Tag: ಮಣಿಶಂಕರ್ ಅಯ್ಯರ್

  • ಭಾರತದ ಮೇಲೆ ಚೀನಾ ದಾಳಿ ಬರೀ ಆರೋಪನಾ?- ಮಣಿಶಂಕರ್ ಹೇಳಿಕೆಗೆ ಬಿಜೆಪಿ ಗರಂ

    ಭಾರತದ ಮೇಲೆ ಚೀನಾ ದಾಳಿ ಬರೀ ಆರೋಪನಾ?- ಮಣಿಶಂಕರ್ ಹೇಳಿಕೆಗೆ ಬಿಜೆಪಿ ಗರಂ

    – ವಿವಾದವಾಗ್ತಿದ್ದಂತೆಯೇ ಬೇಷರತ್‌  ಕ್ಷಮೆ

    ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ (Mani Shankar Aiyar) ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ಮೂಲಕ ಸದ್ದು ಮಾಡಿದ್ದಾರೆ.

    ದೆಹಲಿಯಲ್ಲಿ ನೆಹರೂಸ್ ಫಸ್ಟ್ ರಿಕ್ರೂಟ್ಸ್ ಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಣಿಶಂಕರ್ ಅಯ್ಯರ್, 1962ರಲ್ಲಿ ಭಾರತದ ಮೇಲೆ ಚೀನಾ ಪಡೆಗಳು ದಾಳಿ ಮಾಡಿದ ಆರೋಪಗಳಿವೆ ಅಂತಾ ಹೇಳಿದ್ದಾರೆ. ಸಹಜವಾಗಿಯೇ ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

    38,000 ಚದರ ಕಿಲೋಮೀಟರ್ ನಷ್ಟು ನಮ್ಮ ಭೂಭಾಗವನ್ನು ಆಕ್ರಮಿಸಿಕೊಂಡ ಅಂದಿನ ಚೀನಾ (China) ದಂಡಯಾತ್ರೆಯನ್ನೇ ಚರಿತ್ರೆಯ ಪುಟಗಳಿಂದ ಅಳಿಸುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸಿದೆ ಎಂದು ಕಿಡಿಕಾರಿದೆ. ಈ ಹಿಂದೆಯೂ ಚೀನಾಗೆ ಅನುಕೂಲವಾಗಿ ಕಾಂಗ್ರೆಸ್ (Congress) ವರ್ತಿಸಿದೆ ಅಂತಾ ಆರೋಪಿಸಿದೆ. ಈ ಬೆನ್ನಲ್ಲೇ ಎಚ್ಚೆತ್ತ ಕಾಂಗ್ರೆಸ್ ಎಂದಿನಂತೆ, ಅಯ್ಯರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದಿದೆ.

    2020ರ ಲಡಾಖ್ ಘರ್ಷಣೆ ಪ್ರಸ್ತಾಪಿಸಿದ ಕಾಂಗ್ರೆಸ್, ಪ್ರಧಾನಿ ಮೋದಿ (Narendra Modi) ಏನೂ ಆಗಿಲ್ಲ ಎಂಬಂತೆ ಮಾತಾಡಿದ್ರು. ಇದು ಆರೋಪ ಅಷ್ಟೇ ಎಂದಿದ್ರು. ಎಂಬುದನ್ನು ನೆನಪಿಸಿ ಬಿಜೆಪಿಗೆ ಟಕ್ಕರ್ ನೀಡಿದೆ. ಈ ಮಧ್ಯೆ ಆಕಸ್ಮಾತ್ ಆಗಿ ಆರೋಪ ಎಂಬ ಪದ ಬಳಸಿದೆ ಎಂದಿರುವ ಮಣಿಶಂಕರ್ ಅಯ್ಯರ್, ಇದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.

  • ಪಾಕ್ ಅಣುಬಾಂಬ್ ತೋರಿಸಿ ಕಾಂಗ್ರೆಸ್ ದೇಶವನ್ನು ಹೆದರಿಸ್ತಿದೆ: ಮೋದಿ ವಾಗ್ದಾಳಿ

    ಪಾಕ್ ಅಣುಬಾಂಬ್ ತೋರಿಸಿ ಕಾಂಗ್ರೆಸ್ ದೇಶವನ್ನು ಹೆದರಿಸ್ತಿದೆ: ಮೋದಿ ವಾಗ್ದಾಳಿ

    – ಮಣಿಶಂಕರ್ ಅಯ್ಯರ್ ಹೇಳಿಕೆ ಉಲ್ಲೇಖಿಸಿ ಕಿಡಿ

    ನವದೆಹಲಿ: ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎನ್ನುವ ಮೂಲಕ ಕಾಂಗ್ರೆಸ್ (Congress) ದೇಶವನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಒಡಿಶಾದ ಕಂಧಮಾಲ್‌ನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ (Narendra Modi), ಕಾಂಗ್ರೆಸ್ ಪದೇ ಪದೇ ತನ್ನದೇ ದೇಶವನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ಅವರು ಬಳಿ ಅಣು ಬಾಂಬ್ ಇದೆ ಎಚ್ಚರಿಕೆಯಿಂದಿರಿ ಎಂದು ಭಯಭೀತಗೊಳಿಸುತ್ತಿದೆ. ಆ ದೇಶ ನಮ್ಮ ದೇಶದ ಮೇಲೆ ದಾಳಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

    ಅವರು ಪಾಕಿಸ್ತಾನದ (Pakistan) ಬಾಂಬ್ ಬಗ್ಗೆ ಮಾತನಾಡುತ್ತಾರೆ. ಆದರೆ ಪಾಕಿಸ್ತಾನದ ಸ್ಥಿತಿಯು ಅವರಿಗೆ ತಿಳಿದಿಲ್ಲ. ಅವರು ತಮ್ಮ ಬಾಂಬ್‌ಗಳನ್ನು ಮಾರಾಟ ಮಾಡಲು ಖರೀದಿದಾರರನ್ನು ಹುಡುಕುತ್ತಿದ್ದಾರೆ. ಆದರೆ ಜನರಿಗೆ ಅವರ ಗುಣಮಟ್ಟದ ಬಗ್ಗೆ ತಿಳಿದಿರುವುದರಿಂದ ಯಾರೂ ಖರೀದಿಸಲು ಬಯಸುತ್ತಿಲ್ಲ ಎಂದ ಅವರು ಪಾಕ್ ಆರ್ಥಿಕತೆಯನ್ನು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೂ ಮೋದಿ ಪ್ರಧಾನಿಯಾಗಲ್ಲ: ಅರವಿಂದ್ ಕೇಜ್ರಿವಾಲ್ ಭವಿಷ್ಯ

    ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಮಣಿಶಂಕರ್ ಅಯ್ಯರ್ (Manishankar Ayyar), ಪಾಕಿಸ್ತಾನ ಒಂದು ನೆರೆಯ ದೇಶ ಅವರಿಗೂ ಗೌರವಿಸಬೇಕಾಗುತ್ತದೆ. ಅವರ ಜೊತೆಗೆ ಎಷ್ಟು ಕಠಿಣವಾಗಿ ಮಾತನಾಡಬಹುದು ಮಾತನಾಡಿ, ಕನಿಷ್ಠ ಮಾತನಾಡಿ, ಬಂದೂಕು ತಗೊಂಡು ಓಡಾಡುತ್ತಿದ್ದೀರಿ ಅದರಿಂದ ಏನಾಗುತ್ತದೆ. ಇದರಿಂದ ದ್ವೇಷ ಹೆಚ್ಚಾಗುತ್ತದೆ. ಅಲ್ಲಿ ಯಾರಾದ್ರೂ ಹುಚ್ಚ ಬಂದರೆ ದೇಶದ ಕಥೆ ಏನು?.

    ಅವರ ಬಳಿಯೂ ಅನುಬಾಂಬ್ ಇದೆ ನಮ್ಮ ಬಳಿಯೂ ಇದೆ. ಯಾರಾದ್ರೂ ಹುಚ್ಚ ಅಣುಬಾಂಬ್ ನ ಲಾಹೋರ್ (Lahore) ಮೇಲೆ ಹಾಕಿದರೆ ಅದರ ವಿಕಿರಣ ಎಂಟು ಸೆಕೆಂಡ್ ನಲ್ಲಿ ಅಮೃತಸರ ತಲುಪಲಿದೆ. ಬಾಂಬ್ ಬಳಸುವುದನ್ನು ನಿಲ್ಲಿಸಿ ಅವರನ್ನು ಗೌರವಿಸಿದರೆ ಅವರು ತಮ್ಮ ಬಾಂಬ್ ಬಳಸುವ ಬಗ್ಗೆ ಯೋಚಿಸುವುದು ನಿಲ್ಲಿಸುತ್ತಾರೆ. ಅವರನ್ನು ಪ್ರೆರೇಪಿಸುತ್ತಿದ್ದರೆ ಅಲ್ಲೊಬ್ಬ ಹುಚ್ಚ ಬಂದು ಬಾಂಬ್ ತೆಗೆದರೆ ಅದರ ಪರಿಣಾಮ ಏನು? ವಿಶ್ವಗುರುವಾಗಲು ಸಮಸ್ಯೆ ಎಷ್ಟೆ ದೊಡ್ಡದಾಗಿದ್ದರೂ ಅದನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ತೋರಿಸಬೇಕು. ಆದರೆ ಕಳೆದ ಹತ್ತು ವರ್ಷದಲ್ಲಿ ಯಾವುದೇ ಮಾತುಕತೆ ನಡೆದಿಲ್ಲ ಎಂದು ಆರೋಪಿಸಿದ್ದರು.

  • ಮೋದಿ ‘ನೀಚ ವ್ಯಕ್ತಿ’-ಹಳೆಯ ಹೇಳಿಕೆಯನ್ನ ಸಮರ್ಥಿಸಿಕೊಂಡ ಮಣಿಶಂಕರ್ ಅಯ್ಯರ್

    ಮೋದಿ ‘ನೀಚ ವ್ಯಕ್ತಿ’-ಹಳೆಯ ಹೇಳಿಕೆಯನ್ನ ಸಮರ್ಥಿಸಿಕೊಂಡ ಮಣಿಶಂಕರ್ ಅಯ್ಯರ್

    ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತದಲ್ಲಿದೆ. ಮೇ 19ರ ಕೊನೆಯ ಸುತ್ತಿನ ಬಳಿಕ ಮೇ 23ಕ್ಕೆ ಫಲಿತಾಂಶ ಬರಲಿದೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಮೋದಿ ನೀಚ ವ್ಯಕ್ತಿ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    2017ರ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮಣಿಶಂಕರ್ ಅಯ್ಯರ್, ಪ್ರಧಾನಿ ಮೋದಿ ವಿರುದ್ಧ ಹರಿಹಾಯುತ್ತಾ ಅವರೊಬ್ಬ ನೀಚ ವ್ಯಕ್ತಿ ಎಂದು ಹೇಳಿದ್ದರು. ಇದೀಗ ಲೇಖನವೊಂದರಲ್ಲಿ ಮಣಿಶಂಕರ್ ಅಯ್ಯರ್ ಅದೇ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಒಳಪಟ್ಟಿದೆ.

    2017ರಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಮಣಿಶಂಕರ್ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಂದೋಲನವನ್ನ ಆರಂಭಿಸಿದ್ದರಿಂದ ಕ್ಷಮೆ ಕೇಳಿ ವಿವಾದವನ್ನು ತಣ್ಣಗಾಗಿಸಿದ್ದರು. ಈಗ ಮೋದಿ ಅವರ ಸಮಾವೇಶ ಮತ್ತು ಭಾಷಣಗಳ ಕುರಿತು ಮಾತನಾಡುವಾಗ 2017ರಲ್ಲಿ ನಾನು ಪ್ರಧಾನಿ ಬಗ್ಗೆ ಹೇಳಿದ್ದನು ನೆನಪು ಮಾಡಿಕೊಳ್ಳಿ. ಅಂದು ನಾನು ಹೇಳಿದ್ದ ಮಾತುಗಳು ಇಂದು ನಿಜವಾಗಿವೆ ಅಲ್ವಾ ಎಂದು ಹೇಳಿದ್ದಾರೆ.

    ಅಯ್ಯರ್ ಹೇಳಿಕೆ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಂಬಿತ್ ಪಾತ್ರಾ, 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರೀತಿಯ ರಾಜಕಾರಣ ಕುಟುಂಬದ ‘ಮಣಿ’ಯೊಂದು ಮೋದಿ ವಿರುದ್ಧದ ನೀಚ ಹೇಳಿಕೆಯ್ನು ಸಮರ್ಥಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    2017ರಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ಮಣಿಶಂಕರ್ ಅಯ್ಯರ್ ಬಳಸಿದ ಭಾಷೆ ಸರಿಯಲ್ಲ, ಕಾಂಗ್ರೆಸ್ ಈ ಸಂಸ್ಕೃತಿಯನ್ನು ಬಯಸುವುದಿಲ್ಲ. ಹೀಗಾಗಿ ಮಣಿಶಂಕರ್ ಅಯ್ಯರ್ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ಮಣಿಶಂಕರ್ ಅಯ್ಯರ್ ಪ್ರತಿಕ್ರಿಯಿಸಿ ಕ್ಷಮೆ ಕೇಳಿ ನಾನು ಆ ಪದವನ್ನು ಜಾತಿ ಆಧಾರದಲ್ಲಿ ಬಳಸಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

    2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಚಾಯ್ ವಾಲಾ ಎಂದು ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಹೆಸರಿನಲ್ಲಿ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಗಿತ್ತು.

  • ದಶರಥನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಶ್ರೀರಾಮ ಹುಟ್ಟಿದ್ದೆಲ್ಲಿ – ಮಣಿಶಂಕರ್ ಅಯ್ಯರ್ ಪ್ರಶ್ನೆ

    ದಶರಥನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಶ್ರೀರಾಮ ಹುಟ್ಟಿದ್ದೆಲ್ಲಿ – ಮಣಿಶಂಕರ್ ಅಯ್ಯರ್ ಪ್ರಶ್ನೆ

    ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ದಶರಥ ಮಹಾರಾಜನ ಅರಮನೆಯಲ್ಲಿದ್ದ 10 ಸಾವಿರ ಕೋಣೆಗಳಲ್ಲಿ ಭಗವಾನ್ ಶ್ರೀರಾಮ ಹುಟ್ಟದ್ದೆಲ್ಲಿ ಎಂದು ಪ್ರಶ್ನೆಯನ್ನು ಮಾಡುವ ಮೂಲಕ ಮತ್ತೆ ವಿವಾದವನ್ನು ಎಳೆದುಕೊಂಡಿದ್ದಾರೆ.

    ಎಸ್‍ಡಿಪಿಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಆಯೋಜಿಸಿದ್ದ ‘ಬಾಬರಿ ಮಸೀದಿಯ ಹೆಸರಲ್ಲಿ ಒಂದು ಸಂಜೆ’ ಎಂಬ ಕಾರ್ಯಕ್ರಮದಲ್ಲಿ ಮಣಿಶಂಕರ್ ಅಯ್ಯರ್ ಭಾಗಿಯಾಗಿದ್ದರು. ಸಮಾರೋಪ ಭಾಷಣದಲ್ಲಿ ಮಣಿಶಂಕರ್ ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮಣಿಶಂಕರ್ ಅಯ್ಯರ್ ಹೇಳಿದ್ದೇನು?
    ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವಂತಿದ್ದರೆ ಕಟ್ಟಿ. ಆದ್ರೆ ರಾಮಮಂದಿರವನ್ನ ಇಲ್ಲಿಯೇ ಕಟ್ಟುತ್ತೇವೆ ಎಂದು ನೀವು ಹೇಗೆ ಹೇಳುತ್ತೀರಿ. ದಶರಥ ಮಹಾರಾಜನ ಅರಮನೆಯಲ್ಲಿ 10 ಸಾವಿರ ಕೋಣೆಗಳಿದ್ದವು ಎಂದು ಹೇಳಲಾಗುತ್ತದೆ. ಹಾಗಾದರೆ ಭಗವಾನ್ ಶ್ರೀರಾಮ ಇದೇ ಕೋಣೆಯಲ್ಲಿ ಜನಿಸಿದ್ದ ಎಂದು ನೀವು ಹೇಗೆ ಹೇಳುತ್ತಿರಿ ಎಂದು ಪ್ರಶ್ನೆ ಮಾಡಿದರು. ಇದೊಂದು ಕಥೆಯಾಗಿದ್ದು, ಭಗವಾನ್ ಶ್ರೀರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದು ಅಂತಾ ನಂಬಿದ್ದರಿಂದ ಮಂದಿರ ಕಟ್ಟಬೇಕೆಂದು ಹೇಳುತ್ತೀರಿ. ಸದ್ಯ ಈ ಸ್ಥಳದಲ್ಲಿ ಈಗಾಗಲೇ ಒಂದು ಮಸೀದಿ ಇದೆ. ಮೊದಲು ಮಸೀದಿಯನ್ನು ಧ್ವಂಸಗೊಳಿಸಿ, ಇದೇ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಬೇಕು. ಹಾಗಾದ್ರೆ ಹಿಂದೂಸ್ಥಾನದಲ್ಲಿ ಅಲ್ಲಾಹನ ಮೇಲೆ ನಂಬಿಕೆ ಇರಿಸೋದು ತಪ್ಪಾಗುತ್ತದೆ ಎಂದರ್ಥ ಎಂದು ಹೇಳಿದ್ದಾರೆ.

    ಮಣಿಶಂಕರ್ ಅಯ್ಯರ್ ತಮ್ಮ ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುತ್ತಾರೆ. 2017, ಡಿಸೆಂಬರ್ ನಲ್ಲಿ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ಮೋದಿ ಅವರ ವಿರುದ್ಧ ‘ನೀಚ’ ಎಂಬ ಪದವನ್ನು ಬಳಕೆ ಮಾಡಿದ್ದರು. ನೀಚ ಎಂಬ ಹೇಳಿಕೆಯನ್ನು ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ ಚುನಾವಣೆಯಲ್ಲಿ ಜಯಶಾಲಿಯಾಗಿತ್ತು.

    2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಚಾಯ್ ವಾಲಾ ಎಂದು ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಹೆಸರಿನಲ್ಲಿ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಣ್ಣೊರೆಸಲು ಅಯ್ಯರ್ ಅಮಾನತು: ಶೋಭಾ ಕರಂದ್ಲಾಜೆ

    ಕಣ್ಣೊರೆಸಲು ಅಯ್ಯರ್ ಅಮಾನತು: ಶೋಭಾ ಕರಂದ್ಲಾಜೆ

    ಉಡುಪಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿಯನ್ನು ನೀಚ ಎಂದು ಬೈದಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶಗೊಂಡು ವಾಗ್ದಾಳಿ ಮಾಡಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ಅಯ್ಯರ್ ಮಾತನಾಡಿದ್ದು, ಕಾಂಗ್ರೆಸ್‍ನ ಮಾನಸಿಕ ಮನಸ್ಥಿತಿಯನ್ನು ತೋರಿಸುತ್ತದೆ. ಅವರಿಗೆ ಅಧಿಕಾರ ಇಲ್ಲದಿದ್ದಾಗ ಮಾತ್ರ ಚಡಪಡಿಕೆಯ ಮಾತು ಬರುತ್ತದೆ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಮೋದಿಯನ್ನು ಯಾಕೆ ನೀಚ ಎಂದು ಕರೆದರು ಎಂದು ಕಾಂಗ್ರೆಸ್ ಉತ್ತರ ಕೊಡಬೇಕಾಗಿದೆ. ಆದ್ದರಿಂದ ಕಣ್ಣೊರೆಸುವ ತಂತ್ರದಿಂದ ಅವರನ್ನು ಅಮಾನತು ಮಾಡಿದ್ದೀರಿ ಎಂದು ಶೋಭಾ ಕೋಪದಿಂದ ಹೇಳಿದ್ದಾರೆ.

    ಗುಜರಾತ್‍ನಲ್ಲಿ ಕಾಂಗ್ರೆಸ್‍ಗೆ ಇದು ದುಬಾರಿಯಾಗುತ್ತದೆ. ಭಾರತವನ್ನು ಕಾಂಗ್ರೆಸ್‍ನ ವಂಶಾಡಳಿತಕ್ಕೆ ಬರೆದುಕೊಟ್ಟಿಲ್ಲ. ಅಧಿಕಾರ ಇಲ್ಲದಿದ್ದಾಗ ಇವರಿಗೆ ಚಡಪಡಿಕೆ ಶುರುವಾಗುತ್ತದೆ. ಅದರ ಪ್ರತಿಫಲವೇ ನೀಚ ಎಂಬ ಶಬ್ದವನ್ನು ಬಳಸಿರುವುದು. ಗುಜರಾತಿನ ಜನರು ಕಾಂಗ್ರೆಸ್‍ಗೆ ಸರಿಯಾಗಿ ಪಾಠ ಕಲಿಸುತ್ತಾರೆ ಎಂದು ಹೇಳಿದರು.

    ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ ಆರಂಭವಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಜನ ಐದು ವರ್ಷದ ಹಿಂದೆ ಆಶೀರ್ವಾದ ಮಾಡಿದ್ದರು. ಈಗ ಮಾಡುವುದು ಕನಸಿನ ಮಾತು. ಸಿಎಂ ಅವರು ಘೋಷಿಸಿರುವ ಎಲ್ಲಾ ಭಾಗ್ಯಗಳು ಪ್ಲಾಪ್ ಆಗಿರುವಾಗ ಜನ ಯಾಕೆ ಆಶೀರ್ವಾದ ಮಾಡುತ್ತಾರೆ ಎಂದು ಪ್ರಶ್ನೆ ಮಾಡಿ ಮಾತನಾಡಿದರು.

    ಇದನ್ನು ಓದಿ: ಅಂದು ಚಾಯ್‍ವಾಲಾ, ಇಂದು ನೀಚ್ ಅಂದ್ರು: ಬಿಜೆಪಿ ಭರ್ಜರಿ ಗೆಲುವಿಗೆ ಕಾರಣವಾಗುತ್ತಾ?

  • ಅಂದು ಚಾಯ್‍ವಾಲಾ, ಇಂದು ನೀಚ್ ಅಂದ್ರು: ಬಿಜೆಪಿ ಭರ್ಜರಿ ಗೆಲುವಿಗೆ ಕಾರಣವಾಗುತ್ತಾ?

    ಅಂದು ಚಾಯ್‍ವಾಲಾ, ಇಂದು ನೀಚ್ ಅಂದ್ರು: ಬಿಜೆಪಿ ಭರ್ಜರಿ ಗೆಲುವಿಗೆ ಕಾರಣವಾಗುತ್ತಾ?

    ನವದೆಹಲಿ: ಗುಜರಾತ್ ವಿಧಾನಸಭೆಯ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ತೆರೆಬೀಳುವ ಮುನ್ನ ಭಾರೀ ವಾಕ್ಸಮರ ನಡೆದಿದೆ. ಪ್ರಧಾನಿ ಮೋದಿ ಅವರನ್ನು ಮಾನಸಿಕವಾಗಿ ಆಘಾತಗೊಳಿಸುವ ಕಾಂಗ್ರೆಸ್ ಯತ್ನ ಮುಂದುವರಿದಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಅಭ್ಯರ್ಥಿ ಮೋದಿಯನ್ನು ಚಾಯ್‍ವಾಲಾ ಎಂದು ಹೀಗಳೆದಿದ್ದ ಮಣಿಶಂಕರ್ ಅಯ್ಯರ್ ಇವತ್ತು ಮತ್ತೆ ಹರಕುಬಾಯಿಯನ್ನು ಹರಿಬಿಟ್ಟು ವಿವಾದಕ್ಕೆ ಕಾರಣರಾಗಿದ್ದಾರೆ.

    ತಾನೊಬ್ಬ ಶಿವಭಕ್ತ ಎನ್ನುತ್ತಿರುವ ಕಾಂಗ್ರೆಸ್‍ನವರಿಗೆ ಈಗ ಬಾಬಾ ಸಾಹೇಬ್‍ಗಿಂತ ಬಾಬಾ ಬೋಲೆ ಅಂದ್ರೆ ಶಿವನ ನೆನಪು ಆಗುತ್ತಿದೆ ಎಂದು ಹೇಳಿ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡುವ ಯತ್ನದಲ್ಲಿ ಮೋದಿಯೊಬ್ಬ `ನೀಚ ಮನುಷ್ಯ’, ಅವರಿಗೆ ಮೌಲ್ಯಗಳೇ ಇಲ್ಲ. ಅಂಥವರ ಬಗ್ಗೆ ಏನು ಹೇಳಲಿಕ್ಕೆ ಆಗುತ್ತೆ ಎಂದು ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ನಾಲಿಗೆಯನ್ನು ಹರಿಯಬಿಟ್ಟಿದ್ದಾರೆ.

    ಈ ಹೇಳಿಕೆಗೆ ಸೂರತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಇದು `ಗುಜರಾತ್ ಜನರಿಗೆ ಮಾಡಿದ ಅವಮಾನ’ ಎಂದು ತಿರುಗೇಟು ನೀಡಿದ್ದರೆ, ಪ್ರಧಾನಿ ವಿರುದ್ಧದ ಇಂಥ ಹೇಳಿಕೆಗಳು ನಾಚಿಕೆಗೇಡು. `ಮೊಘಲ್ ಮನಸ್ಥಿತಿ’ ಅಂತ ಸಚಿವ ರವಿಶಂಕರ್ ಪ್ರಸಾದ್ ಕಿಡಿ ಕಾರಿದರು.

    ಈ ವಿಚಾರ ದೊಡ್ಡದಾಗುತ್ತಿದ್ದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ ಮಣಿಶಂಕರ್ ಅಯ್ಯರ್ ಬಳಸಿದ ಭಾಷೆ ಸರಿಯಲ್ಲ, ಕಾಂಗ್ರೆಸ್ ಈ ಸಂಸ್ಕೃತಿಯನ್ನು ಬಯಸುವುದಿಲ್ಲ. ಹೀಗಾಗಿ ಮಣಿಶಂಕರ್ ಅಯ್ಯರ್ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ಮಣಿಶಂಕರ್ ಅಯ್ಯರ್ ಪ್ರತಿಕ್ರಿಯಿಸಿ ಕ್ಷಮೆ ಕೇಳಿ ನಾನು ಆ ಪದವನ್ನು ಜಾತಿ ಆಧಾರದಲ್ಲಿ ಬಳಸಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಮೋದಿ ತಿರುಗೇಟು: ತನ್ನ ವಿರುದ್ಧ ಮಾತನಾಡಿದವರ ಹೇಳಿಕೆಯನ್ನು ಬಳಸಿಕೊಂಡೇ ಅವರಿಗೆ ತಿರುಗೇಟು ನೀಡುವ ಅಭ್ಯಾಸ ಮಾಡಿಕೊಂಡಿರುವ ಮೋದಿ ಅಯ್ಯರ್ ಹೇಳಿಕೆಯನ್ನೇ ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಹೌದು ನಾನು, ಕೆಳ ವರ್ಗದಲ್ಲಿ ಜನಿಸಿದ ವ್ಯಕ್ತಿ. ನನ್ನ ಜೀವನದ ಪ್ರತಿಕ್ಷಣವನ್ನು ಬಡವರ ಏಳಿಗೆಗಾಗಿ ಮುಡುಪಾಗಿಟ್ಟಿದ್ದೇನೆ. ಬಡವರು, ದಲಿತರು, ಬುಡಕಟ್ಟು ಜನಾಂಗ ಮತ್ತು ಹಿಂದೂಳಿದ ವರ್ಗಗಳ ಅಭಿವೃದ್ಧಿಗಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಅವರು ತನ್ನ ಬಗ್ಗೆ ಏನು ಬೇಕಾದರೂ ಹೇಳಲಿ ನಾನು ನನ್ನ ಕೆಲಸವನ್ನು ಮಾಡುತ್ತಿರುತ್ತೇನೆ. ನನ್ನ ಕೆಲಸ ಮೇಲ್ಮಟ್ಟ(ಉಂಚ್)ದಲ್ಲಿದೆ. ಅಯ್ಯರ್ ಹೇಳಿಕೆ ಗುಜರಾತ್ ಜನತೆಗೆ ಮಾಡಿದ ಅವಮಾನ. ಇದಕ್ಕೆ ಜನ ಬ್ಯಾಲೆಟ್ ಬಾಕ್ಸ್ ನಲ್ಲಿ ಸರಿಯಾದ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿ ವಾಗ್ದಾಳಿ ನಡೆಸಿದರು.

    ಪಾಠ ಕಲಿಯದ ಕಾಂಗ್ರೆಸ್:
    ಒಮ್ಮೆ ಇತಿಹಾಸವನ್ನು ನೋಡಿದಾಗ ಯಾವ ಪದ ಬಳಸಿ ಲೇವಡಿ ಮಾಡಲಾಗುತ್ತದೋ ಆ ಪದ ಮೋದಿ ಅವರ ಯಶಸ್ಸಿಗೆ ಕಾರಣವಾಗುತ್ತದೆ. ಮೋದಿ ವಿರುದ್ಧ ವೈಯಕ್ತಿಕವಾಗಿ ದಾಳಿ ಮಾಡಿದಾಗ ಆ ದಾಳಿಗಳು ಮೋದಿ ಪರ ಅಲೆಯನ್ನು ಸೃಷ್ಟಿ ಮಾಡಿರುವುದು ನಮ್ಮ ಕಣ್ಣ ಮುಂದಿದೆ. 2007ರಲ್ಲಿ ಸೋನಿಯಾ ಗಾಂಧಿ ಮೌತ್ ಕಾ ಸೌದ್ಗಾರ್ (ಸಾವಿನ ಏಜೆಂಟ್) ಎಂದು ಮೋದಿಯನ್ನು ಟೀಕಿಸಿದ್ದರು. ಇದನ್ನೇ ಬಳಸಿಕೊಂಡಿದ್ದ ಮೋದಿ ಅಂದು ಗುಜರಾತ್ ವಿಧಾನಸಭೆ ಚುನಾವಣೆ ಹಿಂದೂ ಮತಗಳನ್ನು ಧ್ರುವೀಕರಣ ಮಾಡಿಕೊಂಡು ಗೆಲವು ಸಾಧಿಸಿ ಸಿಎಂ ಆಗಿದ್ದರು.

    2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಚಾಯ್ ವಾಲಾ ಎಂದು ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಹೆಸರಿನಲ್ಲಿ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಗಿತ್ತು.

    ಈ ಚುನಾವಣೆಯಲ್ಲೇ ಯುವ ಕಾಂಗ್ರೆಸ್ ಕೆಲ ದಿನಗಳ ಹಿಂದೆ ಚಾಯ್‍ವಾಲಾ ಎಂದು ಬಿಂಬಿಸಿ ಗ್ರಾಫಿಕ್ಸ್ ಮಾಡಿದ ಫೋಟೋ ಒಂದನ್ನು ಟ್ವೀಟ್ ಮಾಡಿತ್ತು. ಈ ಟ್ವೀಟ್ ಗೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಅದನ್ನು ಡಿಲೀಟ್ ಮಾಡಿತ್ತು. ಆದರೆ ಇದನ್ನೆ ಬಳಸಿಕೊಂಡ ಮೋದಿ ಹೌದು ನಾನು ಚಾಯ್‍ವಾಲ. ಚಹಾ ಮಾರಾಟ ಮಾಡಿದ್ದೇನೆ. ಆದರೆ ನಿಮ್ಮಂತೆ ನಾನು ದೇಶ ಮಾರಾಟ ಮಾಡಿಲ್ಲ. ಬೇಕಾದ್ರೆ ನೀವು ಚಹಾ ಮಾರಾಟ ಮಾಡಿ ದೇಶ ಮಾತ್ರ ಮಾರಬೇಡಿ ಎಂದು ಹೇಳಿ ವಾಗ್ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೇ ಈ ಚುನಾವಣೆ ಸಂದರ್ಭದಲ್ಲಿ ನಡೆದ ಮನ್ ಕೀ ಬಾತ್ ಕಾರ್ಯಕ್ರಮವನ್ನು ಗುಜರಾತ್ ಬಿಜೆಪಿ ನಾಯಕರು ಚಹಾ ಕುಡಿಯುತ್ತಾ ಕೇಳಿ ಕಾಂಗ್ರೆಸ್ ತಿರುಗೇಟು ನೀಡಿದ್ದರು.

     

     

  • ಗುಜರಾತ್ ಚುನಾವಣೆ: ಮತ್ತೆ ಮೋದಿ ಗೆಲುವಿಗೆ ಕಾಂಗ್ರೆಸ್ ಹಾಕಿ ಕೊಟ್ಟಿತಾ ರೆಡ್ ಕಾರ್ಪೆಟ್?

    ಗುಜರಾತ್ ಚುನಾವಣೆ: ಮತ್ತೆ ಮೋದಿ ಗೆಲುವಿಗೆ ಕಾಂಗ್ರೆಸ್ ಹಾಕಿ ಕೊಟ್ಟಿತಾ ರೆಡ್ ಕಾರ್ಪೆಟ್?

    ಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಲು ಹೊರಟ ಯೂಥ್ ಕಾಂಗ್ರೆಸ್ ಮಾಡಿರುವ ಎಡವಟ್ಟು ಈ ಬಾರಿಯ ಚುನಾವಣೆಯಲ್ಲೂ ಬಿಜೆಪಿಗೆ ವರವಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ.

    ಹೌದು. ತನ್ನ ಅಧಿಕೃತ ಸಾಮಾಜಿಕ ಜಾಲಾತಾಣದಲ್ಲಿ ಫೋಟೊವೊಂದಕ್ಕೆ ಗ್ರಾಫಿಕ್ಸ್ ಮಾಡಿದ್ದ ಯೂಥ್ ಕಾಂಗ್ರೆಸ್ ಮೋದಿಯನ್ನು ‘ಚಾಯ್ ವಾಲಾ’ ಎಂದು ಬಿಂಬಿಸುವ ಪ್ರಯತ್ನ ಮಾಡಿತ್ತು. ಫೋಟೋ ಪ್ರಕಟವಾದ ಕೆಲವೇ ಸಮಯದಲ್ಲಿ ಇದು ಸಾಕಷ್ಟು ಪರ ವಿರೋಧ ಚರ್ಚೆಗೆ ಸಾಕ್ಷಿಯಾಯಿತು. ದೇಶದ ಪ್ರಧಾನಿಯನ್ನು ವಿಡಂಬನಾತ್ಮಕವಾಗಿ ಚಿತ್ರಿಸಿದಕ್ಕಾಗಿ ಯೂಥ್ ಕಾಂಗ್ರೆಸ್ ಕ್ಷಮೆ ಕೇಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

     

    ಪ್ರಧಾನಿ ನರೇಂದ್ರ ಮೋದಿ ಅವರನ್ನ ಚಾಯ್ ವಾಲಾ ಎಂದು ವಿಡಂಬನೆ ಮಾಡಿದ್ದ ಯೂಥ್ ಕಾಂಗ್ರೆಸ್ ಪ್ಲಾನ್‍ನ್ನು ಅವರಿಗೆ ತಿರುಗೇಟು ನೀಡಲು ಬಳಸಿಕೊಳ್ಳುತ್ತಿರುವ ಬಿಜೆಪಿ, ಜನರೊಂದಿಗೆ ನೇರವಾಗಿ ಬೆರೆಯುವ ಪ್ರಯತ್ನ ಮಾಡುತ್ತಿದೆ. ಅದರಂತೆ ಮೋದಿ ಕೂಡಾ ಗುಜರಾತ್ ಚುನಾವಣಾ ಪ್ರಚಾರದಲ್ಲಿ ಉದ್ದೇಶ ಪೂರ್ವಕವಾಗಿ ಚಾಯ್ ವಾಲಾ ಪದವನ್ನು ಬಳಕೆ ಮಾಡಿಕೊಳ್ಳುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ರಾಜ್‍ಕೋಟ್ ಚುನಾವಣಾ ಸಭೆಯೊಂದರಲ್ಲಿ ಮಾತನಾಡುತ್ತಾ ಮೋದಿ ತಮ್ಮನ್ನು ತಾವು ಮಣ್ಣಿನ ಮಗ ಎಂದು ಕರೆದುಕೊಂಡಿದ್ದರು. ನನ್ನ ವಿನಮ್ರತೆಯನ್ನು ಕಾಂಗ್ರೆಸ್ ಇಷ್ಟಪಡುತ್ತಿಲ್ಲ ಎಂದು ಟೀಕಿಸಿದರು. ನಾನು ಚಾಯ್ ವಾಲಾ, ನಾನು ಚಹಾವನ್ನು ಮಾರಿದ್ದೇನೆ ಆದರೆ ದೇಶವನ್ನು ಮಾರುವಂತಹ ಪಾಪದ ಕೆಲಸ ಮಾಡುವುದಿಲ್ಲ ಎಂದು ಹೇಳಿ ಜನರಿಂದ ಭರ್ಜರಿಯಾಗಿ ಶಿಳ್ಳೆ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು.(ಇದನ್ನೂ ಓದಿ: ನೀವು ಚಹಾ ಮಾರಾಟ ಮಾಡಿ, ದೇಶ ಮಾರಬೇಡಿ: ಕಾಂಗ್ರೆಸ್ಸಿಗೆ ಮೋದಿ ಟಾಂಗ್)

    ಕಳೆದ ಭಾನುವಾರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ‘ಮನ್ ಕೀ ಬಾತ್ ಚಾಯ್ ಕೇ ಸಾಥ್ ಎಂದು ಬದಲಾಯಿಸಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡು ಬಿಜೆಪಿ ಯಶಸ್ವಿಯಾಗಿತ್ತು. ಇದಕ್ಕೆ ಸಾಕಷ್ಟು ದೊಡ್ಡ ಪ್ರಮಾಣದ ಬೆಂಬಲವೂ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಐವಾಂಕಾ ಟ್ರಂಪ್ ಮಂಗಳವಾರ ಹೈದರಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಹೊಗಳಿದ ಪರಿ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಚಾಯ್ ವಾಲಾ ಸ್ಥಾನದಿಂದ ಪ್ರಧಾನಿ ವರೆಗಿನ ಹುದ್ದೆಗೆ ತೆರಳಿದ ಮೋದಿ ಹಾದಿಯನ್ನು ಐವಾಂಕಾ ಹೊಗಳಿದ್ದರು. ಇದರಿಂದ ಬಿಜೆಪಿಗೆ ಮತ್ತಷ್ಟು ಬೂಸ್ಟ್ ಸಿಕ್ಕಿದ್ದು ‘ಚಾಯ್‍ವಾಲಾ’ ಪದವನ್ನೇ ಬಳಸಿ ಕಾಂಗ್ರೆಸ್ ಮೇಲೆ ಅಕ್ರಮಣ ಮಾಡಲು ಮುಂದಾಗಿದೆ.

     

    ಪಾಠ ಕಲಿಯದ ಕಾಂಗ್ರೆಸ್:
    ಒಮ್ಮೆ ಇತಿಹಾಸವನ್ನು ನೋಡಿದಾಗ ಚಾಯ್ ವಾಲಾ ಎಂಬ ಪದ ಮೋದಿ ಅವರಿಗೆ ಒಂಥರಾ ಅದೃಷ್ಟದ ಪದ ಎನಿಸುತ್ತೆ. ಮೋದಿ ವಿರುದ್ಧ ವೈಯಕ್ತಿಕ ವಾಗಿ ದಾಳಿ ಮಾಡಿದಾಗ ಆ ದಾಳಿಗಳು ಮೋದಿ ಪರ ಅಲೆಯನ್ನು ಸೃಷ್ಟಿ ಮಾಡಿವೆ. 2007 ರಲ್ಲಿ ಸೋನಿಯಾ ಗಾಂಧಿ ಮೌತ್ ಕಾ ಸೌದ್ಗಾರ್ (ಸಾವಿನ ಏಜೆಂಟ್) ಎಂದು ಮೋದಿಯನ್ನು ಟೀಕಿಸಿದ್ರು. ಇದನ್ನೇ ಬಳಸಿಕೊಂಡಿದ್ದ ಮೋದಿ ಅಂದು ಗುಜರಾತ್ ವಿಧಾನಸಭೆ ಚುನಾವಣೆ ಹಿಂದೂ ಮತಗಳನ್ನು ಧ್ರುವೀಕರಣ ಮಾಡಿಕೊಂಡು ಗೆಲವು ಸಾಧಿಸಿ ಸಿಎಂ ಆಗಿದ್ದರು.

    2014ರ ಲೋಕಸಭೆ ಚುನಾವಣೆಯಲ್ಲಿ ಮಣಿ ಶಂಕರ್ ಅಯ್ಯರ್ ಯೂಥ್ ಕಾಂಗ್ರೆಸ್ ರೀತಿಯಲ್ಲೇ ಮೋದಿಯನ್ನ ಚಾಯ್ ವಾಲಾ ಅಂತಾ ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ ‘ಚಾಯ್ ಪೇ ಚರ್ಚಾ’ ಅಂತಾ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಯಿತು. ಈಗ ಮತ್ತೆ ಕಾಂಗ್ರೆಸ್ ಚಾಯ್ ವಾಲಾ ಅಸ್ತ್ರ ಪ್ರಧಾನಿ ಕೈಗೆ ಕೊಟ್ಟಿದ್ದು ಮೋದಿ ಗೆಲುವಿನ ಹಾದಿಗೆ ಕಾಂಗ್ರೆಸ್ ಮತ್ತೊಮ್ಮೆ ರೆಡ್ ಕಾರ್ಪೆಟ್ ಹಾಕಿ ಕೊಟ್ಟಿತಾ ಎನ್ನುವ ಪ್ರಶ್ನೆ ಮತ್ತು ವಿಶ್ಲೇಷಣೆ ಈಗ ಆರಂಭವಾಗಿದೆ. (ಇದನ್ನೂ ಓದಿ:  ನಾವು ದೇಶ ಮಾರಿದ್ದರೆ ನೀವು ಪ್ರಧಾನಿಯಾಗುತ್ತಿರಲಿಲ್ಲ- ಮೋದಿ ವಿರುದ್ಧ ಖರ್ಗೆ ವಾಗ್ದಾಳಿ)

    ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಮೋದಿ ಚಹಾ ಮಾರಾಟ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಆರ್‍ಟಿಐ ಅಡಿಯಲ್ಲಿ ಕೇಳಲಾದ ಪ್ರಶ್ನೆಗೆ ರೈಲ್ವೇ ಇಲಾಖೆ ನೀಡಿದ ಸುದ್ದಿಯನ್ನು ಟ್ವೀಟ್ ಮಾಡಿ ಮೋದಿ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.

    ಚಾಯ್ ಪೇ ಚರ್ಚಾ ಐಡಿಯಾ ಕೊಟ್ಟಿದ್ದು ಯಾರು?
    2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ರಾಜಕೀಯ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡಿದ್ದರು. ಮಣಿಶಂಕರ್ ಅಯ್ಯರ್ ಟೀಕೆಗೆ ಸರಿಯಾಗಿಯೇ ತಿರುಗೇಟು ನೀಡಲು ಪ್ರಶಾಂತ್ ಕಿಶೋರ್ ಬಿಜೆಪಿ ನಾಯಕರಿಗೆ ಚಾಯ್ ಪೇ ಚರ್ಚಾ ನಡೆಸಲು ಸಲಹೆ ನೀಡಿದ್ದರು. ಈ ಸಲಹೆ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿಯನ್ನು ತೊರೆದಿದ್ದರು. ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪರ ಕೆಲಸ ಮಾಡಿ ಜೆಡಿಯು, ಕಾಂಗ್ರೆಸ್, ಆರ್‍ಜೆಡಿ ಮೈತ್ರಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗುಜರಾತ್, ಬಿಹಾರದಲ್ಲಿ ಯಶಸ್ವಿಯಾಗಿದ್ದ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ಉತ್ತರಪ್ರದೇಶಲ್ಲಿ ವಿಫಲವಾಗಿತ್ತು. (ಗುಜರಾತ್ ಚುನಾವಣೆಗೆ ಸಂಬಂಧಿಸಿದ ಎಲ್ಲ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ: ಗುಜರಾತ್ ಚುನಾವಣೆ)