Tag: ಮಡ್ಡಿಪೇಟೆ

  • Raichur| ಬೀದಿನಾಯಿಗಳ ದಾಳಿಯಿಂದ ಕೋಮಾಗೆ ಹೋಗಿದ್ದ ಯುವತಿ ಸಾವು

    Raichur| ಬೀದಿನಾಯಿಗಳ ದಾಳಿಯಿಂದ ಕೋಮಾಗೆ ಹೋಗಿದ್ದ ಯುವತಿ ಸಾವು

    ರಾಯಚೂರು: ನಗರದ ಮಡ್ಡಿಪೇಟೆಯಲ್ಲಿ (Maddipete) ಬೀದಿ ನಾಯಿಗಳ (Stary Dogs) ದಾಳಿಯಿಂದ ತಲೆಗೆ ತೀವ್ರ ಪೆಟ್ಟಾಗಿ ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

    20 ವರ್ಷದ ಮಹಾದೇವಿ ಮೃತ ದುರ್ದೈವಿ ಯುವತಿ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಮಂಗಳವಾರ ಬೆಳಗ್ಗೆ ದೇವಾಲಯಕ್ಕೆ ಹೊರಟಿದ್ದ ಯುವತಿ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿತ್ತು. ನಾಯಿಗಳ ದಾಳಿಗೆ ಹೆದರಿದ ಯುವತಿ ಕೆಳಗೆ ಬಿದ್ದಿದ್ದು ತಲೆಗೆ ಬಲವಾದ ಪೆಟ್ಟಾಗಿತ್ತು. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ತಲೆಗೆ ಪೆಟ್ಟು ಬಿದ್ದಿದ್ದರಿಂದ ರಕ್ತ ಹೆಪ್ಪುಗಟ್ಟಿ ಯುವತಿ ಕೋಮಾ ಸ್ಥಿತಿಗೆ ಹೋಗಿದ್ದಳು. ಇದನ್ನೂ ಓದಿ: ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ತಲೆಗೆ ಪೆಟ್ಟು – ಕೋಮಾಗೆ ತಲುಪಿದ ಯುವತಿ

    ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾಳೆ. ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಹುಟ್ಟೂರಲ್ಲಿ ಎಸ್‌.ಎಂ.ಕೃಷ್ಣ ಅಂತ್ಯಕ್ರಿಯೆ; ಸಿಎಂ ಸೇರಿ ಅನೇಕ ಗಣ್ಯರಿಂದ ಅಂತಿಮ ನಮನ

  • ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ತಲೆಗೆ ಪೆಟ್ಟು – ಕೋಮಾಗೆ ತಲುಪಿದ ಯುವತಿ

    ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ತಲೆಗೆ ಪೆಟ್ಟು – ಕೋಮಾಗೆ ತಲುಪಿದ ಯುವತಿ

    ರಾಯಚೂರು: ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ಮಡ್ಡಿಪೇಟೆಯಲ್ಲಿ (Maddipete) ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ.

    ಇಂದು (ಡಿ.11) ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ.ಇದನ್ನೂ ಓದಿ: ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ತಲೆಗೆ ಪೆಟ್ಟು ಬಿದ್ದಿದ್ದರಿಂದ ರಕ್ತಹೆಪ್ಪುಗಟ್ಟಿದ್ದು, ಯುವತಿ ಕೋಮಾ ಸ್ಥಿತಿಗೆ ಹೋಗಿದ್ದಾಳೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಬಡ ಕುಟುಂಬ ದಿಕ್ಕು ಕಾಣದಂತಾಗಿದೆ.

    ಘಟನೆ ಕುರಿತು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ಪ್ರತಿಕ್ರಿಯಿಸಿದ್ದು, ಯುವತಿಯ ಚಿಕಿತ್ಸೆ ಬಗ್ಗೆ ವೈದ್ಯರ ಬಳಿ ಮಾಹಿತಿ ಪಡೆದಿದ್ದೇನೆ. ಈಗಾಗಲೇ ಟೆಂಡರ್ ಕರೆದು ಬೀದಿ ನಾಯಿ ಹಿಡಿಯಲು ಏಜೆನ್ಸಿಗೆ ಒಪ್ಪಿಸಲಾಗಿದೆ. ಇನ್ನೂ ಹೆಚ್ಚಿನ ಏಜೆನ್ಸಿಗಳಿಗೆ ಗುತ್ತಿಗೆ ನೀಡಿ ನಾಯಿಗಳನ್ನ ಹಿಡಿಯುತ್ತೇವೆ. ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಗುತ್ತಿದೆ. ಈಗಾಗಲೇ ಹಿಡಿದು ಬಿಟ್ಟಿರುವ ನಾಯಿಗಳು ಇನ್ನೊಂದೆಡೆ ಸೇರಿಕೊಂಡಿರುವ ಸಾಧ್ಯತೆಯಿದೆ. ಕೂಡಲೇ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಯಾರನ್ನೂ ದ್ವೇಷಿಸಲಿಲ್ಲ – ಎಸ್.ಎಂ ಕೃಷ್ಣ ಅಗಲಿಕೆಯ‌ ಕುರಿತು ನೋವು ಹಂಚಿಕೊಂಡ ನಟಿ ರಮ್ಯಾ