Tag: ಮತಎಣಿಕೆ

  • ಲೋಕಸಭಾ ಚುನಾವಣೆ ಮತಎಣಿಕೆ – ಮದ್ಯ ಮಾರಾಟಕ್ಕೆ ಬ್ರೇಕ್

    ಲೋಕಸಭಾ ಚುನಾವಣೆ ಮತಎಣಿಕೆ – ಮದ್ಯ ಮಾರಾಟಕ್ಕೆ ಬ್ರೇಕ್

    ಮಂಡ್ಯ: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮೇ 23 ರಂದು ನಡೆಯುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ.

    ಜಿಲ್ಲಾಧಿಕಾರಿ ಡಾ. ಪಿಸಿ ಜಾಫರ್ ಕರ್ನಾಟಕ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಸೆಕ್ಷನ್ 135 ಸಿರ ರೀತ್ಯಾ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮ 1967ರ ನಿಯಮ 10 (ಬಿ) ಅನ್ವಯ ಆದೇಶ ನೀಡಿದ್ದು, ಮೇ 22ರ ಮಧ್ಯ ರಾತ್ರಿಯಿಂದ 23ರ ವರೆಗೆ ಮದ್ಯ ಮಾರಾಟ ನಿಷೇಧಿಸಿದ್ದಾರೆ. ಮಂಡ್ಯ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯದ ಅಂಗಡಿ, ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್‍ಗಳಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆಗೆ ನಿಷೇಧ ಮಾಡಲಾಗಿದೆ.

    ಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ ಮತ ಎಣಿಕೆ ದಿನದಂದು ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಎಸ್‍ಪಿ ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು. ಕ್ಷೇತ್ರದಲ್ಲಿ ಭದ್ರತೆ ನೀಡಲು ಹೆಚ್ಚಿನ ಪೊಲೀಸರ ನಿಯೋಜನೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದ್ದಾರೆ. ಮೇ 23 ಮತ್ತು 24 ರಂದು ಯಾವುದೇ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.