಳು ದೇವರ ಸಮಾನ ಎಂದು ತಿಳಿದಿರುವವರು, ಅವರು ನಾಡಿನ ಗಮನ ಸೆಳೆದಿದ್ದಾರೆ. ಬಹಳ ಮುಂಚೂಣಿಯಲ್ಲಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮೀಜಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಶ್ರೀಗಳು ಖಂಡಿತಾಗಿಯೂ ಈ ಪ್ರಕರಣದಿಂದ ಹೊರ ಬರ್ತಾರೆ, ಸತ್ಯಕ್ಕೆ ಜಯವಾಗುತ್ತದೆ ಎಂದು ಎಲ್ಲಾ ಮಠಾಧೀಶರು ಶ್ರೀಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಫೀರ್ ಪಾಶಾ ದರ್ಗಾ, ಮೂಲ ಅನುಭವ ಮಂಟಪ ವಿವಾದ – 770 ಮಠಾಧೀಶರಿಂದ ಇಂದು ಬೃಹತ್ ಸಮಾವೇಶ

    ಫೀರ್ ಪಾಶಾ ದರ್ಗಾ, ಮೂಲ ಅನುಭವ ಮಂಟಪ ವಿವಾದ – 770 ಮಠಾಧೀಶರಿಂದ ಇಂದು ಬೃಹತ್ ಸಮಾವೇಶ

    ಬೀದರ್: ಫೀರ್ ಪಾಶಾ ದರ್ಗಾ ಮತ್ತು ಮೂಲ ಅನುಭವ ಮಂಟಪದ ವಿವಾದದ ಹಿನ್ನೆಲೆ ನಗರದಲ್ಲಿ ಇಂದು 770 ಮಠಾಧೀಶರಿಂದ ಬೃಹತ್ ಸಮಾವೇಶ ನಡೆಯಲಿದೆ.

    ಮೂಲ ಅನುಭವ ಮಂಟಪಕ್ಕಾಗಿ ಇಂದು ಮಠಾಧೀಶರ ನಡೆ ಮೂಲ ಅನುಭವ ಮಂಟಪದ ಕಡೆ ಎಂಬ ಬೃಹತ್ ಸಮಾವೇಶ ನಡೆಯಲಿದೆ. ಬಸವಕಲ್ಯಾಣದ ತೇರು ಮೈದಾನದ ಸಭಾ ಭವನದಲ್ಲಿ ನಡೆಯಲಿದೆ. ನೂರಾರು ಮಠಾಧೀಶರು ಹಾಗೂ ಸಾವಿರಾರು ಬಸವ ಭಕ್ತರು ಹಾಗೂ ಜನಪ್ರತಿನಿಗಳು ಭಾಗಿಯಾಗಲಿದ್ದಾರೆ. ಜೊತೆಗೆ ಶ್ರೀರಾಮ್ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲನ ಶ್ರೀಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    10 ಗಂಟೆಗೆ ವಿವಿಧ ಮಠಾಧೀಶರಿಂದ ಕಲ್ಯಾಣದ ಬಸವ ಕೇಂದ್ರದಲ್ಲಿ ಇಷ್ಟಲಿಂಗ ಪೂಜೆ ಜರುಗಲಿದೆ. ಬಳಿಕ ಮೆರವಣಿಗೆ ಮೂಲಕ ತೇರು ಮೈದಾನಕ್ಕೆ ಮಠಾಧೀಶರ ಆಗಮನವಾಗುತ್ತದೆ. ಸಭಾ ಭವನದಲ್ಲಿ ಮಠಾಧೀಶರ ಚಿಂತನ – ಮಂಥನ ಕಾರ್ಯಕ್ರಮ ನಡೆಯಲಿದೆ.

    ಈಗಾಗಲೇ ಮಠಾಧೀಶರು ಮೂಲ ಅನುಭವ ಮಂಟಪವನ್ನು ವಶಕ್ಕೆ ಪಡೆದು ಅಭಿವೃದ್ಧಿ ಪಡಿಸಬೇಕು ಎಂದು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಿರುವ ಕಲ್ಯಾಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

  • ಹತ್ಯೆಯಾಗಿರುವ ಹರ್ಷ ಕುಟುಂಬಸ್ಥರಿಗೆ 10ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಸಾಂತ್ವನ

    ಹತ್ಯೆಯಾಗಿರುವ ಹರ್ಷ ಕುಟುಂಬಸ್ಥರಿಗೆ 10ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಸಾಂತ್ವನ

    ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಮನೆಗೆ 10ಕ್ಕೂ ಹೆಚ್ಚು ಮಂದಿ ಮಠಾಧೀಶರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

    ಮುರುಘಾಮಠದ ಡಾ. ಶಿವಮೂರ್ತಿ ಮುರುಘ ಶರಣ ಶ್ರೀಗಳ ನೇತೃತ್ವದಲ್ಲಿ ಮಠಾಧೀಶರು ಹರ್ಷ ಮನೆಗೆ ಭೇಟಿ ಕೊಟ್ಟಿದ್ದಾರೆ. ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭಗೀರಥ ಗುರುಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಡಾ.ಶಾಂತವೀರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಡಾ.ಬಸವ ಮಾಚಿದೇವ ಸ್ವಾಮೀಜಿ, ಅಂಬಿಗರ ಗುರುಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶಿವಮೊಗ್ಗ ಬಸವಕೇಂದ್ರದ ಡಾ ಬಸವ ಮರುಳಸಿದ್ಧ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಕೊರಟಗೆರೆಯ ಶ್ರೀ ಮಹಾಲಿಂಗ ಸ್ವಾಮೀಜಿಗಳು ಶಿವಮೊಗ್ಗ ನಗರದ ಸೀಗೇಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಭೇಟಿ ನೀಡಿದ್ದಾರೆ.

    ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಿವಮೂರ್ತಿ ಮುರುಘಾ ಶರಣ ಶ್ರೀಗಳು, ಸಂತರ ನಡೆ ಸಾಂತ್ವಾನದ ಕಡೆ, ಹಾಗಾಗಿ ಎಲ್ಲಾ ಬಂದಿದ್ದೇವೆ. ಹರ್ಷ ತುಂಬಾ ಉತ್ಸಾಯಿ ಯುವಕನಾಗಿದ್ದ. ಸಂಘರ್ಷ ನಡೆಯಬೇಕು, ಆದರೆ ಹಿಂಸಾತ್ಮಕ ಸಂಘರ್ಷ ನಡೆಯಬಾರದು. ಹಿಂಸಾತ್ಮಕ ಸಂಘರ್ಷಕ್ಕೆ ಅವರನ್ನ ಕಳೆದುಕೊಂಡಿದ್ದೇವೆ. ಹರ್ಷ ಆಂತರಂಗ, ಬಹಿರಂಗದಲ್ಲಿ ರಾಷ್ಟ್ರ ಪ್ರೇಮ ಹೊಂದಿದ್ದ. ಅವರ ಹೆತ್ತವರು, ಸಹೋದರಿಯರಿಗೆ ಧೈರ್ಯ ತುಂಬಿ ಆಶೀರ್ವಾದ ಮಾಡಿದ್ದೇವೆ ಎಂದರು.  ಇದನ್ನೂ ಓದಿ: ರಷ್ಯಾ ವಿರುದ್ಧದ UNSC ನಿರ್ಣಯದಿಂದ ದೂರ ಉಳಿದ ಭಾರತ – ಧನ್ಯವಾದ ತಿಳಿಸಿದ ರಷ್ಯಾ

    ಆರ್ಥಿಕ ಆಶೀರ್ವಾದವನ್ನೂ ಮಾಡಿದ್ದೇವೆ. ಸಮಕಾಲಿನ ಸಂತರ ನಡೆ ಶಾಂತಿ, ಸಾಮಾಜಿಕ ಸಂತ್ವಾನದ ಕಡೆ, ಹಾಗಾಗಿ 12ಕ್ಕೂ ಹೆಚ್ಚು ಶ್ರೀಗಳು ಬಂದಿದ್ದೇವೆ. ಇದು ನಮ್ಮ ಆದ್ಯ ಕರ್ತವ್ಯ ಕೂಡ. ಸಾರ್ವಜನಿಕರಲ್ಲಿ ಶಾಂತಿ-ಸಾಮಾರಸ್ಯ ಬಹಳ ಮುಖ್ಯ. ಎಲ್ಲಾ ಜಾತಿ-ಧರ್ಮದಲ್ಲೂ ಆಂತರಿಕ-ಸಾಮಾಜಿಕ ಶಾಂತಿ ನೆಲೆಸಲಿ ಎಂದು ಸ್ವಾಮೀಜಿ ತಿಳಿಸಿದರು. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

  • ಕನ್ನಡದ ಮೇಲಿನ ಕಾಳಜಿ ಎಲ್ಲ ಮಠಾಧೀಶರಲ್ಲೂ ಬರಬೇಕು: ಸೋಮಶೇಖರ್

    ಕನ್ನಡದ ಮೇಲಿನ ಕಾಳಜಿ ಎಲ್ಲ ಮಠಾಧೀಶರಲ್ಲೂ ಬರಬೇಕು: ಸೋಮಶೇಖರ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶ್ರೀಗಳು ಧರ್ಮಾಭಿಮಾನದ ಜೊತೆಗೆ ಕನ್ನಡದ ಮೇಲೆ ಅಪಾರ ಕಾಳಜಿ ಹೊಂದಿರುವ ಕನ್ನಡದ ವಿಶೇಷ ಮಠಾಧೀಶರು. ಕನ್ನಡದ ಗಡಿ, ಭಾಷೆಗೆ ಅನ್ಯಾಯವಾದಾಗ ಅದನ್ನು ಹಲವು ಬಾರಿ ಪ್ರತಿಭಟಿಸಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಪ್ರಶಂಸಿದರು.

    ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಹಿರೇಮಠದ ಕಾರ್ಯ ಶ್ಲಾಘನೀಯವಾದದ್ದು. ಕನ್ನಡದ ಮೇಲಿನ ಇಂತಹ ಕಾಳಜಿ ಎಲ್ಲ ಮಠಾಧೀಶರಲ್ಲೂ ಬರಬೇಕು. ಗಡಿಯಲ್ಲಿ ಕನ್ನಡದ ಉಳಿವಿಗಾಗಿ ನಾವೆಲ್ಲರೂ ಆಸಕ್ತಿಯಿಂದ, ಹೊಂದಾಣಿಕೆಯಿಂದ ನಡೆದಾಗ ಮಾತ್ರ ಗಡಿಭಾಗ ಅಭಿವೃದ್ಧಿಯಾಗಲು ಸಾಧ್ಯ ಎಂದರು. ಇದನ್ನೂ ಓದಿ: ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ

    ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳು ಈ ವೇಳೆ ಮಾತನಾಡಿ, ಗಡಿಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ್ ಅವರು ಧರ್ಮ, ದೇವರು, ಆಧ್ಯಾತ್ಮಿಕ ಮತ್ತು ಮಾನವೀಯ ಮೌಲ್ಯಗಳ ಪ್ರತಿರೂಪವಾಗಿದ್ದಾರೆ. ಅವರು ಪ್ರಾಧಿಕಾರದ ಅಧ್ಯಕ್ಷರಾದಾಗಿನಿಂದಲು ಕಾಲಿಗೆ ಚಕ್ರ ಕಟ್ಟಿಕೊಂಡು ಗಡಿಯುದ್ದಕ್ಕೂ ಸಂಚರಿಸಿ ಕುಂದು, ಕೊರತೆಗಳನ್ನು ಆಲಿಸುತ್ತಿರುವುದು ಅಭಿನಂದನೀಯ ಎಂದು ಶ್ಲಾಘಿಸಿದರು.

    KANNADA FLAG

    ಬಳಿಕ ಶ್ರೀಗಳು ಗಡಿ ಅಭಿವೃದ್ಧಿ ಪ್ರಧಿಕಾರ ಅಧ್ಯಕ್ಷರನ್ನು ಸತ್ಕರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರದೇಶ ಪ್ರಾಧಿಕಾರದ ಕಾರ್ಯದರ್ಶಿಯಾದ ಪ್ರಕಾಶ್ ಮತ್ತು ಮತ್ತಿಹಳ್ಳಿ, ಆಪ್ತ ಕಾರ್ಯದರ್ಶಿ ಸೋಮಶೇಖರ್ ಗಾಂಜಿ ಹಾಗೂ ಹಿರೇಮಠದ ವೇದಪಟು ಸಂಪತಕುಮಾರ್ ಶಾಸ್ತ್ರೀ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ: ಪ್ರತಾಪ್ ಸಿಂಹ

  • ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ: ಮಠಾಧೀಶರಿಗೆ ವಿದ್ಯಾರ್ಥಿನಿ ಸವಾಲು

    ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ: ಮಠಾಧೀಶರಿಗೆ ವಿದ್ಯಾರ್ಥಿನಿ ಸವಾಲು

    ಕೊಪ್ಪಳ: ಶಾಲೆಯಲ್ಲಿ ಮೊಟ್ಟೆ ನೀಡಲು ಮಠಾಧೀಶರು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಕೊಪ್ಪಳದ ವಿದ್ಯಾರ್ಥಿನಿ ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ ಎಂದು ಸವಾಲು ಹಾಕಿದ್ದಾಳೆ.

    ಶಾಲೆಯಲ್ಲಿ ಮೊಟ್ಟೆ ನೀಡಲು ಮಠಾಧೀಶರು ವಿರೋಧಿಸಿದ್ದಕ್ಕೆ ಕೊಪ್ಪಳದ ಗಂಗಾವತಿಯ ವಿದ್ಯಾರ್ಥಿನಿ ತಿರುಗಿ ಬಿದ್ದಿದ್ದಾಳೆ. ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ ಎಂದು ಮಠಾಧೀಶರಿಗೆ ಸವಾಲು ಹಾಕಿದ್ದಾಳೆ. ನಾವು ಮೊಟ್ಟೆ ತಿಂದರೆ ಬದುಕುತ್ತೇವೆ. ಇಲ್ಲವಾದರೆ ನಾವು ಸಾಯುತ್ತೇವೆ. ನಾವು ಬದುಕುವುದು ಬೇಕಾ? ನಿಮಗೆ ಮೊಟ್ಟೆ ಕೊಡದಿರುವುದು ಬೇಕಾ? ಎಂದು ಮಠಾಧೀಶರನ್ನು ಪ್ರಶ್ನಿಸಿದ್ದಾಳೆ. ಇದನ್ನೂ ಓದಿ: ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ಮಕ್ಕಳು ದೇವರು ಸಮಾನ ಅಂತಾರೆ ಹಾಗಾದರೆ ದೇವರ ಆಸೆ ಏಕೆ ಈಡೇರಿಸಲ್ಲ. ಮಠಕ್ಕೆ ಬಂದು ದಕ್ಷಿಣೆ ಹಾಕಿಲ್ವಾ? ಒಂದಲ್ಲ ಎರಡೆರಡು ಮೊಟ್ಟೆ ತಿಂತೀವಿ. ಮೊಟ್ಟೆಗಾಗಿ ರೋಡಿಗೆ ಬೇಕಾದರೂ ಇಳಿಯುತ್ತೇವೆ. ನಮಗೆ ಯಾರು ಎಲ್ಲ ಎಂದು ತಿಳಿದುಕೊಳ್ಳಬೇಡಿ. ನಮಗೆ ಎಸ್‍ಎಫ್‍ಆರ್ ಸಂಸ್ಥೆ ಇದೆ. ನಮಗೆ ಮೊಟ್ಟೆ ಮತ್ತೆ ಬಾಳೆಹಣ್ಣು ಬೇಕು. ಒಂದಲ್ಲ ಎರಡು ತಿನ್ನುತ್ತೇವೆ. ಅದನ್ನು ಕೇಳಲು ನೀವು ಯಾರು? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಮೊಟ್ಟೆ ವಿತರಣೆ ಕೈಬಿಡಿ, ಇಲ್ಲದಿದ್ದರೆ ಸಸ್ಯಾಹಾರಿಗಳಿಗೆ ಪ್ರತ್ಯೇಕ ಶಾಲೆ ತೆರೆಯಿರಿ: ದಯಾನಂದ ಸ್ವಾಮೀಜಿ

    ನಾವು ಮೊಟ್ಟೆ ತಿಂದು, ಸ್ನಾನ ಮಾಡಿ ನಿಮ್ಮ ಮಠಕ್ಕೆ ಬಂದಿಲ್ಲವಾ? ಮತ್ತೆ ದಕ್ಷಿಣೆಯನ್ನು ಹಾಕಿಲ್ಲವಾ? ಮತ್ತೆ ಏಕೆ ನೀವು ನಮ್ಮ ದುಡ್ಡಿನಲ್ಲಿ ತಿನ್ನುತ್ತೀರಾ? ಬಿಸಾಕಿ ಆ ದುಡ್ಡು ಅಥವಾ ನಮಗೆ ತಂದು ಕೊಡಿ ಎಂದು ಕಿಡಿಕಾರಿದ್ದಾಳೆ.

    ನಿಮಗೆ ಬಡವರ ಕಷ್ಟ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಬಡತನವಿರುವುದರಿಂದ ನಾವು ಸರ್ಕಾರಿ ಶಾಲೆಯಲ್ಲಿ ಓದುತ್ತೇವೆ. ನಿಮ್ಮ ಮಠಕ್ಕೆ ಜಿಲ್ಲೆಯ ಎಲ್ಲ ಮಕ್ಕಳು ಬಂದ್ರೆ ನಿಮ್ಮ ಮಠ ಉಳಿಯುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾಳೆ. ಪ್ರಸ್ತುತ ಈ ವಿದ್ಯಾರ್ಥಿನಿಯ ಹೇಳಿಕೆ ಫುಲ್ ವೈರಲ್ ಆಗಿದೆ.

  • ಹಿಂದೂ ಧರ್ಮವನ್ನು ಬಿಜೆಪಿ ಸರ್ಕಾರ ಸರ್ವನಾಶ ಮಾಡುತ್ತಿದೆ: ಋಷಿಕುಮಾರ ಸ್ವಾಮೀಜಿ

    ಹಿಂದೂ ಧರ್ಮವನ್ನು ಬಿಜೆಪಿ ಸರ್ಕಾರ ಸರ್ವನಾಶ ಮಾಡುತ್ತಿದೆ: ಋಷಿಕುಮಾರ ಸ್ವಾಮೀಜಿ

    -ಒಂದೇ ಒಂದು ಕರೆ ನೀಡಿದರೆ ಕೇಂದ್ರ ಸರ್ಕಾರವೇ ಅಲ್ಲಾಡುತ್ತೆ

    ಚಿಕ್ಕಮಗಳೂರು: ಹಿಂದೂ ಧರ್ಮವನ್ನು ಕಾಂಗ್ರೆಸ್ ಅಥವಾ ಕುಮಾರಸ್ವಾಮಿ ನಾಶ ಮಾಡಿಲ್ಲ. ಬಿಜೆಪಿ ಸರ್ಕಾರವೇ ಸರ್ವನಾಶ ಮಾಡುತ್ತಿದೆ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇಂದು ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಪೀಠದಲ್ಲಿ ಮುಜಾವರ್ ನೇಮಕಾತಿಯನ್ನು ಹೈಕೋರ್ಟ್ ರದ್ದುಪಡಿಸಿದ ಖುಷಿಯಲ್ಲಿ ಋಷಿಕುಮಾರ ಸ್ವಾಮೀಜಿ ದತ್ತಪೀಠಕ್ಕೆ ಆಗಮಿಸಿದ್ದರು. ದತ್ತಾತ್ರೇಯ ಸ್ವಾಮೀಜಿಯ ಗುರುವಾಗಿರುವುದರಿಂದ ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಲು ಬಂದಿದ್ದರು ಆದರೆ, ಜಿಲ್ಲಾಡಳಿತ ದತ್ತಪಾದುಕೆ ದರ್ಶನಕ್ಕೆ ಅವಕಾಶ ನೀಡಿತೋ ವಿನಃ ದತ್ತಪಾದುಕೆಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಿಲ್ಲ. ಕೂಡಲೇ ಋಷಿಕುಮಾರ ಸ್ವಾಮಿಜಿ, ಶ್ರೀರಾಮಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಸೇರಿದಂತೆ ಎರಡ್ಮೂರು ಸ್ವಾಮೀಜಿಗಳು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಗುಹೆಯೊಳಗೆ ಧರಣಿಗೆ ಕೂತರು. ಸಾಧು-ಸಂತರಿಗೆ ಪೂಜೆಗೆ ಅವಕಾಶ ಇಲ್ಲವೆಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಕೂಡ ಹೇಳಿಲ್ಲ. ಆದರೆ, ನೀವು ಹೊಸ ಸಂಪ್ರದಾಯ ಹುಟ್ಟುಹಾಕಿದ್ದೀರಾ ಎಂದು ಗುಹೆಯೊಳಗೆ ಸುಮಾರು ಎರಡು ಗಂಟೆಗಳ ಕಾಲ ಧರಣಿ ಕೂತು ದತ್ತ ಹಾಗೂ ಶ್ರೀರಾಮ ಸ್ಮರಣೆ ಮಾಡಿದರು. ಇದನ್ನೂ ಓದಿ: ದತ್ತಪೀಠಕ್ಕೆ ಮೌಲ್ವಿ ನೇಮಕ ರದ್ದು

    ದತ್ತಪೀಠಕ್ಕೆ ಬಂದ ಹೊರಗಿನ ಭಕ್ತರು ಹಾಗೂ ಪ್ರವಾಸಿಗರಿಗೆ ತೊಂದರೆಯಾಗಬಾರದೆಂದು ಧರಣಿಯನ್ನು ಕೈಬಿಟ್ಟು ಹೊರಬಂದು ಮಾತನಾಡಿದ ಅವರು, ಸರ್ಕಾರಕ್ಕೆ ನಾಚಿಕೆಗೇಡು, ಅಸಯ್ಯ ನಿಮ್ಮನ್ನು ನಂಬಿ ಹಿಂದೂಗಳು ಜೈ…ಜೈ….ಜೈ… ಅಂದಿದ್ದೇ, ಅಂದಿದ್ದು ಅಷ್ಟೆ ಹಿಂದೂಗಳಿಗೆ ಸಿಕ್ಕಿದ್ದು. ದತ್ತಪೀಠದಲ್ಲಿ ಮೈಕ್ ಹಾಕಿಕೊಂಡು ಬಾಂಗ್ ಕೂಗಲು ಅವಕಾಶ ನೀಡಿದ ಸರ್ಕಾರ ಇಂದು ನಮಗೆ ಅರ್ಚನೆ ಮಾಡಲು ಏಕೆ ಬಿಡಲ್ಲ ಎಂದು ಪ್ರಶ್ನಿಸಿದರು.

    ಮುಂದಿನ ದಿನಗಳಲ್ಲಿ ಅವಕಾಶ ನೀಡದಿದ್ದರೆ ರಾಜ್ಯದ ಎಲ್ಲಾ ಮಠಾಧೀಶರು ಜಾಗೃತರಾಗಿ, ನಾವೆಲ್ಲಾ ಸಣ್ಣ-ಪುಟ್ಟ ಮಠದವರು. ಬಾಳೆಹೊನ್ನೂರು-ಆದಿಚುಂಚನಗಿರಿ ಪೀಠಕ್ಕಿಂತ ದೊಡ್ಡ ಮಠ ಬೇಕಾ ಒಂದೇ ಒಂದು ಕರೆ ನೀಡಿದರೆ ಕೇಂದ್ರ ಸರ್ಕಾರವೇ ಅಲ್ಲಾಡುತ್ತೆ. ರಾಮಸೇನೆ, ಬಜರಂಗದಳ, ಆರ್‌ಎಸ್‌ಎಸ್‌ ಪರವೂ ಮಾತನಾಡಬೇಡಿ, ಹಿಂದೂ ಧರ್ಮದ ದೇವಸ್ಥಾನಗಳ ಬಗ್ಗೆ ಮಾತನಾಡಿ. ನಾವು ಚಿಕ್ಕವರು ಗುಬ್ಬಚ್ಚಿ ಹೋಗಿ ಗಿಡಗದ ಮುಂದೆ ಯುದ್ಧ ಮಾಡಿದಂತೆ ಆಗುತ್ತೆ. ದೊಡ್ಡ-ದೊಡ್ಡ ಮಠಾಧೀಶರೆಲ್ಲಾ ಬಂದು ದತ್ತಪೀಠಕ್ಕೆ ಯತಿ-ಸಾಧು-ಸಂತರನ್ನು ಪೂಜೆ ಸಲ್ಲಿಸಲು ಏಕೆ ಬಿಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದತ್ತಪೀಠದಲ್ಲಿ ಮುಜಾವರ್ ನೇಮಕ ರದ್ದು – ಮತ್ತೆ ಸರ್ಕಾರದ ಅಂಗಳಕ್ಕೆ ಚೆಂಡು

    ಮತಾಂತರ ತಡೆ ಕಾಯ್ದೆ ಜಾರಿಗೆ ತರುತ್ತೇವೆ ಎಂದೊಡನೆ ಊರಲ್ಲಿರೋ ಪಾದ್ರಿಗಳೆಲ್ಲಾ ಒಗ್ಗಟ್ಟಾಗಿ ಕೂತಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ. ಹಿಂದೂ ಧರ್ಮದ ಹೆಸರೇಳಿಕೊಂಡು ಮಠದ ಅನ್ನ ತಿನ್ನುತ್ತಿದ್ದೇವೆ. ಆಚೆಗೆ ಮಾತ್ರ ಬರಲ್ಲ. ಎದ್ದು ಹೊರ ಬನ್ನಿ ಎಂದು ಮಠಾಧೀಶರ ವಿರುದ್ಧವೂ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪಿತೃಪಕ್ಷದಲ್ಲಿ ಥಿಯೇಟರ್ ಓಪನ್ ಮಾಡಲ್ಲ – ಉಡುಪಿ ಚಿತ್ರಮಂದಿರ ಮಾಲೀಕರ ತೀರ್ಮಾನ

  • ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬಾರದು: ವಿಶ್ವನಾಥ್

    ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬಾರದು: ವಿಶ್ವನಾಥ್

    ಮೈಸೂರು: ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಬಹುತೇಕ ಮಠಾಧೀಶರು ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಮುಂದುವರಿಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ದಾರಿ ತಪ್ಪಿದ ವೇಳೆ ಮಠಾಧೀಶರು ಎಚ್ಚರಿಸಬೇಕು. ನಾಡಿನ ಧರ್ಮಾಧಿಕಾರಿಗಳು ಒಂದು ಪಕ್ಷದ ಪರವಾಗಿ, ಒಂದು ನಾಯಕತ್ವದ ಪರವಾಗಿ ಧ್ವನಿ ಎತ್ತಿರುವುದು ಎಷ್ಟು ಸರಿ? ರಾಜಕಾರಣಿಗಳನ್ನು ಮೀರಿಸುವಂತೆ ರಾಜಕೀಯದಲ್ಲಿ ಪಾತ್ರ ಮಾಡುತ್ತಿರುವುದು ಎಷ್ಟು ಸರಿ? ವೀರಶೈವ ಧರ್ಮ ಮಾನವ ಧರ್ಮ. ಇದನ್ನು ಜಾತಿಗೆ ಸೀಮಿತ ಮಾಡಿ ಧರ್ಮದ ವ್ಯಾಪ್ತಿಯನ್ನು ಕುಬ್ಜ ಮಾಡುತ್ತಿದ್ದಾರೆ. ಮಠಗಳು ರಾಜಕೀಯ ಕೇಂದ್ರಗಳಂತಾಗಿದ್ದು, ಸಮಾಜದ ಭಾಗವಾಗಬೇಕೆ ಹೊರತು ಅಧಿಕಾರದ ಭಾಗವಾಗಬಾರದು. ಒಬ್ಬ ನಾಯಕನ ಪರವಾಗಿ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿ: ಸಿದ್ದಗಂಗಾ ಶ್ರೀ

    ನಮ್ಮ ಸಮುದಾಯದ ಸ್ವಾಮೀಜಿಗಳು ಸಹ ಸಮುದಾಯದ ನಾಯಕನ ಪರವಾಗಿ ಧ್ವನಿ ಎತ್ತಿದಾಗ ಅವರಿಗೂ ಈ ಮಾತು ಹೇಳಿದ್ದೇನೆ. ರಾಜಕೀಯಕ್ಕಾಗಿ ಧರ್ಮಾಧಿಕಾರಿಗಳು ಬೀದಿಗೆ ಬರಬಾರದು. ಧರ್ಮಾಧಿಕಾರಿಗಳು ಸಂವಿಧಾನಕ್ಕಿಂತ ದೊಡ್ಡವರು ಎನ್ನುವ ರೀತಿ ಹೋಗುತ್ತಿರುವುದು ಸರಿಯಲ್ಲ ಎಂದರು.

    ಸಿಎಂ ಅವರನ್ನು ಭ್ರಷ್ಟಾಚಾರದ ಕಾರಣಕ್ಕೆ ಬದಲಾಯಿಸಲಾಗುತ್ತಿದೆ. ಮಠಾಧಿಪತಿಗಳು ನಾಡಿಗೆ ಯಾವ ಸಂದೇಶ ರವಾನೆ ಮಾಡುತ್ತಿದ್ದಾರೆ? ಭ್ರಷ್ಟಾಚಾರದ ಪರವಾಗಿ ಸಂದೇಶ ಕೊಡುತ್ತೀದ್ದೀರಾ? ಧರ್ಮಾಧಿಕಾರಿಗಳನ್ನು ಬೀದಿಗೆ ತಂದು ನಿಲ್ಲಿಸಿ, ತಮ್ಮ ಪರವಾಗಿ ಧ್ವನಿ ಎತ್ತಿಸುವುದು ಯಾರಿಗೂ ಶೋಭೆ ತರುವುದಿಲ್ಲ. ಮುಖ್ಯಮಂತ್ರಿ ಜಾತಿವಂತನಾಗಬಾರದು ನೀತಿವಂತನಾಗ ಬೇಕು. ಮುರಾಘಾ ಶ್ರೀಗಳೇ ಬೀದಿಗೆ ಬಂದು ನಿಂತು ಜಾತಿಗೆ ಹೋರಾಡುತ್ತಿದ್ದಾರೆ. ಬಸವ ಶ್ರೀ ಪ್ರಶಸ್ತಿ ಕೊಡುವ ನೀವು ಇಂತಹ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಸರ್ಕಾರದ ಕೆಲಸ ದೇವರ ಕೆಲಸ ಎಂದು ಬರೆಸಲಾಗಿದೆ. ಆದರೆ, ಇದನ್ನು ಈಗ ಸರ್ಕಾರದ ಕೆಲಸ ಸ್ವಾಮೀಜಿಗಳ ಕೆಲಸವಾಗಿ ಬದಲಾಯಿಸಬೇಕಿದೆ. ಯಡಿಯೂರಪ್ಪ ಅವರು ಎರಡು ಬಾರಿ ಸಿಎಂ ಆಗಿದ್ದಾರೆ. ಎರಡು ಬಾರಿಯೂ ಪರಿಸ್ಥಿತಿಯ ಶಿಶುವಾದರು. ಮೊದಲ ಬಾರಿಯೂ ಗೌರವಯುತವಾಗಿ ಸಿಎಂ ಸ್ಥಾನದಿಂದ ಅವರು ನಿರ್ಗಮಿಸಲಿಲ್ಲ. 48 ಇದ್ದ ಸ್ಥಾನ 104 ಸ್ಥಾನ ಆಗಿದ್ದು ಮೋದಿ ಅವರಿಂದ. ಮೋದಿ ಅವರ ಕಾರ್ಯ ಸಿದ್ಧಾಂತಕ್ಕೆ ವಿರೋಧವಾಗಿ ಇಲ್ಲಿ ಆಡಳಿತ ನಡೆಯುತ್ತಿದೆ. ಯಡಿಯೂರಪ್ಪ ಹೋರಾಟಗಾರ ಎಂದು ಅವರ ಕೈಗೆ ಅಧಿಕಾರ ಕೊಡಲಾಯಿತು. ಆದರೆ ಕಥೆ ಏನಾಗಿದೆ ನೋಡಿ, ಸಿಎಂ ಆದ ಮೇಲೆ ಯಡಿಯೂರಪ್ಪ ಅವರ ತಮ್ಮ ನಾಲಿಗೆ, ಕೈಯನ್ನು ಮಗನ ಕೈಗೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

    ಬಿಜೆಪಿ ಕಟ್ಟಿದ್ದು ಯಡಿಯೂರಪ್ಪ ಅಲ್ಲ, ಎ.ಕೆ.ಸುಬ್ಬಯ್ಯ, ಬಿ.ಬಿ.ಶಿವಪ್ಪ, ಶಂಕರಮೂರ್ತಿಯಂತಹವರು ಕಟ್ಟಿದ್ದು. ನಂತರವೂ ಬಿಜೆಪಿ ಕಟ್ಟಿದ್ದು ಯಡಿಯೂರಪ್ಪ ಒಬ್ಬರೇ ಅಲ್ಲ. ಹಲವು ನಾಯಕರು ಬಿಜೆಪಿ ಕಟ್ಟಿದ್ದಾರೆ. ಯಡಿಯೂರಪ್ಪ ಅಧಿಕಾರ ಅನುಭವಿಸಿದ್ದಾರೆ ಅಷ್ಟೆ, ರಾಜ್ಯದ ಆಡಳಿತ, ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ. ಎರಡು ಬಾರಿಯೂ ನಿಮ್ಮ ನಿರ್ಗಮನ ಸರಿ ಆಗಲಿಲ್ಲ, ಇಂದು ಗೌರವಯುತವಾಗಿ ನಿರ್ಗಮನವಾದರೆ ನಿಮಗೇ ಒಳ್ಳೆಯದು ಎಂದರು.

    ರಾಜಕಾರಣ ಸ್ವಾಮೀಜಿಗಳ ಕೈಗೆ ಹೋಗಬಾರದು. ಸ್ವಾಮೀಜಿಗಳು ನಡೆದಾಡುವ ದೇವರಾಗಬೇಕು, ನಡೆದಾಡುವ ರಾಜಕಾರಣಿಗಳಾಗಬಾರದು. ಯಡಿಯೂರಪ್ಪ ಬದಲಾದ ತಕ್ಷಣ ಶೂನ್ಯ ಸೃಷ್ಟಿಯಾಗಲ್ಲ, ಮಠಗಳ ಉತ್ತರಾಧಿಕಾರಿ ಮಾಡುವಾಗ ರಾಜಕಾರಣಿಗಳು ಮಧ್ಯ ಪ್ರವೇಶಿಸುತ್ತಾರಾ? ನಾಯಕತ್ವ ಬದಲಾವಣೆ ಶಾಸಕರ ಕೈಯಲ್ಲಿದೆ. ಮತ ಹಾಕುವವರು ಶಾಸಕರು, ನೀವು ಬಂದು ಮತ ಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

    ಸಿದ್ದರಾಮಯ್ಯ ಭ್ರಷ್ಟ ಸರ್ಕಾರ ಹೋಗಬೇಕು ಎನ್ನುತ್ತಾರೆ. ಅದೇ ಪಕ್ಷದ ಶಾಮನೂರು ಶಿವಶಂಕರಪ್ಪ ಸಿಎಂ ಮನೆಗೆ ಹೋಗಿ ಅವರಿಗೆ ಬೆಂಬಲ ಕೊಡುತ್ತಾರೆ. ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್ ಶಿಕ್ಷಣದ ದಲ್ಲಾಳಿಗಳು. ಕಾಂಗ್ರೆಸ್ ನ ನಿಜವಾದ ಸ್ಟ್ಯಾಂಡ್ ಏನು? ಶಾಮನೂರು, ಎಂ.ಬಿ.ಪಾಟೀಲ್ ಯಾವ ಪಕ್ಷದಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಾಂಬೆ ಟೀಂನವರನ್ನು ಮಂತ್ರಿ ಮಾಡಬೇಡಿ
    ಮುಂದೆ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ. ಬದಲಾವಣೆಗಾಗಿ ಬೆಂಬಲವನ್ನು ಎಲ್ಲರೂ ನೀಡಿದ್ದರು. ಆದರೆ ಅಧಿಕಾರ ಸಿಕ್ಕ ಮೇಲೆ ಬದಲಾದರು. ಎಲ್ಲರೂ ಯಡಿಯೂರಪ್ಪ ಪುತ್ರ ವಿಜಯೇಂದ್ರ ರೀತಿಯಾದರು. ಕೊಡಿ ಕೊಡಿ ಎನ್ನುವುದಕ್ಕೆ ಶುರು ಮಾಡಿದ್ದರು. ಅವರಿಗೆಲ್ಲ ಯಡಿಯೂರಪ್ಪ ಸಿಎಂ ಆಗಿರಲಿಲ್ಲ, ಬದಲಿಗೆ ವಿಜಯೇಂದ್ರ ಸಿಎಂ ಆಗಿದ್ದರು. 17 ಜನಕ್ಕೆ ಅಧಿಕಾರ ನೀಡದಿದ್ದರು ಪರವಾಗಿಲ್ಲ. ಆದರೆ ಇನ್ನು ಯಾವುದೇ ಅಧಿಕಾರ ನೀಡಬಾರದು. ಅವರು ಎಲ್ಲಿಗೂ ಹೋಗುವುದಿಲ್ಲ, ಹೋದರೆ ಹೋಗಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲಿ ಎಂದು ತಿಳಿಸಿದರು.

  • ರಾಮ ಮಂದಿರ ನಿರ್ಮಾಣ- ಆದಿಚುಂಚನಗಿರಿಯಲ್ಲಿ ನಿಧಿ ಸಮರ್ಪಣ ಸಂತ ಸಮಾವೇಶ

    ರಾಮ ಮಂದಿರ ನಿರ್ಮಾಣ- ಆದಿಚುಂಚನಗಿರಿಯಲ್ಲಿ ನಿಧಿ ಸಮರ್ಪಣ ಸಂತ ಸಮಾವೇಶ

    ಮಂಡ್ಯ: ಆದಿಚುಂಚನಗಿರಿಯಲ್ಲಿ ಮಹಾಸಂಸ್ಥಾನ ಮಠದಿಂದ ಆಯೋಜಿಸಲಾಗಿದ್ದ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ನಡೆಸಲಾಯಿತು. ವಿವಿಧ ಮಠಾಧೀಶರು ನಿಧಿ ಸಂಗ್ರಹಿಸುವ ಬಗ್ಗೆ ಚರ್ಚೆ ನಡೆಸಿದರು.

    ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಭಾಗವಹಿಸಿ ನಿಧಿ ಸಂಗ್ರಹದ ಬಗ್ಗೆ ಪರಸ್ಪರ ಚರ್ಚೆ ನಡೆಸಿದರು.

    ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ನಮ್ಮ ಮಠ ಮತ್ತು ಎಲ್ಲ ಶಾಖಾ ಮಠಗಳು ರಾಮಮಂದಿರ ನಿರ್ಮಾಣಕ್ಕೆ ಸಂಪೂರ್ಣವಾಗಿ ಸಹಕರಿಸುತ್ತವೆ ಎಂದರು. ಪೇಜಾವರ ಶ್ರೀಗಳು ಮಾತನಾಡಿ, ಶ್ರೀರಾಮನ ಗುಣಗಳನ್ನು ನಾವೆಲ್ಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಪ್ರಚಾರಕ ಸುಧೀರ್ ಮಾತನಾಡಿ, ರಾಮಜನ್ಮಭೂಮಿ 492 ವರ್ಷಗಳ ಹೋರಾಟ. ಈ ಅಭಿಯಾನ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿಸಿಕೊಟ್ಟರು.

    ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರು ಹಾಗೂ ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಹಾಗೂ ವಿಶ್ವ ಹಿಂದೂ ಪರಿಷದ್ ನ ದಕ್ಷಿಣ ಕರ್ನಾಟಕ ಪ್ರಾಂತ ಪ್ರಚಾರಕ ಬಸವರಾಜು ಇದ್ದರು.