Tag: ಮಠ

  • ಧರ್ಮಸ್ಥಳ ಬಳಿಕ ಸಿದ್ದಗಂಗಾ ಮಠದಲ್ಲೂ ನೀರಿಗೆ ಬರ!

    ಧರ್ಮಸ್ಥಳ ಬಳಿಕ ಸಿದ್ದಗಂಗಾ ಮಠದಲ್ಲೂ ನೀರಿಗೆ ಬರ!

    ತುಮಕೂರು: ಎಲ್ಲೆಲ್ಲೂ ನೀರಿಗೆ ಬರ. ಧರ್ಮಸ್ಥಳದ ಆ ದೇವರಿಗೂ ಬರ ತಟ್ಟಿತ್ತು. ಇದೀಗ ತುಮಕೂರಿನ ಸಿದ್ದಗಂಗಾ ಮಠದಲ್ಲೂ ನೀರಿಗೆ ಬವಣೆ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಜೂನ್ ತಿಂಗಳಲ್ಲಿ ಮಳೆ ಬಾರದೇ ಇದ್ದರೆ ನೀರಿಗಾಗಿ ಪರದಾಟಪಡಬೇಕಾಗುತ್ತದೆ.

    ಧರ್ಮಸ್ಥಳದಲ್ಲಿ ನೀರಿನ ಲಭ್ಯತೆ ಕಡಿಮೆಯಾದ ಹಿನ್ನೆಲೆಯಲ್ಲಿ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರು ಸದ್ಯಕ್ಕೆ ಮಂಜುನಾಥನ ದರ್ಶನಕ್ಕೆ ಬರಬೇಡಿ ಎಂದು ಭಕ್ತರಲ್ಲಿ ಮನವಿ ಮಾಡಿದ್ದರು. ಇದೀಗ ತ್ರಿವಿಧ ದಾಸೋಹದ ಕ್ಷೇತ್ರ ತುಮಕೂರಿನ ಸಿದ್ದಗಂಗಾ ಮಠದಲ್ಲೂ ನೀರಿನ ಸಮಸ್ಯೆಗೆ ಬರ ಎದುರಾಗುವ ಪರಿಸ್ಥಿತಿ ಬಂದಿದೆ.

    ಸಿದ್ದಗಂಗಾ ಮಠದಲ್ಲಿ ದಿನಕ್ಕೆ ಸಾವಿರಾರು ಭಕ್ತಾದಿಗಳು ದಾಸೋಹ ಮಾಡುತ್ತಾರೆ. 10 ಸಾವಿರ ವಿದ್ಯಾಥಿಗಳು ವ್ಯಾಸಂಗ ಮಾಡುತ್ತಾರೆ. ಮಠದ ಉಪಯೋಗಕ್ಕೆ ಸರಿ ಸುಮಾರು ದಿನವೊಂದಕ್ಕೆ 80 ಸಾವಿರ ಲೀಟರ್ ನೀರು ಬೇಕಾಗುತ್ತೆ. ಈಗ ವಿದ್ಯಾರ್ಥಿಗಳು ರಜೆ ನಿಮಿತ್ತ ಊರಿಗೆ ಹೋಗಿದ್ರಿಂದ 50 ಸಾವಿರ ಲೀಟರ್ ನೀರಿನ ಅಗತ್ಯತೆ ಇದೆ.

    ಸದ್ಯಕ್ಕೆ 50 ಸಾವಿರ ಲೀಟರ್ ನೀರು ಸುಲಭವಾಗಿ ದೊರೆಯುತ್ತೆ. ಆದರೆ ಜೂನ್ ತಿಂಗಳಲ್ಲಿ ಶಾಲೆ ಆರಂಭವಾಗೋದ್ರಿಂದ 80 ಸಾವಿರ ಲೀಟರ್ ನೀರು ಬೇಕಾಗುತ್ತದೆ. ಜೂನ್ ತಿಂಗಳಲ್ಲಿ ಮಳೆಯಾದರೆ ನೀರಿನ ಸಮಸ್ಯೆ ಆಗಲ್ಲ. ಇಲಾಂದ್ರೆ ನೀರಿಗೆ ಬರ ಬರಲಿದೆ ಎಂದು ಹೇಳಲಾಗುತ್ತಿದೆ.

    ಮಠದಲ್ಲಿ ನೂರಾರು ಜಾನುವಾರುಗಳಿದರೂ ಅವುಗಳ ಸಾಕಾಣಿಕೆಗೆ ನೀರಿನ ಅವಶ್ಯಕತೆ ಇದೆ. ಸುಮಾರು 30 ಬೋರ್‍ವೆಲ್‍ಗಳಿವೆ. ಅವುಗಳಲ್ಲಿ 5-6 ಬೋರ್ ವೆಲ್ ಕೈ ಕೊಟ್ಟಿವೆ. ಇನ್ನುಳಿದವುಗಳಲ್ಲಿ ಅಲ್ಪ ಸ್ವಲ್ಪ ನೀರು ಬರುತ್ತಿದೆ. ಈ ನೀರಿನಿಂದಲೇ ನಿತ್ಯದ ಕೆಲಸ ಸಾಗಿದೆ. ಮಹಾನಗರ ಪಾಲಿಕೆಯಿಂದ ನೀಡುತ್ತಿದ್ದ ಹೇಮಾವತಿ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಮೈದಾಳ ಕೆರೆಯಿಂದ ನೀರು ಹರಿಸುವ ಯೋಜನೆಯೂ ಸ್ಥಗಿತಗೊಂಡಿದೆ.

  • ಪ್ರೀತಿಗಾಗಿ ಪೀಠತ್ಯಾಗ ಮಾಡಿದ್ದ ಸ್ವಾಮೀಜಿ ಮಠದಲ್ಲಿ ಪ್ರತ್ಯಕ್ಷ

    ಪ್ರೀತಿಗಾಗಿ ಪೀಠತ್ಯಾಗ ಮಾಡಿದ್ದ ಸ್ವಾಮೀಜಿ ಮಠದಲ್ಲಿ ಪ್ರತ್ಯಕ್ಷ

    ಕೊಪ್ಪಳ: ಪ್ರೀತಿಗಾಗಿ ಪೀಠತ್ಯಾಗ ಮಾಡಿದ್ದ ಸ್ವಾಮೀಜಿ ಕೊಪ್ಪಳ ಜಿಲ್ಲೆಯ ಅಳವಂಡಿಯ ಉಜ್ಜಯನಿಪೀಠದ ಸಿದ್ದೆಶ್ವರ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ.

    ಸಿದ್ದೇಶ್ವರ ಸ್ವಾಮೀಜಿಯವರು ತಾನು ಪ್ರೀತಿಸಿದ ಹುಡುಗಿಗಾಗಿ ಪೀಠ ತ್ಯಾಗ ಮಾಡಿದ್ದರು. ಅಲ್ಲದೆ ಜನವರಿಯಿಂದ ಕಾಣೆಯಾಗಿದ್ದು, ಯಾರಿಗೂ ಅವರ ಬಗ್ಗೆ ಮಾಹಿತಿ ಇರಲಿಲ್ಲ. ಆದರೆ ಈಗ ಸಿದ್ದೇಶ್ವರ ಸ್ವಾಮೀಜಿ ಮಠದಲ್ಲಿ ಪ್ರತ್ಯಕ್ಷವಾಗಿದ್ದು, ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಮಠದ ಮಂಡಳಿ ಕಳೆದ ವಾರವಷ್ಟೇ ಸಿದ್ದವೀರ ಸ್ವಾಮೀಜಿ ಅವರನ್ನು ಗುಪ್ತವಾಗಿ ನೇಮಿಸಿದ್ದರು. ಈ ಸಂದರ್ಭದಲ್ಲೇ ಹಳೆ ಸ್ವಾಮೀಜಿ ಸಿದ್ದೇಶ್ವರ ಮಠದಲ್ಲಿ ಕಾಣಿಸಿಕೊಂಡಿದ್ದು, ಎಲ್ಲರಿಗೂ ಗೊಂದಲದ ವಾತಾವರಣ ಸೃಷ್ಟಿ ಮಾಡಿದೆ.

    ಈ ಬಗ್ಗೆ ಸಿದ್ದೇಶ್ವರ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ನಾನು ಪೀಠದಲ್ಲಿದ್ದಾಗ ನನಗೆ ಹೆಚ್ಚು ತೋಳಲಾಟ ಹಾಗೂ ಸಮಸ್ಯೆಗಳು ಆಗುತ್ತಿತ್ತು. ಮಠದಲ್ಲಿ ನಡೆಯುತ್ತಿದ್ದ ರಾಜಕೀಯ ಚಟುವಟಿಕೆ ವಿರೋಧಿಸಿದ್ದಕ್ಕೆ ನನ್ನ ಕುಟುಂಬಸ್ಥರೇ ನನಗೆ ಕಿರುಕುಳ ನೀಡುತ್ತಿದ್ದರು. ಈ ಮಠದಲ್ಲಿ ನಾನು ನೋಡೋದಕ್ಕೆ ಸ್ವಾಮೀಜಿ ಅಷ್ಟೇ. ಆದರೆ ನನಗೆ ಯಾವುದೇ ರೀತಿಯ ಅಧಿಕಾರ ಹಾಗೂ ಸ್ವಾತಂತ್ರ್ಯ ಇರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:ಅಳವಂಡಿ ಪೀಠತ್ಯಾಗ ಪ್ರಕರಣ – ಸಾಮಾಜಿಕ ಜಾಲತಾಣದಲ್ಲಿ ಸ್ವಾಮೀಜಿ, ವಿದ್ಯಾರ್ಥಿನಿಯ ಫೋಟೋ ವೈರಲ್

    ಅಲ್ಲದೆ ನನ್ನ ದೊಡ್ಡಪ್ಪ ಗುರುಮೂರ್ತಿಸ್ವಾಮಿ ಆಸ್ತಿ ಸಲುವಾಗಿ ನನಗೆ ವಿಪರೀತ ಕಿರುಕುಳ ನೀಡುತ್ತಿದ್ದರು. ದೊಡ್ಡಪ್ಪ ಸಸಿ ಹಚ್ಚುವ ಜಾಗಕ್ಕೂ ತಗಾದೆ ತೆಗೆದು ಗೆರೆ ಹಾಕಿದ್ದರು. ಬೆಟ್ಟದೂರಲ್ಲಿ 11 ಎಕರೆ ಜಾಗ ಭಕ್ತರು ಕೊಟ್ಟದ್ದು, ದಾನದ ಜಾಗದ ಮಾಲೀಕತ್ವಕ್ಕೂ ವಿವಾದ ನಡೆದಿದೆ. ದೊಡ್ಡಪ್ಪ ಹಾಗೂ ಅವರ ಕುಟುಂಬ ಇಡೀ ಮಠವನ್ನೇ ಖಾಸಗಿಯಾಗಿ ಬಳಸುತ್ತಿದ್ದಾರೆ. ಕಮಿಟಿಯಲ್ಲಿ ಕುಟುಂಬದ ಎಂಟು ಜನ ಇದ್ದಾರೆ. ಗ್ರಾಮಸ್ಥರು ಒಬ್ಬರೂ ಇಲ್ಲ. ಇದನ್ನು ವಿರೋಧಿಸಿದೆ ಎಂದು ಮಾಜಿ ಸ್ವಾಮೀಜಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಲೇಜಿಗೆ ಬರುತ್ತಿದ್ದ ಶಿಷ್ಯೆಯನ್ನೇ ಮದ್ವೆಯಾದ್ರಾ ಸ್ವಾಮೀಜಿ..?

    ಇಂತಹ ಮಾನಸಿಕ ಕಿರುಕುಳ ಹಾಗೂ ಕುಗ್ಗುಸುವಿಕೆ ಕೆಲಸದಿಂದ ನಾನು ಬೇಸತ್ತು ಹೋಗಿದ್ದೆ. ದೊಡ್ಡಪ್ಪ ಒತ್ತಾಯಪೂರ್ವಕವಾಗಿ ನನ್ನಿಂದ ಪೀಠತ್ಯಾಗಕ್ಕೆ ಸಹಿ ಮಾಡಿಸಿಕೊಂಡರು. ಮುಂಡರಗಿ ಕಾಲೇಜಿನಲ್ಲಿ ಪಾಠ ಮಾಡಲು ಹೋದಾಗ ಹುಡುಗಿ ನನ್ನನ್ನ ಪ್ರೀತಿಸಿದ್ದು ನಿಜ. ಇದನ್ನೇ ನೆಪ ಮಾಡಿಕೊಂಡು ದೊಡ್ಡಪ್ಪ ಮತ್ತು ಕುಟುಂಬದವರು ಸಾಕಷ್ಟು ಕಿರುಕುಳ ಕೊಟ್ಟು ಪೀಠತ್ಯಾಗಕ್ಕೆ ಸಹಿ ಮಾಡಿಸಿಕೊಂಡರು. ಪೀಠತ್ಯಾಗಕ್ಕೂ ಮೊದಲು ಜನರಿಗೆ ತಿಳಿಸೋಣ ಎಂದರೂ ಭೀತಿ ಹುಟ್ಟಿಸಿ, ಓಡಿಸಿದ್ದರು ಎಂದು ಸಿದ್ದೇಶ್ವರ ಸ್ವಾಮೀಜಿ ತಮ್ಮ ಅಳಲುತೋಡಿಕೊಂಡಿದ್ದಾರೆ.

  • ವಿದ್ಯಾರ್ಥಿಯ ನೀತಿ ಪಾಠದ ಎಫೆಕ್ಟ್ – ದಾಸೋಹದಲ್ಲಿ ಅನ್ನ ಬಿಡದೇ ತಟ್ಟೆ ಖಾಲಿ ಮಾಡಿದ ಭಕ್ತರು

    ವಿದ್ಯಾರ್ಥಿಯ ನೀತಿ ಪಾಠದ ಎಫೆಕ್ಟ್ – ದಾಸೋಹದಲ್ಲಿ ಅನ್ನ ಬಿಡದೇ ತಟ್ಟೆ ಖಾಲಿ ಮಾಡಿದ ಭಕ್ತರು

    ತುಮಕೂರು: ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಕ್ತರು ಹಾಕಿಕೊಂಡ ಅನ್ನವನ್ನು ವ್ಯರ್ಥ ಮಾಡದೇ ತಟ್ಟೆಯನ್ನು ಖಾಲಿ ಮಾಡಿ ಸಂತಸಪಟ್ಟಿದ್ದಾರೆ.

    ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ವೇಳೆ ಅನ್ನ ಎಸೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಭಕ್ತರೊಬ್ಬರಿಗೆ ಮಠದ ವಿದ್ಯಾರ್ಥಿ ಅನ್ನದ ಮಹತ್ವವನ್ನು ತಿಳಿಸಿದ್ದ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದ ಪ್ರಭಾವ ಏನೋ ಎಂಬಂತೆ ಭಕ್ತರು ಇಂದು ಎಷ್ಟು ಅನ್ನಬೇಕೋ ಅಷ್ಟೇ ಪ್ರಮಾಣದ ಅನ್ನವನ್ನು ಹಾಕಿಕೊಂಡು ತಿಂದಿದ್ದಾರೆ. ಇದನ್ನು ಓದಿ: ಅನ್ನ ಚೆಲ್ಲಲು ಬಂದ ಭಕ್ತನಿಗೆ ಮಠದ ವಿದ್ಯಾರ್ಥಿಯಿಂದ ಅನ್ನದ ಪಾಠ! – ವಿಡಿಯೋ ನೋಡಿ

    ಪುಣ್ಯಾರಾಧನೆಗೆ ಆಗಮಿಸಿದ 5 ಲಕ್ಷ ಭಕ್ತರಿಗಾಗಿ ನಿರಂತರವಾಗಿ ವಿವಿಧ ರೀತಿಯ ಪ್ರಸಾದವನ್ನು ತಯಾರಿಸಲಾಗುತ್ತಿದೆ. ಮಠದ ಆವರಣದಲ್ಲಿ ವಿವಿಧ ರೀತಿಯ ಪ್ರಸಾದವನ್ನು ಸಿದ್ಧ ಮಾಡುತ್ತಿದ್ದಾರೆ. ನೂರಾರು ಭಕ್ತರು ಸ್ವಯಂ ಪ್ರೇರಿತವಾಗಿ ದಾಸೋಹದ ಸಿದ್ಧತಾ ಕಾರ್ಯದಲ್ಲಿ ರಾತ್ರಿಯಿಡಿ ತೊಡಗಿಕೊಂಡಿದ್ದರು. ಈಗಾಗಲೇ 69 ಕ್ವಿಂಟಾಲ್ ಸಿಹಿ ಬೂಂದಿ ತಯಾರಿಸಲಾಗಿದೆ. ಇದನ್ನು ಓದಿ: ಜನ ಈಗ ಸಾಹುಕಾರರಾಗಿದ್ದಾರೆ, ಹೀಗಾಗಿ ಅನ್ನದ ಬೆಲೆ ಗೊತ್ತಿಲ್ಲ: ಸಿದ್ದಗಂಗಾ ಮಠದ ವಿದ್ಯಾರ್ಥಿ

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ವೇಳೆ ಭಕ್ತಾದಿಗಳಿಗೆ ಅನ್ನದಾಸೋಹ ಮಾಡಲಾಗಿತ್ತು. ಈ ವೇಳೆ ಭಕ್ತರೊಬ್ಬರು ಅನ್ನ ಚೆಲ್ಲಲು ಮುಂದಾದಾಗ ಮಠದ ಬಾಲಕ ಶಿವು ಅವರಿಗೆ ಅನ್ನದ ಮಹತ್ವವನ್ನು ತಿಳಿಸಿದ್ದನು. ಶ್ರೀಗಳ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಉಚಿತ ಅನ್ನದಾಸೋಹ ಸಂದರ್ಭದಲ್ಲಿ ಮೇಲುಸ್ತುವಾರಿ ಮಾಡುತ್ತಿದ್ದ ಮಠದ ವಿದ್ಯಾರ್ಥಿ, ಅನ್ನದ ಮಹತ್ವ ತಿಳಿಸಿಕೊಟ್ಟಿದ್ದನು. ಅಲ್ಲದೇ ಪ್ರಸಾದ ಚೆಲ್ಲಬೇಡಿ, ಮುಂದೆ ಅನ್ನ ಸಿಗದ ಕಾಲ ಬರುತ್ತೆ ಎಂದು ವಿದ್ಯಾರ್ಥಿ ಹೇಳಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    https://www.youtube.com/watch?v=Ku2W_RqZM9M

    https://www.youtube.com/watch?v=5uh3fpEysn8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀಗಳ 11ನೇ ಪುಣ್ಯಾರಾಧನೆ – ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್

    ಸಿದ್ದಗಂಗಾ ಶ್ರೀಗಳ 11ನೇ ಪುಣ್ಯಾರಾಧನೆ – ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್

    ತುಮಕೂರು: ಇಂದು ಸಿದ್ದಗಂಗಾಶ್ರೀಗಳ 11ನೇ ಪುಣ್ಯಾರಾಧನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

    ಬುಧವಾರ ಮಠಕ್ಕೆ ಬಂದಿರುವ ದಕ್ಷಿಣ ವಲಯ ಐಜಿಪಿ ದಯಾನಂದ್, ಭದ್ರತೆಯ ಉಸ್ತುವಾರಿ ವಹಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಲಕ್ಷ ಲಕ್ಷ ಭಕ್ತರು ಮಠಕ್ಕೆ ಧಾವಿಸಲಿರುವ ಹಿನ್ನೆಲೆಯಲ್ಲಿ ಕೆಲ ಮಾರ್ಗ ಬದಲಾವಣೆಯನ್ನು ಪೊಲೀಸ್ ಮಾಡಿದೆ.

    ಎನ್‍ಹೆಚ್ 4ನಲ್ಲಿ ಗೂಡ್ಸ್ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ದಾವಣಗೆರೆ ಚಿತ್ರದುರ್ಗದ ಕಡೆಯಿಂದ ಬರುವ ಗೂಡ್ಸ್ ವಾಹನಗಳಿಗೆ ಶಿರಾ, ಮಧುಗಿರಿ, ಕೊರಟಗೆರೆ, ದಾಬಸ್ ಪೇಟೆ ಮೂಲಕ ಬೆಂಗಳೂರಿಗೆ ತೆರಳಲು ಸಂಪರ್ಕ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ದಾವಣಗೆರೆಯತ್ತ ಹೋಗುವ ಗೂಡ್ಸ್ ವಾಹನಗಳಿಗೆ ದಾಬಸ್‍ಪೇಟೆ, ಕೊರಟಗೆರೆ, ಮಧುಗಿರಿ ಮೂಲಕ ಶಿರಾಗೆ ಸಂಪರ್ಕ ಕಲ್ಪಿಸಲಾಗಿದೆ. ಉಳಿದಂತೆ ಬಸ್, ಕಾರುಗಳಿಗೆ ಸಂಚಾರಕ್ಕೆ ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ.

    ಇಂದು ಶಿವೈಕ್ಯ ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮವಿದ್ದು, ನಾಡಿನ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ. ಭಕ್ತರು ರಾತ್ರಿಯೇ ಬಂದು ಶ್ರೀಮಠದಲ್ಲಿ ತಂಗಿದ್ದಾರೆ. ರಾತ್ರಿಯಿಡಿ ಶಿವನಾಮ ಸ್ಮರಣೆ ಮಾಡಿ ಜಾಗರಣೆ ಮಾಡಿದ್ದಾರೆ. ಇಂದು ಬೆಳಗ್ಗೆ 5 ಗಂಟೆಯಿಂದ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಳೆ ಶ್ರೀಗಳ 11ನೇ ದಿನದ ಪುಣ್ಯಾರಾಧನೆ- ಲಕ್ಷಾಂತರ ಭಕ್ತರಿಗೆ ಮಠದಲ್ಲಿ ಸಕಲ ಸಿದ್ಧತೆ

    ನಾಳೆ ಶ್ರೀಗಳ 11ನೇ ದಿನದ ಪುಣ್ಯಾರಾಧನೆ- ಲಕ್ಷಾಂತರ ಭಕ್ತರಿಗೆ ಮಠದಲ್ಲಿ ಸಕಲ ಸಿದ್ಧತೆ

    ತುಮಕೂರು: ಸಿದ್ದಗಂಗಾ ಶ್ರೀಗಳು ದೇಹತ್ಯಾಗ ಮಾಡಿ ಇಂದಿಗೆ 9 ದಿನಗಳು ಆಗಿದೆ. 11ನೇ ದಿನವಾದ ಗುರುವಾರ ಶ್ರೀಗಳ ಪುಣ್ಯಾರಾಧನೆ ನಡೆಯಲಿದೆ. ಈ ಹಿನ್ನೆಲೆ ಮಠದಲ್ಲಿ ಸಕಲ ತಯಾರಿ ನಡೆಯುತ್ತಿದೆ. ಶ್ರೀಗಳ ಪುಣ್ಯಸ್ಮರಣೆಗೆ ರಾಜ್ಯದೆಲ್ಲೆಡೆಯಿಂದ ಭಕ್ತರು ಅನ್ನದಾಸೋಹಕ್ಕೆ ಬೇಕಾದ ದಿನಸಿ ಸಾಮಾಗ್ರಿಗಳನ್ನು ಮಠಕ್ಕೆ ಅರ್ಪಿಸಿ ತಮ್ಮ ಭಕ್ತಿ ಮೆರೆಯುತ್ತಿದ್ದಾರೆ.

    ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆಗೆ ಶ್ರೀಮಠ ಸಜ್ಜಾಗುತ್ತಿದೆ. ಗುರುವಾರ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಭಕ್ತರಿಗೆ ಭಕ್ಷ್ಯ ಭೋಜನಕ್ಕೆ ಸಿದ್ಧತೆ ನಡೆಯುತ್ತಿದೆ. ಮಠದ 4 ಅಡುಗೆ ಕೊಪ್ಪಲಿನಲ್ಲಿ 100ಕ್ಕೂ ಹೆಚ್ಚು ಅಡುಗೆ ಭಟ್ಟರು ವಿವಿಧ ಸಿಹಿ ತಿನಿಸುಗಳ ತಯಾರಿ ನಡೆಯುತ್ತಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ಸಾಧ್ಯತೆ ಇದೆ. ಮಠದ ಆವರಣದಲ್ಲಿ ಸುಮಾರು ಹತ್ತು ಕಡೆ ಅನ್ನ ದಾಸೋಹಕ್ಕೂ ಸಿದ್ಧತೆ ನಡೆದಿದೆ. ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಶ್ರೀಗಳ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ದಿನಸಿ ಸಾಮಾಗ್ರಿಗಳು ಹರಿದು ಬರುತ್ತಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ ಸೇರಿದಂತೆ ನಾನಾ ಭಾಗಗಳಿಂದ ಭಕ್ತರು ಸ್ವಯಂ ಪ್ರೇರಿತರಾಗಿ ಸಾವಿರಾರು ಕ್ವಿಂಟಾಲ್ ಅಕ್ಕಿ, ಬೇಳೆ, ಬೆಲ್ಲ, ತರಕಾರಿ ತಂದು ಕೊಡುತ್ತಿದ್ದಾರೆ. ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಠದ ವಿದ್ಯಾರ್ಥಿಗಳು, ಸಂಸ್ಥೆಯ ಶಿಕ್ಷಕರು, ಭಕ್ತಾಧಿಗಳು ಸ್ವಯಂ ಪ್ರೇರಿತರಾಗಿ ಸಿದ್ಧತೆಯಲ್ಲಿ ತಲ್ಲೀನರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳು ಇಲ್ಲದ ರಾತ್ರಿ ಕಳೆದ ಮಠದ ಮಕ್ಕಳು- ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿದ್ರು

    ಶ್ರೀಗಳು ಇಲ್ಲದ ರಾತ್ರಿ ಕಳೆದ ಮಠದ ಮಕ್ಕಳು- ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿದ್ರು

    ತುಮಕೂರು: ಸಿದ್ದಗಂಗಾ ಶ್ರೀ ಶಿವೈಕ್ಯಗೊಂಡ ಹಿನ್ನಲೆಯಲ್ಲಿ ಮಠದ ಮಕ್ಕಳು ಶ್ರೀಗಳು ಇಲ್ಲದ ರಾತ್ರಿಯನ್ನು ಕಳೆದಿದ್ದಾರೆ. ಒಬ್ಬರಿಗೆ ಒಬ್ಬರು ಆಸರೆಯಾಗಿ ಮಲಗಿರುವ ದೃಶ್ಯ ಮನಕಲುಕುವಂತೆ ಇತ್ತು.

    ಸೋಮವಾರ ಶ್ರೀಗಳು ಶಿವೈಕ್ಯ ವಿಚಾರ ತಿಳಿದು ಮಕ್ಕಳು ಭಾವುಕರಾಗಿದ್ದರು. ಸಿದ್ದಗಂಗಾ ಮಠದಲ್ಲೇ ಮಕ್ಕಳು ರಾತ್ರಿಯನ್ನು ಕಳೆದಿದ್ದಾರೆ. ಅಲ್ಲದೇ ಮಠದಲ್ಲೇ ಸಾವಿರಾರು ಭಕ್ತರು ಮಲಗಿದ್ದರು. ಬೇರೆ ಬೇರೆ ಜಿಲ್ಲೆಗಳಿಂದ ಶ್ರೀಗಳ ದರ್ಶನಕ್ಕೆ ಬಂದ ಭಕ್ತರು ಹೊಸ ಮಠದ ಆವರಣ ಸೇರಿದಂತೆ ಹಲವೆಡೆ ಮಲಗಿದ್ದರು.

    ಸಿದ್ದಗಂಗಾ ಮಠದ ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದೊಳಗೆ ಸಾಮೂಹಿಕ ಪ್ರಾರ್ಥನೆ ನಡೆಸಿದ್ದಾರೆ. ಪ್ರಾಣಿಗಳನ್ನು ಅತಿಯಾಗಿ ಪ್ರೀತಿಸುತ್ತಿದ್ದ ಶ್ರೀಗಳು ಮಠದ ಆವರಣದಲ್ಲಿ ಅನೇಕ ಬೀದಿನಾಯಿಗಳಿಗೆ ಖುದ್ದು ಆಹಾರ ನೀಡುತ್ತಿದ್ದರು. ಇಂದು ವಿದ್ಯಾರ್ಥಿಗಳ ಪ್ರಾರ್ಥನೆಯ ಸಮಯದಲ್ಲಿ ಶಾಲಾ ಅವರಣದಲ್ಲಿ ನಾಯಿಯೊಂದು ಮಲಗಿದ್ದ ದೃಶ್ಯ ಕಂಡುಬಂತು.

    ಪ್ರತಿದಿನ ಬೆಳಗ್ಗೆ ಶಿವಕುಮಾರ ಸ್ವಾಮಿಜಿಗಳೇ ಮಕ್ಕಳಿಗೆ ಪ್ರಾರ್ಥನೆ ಹೇಳಿಕೊಡುತ್ತಿದ್ದರು. ಆದರೆ ಈಗ ಅವರ ಅಗಲಿಕೆಯಿಂದಾಗಿ ಮಕ್ಕಳು ಗೋಸಲ ಸಿದ್ದೇಶ್ವರ ವೇದಿಕೆ ಮುಂದೆ ಪ್ರಾರ್ಥನೆ ಮಾಡುತ್ತಿದ್ದಾರೆ. ಶಾಲಾ ಮಕ್ಕಳು ಶ್ರೀಗಳನ್ನು ನೆನೆದು ಬೆಳಗಿನ ಪ್ರಾರ್ಥನೆ ಸಲ್ಲಿಸಿದ್ದಾರೆ. ಸೋಮವಾರ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ವಿಷಯ ತಿಳಿದು ಮಠದ ಮಕ್ಕಳು ಬಿಕ್ಕಳಿಸಿ ಸುಡುಬಿಸಿಲಿನಲ್ಲಿಯೇ ನಿಂತು ಅಳುತ್ತಿದ್ದರು.

    ಶ್ರೀಗಳು ತಮ್ಮ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ತಾವು ಮೃತಪಟ್ಟರೆ ಮಕ್ಕಳು ಮಧ್ಯಾಹ್ನದ ಭೋಜನವನ್ನು ಸ್ವೀಕರಿಸಿದ ಬಳಿಕವಷ್ಟೇ ಘೋಷಣೆ ಮಾಡಬೇಕು. ಯಾಕಂದ್ರೆ ಅವರು ಹಸಿವಿನಿಂದ ಇರುವುದು ತಮಗೆ ಇಷ್ಟವಿಲ್ಲ ಎಂದು ಮಠದ ಸಿಬ್ಬಂದಿ ಬಳಿ ತಮ್ಮ ಕೊನೆಯ ಆಸೆಯನ್ನು ಹೇಳಿಕೊಂಡಿದ್ದರು. ಹಾಗಾಗಿ ಸೋಮವಾರ ಶ್ರೀಗಳು ಬೆಳಗ್ಗೆ 11.44ಕ್ಕೆ ಶಿವೈಕ್ಯರಾದ್ರೂ ಮಠದ ಸಿಬ್ಬಂದಿ, ಮಕ್ಕಳು ಊಟ ಮಾಡಿದ ಮೇಲೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಅಂದರೆ ಸುಮಾರು ಮಧ್ಯಾಹ್ನ 1.56ಕ್ಕೆ ವೈದ್ಯರು ಶ್ರೀಗಳು ಸಾವಿನ ವಿಚಾರವನ್ನು ಘೋಷಣೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಮಠದ ದಾಸೋಹ ಒಂದು ಪವಾಡ – ಒಲೆಯ ಬೆಂಕಿ ಒಂದು ದಿನವೂ ಆರಿಲ್ಲ

    ಸಿದ್ದಗಂಗಾ ಮಠದ ದಾಸೋಹ ಒಂದು ಪವಾಡ – ಒಲೆಯ ಬೆಂಕಿ ಒಂದು ದಿನವೂ ಆರಿಲ್ಲ

    ಸಿದ್ದಗಂಗಾ ಮಠದ ಅಡುಗೆಮನೆಯ ಒಲೆಯ ಬೆಂಕಿ ಒಂದು ದಿನವೂ ಆರಿಲ್ಲ. ಅದು ಎಂದಿಗೂ ಆರಿಲ್ಲ. ಆರುವುದು ಇಲ್ಲ. ಯಾಕೆಂದ್ದರೆ ಅದು ಬರಿಯ ಒಣಸೌದೆಯ ಉರಿಯಲ್ಲ, ಮಹಾ ತಪಸ್ವಿಗಳ ಸತ್ಸಂಕಲ್ಪದ ನಿತ್ಯ ಜ್ಯೋತಿ.

    ಸಿದ್ದಗಂಗಾ ಮಠದ ದಾಸೋಹ ಶ್ರೀ ಅಟವಿ ಸ್ವಾಮಿಗಳ ಕಾಲದಿಂದಲೂ ನಡೆದುಕೊಂಡು ಬಂದಿದೆ. ಶಿವಕುಮಾರ ಸ್ವಾಮೀಜಿಗಳ ಕಾಲಕ್ಕೆ ದಾಸೋಹ ಸೇವೆ ಲೋಕಸೋಜಿಗದ ಮಹಾಮನೆಯಾಗಿ ಬದಲಾಗಿದೆ. ದಾಸೋಹದ ಅಡಿಗೆಯ ಮನೆಯ ಒಲೆಯ ಉಜ್ವಲವಾಗಿ ಉರಿಯುತ್ತಿದೆ ಹಸಿದ ಹೊಟ್ಟೆಯ ತಣಿಸಲು. ಪವಾಡ ಎಂದರೆನು ಅಂದ್ರೆ ಸಿದ್ಧಗಂಗಾ ಮಠದ ದಾಸೋಹ ದೃಶ್ಯವನ್ನು ತೋರಿಸಿಬಿಡುವಷ್ಟು ಮಟ್ಟಿಗೆ ಇದೆ. ಅನ್ನದೇವರ ಬಿಟ್ಟು ಇನ್ನು ದೇವರಿಲ್ಲ ಅನ್ನುವ ಅನುಭವವಾಣಿಯ ಸತ್ಯವನ್ನು ಕಂಡುಕೊಂಡ ಶ್ರೀಗಳು ದಾಸೋಹಸೇವೆಯನ್ನು ದೇವರ ಸೇವೆ ಅಂತಾ ಭಾವಿಸಿದ್ರು.

    ಪ್ರತಿ ನಿತ್ಯ ದಾಸೋಹಕ್ಕೆ (ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ) 40 ಕ್ವಿಂಟಾಲ್ ಅಕ್ಕಿ, 20 ಕ್ವಿಂಟಾಲ್ ರಾಗಿ, ಸುಮಾರು 10 ಕ್ವಿಂಟಾಲ್ ಕಾಳು ಬೇಳೆ, ಇವುಗಳ ಪ್ರಮಾಣಕ್ಕೆ ಅನುಗುಣವಾಗಿ ಸಾಂಬಾರುಪುಡಿ, ತೆಂಗಿನಕಾಯಿ, ಈರುಳ್ಳಿ, ಎಣ್ಣೆ ಹಾಲು, ಬೆಲ್ಲ ಸಕ್ಕರೆ, ಹೀಗೆ ನೂರಾರು ಕೆಜಿ ಲೆಕ್ಕದಲ್ಲಿ ಪದಾರ್ಥಗಳು ಬೇಕಾಗುತ್ತದೆ. ಇದನ್ನೂ ಓದಿ: ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದ ನಡೆದಾಡುವ ದೇವರು!

    ಮಠದ ದಾಸೋಹ ಕೇಂದ್ರ ಅಕ್ಷಯ ಪಾತ್ರೆಯಾಗಿ ಸೋಜಿಗವಾಗಿ ಬದಲಾಗಿದೆ. ಆದ್ರೆ ಆರಂಭದಲ್ಲಿ ಸಾಕಷ್ಟು ಕಷ್ಟಪಟ್ಟು ಸ್ವಾಮೀಜಿ ದಾಸೋಹ ಕೇಂದ್ರದ ಅಭಿವೃದ್ಧಿಗೆ ಕಟಿಬದ್ಧರಾಗಿ ನಿಂತಿದ್ದಾರೆ. ಸಿದ್ದಗಂಗಾದ ಮಠದಲ್ಲಿ ನಿತ್ಯ ಎಂಟುಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಇಲ್ಲಿ ನಿತ್ಯ ದಾಸೋಹ, ಜೊತೆಗೆ ಯಾತ್ರಿಕರಿಗೂ ಅನ್ನದಾನ.  ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ 111 ಸಾಧನೆಗಳು ಹಾಗೂ ವೈಶಿಷ್ಟಗಳು

    ಸಿದ್ದಗಂಗಾ ಮಠದ ದಾಸೋಹದ ಮನೆಗೆ ಭಕ್ತರು ಸ್ವಯಂ ಇಚ್ಛೆಯಿಂದ ಬಂದು ತಮ್ಮ ಪಾಲಿನ ಅಳಿಲು ಸೇವೆ ಸಲ್ಲಿಸುವುದು ನಿಜಕ್ಕೂ ಊಹೆಗೂ ನಿಲುಕದ ಸೇವೆ. ಬಡರೈತರು ಸಹ ತಾವು ಬೆಳೆದಿದ್ದರಲ್ಲಿ ಮೊದಲ ಪಾಲು ದಾಸೋಹದ ಕೊಪ್ಪರಿಗಾಗಿ ಮೀಸಲಿಡುತ್ತಾರೆ. ಕಾಣಿಕೆಯಂತೆ ಸಮರ್ಪಿಸುತ್ತಾರೆ. ಶ್ರೀಮಠದ ಹಿಂದಿರುವ ಕಟ್ಟಿಗೆ ರಾಶಿ ತಾನು ಉರಿದು ಸಹಸ್ರಾರು ಮಕ್ಕಳಿಗೆ ಪ್ರಸಾದ ಅಣಿಮಾಡಿ ಪ್ರಸನ್ನತೆ ನೀಡುತ್ತದೆ. ಸಾಮೂಹಿಕ ಭೋಜನ ಅನ್ನುವುದೇ ಒಂದು ಭಾವಪೂರ್ಣ ಸೇತುವೆ.

    https://www.youtube.com/watch?v=2lK_EgaS96U

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

    ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

    ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್ ಒಡೆಯರ್, ನಾನು ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದೆ. ಹಾಗೇ ಶ್ರೀಗಳನ್ನು ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಅಂತ ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡ್ತೇನೆ. ಶ್ರೀಗಳು ವಿಶ್ರಾಂತಿಯಲ್ಲಿದ್ದರಿಂದ ಅವರನ್ನು ಎಚ್ಚರಿಸಲು ಹೋಗಲಿಲ್ಲ. ಅವರ ಜೊತೆ ಮಾತನಾಡುವ ಅವಕಾಶ ಸಿಗಲಿಲ್ಲ. ಹಾಗಾಗಿ ನಾನು ಅವರ ಆಶೀರ್ವಾದ ಪಡೆದುಕೊಂಡು, ಅವರನ್ನು ನೋಡಿಕೊಂಡು ಬಂದೆ” ಎಂದು ಹೇಳಿದರು.

    ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

    ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರೆಸಿದ್ದೇವೆ. ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಆಪರೇಷನ್ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

    ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

    ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ.

    ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್ ಮಾಡಬೇಕಂತ ಮಠದ ಹಿರಿಯರು ಹಾಗೂ ಎಸ್‍ಪಿ ಸೇರಿ ಸಭೆ ನಡೆಸಿ ನಿರ್ಧಾರ ಮಾಡಿದ್ದೇವು. ಆದರೆ ರಾತ್ರಿಯಿಂದ ಸ್ವಾಮೀಜಿಗಳು ಮಠಕ್ಕೆ ಹೋಗಬೇಕೆಂದು ಚಡಪಡಿಸುತ್ತಿದ್ದರು. ಆದ್ದರಿಂದ ಬೆಳಗಿನ ಜಾವ ಈ ರೀತಿ ನಿರ್ಧಾರ ತೆಗೆದುಕೊಂಡು ಶಿಫ್ಟ್ ಮಾಡಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ.

    ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಹೋಗುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ಶ್ರೀಗಳನ್ನು ಮಠಕ್ಕೆ ಶಿಫ್ಟ್ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆ ಮಠದಲ್ಲೇ ಮುಂದುವರಿಸಿದ್ದೇವೆ. ನಿಶ್ಯಕ್ತಿ ಮತ್ತು ಉಸಿರಾಟದ ತೊಂದರೆ ಹೊರತುಪಡಿಸಿದರೆ ಬೇರೆ ಎಲ್ಲಾ ಪ್ಯಾರಾಮೀಟರ್ಸ್ ಸರಿಯಾಗಿದೆ. ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ. ಆಪರೇಷನ್ ಮಾಡಿದ ಗಾಯ ವಾಸಿಯಾಗಿದೆ. ಭಕ್ತಾದಿಗಳು ಆತಂಕಪಡುವ ಅವಶ್ಯ ಇಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಇತ್ತ ಶ್ರೀಮಠದಲ್ಲಿ ವಿದ್ಯಾರ್ಥಿಗಳು ಜಮಾವಣೆಯಾಗಿದ್ದು, ಶ್ರೀಗಳ ದರ್ಶನ ಪಡೆಯುವ ಕಾತರ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಂಧನ ಭೀತಿಯಲ್ಲಿ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ

    ಬಂಧನ ಭೀತಿಯಲ್ಲಿ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ

    ವಿಜಯಪುರ: ಜಿಲ್ಲೆಯ ಕೋಲಾರ ಪಟ್ಟಣದಲ್ಲಿರುವ ದಿಗಂಬರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ಅವರಿಗೆ ಬಂಧನದ ಭೀತಿ ಎದುರಾಗಿದೆ.

    ಕೋಲಾರದವರಾದ ಸುವರ್ಣ ಶಿರಾನಿ ಎಂಬವರ ಮಗ ಬಸವರಾಜು ಕಳೆದ ತಿಂಗಳು 20ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಸಾವಿಗೆ ಸಂಬಂಧಿಸಿದಂತೆ ಕೋಲ್ಹಾರದ ದಿಗಂಬರೇಶ್ವರ ಮಠದ ಕಲ್ಲಪ್ಪಯ್ಯ ಅಲಿಯಾಸ್ ಕಲ್ಲಿನಾಥ ಸ್ವಾಮೀಜಿ, ಸಹೋದರ ಸಂಕಪ್ಪಯ್ಯ ಮತ್ತು ರವಿಂದ್ರ ಶಿರಾನಿ ಕಿರುಕುಳ ಕಾರಣ ಎಂದು ಕೋಲ್ಹಾರ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 22 ರಂದು ಸುವರ್ಣ ಶಿರಾನಿ ದೂರು ದಾಖಲಿಸಿದ್ದರು.

                                   ರವಿಂದ್ರ ಶಿರಾನಿ

    ಪೊಲೀಸರು ಆರೋಪಿಗಳು ಪಟ್ಟಣದಲ್ಲೆ ಓಡಾಡಿದರು ಬಂಧಿಸಿರಲಿಲ್ಲ. ನಂತರ ಸ್ವಾಮೀಜಿ ಸೇರಿದಂತೆ ಆರೋಪಿಗಳು ಜಿಲ್ಲಾ ಸೆಷನ್ಸ್ ಕೋರ್ಟ್‍ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸ್ವಾಮೀಜಿಯ ಅರ್ಜಿ ವಜಾಗೊಳಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಕೋರ್ಟ್ ಆದೇಶ ನೀಡಿದೆ.

                                                                                        ಸಂಕಪ್ಪಯ್ಯ

    ಇದರಿಂದ ಬಂಧನದ ಭೀತಿಯಿಂದ ಕಲ್ಲಿನಾಥ ಸ್ವಾಮೀಜಿ ಮಠದಿಂದ ಕಾಲ್ಕಿತ್ತಿದ್ದಾರೆ. ದೂರು ದಾಖಲಾಗಿ 20 ದಿನಗಳಾದರೂ ಬಂಧಿಸದ ಕೋಲಾರ ಠಾಣೆ ಪೊಲೀಸರ ವಿರುದ್ಧ ಬಸವರಾಜು ತಾಯಿ ಸುವರ್ಣ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv