Tag: ಮದ್ಯ ನಿಷೇಧ

  • `ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ- ಪೊಲೀಸ್ ಆಯುಕ್ತರ ಸ್ಪಷ್ಟನೆ

    `ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ- ಪೊಲೀಸ್ ಆಯುಕ್ತರ ಸ್ಪಷ್ಟನೆ

    ಬೆಂಗಳೂರು: ಹೊಸ ವರ್ಷಾಚರಣೆಗಾಗಿ ನಗರದಲ್ಲಿ ಆಯೋಜನೆ ಮಾಡಲಾಗ್ತಿರೋ `ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ ಅಂತ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪರ್ಮಿಷನ್ ನೀಡದೆ ಇರೋದ್ರಿಂದ ಕಾರ್ಯಕ್ರಮ ಮಾಡುವ ಹಾಗಿಲ್ಲ. ಮನೋರಂಜನೆ ಕಾಯ್ದೆಯಡಿ ಪರ್ಮಿಷನ್ ಪಡೆಯುವುದು ಅಗತ್ಯ. ಈ ದೃಷ್ಟಿಯಿಂದ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಅಂತ ಅವರು ಹೇಳಿದ್ದಾರೆ. ಇದನ್ನೂ ಓದಿ: `ಸನ್ನಿ ನೈಟ್ಸ್’ ವಿರುದ್ಧ ಪೊರಕೆ ಹಿಡಿದ ಬೆಂಗ್ಳೂರು ಮಹಿಳೆಯರು

    ನಮ್ಮ ಪರ್ಮಿಷನ್ ಪಡೆಯದೇ ಟಿಕೆಟ್ ಮಾರಾಟ ಮಾಡಿರೋದು ಸರಿಯಲ್ಲ. ದೊಡ್ಡ ಕಾರ್ಯಕ್ರಮ ಆಗಿರೋದ್ರಿಂದ ಪೊಲೀಸರು ಒದಗಿಸುವ ಅವಕಾಶ ಇಲ್ಲ. ಕೇರಳದಲ್ಲೂ ಸನ್ನಿ ಲಿಯೋನ್ ಬಂದಾಗ ಲಾಠಿ ಚಾರ್ಜ್ ಆಗಿತ್ತು. ಕಾನೂನು ಸುವ್ಯವಸ್ಥೆ ಹಾಳಾಗಿತ್ತು. ಈಗ ಬೆಂಗಳೂರಲ್ಲಿ ಅದು ಆಗೋದು ಇಷ್ಟ ಇಲ್ಲ, ಅವಕಾಶವೂ ಇಲ್ಲ ಅಂತ ತಿಳಿಸಿದ್ದಾರೆ.  ಇದನ್ನೂ ಓದಿ: ಸನ್ನಿ ಲಿಯೋನ್ ಸೀರೆ ಉಟ್ಕೊಂಡು ಬರಲಿ- `ಸನ್ನಿ ನೈಟ್ಸ್’ ಆಯೋಜಕರಿಗೆ ಕರವೇ ಸವಾಲು

    ಇನ್ನು ಹೊಸ ವರ್ಷ ಆಚರಣೆಗೆ ಮದ್ಯ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಇದುವರೆಗೂ ಯಾವುದೇ ಚಿಂತನೆ ಮಾಡಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಬಳಿಕ ಎಲ್ಲಾ ತೀರ್ಮಾನ ಹೇಳಲಾಗುವುದು ಅಂತ ವಿವರಿಸಿದ್ರು.

    ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ರಿವಾಲ್ವರ್‍ಗೆ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಲಿದ್ದಾರೆ ಅಂದ್ರು.

    ಹೊಸ ವರ್ಷಾಚರಣೆಯ ಹಿಂದಿನ ದಿನ ಸನ್ನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದು, ಕನ್ನಡ ಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಸನ್ನಿ ಲಿಯೋನ್ ಫೋಟೊಗೆ ಬೆಂಕಿ ಇಟ್ಟು ಬೆಂಗಳೂರಿಗೆ ಸನ್ನಿ ಬರದಂತೆ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    https://www.youtube.com/watch?v=hw9rGJ7u0KA

    https://www.youtube.com/watch?v=05Jkbnw4rXE

  • ಕಲಬುರಗಿಯ ಈ ಗ್ರಾಮದಲ್ಲಿ ಮದ್ಯ, ಜೂಜಾಟ ಸಂಪೂರ್ಣ ಬಂದ್

    ಕಲಬುರಗಿಯ ಈ ಗ್ರಾಮದಲ್ಲಿ ಮದ್ಯ, ಜೂಜಾಟ ಸಂಪೂರ್ಣ ಬಂದ್

    ಕಲಬುರಗಿ: ಮದ್ಯ ನಿಷೇಧದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಭಾರಿ ಚರ್ಚೆ ಆಯ್ತು. ಆದ್ರೆ ಸಂಪೂರ್ಣ ನಿಷೇಧ ಅಸಾಧ್ಯ ಅಂತ ಸಿಎಂ ಸಿದ್ದರಾಮಯ್ಯ ಘೋಷಿಸಿದ್ರು. ಕಲಬುರಗಿಯ ಚಿಂಚೋಳಿ ತಾಲೂಕಿನ ನೀಮಾಹೊಸಳ್ಳಿ ಗ್ರಾಮದಲ್ಲಿ ನೂರಾರು ವರ್ಷಗಳ ಹಿಂದೆಯೇ ಮದ್ಯ ಬ್ಯಾನ್ ಆಗಿದೆ.

    ಈ ಗ್ರಾಮದಲ್ಲಿ 2 ಸಾವಿರ ಜನಸಂಖ್ಯೆಯಿದ್ದು, ಯಾರೂ ದುಶ್ಚಟಕ್ಕೆ ದಾಸರಾಗಿಲ್ಲ. ನೂರಾರು ವರ್ಷಗಳಿಂದಲೂ ಈ ನಿಯಮವನ್ನ ಗ್ರಾಮಸ್ಥರು ಪಾಲಿಸಿಕೊಂಡು ಬರುತ್ತಿದ್ದಾರೆ. ಮದ್ಯದ ಜೊತೆಗೆ ಎಲ್ಲಾ ರೀತಿಯ ಜೂಜಾಟಕ್ಕೂ ಇಲ್ಲಿ ಬ್ರೇಕ್ ಹಾಕಲಾಗಿದೆ.

    ಮಂದಿರ, ಮಸೀದಿ ಮೇಲೆ ಭಾರೀ ನಂಬಿಕೆ ಹೊಂದಿರೋ ಗ್ರಾಮಸ್ಥರು ಮದ್ಯ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ಅಂದಹಾಗೆ ಕೆಲ ದುಷ್ಟ ಶಕ್ತಿಗಳು ಗ್ರಾಮದ ಹೊರವಲಯದಲ್ಲಿ ಸಾರಾಯಿ ಅಂಗಡಿ ಓಪನ್ ಮಾಡಿದ್ರಂತೆ. ಈ ವೇಳೆ, ಇಡೀ ಗ್ರಾಮಸ್ಥರು ಒಗ್ಗೂಡಿ, ತೆರವು ಮಾಡಿಸಿದ್ದಾರೆ.

    ನೀಮಾ ಹೊಸಳ್ಳಿಯನ್ನ ಕಂಡ ಚಿಂಚೋಳಿ ತಾಲೂಕಿನ ಇತರೆ ಹಳ್ಳಿಗಳ ಜನ ಇದನ್ನ ಅನುಸರಿಸಲು ಮುಂದಾಗಿದ್ದಾರೆ. ಒಟ್ಟಿನಲ್ಲಿ, ಮದ್ಯವನ್ನ ನಿಷೇಧ ಮಾಡೋಕೆ ಆಗಲ್ಲ ಅಂತಿರೋ ಸರ್ಕಾರಕ್ಕೆ ಬಿಸಿ ಮುಟ್ಟಿಸುವಂತೆ ಈ ಗ್ರಾಮಸ್ಥರ ನಿರ್ಧಾರ ಇದೆ.

    https://www.youtube.com/watch?v=S_gpuS7h1AI

  • ಮದ್ಯ ಮಾರಾಟದ ಹಣದಿಂದ ಸರ್ಕಾರ ಶಾಲೆಗಳನ್ನ ನಡೆಸುತ್ತಿದೆ: ಮೇಧಾ ಪಾಟ್ಕರ್

    ಮದ್ಯ ಮಾರಾಟದ ಹಣದಿಂದ ಸರ್ಕಾರ ಶಾಲೆಗಳನ್ನ ನಡೆಸುತ್ತಿದೆ: ಮೇಧಾ ಪಾಟ್ಕರ್

    ರಾಯಚೂರು: ಮದ್ಯ ಮಾರಾಟದ ಹಣದಿಂದ ಸರ್ಕಾರಗಳು ಶಾಲೆಗಳನ್ನ ನಡೆಸುತ್ತಿರುವುದು ನಮ್ಮ ದುರಂತ ಅಂತ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಬೇಸರ ವ್ಯಕ್ತಪಡಿಸಿದ್ದಾರೆ.

    ರಾಯಚೂರಿನ ರಾಜೆಂದ್ರ ಗಂಜ್ ನಲ್ಲಿ ಆಯೋಜಿಸಿರುವ ಮದ್ಯ ನಿಷೇಧ ಆಂದೋಲನ ರಾಜ್ಯ ಮಟ್ಟದ ಸಮಾವೇಶಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಮಧ್ಯ ಮಾರಾಟದಿಂದ ರಾಜ್ಯ ಸರ್ಕಾರ 16 ಸಾವಿರ ಕೋಟಿಗೂ ಹೆಚ್ಚು ಆದಾಯ ಪಡೆಯುತ್ತಿದೆ. ಈ ಮದ್ಯದ ಹಣದಿಂದ ಶಾಲೆ ನಡೆಸುವುದು ದುರ್ದೈವದ ಸಂಗತಿ ಎಂದು ಹೇಳಿದರು.

    ವಿವಿಧ ರಾಜ್ಯಗಳಲ್ಲಿ ಮದ್ಯ ನಿಷೇಧದ ಚಿಂತನೆ ನಡೆದಿದೆ, ನಮ್ಮ ರಾಜ್ಯದಲ್ಲಿಯೂ ಮದ್ಯ ನಿಷೇಧಿಸಲು ಸಿಎಂ ಸಿದ್ದರಾಮಯ್ಯ ಕೂಡ ಚಿಂತನೆ ನಡೆಸಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ ಪ್ರಾರಂಭಿಸುತ್ತೇವೆ ಅಂತ ಮೇಧಾಪಾಟ್ಕರ್ ಎಚ್ಚರಿಸಿದರು.

    ಇದೇ ವೇಳೆ ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮೂವತ್ತು ವರ್ಷಗಳಿಂದ ನಮ್ಮ ಮಠ ಮದ್ಯ ನಿಷೇಧ ಮಾಡುವಂತೆ ಹೋರಾಡುತ್ತಿದೆ. ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿಗೊಳಿಸಬೇಕು. ಟಿಪ್ಪು ಸುಲ್ತಾನನ ಆಡಳಿತದಲ್ಲೇ ಮದ್ಯ ನಿಷೇಧ ಮಾಡಲಾಗಿತ್ತು. ರಾಜ ಪ್ರಭುತ್ವದಲ್ಲೇ ಆದಾಯ ಮುಖ್ಯವಾಗಿರಲಿಲ್ಲ. ಈಗ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಹಿತಕ್ಕಾಗಿ ಮದ್ಯ ನಿಷೇಧ ಜಾರಿಗೊಳಿಸಲೇಬೇಕು. ಎಲ್ಲಾ ರಾಜಕೀಯ ಪಕ್ಷಗಳು ಮದ್ಯ ನಿಷೇಧವನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಬೇಕು ಅಂತ ಶ್ರೀಗಳು ಹೇಳಿದರು.

    ಕಾರ್ಯಕ್ರಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಗಿಡಕ್ಕೆ ನೀರೆರೆದು, ಬೀಯರ್ ಬಾಟಲ್ ಗಳನ್ನ ಹೊಡೆದು ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ ನೀಡಿದರು.