Tag: ಮಡೆನೂರು ಮನು

  • `ಮುತ್ತರಸ’ನಾದ ಮಡೆನೂರು ಮನು

    `ಮುತ್ತರಸ’ನಾದ ಮಡೆನೂರು ಮನು

    ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ಮಡೆನೂರು ಮನು, ʻಕುಲದಲ್ಲಿ ಕೀಳ್ಯಾವುದೊʼ ಚಿತ್ರದ ಮೂಲಕ ನಾಯಕನಾದರು. ಪ್ರಸ್ತುತ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮನು (Madenur Manu), ತಮ್ಮ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ.

    ಚಿತ್ರಕ್ಕೆ ʻಮುತ್ತರಸʼ (Muttarasa) ಎಂದು ಹೆಸರಿಡಲಾಗಿದೆ. ಜೆ.ಕೆ ಮೂವೀಸ್ ಲಾಂಛನದಲ್ಲಿ ಕೆ.ಎಂ ನಟರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಖ್ಯಾತ ನಟ ವಸಿಷ್ಠ ಸಿಂಹ (Vasishta Simha), ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿ ಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಅವರು ಶೀರ್ಷಿಕೆ ಅನಾವರಣ ಮಾಡಿದರು. ನಂತರ ಸಿನಿಮಾ ತಂಡದವರು ಹಾಗೂ ಗಣ್ಯರು ಮಾತನಾಡಿದರು.

    ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರಋಣಿ. ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ಅನಾವರಣ ಮಾಡಿಕೊಟ್ಟ ವಸಿಷ್ಠ ಸಿಂಹ ಅವರು ಸೇರಿದಂತೆ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ. ನಾನು ವಸಿಷ್ಠ ಸಿಂಹ ಅವರೊಟ್ಟಿಗೆ ʻತಲ್ವಾರ್ ಪೇಟೆʼ ಚಿತ್ರದಲ್ಲಿ ನಟಿಸಿದ್ದೇನೆ. ಇನ್ನೂ ʻಮುತ್ತರಸʼ ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್ ಅವರು. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಈ ಸಂದರ್ಭದಲ್ಲಿ ಎನ್‌.ಆರ್ ರಮೇಶ್, ಶಿವಕುಮಾರ್ ನಾಯಕ್, ಯೋಗರಾಜ್ ಭಟ್ ಹಾಗೂ ನನ್ನ ಹಿಂದಿನ ಚಿತ್ರದ ನಿರ್ಮಾಪಕರಾದ ಸಂತೋಷ್ ಕುಮಾರ್, ವಿದ್ಯಾ ಮತ್ತು ನಿರ್ದೇಶಕ ರಾಮ್ ನಾರಾಯಣ್ ಅವರನ್ನು ನೆನೆಯುತ್ತೇನೆ ಎಂದು ತಿಳಿಸಿದ ನಟ ಮಡೆನೂರ್ ಮನು, ಈ ವರ್ಷದ ಕೊನೆಗೆ ನಾನು ನಟಿಸಿರುವ ʻವಿಚಾರಣೆʼ ಚಿತ್ರ ಸಹ ತೆರೆಗೆ ಬರಲಿದೆ ಎಂದು ತಿಳಿಸಿದರು.

    ಮನು ನನ್ನ ಹಿಂದಿನ ನಿರ್ಮಾಣದ ಚಿತ್ರದಲ್ಲೂ ನಟಿಸಿದ್ದರು. ಈಗ ನನ್ನ, ಅವರ ಕಾಂಬಿನೇಷನ್ ನಲ್ಲಿ ಎರಡನೇ ಚಿತ್ರ ಮೂಡಿ ಬರುತ್ತಿದೆ. ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದು ʻಮುತ್ತರಸʼ ಚಿತ್ರದ ನಿರ್ಮಾಪಕ ನಟರಾಜ್ ತಿಳಿಸಿದರು.

  • ಮಡೆನೂರು ಮನುಗೆ ಹೇರಿದ್ದ ಅಸಹಕಾರ ತೆರವು – ಫಿಲ್ಮ್ ಚೇಂಬರ್ ವಾರ್ನಿಂಗ್

    ಮಡೆನೂರು ಮನುಗೆ ಹೇರಿದ್ದ ಅಸಹಕಾರ ತೆರವು – ಫಿಲ್ಮ್ ಚೇಂಬರ್ ವಾರ್ನಿಂಗ್

    ಕಾಮಿಡಿ ನಟ ಮಡೆನೂರು ಮನು (Madenuru Manu) ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಆಚೆ ಬಂದಿದ್ದಾರೆ. ಜೈಲು ಸೇರಿದ ಮೇಲೆ ಅವರ ಮೇಲೆ ಸಾಕಷ್ಟು ಆರೋಪ ಕೇಳಿ ಬಂದಿದ್ದವು. ಸ್ಯಾಂಡಲ್‍ವುಡ್‍ನ ನಟರ ಸಾವಿನ ಬಗ್ಗೆ ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ಹಿನ್ನೆಲೆ ಫಿಲ್ಮ್ ಚೇಂಬರ್‌ಗೆ (Film Chamber) ಅವರ ಅಭಿಮಾನಿಗಳು ದೂರು ನೀಡಿದ್ರು. ಕಾಮಿಡಿ ನಟನನ್ನ ಶಾಶ್ವತವಾಗಿ ಬ್ಯಾನ್ ಮಾಡುವಂತೆ ಒತ್ತಾಯಿಸಲಾಗಿತ್ತು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಬಂದ ಹಿನ್ನೆಲೆ ಕಾಮಿಡಿ ನಟ ಮಡೆನೂರು ಮನು ಅವರಿಗೆ ಚಿತ್ರರಂಗದಲ್ಲಿ ಹಾಗೂ ಕಿರುತೆರೆಯಲ್ಲಿ ಅಸಹಕಾರ ತೋರುವಂತೆ ಫಿಲ್ಮ್ ಚೇಂಬರ್ ನಿರ್ಧಾರ ಮಾಡಿತ್ತು. ಇದೀಗ ತಮ್ಮ ತಪ್ಪಿನ ಅರಿವಾಗಿ ನಟರಿಗೆ ಕ್ಷಮೆ ಕೋರಿ ಪತ್ರ ಬರೆದಿದ್ದ ಕಾಮಿಡಿ ನಟ ಇದೀಗ ಫಿಲ್ಮ್ ಚೇಂಬರ್‌ಗೂ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: BBK 12 | ಈ ಬಾರಿ ಬಿಗ್‌ ಬಾಸ್‌ನಲ್ಲಿ ವಿವಾದಿತರಿಗೆ ನೋ ಎಂಟ್ರಿ?

    ತಮ್ಮ ಮೇಲೆ ಹೇರಿದ್ದ ಅಸಹಕಾರವನ್ನ ತೆರುವುಗೊಳಿಸಿ, ಮುಂದಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ, ಕಿರುತೆರೆಯಲ್ಲಿ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಕೋರಿ ಫಿಲ್ಮ್ ಚೇಂಬರ್‌ಗೆ ಮನವಿ ಮಾಡಿದ್ದಾರೆ ಕಾಮಿಡಿ ನಟ ಮನು. ಕಾಮಿಡಿ ನಟನ ಮನವಿಯನ್ನ ಸ್ವೀಕರಿಸಿದ ಫಿಲ್ಮ್ ಚೇಂಬರ್ ಎಚ್ಚರಿಕೆ ಕೊಟ್ಟು ಮುಂದೆ ಈ ರೀತಿಯಾದ ತಪ್ಪು ಮರುಕಳಿಸಬಾರು ಎಂದು ಹೇಳಿದೆ.

    ಮುಂದಿನ ದಿನಗಳಲ್ಲಿ ಚಿತ್ರರಂಗದಲ್ಲಿ ತೊಡಗಿಕೊಳ್ಳಬಹುದು ಎಂದು ಹೇಳಿದೆ. ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇನೆ ಎಂದು ಮನು ಕೂಡಾ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: BBK 12 | ʻಬಿಗ್‌ ಬಾಸ್‌ʼ ಬಿಗ್ ಅಪ್‌ಡೇಟ್ – 12ನೇ ಸೀಸನ್‌ಗೂ ಕಿಚ್ಚನ ನಿರೂಪಣೆ ಫಿಕ್ಸ್‌

  • ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

    ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

    ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು (Madenur Manu) ಶನಿವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

    ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ಮನು ಇಂದು ರಿಲೀಸ್ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಸಹ ಕಲಾವಿದೆಯ ಮೇಲೆ ರೇಪ್‌ – ಮಡೆನೂರು ಮನು ಜೈಲುಪಾಲು

    ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಯ್ತು. ನನ್ನ ವಿರುದ್ಧ ಪ್ರತಿ ಹಂತದಲ್ಲಿಯೂ ಷಡ್ಯಂತ್ರ ನಡೆದಿದೆ. ಸಿನಿಮಾ ರಿಲೀಸ್‌ಗೂ ಮೊದಲೇ ಕುಣಿಗಲ್ ಬಳಿ ಮೊಟ್ಟೆ ಹೊಡೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದಿದ್ದಾರೆ. ಅವರೇ ನನ್ನ ಮೇಲೆ ಕೇಸ್ ಮಾಡಿದ್ದಾರೆ. ಏನೇ ಆದರೂ ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಮಡೆನೂರು ಮನು ರೇಪ್ ಕೇಸ್ – 31 ತಿಂಗಳ ವಾಟ್ಸಾಪ್ ಚಾಟ್ ಪಡೆದಿರೋ ಪೊಲೀಸರು

    ಅತ್ಯಾಚಾರ ಕೇಸ್‌ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

  • ಸಹ ಕಲಾವಿದೆಯ ಮೇಲೆ ರೇಪ್‌ – ಮಡೆನೂರು ಮನು ಜೈಲುಪಾಲು

    ಸಹ ಕಲಾವಿದೆಯ ಮೇಲೆ ರೇಪ್‌ – ಮಡೆನೂರು ಮನು ಜೈಲುಪಾಲು

    ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ (Rape) ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು (Madenur Manu) ಜೈಲುಪಾಲಾಗಿದ್ದಾರೆ. ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ.

    5 ದಿನಗಳ ಪೊಲಿಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಇದನ್ನೂ ಓದಿ: ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ

    ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.

    ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ಇದನ್ನೂ ಓದಿ: ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌

    ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್‌ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

  • ನಟ ಮಡೆನೂರು ಮನು ರೇಪ್ ಕೇಸ್ – 31 ತಿಂಗಳ ವಾಟ್ಸಾಪ್ ಚಾಟ್ ಪಡೆದಿರೋ ಪೊಲೀಸರು

    ನಟ ಮಡೆನೂರು ಮನು ರೇಪ್ ಕೇಸ್ – 31 ತಿಂಗಳ ವಾಟ್ಸಾಪ್ ಚಾಟ್ ಪಡೆದಿರೋ ಪೊಲೀಸರು

    ಬೆಂಗಳೂರು: ಮಡೆನೂರು ಮನು(Madenur Manu) ಅತ್ಯಾಚಾರ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು, ಬರೋಬ್ಬರಿ 31 ತಿಂಗಳ ಚಾಟಿಂಗ್ ಡಿಟೇಲ್ಸ್ ಪಡೆದುಕೊಂಡಿದ್ದಾರೆ.

    ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದಂತೆ ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ. ದೂರಿನಲ್ಲಿ ಮದುವೆ ಹೆಸರಿನಲ್ಲಿ ಅತ್ಯಾಚಾರ ಎಸಗಿ ದೈಹಿಕ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆಂದು ಉಲ್ಲೇಖಿಸಿದ್ದರು. ಪ್ರಕರಣ ಸಂಬಂಧ ಆರೋಪಿ ಮಡೆನೂರು ಮನುವನ್ನು ಪೊಲೀಸರು ಕಸ್ಟಡಿಗೆ ಪಡೆದು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ನಟನ 2 ಮೊಬೈಲ್ ಹಾಗೂ ಸಂತ್ರಸ್ತೆಯ 2 ಫೋನ್ ವಶಕ್ಕೆ ಪಡೆದು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಇನ್ನು ಸಂತ್ರಸ್ತೆ ಹಾಗೂ ನಟನ ನಡುವಿನ ಆಡಿಯೋ, ವೀಡಿಯೋ ಸಂಭಾಷಣೆಯಲ್ಲಿ ಹಲವು ನಟ, ನಟಿಯರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರು ತನಿಖೆಯ ಭಾಗವಾಗಿ ಕೆಲ ಕಿರುತೆರೆ ನಟ, ನಟಿ ಸೇರಿ ಸಿನಿತಾರೆಯರ ಹೇಳಿಕೆ ದಾಖಲಿಸಲು ಸಿದ್ಧತೆ ನಡೆಸಲಾಗಿದೆ.

  • ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಮಡೆನೂರು ಮನು ವಿವಾದದಲ್ಲಿ ಅಪ್ಪಣ ಹೆಸರು ತಳುಕು – ನಟ ಹೇಳಿದ್ದೇನು?

    ಸಂತ್ರಸ್ತೆ ನಟಿ ಕಿರುಕುಳ ಆರೋಪ ಸುಳ್ಳು- ವೈರಲ್ ಆಡಿಯೋ ಬಗ್ಗೆ ಅಪ್ಪಣ್ಣ ಸ್ಪಷ್ಟನೆ

    ಡೆನೂರು ಮನು (Madenoor Manu) ಅತ್ಯಾಚಾರ ಪ್ರಕರಣ ಭುಗಿಲೆದ್ದಿರೋ ಬೆನ್ನಲ್ಲೇ ನಟ ಅಪ್ಪಣ್ಣ ರಾಮದುರ್ಗ (Appanna Ramadurga) ವಿರುದ್ಧವು ಕೇಳಿಬಂದಿರೋ ಕಿರುಕುಳ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ವೈರಲ್ ಆಗಿರೋ ಆಡಿಯೋ ನನ್ನದಲ್ಲ. ಕಿರುಕುಳ ಆರೋಪ ಸುಳ್ಳು ಎಂದು ಅಪ್ಪಣ್ಣ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಿಮ್ಮ ಮಾಧ್ಯಮಗಳಲ್ಲೇ ಆಡಿಯೋ ಬಂತು. ಅದನ್ನು ಸಂತ್ರಸ್ತೆ ಸುಳ್ಳು ಅಂತ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. 2-3 ವರ್ಷದ ಹಳೆಯ ಆಡಿಯೋ. ಆ ಸಂತ್ರಸ್ತೆ, ಅಪ್ಪಣ್ಣ ಅವರದ್ದು ಯಾವುದೇ ಪಾತ್ರವಿಲ್ಲ. ನನ್ನ ಜೊತೆ ಶೋ ಮಾಡಬಾರದು ಅಂತ ಮನು ಒತ್ತಾಯಪೂರ್ವಕವಾಗಿ ಮಾಡಿಸಿರೋ ವಿಡಿಯೋ ಎಂದು ಮಾಧ್ಯಮಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಅದೇ ನಿಜ, ನನ್ನಿಂದ ಆ ಹುಡುಗಿಗೆ ಯಾವುದೇ ಸಮಸ್ಯೆ ಆಗಿಲ್ಲ ಎಂದಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!

    ನಾನು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು ಎಂದು ಅವರ ಕೈಯಲ್ಲಿ ಕಿರುಕುಳ ನೀಡ್ತಿರೋದಾಗಿ ಮನು ಸುಳ್ಳು ಆಡಿಯೋ ಮಾಡಿಸಿದ್ದರ ಬಗ್ಗೆ ಆಕೆ ಹೇಳಿದ್ದಾರೆ. ಮನುಗೆ ಆಗಲಿ ಆ ಸಂತ್ರಸ್ತೆ ಹುಡುಗಿಗೆ ಆಗಿರಲಿ ನನ್ನ ಮೇಲೆ ವೈಯಕ್ತಿಕವಾಗಿ ಏನಿತ್ತೋ ನನಗೆ ಗೊತ್ತಿಲ್ಲ.

    ಈ ವೇಳೆ, ನನಗೆ ಈ ರೀತಿ ಆಡಿಯೋ ಮಾಡಿಕೊಂಡಿರೋ ವಿಚಾರ ಮೊದಲೇ ಗೊತ್ತಿತ್ತು. ಎರಡು ವರ್ಷದ ಹಿಂದೆ ಸಂತ್ರಸ್ತೆ ಬಂದು ಆಡಿಯೋ ಬಗ್ಗೆ ಹೇಳಿದ್ದರು. ಆಗ ನಾನು ಹೀಗೆಲ್ಲಾ ಮಾಡಬಾರದು ಎಂದು ಬುದ್ಧಿ ಹೇಳಿ ಕಳುಹಿಸಿದ್ದೆ, ಕ್ಷಮೆ ಕೇಳಿ ಹೋಗಿದ್ದರು. ಈ ರೀತಿ ಆಡಿಯೋ ವೈರಲ್ ಆದಾಗ ನಮ್ಮ ಮನೆಯವರು ಸಹಜವಾಗಿ ಗಾಬರಿಯಾಗಿದ್ದರು. ಆಗ ನಾನೇ ಧೈರ್ಯ ಹೇಳಿದ್ದೇನೆ. ಮನು ಆರೋಪಿಸಿರುವ ಆ ಲೇಡಿ ಡಾನ್ ಯಾರು ಎಂದು ನನಗೆ ಗೊತ್ತಿಲ್ಲ. ಇದಕ್ಕೆ ಮನು ಅವರೇ ಕ್ಲ್ಯಾರಿಟಿ ನೀಡಬೇಕು ಎಂದಿದ್ದಾರೆ.

    ವೈರಲ್ ಆಗಿರುವ ಆಡಿಯೋದಲ್ಲಿ ಕಾಮಿಡಿ ಕಿಲಾಡಿಗಳು ಶೋನಲ್ಲಿ ಅಪ್ಪಣ್ಣ ರಾಮದುರ್ಗ ಅಂತ ಇದ್ದಾನೆ. ಅವರನು ‘ಕಾಮಿಡಿ ಕಿಲಾಡಿಗಳು’ ಸೀಸನ್ ಎರಡರಿಂದಲೂ ನನಗೆ ಸಿಕ್ಕಾಪಟ್ಟೆ ಟಾರ್ಚರ್ ಕೊಡ್ತಿದ್ದಾನೆ. ಶೋಗಳಿಗೆ ಕರೆದುಕೊಂಡು ಹೋಗಿ ಕೆಟ್ಟ ದೃಷ್ಟಿಯಲ್ಲಿ ನೋಡೋದು ಎಲ್ಲ ಮಾಡ್ತಿದ್ದ. ತುಂಬಾ ದಿನಗಳವರೆಗೆ ಅವುಗಳಿಂದ ನಾನು ತಪ್ಪಿಸಿಕೊಂಡು ಬರುತ್ತಿದ್ದೆ. ಇತ್ತೀಚೆಗೆ ಅವನ ಕಾಟ ಹೆಚ್ಚಾಗಿದ್ದು, ನನಗೆ ಅವನ ಕಿರುಕುಳ ತಪ್ಪಿಲ್ಲ ಎಂದು ಸಂತ್ರಸ್ತೆ ಹೇಳಿದ್ದರು ಎಂದು ಹೇಳಿಕೊಂಡಿದ್ದಾರೆ.

  • ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

    ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ

    ನಾನು ಒತ್ತಾಯಪೂರ್ವಕವಾಗಿ ದೂರು ನೀಡಿಲ್ಲ. ನಾನು ಸತ್ತರೂ ಯಾರು ಕಾರಣರಲ್ಲ ಎಂದು ಮಡೆನೂರು ಮನು (Madenur Manu Case) ರೇಪ್ ಕೇಸ್ ಬಗ್ಗೆ ಸಂತ್ರಸ್ತೆ ನಟಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದನ್ನೂ ಓದಿ:ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ

    ಸಂತ್ರಸ್ತೆ ನಟಿ ಹಂಚಿಕೊಂಡ ವಿಡಿಯೋದಲ್ಲಿ, ನಾನು ಒತ್ತಾಯಪೂರ್ವಕವಾಗಿ ದೂರು ನೀಡಿಲ್ಲ. ನಾನು ಸತ್ತರೂ ಯಾರು ಕಾರಣರಲ್ಲ. ಇದು ನನ್ನ ಸ್ವಂತ ಕಾರಣ. ನನ್ನ ಮನು ಮಧ್ಯೆ ಒಂದಷ್ಟು ಜಗಳ ಗೊಂದಲಗಳಿತ್ತು ನಿಜ. ಆದರೆ ಅವರ ಸಿನಿಮಾ ನಿರ್ಮಾಪಕರಿಗೆ ಮೆಸೇಜ್ ಮಾಡಿದ್ದು ತಪ್ಪು. ನಮ್ಮಿಬ್ಬರ ನಡುವಿನ ಜಗಳ ನಮ್ಮಲ್ಲೇ ಇರಬೇಕಿತ್ತು. ಸಿನಿಮಾಗೆ ತೊಂದರೆ ನೀಡುವ ಉದ್ದೇಶ ನನ್ನದಾಗಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌


    ಇದರಿಂದ ಸಿನಿಮಾಗೆ ತೊಂದರೆ ಆಗ್ತಿದೆ ಅಂತ ನನಗೆ ಗೊತ್ತಾಯ್ತು. ಬಳಿಕ ಅವರು ಲಾಯರ್‌ನ ಮೀಟ್ ಮಾಡಿಸಿ ನಮ್ಮ ತಪ್ಪಿನ ಬಗ್ಗೆ ಅರಿವು ಮಾಡಿಸಿದ್ದರು. ನಾನು ಸತ್ತರೂ ಕೂಡ ಇದಕ್ಕೆ ಯಾರು ಕಾರಣರಲ್ಲ. ಇದು ನನ್ನ ಸ್ವಂತ ನಿರ್ಧಾರ. ಮನುನೇ ಆಗಲಿ, ಚಿತ್ರದ ನಿರ್ಮಾಪಕರಾಗಲಿ ಯಾರು ಕಾರಣರಲ್ಲ. ಯಾರು ಒತ್ತಾಯಪೂರ್ವಕವಾಗಿ ದೂರು ನೀಡಿಸಿಲ್ಲ. ಹಾಗೆಯೇ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ವಿಡಿಯೋ ಮೂಲಕ ಸಂತ್ರಸ್ತೆ ನಟಿ ಹೇಳಿದ್ದಾರೆ.

    ಚಿತ್ರತಂಡಕ್ಕೆ ಕ್ಷಮೆಯಾಚಿಸಿರುವ ಸಂತ್ರಸ್ತೆ ಎಲ್ಲಿಯೂ ಕೂಡ ವಿಡಿಯೋದಲ್ಲಿ ತಾವು ಕೊಟ್ಟಿರುವ ದೂರನ್ನ ಹಿಂಪಡೆಯುವ ಬಗ್ಗೆ ಪ್ರಸ್ತಾಪಿಸಿಲ್ಲ.

  • ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ

    ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ

    – ನಾನು ಆತ್ಮಹತ್ಯೆಗೂ ಯತ್ನಿಸಿದ್ದೆ
    – ಶನಿವಾರ ನನ್ನ ಖಾಸಗಿ ವಿಡಿಯೋ ಮಾಡಿದ್ದಕ್ಕೆ ದೂರು

    ಮ್ಮ ಅಪ್ಪಂಗೆ ಇಬ್ಬರೂ ಹೆಂಡ್ತಿರು, ತಾತನಿಗೂ ಇಬ್ಬರೂ ಹೆಂಡ್ತಿರು. ಹೀಗಾಗಿ ದೇವರೇ ನಮ್ಮನ್ನು ಜೋಡಿ ಮಾಡಿದ್ದಾನೆ. ಪ್ರಪಂಚದಲ್ಲಿ ಎರಡ್ಮೂರು ಮದುವೆ ಮಾಡಿಕೊಂಡವರು ಇಲ್ವಾ ಎಂದು ಹೇಳ್ತಿದ್ದ ಎಂದು ಮನು (Madenur Manu) ವಿರುದ್ಧ ಸಂತ್ರಸ್ತ ನಟಿ (Victim Actress) ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ:ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌

    ನಟ ಮನು ಬಗ್ಗೆ ಪಬ್ಲಿಕ್ ಟಿವಿಗೆ ಜೊತೆ ನಟಿ ಮಾತನಾಡಿ ಹಲವು ವಿಷಯಗಳನ್ನು ತಿಳಿಸಿದ್ದಾರೆ. ಮದುವೆ ಆಗ್ತೀನಿ ಅಂತ ಮಾತು ಕೊಟ್ಟಿದ್ದಕ್ಕೆ ನಾನು ಪದೇ ಪದೇ ಮೋಸ ಹೋದೆ. ಮನು ಮೊದಲು ಮಾಡಿದ್ದು ಅತ್ಯಾಚಾರ, ಮನೆಯವರನ್ನು ಒಪ್ಪಿಸಿ ಆಮೇಲೆ ಮದುವೆ ಆಗ್ತೀನಿ ಅಂತ ನಂಬಿಸುಸುತ್ತಲೇ ಬಂದಿದ್ದ. ಮಾರ್ಚ್ 31 ರವರೆಗೂ ಅವನು ಕೊಟ್ಟಿರುವ ದೈಹಿಕ ಟಾರ್ಚರ್ ಅನ್ನು ಸಹಿಸಿಕೊಂಡೇ ಬಂದಿದ್ದೇನೆ. ನನಗೆ ಬೇರೆ ಅವರೊಂದಿಗೆ ಜೀವನವಿತ್ತು, ಅದು ಅವನಿಗೆ ಗೊತ್ತಿತ್ತು. ಅದನ್ನು ಈಗ ಹಾಳು ಮಾಡಿದ್ದಾನೆ. 2022ರಲ್ಲಿ ಆಗಿರುವ ಘಟನೆಯನ್ನು ಇಟ್ಟುಕೊಂಡು ಈಗ ದೂರು ನೀಡಿದ್ದು ಯಾಕೆ ಎಂದು ಜನ ಕೇಳುತ್ತಿದ್ದಾರೆ. ಅವನು ನನ್ನ ಖಾಸಗಿ ವಿಡಿಯೋ ಮಾಡಿಕೊಂಡಿದ್ದಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌

    ನಟಿ ಹೇಳಿದ್ದೇನು?
    ಮೊದಲ ಬಾರಿಗೆ ಅತ್ಯಾಚಾರ ಆಗಿದ್ದಾಗ ಫುಲ್ ಶಾಕ್‌ನಲ್ಲಿದ್ದೆ, ಏನು ಮಾಡಬೇಕು ಎಂದು ನನಗೆ ತೋಚಲಿಲ್ಲ. ಆ ಸಮಯದಲ್ಲಿ 4 ಗೋಡೆ ಮಧ್ಯೆ ತಾಳಿ ಕಟ್ಟಿದ್ದ, 2 ವರ್ಷಗಳ ನಂತರ ಎಲ್ಲರ ಮುಂದೆ ಮದುವೆಯಾಗ್ತೀನಿ ಎಂದು ಹೇಳಿದ್ದಕ್ಕೆ ನಾನು ಮನುವನ್ನು ನಂಬಿಕೊಂಡು ಬಂದೆ. ನನಗೆ ಬೇರೆ ಅವರೊಂದಿಗೆ ಜೀವನವಿತ್ತು. ಅದನ್ನು ಕೂಡ ಮನು ಬಂದು ಅವರಿಗೆ ಹೇಳಿದ್ದಾರೆ. ನನಗೆ ಲೈಫ್ ಕೊಡ್ತೀನಿ ಅಂತ ಮನು ಮಾತು ಕೊಟ್ಟಿದ್ದ.

    ನಮ್ಮ ಅಪ್ಪಂಗೆ ಇಬ್ಬರೂ ಹೆಂಡ್ತಿರು, ತಾತನಿಗೂ ಇಬ್ಬರೂ ಹೆಂಡ್ತಿರು. ಹೀಗಾಗಿ ದೇವರೇ ನಮ್ಮನ್ನು ಜೋಡಿ ಮಾಡಿದ್ದಾರೆ ಎಂದು ನಂಬಿಸಿದ್ದ. ಪ್ರಪಂಚದಲ್ಲಿ ಎರಡ್ಮೂರು ಮದುವೆ ಮಾಡಿಕೊಂಡವರು ಇಲ್ವಾ ಎನ್ನುತ್ತಿದ್ದ. ಹೀಗೆ ಮದುವೆಯಾಗುವ ಭರವಸೆ ನೀಡಿದ್ದ. ಇದು ಕಾನೂನು ಪ್ರಕಾರ ತಪ್ಪು ಎಂದು ನನಗೆ ಗೊತ್ತು. ಇದನ್ನು ನಿಲ್ಲಿಸಲು ತುಂಬಾ ಪ್ರಯತ್ನ ಮಾಡಿದೆ. ಅಷ್ಟರಲ್ಲಿ ನಾನು ಪ್ರೆಗ್ನೆಂಟ್ ಆಗಿದ್ದೆ.

    ಅದು ರೇಪ್ ಅಲ್ಲ, ಒಪ್ಪಂದದ ಸಂಪರ್ಕ ಎಂದ ಮನು ಹೇಳಿದ್ದಾನೆ. ಆದರೆ ಮನು ನನ್ನ ಜೊತೆ, ಮೊದಲ ಪತ್ನಿ ಪದೇ ಪದೇ ಜಗಳ ಮಾಡುತ್ತಾಳೆ. ನನಗೆ ಅವಳೊಂದಿಗೆ ಇರೋಕೆ ಆಗ್ತಿಲ್ಲ. ಡಿವೋರ್ಸ್ ಕೊಡೋದಾಗಿ ನನಗೆ ಹೇಳಿದ್ದ. ಅವಳಿಗೆ ಮೋಸ ಮಾಡಬೇಡ ಎಂದು ಕೂಡ ನಾನು ಹೇಳಿದ್ದೆ, ಆ ನಂತರ ಎಲ್ಲರ ಮುಂದೆ ಮದುವೆಯಾಗೋದಾಗಿ ಮಾತು ಕೊಟ್ಟಿದ್ದ.

    ನನಗೆ ಗೊತ್ತಿಲ್ಲ ನನ್ನ ಹಿಂದೆ ಯಾರಿದ್ದಾರೆ ಅಂತ. ನನಗೆ ಆಗಿರೋ ಅನ್ಯಾಯಕ್ಕೆ ನಾನು ಒಬ್ಬಳೇ ನಿಂತಿದ್ದೀನಿ. ಶನಿವಾರ ನನ್ನ ಖಾಸಗಿ ವಿಡಿಯೋ ಮಾಡಿಕೊಂಡಿದ್ದಕ್ಕೆ ನಾನು ಕಂಪ್ಲೇಟ್ ಕೊಡಲು ಮುಂದಾಗಿದ್ದು, ನನಗೆ ಯಾರು ಏನು ಹೇಳಿಸಿ ಇದನ್ನು ಮಾಡಿಸುತ್ತಿಲ್ಲ. ನನಗೆ ಆಗಿರೋ ಅನ್ಯಾಯಕ್ಕೆ ನಾನೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ.

    ನಮ್ಮಿಬ್ಬರ ಖಾಸಗಿ ವಿಡಿಯೋ ಇದೆಯೋ ಇಲ್ವೋ? ಡಿಲೀಟ್ ಆಗಿದ್ಯೋ ಇದರ ಬಗ್ಗೆ ನನಗೆ ಗೊತ್ತಿಲ್ಲ. ಇದನ್ನೇ ಇಟ್ಟುಕೊಂಡು ಎಲ್ಲರ ಬಳಿ ಎಲ್ಲಿ ನೆಗೆಟಿವ್ ಆಗಿ ಬಿಂಬಿಸುಸುತ್ತಾರೋ ಎಂದು ಭಯ ಆಯ್ತು. ಅದಕ್ಕೆ ನಾನು ದೂರು ನೀಡಿದ್ದೇನೆ.

    ನನಗೆ ಬ್ಯಾಕ್ ಟು ಬ್ಯಾಕ್ ಆಬಾರ್ಷನ್ ಆಯ್ತು. ಅಬಾರ್ಷನ್ ಆದ್ಮೇಲೆ ನನ್ನ ಬಿಟ್ಟುಬಿಡು ಅಂದಿದ್ದ. ಇಷ್ಟೆಲ್ಲ ಆದಮೇಲೂ ಆತ ನನ್ನನ್ನು ತೊರೆಯುವ ಮಾತುಗಳನ್ನಾಡಿದ್ದಾನೆ. ನನಗೆ ಸಾಯೋವರೆಗೂ ಹೊಡೆದಿದ್ದಾನೆ. ನಾನು ಆತ್ಮಹತ್ಯೆಗೂ ಕೂಡ ಯತ್ನಿಸಿದ್ದೆ. ನಮ್ಮ ವಕೀಲರ ಜೊತೆ ಚರ್ಚಿಸಿ ದೂರು ಕೊಟ್ಟಿದ್ದೇನೆ. ನಾನು ತುಂಬ ಹಣವನ್ನ ಮನುಗೆ ಕೊಟ್ಟಿದ್ದೇನೆ. ಅವನಿಗಾಗಿ ನಾನು ಲಕ್ಷ ಲಕ್ಷ ಖರ್ಚು ಮಾಡಿದ್ದೇನೆ ಎಂದು ತಿಳಿಸಿದರು.

    ‘ಕಾಮಿಡಿ ಕಿಲಾಡಿಗಳು ಸೀಸನ್ 2’ ವಿನ್ನರ್ ಆಗಿದ್ದ ಮಡೆನೂರು ಮನು ಇದೀಗ ಸಿನಿಮಾಗಳಲ್ಲಿ ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ತೆರೆಮೇಲೆ ಹೀರೋ ಆಗಿರುವ ಮಡೆನೂರು ಮನು ಬಗ್ಗೆ ರಿಯಲ್ ಲೈಫ್‌ನಲ್ಲಿ ಸಾಲು ಸಾಲು ಆರೋಪಗಳು ಕೇಳಿ ಬರುತ್ತಿವೆ. ಮನು ವಿರುದ್ಧ ಕಿರುತೆರೆ ನಟಿ ಅತ್ಯಾಚಾರ, ಗರ್ಭಪಾತ, ಕೊಲೆ ಬೆದರಿಕೆ ಆರೋಪವನ್ನ ಮಾಡಿದ್ದಾರೆ. ನಟಿಯ ದೂರಿನ ಅನುಸಾರ ಎಫ್‌ಐಆರ್ ದಾಖಲಿಸಿಕೊಂಡಿರುವ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಮಡೆನೂರು ಮನುರನ್ನ ಬಂಧಿಸಿದ್ದಾರೆ.

  • ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್‌ – ಅದು ರೇಪ್‌ ಅಲ್ಲ, ಒಪ್ಪಂದದ ಸಂಪರ್ಕ ಅಂದ ನಟ

    ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್‌ – ಅದು ರೇಪ್‌ ಅಲ್ಲ, ಒಪ್ಪಂದದ ಸಂಪರ್ಕ ಅಂದ ನಟ

    ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ಮಡೆನೂರು ಮನುನನ್ನ (Madenur Manu) ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹಾಸನದಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಬಳಿಕ ಪ್ರಾಥಮಿಕವಾಗಿ ನಡೆದ ವಿಚಾರಣೆಯಲ್ಲಿ ಹಲವು ರಹಸ್ಯೆಗಳನ್ನು ಮನು ಬಾಯ್ಬಿಟ್ಟಿದ್ದಾರೆ. ಈ ಕುರಿತ ಎಕ್ಸ್‌ಕ್ಲೂಸಿವ್‌ ಮಾಹಿತಿಗಳು ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

    ಅದು ಅತ್ಯಾಚಾರ ಅಲ್ಲ, ಒಪ್ಪಂದದ ಸಂಪರ್ಕ. ನಟಿಯನ್ನು ಮದುವೆ ಆಗದ್ದೇನೆ. ಮೂವರ ಮಾತು ಕೇಳಿ, ಆಕೆ ದೂರು ನೀಡಿದ್ದಾಳೆ. ಇಬ್ಬರೂ ಹೀರೋ, ಒಬ್ಬಳು ಲೇಡಿ ಡಾನ್ ಮಾತು ಕೇಳಿ ದೂರು ದಾಖಲಿಸಿದ್ದಾಳೆ. ಲೇಡಿ ಡಾನ್ ನಟಿಗೆ ಆತ್ಮಿಯಳು. ಕಾಮಿಡಿ ಕಿಲಾಡಿಗಳು ಶೋ ನಟಿ ಅಂತ ಮಾಹಿತಿ ನೀಡಿದ್ದಾರೆ ಮನು. ಇದನ್ನೂ ಓದಿ: ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌

    ಸಿನಿಮಾ ಹಾಳು ಮಾಡಲೆಂದೇ ಆ ಮೂವರು ಪ್ಲ್ಯಾನ್ ಮಾಡಿದ್ದಾರೆ. ನಾನು ನಟಿಗೆ ಹಿಂಸೆ ನೀಡಿಲ್ಲ. ಆಕೆಯೇ ನನಗೆ ತೊಂದರೆ ಕೊಡ್ತಿದ್ದಾಳೆ ಎಂದು ಪ್ರತ್ಯಾರೋಪ ಮಾಡಿರುವುದಲ್ಲದೇ ತನ್ನ ಬಳಿಯಿರುವ ಸಾಕ್ಷ್ಯಗಳನ್ನು ಪೊಲೀಸರಿಗೆ ನೀಡಿದ್ದಾರೆ. ಇದನ್ನೂ ಓದಿ: ರೇಪ್‌ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?

    ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ (Rape) ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ದೂರಿನ ಮೇರೆಗೆ ಅತ್ಯಾಚಾರ ಪ್ರಕರಣ ದಾಖಲಿಸಿ ಪೊಲೀಸರು ಆರೋಪಿಗೆ ಬಲೆ ಬೀಸಿದ್ದರು. ಇತ್ತ ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದರು.

    ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಇದನ್ನೂ ಓದಿ: ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

  • ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌

    ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌

    ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ (Actor) ಮಡೆನೂರು ಮನು ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಈ ವಿಡಿಯೋನಲ್ಲಿ ನನ್ನ ವಿರುದ್ಧ ಅತ್ಯಾಚಾರ ಪ್ರಕರಣ (Rape Case) ದಾಖಲಿಸಿರುವ ಸಹ ಕಲಾವಿದೆ ಹಿಂದೆ ಇಬ್ಬರು ಹೀರೋಗಳು ಹಾಗೂ ಓರ್ವ ಲೇಡಿ ಡಾನ್‌ ಇದ್ದಾಳೆ ಎಂದು ಬಾಂಬ್‌ ಸಿಡಿಸಿದ್ದಾರೆ.

    ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು (Madenur Manu) ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಅತ್ಯಾಚಾರ ಪ್ರಕರಣದ ದಾಖಲಿಸಿಕೊಂಡಿದ್ದ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಮನು ಮಾತನಾಡಿರುವ ವಿಡಿಯೋವೊಂದು ಲಭ್ಯವಾಗಿದೆ. ಇದನ್ನೂ ಓದಿ: ರೇಪ್‌ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?

    ಇದು ಉದ್ದೇಶಪೂರ್ವಕವಾಗಿ ಅಂತ ನಾನೇನು ಹೇಳಬೇಕಿಲ್ಲ ಎಲ್ಲರಿಗೂ ಗೊತ್ತಾಗಿದೆ. ಕಷ್ಟಪಟ್ಟು, ಇಷ್ಟಪಟ್ಟು ಮಾಡಿರುವ ʻಕುಲದಲ್ಲಿ ಕೀಳ್ಯಾವುದೋʼ ಸಿನಿಮಾ ನಾಳೆ ರಾಜ್ಯಾದ್ಯಂತ ರಿಲೀಸ್‌ ಆಗ್ತಿದೆ. ಹೀಗಿರುವಾಗ ಎಫ್‌ಐಆರ್‌ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಅಂತ ಹೇಳಿಕೊಡ್ತಿದ್ದಾರೆ ಅಂತ ಅವಳೇ ಹೇಳಿದ್ದಳು. ಯಾರ‍್ಯಾರು ಹೇಳಿಕೊಡ್ತಿದ್ದಾರೆ ಅಂತ ಕೂಡ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ

    ಮುಂದುವರಿದು.. ಅವಳ ಜೊತೆಯಲ್ಲಿದ್ದವರೇ ಹೇಳಿಕೊಟ್ಟಿದ್ದಾರೆ. ಆಕೆ ಹಿಂದೆ ಇಬ್ಬರು ಹೀರೋ, ಓಬ್ಬಳು ಲೇಡಿ ಡಾನ್‌ ಸೇರಿ 12 ಜನ ಇದ್ದಾರೆ. ಇತ್ತೀಚೆಗೆ ಕೂಡ ನನ್ನ ಸಾವು ಬಯಸಿ ನಗುತ್ತಿದ್ದರಂತೆ. ನಾನು ಯಾರಿಗೇನು ಮಾಡಿದ್ದೇನೆ ಅಂತ ಗೊತ್ತಿಲ್ಲ. ನಾನಾಯ್ತು ಸಿನಿಮಾ ಕೆಲಸ ಆಯ್ತು ಅಂತ ಇರ್ತೀನಿ. ಇಲ್ಲದಿದ್ರೆ ಜಮೀನು ಕೆಲಸ ಮಾಡ್ತೀನಿ. ಆದ್ರೆ ನನ್ನ ವಿರುದ್ಧ ಪ್ರತಿಯೊಂದು ಆರೋಪಕ್ಕೂ ಸಾಕ್ಷಿ ಕೊಡ್ತೀನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕೇಸ್‌ – ನಾಪತ್ತೆಯಾಗಿದ್ದ ನಟ ಮಡೆನೂರು ಮನು ಅರೆಸ್ಟ್‌

    ಈಗ 2 ತಿಂಗಳಿಂದ ಸಿನಿಮಾಗೆ ಎಲ್ಲರನ್ನೂ ಕರೆದಿದ್ದೇನೆ. ಪಾಪ ನಿರ್ಮಾಪಕರು ದುಡ್ಡು ಎಲ್ಲಿಂದ ತಂದಿರ್ತಾರೆ ಗೊತ್ತಿಲ್ಲ. ಈ ಕೇಸ್‌ನಿಂದ ಅವರಿಗೆ ಸಮಸ್ಯೆ ಆಗಬಾರದು. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡ್ತೀನಿ ಅಂತ ವಿಡಿಯೋನಲ್ಲಿ ಹೇಳಿದ್ದಾರೆ.