Tag: ಮದುವೆ ದಿಬ್ಬಣ

  • ಚಾಲಕರ ಮುಷ್ಕರ – ರಾತ್ರಿಯಿಡೀ ನಡೆದುಕೊಂಡೇ ಹೋಗಿ ವಧು ಮನೆ ಸೇರಿದ ವರನ ಕುಟುಂಬ

    ಚಾಲಕರ ಮುಷ್ಕರ – ರಾತ್ರಿಯಿಡೀ ನಡೆದುಕೊಂಡೇ ಹೋಗಿ ವಧು ಮನೆ ಸೇರಿದ ವರನ ಕುಟುಂಬ

    ಭುವನೇಶ್ವರ: ಚಾಲಕರ ಮುಷ್ಕರದ (Driver Strike) ಹಿನ್ನೆಲೆ ವಾಹನದ ವ್ಯವಸ್ಥೆ ಮಾಡಲಾಗದೇ ಮದುವೆ ದಿಬ್ಬಣವೊಂದು ರಾತ್ರಿಯಿಡೀ ಬರೋಬ್ಬರಿ 28 ಕಿ.ಮೀ ನಡೆದುಕೊಂಡೇ ಹೋಗಿ ವಧು (Bride) ಮನೆ ಸೇರಿರುವ ಘಟನೆ ಒಡಿಶಾದ (Odisha) ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ, ಕಲ್ಯಾಣಸಿಂಗ್‌ಪುರ ಬ್ಲಾಕ್‌ನ ಸುನಖಂಡಿ ಪಂಚಾಯಿತಿಯಿಂದ ವರ ಸೇರಿದಂತೆ ಇಡೀ ಮದುವೆ ದಿಬ್ಬಣ ಗುರುವಾರ ರಾತ್ರಿಯಿಡೀ ನಡೆದುಕೊಂಡೇ ಹೋಗಿ ದಿನಳಪಾಡು ಗ್ರಾಮಕ್ಕೆ ತಲುಪಿದೆ. ಇದಾದ ಬಳಿಕ ಶುಕ್ರವಾರ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

     

    ವರ (Groom), ಕೆಲ ಮಹಿಳೆಯರು ಹಾಗೂ ಅವರ ಕುಟುಂಬದ ಸದಸ್ಯರು ರಾತ್ರಿಯಿಡೀ ನಡೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಚಾಲಕರ ಮುಷ್ಕರದಿಂದಾಗಿ ಬೇರೆ ಯಾವುದೇ ಸಾರಿಗೆ ಲಭ್ಯವಿಲ್ಲದ ಕಾರಣ ರಾತ್ರಿಯಿಡೀ ನಡೆದುಕೊಂಡು ಹೋಗಿ ವಧು ಮನೆಯನ್ನು ಸೇರಿದ್ದೇವೆ. ನಮಗೆ 28 ಕಿ.ಮೀ ನಡೆದುಕೊಂಡು ಹೋಗುವುದರ ಹೊರತು ಬೇರೆ ಯಾವುದೇ ದಾರಿಯಿರಲಿಲ್ಲ ಎಂದು ವರನ ಕುಟುಂಬದವರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: Bengaluru-Mysuru Expressway ನಲ್ಲಿ ಬೇಸಿಗೆ ಮಳೆಗೇ ಅವಾಂತರ- ವಾಹನ ಸವಾರರ ಪರದಾಟ

    ವಿಮೆ, ಪಿಂಚಣಿ, ಕಲ್ಯಾಣ ಮಂಡಳಿ ರಚನೆ ಹಾಗೂ ಇತರ ಸಮಾಜ ಕಲ್ಯಾಣ ಕ್ರಮಗಳಿಗೆ ಆಗ್ರಹಿಸಿ ಚಾಲಕ ಏಕತಾ ಮಹಾಸಂಘ ಬುಧವಾರದಿಂದ ಒಡಿಶಾ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ. ವಾಣಿಜ್ಯ ವಾಹನ ಚಾಲಕರು ನಡೆಸುತ್ತಿದ್ದ ಮುಷ್ಕರಕ್ಕೆ ರಾಜ್ಯ ಸರ್ಕಾರ ಅವರ ಎಲ್ಲಾ ಬೇಡಿಕೆಗಳನ್ನು 90 ದಿನಗಳ ಒಳಗಾಗಿ ಈಡೇರಿಸುವುದಾಗಿ ಭರವಸೆ ನೀಡಿದೆ. ಈ ಬಳಿಕ ಮುಷ್ಕರವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: `ಕೈ’ ಟಿಕೆಟ್ ಆಕಾಂಕ್ಷಿಯಿಂದ ಸೀರೆ, ತವಾ ವಿತರಣೆ- ಉಡುಗೊರೆ ಸಿಗದ ಮಹಿಳೆಯರು ಗರಂ

  • ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ

    ಮದುವೆ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಾಲಕನಾದ ಶಾಸಕ ರೇಣುಕಾಚಾರ್ಯ

    ದಾವಣಗೆರೆ: ಇತ್ತೀಚೆಗೆ ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿ ಸುದ್ದಿಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತೆ ವಿನೂತನ ಕೆಲಸ ಮಾಡಿ ಸುದ್ದಿಯಾಗಿದ್ದಾರೆ.

    ಭಾನುವಾರ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನಲ್ಲಿ ನಡೆದ ಮದುವೆಯ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದಾರೆ. ಈ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿದ ಶಾಸಕ ರೇಣುಕಾಚಾರ್ಯ

    ಬೆಳಗುತ್ತಿ ಗ್ರಾಮದ ಮಲ್ಲಿಕಾರ್ಜುನ ಅಪ್ಪನವರ್ ಪುತ್ರ ಪ್ರಶಾಂತ್ ಹಾಗೂ ಪ್ರಿಯಾ ಅವರ ಮದುವೆಯಲ್ಲಿ ರೇಣುಕಾಚಾರ್ಯ ಪಾಲ್ಗೊಂಡಿದ್ದು, ಬಳಿಕ ಮದುವೆ ದಿಬ್ಬಣ ಹೊತ್ತ ಟ್ರ್ಯಾಕ್ಟರ್ ಅನ್ನು ಚಲಾಯಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿ ಮಗುವಿಗೆ ತಮ್ಮದೇ ಹೆಸರನ್ನಿಟ್ಟ ಸಿದ್ದರಾಮಯ್ಯ

    ಇಂದು ದಾವಣಗೆರೆಯ ಬೆಳೆ ಹಾನಿ ಪ್ರದೇಶಗಳಿಗೆ ರೇಣುಕಾಚಾರ್ಯ ಭೇಟಿ ನೀಡಿದ್ದು, ಬಳಿಕ ಮದುವೆಗೆ ತೆರಳಿದ್ದರು. ಮದುವೆಯ ದಿಬ್ಬಣದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ಬಳಿಕ ರೇಣುಕಾಚಾರ್ಯ ನವಜೋಡಿಗೆ ಆಶೀರ್ವದಿಸಿದರು.

  • ಮನೆ ಮೇಲೆ ಉರುಳಿದ ಮದುವೆ ಬಸ್ – 7 ಸಾವು, 35 ಮಂದಿಗೆ ಗಾಯ

    ಮನೆ ಮೇಲೆ ಉರುಳಿದ ಮದುವೆ ಬಸ್ – 7 ಸಾವು, 35 ಮಂದಿಗೆ ಗಾಯ

    ಮಂಗಳೂರು: ಮನೆ ಮೇಲೆ ಮದುವೆ ದಿಬ್ಬಣದ ಬಸ್ ಉರುಳಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 35 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಗಡಿಭಾಗ ಕೇರಳದ ಪಾಣತ್ತೂರಿನಲ್ಲಿ ನಡೆದಿದೆ.

    ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಚನಿಲ ಕೊಗ್ಗು ನಾಯ್ಕ ಎಂಬವರ ಪುತ್ರಿ ಹಾಗೂ ಕೊಡಗು ಜಿಲ್ಲಾ ವ್ಯಾಪ್ತಿಯ ಕರಿಕೆಯ ವರನ ಮನೆಯಲ್ಲಿ ಮದುವೆ ನಿಗದಿಯಾಗಿತ್ತು. ಈ ಸಮಾರಂಭಕ್ಕ ವಧುವಿನ ಊರು ಈಶ್ವರಮಂಗಲದಿಂದ ದಿಬ್ಬಣ ಬಸ್ ಹೋಗುತ್ತಿತ್ತು. ವಧು ಮತ್ತು ಇತರರು ಟಿಟಿ ವಾಹನದಲ್ಲಿ ಹೋಗುತ್ತಿದ್ದರು.

    ಈ ವೇಳೆ 63 ಪ್ರಯಾಣಿಕರೊಂದಿಗೆ ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಸುಮಾರು 35 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕೇರಳ ಮತ್ತು ಮಂಗಳೂರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಅಪಘಾತ ಕುರಿತಂತೆ ತನಿಖೆ ನಡೆಸಲು ಕೇರಳ ಸಾರಿಗೆ ಮಂತ್ರಿ ತಿಳಿಸಿದ್ದಾರೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.