Tag: ಮತದಾನ

  • ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ರೂ ಚಿಕ್ಕಣ್ಣ ವೋಟ್ ಹಾಕಿಲ್ಲ!

    ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ರೂ ಚಿಕ್ಕಣ್ಣ ವೋಟ್ ಹಾಕಿಲ್ಲ!

    ಮೈಸೂರು: ಮತದಾನದ ಹಕ್ಕಿನಿಂದ ಹಾಸ್ಯನಟ ಚಿಕ್ಕಣ್ಣ ವಂಚಿತರಾಗಿದ್ದಾರೆ.

    ಚಿಕ್ಕಣ್ಣ ಮೈಸೂರಿನ ಬಲ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾರರಾಗಿದ್ದರು. ಅಲ್ಲದೇ ಹುಟ್ಟೂರಿನಲ್ಲಿ ಮತದಾನದ ಹಕ್ಕನ್ನು ಉಳಿಸಿಕೊಂಡಿದ್ದರು. ಮತದಾನಕ್ಕಾಗಿ ಬೆಂಗಳೂರಿನಿಂದ ಮೈಸೂರಿಗೂ ಕೂಡ ಆಗಮಿಸಿದ್ದರು.

    ಚಿಕ್ಕಣ್ಣ ಇಂದು ಮತಗಟ್ಟೆಗೆ ಭೇಟಿ ನೀಡಿದಾಗ ತನ್ನ ಹೆಸರಿನ ಮೇಲೆ ಡಿಲೀಟ್ ಎಂದು ಉಲ್ಲೇಖಿಸಿದ್ದಾರೆ. ವಾಸವಿಲ್ಲದ ಕಾರಣ ಡಿಲೀಟ್ ಆಗಿದೆ ಎಂದು ಮತಗಟ್ಟೆ ಸಿಬ್ಬಂದಿಗಳು ಸಬೂಬು ಹೇಳಿದ್ದಾರೆ. ಅಲ್ಲದೇ ಗ್ರಾಮದ ಹಲವರ ಹೆಸರನ್ನು ಡಿಲೀಟ್ ಮಾಡಿರುವ ಬಗ್ಗೆ ಆರೋಪಿಸಿದ್ದಾರೆ.

    ಕೊನೆಗೂ ಚಿಕ್ಕಣ ತಮ್ಮ ಮತದಾನ ಮಾಡದೆ ವಾಪಸ್ ಆಗಿದ್ದಾರೆ. ಚಿಕ್ಕಣ್ಣ ಮತದಾನಕ್ಕಾಗಿಯೇ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದರು ಆದರೆ ಈಗ ಬೇಸರದಿಂದ ವಾಪಸ್ ಆಗಿದ್ದಾರೆ.

  • ವೋಟ್ ಮಾಡಿದ ಕಿಚ್ಚನಿಗೆ ಸಿಕ್ತು ಗಿಫ್ಟ್

    ವೋಟ್ ಮಾಡಿದ ಕಿಚ್ಚನಿಗೆ ಸಿಕ್ತು ಗಿಫ್ಟ್

    ಬೆಂಗಳೂರು: ಸಿನಿಮಾ ಕಲಾವಿದರು ತಮ್ಮ ಹಕ್ಕನ್ನು ಚಲಾಯಿಸಲು ಕೆಲಸದ ಮಧ್ಯೆ ಬಿಡುವು ಮಾಡಿಕೊಂಡು ಬಂದಿದ್ದು, ನಟ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಮತಚಲಾವಣೆ ಮಾಡಿದ್ದಾರೆ. ಬೊಮ್ಮನಹಳ್ಳಿಯ ಮತಗಟ್ಟೆ ಸಂಖ್ಯೆ 175 ಕೇಂದ್ರಕ್ಕೆ ಹೋಗಿ ಮತದಾನ ಮಾಡಿದ್ದಾರೆ.

    ಮತದಾನ ಮಾಡಿ ಮಾತನಾಡಿದ ಕಿಚ್ಚ ಎಲ್ಲೆಡೆ ಮತದಾನ ಕಡಿಮೆಯಾಗಿದೆ ಎಂದು ಕೇಳಬೇಡಿ. ನಾನು ಪತ್ನಿ ಜೊತೆ ಮತದಾನ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ದೂರಬೇಡಿ. ಇಂದೇ ಮತ ಚಲಾಯಿಸಿ, ಅಭಿವೃದ್ಧಿಗೆ ನಾಂದಿ ಹಾಡಿ ಎಂದು ಹೇಳಿದ್ದಾರೆ.

    ಇದೇ ವೇಳೆ ಅವರ ಅಭಿಮಾನಿಗಳ ಬಂದು ಮತದಾನ ಮಾಡಿದ ಕಿಚ್ಚನಿಗೆ ತುಳಸಿ ಗಿಡ ಕೊಟ್ಟಿದ್ದಾರೆ. ಕಳೆದ ಒಂದು ತಿಂಗಳಿನಿಂದ ಬೆಂಗಳೂರು ರಾಜಕೀಯ ಕ್ರೀಯಾ ಸಮಿತಿ(ಬಿಪ್ಯಾಕ್) ಪ್ರಥಮ ಬಾರಿಗೆ ಮತ ಚಲಾಯಿಸುವವರಿಗೂ ಹಾಗೂ ಹಿರಿಯ ನಾಗರಿಕರಿಗೆ ಗಿಡಗಳನ್ನು ನೀಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿತು.

  • ಮತ ಚಲಾಯಿಸಿ ಹಾಡು ಹಾಡಿದ ಚಂದನ್ ಶೆಟ್ಟಿ!

    ಮತ ಚಲಾಯಿಸಿ ಹಾಡು ಹಾಡಿದ ಚಂದನ್ ಶೆಟ್ಟಿ!

    ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ರ‍್ಯಾಪರ್ ಹಾಗೂ ಬಿಗ್ ಬಾಸ್-5ರ ವಿಜೇತ ಚಂದನ್ ಶೆಟ್ಟಿ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದಲ್ಲಿ ತಮ್ಮ ಕುಟುಂಬದ ಜೊತೆ ಬಂದು ಮತ ಚಲಾಯಿಸಿದ್ದಾರೆ.

    ಚಂದನ್ ಶೆಟ್ಟಿ ಮತ ಚಲಾಯಿಸಿ ಬಂದ ಕೂಡಲೇ ಅವರನ್ನು ಪುಟ್ಟ ಮಕ್ಕಳು ಆಗಮಿಸಿದ್ದರು. ಮಕ್ಕಳು ಚಂದನ್ ಶೆಟ್ಟಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ನಂತರ ಚಂದನ್ ಶೆಟ್ಟಿ ಮಕ್ಕಳ ಮೂಲಕ ಮತ ಚಲಾಯಿಸಿ ಎಂಬ ಜಾಗೃತಿ ಮೂಡಿಸಿದರು.

    ಮತದಾನ ನಮ್ಮೆಲ್ಲರ ಹಕ್ಕು. ನಾವು ಪ್ರಜೆ ಎಂದು ಪ್ರೂವ್ ಮಾಡಿಕೊಳ್ಳಲು ಒಳ್ಳೆಯ ದಿನ. ನಾವು ಪ್ರಜೆಯಾಗಿದ್ದಕ್ಕೂ ಸಾರ್ಥಕವಾಗೋ ದಿನ. ನೀವು ಕೂಡ ಮತಚಲಾಯಿಸಿ ನಿಮ್ಮ ಹಕ್ಕನ್ನು ಉಳಿಸಿಕೊಳ್ಳಿ ಎಂದು ಚಂದನ್ ಶೆಟ್ಟಿ ಹೇಳಿದರು.

    ಚಂದನ್ ಶೆಟ್ಟಿ ಕೊನೆಯಲ್ಲಿ ತಮ್ಮ ರ‍್ಯಾಪ್ ಸಾಂಗ್ ಮೂಲಕ ಎಲ್ಲರಿಗೂ ಮತದಾನದ ಜಾಗೃತಿ ಮೂಡಿಸಿದ್ದಾರೆ. “ವೋಟ್ ಮಾಡಬೇಕು ನಾವು ವೋಟ್ ಮಾಡಬೇಕು” ಎಂದು ಸಾಂಗ್ ಹೇಳುವ ಮೂಲಕ ಚಂದನ್ ಮತದಾನದ ಜಾಗೃತಿ ಮೂಡಿಸಿದರು.

  • ಹೆರಿಗೆ ನೋವಲ್ಲೂ ವೋಟ್ ಮಾಡಿ ಮಗುವಿಗೆ ಜನ್ಮ ನೀಡಿದ ತಾಯಿ

    ಹೆರಿಗೆ ನೋವಲ್ಲೂ ವೋಟ್ ಮಾಡಿ ಮಗುವಿಗೆ ಜನ್ಮ ನೀಡಿದ ತಾಯಿ

    ಹುಬ್ಬಳ್ಳಿ/ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುವ ಸಂದರ್ಭದಲ್ಲಿ ಗರ್ಭಿಣಿಯೊಬ್ಬರು ಕುಸಿದು ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮತದಾನ ನಡೆಯುತ್ತಿತ್ತು. ಈ ವೇಳೆ ಸಾವಿತ್ರಿ ಕಿರೇಸೂರ ಗರ್ಭಿಣಿ ಮತದಾನ ಮಾಡಲು ಆಗಮಿಸಿದ್ದರು. ಆದರೆ ಮತ ಚಲಾಯಿಸುತ್ತಿದಂತೆ ಅಲ್ಲಿಯೇ ಕುಸಿದು ಬಿದ್ದಿದ್ದಾರೆ.

    ಮತದಾನ ಕೇಂದ್ರದಲ್ಲಿದ್ದ ಚುನಾವಣಾ ಸಿಬ್ಬಂದಿ ಸ್ಥಳದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ನಂತರ ಸಮೀಪದ ಕುಂದಗೋಳ ತಾಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.

    ಇನ್ನು ಯಾದಗಿರಿಯ ಜಿಲ್ಕೆ ಸುರಪುರ ತಾಲೂಕಿನ ಕೊಡೆಕಲ್ ವ್ಯಾಪ್ತಿಯ ಬೈಲುಕುಂಟೆ ಗ್ರಾಮದಲ್ಲಿ, ಗರ್ಭಿಣಿಯೊಬ್ಬರು ಹೆರಿಗೆ ನೋವಿನ ಮಧ್ಯೆಯೂ ಮತದಾನ ಮಾಡಿದ್ದಾರೆ. ನಂತರ ಗರ್ಭಿಣಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

  • ಸಪ್ತಪದಿ ತುಳಿದು ನವದಂಪತಿಯಿಂದ ಮತದಾನ

    ಸಪ್ತಪದಿ ತುಳಿದು ನವದಂಪತಿಯಿಂದ ಮತದಾನ

    ಧಾರವಾಡ/ಬೆಂಗಳೂರು: ರಾಜ್ಯದ ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದ್ದು, ನಗರದ ನವ ದಂಪತಿ ನೇರವಾಗಿ ಮದುವೆ ಮಂಟಪದಿಂದ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನ ಚಲಾಯಿಸಿದ್ದಾರೆ.

    ಧಾರವಾಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿಂದು ಮಲ್ಲಿಕಾರ್ಜುನ ಮತ್ತು ನಿಖಿತಾ ಮದುವೆ ನಿಶ್ಚಯವಾಗಿತ್ತು. ಈ ದಂಪತಿ ಸಪ್ತಪದಿ ತುಳಿದ ನಂತರ ನೇರವಾಗಿ ನಗರದ ಕಾಮನಕಟ್ಟಿ ಬುತ್ ನಂಬರ್ 191 ರ ಮತಗಟ್ಟೆಗೆ ತೆರಳಿ ಮತಚಲಾಯಿಸಿದ್ದಾರೆ.

    ಈ ವೇಳೆ ವರ ಮಲ್ಲಿಕಾರ್ಜುನ ಮತ್ತು ನಿಖಿತಾಗೆ ಮತಗಟ್ಟೆ ಬಳಿ ಇದ್ದ ಮತದಾರರು ಶುಭ ಕೋರಿದ್ದಾರೆ. ಇನ್ನು ವರ ಮಲ್ಲಿಕಾರ್ಜುನ, ಎಲ್ಲರು ಮತ ಚಲಾಯಿಸಿ ಮತದಾನ ಮಾಡುವುದು ನಮ್ಮ ಹಕ್ಕು. ನಮ್ಮ ರಾಜ್ಯಕ್ಕಾಗಿ ಮತದಾನ ಮಾಡಿ ಎಂದು ಕರೆ ನೀಡಿದ್ದಾರೆ.

    ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ. ರಾತ್ರಿ ಸುರಿದ ಮಳೆಯ ಪರಿಣಾಮ ಬೆಂಗಳೂರಿನ ಸಿ.ವಿ.ರಾಮನ್ ನಗರದ ಬೂತ್ ನಂಬರ್ 122 ರ ಮತಗಟ್ಟೆ ತುಂಬಾ ನೀರು ತುಂಬಿದೆ. ಇದರಿಂದ ಚುನಾವಣಾ ಸಿಬ್ಬಂದಿ ನೀರು ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಇನ್ನು ಮತದಾನ ಮಾಡಲು ಬರುವ ಮತದಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂದು ಮಧ್ಯಾಹ್ನದ ಬಳಿಕ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಳಗಿನ ಅವಧಿಯಲ್ಲೇ ಬಿರುಸಿನ ಮತದಾನ ನಡೆದಿದೆ.

  • ವೋಟ್ ಮಾಡಿದ ಬಾರ್ಬಿ ಗರ್ಲ್ ಗೆ ಡಬಲ್ ಖುಷಿ

    ವೋಟ್ ಮಾಡಿದ ಬಾರ್ಬಿ ಗರ್ಲ್ ಗೆ ಡಬಲ್ ಖುಷಿ

    ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಭರ್ಜರಿಯಿಂದ ಸಾಗುತ್ತಿದೆ. ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ.

    ಬಿಗ್ ಬಾಸ್ ಸೀಸನ್ 5ನ ಕಾರ್ಯಕ್ರಮದ ಸ್ಪರ್ಧಿ ನಿವೇದಿತಾ ಗೌಡ ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 192ರಲ್ಲಿ ಮತ ಚಲಾವಣೆ ಮಾಡಿದ್ದಾರೆ.

    ಮೈಸೂರಿನ ದಟ್ಟಗಳ್ಳಿ ಕನಕದಾಸ ನಗರದಲ್ಲಿರುವ ಮತಗಟ್ಟೆ ಕೇಂದ್ರಕ್ಕೆ ಪೋಷಕರ ಜೊತೆ ಹೋಗಿ ನಿವೇದಿತಾ ಗೌಡ ಮತದಾನ ಮಾಡಿದ್ದಾರೆ. ಇಂದು ನಿವೇದಿತಾ ಗೌಡ ಹುಟ್ಟಿದ ದಿನವಾಗಿದೆ. ಇಂದೇ ಮೊದಲ ಬಾರಿ ಮತದಾನ ಮಾಡಿದ್ದಾರೆ. ತಾನು ಹುಟ್ಟಿದ ದಿನದಂದೇ ಮೊದಲ ಮತದಾನ ಮಾಡಿದ್ದ ಖುಷಿಯಲ್ಲಿದ್ದು, ತುಂಬಾ ಸಂತಸವಾಗಿದೆ. ಇದೇ ಮೊದಲ ಬಾರಿಗೆ ನಾನು ಮತದಾನ ಮಾಡಿದ್ದೇನೆ ಎಂದು ಹೇಳಿದ್ದಾರೆ.

    ಇದೇ ವೇಳೆ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ. ಜೊತೆಗೆ ಅವರ ತಾಯಿ ಮತ್ತು ನಿವೇದಿತಾ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಇನ್ಸ್ ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.

    ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಜಯನಗರ, ರಾಜರಾಜೇಶ್ವರಿನಗರ ಹೊರತು ಪಡಿಸಿ 222 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮೂರು ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಎರಡೂವರೆ ಸಾವಿರ ಅಭ್ಯರ್ಥಿಗಳ ರಾಜಕೀಯ ಹಣೆಬರಹವನ್ನ ಮತದಾರರು ಇಂದು ನಿರ್ಧರಿಸಲಿದ್ದಾರೆ.

    https://www.instagram.com/p/Biqkvm8hxZN/?hl=en&taken-by=chandanshettyofficial

  • ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ವಧು!

    ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ವಧು!

    ಕೊಡಗು: ರಾಜ್ಯಾದ್ಯಂತ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮಡಕೇರಿಯಲ್ಲಿ ಮದುವೆಗೂ ಮುನ್ನ ಮದುಮಗಳು ತಮ್ಮ ಮತವನ್ನು ಚಲಾಯಿಸಿದ್ದಾರೆ.

    ಸ್ಮಿತಾ ಮಡಿಕೇರಿ ತಾಲೂಕಿನ ಕಾಂಡನಕೊಲ್ಲಿ ಮತಗಟ್ಟಿ ಸಂಖ್ಯೆ 131 ಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮದುಮಗಳಂತೆ ಅಲಂಕರಿಸಿ ಮತಗಟ್ಟೆಗೆ ಆಗಮಿಸಿದ ಸ್ಮಿತಾ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

    ಸ್ಮಿತಾ ಇಂದು ಗೌಡ ಸಮಾಜದಲ್ಲಿ ಮದುವೆ ಆಗುತ್ತಿದ್ದು, ಮಡಿಕೇರಿಯ ಮೂವತೊಕ್ಕಲಿನ ಬಿಎಂಟಿಸಿ ಸಿಬ್ಬಂದಿ ಆದ ಪ್ರವೀಣ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ಮಂಗಳೂರಿನಲ್ಲೂ ಕೂಡ ವಧುವೊಬ್ಬರು ತಮ್ಮ ಮತ ಚಲಾಯಿಸಿದ್ದಾರೆ. ನಗರದ ಬೋಂದೆಲ್ ಸೇಂಟ್ ಲಾರೆನ್ಸ್ ಮೀಡಿಯಂ ಶಾಲೆಯಲ್ಲಿ ಮತದಾನ ನಡೆಯುತ್ತಿದ್ದು, ಪಚ್ಚನಾಡಿಯ ಮದುಮಗಳು ವಿಯೋಲಾ ಮಾರಿಯಾ ಫೆರ್ನಾಂಡೀಸ್ ಮತದಾನ ಮಾಡಿದ್ದಾರೆ.

    7 ಗಂಟೆಗೆ ಮತದಾನ ಮಾಡಿ ಬಳಿಕ ಬೆಳ್ತಂಗಡಿಯಲ್ಲಿ ನಡೆಯೋ ಮದುವೆಗೆ ಮದುಮಗಳು ತೆರಳಿದ್ದಾರೆ. ಬೆಳ್ತಂಗಡಿಯ ವರ ಸಿಲ್ವೆಸ್ಟರ್ ರೋಡ್ರಿಗಸ್ ಜೊತೆ ಮಾರಿಯಾ ಮದುವೆ ನಡೆಯಲಿದೆ. ಒಟ್ಟಿನಲ್ಲಿ ವಿಯೋಲಾ ಹಾಗೂ ಸ್ಮಿತಾ ಅವರು ಮದುವೆಗೂ ಮುನ್ನ ಮತದಾನ ಮಾಡಿ ಮಾದರಿಯಾಗಿದ್ದಾರೆ.

  • ಮತ ಚಲಾಯಿಸಲು ಬೂತ್‍ ಗೆ ಆಗಮಿಸಿದ್ದ ಮಹಿಳೆಗೆ ಬಿಗ್ ಶಾಕ್!

    ಮತ ಚಲಾಯಿಸಲು ಬೂತ್‍ ಗೆ ಆಗಮಿಸಿದ್ದ ಮಹಿಳೆಗೆ ಬಿಗ್ ಶಾಕ್!

    ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆದ ಮತದಾನ ಭರ್ಜರಿಯಿಂದ ಸಾಗುತ್ತಿದ್ದು, ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ.

    ಯಾದಗಿರಿಯ ಕೋಳಿವಾಡ ಮತಗಟ್ಟೆ 38ರಲ್ಲಿ ಎಡವಟ್ಟು ಆಗಿದ್ದು, ಮತ ಚಲಾಯಿಸಲು ಬಂದ ಮಹಿಳೆಗೆ ನಿಮ್ಮ ವೋಟ್ ಹಾಕಲಾಗಿದೆ ಎಂದ ಚುನಾವಣಾ ಅಧಿಕಾರಿಗಳು ಹೇಳಿದ್ದಾರೆ. ಇದರಿಂದ ಮಹಿಳೆ ಗಾಬರಿಗೊಂಡಿದ್ದಾರೆ.

    ಇಂದು ಮತದಾನ ಮಾತದಾನ ಮಾಡಲು ಬಸ್ಸಮ್ಮ ಕೊಳಿವಾಡನ ಮತಗಟ್ಟೆ 38 ರ ಕೇಂದ್ರಕ್ಕೆ ಬಂದಿದ್ದಾರೆ. ಆಗ ಚುನಾವಣಾಧಿಕಾರಿಗಳು ನಿಮ್ಮ ಮತಚಲಾಯಿಸಿದೆ ಎಂದು ಹೇಳಿದ್ದಾರೆ. ಮತದಾನದಿಂದ ವಂಚಿತಳಾದ ಬಸ್ಸಮ್ಮ ಚುನಾವಣೆ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಬಸ್ಸಮ್ಮ ಹೆಸರಿನಲ್ಲಿ ಯಾರು ಮತಚಲಾಯಿಸದ್ದಾರೆಂಬ ಅನುಮಾನ ಮೂಡಿದೆ.

    ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಜಯನಗರ, ರಾಜರಾಜೇಶ್ವರಿನಗರ ಹೊರತು ಪಡಿಸಿ 222 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮೂರು ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಎರಡೂವರೆ ಸಾವಿರ ಅಭ್ಯರ್ಥಿಗಳ ರಾಜಕೀಯ ಹಣೆಬರಹವನ್ನ ಮತದಾರರು ನಿರ್ಧರಿಸಲಿದ್ದಾರೆ.

  • ವಿಶ್ವಕ್ಕೆ ಗುರು ಭಾರತ, ಪ್ರಜೆಯಾಗಿ ಮತದಾನ ಮಾಡಿದ್ದೇನೆ: ನಟ ಉಪೇಂದ್ರ

    ವಿಶ್ವಕ್ಕೆ ಗುರು ಭಾರತ, ಪ್ರಜೆಯಾಗಿ ಮತದಾನ ಮಾಡಿದ್ದೇನೆ: ನಟ ಉಪೇಂದ್ರ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಭರ್ಜರಿಯಿಂದ ಸಾಗುತ್ತಿದೆ. ಒಟ್ಟು 222 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮೇ 15ಕ್ಕೆ ಮತ ಎಣಿಕೆ ನಡೆಯಲಿದೆ.

    ಹಿರಿಯರು, ಮಹಿಳೆಯರು, ಯುವಕರು ಹಾಗೂ ಸಿನಿಮಾ ನಟ-ನಟಿಯರು ಮತದಾನ ಮಾಡುತ್ತಿದ್ದು, ನಟ, ನಿರ್ದೇಶಕ ಉಪೇಂದ್ರ ಮತದಾನ ಮಾಡಿದ್ದಾರೆ. ಮತದಾನ ಮಾಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಪಕ್ಷ ಮಾಡುವಾಗಲೂ ಪ್ರಜೆಯಾಗಿ ಮಾಡಿದ್ದೇನೆ. ನಾಯಕನಾಗಿ ಅಲ್ಲ. ಪ್ರಜೆಗಳಿಗೂ ನಾನು ಇದೇ ಹೇಳಿದ್ದಾನೆ.

    ಇವತ್ತು ಒಂದು ದಿನ ನಾನು ಪ್ರಜೆ. ಪ್ರತಿ 5 ವರ್ಷಗೊಮ್ಮೆ ಮತದಾನ ಮಾಡಲು ಅವಕಾಶ ಬರುತ್ತದೆ. ಆದ್ದರಿಂದ ನನಗೆ ಇಂದು ವೋಟ್ ಮಾಡಲು ತುಂಬಾ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ರಾಜಕೀಯದ ಬಗ್ಗೆ ಮಾತನಾಡಿದ ಅವರು, ನಮ್ಮ ರಾಜ್ಯ ರಾಜಕೀಯದ ಬಗ್ಗೆ ಪ್ರಜೆಗಳಿಗೆ ತಿಳಿದಿದ್ದರು. ಇಂದು 60% ಜನರು ಮತದಾನ ಮಾಡುತ್ತಾರೆ ಎಂದರೆ ಅದು ನಿಜವಾಗಿಯೂ ಗ್ರೇಟ್ ಆಗಿದೆ.

    ಈ ದೇಶದವರು ತಮ್ಮ ಭರವಸೆಯನ್ನು ಕಳೆದುಕೊಂಡಿಲ್ಲ. ಈ ದೇಶ ಗ್ರೇಟೆಸ್ಟ್ ಆಗಿದೆ. ಇಲ್ಲಿ ಎಲ್ಲಾ ವಿಚಾರಗಳಿಗೂ ಆಧರಣೆ ಇದೆ. ಆದ್ದರಿಂದ ವಿಶ್ವದ ಗುರು ಈ ದೇಶ. ಇದೊಂದು ಭರವಸೆಯ ದೇಶವಾಗಿದೆ. ಈ ದೇಶದಲ್ಲಿ ಎಷ್ಟೇ ಬಡತನ, ಕಷ್ಟ ಇದ್ದರೂ ಬೇರೆ ಶ್ರೀಮಂತ ದೇಶಕ್ಕೆ ಹೋಗಿ ಬಂದಾಗ ಬೇಸರವಾಗುತ್ತದೆ. ಆದ್ದರಿಂದ ನಿಜವಾಗಿಯೂ ಭಾರತದವರು ತುಂಬಾ ಖುಷಿಯಾಗಿದ್ದಾರೆ ಎನ್ನಿಸುತ್ತದೆ ಎಂದ್ರು.

    ರಾಜ್ಯ ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಜಯನಗರ, ರಾಜರಾಜೇಶ್ವರಿನಗರ ಹೊರತು ಪಡಿಸಿ 222 ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮೂರು ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಎರಡೂವರೆ ಸಾವಿರ ಅಭ್ಯರ್ಥಿಗಳ ರಾಜಕೀಯ ಹಣೆಬರಹವನ್ನ ಮತದಾರರು ಇಂದು ನಿರ್ಧರಿಸಲಿದ್ದಾರೆ.

  • ಮತದಾನಕ್ಕೆ ಅವಕಾಶ ನೀಡದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ತುಂಬು ಗರ್ಭಿಣಿ!

    ಮತದಾನಕ್ಕೆ ಅವಕಾಶ ನೀಡದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ತುಂಬು ಗರ್ಭಿಣಿ!

    ಬೆಂಗಳೂರು: ಮತದಾನಕ್ಕೆ ಅವಕಾಶ ನೀಡದ್ದಕ್ಕೆ ತುಂಬು ಗರ್ಭಿಣಿಯೊಬ್ಬರು ಬಿಕ್ಕಿ ಬಿಕ್ಕಿ ಅತ್ತ ಘಟನೆ ಬನಶಂಕರಿಯ ಬಿಎನ್ ಎಂ ಕಾಲೇಜಿನ 142 ರ ಮತಗಟ್ಟೆಯಲ್ಲಿ ನಡೆದಿದೆ.

    ಬನಶಂಕರಿಯ ಎರಡನೇ ಹಂತದಲ್ಲಿ ವಾಸವಾಗಿರುವ ಚೈತ್ರ ಅವರು ಇಂದು ಬೆಳಗ್ಗೆ ಮತದಾನಕ್ಕೆ ಆಗಮಿಸಿದ್ದರು. ಈ ವೇಳೆ ಇವರ ವೋಟರ್ ಐಡಿ ಫೋಟೊ ಕಾಪಿ ಮಾನ್ಯ ಮಾಡುತ್ತಿಲ್ಲ ಅಂತ ಸಿಬ್ಬಂದಿ ತಿಳಿಸಿದ್ದಾರೆ.

    ಚೈತ್ರ ಧಾರವಾಡ ಮೂಲದವರಾಗಿದ್ದು, ವೋಟರ್ ಐಡಿ ಜೆರಾಕ್ಸ್ ಬಿಟ್ಟು ಬೇರೆ ಯಾವುದೇ ದಾಖಲೆ ಇರಲಿಲ್ಲ ಎಂದು ಹೇಳಲಾಗಿದೆ. ಕೊನೆಗೆ ಪತ್ರಕರ್ತರೊಬ್ಬರ ಮಧ್ಯಪ್ರವೇಶದಿಂದ ಮತದಾನಕ್ಕೆ ಅವಕಾಶ ಪಡೆದು ಚೈತ್ರ ಸಂತಸಗೊಂಡಿದ್ದಾರೆ.