Tag: ಮತದಾರ

  • ಮತಹಾಕದ್ದಕ್ಕೆ ತಾನು ಉಗುಳಿದ್ದನ್ನು ಯುವಕನಿಗೆ ತಿನ್ನಿಸಿದ ಜನನಾಯಕ

    ಮತಹಾಕದ್ದಕ್ಕೆ ತಾನು ಉಗುಳಿದ್ದನ್ನು ಯುವಕನಿಗೆ ತಿನ್ನಿಸಿದ ಜನನಾಯಕ

    ಪಾಟ್ನಾ: ಜನನಾಯನೊಬ್ಬ ತನಗೆ ಮತಹಾಕಲಿಲ್ಲ ಎಂಬ ಕಾರಣಕ್ಕೆ ತಾನು ಉಗುಳಿದ್ದನ್ನು ತಿನ್ನುವಂತೆ ಯುವಕನೊಬ್ಬನಿಗೆ ಒತ್ತಾಯಿಸಿರುವ ಅಮಾನವೀಯ ಘಟನೆ ಬಿಹಾರದ ಔರಂಗಾಬಾದ್‍ನಲ್ಲಿ ನಡೆದಿದೆ.

    ಅಭ್ಯರ್ಥಿ ಬಲವಂತ್ ಕುಮಾರ್ ಸೋಲಿನ ಬಳಿಕ ಇಬ್ಬರು ಯುವಕರಾದ ಅನಿಲ್ ಕುಮಾರ್ ಮತ್ತು ಮಂಜೀತ್‍ಗೆ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಒಳಿಕ ನೆಲದ ಮೇಲೆ ಉಗುಳಿದನ್ನು ಒತ್ತಾಯಿಸಿ ತಿನ್ನಿದ್ದಾನೆ. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಮಾಹಿತಿ ಪಡೆದು ಔರಂಗಾಬಾದ್ ಎಸ್ಪಿ ಕಾಂತೇಶ್ ಕುಮಾರ್ ಮಿಶ್ರಾ ಅವರು ಅಂಬಾ ಪೊಲೀಸರಿಗೆ ನೀಡಿದ ಸೂಚನೆ ಮೇರೆಗೆ ಆರೋಪಿ ಬಲ್ವಂತ್ ಸಿಂಗ್ ನನ್ನು ಬಂಧಿಸಿದ್ದಾರೆ. ಸಂತ್ರಸ್ತ ಯುವಕರ ವಿಚಾರಣೆ ನಡೆಸಲಾಗಿದೆ.

    ಆರೋಪಿ ಮುಖಂಡ ಗ್ರಾಮಾಂತರ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದನು. ಇದೀಗ ಆತನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗುವುದಾಗಿ ಎಂದು ಎಸ್ಪಿ ಕಾಂತೇಶ್ ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದು: ಓವೈಸಿ

  • ಮತದಾರರ ಪಟ್ಟಿಯಲ್ಲಿರೋದು 90 ಹೆಸ್ರು – ವೋಟ್ ಹಾಕಿದ್ದು 171 ಜನ

    ಮತದಾರರ ಪಟ್ಟಿಯಲ್ಲಿರೋದು 90 ಹೆಸ್ರು – ವೋಟ್ ಹಾಕಿದ್ದು 171 ಜನ

    – ಐವರು ಚುನಾವಣಾ ಅಧಿಕಾರಿಗಳ ಅಮಾನತು
    – ಬೂತ್ ಮರು ಚುನಾವಣೆಗೆ ಆಗ್ರಹ

    ದಿಸ್ಪುರ್: ಅಸ್ಸಾಂನಲ್ಲಿ ಎರಡನೇ ಹಂತದ ಮತದಾನದ ವೇಳೆ ಬೂತ್ ಮತದಾರರ ಪಟ್ಟಿಯಲ್ಲಿರೋ ಸಂಖ್ಯೆಗಿಂತ ಹೆಚ್ಚಿನ ವೋಟಿಂಗ್ ನಡೆದಿದೆ. ಮತದಾರರ ಪಟ್ಟಿಯಲ್ಲಿ 90 ಹೆಸರುಗಳಿದ್ರೆ, ಬರೋಬ್ಬರಿ 171 ಜನರು ಮತದಾನ ಮಾಡಿರುವ ಬಗ್ಗೆ ವರದಿಯಾಗಿದೆ. ಈಗಾಗಲೇ ಚುನಾವಣಾ ಆಯೋಗ ಕರ್ತವ್ಯದಲ್ಲಿದ್ದ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಅದೇಶ ಹೊರಡಿಸಿದೆ.

    ಹಸಾಓ ಜಿಲ್ಲೆಯ ಹಾಫಲೋಂಗ್ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ. ಸೋಮವಾರ ಘಟನೆ ಬೆಳಕಿಗೆ ಬಂದಿದೆ. ಅಸ್ಸಾಂನಲ್ಲಿ ಏಪ್ರಿಲ್ 1ರಂದು 39 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಸದ್ಯ ಚುನಾವಣಾ ಆಯೋಗ ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ.

    ಮತದಾನ ಕೇಂದ್ರಕ್ಕೆ ನುಗ್ಗಿದ ಗ್ರಾಮದ ಕೆಲ ಮುಖಂಡರು ತಮ್ಮದೇ ಆದ ಪಟ್ಟಿ ಜೊತೆ ಆಗಮಿಸಿದ್ದರು. ಅದರಲ್ಲಿರುವ ಹೆಸರಿನ ಪ್ರಕಾರವೇ ವೋಟಿಂಗ್ ನಡೆಯಬೇಕೆಂದು ಗಲಾಟೆ ಮಾಡಿ ಮತದಾನ ಮಾಡಿದ್ದಾರೆ ಎನ್ನಲಾಗಿದೆ. ಆದ್ರೆ ಚುನಾವಣಾ ಅಧಿಕಾರಿಗಳಿಗೆ ನೀಡಿದ ಪಟ್ಟಿ ಕೇವಲ 90 ಮತದಾರರ ಹೆಸರು ಒಳಗೊಂಡಿತ್ತು. ಅಂತಿಮವಾಗಿ ಅಧಿಕಾರಿಗಳು ಗ್ರಾಮಸ್ಥರ ನೀಡಿದ ಪಟ್ಟಿಯಂತೆ ಮತದಾನ ನಡೆಸಿ, ಶೇ.70ರಷ್ಟು ವೋಟಿಂಗ್ ಎಂದು ದಾಖಲಿಸಿದ್ದರು. ಸದ್ಯ ಈ ಬೂತ್ ನಲ್ಲಿ ಮರು ಮತದಾನ ನಡೆಯಬೇಕೆಂದು ಸ್ಪರ್ಧಿಗಳು ಆಗ್ರಹಿಸಿದ್ದಾರೆ.

  • ಮತದಾರರು ಸರತಿ ಸಾಲಲ್ಲಿ ನಿಲ್ಲಂಗಿಲ್ಲ-ಮತದಾರನಿಗೆ ಸಿಗ್ತಿದೆ ಪರಿಪೂರ್ಣ ಗೌರವ!

    ಮತದಾರರು ಸರತಿ ಸಾಲಲ್ಲಿ ನಿಲ್ಲಂಗಿಲ್ಲ-ಮತದಾರನಿಗೆ ಸಿಗ್ತಿದೆ ಪರಿಪೂರ್ಣ ಗೌರವ!

    ವಯನಾಡು: ಮತದಾನಕ್ಕೆ ಬಂದ ಮತದಾರರು ಸಾಲಲ್ಲಿ ನಿಲ್ಲಬಾರದು, ಬಿಸಿಲಿನ ತಾಪ ಅವರಿಗೆ ತಟ್ಟಬಾರದು. ಮತದಾರರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎನ್ನುವ ಉದ್ದೇಶದಲ್ಲಿ ಮಾದರಿ ಮತಗಟ್ಟೆಯನ್ನು ಕೇರಳದ ವಯನಾಡ್ ನಲ್ಲಿ ಸ್ಥಾಪಿಸಲಾಗಿದೆ.

    ವಯನಾಡ್ ಕಲ್ಪೇಟಾ ನಗರದಲ್ಲಿ ಇಂತಹದೊಂದು ಮಾದರಿ ಮತಗಟ್ಟೆ ಸ್ಥಾಪಿಸಲಾಗಿದೆ. ಕಲ್ಪೇಟಾದಲ್ಲಿ ಮತದಾನ ಮಾಡಲು ಬರುವ ಮತದಾರರಿಗೆ ಮೊದಲ ಒಂದು ಟೋಕನ್ ನೀಡಲಾಗುತ್ತದೆ. ಟೋಕನ್ ಪಡೆದವರು ಮತಗಟ್ಟೆಯ ಮುಂಭಾಗದಲ್ಲಿ ಹಾಕಲಾಗಿರುವ ಕುರ್ಚಿಗಳಲ್ಲಿ ಕುಳಿತುಕೊಳ್ಳಬೇಕು. ಮತದಾರರು ಕುಳಿತು ಕೊಳ್ಳುವ ಸ್ಥಳದಲ್ಲಿ ಫ್ಯಾನ್ ವ್ಯವಸ್ಥೆ ಇದೆ. ಅಲ್ಲದೆ ಅವರು ಕಾಫಿ ಕೇಳಿದರೆ ಕಾಫಿ, ಟೀ ಕೇಳಿದರೆ ಟೀ ಕೂಡ ಕೊಡಲಾಗುತ್ತದೆ. ಅವರ ಟೋಕನ್ ನಂಬರ್ ಕೂಗಿದಾಗ  ಅವರು ಹೋಗಿ ಮತ ಹಾಕಬಹುದು.

    ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದಾರೆ. ಇಂದು ಬೆಳಗ್ಗೆಯಿಂದಲೇ ಮತದಾರರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

  • ಚಿಕ್ಕಬಳ್ಳಾಪುರದಲ್ಲಿ ಶಾಸಕನ ಆಪ್ತನಿಂದ ಮತದಾರರಿಗೆ ಹಣ ಹಂಚಿಕೆ – ಕೇಸ್ ದಾಖಲು

    ಚಿಕ್ಕಬಳ್ಳಾಪುರದಲ್ಲಿ ಶಾಸಕನ ಆಪ್ತನಿಂದ ಮತದಾರರಿಗೆ ಹಣ ಹಂಚಿಕೆ – ಕೇಸ್ ದಾಖಲು

    ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಬೆಂಬಲಿತ ನಗರಸಭಾ ಸದಸ್ಯನೊರ್ವ ಮತದಾರರಿಗೆ ಹಣ ಹಂಚಿಕೆ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ನಗರಸಭೆಯ 5ನೇ ವಾರ್ಡಿನ ನಗರಸಭಾ ಸದಸ್ಯ ಮಂಜುನಾಥಾಚಾರಿ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದ ವಿಡಿಯೋ ಪಬ್ಲಿಕ್ ಟಿವಿ ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಕ್ಕಬಳ್ಳಾಪುರ ನಗರದ ನಗರ ಪೊಲೀಸ್ ಠಾಣೆಯ ಕ್ವಾಟ್ರಾಸ್ ಹಿಂಭಾಗದ ನಗರಸಭಾ ಸದಸ್ಯ ಮಂಜುನಾಥಾಚಾರಿಗೆ ಸೇರಿದ ಕಚೇರಿಯಲ್ಲಿ ರಾಜಾರೋಷವಾಗಿ ಹಣ ಹಂಚಿಕೆ ಮಾಡಲಾಗುತ್ತಿತ್ತು.

    ಮಾಹಿತಿ ತಿಳಿದ ಪಬ್ಲಿಕ್ ಟಿವಿ ರಹಸ್ಯ ಕ್ಯಾಮೆರಾದಲ್ಲಿ ಹಣ ಹಂಚಿಕೆಯ ದೃಶ್ಯ ಸೆರೆ ಹಿಡಿದಿದೆ. ವೋಟರ್ ಕಾರ್ಡ್ ಹಾಗೂ ಮತದಾನದ ಸ್ಲಿಪ್ ತೆಗೆದುಕೊಂಡ ಹೋಗುವ ಮತದಾರರಿಗೆ ತಲಾ 200, 300 ರೂ. ಹಂಚಿಕೆ ಮಾಡಲಾಗುತ್ತಿತ್ತು. ಇತ್ತ ಪಬ್ಲಿಕ್ ಟಿವಿ ಹಣ ಹಂಚಿಕೆ ಚಿತ್ರೀಕರಣ ಮಾಡಿದ ವಿಷಯ ತಿಳಿದ ನಗರಸಭಾ ಸದಸ್ಯ ಮಂಜುನಾಥಾಚಾರಿ ಹಣ ಹಂಚಿಕೆ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

    ಈ ಸಂಬಂಧ ಚುನಾವಣಾಧಿಕಾರಿ ಅನಿರುದ್ಧ ಶ್ರವಣ್‍ಗೆ ಮಾಹಿತಿ ರವಾನಿಸಿದ್ದು, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸ್ಥಳಕ್ಕೆ ಚುನಾವಣಾ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ಮಾಡುವುದಾಗಿ ತಿಳಿಸಿದರು. ಪರಿಶೀಲನೆ ನಡೆಸಿದ ನಂತರ ಚುನಾವಣಾಧಿಕಾರಿ ಸಂಜೀವಪ್ಪ ಅವರು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಗರಸಭಾ ಸದಸ್ಯ ಮಂಜುನಾಥಾಚಾರಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

  • ಬಿಜೆಪಿಗೆ ಮತ ಹಾಕ್ತೀಯಾ ಹಾಕೋ ಹೋಗು: ಸಚಿವ ತುಕಾರಾಂ ಸಿಡಿಮಿಡಿ

    ಬಿಜೆಪಿಗೆ ಮತ ಹಾಕ್ತೀಯಾ ಹಾಕೋ ಹೋಗು: ಸಚಿವ ತುಕಾರಾಂ ಸಿಡಿಮಿಡಿ

    ಬಳ್ಳಾರಿ: ನನ್ನ ಕೈಯಲ್ಲಾದ ಕೆಲಸ ನಾನು ಮಾಡಿದ್ದೇನೆ. ನನ್ನಿಂದ ಎಲ್ಲರಿಗೂ ಉದ್ಯೋಗ ಕೊಡಿಸಲು ಆಗಲ್ಲ. ನೀನು ಬಿಜೆಪಿಗೆ ಮತ ಹಾಕೋತೀಯಾ ಹಾಕೋ ಹೋಗು. ನನಗೆ ಎನೂ ತೊಂದರೆಯಿಲ್ಲ ಎಂದು ಮತದಾರರ ಪ್ರಶ್ನೆಗೆ ಕೆಂಡಾಮಂಡಲರಾಗಿ ಸಚಿವ ತುಕಾರಾಂ ಉತ್ತರಿಸುವ ಮೂಲಕ ಗರಂ ಆಗಿದ್ದಾರೆ.

    ಗುರುವಾರ ಸಂಜೆ ಸಂಡೂರು ತಾಲೂಕಿನ ಗಂಗಲಾಪುರ ಗ್ರಾಮದಲ್ಲಿ ಉಗ್ರಪ್ಪ ಪರ ಸಚಿವರು ಪ್ರಚಾರ ನಡೆಸಿದ್ದರು. ಈ ವೇಳೆ ನೀವು ಜಿಂದಾಲ್‍ನಲ್ಲಿ ಯುವಕರಿಗೆ ಉದ್ಯೋಗ ಕೊಡಿಸಲು ಪತ್ರ ಕೊಡುತ್ತಿಲ್ಲ ಎಂದು ಮತದಾರರು ಸಚಿವರನ್ನು ಪ್ರಶ್ನಿಸಿದರು.

    ಜಿಂದಾಲ್ ಕಂಪನಿಯಲ್ಲಿ ಎಲ್ಲರೂ ಉದ್ಯೋಗ ಕೇಳಿದ್ರೆ ಹೇಗೆ? ನೀವು ಏಕೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಬಾರದು. ಕಲಂ 371 (ಜೆ) ಅಡಿಯಲ್ಲಿ ಸುಮಾರು 33 ಸಾವಿರ ಜನ ಕೆಲಸಕ್ಕೆ ತೆಗೆದುಕೊಂಡಿದ್ದಾರೆ. ನಾವು ಲೆಟರ್ ನೀಡಿ ನಮ್ಮ ಧರ್ಮವನ್ನು ಪಾಲನೆ ಮಾಡಿದ್ದೇವೆ. ಉದ್ಯೋಗ ನೀಡುವುದು ಕಂಪನಿಗೆ ಸಂಬಂಧಿಸಿದ ವಿಷಯವಾಗಿದೆ. ಇತ್ತೀಚೆಗೆ ಡಿಪ್ಲೋಮಾ, ಐಟಿಐನ ಸುಮಾರು 200 ವಿದ್ಯಾರ್ಥಿಗಳಿಗೆ ಪತ್ರ ನೀಡಿದ್ದು, ಅವರೆಲ್ಲರೂ ಜಿಂದಾಲ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಜಿಂದಾಲ್ ಕಂಪನಿ ನಂಬಿಕೊಂಡು ಕುಳಿತುಕೊಳ್ಳದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುತ್ತ ಯುವಕರ ಗಮನ ಹರಿಸಬೇಕಿದೆ ಎಂದರು.

    ಈ ವೇಳೆ ತಾಳ್ಮೆ ಕಳೆದುಕೊಂಡ ಸಚಿವ ತುಕಾರಾಂ ನೀನು ಬಿಜೆಪಿಗೆ ಮತ ಹಾಕೋತೀಯಾ ಹಾಕೋ ಹೋಗು ನನಗೇನೂ ತೊಂದರೆ ಇಲ್ಲ ಎನ್ನುವ ಮೂಲಕ ಗರಂ ಆಗಿ ಭಾಷಣ ಮೊಟಕುಗೊಳಿದರು. ಪ್ರಚಾರವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಗಂಗಾಲಪುರ ಗ್ರಾಮದಿಂದ ಹೊರ ನಡೆದರು.

  • ರಾಯಚೂರು ಗ್ರಾಮೀಣ ಭಾಗದಲ್ಲಿ ಮತದಾರರೇ ಕಾಣೆ!

    ರಾಯಚೂರು ಗ್ರಾಮೀಣ ಭಾಗದಲ್ಲಿ ಮತದಾರರೇ ಕಾಣೆ!

    ರಾಯಚೂರು: ಲೋಕಸಭಾ ಚುನಾವಣಾ ಕಣ ಎಲ್ಲೆಡೆ ರಂಗೇರುತ್ತಿದೆ. ಆದ್ರೆ ರಾಯಚೂರು ಗ್ರಾಮೀಣ ಭಾಗದಲ್ಲಿ ಮಾತ್ರ ಮತದಾರರೇ ಕಾಣೆಯಾಗಿದ್ದಾರೆ. ಮನೆಗಳಿಗೆ ಬೀಗ ಜಡಿದು ಹೊಟ್ಟೆಪಾಡಿಗಾಗಿ ಊರುಗಳನ್ನೇ ತೊರೆದಿದ್ದಾರೆ. ಹಣ, ಬಸ್ ಚಾರ್ಜ್ ಕೊಟ್ರೆ ಮಾತ್ರ ಗುಳೆ ಹೋದವರು ಮತಹಾಕಲು ಬಂದರೂ ಬರಬಹುದು ಎಂದು ಗ್ರಾಮಗಳಲ್ಲಿ ಉಳಿದ ಜನ ಹೇಳುತ್ತಿದ್ದಾರೆ.

    ಬಿಸಿಲನಾಡು ರಾಯಚೂರು ಈ ಬಾರಿ ಭೀಕರ ಬರಗಾಲಕ್ಕೆ ತತ್ತರಿಸಿ ಹೋಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಜನ ಮನೆಗಳಿಗೆ ಬೀಗ ಜಡಿದು ಬೆಂಗಳೂರು, ಪುಣೆ, ಹೈದ್ರಾಬಾದ್ ಕಡೆ ಗುಳೆ ಹೋಗಿದ್ದಾರೆ. ಸಂಸದರ ಆದರ್ಶ ಗ್ರಾಮ ಜಾಗೀರ್ ವೆಂಕಟಾಪುರ ಸೇರಿದಂತೆ ರಾಯಚೂರು, ದೇವದುರ್ಗ, ಲಿಂಗಸುಗೂರು ತಾಲೂಕುಗಳಿಂದ ಅತೀ ಹೆಚ್ಚು ಸಂಖ್ಯೆಯಲ್ಲಿ ಜನ ಗುಳೆ ಹೋಗಿದ್ದು ಮತ ಹಾಕುವವರೇ ಇಲ್ಲದಂತಾಗಿದೆ. ರಾಯಚೂರಿನ ಗೋನಾಳ ಗ್ರಾಮವೊಂದರಲ್ಲೆ ಸುಮಾರು 1200 ಮತದಾರರಲ್ಲಿ ಅರ್ಧದಷ್ಟು ಜನ ಗುಳೆ ಹೋಗಿದ್ದಾರೆ ಎಂದು ಕೂಲಿ ಕಾರ್ಮಿಕ ಸಂಘದ ಮುಖಂಡ ಗುರುರಾಜ್ ಹೇಳಿದ್ದಾರೆ.

    ಗ್ರಾಮಗಳಲ್ಲಿ ಕೇವಲ ವಯೋವೃದ್ಧರನ್ನ ಮನೆಕಾಯಲು ಬಿಟ್ಟುಹೋಗಿದ್ದಾರೆ. ಇನ್ನೂ ಕೆಲವರು ಮಕ್ಕಳ ಪರೀಕ್ಷೆಗಳು ಮುಗಿಯುವುದನ್ನ ಕಾಯುತ್ತಿದ್ದಾರೆ. ಚುನಾವಣೆ ಮತದಾನ ಸಂದರ್ಭದಲ್ಲಿ ಅಭ್ಯರ್ಥಿಗಳು ದುಡ್ಡು ಕೊಟ್ಟು ವಾಹನ ವ್ಯವಸ್ಥೆ ಮಾಡಿದರೆ ಮಾತ್ರ ಗುಳೆ ಹೋದವರು ಮತ ಹಾಕಲು ಬರುತ್ತಾರೆ ಎಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಹೊಟ್ಟೆಪಾಡಿಗಾಗಿ ದುಡಿಯಲು ದೂರದ ಊರುಗಳಿಗೆ ತೆರಳಿದವರು ತಮ್ಮ ಹಕ್ಕನ್ನು ಚಲಾಯಿಸುವ ಅವಕಾಶವನ್ನೇ ಕಳೆದುಕೊಳ್ಳುತ್ತಿದ್ದಾರೆ. ಮತದಾನ ಪ್ರಮಾಣ ಹೆಚ್ಚು ಮಾಡಲು ಚುನಾವಣಾ ಅಧಿಕಾರಿಗಳು ಏನೆಲ್ಲಾ ಕಸರತ್ತು ನಡೆಸಿದ್ರೂ ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನ ತಡೆಯಲು ಮಾತ್ರ ಆಗುತ್ತಿಲ್ಲ.

  • ಗಂಡ ಬಿಜೆಪಿ ಲೋಕಸಭಾ ಅಭ್ಯರ್ಥಿ – ಹೆಂಡ್ತಿ ಕಾಂಗ್ರೆಸ್ ಕಟ್ಟಾಳು!

    ಗಂಡ ಬಿಜೆಪಿ ಲೋಕಸಭಾ ಅಭ್ಯರ್ಥಿ – ಹೆಂಡ್ತಿ ಕಾಂಗ್ರೆಸ್ ಕಟ್ಟಾಳು!

    – ಬಳ್ಳಾರಿ ಕದನ ಕಣದಲ್ಲಿ ವಿಶಿಷ್ಟ ಪರಿಸ್ಥಿತಿ

    ಬಳ್ಳಾರಿ: ಗಣಿನಾಡಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಕಾವು ಏರುತ್ತಿದ್ದಂತೆ ಚುನಾವಣಾ ಕಾವು ಕೂಡ ಹೆಚ್ಚಾಗ್ತಿದೆ. ಜಿಲ್ಲೆಯಲ್ಲಿ ಪತ್ನಿ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಸದಸ್ಯರಾದರೆ, ಪತಿ ಬಿಜೆಪಿಯಿಂದ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಜನ ಯಾರನ್ನೂ ನಂಬಿ ಮತ ಹಾಕಬೇಕು ಎಂದು ಗೊಂದಲದಲ್ಲಿದ್ದಾರೆ.

    ಅಣ್ಣ ಒಂದು ಪಕ್ಷದಲ್ಲಿದ್ದರೆ ತಮ್ಮ ಇನ್ನೊಂದು ಪಕ್ಷದಲ್ಲಿರೋದು ಸಾಮಾನ್ಯ. ಆದ್ರೆ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲೀಗ ಪತಿ-ಪತ್ನಿಯ ಜುಗಲ್‍ಬಂಧಿ ಸಾಕಷ್ಟು ಸುದ್ದಿ ಮಾಡುತ್ತಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅರಸಿಕೇರಿ ದೇವೇಂದ್ರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಆದ್ರೆ ದೇವೇಂದ್ರಪ್ಪ ಪತ್ನಿ ಸುಶೀಲಮ್ಮ ಬಳ್ಳಾರಿ ಜಿಲ್ಲಾ ಪಂಚಾಯತ್‍ನಲ್ಲಿ ಕಾಂಗ್ರೆಸ್ ಸದಸ್ಯೆ. ಇದು ಮತದಾರರನ್ನು ಗೊಂದಲಕ್ಕೀಡು ಮಾಡಿದೆ.

    ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಅರಸಿಕೇರಿ ದೇವೇಂದ್ರಪ್ಪ ಅವರನ್ನು ಕೇಳಿದ್ರೆ, ಅವರನ್ನೇ ಕೇಳಬೇಕು. ಈ ಪ್ರಜಾಪ್ರಭುತ್ವದಲ್ಲಿ ಅವರಿಗೂ ಹಕ್ಕು ಇದೆ ಎಂದು ಹೇಳುತ್ತಿದ್ದಾರೆ. ಇತ್ತ ಇದುವರೆಗೂ ಕಾಂಗ್ರೆಸ್‍ನಲ್ಲಿದ್ದುಕೊಂಡು ಚುನಾವಣೆ ಬರುತ್ತಿದ್ದಂತೆ ಬಿಜೆಪಿಗೆ ಜಿಗಿದ ದೇವೇಂದ್ರಪ್ಪರ ಬಗ್ಗೆ ಕಾಂಗ್ರೆಸ್ ನಾಯಕರು ಸಹ ಹರಿಹಾಯುತ್ತಿದ್ದಾರೆ.

    ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ನನ್ನ ಸ್ನೇಹಿತರಾದ ಶ್ರೀರಾಮುಲು ಅಣ್ಣ ಸೇರಿ ಬಿಜೆಪಿಯ ಒಂದು ಕಾರ್ಯಕರ್ತನನ್ನು ಹುಡುಕಿ ಅವನನ್ನು ನಾಯಕನನ್ನಾಗಿ ಮಾಡಕ್ಕಾಗಿಲ್ಲ ಎಂಬ ವ್ಯಥೆ ನನ್ನ ಕಾಡುತ್ತಿದೆ. ನಮ್ಮ ಶ್ರೀರಾಮುಲು ಅಣ್ಣನಿಗೆ ಚಿಂತೆ ಮಾಡಕ್ಕಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿಯೇ ಬೇಕಾಗಿತ್ತಾ ನಿಮಗೆ ಎಂದು ಪ್ರಶ್ನಿಸಿದ ಅವರು, ಪಾಪ ದೇವೇಂದ್ರಪ್ಪ ಅವರು ದೇವರು ಇದ್ದಂಗೆ ಇರಲಿ ಎಂದಿದ್ದಾರೆ.

    ಒಟ್ಟಿನಲ್ಲಿ ಪತಿ- ಪತ್ನಿ ಬೇರೆ ಬೇರೆ ಪಕ್ಷದಲ್ಲಿರೋದ್ರಿಂದ ಮತದಾರರಿಗೆ ಗೊಂದಲವೋ ಗೊಂದಲ. ಯಾರು ಯಾರ ಪರವಾಗಿ ಪ್ರಚಾರ ಮಾಡ್ತಾರೆ? ಕಾಂಗ್ರೆಸ್‍ನಲ್ಲಿ ಸದಸ್ಯರಾಗಿದ್ದುಕೊಂಡು ಪತಿಯ ಪರವಾಗಿ ಪತ್ನಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಾರಾ ಎನ್ನುವ ಗೊಂದಲದಲ್ಲಿ ಮತದಾರರು ಇದ್ದಾರೆ.

  • ಪ್ರಶ್ನೆ ಮಾಡಿದ ಮತದಾರರನ್ನೇ ಹೀಯಾಳಿಸಿದ ಶಾಸಕ?

    ಪ್ರಶ್ನೆ ಮಾಡಿದ ಮತದಾರರನ್ನೇ ಹೀಯಾಳಿಸಿದ ಶಾಸಕ?

    ಮಂಡ್ಯ: ತಮ್ಮ ಸಮಸ್ಯೆ ಬಗೆಹರಿಸಿ ಎಂದು ತರಾಟೆಗೆ ತೆಗೆದುಕೊಂಡ ಮತದಾರರನ್ನೇ ತಲೆಯೆಲ್ಲ ಮಾತನಾಡ್ತಾರೆ ಎಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡ ಹೀಯಾಳಿಸಿದ ಘಟನೆ ನಡೆದಿದೆ.

    ಕೆಆರ್ ಪೇಟೆ ತಾಲೂಕಿನ, ಕಿಕ್ಕೇರಿ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಶಾಸಕರ ಜನಸಂಪರ್ಕ ಸಭೆ ಆಯೋಜಿಸಲಾಗಿತ್ತು. ಈ ವೇಳೆ ದೊಡ್ಡತ್ತಾರಹಳ್ಳಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳ ಮತದಾರರು ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯದ ಬಗ್ಗೆ ಪ್ರಶ್ನೆ ಮಾಡುತ್ತಾ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು.

    ಜನರ ಪ್ರಶ್ನೆಯಿಂದ ಗೊಂದಲಕ್ಕೆ ಒಳಗಾದ ಶಾಸಕ ನಾರಾಯಣಗೌಡ ನಾನು ನಿಮ್ಮ ಸಮಸ್ಯೆ ಆಲಿಸಲು ಅಧಿಕಾರಿಗಳ ಜೊತೆ ಬಂದಿದ್ದೇನೆ. ಯಾರು ಐದು ಕೋಟಿ ಕೆಲಸ ಹಾಕಿಕೊಟ್ಟಿರೋದು. ತಲೆಯೆಲ್ಲ(ತಲೆಬುಡ ಇಲ್ಲದೆ) ಮತನಾಡ್ತಾರೆ ಎಂದು ಪ್ರಶ್ನೆ ಮಾಡಿದವರ ವಿರುದ್ಧವೇ ತಿರುಗಿ ಬಿದ್ದರು.

    ಈ ವೇಳೆ ಶಾಸಕರ ಬೆಂಬಲಿಗರು ಕೂಡ ಸುಮ್ಮನಿರುವಂತೆ ಸಾರ್ವಜನಿಕರನ್ನು ಮನವಿ ಮಾಡಿದ್ದರು. ಇದರಿಂದ ಮತ್ತಷ್ಟು ಕೆರಳಿದ ಸಾರ್ವಜನಿಕರು ನಾವು ಪ್ರಶ್ನೆ ಮಾಡೋದೆ ತಪ್ಪಾ? ಎಂದು ಆಕ್ರೋಶ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಕೆಲಕಾಲ ಸಭೆ ಗೊಂದಲದ ಗೂಡಾಗಿ ಮಾರ್ಪಾಡಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಉಗ್ರಪ್ಪಗೆ ವೋಟ್ ಹಾಕಿ ಜೈಲು ಸೇರಿದ!

    ಉಗ್ರಪ್ಪಗೆ ವೋಟ್ ಹಾಕಿ ಜೈಲು ಸೇರಿದ!

    ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರಿಗೆ ಮತ ನೀಡಿ ಫೋಟೋ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.

    ಹೊಸಪೇಟೆಯಲ್ಲಿ ಮತದಾನದ ವೇಳೆ ಮೊಬೈಲ್ ತೆಗೆದುಕೊಂಡು ಮತಗಟ್ಟೆಗೆ ತೆರಳಿದ್ದ ರಜಾಕ್ ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಮತಗಟ್ಟೆ ಸಂಖ್ಯೆ 62ರ ಇವಿಎಂನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಕುರಿತು ಸಾಕ್ಷಿಗಾಗಿ ರಜಾಕ್ ಫೋಟೋ ಸೆರೆಹಿಡಿದಿದ್ದ. ಅಲ್ಲದೇ ತಾನು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ತೋರಿಸಲು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ.

    ಈ ಕುರಿತು ಮಾಹಿತಿ ಪಡೆದ ಚುನಾವಣಾಧಿಕಾರಿ ಲೋಕೇಶ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಅನ್ವಯ ಪೊಲೀಸರು ರಜಾಕ್ ನನ್ನು ಬಂಧಿಸಿದ್ದಾರೆ. ರಹಸ್ಯ ಮತದಾನ ನಿಯಮ ಉಲ್ಲಂಘಿಸಿದ ಹಿನ್ನೆಲೆಯ ಆರೋಪದಲ್ಲಿ ರಜಾಕ್ ಬಂಧನವಾಗಿದೆ. ನಿಯಮಗಳ ಅನ್ವಯ ಮತಗಟ್ಟೆಯಲ್ಲಿ ಮೊಬೈಲ್ ತೆಗೆದುಕೊಂಡು ಹೋಗಲು ನಿಷೇಧವಿದೆ. ಆದರೂ ಮತಗಟ್ಟೆಯಲ್ಲಿ ಮೊಬೈಲ್ ಸಂಚಾರ ಸರ್ವೆ ಸಾಮಾನ್ಯ, ಮತಗಟ್ಟೆಯ ಅಧಿಕಾರಿಗಳ ನಿರ್ಲಕ್ಷವೇ ಕಿಡಿಗೇಡಿಗಳ ಕೃತ್ಯಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.

    ಮಂಡ್ಯ ಲೋಕಸಭೆ ಉಪಚುನಾವಣೆ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗೆ ಮತ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಷೇಧದ ನಡುವೆಯೂ ಮೊಬೈಲ್ ತೆಗೆದುಕೊಂಡು ಹೋಗಿರುವ ಮತದಾರರೊಬ್ಬ ಬಹಿರಂಗಗೊಳಿಸಿದ್ದಾರೆ. ಆದರೆ ಆ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Bx3DXkFitoI

  • ಇವಿಎಂ ಕೆಟ್ಟರೂ ಅವಧಿ ವಿಸ್ತರಿಸದ ಉಡುಪಿ ಜಿಲ್ಲಾಡಳಿತ: ಮತದಾರರ ಹಿಡಿಶಾಪ

    ಇವಿಎಂ ಕೆಟ್ಟರೂ ಅವಧಿ ವಿಸ್ತರಿಸದ ಉಡುಪಿ ಜಿಲ್ಲಾಡಳಿತ: ಮತದಾರರ ಹಿಡಿಶಾಪ

    ಉಡುಪಿ: ನಗರದ ಎರಡು ಕಡೆ ಮತಯಂತ್ರ ಕೈಕೊಟ್ಟಿದ್ದರೂ, ಮತದಾನದ ಅವಧಿಯನ್ನು ವಿಸ್ತರಿಸದ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೊಡವೂರಿನ ಎರಡು ಮತಯಂತ್ರಗಳು ಕೈಕೊಟ್ಟ ಪರಿಣಾಮ, ಎರಡು ಗಂಟೆ ಮತದಾನ ಸ್ಥಗಿತವಾಗಿತ್ತು. ಆದರೆ ಜಿಲ್ಲಾಡಳಿತ 2 ಗಂಟೆಗಳ ಅವಧಿಯನ್ನು ವಿಸ್ತರಣೆ ಮಾಡದೇ, 5 ಗಂಟೆಗೆ ಮತದಾನ ಮುಕ್ತಾಯವಾಗುತ್ತದೆ ಎಂದು ತಿಳಿಸಿದೆ.

    ಜಿಲ್ಲಾಡಳಿತದ ಕ್ರಮಕ್ಕೆ ಅಸಮಾಧಾನಗೊಂಡ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಕೊಡವೂರಿನ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ಮಾಧವ ಬನ್ನಂಜೆ ಮಾತನಾಡಿ, ಮತಯಂತ್ರದ ದೋಷದಿಂದ ಎರಡು ಗಂಟೆ ಮತದಾನ ವಿಳಂಬವಾಗಿದೆ. ಹೀಗಾಗಿ ಹೆಚ್ಚುವರಿ 2 ಗಂಟೆಗಳ ಮತದಾನಕ್ಕೆ ಜಿಲ್ಲಾಡಳಿತ ಅವಕಾಶಮಾಡಿಕೊಡಬೇಕು. ಒಂದೊಂದು ಮತವೂ ಅಮೂಲ್ಯವಾಗಿದೆ ಎಂದು ಹೇಳಿದರು.

    ಕಳೆದ ಬಾರಿಯೂ ಮತಗಟ್ಟೆಯಲ್ಲಿ ಮತಯಂತ್ರ ಕೆಟ್ಟಿತ್ತು. ಅಧಿಕಾರಿಗಳಿಗೆ ಚುನಾವಣೆ ಬಗ್ಗೆ ಗಂಭೀರತೆ ಇಲ್ಲ. ನಮ್ಮೂರಿನಿಂದ ಮದುವೆಗೆ ಹೊರಟ 60 ಜನ ವೋಟ್ ಹಾಕಲು ಬಂದಿದ್ದರು. ಮತಯಂತ್ರ ಕೆಟ್ಟಿದ್ದಕ್ಕೆ ಅವರು ವಾಪಾಸ್ಸು ಹೋದರು ಮತ್ತೆ ಅವರು ಬರುವುದಿಲ್ಲವೆಂದು ಬಿಜೆಪಿ ಅಭ್ಯರ್ಥಿ ವಿಜಯ್ ತಮ್ಮ ಬೇಸರವನ್ನು ವ್ಯಕ್ತಪಡಿಸಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಎರಡು ಕಡೆ ಮತಯಂತ್ರ ದೋಷ ಕಂಡುಬಂದಿದೆ. ಈಗಾಗಲೇ ನಮ್ಮ ಸಿಬ್ಬಂದಿ ದೋಷ ಸರಿಪಡಿಸಿದ್ದಾರೆ. ಅಲ್ಲದೇ ಬೇರೆ ಮತಯಂತ್ರವನ್ನು ಹಾಕಿದ್ದಾರೆ. ಎರಡು ಮತಗಟ್ಟೆಗಳಲ್ಲಿ ಟೋಕನ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಮತದಾರರು 5 ಗಂಟೆಯ ಒಳಗೆ ಟೋಕನ್ ಪಡೆದುಕೊಳ್ಳಬೇಕು. ಟೋಕನ್ ಪಡೆದುಕೊಂಡ ಮತದಾರರಿಗೆ ಮತದಾನಕ್ಕೆ ಅವಕಾಶಮಾಡಿಕೊಡುತ್ತೇವೆ. ಯಾವುದೇ ಕಾರಣಕ್ಕೂ ಮತದಾನದ ಅವಧಿಯನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಮತದಾನ ಮಾಡುವುದು ಎಲ್ಲರ ಹಕ್ಕು ಮತ್ತು ಕರ್ತವ್ಯ. ಮತಯಂತ್ರ ದೋಷದಿಂದಾಗಿ ಉಂಟಾದ ಸಮಸ್ಯೆಗೆ ಮತದಾರರು ಸಹಕರಿಸಬೇಕೆಂದು ವಿನಂತಿಸಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv