Tag: ಮಣ್ಣು ಕುಸಿತ

  • ಬೆಂಗಳೂರು | ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮಣ್ಣು ಕುಸಿದು ಇಬ್ಬರು ಸಾವು

    ಬೆಂಗಳೂರು | ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮಣ್ಣು ಕುಸಿದು ಇಬ್ಬರು ಸಾವು

    ಬೆಂಗಳೂರು: ಕಟ್ಟಡ ನಿರ್ಮಾಣದ  (Building Construction) ವೇಳೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಕೋರಮಂಗಲದ (Koramangala) ಸಿದ್ದಾರ್ಥ ಕಾಲೋನಿಯಲ್ಲಿ ನಡೆದಿದೆ.

    ಜಾರ್ಖಂಡ್ ಮೂಲದ ಲಾಲ್ ಮದನ್ (33), ರಜಾವುದ್ದೀನ್ (35) ಮೃತರು. ಘಟನೆಯಲ್ಲಿ ಸೈಫುಲ್ಲಾ (28) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ತಿಂಗಳಿನಿಂದ ಇಲ್ಲಿ ಕಟ್ಟಡ ನಿರ್ಮಾಣದ ಕೆಲಸ ನಡೆಯುತ್ತಿದೆ. ಇಂದು ಪಿಲ್ಲರ್ ನಿರ್ಮಾಣ ಮಾಡಲು ಸುಮಾರು ಇಪ್ಪತ್ತು ಅಡಿಯಷ್ಟು ಆಳಕ್ಕೆ ಮಣ್ಣು ತೆಗೆಯಲಾಗಿತ್ತು. ಈ ಜಾಗದಲ್ಲಿ ಸುಮಾರು ಎಂಟು ಜನ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಜನರ ಮೇಲೆ ಮಣ್ಣು ಕುಸಿದಿದ್ದು, ಮೂವರು ಮಣ್ಣಿನ ಅಡಿ ಸಿಲುಕಿದ್ದಾರೆ. ಇದನ್ನೂ ಓದಿ: ಡಿಸಿಎಂ ಸಿಟಿ ರೌಂಡ್ಸ್ – ಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ವೀಕ್ಷಿಸಿದ ಡಿಕೆಶಿ

    ರಕ್ಷಣಾ ಕೆಲಸ ಮಾಡುವಷ್ಟರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ಪಾರಾಗಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

  • ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಮಣ್ಣು ಕುಸಿತ- ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ

    ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಮಣ್ಣು ಕುಸಿತ- ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ

    ಮಂಗಳೂರು: ನಗರದ ಬಲ್ಮಠ (Balmata, Mangaluru) ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.

    ಚಂದನ್ ಕುಮಾರ್ (30) ಮತ್ತು ರಾಜಕುಮಾರ್ (18) ಮಣ್ಣಿನಡಿ ಸಿಲುಕಿರುವ ಕಾರ್ಮಿಕರು. ಘಟನಾ ಸ್ಥಳದ ಬಳಿ ಸಹ ಕಾರ್ಮಿಕರು ಅಳುತ್ತಿದ್ದಾರೆ. ಘಟನೆಯಲ್ಲಿ ಓರ್ವ ಕಾರ್ಮಿಕ ರಾಜ್ ಕುಮಾರ್ ಅವರನ್ನು ರಕ್ಷಣಾ ತಂಡ ಮೇಲಕೆತ್ತಿದೆ. ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಿದೆ.

    ಮಣ್ಣಿನ ಅಡಿಯಲ್ಲಿ ಸಿಲುಕಿರುವ ಮತ್ತೋರ್ವ ಕಾರ್ಮಿಕನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಕ್ರೇನ್ ಮೂಲಕ ಜೆಸಿಬಿಯನ್ನು ಕೆಳಗಿಸುವ ಕಾರ್ಯ ಆರಂಭವಾಗಿದೆ. ಘಟನಾ ಸ್ಥಳಕ್ಕೆ ಎನ್‍ಡಿಆರ್‍ಎಫ್ ತಂಡ ಭೇಟಿ ಕೊಟ್ಟಿದೆ.

    ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದು ಕಾರ್ಮಿಕನ ರಕ್ಷಣಾ ತಂಡ ಪತ್ತೆಹಚ್ಚಿದೆ. ನಿರಂತರವಾಗಿ ಮಣ್ಣು ತೆಗೆಯುತ್ತಿರುವ ರಕ್ಷಣಾ ತಂಡದ ಸಿಬ್ಬಂದಿ ಮಣ್ಣಿನಡಿ ಸಿಲುಕಿರುವ ಕಾರ್ಮಿಕನಿಗೆ ಕಾಂಕ್ರಿಟ್ ಕೊರೆದು ಚಿಕಿತ್ಸೆ ನೀಡಲಾಗುತ್ತಿದೆ.

    ಸದ್ಯ ಚಂದನ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ನೇತೃತ್ವದಲ್ಲಿ ಕಾರ್ಮಿಕನ ಆರೋಗ್ಯ ತಪಾಸಣೆ ನಡೆಯುತ್ತಿದೆ. ಇದನ್ನೂ ಓದಿ: ಪೊಲೀಸರ ಹತ್ಯಾಕಾಂಡ ಪ್ರಕರಣ – 9 ವರ್ಷಗಳ ಬಳಿಕ ನಕ್ಸಲ್ ಕೋಮುಲು ಅರೆಸ್ಟ್

  • ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ

    ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ

    ಬೆಂಗಳೂರು: ನಗರದ ಟ್ಯಾನರಿ ರಸ್ತೆಯಲ್ಲಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿ ವೇಳೆ 30 ಅಡಿ ಮಣ್ಣು ಕುಸಿದು ಸಂಭವಿಸಬೇಕಿದ್ದ ಭಾರೀ ಅನಾಹುತ ತಪ್ಪಿದೆ.  ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್

    Metro Work

    ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಬಂದಿತ್ತು. ಆದರೆ ಈ ಒತ್ತಡಕ್ಕೆ ಮುಂಜಾನೆ 3 ಗಂಟೆಗೆ ಮುಚ್ಚಿದ್ದ ಬಾವಿಗೆ ಮಣ್ಣು ಕುಸಿದು ಕೆಳಗೆ ಬಿದ್ದಿದೆ. ಇದರಿಂದ ಸಂಭವಿಸಬೇಕಾಗಿದ್ದ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ನಾವು ಸತ್ತ ಮೇಲೂ ನೀನು ನೆಮ್ಮದಿಯಾಗಿರಬಾರದು – ಶಂಕರ್‌ಗೆ ಮಗನದ್ದೇ ಖೆಡ್ಡಾ

    ಮಾಲೀಕ ಝಬೀ ಎಂಬವರಿಗೆ ಸೇರಿದ ಜಾಗ ಇದಾಗಿದ್ದು, ಘಟನೆ ಸಂಭವಿಸಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣ. ಹೀಗಾಗಿ ನಮ್ಮ ಮೆಟ್ರೋ ಈ ಜಾಗ ಪಡೆದು ಇದಕ್ಕೆ ಪರಿಹಾರ ನೀಡಲಿ ಎಂದು ಮಾಲೀಕರು ಆಗ್ರಹಿಸಿದ್ದಾರೆ.  ಇದನ್ನೂ ಓದಿ: ನಾಯಕ ದೇವರಕೊಂಡಗಿಂತಲೂ ದುಬಾರಿ ಸಂಭಾವನೆ ಪಡೆಯಲಿದ್ದಾರೆ ಮೈಕ್ ಟೈಸನ್

  • ಕಲ್ಯಾಣಿ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ – ಕಾರ್ಮಿಕ ಸಾವು

    ಕಲ್ಯಾಣಿ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ – ಕಾರ್ಮಿಕ ಸಾವು

    ಚಿಕ್ಕಬಳ್ಳಾಪುರ: ಕಲ್ಯಾಣಿ ನಿರ್ಮಾಣದ ವೇಳೆ ತಡೆಗೋಡೆಯ ಮಣ್ಣು ಕುಸಿದ ಪರಿಣಾಮ ಕಲ್ಯಾಣಿಯೊಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ದಿನ್ನೂರು ಗ್ರಾಮದಲ್ಲಿ ನಡೆದಿದೆ.

    ಶ್ರೀನಿವಾಸಪುರ ಮೂಲದ ಅಂಜಿನಪ್ಪ(40) ಮೃತ ಕಾರ್ಮಿಕ. ಗ್ರಾಮಪಂಚಾಯತಿ ವತಿಯಿಂದ ನರೇಗಾ ಮೂಲಕ ಗ್ರಾಮದಲ್ಲಿ ಸುಂದರ ಕಲ್ಯಾಣಿ ನಿರ್ಮಾಣ ಕಾರ್ಯವನ್ನು ನಡೆಸಲಾಗುತ್ತಿತ್ತು. ಆದರೆ ತರಾತುರಿಯಲ್ಲಿ ಕಾಮಗಾರಿ ಮುಗಿಸಲು ಹಗಲು ರಾತ್ರಿ ಕಾರ್ಮಿಕರ ಕೈಯಲ್ಲಿ ಕೆಲಸ ಮಾಡಿಸಲಾಗುತ್ತಿದ್ದು ಎನ್ನಲಾಗಿದೆ.

    ಮಳೆ ಬಂದಿದ್ದ ಸಂದರ್ಭದಲ್ಲಿಯೇ ಕಾಮಗಾರಿ ನಡೆಸುತ್ತಿದ್ದ ಕಾರಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಕಲ್ಯಾಣಿಯೊಳಗೆ ಬಿದ್ದಿದ್ದಾರೆ. ಕಲ್ಯಾಣಿ ತುಂಬಾ ಆಳವಾಗಿದ್ದು ಕಾರ್ಮಿಕನನ್ನು ಮೇಲೆತ್ತುವಷ್ಟರಲ್ಲೇ ಮೃತಪಟ್ಟಿದ್ದಾರೆ.

    ಸದ್ಯ ಗುತ್ತಿಗೆದಾರ ಹಾಗೂ ಗ್ರಾಮಪಂಚಾಯತ್ ಸದಸ್ಯ ತರಾತುರಿಯಲ್ಲಿ ಕಾಮಗಾರಿ ಮಾಡಲು ಮುಂದಾಗಿದ್ದೇ ಅವಘಡಕ್ಕೆ ಕಾರಣ ಅಂತ ಆರೋಪಿಸಲಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಸ್ವಾತಂತ್ರ್ಯೋತ್ಸವಕ್ಕೆ ನಾಟಕ ಅಭ್ಯಾಸ ಮಾಡುತ್ತಾ ಪ್ರಾಣ ಕಳೆದುಕೊಂಡ ಬಾಲಕ

  • ಹೇಮಾವತಿ ನಾಲೆಯಲ್ಲಿ ಮಣ್ಣು ಕುಸಿತ – ನೀರು ಬಿಡುವ ಮುನ್ನವೇ ದುರಸ್ಥಿಯಾಗಬೇಕಿದೆ ನಾಲೆ

    ಹೇಮಾವತಿ ನಾಲೆಯಲ್ಲಿ ಮಣ್ಣು ಕುಸಿತ – ನೀರು ಬಿಡುವ ಮುನ್ನವೇ ದುರಸ್ಥಿಯಾಗಬೇಕಿದೆ ನಾಲೆ

    ಹಾಸನ: ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ದ್ಯಾವೇನಹಳ್ಳಿ ಗ್ರಾಮದ ಹೇಮಾವತಿ ನಾಲೆಯ ಪಂಪ್‍ಹೌಸ್ ಸಮೀಪ ಎರಡು ದಿನಗಳ ಹಿಂದೆ ಸುಮಾರು 80 ಅಡಿ ಎತ್ತರದಿಂದ ನಾಲೆಗೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.

    ಸ್ಥಳಕ್ಕೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಮಾತನಾಡಿದ ಅವರು, ‘ಸುರಂಗ ಮಾರ್ಗದ ಪಕ್ಕದಲ್ಲೇ ಭಾರಿ ಪ್ರಮಾಣದಲ್ಲಿ ಮಣ್ಣು ಕಲ್ಲು ಕುಸಿದು ಬಿದ್ದಿದ್ದು, ಈ ಬಗ್ಗೆ ನಮ್ಮ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರವೇ ನಾಲೆಯಲ್ಲಿ ಬಿದ್ದಿರುವ ಮಣ್ಣು ಹಾಗೂ ಕಲ್ಲನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

    ಇನ್ನೂ ಹೇಮಾವತಿ ಜಲಾಶಯ ಭಾಗದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಡ್ಯಾಂನಿಂದ ನೀರು ಬಿಡುವ ಸಂಭವವಿದೆ. ಆದ್ದರಿಂದ ಅತೀ ಬೇಗ ತೆರವುಗೊಳಿಸುವ ಕೆಲಸವಾಗಬೇಕಾಗಿದೆ. ಈ ದೊಡ್ಡ ನಾಲೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಯುವುದರಿಂದ ನಾಲೆಯಲ್ಲಿ ಬಿದ್ದಿರುವ ಮಣ್ಣು ಹಾಗೂ ಕಲ್ಲು ತೆರವುಗೊಳಿಸಲು ಮೇಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.

  • ಕಾಮಾಗಾರಿ ವೇಳೆ ಮಣ್ಣು ಕುಸಿತ – ಚರಂಡಿಯಲ್ಲಿ ಸಿಲುಕಿದ ಕಾರ್ಮಿಕ

    ಕಾಮಾಗಾರಿ ವೇಳೆ ಮಣ್ಣು ಕುಸಿತ – ಚರಂಡಿಯಲ್ಲಿ ಸಿಲುಕಿದ ಕಾರ್ಮಿಕ

    ಹುಬ್ಬಳ್ಳಿ: ಒಳಚರಂಡಿ ಕಾಮಾಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಕಾರ್ಮಿಕನೋರ್ವ ಸಿಲುಕಿಕೊಂಡ ಘಟನೆ ಹುಬ್ಬಳ್ಳಿಯ ಬೈಲಪ್ಪನವರ ನಗರದ ನಡೆದಿದೆ.

    ಕಾರ್ಮಿಕ ಯಲ್ಲಪ್ಪ ಮಣ್ಣಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಒಳಚರಂಡಿ ಒಳಗೆ ಇಳಿದು ಯಲ್ಲಪ್ಪ ಕೆಲಸ ಮಾಡುತ್ತಿದ್ದರು. ಈ ವೇಳೆ ಮೇಲಿಂದ ಮಣ್ಣು ಕುಸಿದು ಯಲ್ಲಪ್ಪ ಅವರ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರ ರಕ್ಷಣೆಗೆ ಧಾವಿಸಿದರು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಅವರನ್ನು ಮೇಲೆ ಎತ್ತಲು ಸ್ಥಳೀಯರಿಂದ ಸಾಧ್ಯವಾಗದಿದ್ದಾಗ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಯಲ್ಲಪ್ಪ ಅವರನ್ನು ರಕ್ಷಿಸಿ ಕಿಮ್ಸ್ ಗೆ ದಾಖಲಿಸಿದ್ದಾರೆ. ನಾಗೇಶ್ ಹಂಚಿನಮನಿ ಎಂಬಾತ ಈ ಕಾಮಗಾರಿ ಗುತ್ತಿಗೆ ಪಡೆದಿದ್ದ ಎನ್ನಲಾಗಿದ್ದು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಮೈಸೂರು, ಬೆಂಗ್ಳೂರು ಹೆದ್ದಾರಿ ಅಗಲೀಕರಣ- ಮಣ್ಣು ಕುಸಿದು ಇಬ್ಬರ ಸಾವು

    ಮೈಸೂರು, ಬೆಂಗ್ಳೂರು ಹೆದ್ದಾರಿ ಅಗಲೀಕರಣ- ಮಣ್ಣು ಕುಸಿದು ಇಬ್ಬರ ಸಾವು

    ಮಂಡ್ಯ: ರಸ್ತೆ ಅಗಲೀಕರಣದ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

    ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣದ ಕೆಲಸ ಸದ್ಯ ನಡೆಯುತ್ತಿದ್ದು, ಈ ವೇಳೆ ಮಣ್ಣು ಕುಸಿದ ಪರಿಣಾಮ ಜಾರ್ಖಂಡ್ ಮೂಲದ ಕಾರ್ಮಿಕರಾದ ಕಾಶಿನಾಥ್ (36) ಮತ್ತು ರಾಜ್‍ಗಂಧ್ (30) ಇಬ್ಬರು ಸಾವನ್ನಪ್ಪಿದ್ದಾರೆ.

    ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದ ಕೃಷಿ ಕಚೇರಿ ಬಳಿ ಜೆಸಿಬಿಯಲ್ಲಿ ಗುಂಡಿ ತೆಗೆಯಲಾಗುತ್ತಿತ್ತು. ಈ ವೇಳೆ ಈ ಇಬ್ಬರು ನೌಕರರು ಗುಂಡಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ಮಣ್ಣು ಕುಸಿದಿದೆ. ಕುಸಿದ ಮಣ್ಣು ಇಬ್ಬರು ನೌಕರರ ಮೇಲೆ ಬಿದ್ದಿದ್ದು, ಬಳಿಕ ಮಣ್ಣನ್ನು ತೆರವು ಮಾಡಿ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮದ್ದೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.

  • ಗುಡ್ಡ ಕುಸಿತ – ಮದುವೆ ಮನೆಯಲ್ಲಿದ್ದ 15 ಮಂದಿ ಬಲಿ, 30ಕ್ಕೂ ಹೆಚ್ಚು ಮಂದಿ ಗಂಭೀರ

    ಗುಡ್ಡ ಕುಸಿತ – ಮದುವೆ ಮನೆಯಲ್ಲಿದ್ದ 15 ಮಂದಿ ಬಲಿ, 30ಕ್ಕೂ ಹೆಚ್ಚು ಮಂದಿ ಗಂಭೀರ

    ಪೆರು: ಮದುವೆ ಮನೆಯ ಸಂಭ್ರಮದ ವೇಳೆ ಗುಡ್ಡ ಕುಸಿದು 15 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ದಕ್ಷಿಣ ಅಮೆರಿಕದ ಪೇರುನಲ್ಲಿ ನಡೆದಿದೆ.

    ಅಲಾಂಬ್ರ ಹೋಟೆಲ್‍ನಲ್ಲಿ ಮದುವೆಯ ಪಾರ್ಟಿ ನಡೆಯುತ್ತಿತ್ತು. ಅಲ್ಲಿ ಜೋರಾಗಿ ಮಳೆ ಬಂದಿದ್ದ ಕಾರಣ ಮಣ್ಣು ಹಾಗೂ ಮಣ್ಣಿನ ವಸ್ತುಗಳು ಕೆಳಗೆ ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಿದ್ದ ಅತಿಥಿಗಳ ಮೇಲೆ ಕುಸಿದಿದೆ. ಪರಿಣಾಮ 15 ಮಂದಿ ಮೃತಪಟ್ಟಿದ್ದಾರೆ.

    ಈ ಮದುವೆ ಪಾರ್ಟಿಗೆ ಸುಮಾರು 100 ಮಂದಿ ಅತಿಥಿಗಳನ್ನು ಆಹ್ವಾನಿಸಲಾಗಿತ್ತು. ಅದರಲ್ಲಿ 15 ಮೃತಪಟ್ಟರೆ, 34 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಅಧಿಕಾರಿಗಳ ಪ್ರಕಾರ ಹೋಟೆಲ್ ಗುಡ್ಡದ ಹತ್ತಿರ ನಿರ್ಮಿಸಲಾಗಿತ್ತು. ಅಲ್ಲದೇ ಗೋಡೆ ಕುಸಿದು ಬಿದ್ದ ಬಳಿಕ ಮದುವೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದವರ ಮೇಲೆ ಮಣ್ಣು ಕುಸಿದು ಬಿದ್ದಿದೆ. ಗೋಡೆ ಪಕ್ಕದಲ್ಲಿದ್ದ 50 ಮಂದಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಡಿಕೇರಿಯಲ್ಲಿ ಮಣ್ಣು ಕುಸಿದು ಸ್ಥಳದಲ್ಲಿಯೇ ಇಬ್ಬರು ಮಹಿಳಾ ಕಾರ್ಮಿಕರು ಸಾವು

    ಮಡಿಕೇರಿಯಲ್ಲಿ ಮಣ್ಣು ಕುಸಿದು ಸ್ಥಳದಲ್ಲಿಯೇ ಇಬ್ಬರು ಮಹಿಳಾ ಕಾರ್ಮಿಕರು ಸಾವು

    ಮಡಿಕೇರಿ: ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿದು ಸ್ಥಳದಲ್ಲಿಯೇ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಹಾಸನ ಜಿಲ್ಲೆ ಹಳೇಬೀಡು ಮೂಲದ ಕಾರ್ಮಿಕರಾದ ಗೌರಮ್ಮ (40), ಯಶೋಧ(20) ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮಡಿಕೇರಿ ನಿವಾಸಿ ಸುಬ್ಬಯ್ಯ ಎಂಬವರ ಮನೆ ಕಟ್ಟಡ ನಿರ್ಮಾಣ ವೇಳೆ ಈ ಅವಘಡ ಸಂಭವಿಸಿದೆ. ಮತ್ತೋರ್ವ ಕಾರ್ಮಿಕ ವೆಂಕಟಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಹಳೇಬೀಡು ಮೂಲದ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಮಡಿಕೇರಿಯ ರಾಜಾ ಸೀಟ್ ಬಳಿ ಮಣ್ಣಿನ ಕೆಲಸಕ್ಕೆ ಬಂದಿದ್ದರು. ಮಡಿಕೇರಿ ನಗರದ ಗೌಳಿ ಬೀದಿಯಲ್ಲಿನ ಸುಬ್ಬಯ್ಯ ಅವರ ಮನೆಯಲ್ಲಿ ಒಟ್ಟು 6 ಜನ ಇಂದು ತಳಪಾಯನ್ನು ತೆಗೆಯುತ್ತಿದ್ದರು. ಈ ವೇಳೆ ಬರೆ ಕುಸಿದು ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಪಾರಾಗಿದ್ದಾರೆ.

    ಬದುಕುಳಿದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಲ್ಲಿ ವೆಂಕಟಸ್ವಾಮಿ ಸ್ಥಿತಿ ಚಿಂತಾಜನಕವಾಗಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮೃತಪಟ್ಟ ಮಹಿಳೆಯರಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ಕೊಡಿಸಲಾಗುತ್ತದೆ ಎಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ನಿವೃತ್ತ ಮಡಿಕೇರಿ ನಿರೀಕ್ಷಕ ಅನೂಪ್ ಮಾದಪ್ಪ ಭರವಸೆ ನೀಡಿದ್ದಾರೆ.

    ಬರೆಯ ಮಣ್ಣಿನಲ್ಲಿ ಸಿಲುಕಿ ಬದುಕುಳಿದ ಮಹಿಳೆ ಮಾತನಾಡಿ, ಕೆಲಸವನ್ನು ಮುಗಿಸಿ ಇನ್ನೊಂದು 10 ಬುಟ್ಟಿ ಮಣ್ಣು ಬಾಕಿ ಇತ್ತು. ಅದನ್ನು ಎತ್ತಿ ಹಾಕಿ ಹೋಗೋಣ ಅಂದುಕೊಂಡಿದ್ದೇವು. ಮಣ್ಣ ತೆಗೀತಾ ಇದ್ದಾಗ ಕಣ್ಣು ಮುಚ್ಚಿ ಬಿಡೋದರೋಳಗೆ ಬರೆ ಕುಸಿಯಿತು. ಸತ್ತವರಲ್ಲಿ ಒಬ್ಬಳಿಗೆ ಎರಡು ಪುಟ್ಟ ಮಕ್ಕಳಿದ್ದಾರೆ. ಇನ್ನೊಬ್ಬಳಿಗೆ ಮದುವೆಯಾಗಿ ಕೇವಲ 6 ತಿಂಗಳು ಆಗಿದೆ ಎಂದು ದು:ಖ ತೋಡಿಕೊಂಡರು.

    ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ ಮಣ್ಣಿನ ಅಡಿ ಸಿಲುಕಿಕೊಂಡಿದ್ದ ಗೌರಮ್ಮ ಹಾಗೂ ಯಶೋಧ ಅವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೆಂಕಟಸ್ವಾಮಿ ಅವರನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಕಾರ್ಮಿಕರ ಸಾವು

    ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಕಾರ್ಮಿಕರ ಸಾವು

    ಬೆಂಗಳೂರು: ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಮಹದೇವಪುರದ ಬಳಿ ನಡೆದಿದೆ.

    ಮೃತರನ್ನು ಉತ್ತರ ಭಾರತ ಮೂಲದ ಸಂದೀಪ್(24) ಅಖಿಲೇಶ್ ಯಾದವ್(26) ಎಂದು ಗುರುತಿಸಲಾಗಿದೆ. ಕೆಆರ್ ಪುರದ ಬಳಿ ನಡೆಯುತ್ತಿರುವ ಕೆಸಿ ವ್ಯಾಲಿ ಕಾಮಗಾರಿ ಸ್ಥಳದಲ್ಲಿ ಘಟನೆ ನಡೆದಿದೆ. ಈ ವೇಳೆ ಎಂಜಿನಿಯರ್ ಉಮಾಶಂಕರ್ ಎಂಬವರನ್ನು ರಕ್ಷಣೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳದಲ್ಲಿ ಮೃತ ಪಟ್ಟ ಕಾರ್ಮಿಕರ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.