Tag: ಮತಯಂತ್ರ

  • ಮತಯಂತ್ರಗಳನ್ನು ಒಡೆದು ದಾಂಧಲೆ ಪ್ರಕರಣ – 30 ಜನ ಪೊಲೀಸರ ವಶಕ್ಕೆ

    ಮತಯಂತ್ರಗಳನ್ನು ಒಡೆದು ದಾಂಧಲೆ ಪ್ರಕರಣ – 30 ಜನ ಪೊಲೀಸರ ವಶಕ್ಕೆ

    ವಿಜಯಪುರ: ವಿಧಾನಸಭಾ ಚುನಾವಣೆ (Assembly Election) ಹಿನ್ನೆಲೆ ಮತದಾನದ ವೇಳೆ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 25-30 ಜನರನ್ನು ವಶಕ್ಕೆ ಪಡೆದಿದ್ದಾರೆ.

    ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‌ಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ. ಅವುಗಳನ್ನು ಚುನಾವಣಾ ಸಿಬ್ಬಂದಿ ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ 25-30 ಜನರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್‌ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಸ್‌ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು

    ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಗ್ರಾಮಸ್ಥರು ಮತ ಯಂತ್ರ ಒಡೆದು ಹಾಕಿದ್ದಾರೆ. ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates

  • ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು

    ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ವಿಜಯಪುರ ಗ್ರಾಮಸ್ಥರು

    ವಿಜಯಪುರ: ತಪ್ಪು ಮಾಹಿತಿಯಿಂದ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

    ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಮತ ಚಲಾಯಿಸಲು ಬಂದಿದ್ದ ವ್ಯಕ್ತಿ, ಮಹಿಳೆ ಪ್ರತ್ಯೇಕ ಮತದಾನ ಕೇಂದ್ರದಲ್ಲಿ ಸಾವು

    ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಇದನ್ನೂ ಓದಿ: Karnataka Election 2023: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯಿಂದ ಮತದಾನ

  • ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!

    ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!

    ಮೈಸೂರು: ರಾಜ್ಯ ರಾಜಕೀಯದಲ್ಲಿ ಬಹು ದೊಡ್ಡ ಸದ್ದು ಮಾಡಿದ್ದ ಚಾಮುಂಡೇಶ್ವರಿ ಕ್ಷೇತ್ರದ (Chamundeshwari Constituency) ಉಪ ಚುನಾವಣೆಯ ಬಹು ಮುಖ್ಯ ಸ್ವಾರಸ್ಯ ವಿಚಾರವಿದು. ಆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅನಾಮಧೇಯ ರೂಪದ ಪಕ್ಷೇತರ ಅಭ್ಯರ್ಥಿಗೆ ಬಂದ ಅನಿರೀಕ್ಷಿತ ಮತಗಳೇ ಸಿದ್ದರಾಮಯ್ಯ (Siddaramaiah) ಪಾಲಿಗೆ ವರದಾನವಾಗಿತ್ತು.

    ಅದು ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಕಾಲ. ಹೆಚ್‌ಡಿ ದೇವೇಗೌಡರೊಂದಿಗೆ ಮುನಿಸಿಕೊಂಡು ಸಿದ್ದರಾಮಯ್ಯ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಪರಿಣಾಮ 2006 ಡಿಸೆಂಬರ್‌ನಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಿತು.

    ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ ಬಳಸಲಾಗಿತ್ತು. ಜೆಡಿಎಸ್‌ನವರು ಹೋದೆಡೆಯೆಲ್ಲಾ ಮೊದಲನೇ ಗುಂಡಿ ಒತ್ತಿ ಎಂದು ಪ್ರಚಾರ ಮಾಡಿದ್ದರು. ಏಕೆಂದರೆ ಜೆಡಿಎಸ್ ಅಭ್ಯರ್ಥಿ ಶಿವಬಸಪ್ಪ ಅವರ ಹೆಸರು ಮತಯಂತ್ರದಲ್ಲಿ ಮೊದಲಿತ್ತು. ಅದರಂತೆ ಮತದಾರರು ಮೊದಲ ಗುಂಡಿ ಒತ್ತಿದರು. ಮತಯಂತ್ರದ ಮೇಲಿನಿಂದ ಮೊದಲ ಗುಂಡಿಯೋ ಅಥವಾ ಮತಯಂತ್ರದ ಕೆಳಗಿನಿಂದ ಮೊದಲ ಗುಂಡಿಯೋ ಎಂದು ಹೇಳಿರಲಿಲ್ಲ. ಇದರಿಂದ ದೊಡ್ಡ ಯಡವಟ್ಟಾಗಿ ಹೋಗಿತ್ತು. ಇದನ್ನೂ ಓದಿ: ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?

    ಮತಯಂತ್ರದ ಮೇಲ್ಬಾಗದ ಮೊದಲ ಗುಂಡಿ ಒತ್ತಿದ್ದರಿಂದ ಶಿವಬಸಪ್ಪ ಅವರಿಗೆ 1,15,255 ಮತಗಳು ದೊರೆತರೆ, ಮತ ಯಂತ್ರದ ಕೆಳಭಾಗದ ಮೊದಲ ಗುಂಡಿ ಒತ್ತಿದ್ದರಿಂದ ಪಕ್ಷೇತರರಾದ ಸರ್ವೋತ್ತಮ ಅವರಿಗೆ ಅನಿರೀಕ್ಷಿತವಾಗಿ 4,183 ಮತಗಳು ದೊರೆತಿದ್ದವು. ಏಕೆಂದರೆ ಸಮಾಜವಾದಿ ಪಕ್ಷದ ಬಿ ಕರುಣಾಕರ್ ಅವರಿಗೆ 3,304, ಜೆಡಿಎಸ್‌ನಿಂದ ಬಂಡಾಯವೆದ್ದು ಜೆಡಿಯು ಅಭ್ಯರ್ಥಿಯಾಗಿದ್ದ ಎಎಸ್ ಗುರುಸ್ವಾಮಿ ಅವರಿಗೆ 941 ಮತಗಳು ದೊರೆತಿದ್ದವು.

    ಗುಂಡಿ ಒತ್ತುವುದರಲ್ಲಿ ಆದ ಗೊಂದಲದ ಪರಿಣಾಮ ಎಂಬಂತೆ 1,15,512 ಮತಗಳನ್ನು ಪಡೆದ ಸಿದ್ದರಾಮಯ್ಯ ಗೆದ್ದರು. ಶಿವಬಸಪ್ಪ ಮತ್ತು ಸಿದ್ದರಾಮಯ್ಯ ಅವರು ಪಡೆದ ಮತಗಳ ಅಂತರ ಕೇವಲ 257 ಮಾತ್ರ ಆಗಿತ್ತು. ಇದನ್ನೂ ಓದಿ: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲಲ್ಲ: HDK

  • ಮತಯಂತ್ರಗಳಲ್ಲಿ ದೋಷ ಮತದಾನ ಸ್ಥಗಿತ- ರೊಚ್ಚಿಗೆದ್ದ ಮತದಾರರು

    ಮತಯಂತ್ರಗಳಲ್ಲಿ ದೋಷ ಮತದಾನ ಸ್ಥಗಿತ- ರೊಚ್ಚಿಗೆದ್ದ ಮತದಾರರು

    ವಿಜಯಪುರ/ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಮತಯಂತ್ರಗಳಲ್ಲಿ ದೋಷ ಕಂಡು ಬಂದು ವಿಜಯಪುರದ ತಾರಾಪೂರ ಗ್ರಾಮ ಹಾಗೂ ಬೆಳಗಾವಿಯ ಮೀರಾಪೂರಹಟ್ಟಿ ಗ್ರಾಮದಲ್ಲಿ ಮತದಾನ ಸ್ಥಗಿತಗೊಂಡಿದೆ.

    ತಾರಾಪೂರ ಗ್ರಾಮದ ಮತಗಟ್ಟೆ ಸಂಖ್ಯೆ 16ರಲ್ಲಿ ಮತಯಂತ್ರದಲ್ಲಿ ದೋಷ ಕಂಡು ಬಂದಿದೆ. ಈ ಹಿನ್ನೆಲೆ ಅದನ್ನು ಸರಿಪಡಿಸಲು ಒಂದು ಗಂಟೆ ಸಮಯ ಕೊಡಲು ಅಧಿಕಾರಿಗಳ ಬೇಡಿಕೆ ಇಟ್ಟಿದ್ದಾರೆ. ಆದ್ರೆ ಇದರಿಂದ ರೊಚ್ಚಿಗೆದ್ದ ಮತದಾರರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಚುನಾವಣಾಧಿಕಾರಿಗಳು ಹಾಗೂ ಮತದಾರರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.

    ಮೀರಾಪೂರಹಟ್ಟಿ ಗ್ರಾಮದ 169 ನೇ ಬೂತ್‍ನಲ್ಲಿ ಇವಿಎಂನಲ್ಲಿ ದೋಷ ಉಂಟಾಗಿದ್ದು, ಕಳೆದ ಒಂದು ಗಂಟೆಯಿಂದ ಮತದಾನ ಸ್ಥಗಿತವಾಗಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

  • ಇವಿಎಂ ಕೆಟ್ಟರೂ ಅವಧಿ ವಿಸ್ತರಿಸದ ಉಡುಪಿ ಜಿಲ್ಲಾಡಳಿತ: ಮತದಾರರ ಹಿಡಿಶಾಪ

    ಇವಿಎಂ ಕೆಟ್ಟರೂ ಅವಧಿ ವಿಸ್ತರಿಸದ ಉಡುಪಿ ಜಿಲ್ಲಾಡಳಿತ: ಮತದಾರರ ಹಿಡಿಶಾಪ

    ಉಡುಪಿ: ನಗರದ ಎರಡು ಕಡೆ ಮತಯಂತ್ರ ಕೈಕೊಟ್ಟಿದ್ದರೂ, ಮತದಾನದ ಅವಧಿಯನ್ನು ವಿಸ್ತರಿಸದ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೊಡವೂರಿನ ಎರಡು ಮತಯಂತ್ರಗಳು ಕೈಕೊಟ್ಟ ಪರಿಣಾಮ, ಎರಡು ಗಂಟೆ ಮತದಾನ ಸ್ಥಗಿತವಾಗಿತ್ತು. ಆದರೆ ಜಿಲ್ಲಾಡಳಿತ 2 ಗಂಟೆಗಳ ಅವಧಿಯನ್ನು ವಿಸ್ತರಣೆ ಮಾಡದೇ, 5 ಗಂಟೆಗೆ ಮತದಾನ ಮುಕ್ತಾಯವಾಗುತ್ತದೆ ಎಂದು ತಿಳಿಸಿದೆ.

    ಜಿಲ್ಲಾಡಳಿತದ ಕ್ರಮಕ್ಕೆ ಅಸಮಾಧಾನಗೊಂಡ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಕೊಡವೂರಿನ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ಮಾಧವ ಬನ್ನಂಜೆ ಮಾತನಾಡಿ, ಮತಯಂತ್ರದ ದೋಷದಿಂದ ಎರಡು ಗಂಟೆ ಮತದಾನ ವಿಳಂಬವಾಗಿದೆ. ಹೀಗಾಗಿ ಹೆಚ್ಚುವರಿ 2 ಗಂಟೆಗಳ ಮತದಾನಕ್ಕೆ ಜಿಲ್ಲಾಡಳಿತ ಅವಕಾಶಮಾಡಿಕೊಡಬೇಕು. ಒಂದೊಂದು ಮತವೂ ಅಮೂಲ್ಯವಾಗಿದೆ ಎಂದು ಹೇಳಿದರು.

    ಕಳೆದ ಬಾರಿಯೂ ಮತಗಟ್ಟೆಯಲ್ಲಿ ಮತಯಂತ್ರ ಕೆಟ್ಟಿತ್ತು. ಅಧಿಕಾರಿಗಳಿಗೆ ಚುನಾವಣೆ ಬಗ್ಗೆ ಗಂಭೀರತೆ ಇಲ್ಲ. ನಮ್ಮೂರಿನಿಂದ ಮದುವೆಗೆ ಹೊರಟ 60 ಜನ ವೋಟ್ ಹಾಕಲು ಬಂದಿದ್ದರು. ಮತಯಂತ್ರ ಕೆಟ್ಟಿದ್ದಕ್ಕೆ ಅವರು ವಾಪಾಸ್ಸು ಹೋದರು ಮತ್ತೆ ಅವರು ಬರುವುದಿಲ್ಲವೆಂದು ಬಿಜೆಪಿ ಅಭ್ಯರ್ಥಿ ವಿಜಯ್ ತಮ್ಮ ಬೇಸರವನ್ನು ವ್ಯಕ್ತಪಡಿಸಿದರು.

    ಈ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಎರಡು ಕಡೆ ಮತಯಂತ್ರ ದೋಷ ಕಂಡುಬಂದಿದೆ. ಈಗಾಗಲೇ ನಮ್ಮ ಸಿಬ್ಬಂದಿ ದೋಷ ಸರಿಪಡಿಸಿದ್ದಾರೆ. ಅಲ್ಲದೇ ಬೇರೆ ಮತಯಂತ್ರವನ್ನು ಹಾಕಿದ್ದಾರೆ. ಎರಡು ಮತಗಟ್ಟೆಗಳಲ್ಲಿ ಟೋಕನ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ. ಮತದಾರರು 5 ಗಂಟೆಯ ಒಳಗೆ ಟೋಕನ್ ಪಡೆದುಕೊಳ್ಳಬೇಕು. ಟೋಕನ್ ಪಡೆದುಕೊಂಡ ಮತದಾರರಿಗೆ ಮತದಾನಕ್ಕೆ ಅವಕಾಶಮಾಡಿಕೊಡುತ್ತೇವೆ. ಯಾವುದೇ ಕಾರಣಕ್ಕೂ ಮತದಾನದ ಅವಧಿಯನ್ನು ವಿಸ್ತರಣೆ ಮಾಡಲು ಸಾಧ್ಯವಿಲ್ಲ. ಮತದಾನ ಮಾಡುವುದು ಎಲ್ಲರ ಹಕ್ಕು ಮತ್ತು ಕರ್ತವ್ಯ. ಮತಯಂತ್ರ ದೋಷದಿಂದಾಗಿ ಉಂಟಾದ ಸಮಸ್ಯೆಗೆ ಮತದಾರರು ಸಹಕರಿಸಬೇಕೆಂದು ವಿನಂತಿಸಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತಯಂತ್ರಗಳನ್ನ 3 ಕಿ.ಮೀ ಹೊತ್ತುಕೊಂಡೇ ಹೋದ್ರು!

    ಮತಯಂತ್ರಗಳನ್ನ 3 ಕಿ.ಮೀ ಹೊತ್ತುಕೊಂಡೇ ಹೋದ್ರು!

    ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಶನಿವಾರ ಮುಗಿದಿದೆ. ಆದರೆ ಎಲೆಕ್ಷನ್ ಡ್ಯೂಟಿ ಮುಗಿಸಿ ಏಕಕಾಲಕ್ಕೆ ಹೊರಟಿದ್ದರಿಂದ ಬೆಳಗಾವಿಯ ರಾಯಬಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ತಾಲೂಕಿನ ವಿವಿಧೆಡೆಗಳಿಂದ ಚುನಾವಣೆ ಕರ್ತವ್ಯ ಮುಗಿಸಿ ಏಕಕಾಲಕ್ಕೆ ಬಂದಿದ್ದರಿಂದ ಬಸ್ ಹಾಗೂ ವಾಹನಗಳಿಂದ ಸಂಚಾರ ದಟ್ಟಣೆಯುಂಟಾಗಿತ್ತು. ಆದ್ದರಿಂದ ಕುಡಚಿ ಹಾಗೂ ರಾಯಬಾಗ ಕ್ಷೇತ್ರಗಳಲ್ಲಿ ಕರ್ತವ್ಯ ಮುಗಿಸಿ ಬಂದ ಚುನಾವಣಾ ಸಿಬ್ಬಂದಿ ಮತ ಯಂತ್ರಗಳನ್ನು ಹಸ್ತಾಂತರಿಸಲು ವಿಳಂಬವಾಗಿದ್ದು, ಸಂಚಾರ ದಟ್ಟಣೆಯಿಂದ ಚುನಾವಣಾ ಸಿಬ್ಬಂದಿ ಹೈರಾಣಾಗಿದ್ದಾರೆ.

    ಟ್ರಾಫಿಕ್ ಜಾಮ್‍ನಿಂದ ಸಿಬ್ಬಂದಿ ಪಟ್ಟಣದ ಹೊಸ ಸಂಯುಕ್ತ ಪದವಿ ಪೂರ್ವ ಕಾಲೇಜುವರೆಗೆ ನಡೆದುಕೊಂಡು ಹೋಗಿದ್ದಾರೆ. ಸುಮಾರು ಮೂರು ಕಿಲೋಮೀಟರ್  ವರೆಗೆ ಮತಯಂತ್ರಗಳನ್ನು ಹೊತ್ತುಕೊಂಡೇ ಹೋಗಿದ್ದಾರೆ.

    ಟ್ರಾಫಿಕ್ ಜಾಮ್ ಸರಿಪಡಿಸಲು ಪೊಲೀಸರು ಸತತ 3 ಗಂಟೆಗಳ ಕಾಲ ಹರಸಾಹಸಪಟ್ಟರು.

  • ಕರ್ನಾಟಕ ಎಲೆಕ್ಷನ್‍ಗೆ ಗುಜರಾತ್‍ನಿಂದ ಇವಿಎಂ – 5 ಲಾರಿಗಳಲ್ಲಿ ಬಂತು ವೋಟಿಂಗ್ ಮೆಷೀನ್

    ಕರ್ನಾಟಕ ಎಲೆಕ್ಷನ್‍ಗೆ ಗುಜರಾತ್‍ನಿಂದ ಇವಿಎಂ – 5 ಲಾರಿಗಳಲ್ಲಿ ಬಂತು ವೋಟಿಂಗ್ ಮೆಷೀನ್

    ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸರ್ವ ಸಿದ್ಧತೆಯಲ್ಲಿ ತೊಡಗಿದೆ. ಚುನಾವಣೆಗೆ ಅಗತ್ಯವಿರುವ ವೋಟಿಂಗ್ ಮೆಷೀನ್‍ಗಳನ್ನು ಚುನಾವಣಾ ಆಯೋಗ ಗುಜರಾತ್‍ನಿಂದ ತರಿಸಿಕೊಂಡಿದೆ.

    ಬೆಂಗಳೂರಿನ ಕಂದಾಯ ಭವನಕ್ಕೆ ಇವಿಎಂ ಯಂತ್ರಗಳನ್ನು ತರಿಸಲಾಗಿದೆ. ಒಟ್ಟು 3860 ಯಂತ್ರಗಳನ್ನು ತರಿಸಲಾಗಿದ್ದು, ಗುಜರಾತ್‍ನಿಂದ ಬೆಂಗಳೂರಿಗೆ ಒಟ್ಟು 5 ಲಾರಿಗಳ ಮೂಲಕ ಭಾನುವಾರ ರಾತ್ರಿ ಇವಿಎಂ ಯಂತ್ರಗಳನ್ನು ತೆಗೆದುಕೊಂಡು ಬರಲಾಗಿದೆ.

    ಬೆಂಗಳೂರಿನ ಕಂದಾಯ ಭವನದಲ್ಲಿ ಇವಿಎಂ ಯಂತ್ರಗಳನ್ನ ಇರಿಸಲಾಗಿದ್ದು, 7 ಕ್ಷೇತ್ರಗಳಿಗೆ ಬಳಕೆಯಾಗಲಿರುವ ಈ ಯಂತ್ರಗಳನ್ನು ಇಂದು ಆರ್‍ಎಂಸಿ ಯಾರ್ಡ್ ನಲ್ಲಿ ಡಿಸಿ ನೇತೃತ್ವದಲ್ಲಿ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

    ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ, 2018ರ ಚುನಾವಣೆ ಪ್ರಯುಕ್ತ ಇವಿಎಂ ಯಂತ್ರಗಳನ್ನ ತರಲಾಗಿದೆ. ಗುಜರಾತ್‍ನ ಮೂರು ಜಿಲ್ಲೆಗಳಿಂದ ಯಂತ್ರಗಳು ಆಗಮಿಸಿವೆ. 3,090 ಬ್ಯಾಲೆಟ್ ಯುನಿಟ್ಸ್, 770 ಕಂಟ್ರೋಲ್ ಯುನಿಟ್ ಬಂದಿವೆ. ಬಂದಿರೋ ಯಂತ್ರಗಳನ್ನ ಸ್ಟ್ರಾಂಗ್ ರೂಮ್‍ನಲ್ಲಿಡಲಾಗಿದೆ. ಭದ್ರತೆಗಾಗಿ ಆರು ಸಿಸಿಟಿವಿ ಕ್ಯಾಮೆರಾಗಳ ಜೊತೆ ರೌಂಡ್ ಕ್ಲಾಕ್ ಸೆಕ್ಯೂರಿಟಿ ನೇಮಿಸಲಾಗಿದೆ ಅಂತ ಹೇಳಿದ್ರು.

    ಇಂದು ಎಲ್ಲಾ ಪಕ್ಷಗಳ ಮುಖಂಡರು ಹಾಗು ಏಜೆಂಟ್‍ಗಳ ನೇತೃತ್ವದಲ್ಲಿ ಕೊಠಡಿ ತೆರೆಯಲಾಗುತ್ತೆ. ಮಹದೇವಪುರ, ದಾಸರಹಳ್ಳಿ, ಬೆಂಗಳೂರು ದಕ್ಷಿಣ, ಯಲಹಂಕ, ಯಶವಂತಪುರ, ಬ್ಯಾಟರಾಯನಪುರ, ಆನೇಕಲ್ ಕ್ಷೇತ್ರಗಳಿಗೆ ಇವಿಎಂ ಆಗಮಿಸಿದೆ. 3 ಸಾವಿರ ಕಂಟ್ರೋಲ್ ಯುನಿಟ್‍ಗಳನ್ನ ಬಿಇಎಲ್‍ನಿಂದ ತರಿಸಲಾಗಿದೆ. ಉಳಿದ ಕ್ಷೇತ್ರಗಳಿಗೆ ಬೇರೆ ಕಡೆ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದ್ರು.

    ಜಿಲ್ಲಾಧಿಕಾರಿ ಶಂಕರ್ ಮಾತನಾಡಿ, ಕಂಟ್ರೋಲ್ ರೂಮ್ ಉತ್ತಮವಾಗಿದೆ. ಪೊಲೀಸ್ ಹಾಗೂ ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ಆಯುಕ್ತರು ಜಿಲ್ಲಾ ಚುನಾವಣಾ ಉಸ್ತುವಾರಿ ವಹಿಸಿರುತ್ತಾರೆ. ನಾಳೆ ಎಫ್.ಎಲ್.ಸಿ ಇದೆ. ಎಲ್ಲಾ ಪಕ್ಷದ ಮುಖಂಡರನ್ನ ಬರಲು ಸೂಚಿಸಿದ್ದೇವೆ. ಇವಿಎಂ ಬಗ್ಗೆ ಅನುಮಾನಗಳಿದ್ದಲ್ಲಿ ನಾಳೆ ಪರಿಶೀಲನೆ ಮಾಡಿಸುತ್ತೇವೆ. ಬಳಿಕ ಸ್ಟ್ರಾಂಗ್ ರೂಮ್‍ನಿಂದ ನಿರ್ಮಿಸಲಾಗುವುದು. ಆ ಬಳಿಕ ಯಾರನ್ನೂ ಬಿಡಲಾಗುವುದಿಲ್ಲ ಎಂದು ಹೇಳಿದ್ರು.