Tag: ಮಣಿಕಾಂತ್ ಕದ್ರಿ

  • ಏಳು ವರ್ಷಗಳ ನಂತರ ನಿರ್ದೇಶನದ ಕ್ಯಾಪ್ ತೊಟ್ಟ ಚಕ್ರವರ್ತಿ ಚಂದ್ರಚೂಡ

    ಏಳು ವರ್ಷಗಳ ನಂತರ ನಿರ್ದೇಶನದ ಕ್ಯಾಪ್ ತೊಟ್ಟ ಚಕ್ರವರ್ತಿ ಚಂದ್ರಚೂಡ

    ತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ (Chakravarty Chandrachud) ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಅವರ ಹುಟ್ಟುಹಬ್ಬದಂದು ಮಿಲಿಂದ್ ಗೌತಮ್ ನಾಯಕನಾಗಿ ನಟಿಸುತ್ತಿರುವ ಈ ನೂತನ ಚಿತ್ರದ ಟೀಮ್ ಅನೌನ್ಸ್ ಆಗಿದೆ.  ಮಯೂರ ಮೋಷನ್ ಪಿಕ್ಚರ್ಸ್ ನ ನಿರ್ಮಾಪಕರು ಮಂಜುನಾಥ್ ಡಿ ಅವರು ‘ಅನ್ ಲಾಕ್  ರಾಘವ’ ನಂತರ ಮತ್ತೊಂದು ಪ್ರಯೋಗಕ್ಕೆ ಮುಂದಾಗಿದ್ದಾರೆ.  ಮಿಲಿಂದ್ ಗೌತಮ್ ನಾಯಕ ನಟರಾಗಿರುವ ಈ ಸಿನೆಮಾಗೆ ನಿರ್ದೇಶಕರ ಕ್ಯಾಪ್ ತೊಟ್ಟಿರುವುದು ಬಹುಮುಖ ಪ್ರತಿಭೆ ಡಿ. ಜೆ. ಚಕ್ರವರ್ತಿ (ಚಂದ್ರಚೂಡ್). ಬಿಗ್ ಬಾಸ್ ಖ್ಯಾತಿಯ, ಬರಹಗಾರ, ನಿರ್ದೇಶಕ ಚಕ್ರವರ್ತಿ ಏಳು ವರ್ಷಗಳ ನಂತರ ನಿರ್ದೇಶನ ಮಾಡುತ್ತಿದ್ದಾರೆ.

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಅವರು ಸತತ ಮೂರು ತಿಂಗಳುಗಳಿಂದ ಈ ಹೊಸ ಚಿತ್ರಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಮೆಗಾಸ್ಟಾರ್‌ ಚಿರಂಜೀವಿ

    ಮಣಿಕಾಂತ್ ಕದ್ರಿ (Manikanth Kadri) ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ. ಈಗಾಗಲೇ ಕದ್ರಿ ಮಣಿಕಾಂತ್ ಹಾಡುಗಳು ಸಂಯೋಜನೆಯಲ್ಲಿದು, ಚಿತ್ರೀಕರಣಕ್ಕೆ ಪೂರ್ವ ತಯಾರಿ ಭರದಿಂದ ಸಾಗಿದೆ.

    ಆಗಸ್ಟ್ 18ರಂದು  ಟೀಸರ್ ಚಿತ್ರೀಕರಣ ನಡೆಯಲಿದ್ದು, ಸೆಪ್ಟೆಂಬರ್ 2 , ಅಭಿನಯ ಚಕ್ರವರ್ತಿ ಸುದೀಪ್ ರವರ ಹುಟ್ಟಿದ ದಿನದಂದು ಟೀಸರ್ ಬಿಡುಗಡೆ ಮತ್ತು ಎಲ್ಲಾ ಮಾಹಿತಿಗಳು ಲಭ್ಯವಾಗಲಿದೆ. ನಿರ್ದೇಶಕರ ಹುಟ್ಟುಹಬ್ಬದಂದು(ಆಗಸ್ಟ್ 15) ಟೀಮ್ ಅನೌನ್ಸ್ ಆಗಲಿದೆ. ಈ ಪೋಸ್ಟರ್ ನಲ್ಲಿರುವ ಸ್ಕ್ಯಾನ್ ಮಾಡಿ ಮ್ಯಾಜಿಕ್ ನೋಡಿ!  ನಿಮಗೊಂದು ಅಪರೂಪದ ವಿಷಯ ಸಿಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನನ್ಯ ಭಟ್ ಕಂಠದಲ್ಲಿ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್

    ಅನನ್ಯ ಭಟ್ ಕಂಠದಲ್ಲಿ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್

    ಗುರು ದೇಶಪಾಂಡೆ (Guru Deshpande) ಸಾರಥ್ಯದಲ್ಲಿ ಮೂಡಿ ಬಂದ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ (Theme Song) ಇಂದು ರಿಲೀಸ್ ಆಗಿದೆ. ಖ್ಯಾತ ಗಾಯಕಿ ಅನನ್ಯ ಭಟ್ (Ananya Bhatt) ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಮಣಿಕಾಂತ್ ಕದ್ರಿ (Manikanth Kadri) ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ರಾಘು ಶಿವಮೊಗ್ಗ (Raghu Shivamogga) ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಐದು ಕಥೆಗಳನ್ನು ಬೆಸೆಯುವಂತಹ ಮತ್ತು ಆ ಆಶಯವನ್ನು ಹಿಡಿದಿಡುವಂತಹ ಗೀತೆ ಇದಾಗಿದೆ.

    ಈಗಾಗಲೇ ಪೆಂಟಗನ್ (Pentagon) ಸಿನಿಮಾ ಟ್ರೈಲರ್ (Trailer) ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ (Rishabh Shetty), ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ (Anil Ravipudi), ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ.

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ಫಸ್ಟ್ ಟೈಮ್ ತುಳು ಹಾಡಿಗೆ ದನಿಯಾದ ಗಾಯಕಿ ಮಂಗ್ಲಿ

    ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು (Song) ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡು ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ (Mangli) ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತನ್ನದೇ ವಿಭಿನ್ನ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯಗೆದ್ದ ಗಾಯಕಿ, ಇದೇ ಮೊದಲ ಬಾರಿ ತುಳು ಜನತೆಯ ಮನಗೆಲ್ಲಲು ಸಜ್ಜಾಗಿದ್ದಾರೆ.

    ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ (Rajendra Singh Babu) ನಿರ್ದೇಶನದ ‘ಬಿರ್ದ್‌ದ ಕಂಬಳ’ ಮತ್ತು ‘ಕನ್ನಡದ ವೀರ ಕಂಬಳ’ (Veera Kambala) ಸಿನಿಮಾಕ್ಕೆ ಹಾಡಿದ್ದಾರೆ. ತುಳು (Tulu) ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಹಾಡು ಹಾಡಿರುವುದು ವಿಶೇಷ. ತುಳುವಿನ ಕೆ.ಕೆ.ಪೇಜಾವರ, ಕನ್ನಡದ ರಘು ಶಾಸ್ತ್ರಿ ಅವರ ಸಾಹಿತ್ಯಕ್ಕೆ ಕದ್ರಿ ಮಣಿಕಾಂತ್ (Manikanth Kadri) ಸಂಗೀತ ನೀಡಿದ್ದಾರೆ.

    ಕನ್ನಡದಲ್ಲಿ ರಾಬರ್ಟ್ ಸಿನಿಮಾದ ಕಣ್ಣೆ ಅದರಂದಿ ಹಾಡಿನ ಮೂಲಕ ಸ್ಯಾಂಡಲ್‌ವುಡ್ ಪ್ರವೇಶ ಮಾಡಿದ ಮಂಗ್ಲಿ, ಬಳಿಕ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಎಣ್ಣೆಗೂ ಹೆಣ್ಣಿಗೂ ಗೀತೆಗೂ ದನಿಯಾದರು. ನಂತರ ಪುಷ್ಪಾ ಸಿನಿಮಾದ ಕನ್ನಡದ ಡಬ್ಬಿಂಗ್ ಸಿನಿಮಾದಲ್ಲಿ ಐಟಂ ಸಾಂಗ್‌ಗೂ ಮಂಗ್ಲಿ ಹಾಡಿದ್ದರು. ಅಷ್ಟೂ ಹಾಡುಗಳು ಸೂಪರ್‌ಹಿಟ್ ಆಗಿರುವುದೇ ವಿಶೇಷ.’

    ತುಳುನಾಡಿನ ಹೆಮ್ಮೆಯ ಜಾನಪದ ಕ್ರೀಡೆ ಕಂಬಳದ ಕುರಿತು ತುಳು ಮತ್ತು ಕನ್ನಡದಲ್ಲಿ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರ ಸಂಪೂರ್ಣ ಕರಾವಳಿಯ ಜಾನಪದ ಕಲೆ ಕಂಬಳದ ಕುರಿತಾಗಿರದ್ದು, ಚಿತ್ರೀಕರಣದ ವೇಳೆ ಸುಮಾರು 20 ಜೊತೆ ಕೋಣ ಹಾಗೂ 500ಕ್ಕೂ ಹೆಚ್ಚಿನ ಕಲಾವಿದರೊಂದಿಗೆ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ: ‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ತುಳುನಾಡಿನ ಹಲವಾರು ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಯಲ್ಲಿ ಖ್ಯಾತ ನಟರಾದ ಪ್ರಕಾಶ್ ರಾಜ್, ರವಿಶಂಕರ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾದ ಶ್ರೀನಿವಾಸ ಗೌಡ ಹಾಗೂ ಕಾಂತಾರ ಚಿತ್ರದ ಗುರುವಖ್ಯಾತಿಯ  ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡರೆ, ನಟ ಆದಿತ್ಯ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನವೀನ್ ಡಿ  ಪಡಿಲ್, ಬೋಜರಾಜ ವಾಮಂಜೂರು, ಉಷಾ ಭಂಡಾರಿ, ರಾಧಿಕಾ ನಾರಾಯಣ, ಗೋಪಿನಾಥ್ ಭಟ್,   ಚಿತ್ರಕಥೆ- ಸಂಭಾಷಣೆ ವಿಜಯ ಕುಮಾರ್ ಕೊಡಿಯಾಲ್ ಬೈಲ್, ಸಂಕಲನ ಶ್ರೀನಿವಾಸ್ ಬಾಬು, ಛಾಯಾಗ್ರಹಣ ಆರ್ ಗಿರಿ, ಸಾಹಸ ಡಿಫರೆಂಟ್ ಡ್ಯಾನಿ, ಮಾಸ್ ಮಾದ. ರಾಜೇಶ್ ಕುಡ್ಲ ಕಾರ್ಯಾಕಾರಿ ನಿರ್ಮಾಪಕರು, ನೃತ್ಯ ಮದನ್ ಹರಿಣಿ, ಕಲೆ ಚಂದ್ರಶೇಖರ್ ಸುವರ್ಣ. ಈಗಾಗಲೇ ಚಿತ್ರೀಕರಣ ಕೊನೇ ಹಂತದಲ್ಲಿದ್ದು, ಶೀಘ್ರದಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ರಂಗನಾಯಕಿ’ ಶುರುವಾಯ್ತು!

    ‘ರಂಗನಾಯಕಿ’ ಶುರುವಾಯ್ತು!

    ನಿರ್ದೇಶಕ ದಯಾಳ್ ಪದ್ಮನಾಭನ್ ಕಳೆದ ಒಂಭತ್ತು ತಿಂಗಳಲ್ಲಿ ಮೂರು ಸಿನಿಮಾಗಳನ್ನು ರೂಪಿಸಿ ತೆರೆಗೆ ತಂದಿದ್ದಾರೆ. ಈಗ ಮತ್ತೊಂದು ಸಿನಿಮಾ ಆರಂಭಿಸಿದ್ದಾರೆ. ರಂಗನಾಯಕಿ ಹೆಸರಿನ ಈ ಚಿತ್ರವೀಗ ಟೈಟಲ್ ಲಾಂಚ್ ಮೂಲಕ ಆರಂಭವಾಗಿದ್ದು, ಇದೇ ತಿಂಗಳ 29ರಿಂದ ಚಿತ್ರೀಕರಣ ಶುರುವಾಗಲಿದೆ.

    ಧೈರ್ಯಂ ಸಿನಿಮಾದ ಮೂಲಕ ಸಿನಿಮಾ ನಾಯಕನಟಿಯಾಗಿ ಎಂಟ್ರಿ ಕೊಟ್ಟಿದ್ದ ಅದಿತಿ ಪ್ರಭುದೇವ ಈ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಭಯಾ ಪ್ರಕರಣ ನಡೆದ ನಂತರ ದಯಾಳ್ ಒಂದು ಕಾದಂಬರಿಯನ್ನು ಬರೆಯಲು ಆರಂಭಿಸಿದ್ದರಂತೆ. ಕನ್ನಡ ಭಾಷೆ ಗೊತ್ತಿಲ್ಲದ ಕಾರಣ ತಾವು ಇಂಗ್ಲಿಷ್ ಮತ್ತು ತಮಿಳು ಭಾಷೆಯಲ್ಲಿ ರಚಿಸಿದ್ದರಂತೆ. ಇದನ್ನು ದಯಾಳ್ ಅವರ ಅಸೋಸಿಯೇಟ್ಸ್ ಕಿರಣ್ ಹೆಮ್ಮಿಗೆ ಕನ್ನಡೀಕರಿಸಿದ್ದಾರೆ. ರಂಗನಾಯಕಿ ಸಿನಿಮಾದ ಟೈಟಲ್ ಲಾಂಚ್ ಜೊತೆಗೆ ರಂಗನಾಯಕಿ ಕಿರು ಕಾದಂಬರಿ ರೂಪದಲ್ಲೂ ಲೋಕಾರ್ಪಣೆಗೊಂಡಿದೆ. ಡಿಐಜಿ ರೂಪಾ ಅವರು ರಂಗನಾಯಕಿ ಚಿತ್ರದ ಟೈಟಲ್ ಮತ್ತು ಕೃತಿಯನ್ನು ಬಿಡುಗಡೆಗೊಳಿಸಿದ್ದಾರೆ.

    ಕಿರಣ್ ಹೆಮ್ಮಿಗೆ ಕನ್ನಡೀಕರಿಸಿದ್ದಾರೆ. ರಂಗನಾಯಕಿ ಸಿನಿಮಾದ ಟೈಟಲ್ ಲಾಂಚ್ ಜೊತೆಗೆ ರಂಗನಾಯಕಿ ಕಿರು ಕಾದಂಬರಿ ರೂಪದಲ್ಲೂ ಲೋಕಾರ್ಪಣೆಗೊಂಡಿದೆ. ಡಿಐಜಿ ರೂಪಾ ಅವರು ರಂಗನಾಯಕಿ ಚಿತ್ರದ ಟೈಟಲ್ ಮತ್ತು ಕೃತಿಯನ್ನು ಬಿಡುಗಡೆಗೊಳಿಸಿದ್ದಾರೆ.

    “ರಂಗನಾಯಕಿ ಹೆಸರು ಕೇಳಿದರೇನೇ ರೋಮಾಂಚನಗೊಳ್ಳುತ್ತದೆ. ನಾನು ನನ್ನ ಐದನೇ ವಯಸ್ಸಿನಲ್ಲಿ ನನ್ನ ತಂದೆ ತಾಯಿಯೊಂದಿಗೆ ಪುಟ್ಟಣ್ಣ ಕಣಗಾಲರ ರಂಗನಾಯಕಿಯನ್ನು ಚಿತ್ರಮಂದಿರದಲ್ಲಿ ನೋಡಿದ್ದೆ. ಈಗ ಅದೇ ಹೆಸರಿನ ಸಿನಿಮಾದ ಆರಂಭೋತ್ಸವಕ್ಕೆ ನಾನು ಅತಿಥಿಯಾಗಿ ಬಂದಿರೋದು ಖುಷಿ ಎನಿಸುತ್ತಿದೆ. ಹೆಣ್ಣುಮಕ್ಕಳ ಪರವಾದ ಸಾಮಾಜಿಕ ಸಂದೇಶ ಈ ಸಿನಿಮಾದ ಮೂಲಕ ಜಗತ್ತಿಗೆ ರವಾನೆಯಾಗಲಿ” ಎಂದು ರೂಪಾ ಹೇಳಿದರು.

    ನಾಯಕಿ ಅದಿತಿ ಮಾತನಾಡಿ, ಅತ್ಯಾಚಾರದಂತಹ ಅಮಾನವೀಯ ಪ್ರಕರಣಗಳಾದಾಗ ಅದರ ಸುದ್ದಿಗಳನ್ನು ನೋಡಿ ಮನಸ್ಸು ಹಿಂಡುತ್ತದೆ. ಆದರೆ ಈ ಸಿನಿಮಾದಲ್ಲಿ ಅತ್ಯಾಚಾರಕ್ಕೊಳಗಾದ ಹೆಣ್ಣುಮಗಳ ಪಾತ್ರದಲ್ಲಿ ನಟಿಸಲಿದ್ದೇನೆ. ಇದು ನಿಜಕ್ಕೂ ಛಾಲೆಂಜಿಂಗ್ ಆದ ಪಾತ್ರ ಎಂದರು.

    ಇನ್ನು ಈ ಸಿನಿಮಾದಲ್ಲಿ ನಿರ್ದೇಶಕ ಶ್ರೀನಿ, ತ್ರಿವಿಕ್ರಮ್, ಲಾಸ್ಯಾ, ಶಿವಮಣಿ ಸೇರಿದಂತೆ ಸಾಕಷ್ಟು ಜನ ನಟಿಸುತ್ತಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನದ ಈ ಸಿನಿಮಾವನ್ನು ಈ ಹಿಂದೆ ಎಟಿಎಮ್ ಸಿನಿಮಾ ನಿರ್ಮಿಸಿದ್ದ ಎಸ್.ವಿ. ನಾರಾಯಣ್ ನಿರ್ಮಿಸುತ್ತಿದ್ದಾರೆ.