Tag: ಮದ್ದು

  • ಸರ್ವ ರೋಗಕ್ಕೂ ದಾಸವಾಳದಲ್ಲಿದೆ ಮದ್ದು

    ಸರ್ವ ರೋಗಕ್ಕೂ ದಾಸವಾಳದಲ್ಲಿದೆ ಮದ್ದು

    ಬಾಯಾರಿಕೆ ಕಡಿಮೆ ಮಾಡಲು ತಂಪು ಪಾನೀಯ ಕುಡಿಯಬೇಕು ಎನಿಸಿದಾಗ ಕೆಮಿಕಲ್ ಮಿಶ್ರಿತ ಕೂಲ್ ಡ್ರಿಂಕ್ಸ್ ಕುಡಿಯುವ ಬದಲು ನೈಸರ್ಗಿಕ ಜ್ಯೂಸ್ ಮಾಡಿ ಕುಡಿದರೆ ಬಾಯಿಗೂ ರುಚಿ, ಆರೋಗ್ಯಕ್ಕೂ ಒಳ್ಳೆಯದು. ಅದರಲ್ಲೂ ಬೇಸಿಗೆಯಲ್ಲಿ ದಾಸವಾಳ ಹೂವಿನ ಜ್ಯೂಸ್ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು.

    * ಶೀತ, ಕೆಮ್ಮು ಹಾಗೂ ತಲೆನೋವು ಕಾಣಿಸಿಕೊಂಡಾಗ ದಾಸವಾಳ ಹೂವನ್ನು ತಿಂದರೆ ಅಥವಾ ಟೀ ಮಾಡಿ ಕುಡಿದರೆ ತಲೆ ನೋವು ಶಮನವಾಗುತ್ತದೆ.


    * ದಾಸವಾಳ ಹೂವಿನ ಜ್ಯೂಸ್ ಮಾಡಿ ಕುಡಿಯುವುದರಿಂದ ಮೊಡವೆ ಕಡಿಮೆಯಾಗುತ್ತೆ.
    * ದೇಹದಲ್ಲಿ ನೀರಿನ ಅಂಶ ಕೊರತೆ ಇರುವವರು ಹಾಗೂ ಡ್ರೈ ಸ್ಕಿನ್ ಇರುವವರು ದಾಸವಾಳ ಹೂವಿನ ಜ್ಯೂಸ್ ಕುಡಿಯುವುದು ಉತ್ತಮ.

    * ದಿನ ದಾಸವಾಳ ಹೂವಿನ ಜ್ಯೂಸ್ ಕುಡಿಯುವುದರಿಂದ ಮೊಡವೆ ಬರುವುದನ್ನು ತಡೆಯಬಹುದು. ಈ ಜ್ಯೂಸ್ ನಿಮ್ಮ ತ್ವಚೆ ಕಾಂತಿಯನ್ನೂ ಹೆಚ್ಚಿಸುತ್ತದೆ.

    * ದೇಹದಲ್ಲಿ ನೀರಿನಂಶ ಕಮ್ಮಿಯಾಗದಂತೆ ನೋಡಿಕೊಳ್ಳುತ್ತದೆ. ನೀರಿನಂಶದ ಕೊರತೆಯಿಂದ ಬಳಲುತ್ತಿರುವವರು, ಡ್ರೈ ಸ್ಕಿನ್ ಇರುವವರು ಇದರ ಜ್ಯೂಸ್ ಕುಡಿಯುವುದು ಒಳ್ಳೆಯದು.

    * ಹೊಟ್ಟೆ ಹಸಿವು ಸರಿಯಾದ ರೀತಿಯಲ್ಲಿ ಆಗಲು ದಾಸವಾಳವನ್ನು ತಿನ್ನುವುದು ಒಳ್ಳೆಯದು.

    * ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

    * ಈ ಹೂವಿನಿಂದ ತೆಗೆದ ರಸ ಕೂದಲಿಗೆ ಹೊಳಪು ನೀಡಿ ಉತ್ತಮ ಕಂಡೀಶನರ್‌ನಂತೆ ವರ್ತಿಸುತ್ತದೆ. ತಲೆಹೊಟ್ಟು ನಿವಾರಿಸಿ, ಇದು ಕೂದಲಿಗೆ ಕಪ್ಪು ಬಣ್ಣ ನೀಡುತ್ತದೆ.

    * ದಾಸವಾಳ ಎಲೆಯ ಲೋಳೆ ತಲೆಗೆ ಬಳಸುವುದರಿಂದ ಕೂದಲು ಫಳಫಳ ಹೊಳೆಯುತ್ತದೆ.

    * ಬಾಡಿ ಹೀಟ್ ಆಗಿದ್ದರೆ ಅದನ್ನು ಕಮ್ಮಿ ಮಾಡಲು ದಾಸವಾಳ ಹೂವಿನ ಜ್ಯೂಸ್ ಕುಡಿದರೆ ಒಳ್ಳೆಯದು.

    * ದಾಸವಾಳದಲ್ಲಿ ತಂಪು ನೀಡುವ ಅಂಶ ಹೆಚ್ಚಿರುವುದರಿಂದ, ಅದು ಕಣ್ಣುಗಳನ್ನು ಆಯಾಸದಿಂದ ಮುಕ್ತವಾಗಿರಿಸಿ, ತಂಪನ್ನು ನೀಡುತ್ತದೆ.

  • ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

    ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

    ಹೆಚ್ಚಿನವರಿಗೆ ಬಾಯಿ ದುರ್ವಾಸನೆ ಸಮಸ್ಯೆ ಕಾಡುತ್ತದೆ. ಬಾಯಿ ದುರ್ನಾತದಿಂದ ಜನರೊಂದಿಗೆ ಬೆರೆಯಲು ನಮಗೆ ಮುಜುಗರವಾಗುತ್ತದೆ. ಇಂತಹ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತದೆ. ನಿಮ್ಮ ಮನೆಯಲ್ಲಿಯೇ ದೊರೆಯುವ ಅನೇಕ ಪದಾರ್ಥಗಳಿಂದ ನಿಮ್ಮ ಬಾಯಿಯ ದುರ್ವಾಸನೆಯನ್ನು ನೈಸರ್ಗಿಕವಾಗಿ ತೊಲಗಿಸಬಹುದು.

    * ಲವಂಗ ಬಾಯಿಯ ದುರ್ವಾಸನೆಯನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ಆಗಾಗ್ಗೆ 3 ರಿಂದ 4 ಲವಂಗವನ್ನು ನಿಧಾನವಾಗಿ ಜಗಿಯಿರಿ.ನಿಮ್ಮ ಬಾಯಿಯ ದುರ್ವಾಸನೆ, ಹಲ್ಲು ನೋವು ಹಾಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

    * ಊಟದ ಬಳಿಕ ಒಂದು ಚಮಚ ಜೀರಿಗೆ ಸೇವನೆ ಮಾಡಿದರೆ ಅದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ. ಇದನ್ನೂ ಓದಿ: 

    * ನೀವು ಹೆಚ್ಚಾಗಿ ನೀರು ಸೇವನೆ ಮಾಡಬೇಕು. ಬ್ಯಾಕ್ಟೀರಿಯಾವನ್ನು ಹೊರಹಾಕಿ ನಿಮ್ಮ ದೇಹವನ್ನು ರಿಫ್ರೆಶ್ ಮಾಡುತ್ತದೆ. ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣಿನ ರಸ, ಸಕ್ಕರೆ, ಉಪ್ಪನ್ನು ಮಿಶ್ರಣ ಮಾಡಿ ಸೇವನೆ ಮಾಡಿ.  ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಜೇನುತುಪ್ಪ ಮತ್ತು ದಾಲ್ಚಿನ್ನಿಯ ಮಿಶ್ರಣವು ನಿಮ್ಮ ಬಾಯಿಯ ದುರ್ವಾಸನೆಯನ್ನು ಸಂಪೂರ್ಣವಾಗಿ ಹೋಗಲಾಡಿಸುತ್ತದೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ನೀರಿಗೆ ಒಂದು ಚಮಚ ಮೆಂತೆ ಕಾಳುಗಳನ್ನು ಹಾಕಿ. ಇದನ್ನು ಸೋಸಿಕೊಂಡ ಬಳಿಕ ನೀರನ್ನು ದಿನದಲ್ಲಿ ಒಂದು ಸಲ ಕುಡಿಯಿರಿ. ಇದನ್ನೂ ಓದಿ: ಮಜ್ಜಿಗೆಯಲ್ಲಿದೆ ಮದ್ದಿನ ಗುಣ- ಪ್ರತಿನಿತ್ಯ ಒಂದು ಲೋಟ ಮಜ್ಜಿಗೆ ಕುಡಿದು ನೋಡಿ

    * ಒಂದು ಲೋಟ ನೀರಿಗೆ ಸ್ವಲ್ಪ ಅರಿಶಿನ ಹಾಕಿ ಕುಡಿದರೆ ಬಾಯಿ ದುರ್ವಾಸನೆ ಬೀರುವುದಿಲ್ಲ. ಇದನ್ನೂ ಓದಿ: ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು

    * ಆಗಾಗ್ಗೆ ದಾಲ್ಚಿನ್ನಿ ಸಣ್ಣ ತುಂಡನ್ನು ಬಾಯಿಯಲ್ಲಿ ಜಗಿಯುತ್ತಾ ಇರಿ ಇದನ್ನೂ ಓದಿ:  ಒಡೆದ ಹಿಮ್ಮಡಿಯ ಆರೈಕೆಗೆ ಏನು ಮಾಡಬೇಕು ಗೊತ್ತಾ?

    * ಬೆಚ್ಚಗಿನ ನೀರಿನಲ್ಲಿ ಉಪ್ಪು ಬೆರಸಿ ಬಾಯಿ ಮುಕ್ಕಳಿಸಿ. ಇದು ಕೆಟ್ಟ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ತಡೆಯುತ್ತದೆ

  • ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ-ಆರೋಪಿ ಸುಳಿವು ನೀಡಿದವರಿಗೆ 30 ಸಾವಿರ ಬಹುಮಾನ

    ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ-ಆರೋಪಿ ಸುಳಿವು ನೀಡಿದವರಿಗೆ 30 ಸಾವಿರ ಬಹುಮಾನ

    ಭೋಪಾಲ್: ವ್ಯಕ್ತಿಯೊಬ್ಬ ಬಾಲಕಿಗೆ ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಬಾಲಕಿಗೆ ಅತೀವ ರಕ್ತಸ್ರಾವವಾಗಿ ಸಾವನ್ನಪಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ.

    ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಗೆ ಕಾಮೋತ್ತೇಜಕ ಮದ್ದು ನೀಡಿ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದೆ. ಬಾಲಕಿಯು ಅಧಿಕ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ. ಜಿಲ್ಲೆಯಲ್ಲಿ ರಾಜೇಂದ್ರನಗರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

    RAPE CASE

    ಆರೋಪಿ, ವರ್ಷದ ಯಶವಂತ್ ಮರವಿ ಸದ್ಯ ತಲೆಮರೆಸಿಕೊಂಡಿದ್ದಾನೆ. ಆತನ ಸುಳಿವು ನೀಡಿದವರಿಗೆ 30 ಸಾವಿರ ಬಹುಮಾನ ಘೋಷಿಸಲಾಗಿದೆ ಎಂದು ಹೆಚ್ಚುವರಿ ಡಿಜಿ ಸಾಗರ್ ತಿಳಿಸಿದ್ದಾರೆ. ಅಧಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಸಾವಿಗೂ ಮೊದಲು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಇದನ್ನೂ ಓದಿ:  ಪತಿ ಸರಿಯಾಗಿ ಬ್ಲೌಸ್ ಹೊಲಿಯಲಿಲ್ಲವೆಂದು ಪತ್ನಿ ಆತ್ಮಹತ್ಯೆ

    ರಕ್ತಸ್ರಾವದಿಂದ ಸತ್ತಿರುವುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಗಿದೆ. ಆರೋಪಿಯ ಪತ್ತೆ, ಬಂಧಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

  • ಬೇವು ತಲೆಹೊಟ್ಟಿಗೆ ಮದ್ದು

    ಬೇವು ತಲೆಹೊಟ್ಟಿಗೆ ಮದ್ದು

    ಲೆಹೊಟ್ಟಿನ ಸಮಸ್ಯೆ ಹೆಚ್ಚಾಗಿ ಎಲ್ಲರಲ್ಲಿಯೂ ಕಾಣಿಸಿಕೊಳ್ಳುವ ಸಹಜ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಬೇವು ಮದ್ದಾಗಿ ಕಾರ್ಯನಿರ್ವಹಿಸುತ್ತದೆ. ನೀವು ಕೆಮಿಕಲ್ ಅಂಶ ಇರುವ ಶಾಂಪೂ ಬಳಸುವ ಬದಲಾಗಿ ಮನೆಯಲ್ಲಿಯೇ ಸಿಗುವ ಈ ಬೇವನ್ನು ಬಳಸಿ ತಲೆ ಹೊಟ್ಟನ್ನು ನಿವಾರಿಸ ಬಹುದಾಗಿದೆ.

    * ಬೇವಿನ ಎಣ್ಣೆ ಕೂದಲ ಆರೈಕೆಗೆ ಹಾಗೂ ತಲೆಹೊಟ್ಟಿನ ನಿವಾರಣೆಗೆ ಸಹಾಯ ಮಾಡುತ್ತದೆ. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್‍ ಹೆಸರಿನಲ್ಲಿ ವಂಚನೆಗೆ ಯತ್ನ – ಮಹಿಳೆಯ ವಿರುದ್ಧ ಯಜಮಾನ ದೂರು

    * ಪ್ರತಿದಿನ ಬೆಳಗ್ಗೆ ಬೇವಿನ ಎಲೆಗಳನ್ನು ತಿನ್ನಬೇಕು. ಇಲ್ಲವಾದಲ್ಲಿ ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಅದರ ತಿಳಿ ನೀರನ್ನು ಕುಡಿಯಬಹುದು ಅಥವಾ ಬೇವಿನ ಎಲೆಗಳನ್ನು ಜೇನುತುಪ್ಪದೊಂದಿಗೆ ಸೇವಿಸಬಹುದು. ಒಮ್ಮೆ ನೀವು ಇದನ್ನು ಪ್ರಯತ್ನಿಸಿದರೆ ಇದರ ಲಾಭದ ಅರಿವು ನಿಮಗಾಗುತ್ತದೆ.

    * ಬೇವಿನ ಎಲೆಗಳನ್ನು ತೆಗೆದುಕೊಂಡು ರುಬ್ಬಿಕೊಳ್ಳಿ. ಇದಕ್ಕೆ ಒಂದು ಕಪ್ ಮೊಸರು ಸೇರಿಸಿ. ನಂತರ ತಲೆಗೆ ಹಚ್ಚಿಕೊಳ್ಳಿ. 15-20 ನಿಮಿಷ ಬಿಟ್ಟು ಕೂದಲನ್ನು ತೊಳೆದುಕೊಳ್ಳಿ. ಮೊಸರಿನಲ್ಲಿನ ತಂಪಾದ ಮತ್ತು ಬೇವಿನ ಆ್ಯಂಟಿ ಫಂಗಲ್ ಗುಣಲಕ್ಷಣ ತಲೆಹೊಟ್ಟು ವಿರುದ್ಧ ಹೋರಾಡುತ್ತದೆ.

    * ಬೇವಿನ ಎಲೆಗಳನ್ನು ತೆಗೆದುಕೊಂಡು ರುಬ್ಬಿಕೊಳ್ಳಿ. ಇದಕ್ಕೆ ಒಂದು ಚಮಚ ಜೇನುತುಪ್ಪ ಸೇರಿಸಿ. ನಂತರ ಈ ಪೇಸ್ಟನ್ನು ತಲೆಬುರುಡೆಗೆ ಮಾಸ್ಕ್ ಹಾಕಿಕೊಳ್ಳಿ.

    * ಬೇವನ್ನು ನೀವು ಕಂಡೀಶನರ್ ಆಗಿಯೂ ಬಳಸಬಹುದು. ಈ ಬೇವಿನ ಕಂಡೀಶನರ್ ಮಾಡಲು ಕೆಲವು ಬೇವಿನ ಎಲೆಗಳನ್ನು ತೆಗೆದುಕೊಂಡು ಅವುಗಳನ್ನು ಕುದಿಸಿ, ತಣ್ಣಗಾಗಲು ಬಿಡಿ. ನಿಮ್ಮ ಕೂದಲನ್ನು ಶಾಂಪೂ ಮಾಡಿದ ನಂತರ, ಈ ಬೇವಿನ ಮಿಶ್ರಣದಿಂದ ಕೂದಲನ್ನು ತೊಳೆಯಿರಿ.