Tag: ಮದುವೆ ಸಮಾರಂಭ

  • ಮದುವೆಗೆ ಬಂದ ಅತಿಥಿಗಳ ಮೇಲೆ ಬಿತ್ತು ಮುಸುರೆ ತಟ್ಟೆ – ವೈಟರ್‌ನನ್ನೇ ಹೊಡೆದು ಕೊಂದ್ರು

    ಮದುವೆಗೆ ಬಂದ ಅತಿಥಿಗಳ ಮೇಲೆ ಬಿತ್ತು ಮುಸುರೆ ತಟ್ಟೆ – ವೈಟರ್‌ನನ್ನೇ ಹೊಡೆದು ಕೊಂದ್ರು

    – ಶವವನ್ನು ಕಾಡಿನಲ್ಲಿ ಬಚ್ಚಿಟ್ರು

    ಲಕ್ನೋ: ಸಂಭ್ರಮದಿಂದ ಕೂಡಿರಬೇಕಾಗಿದ್ದ ಮದುವೆ ಮನೆಯಲ್ಲಿ ರಕ್ತ ಹರಿದಿರುವ ಘಟನೆಯೊಂದು ನಡೆದಿದೆ. ಮದುವೆಗೆ ಬಂದ ಅಥಿತಿಗಳ ಮೇಲೆ ಮುಸುರೆ ತಟ್ಟೆಗಳು ಬಿತ್ತು ಎಂದು ವೈಟರ್‌ನನ್ನೇ (Waiter) ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ.

    ಅಂಕುರ್ ವಿಹಾರ್ ಸಿಜಿಎಸ್ ವಾಟಿಕಾದಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದ ಪಂಕಜ್ ಹತ್ಯೆಯಾದ ವ್ಯಕ್ತಿ. ನವೆಂಬರ್ 17ರಂದು ಮದುವೆ ಸಮಾರಂಭವೊಂದರಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದಾಗ ಮುಸುರೆ ತಟ್ಟೆಗಳು ಅತಿಥಿಗಳಾಗಿ ಆಗಮಿಸಿದ್ದ ರಿಷಬ್ ಹಾಗೂ ಆತನ ಇಬ್ಬರು ಸ್ನೇಹಿತರ ಮೇಲೆ ಬಿದ್ದಿತ್ತು.

    ಮುಸುರೆ ತಟ್ಟೆಗಳು ತಮ್ಮ ಮೇಲೆ ಬಿದ್ದ ಪರಿಣಾಮ ರಿಷಬ್ ಸಿಟ್ಟಾಗಿ ವೈಟರ್ ಪಂಕಜ್‌ನೊಂದಿಗೆ ಜಗಳ ಪ್ರಾರಂಭಿಸಿದ್ದಾನೆ. ಜಗಳ ಅತಿರೇಕಕ್ಕೆ ತಿರುಗಿ ಹೊಡೆದಾಟ ನಡೆದಿದ್ದು, ಈ ವೇಳೆ ಪಂಕಜ್‌ನನ್ನು ನೆಲಕ್ಕೆ ಬೀಳಿಸಿ ರಿಷಬ್ ಹೊಡೆದು ಕೊಂದಿದ್ದಾನೆ. ಇದನ್ನೂ ಓದಿ: ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

    ಕೊಲೆ ಬಳಿಕ ಸಿಕ್ಕಿ ಬೀಳುವ ಭಯದಲ್ಲಿ ರಿಷಬ್ ಹಾಗೂ ಆತನ ಸ್ನೇಹಿತರಾದ ಮನೋಜ್ ಹಾಗೂ ಅಮಿತ್ ಪಂಕಜ್‌ನ ಶವವನ್ನು ಹತ್ತಿರದ ಕಾಡಿಗೆ ಕೊಂಡುಹೋಗಿ ಅಲ್ಲಿ ಬಚ್ಚಿಟ್ಟಿದಾರೆ. ಘಟನೆ ನಡೆದ ಒಂದು ದಿನದ ಬಳಿಕ ಪೊಲೀಸರು ಪಂಕಜ್‌ನ ಶವವನ್ನು ಕಾಡಿನಿಂದ ವಶಪಡಿಸಿಕೊಂಡಿದ್ದಾರೆ.

    ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಚಿನ್ನ, ಜಮೀನು, ಬಿಎಂಡಬ್ಲ್ಯು ಕಾರಿಗೆ ಬೇಡಿಕೆ- ವೈದ್ಯೆ ಆತ್ಮಹತ್ಯೆಗೆ ಶರಣು

  • Gangwar: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಬಲಿ

    Gangwar: ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಬಲಿ

    ಒಟ್ಟಾವ: ಮದುವೆ ಸಮಾರಂಭದಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಗೆ ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ (Punjab Origin Gangster) ಬಲಿಯಾಗಿರುವ ಘಟನೆ ಕೆನಡಾದ (Canada) ವ್ಯಾಂಕೋವರ್‌ ನಗರದಲ್ಲಿ ನಡೆದಿದೆ.

    ತಡರಾತ್ರಿ ಸುಮಾರು 1:30ರ ವೇಳೆಗೆ ಗುಂಡಿನ ದಾಳಿ (Shotout) ನಡೆದಿದ್ದು, 28 ವರ್ಷದ ಅಮರ್‌ ಪ್ರೀತ್‌ (ಚುಕ್ಕಿ) ಬಲಿಯಾಗಿದ್ದಾನೆ. ಗ್ಯಾಂಗ್‌ಸ್ಟರ್‌ಗಳಾಗಿದ್ದ ಅಮರ್‌ ಪ್ರೀತ್‌ ಸಹೋದರರಾದ ಸಮ್ರಾ ಮತ್ತು ರವೀಂದರ್‌ ಇಬ್ಬರೂ ಮದುವೆ ಅತಿಥಿಗಳಾಗಿ ಬಂದಿದ್ದರು. ಇದೇ ಸಮಾರಂಭಕ್ಕೆ ಕೆಲವು ಅಪರಿಚಿತ ವ್ಯಕ್ತಿಗಳೂ ಸೇರಿದಂತೆ 60 ಮಂದಿ ಹಾಜರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 5, 6 ವರ್ಷದ ಬಾಲಕಿಯರ ಮೇಲೆ ಸಂಬಂಧಿಕನಿಂದಲೇ ರೇಪ್‌ – ಆರೋಪಿ ಎಸ್ಕೇಪ್‌

    CRIME 2

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಉದ್ದೇಶಿತ ಗ್ಯಾಂಗ್‌ ವಾರ್‌ ಆಗಿದೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಲ್ಲಿ ಸಹಾಯವಾಣಿ ಮೊ.ಸಂ. 6047172500ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಸರ ನುಂಗಿದ- ಗಂಟಲಲ್ಲಿ ಸಿಲುಕಿ ಆಸ್ಪತ್ರೆಯಲ್ಲಿ ನರಳಾಡಿದ! 

    2022ರ ಆಗಸ್ಟ್‌ನಲ್ಲಿ ಕೆನಡಾ ಪೊಲೀಸರು ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಪರ್ಕದಲ್ಲಿದ್ದ 11 ವ್ಯಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದರು. ಅವರಲ್ಲಿ ಅಮರ್‌ ಪ್ರೀತ್‌ ಮತ್ತು ಸಹೋದರ ರವೀಂದರ್‌ ಸೇರಿ 9 ಮಂದಿ ಪಂಜಾಬ್‌ ಮೂಲದವರು ಎಂದು ತಿಳಿಸಿದ್ದರು.

  • ಮದುವೆ ಮನೆಯಲ್ಲೇ ವಧು ನಿಗೂಢ ಸಾವು

    ಮದುವೆ ಮನೆಯಲ್ಲೇ ವಧು ನಿಗೂಢ ಸಾವು

    ಹೈದರಾಬಾದ್: ಮದುವೆ ಸಮಾರಂಭದ ವೇಳೆ ವಧು ಕುಸಿದು ಬಿದ್ದಿದ್ದು, ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.

    ವಿಶಾಖಪಟ್ಟಣಂನಲ್ಲಿರುವ ಮಧುರವಾಡದ ಫಂಕ್ಷನ್ ಹಾಲ್‍ನಲ್ಲಿ ಬುಧವಾರ ಸಂಜೆ ಮದುವೆ ಸಮಾರಂಭದ ವಿಧಿ, ವಿಧಾನಗಳು ನಡೆಯುತ್ತಿತ್ತು. ಈ ವೇಳೆ ವಧು ಪ್ರಜ್ಞೆತಪ್ಪಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಧು ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

    ಮೃತ ದುರ್ದೈವಿಯನ್ನು ಸೃಜನಾ ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ವಿಷ ಸೇವಿಸಿ ಸಾವನ್ನಪ್ಪಿರುವಂತೆ ಕಾಣಿಸುತ್ತದೆ. ಆದರೆ ಈ ಸಂಬಂಧ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

  • ಮದುವೆ ಮನೆಯಲ್ಲಿ ಗುಂಡಿನ ದಾಳಿ – ಮಹಿಳೆಗೆ ಗಾಯ

    ಮದುವೆ ಮನೆಯಲ್ಲಿ ಗುಂಡಿನ ದಾಳಿ – ಮಹಿಳೆಗೆ ಗಾಯ

    ನವದೆಹಲಿ: ಮದುವೆ ಸಮಾರಂಭದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ 54 ವರ್ಷದ ಮಹಿಳೆಯೊಬ್ಬರಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ನಡೆದಿದೆ.

    ಘಟನೆಯಲ್ಲಿ ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ವಸಂತ್ ಕುಂಜ್‍ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ಹೇಳಿಕೆ ಪಡೆಯಲು ಮಹಿಳೆ ಆರೋಗ್ಯ ಸ್ಥಿತಿ ಸರಿಯಾಗಿಲ್ಲದ ಕಾರಣ ಘಟನೆ ವಿಚಾರವಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ

    MARRIAGE

    ಛತ್ತರ್‍ಪುರ ದೇವಾಲಯದ ಮಾತಂಗಿ ಭವನದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಹರಿಯಾಣದ ಬಹದ್ದೂರ್‍ಗಢದಿಂದ ಮದುವೆ ಸಮಾರಂಭಕ್ಕೆ ಬಂದಿದ್ದವರ ಗುಂಪಿನಲ್ಲಿ ಮಹಿಳೆ ಕೂಡ ಒಬ್ಬರಾಗಿದ್ದಾರೆ ಎಂದು ಪೊಲೀಸ್ ಉಪ ಕಮಿಷನರ್ (ದಕ್ಷಿಣ) ಬೆನಿಟಾ ಮೇರಿ ಜೈಕರ್ ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಭೇಟಿಯಾದ ಶರದ್ ಪವಾರ್

    ಇದೀಗ ಭಾರತೀಯ ದಂಡ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಪ್ರಕರಣವನ್ನು ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಮದುವೆಯಲ್ಲಿ ಪಾಲ್ಗೊಳ್ಳಲು 200 ಮಂದಿಗೆ ಅವಕಾಶ – ಉತ್ತರಾಖಂಡ್ ಸರ್ಕಾರ ಹೊಸ ನಿರ್ಧಾರ

    ಮದುವೆಯಲ್ಲಿ ಪಾಲ್ಗೊಳ್ಳಲು 200 ಮಂದಿಗೆ ಅವಕಾಶ – ಉತ್ತರಾಖಂಡ್ ಸರ್ಕಾರ ಹೊಸ ನಿರ್ಧಾರ

    ಡೆಹ್ರಾಡೂನ್: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಹಲವಾರು ಮುನ್ನೆಚ್ಚರಿಕಾ ಕ್ರಮಗಳ ಮಧ್ಯೆ ಉತ್ತರಾಖಂಡ್ ಸರ್ಕಾರವು ಕೋವಿಡ್-19 ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜರುಗುವ ಮದುವೆ ಸಮಾರಂಭಗಳಿಗೆ 200 ಮಂದಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ.

    ಉತ್ತರಾಖಂಡ್ ಮುಖ್ಯ ಕಾರ್ಯದರ್ಶಿ ಓಂ ಪ್ರಕಾಶ್, ಕಂಟೈನ್ಮೆಂಟ್ ಝೋನ್ ಗಳಲ್ಲಿ ನಡೆಯುವ ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು 200 ಮಂದಿಗೆ ಅವಕಾಶ ನೀಡಲಾಗಿದ್ದು, ಅವರು ಕೋವಿಡ್-19 ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ಕೋವಿಡ್-19 ತಡೆಗಟ್ಟಲು ರಾತ್ರಿ 10ರಿಂದ ಬೆಳಗ್ಗೆ 5ರವರೆಗೂ ಡೆಹ್ರಾಡೂನ್‍ನಲ್ಲಿ ನೈಟ್ ಕಫ್ರ್ಯೂ ವಿಧಿಸಲಾಗಿದ್ದು, ಏಪ್ರಿಲ್ 30ರವರೆಗೂ ಡೆಹ್ರಾಡೂನ್, ಹಲ್ದ್ವಾನಿ ಮತ್ತು ಹರಿದ್ವಾರದಲ್ಲಿ 1 ರಿಂದ 12 ನೇ ತರಗತಿವರೆಗೂ ಶಾಲೆಗಳನ್ನು ಮುಚ್ಚಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

    ಸೋಮವಾರ ಉತ್ತರಾ ಖಂಡ್‍ನಲ್ಲಿ 1,334 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಒಟ್ಟು 1,10,146 ಕೊರೊನಾ ಪ್ರಕರಣಗಳು ವರದಿಯಾಗಿದೆ.

  • ಮದುವೆ ವೇಳೆ ವಧುವಿಗೆ ಯಾವ ಮೆಹಂದಿ ಡಿಸೈನ್ ಸೂಟ್ ಆಗುತ್ತೆ ಗೊತ್ತಾ?

    ಮದುವೆ ವೇಳೆ ವಧುವಿಗೆ ಯಾವ ಮೆಹಂದಿ ಡಿಸೈನ್ ಸೂಟ್ ಆಗುತ್ತೆ ಗೊತ್ತಾ?

    ಮದುವೆ ಸಮಾರಂಭ ಅಂದರೆ ಸಾಕು. ಹೆಣ್ಣು ಮಕ್ಕಳಿಗೆ ಮೆಹಂದಿ ಇರಲೇ ಬೇಕು. ಚಿಕ್ಕ-ಮಕ್ಕಳಿಂದ ದೊಡ್ಡವರವರೆಗೂ ಮೆಹಂದಿ ಎಂದರೆ ಎಲ್ಲರಿಗೂ ಅಚ್ಚು-ಮೆಚ್ಚು. ಮದುವೆ ಸಮಾರಂಭಗಳಲ್ಲಂತೂ ಮದುಮಗಳು ಮೆಹಂದಿ ಹಾಕದೇ ಇದ್ದರೆ ಮದುವೆ ಕಂಪ್ಲೀಟ್ ಆಗಿದೆ ಎಂದು ಎನಿಸುವುದೇ ಇಲ್ಲ. ನಿಜವಾಗಿ ಹೇಳಬೇಕೆಂದರೆ ವಧುವಿನ ಮಹೆಂದಿ ಭಾರತ ಹಳೆಯ ಸಂಸ್ಕøತಿ ಮತ್ತು ಸಾಂಪ್ರದಾಯವನ್ನು ಸೂಚಿಸುತ್ತದೆ.

    ಮದುವೆ ಸಮಾರಂಭಗಳಲ್ಲಿ ವಧುವಿನ ಎರಡು ಕೈಗಳು ಮತ್ತಷ್ಟು ಸುಂದರ ಹಾಗೂ ಆಕರ್ಷಕವಾಗಿ ಎದ್ದು ಕಾಣಿಸಲು ಮೆಹಂದಿಯನ್ನು ಬಳಸಲಾಗುತ್ತದೆ. ಅಲ್ಲದೆ ಮದುವೆ ಸಂದರ್ಭದಲ್ಲಿ ವಧುವಿಗಷ್ಟೇ ಅಲ್ಲದೆ ವರನಿಗೂ ಮೆಹಂದಿ ಹಚ್ಚಲಾಗುತ್ತದೆ. ಹಿಂದಿನಿಂದಲೂ ಮದುವೆಯ ಎಲ್ಲ ಶಾಸ್ತ್ರಗಳಲ್ಲಿ ಮೆಹಂದಿ ಶಾಸ್ತ್ರ ಕೂಡ ಒಂದಾಗಿದೆ. ಮದುವೆ ಸಮಯದಲ್ಲಿ ವಧು-ವರನ ಕುಟುಂಬದವರು ಮೆಹಂದಿ ಶಾಸ್ತ್ರವನ್ನು ಆಯೋಜಿಸಿ ಮೆಹಂದಿ ಹಾಕಿಸಿಕೊಳ್ಳುವ ಹಳೆಯ ಸಂಪ್ರದಾಯವನ್ನು ಇಂದಿಗೂ ಮುಂದುವರಿಸಿಕೊಂಡು ಬಂದಿದ್ದಾರೆ.

    ಕೆಲವರು ಮೆಹಂದಿ ಹಾಕಿಸಿಕೊಂಡ ಬಳಿಕ ಅದು ಅತಿಯಾದ ಬಣ್ಣ ನೀಡಿದರೆ ತಮ್ಮ ಜೀವನ ಸಂಗಾತಿ ನಿಮ್ಮನ್ನು ಹೆಚ್ಚು ಪ್ರೀತಿಸುತ್ತಾರೆ ಎಂದು ಹೇಳುತ್ತಾರೆ. ಇನ್ನೂ ಕೆಲವರು ನಿಮ್ಮ ದೇಹದಲ್ಲಿ ಉಷ್ಣಾಂಶ ಅಧಿಕವಾಗಿದ್ದರೆ ಮೆಹಂದಿ ಹೆಚ್ಚು ಬಣ್ಣ ಕೊಡುತ್ತದೆ ಎಂದು ಕೂಡ ಹೇಳುತ್ತಾರೆ. ಇಷ್ಟೆಲ್ಲಾ ಗಾಢವಾದ ಪ್ರಾಮುಖ್ಯತೆ ಇರುವ ಮೆಹಂದಿ ಬಗ್ಗೆ ತಿಳಿದಿದ್ದು, ಸಮಾರಂಭಗಳಲ್ಲಿ ಯಾವ ಮೆಹಂದಿ ಡಿಸೈನ್ಸ್ ಹಾಕಿಕೊಳ್ಳಬೇಕೆಂದು ತಿಳಿಯದೇ ಇರುವವರಿಗೆ ಒಂದಷ್ಟು ಮೆಹಂದಿ ಡಿಸೈನ್ಸ್ ಈ ಕೆಳಗಿನಂತಿವೆ.

    ನವಿಲು ಡಿಸೈನ್ಸ್
    ಈ ಸುಂದರವಾದ ಮೆಹಂದಿ ಡಿಸೈನ್‍ನಲ್ಲಿ ಕೈನ ಮೇಲಿನ ತುದಿಯಲ್ಲಿ ಎರಡು ನವಿಲುಗಳು ಅದಲು-ಬದಲಾಗಿ ತಲೆ ಬಾಗಿಸಿಕೊಂಡಿದ್ದು, ಕೈನ ಮಧ್ಯದಲ್ಲಿ ವಧು-ವರನನ್ನು ಮಂಟಪಕ್ಕೆ ಕರೆದೊಯ್ಯಲಾಗುತ್ತಿರುವಂತೆ ಚಿತ್ರ ಬಿಡಿಸಲಾಗಿದೆ. ಜೊತೆಗೆ ವಧು-ವರ ಇಬ್ಬರು ಹಾರ ಬದಲಿಸಿಕೊಳ್ಳುವಂತಿದ್ದು ಒಂದು ಸುಂದರ ಮದುವೆ ಕಥೆ ಹೇಳುವಂತೆ ತೋರುತ್ತದೆ.

    ಮಿಕ್ಕಿ ಮೌಸ್ ಡಿಸೈನ್
    ಈ ಮೆಹಂದಿ ಡಿಸೈನ್‍ನಲ್ಲಿ ವಧು ಬಹಳ ಸಿಂಪಲ್ ಹಾಗೂ ಡಿಫರೆಂಟ್ ಆಗಿರುವ ಮಿಕ್ಕಿಮೌಸ್‍ನ ಚಿತ್ರವನ್ನು ಕೈ ಮೇಲೆ ಬರೆಸಿಕೊಂಡಿದ್ದಾರೆ. ಈ ಡಿಸೈನ್ ಒಂದು ರೀತಿ ಮಹಿಳೆಯರಿಗೆ ಯುನಿಕ್ ಲುಕ್ ನೀಡುತ್ತದೆ.

    ಹೂವಿನ ರಾಶಿ ಡಿಸೈನ್
    ಇದೊಂದು ಯುನಿಕ್ ಮೆಹಂದಿ ಡಿಸೈನ್ ಆಗಿದ್ದು, ಹಲವಾರು ಮೆಹಂದಿ ಡಿಸೈನ್‍ಗಳ ಮಧ್ಯೆ ಒನ್ ಆಫ್ ದಿ ಬೆಸ್ಟ್ ಡಿಸೈನ್ ಎಂದೇ ಹೇಳಬಹುದು. ಕೈ ತುಂಬಾ ಹೂವಿನ ರಾಶಿಗಳಿಂದ ತುಂಬಿಕೊಂಡಿರುವ ಈ ಡಿಸೈನ್ ನೋಡಲು ಅತ್ಯಂತ ಆಕರ್ಷಕವಾಗಿದ್ದು, ಬಹಳ ಸುಂದರವಾಗಿ ಕಾಣಿಸುತ್ತದೆ.

    ವಧು-ವರ ಡಿಸೈನ್
    ವಧು ವರನ ಚಿತ್ರ ಹೊಂದಿರುವ ಈ ಮೆಹಂದಿ ಕಲಾ ವಿನ್ಯಾಸದಲ್ಲಿ, ನವಿಲು, ಕಮಲ, ಹೂಗಳಿದೆ ಹಾಗೂ ಇವೆಲ್ಲವೂ ವಧು-ವರರನ್ನು ಮದುವೆಗೆ ಸ್ವಾಗತ ಕೋರುವ ರೀತಿಯಲ್ಲಿದ್ದು, ಈ ಡಿಸೈನ್ ನೋಡಲು ಎರಡು ಕಣ್ಣುಗಳು ಸಾಲದು ಎಂದು ಹೇಳಿದರೆ ತಪ್ಪಾಗಲಾರದು.

    ರಾಧಾ-ಕೃಷ್ಣ ಡಿಸೈನ್
    ಒಂದು ಕೈನಲ್ಲಿ ರಾಧಾ-ಕೃಷ್ಣನೊಂದಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದು, ಕೃಷ್ಣನ ಜೊತೆ ರಾಧೆ ಕೊಳಲನ್ನು ಹಿಡಿದುಕೊಂಡಿರುವಂತೆ ಚಿತ್ರವನ್ನು ಬಿಡಿಸಲಾಗಿದೆ. ಮತ್ತೊಂದು ಕೈ ಮೇಲೆ ದೇವಾಲಯ, ಮಕ್ಕಳು, ಓಂ, ಸ್ವಸ್ತಿಕ್ ಚಿತ್ರದ ಜೊತೆ ದಿನಾಂಕ, ವರ್ಷವನ್ನು ಬರೆಯಲಾಗಿದೆ.

  • ಮದುವೆಯಲ್ಲಿ ಗುಂಡು ಹಾರಿಸಿದ್ದ ವ್ಯಕ್ತಿ ಅರೆಸ್ಟ್

    ಮದುವೆಯಲ್ಲಿ ಗುಂಡು ಹಾರಿಸಿದ್ದ ವ್ಯಕ್ತಿ ಅರೆಸ್ಟ್

    ದೆಹಲಿ: ಮದುವೆ ಸಮಾರಂಭವೊಂದರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಗುರುವಾರ ದೆಹಲಿಯಲ್ಲಿ ನಡೆದಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಈ ವೀಡಿಯೋದಲ್ಲಿ ಆರೋಪಿ ಪಾರ್ಟಿ ಡ್ರೆಸ್ ಧರಿಸಿದ್ದು, ಕೈಯಲ್ಲಿ ಕಪ್ಪು ಬಣ್ಣದ ಬಂದೂಕು ಹಿಡಿದು, ವೀಡಿಯೋ ಮಾಡಿ(ವೀಡಿಯೋ ಬನಾವೋ) ಎಂದು ಹೇಳುವ ಮೂಲಕ ಗಾಳಿಯಲ್ಲಿ ಗುಂಡು ಹಾರಿಸುತ್ತಾನೆ. ವೀಡಿಯೋದಲ್ಲಿ ಈತ ಗುಂಡು ಹಾರಿಸಲು ಮುಂದಾದಾಗ ಅಲ್ಲಿದ್ದವರು ನೀನು ಇದನ್ನು ಮತ್ತೆ ಶುರು ಮಾಡಿದೆಯಾ ಎಂದು ಆತನನ್ನು ಗದರಿಸುತ್ತಿರುವುದು ಕಾಣಿಸುತ್ತದೆ.

    ಘಟನೆ ಕುರಿತಂತೆ ಪೊಲೀಸರು ಆರೋಪಿಯನ್ನು ಲೋಕಲ್ ರೌಡಿ ಆಶಿಶ್ ಅಲಿಯಾಸ್ ಮನೀಶ್(32) ಎಂದು ಗುರುತಿಸಿದ್ದು, ಮದುವೆ ಸಮಾರಂಭದಲ್ಲಿ ಅಕ್ರಮ ಬಂದೂಕನ್ನು ಬಳಸಿ ಗುಂಡು ಹಾರಿಸಿದ್ದಾನೆ ಎಂದು ಹೇಳಿದ್ದಾರೆ.

    ಆರೋಪಿ ತನ್ನ ಸೋದರ ಸಂಬಂಧಿ ಮದುವೆ ಕಾರ್ಯಕ್ರಮದಲ್ಲಿ ಗುಂಡು ಹಾರಿಸಿದ್ದು, ಪೊಲೀಸರು ನಿನ್ನೆ ಆಶಿಶ್‍ನನ್ನು ಬಂಧಿಸಿದ್ದಾರೆ ಹಾಗೂ ಆತನ ಬಳಿ ಇದ್ದ ಸೆಮಿ-ಆಟೋಮಿಟಿಕ್ ಗನ್ ಮತ್ತು ಲೈವ್ ಕಾಟ್ರ್ರಿಜ್‍ಗಳನ್ನು ವಶಪಡಿಸಿಕೊಂಡಿದ್ದಾರೆ.