Tag: ಮದ್ರಾಸ್

  • ಜೈಲರ್ ಸಿನಿಮಾ ವಿರುದ್ಧ ಕೋರ್ಟಿಗೆ ಹೋದ ಎನ್.ಪಿ.ಪಿ ಮುಖಂಡ ರವಿ

    ಜೈಲರ್ ಸಿನಿಮಾ ವಿರುದ್ಧ ಕೋರ್ಟಿಗೆ ಹೋದ ಎನ್.ಪಿ.ಪಿ ಮುಖಂಡ ರವಿ

    ಜನಿಕಾಂತ್ ನಟನೆಯ ಜೈಲರ್ (Jailer) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡುತ್ತಿದೆ. ಸಿನಿಮಾ ರಿಲೀಸ್ ದಿನದಿಂದಲೂ ಈವರೆಗೂ ಪ್ರೇಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಒಂದು ಕಡೆ ಚಿತ್ರತಂಡ ಗೆಲುವನ್ನು ಸಂಭ‍್ರಮಿಸುತ್ತಿದ್ದರೆ ಮತ್ತೊಂದು ಕಡೆ ಕೋರ್ಟ್ ಕಾರಣದಿಂದಾಗಿ ಆತಂಕವನ್ನೂ ಪಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸಾಕಷ್ಟು ಹಿಂಸಾತ್ಮಕ ದೃಶ್ಯಗಳು ಇವೆ ಎಂದು ಎನ್.ಪಿ.ಪಿ ಮುಖಂಡ ರವಿ (Ravi) ಮದ್ರಾಸ್ (Madras) ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.

    ಜೈಲರ್ ಸಿನಿಮಾದಲ್ಲಿ ಸಾಕಷ್ಟು ಹಿಂಸಾತ್ಮಕ ದೃಶ್ಯಗಳಿವೆ. ಅವುಗಳು ಸಮಾಜದ ಮೇಲೆ ಭಾರೀ ಪರಿಣಾಮ ಬೀರುವಂತವುಗಳು. ಆದರೂ, ಚಿತ್ರಕ್ಕೆ ಯು/ಎ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಅದು ಹೇಗೆ ಯು/ಎ ಪ್ರಮಾಣ ಪತ್ರ ನೀಡಿತು ಎಂದು ಅರ್ಥವಾಗುತ್ತಿಲ್ಲ. ಈ ಸಿನಿಮಾದ ಪ್ರದರ್ಶನವನ್ನು ಕೂಡಲೇ ನಿಲ್ಲಿಸಿ, ಸೆನ್ಸಾರ್ ಮಂಡಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ರವಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ಔಟ್- ಮಾಸ್ ಆಗಿ ಎಂಟ್ರಿ ಕೊಟ್ಟ ರವಿತೇಜ

    ಜೈಲರ್ ಸಿನಿಮಾ ಯಶಸ್ಸಿನ ಬೆನ್ನಲ್ಲೇ ಸೂಪರ್ ಸ್ಟಾರ್ ರಜನಿಕಾಂತ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಸಿನಿಮಾ ರಿಲೀಸ್ ವೇಳೆ ಅವರು ಹಿಮಾಲಯಕ್ಕೆ ಹಾರಿದ್ದರು. ಅಲ್ಲಿ ಧ್ಯಾನಕ್ಕೆ ಶರಣಾಗಿದ್ದರು. ಅಲ್ಲಿಂದ ಹೊರಟು ಇದೀಗ ಉತ್ತರ ಪ್ರದೇಶದ ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಅಯೋಧ್ಯಗೆ ತೆರಳಿ ಶ್ರೀ ರಾಮನ ದರ್ಶನ ಪಡೆದಿದ್ದಾರೆ. ನಿರ್ಮಾಣ ಹಂತದಲ್ಲಿರುವ ದೇವಸ್ಥಾನವನ್ನೂ ಅವರು ವೀಕ್ಷಣೆ ಮಾಡಿದರು. ಡಲಿದ್ದಾರೆ.

    ಮೊನ್ನೆಯಷ್ಟೇ ರಜನಿಕಾಂತ್ (Rajanikanth) ಅವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಭೇಟಿಯಾಗಿದ್ದರು. ನಿನ್ನೆ  (ಆಗಸ್ಟ್ 19) ಜೈಲರ್ (Jailer) ಚಿತ್ರವನ್ನ ಅವರೊಂದಿಗೆ ವೀಕ್ಷಿಸಿದ್ದರು. ಲಕ್ನೋದಲ್ಲಿ ಸಿಎಂ ಮತ್ತು ಅಭಿಮಾನಿಗಳ ಜೊತೆಗೆ ‘ಜೈಲರ್’ ಸಿನಿಮಾ ವೀಕ್ಷಣೆ ಮಾಡಿದ್ದಾರೆ.

     

    ತಲೈವಾ-ಶಿವಣ್ಣ ಕಾಂಬೋ ‘ಜೈಲರ್’ (Jailer) ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ತಲೈವಾ ಸಿನಿಮಾವನ್ನ ಒಪ್ಪಿ ಜನ ಮೆಚ್ಚಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರಕ್ಕಾಗಿ ಲಕ್ನೋದಲ್ಲಿ ತಲೈವಾ ಬೀಡು ಬಿಟ್ಟಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜೊತೆ ನಿನ್ನೆ ಸಂಜೆ 7ಕ್ಕೆ ‘ಜೈಲರ್’ ಸಿನಿಮಾ ನೋಡೋದು ಫಿಕ್ಸ್ ಆಗಿತ್ತು. ಅಷ್ಟೇ ಅಲ್ಲದೇ, ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಅವರನ್ನು ಕೂಡ ತಲೈವಾ ಭೇಟಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನಲ್ಲ- PhD ವಿದ್ಯಾರ್ಥಿ ಆತ್ಮಹತ್ಯೆ

    ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನಲ್ಲ- PhD ವಿದ್ಯಾರ್ಥಿ ಆತ್ಮಹತ್ಯೆ

    ನವದೆಹಲಿ: ಮದ್ರಾಸ್‍ (Madras) ನಲ್ಲಿರುವ ಇಂಡಿಯನ್ ಇನ್ಸ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪಿಹೆಚ್‍ಡಿ (PhD) ಓದುತ್ತಿರುವ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದು, ಇದು ಈ ವರ್ಷದಲ್ಲಿ ನಡೆದ ಮೂರನೇ ಘಟನೆಯಾಗಿದೆ.

    ಮೃತನನ್ನು ಸಚಿನ್ (32) ಎಂದು ಗುರುತಿಸಲಾಗಿದ್ದು, ಪಶ್ಚಿಮ ಬಂಗಾಳ ಮೂಲದವನಾಗಿದ್ದಾನೆ. ಈತ ಮದ್ರಾಸ್ ಐಐಟಿನಲ್ಲಿ ಪಿಹೆಚ್‍ಡಿ ವ್ಯಾಸಂಗ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಆತ್ಮಹತ್ಯೆಗೂ ಕೆಲ ಗಂಟೆಗಳ ಹಿಂದೆ ವಿದ್ಯಾರ್ಥಿ ವಾಟ್ಸಪ್ ಸ್ಟೇಟಸ್ (Whatsapp Status) ಹಾಕಿದ್ದಾನೆ. ಅದರಲ್ಲಿ ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನು ಅಲ್ಲ ಎಂದು ಬರೆದುಕೊಂಡಿದ್ದಾನೆ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ದುರ್ಮರಣ

    ವಿದ್ಯಾರ್ಥಿ ಈ ರೀತಿ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದನ್ನು ನೋಡಿದ ಓರ್ವ ಗೆಳೆಯ, ಕೂಡಲೇ ಆತನ ಮನೆಗೆ ಓಡಿದ್ದಾನೆ. ಆದರೆ ಅದಾಗಲೇ ವಿದ್ಯಾರ್ಥಿ ಕುಣಿಕೆಗೆ ಕೊರಳೊಡ್ಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆತ ಅಂಬುಲೆನ್ಸ್ ಗೆ ಕರೆ ಮಾಡಿದ್ದು, ಆದರೆ ಅದಾಗಲೇ ಸಚಿನ್ ಮೃತಪಟ್ಟಿದ್ದನು.

    ಸಚಿನ್ ಮೃತದೇಹವನ್ನು ರೊಯಪೇಟೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವರ್ಷದಲ್ಲಿ ಇದು ಮೂರನೇ ಪ್ರಕರಣವಾಗಿದ್ದು, 2018ರಿಂದ ಇದುವರೆಗೆ ಒಟ್ಟು 11 ಮಂದಿ ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ.

  • ದೊರೈ-ಭಗವಾನ್ ಜೋಡಿ ಬೆಸೆದದ್ದು ಹೇಗೆ?: ಎಂಟಾಣೆ ಕಥೆ ಹೇಳಿದ ಭಗವಾನ್

    ದೊರೈ-ಭಗವಾನ್ ಜೋಡಿ ಬೆಸೆದದ್ದು ಹೇಗೆ?: ಎಂಟಾಣೆ ಕಥೆ ಹೇಳಿದ ಭಗವಾನ್

    ನ್ನಡ ಸಿನಿಮಾ ರಂಗದ ಹೆಸರಾಂತ ಜೋಡಿಗಳಲ್ಲಿ ಪ್ರಮುಖವಾಗಿ ಕೇಳಿ ಬರುವ ಹೆಸರು ದೊರೈ ಭಗವಾನ್ (Bhagavan) ಅವರದ್ದು. ಕನ್ನಡ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಸಿನಿಮಾಗಳನ್ನು ಕೊಟ್ಟ ಹೆಗ್ಗಳಿಕೆ ಈ ಜೋಡಿಯದ್ದು. ಕನ್ನಡದಲ್ಲಿ ಬಂದ ಮೊದಲ ಬಾಂಡ್ (Bond) ಸಿನಿಮಾಗೆ ಇವರೇ ನಿರ್ದೇಶಕರು. ಈ ಜೋಡಿಯು ಒಂದಾಗಿದ್ದು ಕೇವಲ ಎಂಟಾಣೆ ಮೂಲಕ ಎನ್ನುವುದು ಅಚ್ಚರಿಯ ಸಂಗತಿ. ಆ ಮಾಹಿತಿಯನ್ನು ಸ್ವತಃ ಭಗವಾನ್ ಅವರೇ ಹಂಚಿಕೊಂಡಿದ್ದರು.

    ಅದು ಮದ್ರಾಸಿನ ದಿನಗಳು. ಆಗ ಕನ್ನಡ ಚಿತ್ರರಂಗವೂ ಮುದ್ರಾಸಿನಲ್ಲೇ ನೆಲೆಯೂರಿತ್ತು. ಬಹುತೇಕ ಕನ್ನಡ ಚಿತ್ರಗಳು ಅಲ್ಲಿಯೇ ತಯಾರಾಗುತ್ತಿದ್ದವು. ಹಾಗಾಗಿ  ದೊರೈ ಮತ್ತು ಭಗವಾನ್ ಮೈಸೂರಿನವರಾದರೂ ಮದ್ರಾಸಿನಲ್ಲೇ ಬೀಡು ಬಿಟ್ಟಿದ್ದರು. ಮೊದ ಮೊದಲು ಭಗವಾನ್ ಸಹಾಯಕ ನಿರ್ದೇಶಕರಾಗಿ ಕೆಲಸಕ್ಕೆ ಸೇರಿಕೊಂಡಿದ್ದರೆ, ಭಗವಾನ್ ಕ್ಯಾಮೆರಾಮನ್ ಆಗಿದ್ದರು. ಇಬ್ಬರ ಆಸಕ್ತಿಗಳೇ ಅವರನ್ನು ಒಂದಾಗುವಂತೆ ಮಾಡಿದ್ದವು. ಇದನ್ನೂ ಓದಿ: ಖ್ಯಾತ ತಮಿಳು ಹಾಸ್ಯ ನಟ ಮಯಿಲ್‌ಸಾಮಿ ಹಠಾತ್ ನಿಧನ

    ಆಗ ಉದಯಕುಮಾರ್ ನಟನೆಯ ‘ವೀರಪುತ್ರ’ ಸಿನಿಮಾದ ಶೂಟಿಂಗ್ ಸ್ಥಗಿಗೊಂಡಿತ್ತು. ಈ ಸಿನಿಮಾದಲ್ಲಿ ಅಸೋಸಿಯೇಟ್ ಆಗಿ ಕೆಲಸ ಮಾಡುತ್ತಿದ್ದ ಭಗವಾನ್ ಬಳಿ ಊಟಕ್ಕೂ ಹಣವಿರಲಿಲ್ಲ. ಕನ್ನಡದ ಬಹುತೇಕರು ಬರುತ್ತಿದ್ದ ಮದ್ರಾಸಿನ ಹೋಟೆಲ್ ಮುಂದೆ ನಿಂತು, ಅಲ್ಲಿಗೆ ಬರುವ ಕನ್ನಡಿಗರ ಬಳಿ ಸಾಲ ಕೇಳಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು ಭಗವಾನ್. ಇಂತಹ ಸಂದರ್ಭದಲ್ಲೇ ಭಗವಾನ್ ಅವರಿಗೆ ದೊರೈ ಸಿಕ್ಕಿದ್ದು.

    ಎಂದಿನಂತೆ ಹೋಟೆಲ್ ಮುಂದೆ ನಿಂತಿದ್ದ ಭಗವಾನ್, ಯಾರಾದರೂ ಬಂದು ತಮ್ಮ ಹಸಿವು ನೀಗಿಸಬಹುದು ಎಂದುಕೊಂಡು ಕಾಯುತ್ತಿದ್ದರು. ಆಗ ಬಂದವರೇ ದೊರೈ. ಅವರ ಬಳಿ ಒಂದು ರೂಪಾಯಿಯನ್ನು ಕೇಳಿದ್ದರು ಭಗವಾನ್. ತುಂಬಾ ಹಸಿದಿದ್ದ ಭಗವಾನ್ ಕಂಡು ‘ನನ್ನ ಬಳಿ ಒಂದು ರೂಪಾಯಿ ಇಲ್ಲ, ಎಂಟಾಣೆಯಿದೆ ತಗೆದುಕೊ’ ಎಂದು ಎಂಟಾಣೆ ಕೊಟ್ಟು ಹೊರಟು ಬಿಟ್ಟರು ದೊರೈ.

    ಮರುದಿನ ಭಗವಾನ್ ತಂಗಿದ್ದ ರೂಮ್ ಗೆ ಬಂದ ನಿರ್ದೇಶಕ ಜಿ.ವಿ. ಅಯ್ಯರ್ ‘ಊಟಕ್ಕೂ ಗತಿ ಇಲ್ಲದೇ ಇದ್ದೀಯಂತೆ? ಬಾ ನನ್ನ ಜೊತೆ’ ಎಂದು ಅವರ ಮನೆಗೆ ಕರೆದುಕೊಂಡು ಹೋಗಿದ್ದರು. ಅಯ್ಯರ್. ಮುದ್ರಾಸಿನಲ್ಲಿ ಮೊದಲು ಬಾರಿಗೆ ನೆಲೆ ಕಲ್ಪಿಸಿದ್ದು ಅಯ್ಯರ್. ಆದರೆ, ಅಯ್ಯರ್ ಗೆ ಈ ವಿಷಯ ತಿಳಿಸಿದ್ದು ದೊರೈ. ಅಲ್ಲದೇ ಅಯ್ಯರ್ ಕಡೆ ಐವತ್ತು ಪೈಸೆ ಸಾಲ ಪಡೆದುಕೊಂಡು ಊಟಕ್ಕೆ ಬಂದಿದ್ದ ದೊರೈ, ತಾನು ಊಟ ಮಾಡದೇ ಆ ಹಣವನ್ನು ಭಗವಾನ್ ಗೆ ನೀಡಿದ್ದರು. ಅಲ್ಲಿಂದ ಅವರಿಬ್ಬರ ಸ್ನೇಹ ಇನ್ನಷ್ಟು ಗಟ್ಟಿಯಾಯಿತು.

    ಜಗಜ್ಯೋತಿ ಬಸವೇಶ್ವರ ಸಿನಿಮಾದಲ್ಲಿ ದೊರೈ ಕ್ಯಾಮೆರಾಮನ್ ಆಗಿ ಕೆಲಸ ಮಾಡಿದರೆ, ಭಗವಾನ್ ಅಸೋಸಿಯೇಟ್ ನಿರ್ದೇಶಕ. ಅಲ್ಲಿಂದ ಶುರುವಾದ ಅವರ ಪಯಣ ಮುಂದೆ ದೊಡ್ಡ ದೊಡ್ಡ ಸಿನಿಮಾಗಳನ್ನು ಒಟ್ಟಿಗೆ ನಿರ್ದೇಶನ ಮಾಡುವಂತೆ ಆಯಿತು. ಮುಂದೆ ಮಂತ್ರಾಲಯ ಮಹಾತ್ಮೆ ಸಿನಿಮಾಗೆ ದೊರೈ ಕ್ಯಾಮೆರಾಮನ್, ಭಗವಾನ್ ನಿರ್ದೇಶಕರಾದರು. ಈ ಸಿನಿಮಾಗೆ ಹಣ ಹೂಡಿದ್ದು ಭಗವಾನ್. ಅದಕ್ಕೆ ಧೈರ್ಯ ತುಂಬಿದ್ದು ಇದೇ ದೊರೈ. ಡಾ.ರಾಜ ಕುಮಾರ್ ನಟನೆಯ ಜೇಡರಬಲೆ ಸಿನಿಮಾಗೆ ಇಬ್ಬರೂ ನಿರ್ಮಾಪಕರು. ಹೀಗೆ ಸಾಗಿತ್ತು ಇವರ ಸ್ನೇಹದ ಪಯಣ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    ಚೆನ್ನೈ: ಭಾರತದಲ್ಲಿ ಮೊದಲ ಬಾರಿಗೆ 5ಜಿ ಆಡಿಯೋ ಹಾಗೂ ವೀಡಿಯೋ ಕರೆಗಳನ್ನು ಗುರುವಾರ ಚೆನ್ನೈನಲ್ಲಿ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಯಶಸ್ವೀ ಪರೀಕ್ಷೆ ನಡೆಸಿದರು.

    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಮದ್ರಾಸ್‌ನಲ್ಲಿ ಮೊದಲ ಬಾರಿಗೆ 5ಜಿ ಕರೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಅಶ್ವಿನಿ ವೈಷ್ಣವ್, ಇಡೀ ನೆಟ್‌ವರ್ಕ್ ಅನ್ನು ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಹಾಗೂ ಅಭಿವೃದ್ಧಿಪಡಿಸಲಾಗಿದೆ ಎಂದರು.

    5G

    ಇದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಸಾಕ್ಷಾತ್ಕಾರವಾಗಿದೆ. ಭಾರತದಲ್ಲೇ ತಯಾರಾಗುವ 4ಜಿ ಹಾಗೂ 5ಜಿ ತಂತ್ರಜ್ಞಾನದ ಸ್ಟಾಕ್ ಅನ್ನು ಇತರ ದೇಶಗಳಿಗೂ ವಿತರಿಸುವುದು ಅವರ ಗುರಿಯಾಗಿದೆ. ಈ ಸಂಪೂರ್ಣ ತಂತ್ರಜ್ಞಾನದ ಯಶಸ್ಸಿನೊಂದಿಗೆ ನಾವು ಜಗತ್ತನ್ನೇ ಗೆಲ್ಲಬೇಕು ಎಂದು ವೈಷ್ಣವ್ ಹೇಳಿದರು. ಇದನ್ನೂ ಓದಿ: 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

    ದೂರಸಂಪರ್ಕ ಇಲಾಖೆ 5ಜಿ ನೆಟ್‌ವರ್ಕ್ ಹರಾಜಿನ ಬಗ್ಗೆ ಮುಂದಿನ ವಾರದಲ್ಲಿ ಅಂತಿಮ ಅನುಮೋದನೆಗೆ ಕೇಂದ್ರ ಸಚಿವ ಸಂಪುಟಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ. ಇದೇ ವರ್ಷದ ಕೊನೆಯಲ್ಲಿ ಗ್ರಾಹಕರ ಕೈಗೆ 5ಜಿ ನೆಟ್‌ವರ್ಕ್ ಲಭಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಯಾರಿಗೂ ತಿಳಿಯದೇ ವಾಟ್ಸಪ್ ಗ್ರೂಪ್‍ನಿಂದ ನಿರ್ಗಮಿಸುವುದು ಹೇಗೆ?

    ಈ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಐಐಟಿ ಮದ್ರಾಸ್‌ನಲ್ಲಿ ದೇಶದ ಮೊದಲ 5ಜಿ ಟೆಸ್ಟ್‌ಬೆಡ್ ಅನ್ನು ಉದ್ಘಾಟಿಸಿದ್ದರು. ಇದೀಗ ಅದೇ ಕೇಂದ್ರದಲ್ಲಿ ಸಂಪರ್ಕ ಸಚಿವ ದೇಶದಲ್ಲಿ ಮೊದಲ ಬಾರಿಗೆ 5ಜಿ ಆಡಿಯೋ ಹಾಗೂ ವೀಡಿಯೋ ಕರೆಗಳನ್ನು ಪರೀಕ್ಷಿಸಿದ್ದಾರೆ.

  • ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್

    ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್

    ಚೆನ್ನೈ: ತಮಿಳುನಾಡಿನ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿ ವಂದೇ ಮಾತರಂ ಹಾಡುವುದು ಕಡ್ಡಾಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

    ಪ್ರಕರಣವೊಂದರ ಇತ್ಯರ್ಥದ ವೇಳೆ ಮದ್ರಾಸ್ ಹೈಕೋರ್ಟ್ ಈ ಆದೇಶ ನೀಡಿದೆ. ವೀರಮಣಿ ಎಂಬವರು ರಾಜ್ಯ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ ವಂದೇ ಮಾತರಂ ಯಾವ ಭಾಷೆಯಲ್ಲಿದೆ ಎಂಬ ಪ್ರಶ್ನೆಗೆ ಬೆಂಗಾಲಿ ಎಂದು ಉತ್ತರಿಸಿದ್ದರು. ಆದ್ರೆ ಆನ್ಸರ್ ಕೀನಲ್ಲಿ ಸಂಸ್ಕೃತ ಎಂಬ ಉತ್ತರ ನೀಡಲಾಗಿತ್ತು. ಇದನ್ನ ಪ್ರಶ್ನಿಸಿ ವೀರಮಣಿ ಕೋರ್ಟ್ ಮೆಟ್ಟಿಲೇರಿದ್ದರು. ವಂದೇ ಮಾತರಂ ಸಂಸ್ಕೃತದಲ್ಲಿದೆಯೋ ಬೆಂಗಾಲಿ ಭಾಷೆಯಲ್ಲಿದೆಯೋ ಎಂಬ ಬಗ್ಗೆ ಸ್ಪಷ್ಟೀಕರಣ ನೀಡಬೇಕೆಂದು ಕೋರಿದ್ದರು.

    ಜೂನ್ 13ರಂದು ಅಡ್ವೋಕೇಟ್ ಜನರಲ್ ಆರ್ ಮುತ್ತುಕುಮಾರಸ್ವಾಮಿ ಅವರು ಇದಕ್ಕೆ ಸ್ಪಷ್ಟೀಕರಣ ನೀಡಿ, ವಂದೇ ಮಾತರಂನ ಮೂಲ ಭಾಷೆ ಸಂಸ್ಕೃತ ಆದ್ರೆ ಬೆಂಗಲಿಯಲ್ಲಿ ಬರೆಯಲಾಗಿದೆ ಎಂದು ಹೇಳಿದ್ದರು.

     

    ಈ ಹಿನ್ನೆಲೆಯಲ್ಲಿ ವೀರಮಣಿ ಅವರು ಪರೀಕ್ಷೆಯಲ್ಲಿ ಕಳೆದುಕೊಂಡಿದ್ದ 1 ಅಂಕವನ್ನು ನೀಡಬೇಕೆಂದು ಕೋರ್ಟ್ ನಿರ್ಧರಿಸಿದೆ. ಅಲ್ಲದೆ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿ (ಪ್ರಮುಖವಾಗಿ ಸೋಮವಾರ ಅಥವಾ ಶುಕ್ರವಾರ) ವಂದೇ ಮಾತರಂ ಕಡ್ಡಾಯವಾಗಿ ಹಾಡಬೇಕು. ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳು ಹಾಗೂ ಫ್ಯಾಕ್ಟರಿಗಳಲ್ಲಿ ತಿಂಗಳಿಗೆ ಕನಿಷ್ಠ ಒಂದು ಬಾರಿ ವಂದೇ ಮಾತರಂ ಹಾಡುವುದು ಕಡ್ಡಾಯ ಎಂದು ಕೋರ್ಟ್ ಹೇಳಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಲಭ್ಯವಿರುವಂತೆ ಮಾಡಲು ತಮಿಳು ಹಾಗೂ ಇಂಗ್ಲಿಷ್‍ನಲ್ಲಿ ವಂದೇ ಮಾತರಂನ ಭಾಷಾಂತರಿತ ಆವೃತ್ತಿಯನ್ನು ಅಪ್‍ಲೋಡ್ ಮಾಡಿ ಹಂಚಿಕೊಳ್ಳಬೇಕು ಎಂದು ಸಾರ್ವಜನಿಕ ಮಾಹಿತಿ ನಿರ್ದೇಶಕರಿಗೆ ಸೂಚಿಸಲಾಗಿದೆ.

    ಒಂದು ವೇಳೆ ಯಾವುದಾದ್ರೂ ಸಂಸ್ಥೆಗೆ ಅಥವಾ ವ್ಯಕ್ತಿಗೆ ವಂದೇ ಮಾತರಂ ಹಾಡುವುದಕ್ಕೆ ಕಷ್ಟವಾದ್ರೆ ಅವನು/ಅವಳಿಗೆ ಹಾಡಲು ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶದಲ್ಲಿ ಹೇಳಿದೆ. ಇಂದಿನ ಯುವಕರೇ ದೇಶದ ನಾಳಿನ ಭವಿಷ್ಯ. ಈ ಆದೇಶವನ್ನು ಸಕಾರಾತ್ಮವಾಗಿ ಸ್ವೀಕರಿಸಿ ದೇಶದ ಪ್ರಜೆಗಳು ಇದನ್ನು ಪಾಲಿಸುತ್ತಾರೆಂದು ಈ ಕೋರ್ಟ್ ನಂಬಿರುತ್ತದೆ ಎಂದು ಆದೇಶದ ಕೊನೆಯಲ್ಲಿ ತಿಳಿಸಲಾಗಿದೆ.

  • ದೇಶದ ಮೊದಲ ಮಂಗಳಮುಖಿ ಎಸ್‍ಐ ಪ್ರೀತಿಕಾ

    ದೇಶದ ಮೊದಲ ಮಂಗಳಮುಖಿ ಎಸ್‍ಐ ಪ್ರೀತಿಕಾ

    ಚೆನ್ನೈ: ಉದ್ಯೋಗಕ್ಕಾಗಿ ಕೋರ್ಟ್ ಮೊರೆ ಹೋಗಿದ್ದ ಮಂಗಳಮುಖಿ ಪ್ರೀತಿಕಾ ಯಾಶಿನಿ ಈಗ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕವಾಗುವ ಮೂಲಕ ದೇಶದ ಮೊದಲ ಮಂಗಳಮುಖಿ ಎಂಬ ಹೆಗ್ಗಳಿಕೆಗೆ ಪ್ರೀತಿಕಾ ಪಾತ್ರರಾಗಿದ್ದಾರೆ.

    ಚೆನ್ನೈ ಸಮೀಪದ ವಂಡಲೂರಿನಲ್ಲಿ 1028 ಮಂದಿ ಅಭ್ಯರ್ಥಿಗಳ ಜೊತೆ ಪ್ರೀತಿಕಾ 1 ವರ್ಷ ತರಬೇತಿಯನ್ನು ಪಡೆದು ಈಗ ಉದ್ಯೋಗಕ್ಕೆ ಸೇರಿದ್ದಾರೆ. ಮೊದಲ ದಿನ ನಾನು ಭಾವೋದ್ವೇಗಕ್ಕೆ ಒಳಗಾಗಿದ್ದೆ, ಹಿರಿಯ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳು ಸಹಕಾರ ನೀಡಿದರು ಎಂದು ಪ್ರೀತಿಕಾ ಹೇಳಿದ್ದಾರೆ.

    ಸಬ್ ಇನ್ಸ್ ಪೆಕ್ಟರ್ ಉದ್ಯೋಗ ಕೊನೆಗೂ ಸಿಕ್ಕಿದೆ. ಮುಂದೆ ಯುಪಿಎಸ್‍ಸಿ ಪರೀಕ್ಷೆ ಬರೆದು ಐಪಿಎಸ್ ಆಗಿ ಆಯ್ಕೆಯಾಗಬೇಕೆಂಬ ಕನಸು ಇದೆ ಎಂದು ಪ್ರೀತಿಕಾ ತಿಳಿಸಿದ್ದಾರೆ.

    ಗಂಡು ಮಗುವಾಗಿ ಹುಟ್ಟಿ ಬೆಳೆದ ಪ್ರದೀಪ್ ಕುಮಾರ್ ಕಂಪ್ಯೂಟರ್ ಅಪ್ಲಿಕೇಷನ್ಸ್ ಪದವಿ ಓದಿದ್ದರು. ನಂತರ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮೂಲಕ ಪ್ರೀತಿಕಾ ಆಗಿ ಬದಲಾದರು. ಮಗ ಲಿಂಗಪರಿವರ್ತನೆಯಾಗಿದ್ದನ್ನು ನೋಡಿ ಪೋಷಕರು ಶಾಕ್ ಆಗಿದ್ದರು. ತಂದೆ ತಾಯಿ ಮಗನಾಗಿ ಬದಲಾಗಲು ವಿವಿಧ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ತನ್ನ ಜೀವನವನ್ನು ರೂಪಿಸಿಕೊಳ್ಳಲು ಪ್ರೀತಿಕಾ ತನ್ನ ಹೆತ್ತವರನ್ನೂ ತೊರೆದು ಬಂದಿದ್ದರು. ಮಂಗಳಮುಖಿಯರ ಜೊತೆ ಸೇರಿಕೊಂಡಿದ್ದ ಇವರು ಆರಂಭದಲ್ಲಿ ಮಹಿಳೆಯರ ಹಾಸ್ಟೆಲ್‍ನಲ್ಲಿ ವಾರ್ಡನ್ ಉದ್ಯೋಗ ಮಾಡಿಕೊಂಡಿದ್ದರು.

    ಏನಾಗಿತ್ತು?
    2015ರಲ್ಲಿ ಪ್ರೀತಿಕಾ ಪೊಲೀಸ್ ಹುದ್ದೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೆಣ್ಣು ಅಥವಾ ಗಂಡು ವಿಭಾಗಕ್ಕೆ ಸೇರದೇ ಇರುವ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು. ಅರ್ಜಿ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಪ್ರೀತಿಕಾ ಮದ್ರಾಸ್ ಹೈಕೋರ್ಟ್ ಮೆಟ್ಟಲು ಹತ್ತಿದರು. ಮದ್ರಾಸ್ ಹೈಕೋರ್ಟ್ ಮುಂಗಳಮುಖಿಯರಿಗೆ ಅವಕಾಶ ನೀಡಬೇಕೆಂದು ಹೇಳಿ ತಮಿಳುನಾಡು ಸರ್ಕಾರಕ್ಕೆ ಆದೇಶ ನೀಡಿತ್ತು. ದೈಹಿಕ ಪರೀಕ್ಷೆಯಲ್ಲಿ ನೂರು ಮೀಟರ್ ಓಟವನ್ನು ಪೂರ್ಣಗೊಳಿಸಬೇಕಾಗಿದ್ದ ನಿಗದಿತ ಅವಧಿಗಿಂತಲೂ 1.1 ಸೆಕೆಂಡ್ ಹಿಂದೆ ಇದ್ದ ಕಾರಣ ಅನರ್ಹರಾಗಿದ್ದರು. ಈ ಸಮಯದಲ್ಲೂ ಕೋರ್ಟ್ ಪ್ರೀತಿಕಾ ಪರವಾಗಿ ಆದೇಶ ನೀಡಿತ್ತು.

    ಈ ಆದೇಶದ ಪ್ರಕಾರ 2016 ಫೆ. 15ರಂದು ಸಿಟಿ ಪೊಲೀಸ್ ಕಮಿಷನರ್ ಸ್ಮಿತ್ ಸರನ್ ಪ್ರೀತಿಕಾ ಸೇರಿದಂತೆ 22 ಮಂಗಳಮುಖಿಯರಿಗೆ ಎಸ್ ಐ ಹುದ್ದೆಗೆ ನೇಮಕವಾಗುವಂತೆ ಸೂಚನೆ ನೀಡಿದ್ದರು.