Tag: ಮದ್ರಾಸ್ ಹೈಕೋರ್ಟ್

  • ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ಚೆನೈ: ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಡಿಎಂಕೆ ನಾಯಕರ ವಿರುದ್ಧ ಮದ್ರಾಸ್ ಹೈಕೋರ್ಟ್ (Madras High Court) ಅಸಮಾಧಾನ ವ್ಯಕ್ತಪಡಿಸಿದೆ. ವಾಕ್ ಸ್ವಾತಂತ್ರ್ಯವು (Freedom Of Speech) ಮೂಲಭೂತ ಹಕ್ಕು ಆದರೆ ಅದು ದ್ವೇಷದ ಭಾಷಣವಾಗಿ ಬದಲಾಗಬಾರದು. ವಿಶೇಷವಾಗಿ ಧರ್ಮದ ವಿಷಯಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣವಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

    ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡಿಸಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎನ್ ಶೇಷಸಾಯಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಬಳಿಕ ಸನಾತನ ಧರ್ಮವೂ ಅಸ್ಪೃಶ್ಯತೆ, ಜಾತೀಯತೆಯನ್ನು ಮಾತ್ರ ಉತ್ತೇಜಿಸುತ್ತದೆ ಎನ್ನುವುದು ತಪ್ಪು. ಸಮಾನ ನಾಗರೀಕರ ದೇಶದಲ್ಲಿ ಅಸ್ಪೃಶ್ಯತೆ ಸಹಿಸಲಾಗುವುದಿಲ್ಲ. ಸಂವಿಧಾನದ 17ನೇ ವಿಧಿ ಮೂಲಕ ಅಸ್ಪೃಶ್ಯತೆಯನ್ನು ತೊಡೆದು ಹಾಕಲಾಗಿದೆ. ಹೀಗಾಗಿ ಇದ್ಯಾವುದು ಪ್ರಸುತ್ತದಲ್ಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    ಇಂತಹ ಭಾಷಣದಿಂದ ಯಾರ ಮನಸ್ಸಿಗೂ ಗಾಯವಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಪ್ರತಿಯೊಂದು ಧರ್ಮವೂ ನಂಬಿಕೆಯ ಮೇಲೆ ಸ್ಥಾಪಿತವಾಗಿದೆ. ಭಾಷಣಗಳಿಂದ ನಂಬಿಕೆಗಳಿಗೆ ಘಾಸಿಯಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರು. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿ, ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ದೇಶದೆಲ್ಲೆಡೆ ಈ ಹೇಳಿಕೆಗೆ ಖಂಡನೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ- ತಾತ್ಕಾಲಿಕ ರಿಲೀಫ್ ಕೇಳಿದ್ದ ಅರ್ಜಿ ವಜಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳ ನಿಷೇಧ – ಮಧ್ಯಂತರ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

    ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳ ನಿಷೇಧ – ಮಧ್ಯಂತರ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

    ಚೆನೈ: ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳನ್ನು (Online Gambling) ನಿಷೇಧಿಸಿ ತಮಿಳುನಾಡು ಸರ್ಕಾರ (Tamil Nadu Govt) ಜಾರಿಗೆ ತಂದಿರುವ ಹೊಸ ಕಾನೂನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ (Madras High Court) ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

    ಮುಖ್ಯ ನ್ಯಾಯಮೂರ್ತಿ ಎಸ್‌.ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ.ಡಿ ಆದಿಕೇಶವಲು ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಪರವಾಗಿ ಹಾಜರಿದ್ದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲು ಆರಂಭಿಸಿದರು. ಇದನ್ನೂ ಓದಿ: ಹಂತ ಹಂತವಾಗಿ ಮೀಸಲಾತಿ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ – 25,000 ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

    ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ಮಧ್ಯಂತರ ತಡೆಗೆ ಮಾಡುವ ವಾದ ಮತ್ತು ಅಂತಿಮ ವಿಚಾರಣೆಗೆ ಮಾಡುವ ವಾದ ಒಂದೇಯಾಗಿರುತ್ತದೆ. ಈ ಹಿನ್ನಲೆ ಮಧ್ಯಂತರ ತಡೆ ಬದಲು ನಾವು ಅಂತಿಮ ವಾದಕ್ಕೆ ಪ್ರಕರಣವನ್ನು ಪೋಸ್ಟ್ ಮಾಡುತ್ತಿದ್ದೇವೆ. ಜುಲೈ 13 ರಂದು ಅಂತಿಮ ವಾದವನ್ನು ಆಲಿಸುವುದಾಗಿ ಕೋರ್ಟ್ ಹೇಳಿತು.

    ರಮ್ಮಿ ಮತ್ತು ಪೋಕರ್‌ನಂತಹ ಆಟಗಳು ಕೌಶಲ್ಯದ ಆಟಗಳಲ್ಲ ಮತ್ತು ಅವಕಾಶದ ಆಟಗಳಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ, ಅರ್ಜಿದಾರ ಕಂಪನಿಗಳು ಬಲವಂತದ ಕ್ರಿಮಿನಲ್ ಕ್ರಮದ ಬೆದರಿಕೆಯನ್ನು ಎದುರಿಸುತ್ತಿವೆ ಎಂದು ಇದೇ ವೇಳೆ ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಕರ್ನಾಟಕ, ಮಹಾರಾಷ್ಟ್ರದಂತೆ ಬಿಜೆಪಿ ವಿರೋಧ ಪಕ್ಷಗಳ ಸರ್ಕಾರ ಉರುಳಿಸುತ್ತಿದೆ: ಕಪಿಲ್‌ ಸಿಬಲ್‌ ಆರೋಪ

    ತಮಿಳುನಾಡು ಸರ್ಕಾರವು ಆನ್‌ಲೈನ್ ಗೇಮಿಂಗ್‌ ವ್ಯಸನವು “ಕುಟುಂಬಗಳನ್ನು ನಾಶಪಡಿಸುತ್ತಿದೆ” ಎಂದು ಅಭಿಪ್ರಾಯಪಟ್ಟಿದೆ. ರಾಜ್ಯದ ನಾಗರಿಕರನ್ನು ರಕ್ಷಿಸಲು “ತಮಿಳುನಾಡು ಆನ್‌ಲೈನ್ ಜೂಜಿನ ನಿಷೇಧ ಮತ್ತು ಆನ್‌ಲೈನ್ ಗೇಮ್ಸ್ ಆಕ್ಟ್, 2022 ರ ನಿಯಂತ್ರಣ” ಕಾಯಿದೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್‍ಜಿಗೆ ಬ್ರೇಕ್ ಹಾಕಿದ್ದ ತಾಯಿಯ ಕೊಲೆ – ಅಪ್ರಾಪ್ತ ಆರೋಪಿಗೆ ಜಾಮೀನು

    ಪಬ್‍ಜಿಗೆ ಬ್ರೇಕ್ ಹಾಕಿದ್ದ ತಾಯಿಯ ಕೊಲೆ – ಅಪ್ರಾಪ್ತ ಆರೋಪಿಗೆ ಜಾಮೀನು

    ಲಕ್ನೋ: ತನ್ನ ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿಯನ್ನು ಕೊಂದಿದ್ದ ಅಪ್ರಾಪ್ತ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಇತ್ತೀಚೆಗೆ ಜಾಮೀನು (Bail) ಮಂಜೂರು ಮಾಡಿದೆ.

    ಆರೋಪಿಯು ಅಪ್ರಾಪ್ತನಾಗಿದ್ದು, ಈ ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ ನ್ಯಾಯಮೂರ್ತಿ ಪ್ರಕಾಶ್ ಸಿಂಗ್ ಅವರಿದ್ದ ಏಕ ಸದಸ್ಯ ಪೀಠ ಆರೋಪಿಗೆ ಜಾಮೀನು ನೀಡಿದೆ. ಇದನ್ನೂ ಓದಿ: ಕ್ರಿಶ್ಚಿಯನ್ ಮಿಷನರಿಗಳ ಧರ್ಮ ಪ್ರಚಾರ ಕಾನೂನುಬಾಹಿರವಲ್ಲ – ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

    ಈಗ ಇರುವ ಯಾವ ಸಾಕ್ಷಿಗಳೂ ಸೂಕ್ತವಾಗಿಲ್ಲ. ಪ್ರಕರಣದಲ್ಲಿ ಆರೋಪಿಯ ಅಜ್ಜಿ ದೂರು ದಾಖಲಿಸಿದ್ದು, ಅವರು ಪ್ರತ್ಯಕ್ಷ ಸಾಕ್ಷಿಯಲ್ಲ. ಇನ್ನುಳಿದ ಸಾಕ್ಷಿಗಳು ಪ್ರತ್ಯಕ್ಷ ಸಾಕ್ಷಿಗಳಾಗಿಲ್ಲ. ಕೇವಲ ಆರೋಪಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೆ ಆರೋಪಿಗೆ ಘಟನೆ ನಡೆದಾಗ 16 ವರ್ಷ. ಇದು ಬಾಲ ನ್ಯಾಯ ಮಂಡಳಿಯ ದೋಷಾರೋಪ ಪಟ್ಟಿಯಲ್ಲಿಯೂ ಸ್ಪಷ್ಟವಾಗಿದೆ. ಇದರಿಂದಾಗಿ ಆತನನ್ನು ಅಪ್ರಾಪ್ತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.

    ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಆತನ ಮೇಲೆ ಕೊಲೆ ಆರೋಪ ಹೊರಿಸಿ ಆತನನ್ನು ಬಂಧಿಸಲಾಗಿತ್ತು. ಆರೋಪಿ ಜಾಮೀನಿಗಾಗಿ ಜಿಲ್ಲಾ ನ್ಯಾಯಲಯದ ಮೊರೆ ಹೋಗಿದ್ದ. ಆದರೆ ಜಿಲ್ಲಾ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು. ಆರೋಪಿ, ಲಕ್ನೋದ (Lucknow) ಪೋಕ್ಸೊ ನ್ಯಾಯಾಲಯದ (POCSO Court) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (Additional District & Sessions Court) ತೀರ್ಪಿನ ವಿರುದ್ಧ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದ.

    ಏನಾಗಿತ್ತು?
    ಜೂನ್ 2022 ರಲ್ಲಿ ಪಬ್‍ಜಿ ಆಡುವುದನ್ನು ತಡೆದ ಕಾರಣಕ್ಕಾಗಿ ಆರೋಪಿ ತಾಯಿಯನ್ನು ಕೊಲೆಗೈದಿದ್ದ ಎಂದು ಆರೋಪಿಸಲಾಗಿತ್ತು. ಘಟನೆ ನಡೆದ ಎರಡು ದಿನಗಳ ನಂತರ ಮೃತರ ಶವ ಪತ್ತೆಯಾಗಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

    ಆರೋಪಿಯು ನೈತಿಕ, ದೈಹಿಕ ಅಥವಾ ಮಾನಸಿಕ ಅಪಾಯಕ್ಕೆ ಒಡ್ಡಿಕೊಳ್ಳುವುದಿಲ್ಲ ಹಾಗೂ ಅಪರಾಧ ಕೃತ್ಯದಲ್ಲಿ ತೊಡಗುವುದಿಲ್ಲ ಎಂದು ಮನವರಿಕೆಯಾದ ನಂತರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

    ಜಾಮೀನು ನೀಡುವ ಸಂದರ್ಭದಲ್ಲಿ ಆರೋಪಿಯು ಜೂನ್ 8, 2022 ರಿಂದ ಬಾಲಾಪರಾಧಿಗಳ ರಕ್ಷಣಾ ಗೃಹದಲ್ಲಿದ್ದಾನೆ (Child Protection Home). ಅವನ ತಂದೆ ತನ್ನ ಮಗನ ಮೇಲೆ ನಿಗಾ ಇಡುತ್ತಾರೆ ಎಂಬ ಅಂಶವನ್ನು ಸಹ ನ್ಯಾಯಾಲಯ ಉಲ್ಲೇಖಿಸಿದೆ. ಇದನ್ನೂ ಓದಿ: ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ತೀರ್ಪು

  • ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ

    ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ – ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ವಕೀಲೆ ಎಲ್.ವಿಕ್ಟೋರಿಯಾ ಗೌರಿ (Victoria Gowri) ಅವರನ್ನು ಮದ್ರಾಸ್ ಹೈಕೋರ್ಟ್‌ನ (Madras High Court) ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ವಜಾಗೊಳಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ, ಬಿ.ಆರ್ ಗವಾಯಿ ಅವರ ಪೀಠವು, ಅರ್ಜಿಯಲ್ಲಿ ಪ್ರಸ್ತಾಪಿಸಲಾದ ವಿಷಯವು ಗೌರಿಯ ಅರ್ಹತೆ ಮತ್ತು ಯೋಗ್ಯತೆಗೆ ಸಂಬಂಧಿಸಿದೆ. ಇದು ವ್ಯಕ್ತಿನಿಷ್ಠ ಮೌಲ್ಯಮಾಪನವಾಗಿದೆ. ಆದ್ದರಿಂದ ನ್ಯಾಯಾಲಯವು ಅದನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ತೃತೀಯಲಿಂಗಿಗೆ 7 ವರ್ಷ ಜೈಲು ಶಿಕ್ಷೆ

    ನಾವು ಅರ್ಹತೆ ಮತ್ತು ಸೂಕ್ತತೆಯ ನಡುವೆ ಅರ್ಹತೆಯ ಸುತ್ತ ಮಾತ್ರ ಕೆಲಸ ಮಾಡಬಹುದು ಎಂದು ನ್ಯಾಯಮೂರ್ತಿ ಖನ್ನಾ ಹೇಳಿದರು. ಕೊಲಿಜಿಯಂ ಗೌರಿ ವಿರುದ್ಧದ ಎಲ್ಲಾ ವಿಷಯಗಳನ್ನು ಪರಿಗಣಿಸಲಿದೆ. ಕೊಲಿಜಿಯಂನ ನಿರ್ಧಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

    ಗೌರಿ ಅವರ ನೇಮಕದ ವಿರುದ್ಧ ಮದ್ರಾಸ್ ಹೈಕೋರ್ಟ್‌ನಿಂದ ವಕೀಲರು ಅರ್ಜಿ ಸಲ್ಲಿಸಿದ್ದರು. ಅವರು ಬಿಜೆಪಿ ಸದಸ್ಯರಾಗಿದ್ದಾರೆ, ವಕೀಲೆಯಾಗಿ ಬಿಜೆಪಿಯ ಪರ ಕೆಲಸವೂ ಮಾಡಿದ್ದಾರೆ. ಸಮುದಾಯವೊಂದರ ವಿರುದ್ಧ ಅವರು ನೀಡಿರುವ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿರುವ ಹಿನ್ನೆಲೆ ಅವರ ನೇಮಕವನ್ನು ತಡೆ ಹಿಡಿಯಬೇಕು ಎಂದು ಮನವಿ ಮಾಡಲಾಗಿತ್ತು. ಇದನ್ನೂ ಓದಿ: Turkey – Syria Earthquakeː ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ, 15 ಸಾವಿರ ಮಂದಿಗೆ ಗಾಯ- 4,900 ಕಟ್ಟಡಗಳು ಧ್ವಂಸ

    ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೆ ವಿಕ್ಟೋರಿಯಾ ಗೌರಿ ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಧೀಶರು ಪ್ರಮಾಣ ವಚನ ಬೋಧಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ಚೆನ್ನೈ: ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ(Temple) ಆವರಣದ ಒಳಗಡೆ ಮೊಬೈಲ್‌ ಫೋನ್‌(Mobile Phone) ಮತ್ತು ಕ್ಯಾಮೆರಾವನ್ನು(Camera) ನಿಷೇಧಿಸುವಂತೆ ಮದ್ರಾಸ್‌ ಹೈಕೋರ್ಟ್‌(Madras High Court) ತಮಿಳುನಾಡು ಸರ್ಕಾರಕ್ಕೆ(Tamilnadu Government) ನಿರ್ದೇಶನ ನೀಡಿದೆ.

    ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.

    ತೂತುಕುಡಿ ಜಿಲ್ಲೆಯ ಪುರಾತನ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ವೇಳೆ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: HDK ಪ್ರಧಾನಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ CM: ಸಿಎಂ ಇಬ್ರಾಹಿಂ

    ದೇವಾಲಯಗಳ ಒಳಗೆ ಇರುವ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತವೆ. ಆದ್ದರಿಂದ ದೇವಾಲಯದ ಆವರಣದಲ್ಲಿ ಅವುಗಳ ಬಳಕೆಯನ್ನು ದೇವಾಲಯದ ಅಧಿಕಾರಿಗಳು ನಿಯಂತ್ರಿಸಬೇಕು ಎಂದು ಪೀಠ ಹೇಳಿದೆ.

    ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ ದೇವಾಲಯದ ಆವರಣದೊಳಗೆ ಕಾರ್ಯನಿರ್ವಹಿಸಲು ಮತ್ತು ಆಚರಣೆಗೆ ಅಂತಹ ಸ್ವಾತಂತ್ರ್ಯವು ನಿಯಮಗಳಿಗೆ ಒಳಪಟ್ಟಿರುತ್ತದೆ. ದೇವಸ್ಥಾನದಲ್ಲಿ ನಡೆಯುವ ಪೂಜಾ ವಿಧಿವಿಧಾನಗಳ ನಿಯಮಾವಳಿಗಳನ್ನು ಸೂಚಿಸಿ  ಅಧಿಕಾರಿಗಳು ದೇವಾಲಯದ ಪಾವಿತ್ರ್ಯತೆ ಕಾಪಾಡುವಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    court order law

    ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದ್ದರಿಂದ ದೇವಾಲಯದ ಅಧಿಕಾರಿಗಳು ಸಾಕಷ್ಟು ಸುರಕ್ಷತಾ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಹೆಚ್ಚಿನ ಭಕ್ತರು ದೇವಾಲಯದ ಆವರಣದ ಒಳಗಿನಿಂದ ಚಿತ್ರಗಳನ್ನು ತೆಗೆಯುತ್ತಾರೆ ಮತ್ತು ವೀಡಿಯೊಗಳನ್ನು ಮಾಡುತ್ತಾರೆ. ದೇವಾಲಯದಲ್ಲಿ ಇರಿಸಲಾಗಿರುವ ವಿಗ್ರಹಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಫೋಟೋಗಳನ್ನು ತೆಗೆಯುತ್ತಾರೆ. ಭದ್ರತಾ ದೃಷ್ಟಿಯಿಂದ ಇವುಗಳಿಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    ಮಧುರೈನ ಪ್ರಸಿದ್ಧ ಮೀನಾಕ್ಷಿ ದೇವಸ್ಥಾನ ಸೇರಿದಂತೆ ರಾಜ್ಯದ ಇತರ ಹಲವಾರು ದೇವಾಲಯಗಳ ಒಳಗಡೆ ಭಕ್ತರು ತಮ್ಮ ಫೋನ್ ಅಥವಾ ಕ್ಯಾಮೆರಾಗಳನ್ನು ದೇವಾಲಯದ ಆವರಣದೊಳಗೆ ಕೊಂಡೊಯ್ಯಲು ಅನುಮತಿ ನೀಡುವುದಿಲ್ಲ ಎಂಬ ವಿಚಾರವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಮೀನಾಕ್ಷಿ ದೇವಸ್ಥಾನದಲ್ಲಿ ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ತಮ್ಮ ಫೋನ್‌ಗಳನ್ನು ಲಾಕರ್‌ನಲ್ಲಿ ಇಡಬೇಕಾಗುತ್ತದೆ. ಭಕ್ತರು ಹೊರಗೆ ಬಂದ ನಂತರ ಫೋನ್‌ಗಳನ್ನು ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದರು.

    ತೂತುಕುಡಿಯ ದೇವಸ್ಥಾನದ ಒಳಗೆ ಫೋನ್ ಮತ್ತು ಕ್ಯಾಮೆರಾಗಳನ್ನು ಬಳಸುವುದನ್ನು ನಿಷೇಧಿಸುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ. ಭಕ್ತರು ಮತ್ತು ದೇವಾಲಯಕ್ಕೆ ಭೇಟಿ ನೀಡುವವರು ಸಭ್ಯ ಡ್ರೆಸ್ ಕೋಡ್ ಅನುಸರಿಸಬೇಕು ಎಂದು ಸೂಚಿಸಲಾಗಿದೆ ಎಂಬುದನ್ನು ತೂತುಕುಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೋರ್ಟ್‌ ಗಮನಕ್ಕೆ ತಂದಿದ್ದರು.

    Live Tv
    [brid partner=56869869 player=32851 video=960834 autoplay=true]

  • ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

    ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

    ಚೆನ್ನೈ: ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ಇಂದು ರದ್ದುಪಡಿಸಿದೆ.

    ಇವರಿಬ್ಬರೂ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಸಂತೋಷ್ ಕುಮಾರ್ ಈ ತೀರ್ಪು ಪ್ರಕಟಿಸಿದ್ದು, ಪ್ರಕರಣವನ್ನು ರದ್ದುಪಡಿಸಿದ್ದಾರೆ. ಚಿತ್ರದಲ್ಲಿ ವಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ನಗರದ ಚೆನ್ನೈ ಮೂಲದ ವಕೀಲ ಕೆ. ಸಂತೋಷ್ ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ‘ಜೈ ಭೀಮ್’ ನಟ ಸೂರ್ಯಗೆ ಜೀವ ಬೆದರಿಕೆ- ನಟನ ಮನೆಗೆ ಪೊಲೀಸ್ ಭದ್ರತೆ

    ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನ್ಯಾಯಾಲಯ ಮೇ 6 ರಂದು ಆದೇಶ ಹೊರಡಿಸಿತ್ತು. ನಂತರ ವೆಲಾಚೇರಿ ಪೊಲೀಸರು ಮೇ 17 ರಂದು ಸೂರ್ಯ ಮತ್ತು ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಇದನ್ನೂ ಓದಿ: ನಾನು ಯಾವಾಗಲೂ ಮೂಡ್‌ನಲ್ಲಿರುತ್ತೇನೆ ಎಂದ ಸೋನು ಶ್ರೀನಿವಾಸ್ ಗೌಡ

    ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಕೆ. ಚಂದ್ರು ಅವರು ವಕೀಲರಾಗಿದ್ದಾಗ ನಡೆಸಿದ ಕೇಸ್ ವೊಂದರ ಆಧಾರದ ಮೇಲೆ ಈ ಸಿನಿಮಾ ಮಾಡಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಕೆ ಚಂದ್ರು, ಮಾಜಿ ಐಪಿಪಿ ಪೆರುಮಾಳ ಸ್ವಾಮಿ ಹೆಸರು ಹೊರತುಪಡಿಸಿದರೆ ಉಳಿದ ಎಲ್ಲಾ ಪಾತ್ರಗಳ ಹೆಸರುಗಳನ್ನು ಬದಲಾಯಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡು ಸರ್ಕಾರದ ಸ್ವಾಧೀನಕ್ಕಿಲ್ಲ ಅಯೋಧ್ಯಾ ಮಂಟಪ: ಹೈಕೋರ್ಟ್ ಆದೇಶ

    ತಮಿಳುನಾಡು ಸರ್ಕಾರದ ಸ್ವಾಧೀನಕ್ಕಿಲ್ಲ ಅಯೋಧ್ಯಾ ಮಂಟಪ: ಹೈಕೋರ್ಟ್ ಆದೇಶ

    ಚೆನ್ನೈ: ಅಯೋಧ್ಯಾ ಮಂಟಪವನ್ನು ಸ್ವಾಧೀನಪಡಿಸಲು ಹೊರಡಿಸಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.

    ಇಲ್ಲಿನ ಅಯೋಧ್ಯಾ ಮಂಟಪದ ವ್ಯವಹಾರಗಳನ್ನು ನಿರ್ವಹಿಸುವ ಶ್ರೀರಾಮ ಸಮಾಜದ ವಿರುದ್ಧ ಹಣಕಾಸಿನ ದುರುಪಯೋಗ, ತೆರಿಗೆ ವಂಚನೆ ಮತ್ತು ಇತರ ಅಕ್ರಮಗಳು ನಡೆದಿದೆ ಎನ್ನುವ ಬಗ್ಗೆ ಅನೇಕ ದೂರುಗಳನ್ನು ನ್ಯಾಯಾಲಯ ಸ್ವೀಕರಿಸಿತ್ತು ನಂತರ, ಮಂಟಪದ ಆಡಳಿತವನ್ನು ನಿರ್ವಹಿಸಲು ತಮಿಳುನಾಡು ಸರ್ಕಾರವು ಸೂಕ್ತ ವ್ಯಕ್ತಿ ನೇಮಕ ಮಾಡುವ ನಿರ್ಧಾರ ತೆಗೆದುಕೊಂಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷವನ್ನು ಸೇರಲು ನಿರಾಕರಿಸಿದ ಪ್ರಶಾಂತ್ ಕಿಶೋರ್

    AYODYA MANATAPA

    ಸದ್ಯ ನ್ಯಾಯಾಲಯವು ಈ ಆರೋಪಗಳ ಬಗ್ಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ತನಿಖೆ ನಡೆಸಲು ಪೂರ್ಣ ಸ್ವಾತಂತ್ರ್ಯ ನೀಡಿದೆ. ವಿಚಾರಣೆ ಮುಗಿಯುವವರೆಗೆ ನ್ಯಾಯಾಲಯವು ಮಂಟಪದ ಸಂಪೂರ್ಣ ನಿಯಂತ್ರಣ ಶ್ರೀರಾಮ ಸಮಾಜಕ್ಕೆ ನೀಡಿದೆ. ಈ ಬಗ್ಗೆ ಬುಧವಾರ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ

    ಏಪ್ರಿಲ್ 12 ರಂದು, ಪಶ್ಚಿಮ ಮಾಂಬಲಮ್‌ನಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಕಟ್ಟಡವನ್ನು ಸ್ವಾಧೀನಪಡಿಸಿಕೊಂಡಾಗ ಅಯೋಧ್ಯಾ ಮಂಟಪದ ಹೊರಗೆ ಗದ್ದಲ ಉಂಟಾಯಿತು. ಇಲಾಖೆಯ ಕ್ರಮದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಅಲ್ಲಿ ಯಾವುದೇ ಭಜನೆ ಅಥವಾ ಸತ್ಸಂಗ ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಚೀನಾದಿಂದ ಟೆಸ್ಲಾ ಕಾರುಗಳನ್ನ ಆಮದು ಮಾಡಿಕೊಂಡು ಭಾರತದಲ್ಲಿ ಮಾರುವ ಹಾಗಿಲ್ಲ: ಗಡ್ಕರಿ

    AYODYA RAM TEMPL
    ಸಾಂದರ್ಭಿಕ ಚಿತ್ರ

    ಶ್ರೀರಾಮ ಸಮಾಜದ ವಿರುದ್ಧ ಹಣ ದುರುಪಯೋಗದ ಬಗ್ಗೆ ದೂರುಗಳು ಬಂದಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಸ್ಪಷ್ಟಪಡಿಸಿದ್ದರು. ಅಯೋಧ್ಯಾ ಮಂಟಪವು ಸಾರ್ವಜನಿಕ ದೇವಾಲಯವಾಗಿದೆ. ಏಕೆಂದರೆ ಇಲ್ಲಿನ ಹುಂಡಿಗೆ ಸಾರ್ವಜನಿಕರಿಂದಲೇ ಹಣ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದರು. ಆದರೆ ಪೂಜೆ ನಡೆದರೂ ಮೂರ್ತಿ ಪ್ರತಿಷ್ಠಾಪಿಸದ ಕಾರಣ ಇದು ದೇವಸ್ಥಾನವಲ್ಲ ಎಂದು ಶ್ರೀರಾಮ ಸಮಾಜ ಪ್ರತಿಪಾದಿಸಿತ್ತು.

  • ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ಚೆನ್ನೈ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್-ಕೇಸರಿ ಶಾಲು ವಿವಾದವು ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಧಾರ್ಮಿಕ ಪ್ರಕರರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ರಾಷ್ಟ್ರವೋ ಅಥವಾ ಧರ್ಮವೋ, ಯಾವುದು ಮುಖ್ಯ ಎಂದು ಪ್ರಶ್ನಿಸಿದೆ.

    ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ಎನ್.ಭಂಡಾರಿ ಮತ್ತು ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ಪೀಠವು, ಇದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಕೆಲವರು ಹಿಜಬ್‌ಗಾಗಿ ಹೋಗುತ್ತಾರೆ. ಮತ್ತೆ ಕೆಲವರು ಟೋಪಿಗಾಗಿ ಹೋರಾಡುತ್ತಾರೆ. ಇನ್ನೂ ಕೆಲವರು ತಮಗೆ ಅಗತ್ಯವಿರುವುದಕ್ಕಾಗಿ ಪ್ರತಿಭಟಿಸುತ್ತಾರೆ. ಇದು ಒಂದು ರಾಷ್ಟ್ರವೋ ಅಥವಾ ಧರ್ಮದಿಂದ ವಿಭಜನೆಯಾಗಿದೆಯೋ ಅಥವಾ ಬೇರೆ ಇನ್ಯಾವುದೋ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌ ಮಧ್ಯಂತರ ಆದೇಶ

    ಭಾರತ ಜಾತ್ಯತೀತ ರಾಷ್ಟ್ರ. ಪ್ರಚಲಿತ ವಿದ್ಯಾಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಭಂಡಾರಿ ಕಟು ಪದಗಳಿಂದ ಧರ್ಮದ ಹೆಸರಿನಲ್ಲಿ ದೇಶ ಒಡೆಯುವವರ ವಿರುದ್ಧ ಚಾಟಿ ಬೀಸಿದ್ದಾರೆ.

    ತಿರುಚಿರಪಳ್ಳಿ ಜಿಲ್ಲೆಯ ರಂಗರಾಜನ್ ನರಸಿಂಹನ್ ಎಂಬವರು ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಭಕ್ತರಿಗೆ ವಸ್ತ್ರ ಸಂಹಿತೆ ರೂಪಿಸಬೇಕು. ರಾಜ್ಯಾದ್ಯಂತ ಇರುವ ದೇವಾಲಯಗಳಿಗೆ ಹಿಂದೂಯೇತರರು ಕಾಲಿಡದಂತೆ ಮತ್ತು ದೇವಸ್ಥಾನಗಳ ಆವರಣದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಮನವಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನೀಡುವಂತೆ ಅರ್ಜಿದಾರನನ್ನು ಪ್ರಶ್ನಿಸಿದೆ. ಆಗಮಗಳ ಯಾವ ಭಾಗವು ಪ್ಯಾಂಟ್, ಧೋತಿ ಮತ್ತು ಶರ್ಟ್‌ಗಳ ಕುರಿತು ಉಲ್ಲೇಖ ಮಾಡಿದೆ ಎಂದು ಪೀಠ ಕೇಳಿದೆ. ಅಂತಿಮವಾಗಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ವಿವರಣೆಗಳೊಂದಿಗೆ ಅಫಿಡವಿಟ್ ಸಲ್ಲಿಸುವಂತೆ ಪೀಠ ಸೂಚಿಸಿದೆ.

  • ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆಯೇ ಮಹಿಳೆಯೊಂದಿಗೆ ಅನುಚಿತ ವರ್ತನೆ – ವಕೀಲ ಸಸ್ಪೆಂಡ್

    ವಿಚಾರಣೆ ವೇಳೆ ನ್ಯಾಯಾಧೀಶರ ಮುಂದೆಯೇ ಮಹಿಳೆಯೊಂದಿಗೆ ಅನುಚಿತ ವರ್ತನೆ – ವಕೀಲ ಸಸ್ಪೆಂಡ್

    ಚೆನ್ನೈ: ಕೋರ್ಟ್‍ನಲ್ಲಿ ನ್ಯಾಯಾಧೀಶರ ಮುಂದೆಯೇ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವಕೀಲನನ್ನು ಮದ್ರಾಸ್ ಹೈಕೋರ್ಟ್ ಅಮಾನತುಗೊಳಿಸಿದೆ.

    ಆರ್.ಡಿ.ಸಂಥಾನ ಕೃಷ್ಣನ್ ಅಮಾನತುಗೊಂಡ ವಕೀಲ. ಅವರ ವಿರುದ್ಧ ಬಾಕಿ ಉಳಿದಿರುವ ಶಿಸ್ತು ಕ್ರಮಗಳನ್ನು ವಿಲೇವಾರಿ ಮಾಡುವವರೆಗೆ ಭಾರತದ ಎಲ್ಲಾ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಮತ್ತು ಇತರ ಪ್ರಾಧಿಕಾರಗಳಲ್ಲಿ ಅವರು ವಕೀಲರಾಗಿ ಕಾರ್ಯನಿರ್ವಹಿಸುವುದನ್ನು ತಡೆಯಲಾಗಿದೆ. ತಮಿಳುನಾಡು ಮತ್ತು ಪುದುಚೇರಿಯ ಬಾರ್ ಕೌನ್ಸಿಲ್‍ನ ಪತ್ರಿಕಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ ಬಾಗಿಲು ಮುಚ್ಚಿ ನವವಧುವಿನ ಕೊಲೆ?

    ನ್ಯಾಯಾಧೀಶರಾದ ಪಿ.ಎನ್.ಪ್ರಕಾಶ್ ಮತ್ತು ಆರ್.ಹೇಮಲತಾ ಅವರು, ಸಂಥಾನ ಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸುವಂತೆ ಸಿಬಿ-ಸಿಐಡಿ ವಿಂಗ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಿ ಡಿ.23ರಂದು ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೇ ವಕೀಲನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ತಮಿಳುನಾಡು ಬಾರ್ ಕೌನ್ಸಿಲ್‍ಗೆ ಸಲಹೆ ನೀಡಿದ್ದಾರೆ.

    ನ್ಯಾಯಾಧೀಶರು ವೀಡಿಯೋ ಕಾನ್ಫರೆನ್ಸ್‍ನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದಾಗ, ಮಹಿಳೆಯೊಂದಿಗೆ ವಕೀಲ ಅಸಭ್ಯವಾಗಿ ವರ್ತಿಸುತ್ತಿದ್ದ ದೃಶ್ಯ ಕಂಡುಬಂದಿದ್ದು, ಎಲ್ಲೆಡೆ ವೈರಲ್ ಆಗಿತ್ತು. ಇದನ್ನೂ ಓದಿ: ಮದುವೆ ಹಿಂದಿನ ದಿನ ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಯುವತಿ ಜೂಟ್

  • ಪೊಲೀಸರ ಟಾರ್ಚರ್‌ನಿಂದ ಮಗನ ಸಾವು – ಮರು ಮರಣೋತ್ತರ ಪರೀಕ್ಷೆಗೆ ಆದೇಶ

    ಪೊಲೀಸರ ಟಾರ್ಚರ್‌ನಿಂದ ಮಗನ ಸಾವು – ಮರು ಮರಣೋತ್ತರ ಪರೀಕ್ಷೆಗೆ ಆದೇಶ

    – ಪೊಲೀಸರ ವಿರುದ್ಧ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದ ತಾಯಿ
    – ಬಿಡುಗಡೆಯಾದ ಮರು ದಿನವೇ ಸಾವನ್ನಪ್ಪಿದ್ದ ವಿದ್ಯಾರ್ಥಿ

    ಚೆನ್ನೈ: ಪೊಲೀಸ್ ಟಾರ್ಚರ್‍ನಿಂದ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಮಿಳುನಾಡು ವಿದ್ಯಾರ್ಥಿಯ ಮೃತದೇಹವನ್ನು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

    ರಾಮನಾಥಪುರ ಜಿಲ್ಲೆ ಮುದುಕಲತ್ತೂರು ಸಮೀಪದ ನೀರ್ ಕೊಜಿಯೆಂತಲ್ ಗ್ರಾಮದ ಕಾಲೇಜು ವಿದ್ಯಾರ್ಥಿ ಎಲ್.ಮಣಿಕಂದನ್(21)ನನ್ನು ವಾಹನ ತಪಾಸಣೆ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದರು.

    POLICE JEEP

    ಶನಿವಾರ ಸಂಜೆ ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದರು. ಆದರೆ ಬಿಡುಗಡೆ ಮಾಡಿದ ಮರುದಿನವೇ ಅಂದರೆ ಭಾನುವಾರ ಆತ ಮೃತಪಟ್ಟಿದ್ದಾನೆ. ಈ ಹಿನ್ನೆಲೆ ಆತನ ಸಾವು ಸಹಜವಲ್ಲ ಎಂದು ತಾಯಿ ರಾಮಲಕ್ಷ್ಮಿ ಆರೋಪಿಸಿ ನ್ಯಾಯಲಯದ ಮೊರೆ ಹೋಗಿದ್ದರು. ಇದನ್ನೂ ಓದಿ: ಏಳಕ್ಕೆ ಏಳು ಜೆಡಿಎಸ್ ಶಾಸಕರಿದ್ದರೂ ಮಂಡ್ಯ ಅಭಿವೃದ್ಧಿಯಾಗಿಲ್ಲ ಯಾಕೆ: ಸಿದ್ದರಾಮಯ್ಯ

    ನನ್ನ ಮಗ ತನ್ನ ಬೈಕ್‍ನಲ್ಲಿ ವಾಹನ ಚೆಕ್‍ಪೋಸ್ಟ್‍ನಿಂದ ಪರಾರಿಯಾಗಲು ಯತ್ನಿಸಿದ್ದ. ಈ ಕಾರಣಕ್ಕೆ ಪೊಲೀಸರು ವಿಚಾರಣೆ ಮಾಡುವುದಾಗಿ ಠಾಣೆಗೆ ಕರೆದೊಯ್ದಿದ್ದರು. ನಂತರ ನಮಗೆ ಮಣಿಕಂದನ್ ಅನ್ನು ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ನಾವು ಮಣಿಕಂದನ್ ನನ್ನು ಮನೆಗೆ ಕರೆದುಕೊಂಡು ಹೋಗಿದ್ದು, ನಿಗೂಢವಾಗಿ ಅವನು ಸಾವನ್ನಪ್ಪಿದ್ದಾನೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

    ನನ್ನ ಮಗನಿಗೆ ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದರಿಂದಲೇ ಆತ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಮಗನ ಮರು ಮರಣೋತ್ತರ ಪರೀಕ್ಷೆ ನಡೆಸಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿಕೊಂಡಿದ್ದರು.

    ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಜಿಆರ್ ಸ್ವಾಮಿನಾಥನ್, ರಾಮನಾಥಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಣಿಕಂದನ್ ಪಾರ್ಥಿವ ಶರೀರದ ಮರು ಮರಣೋತ್ತರ ಪರೀಕ್ಷೆ ನಡೆಸುವಂತೆ ಆದೇಶಿಸಿದರು. ಅಷ್ಟೇ ಅಲ್ಲದೇ ಮರಣೋತ್ತರ ಪರೀಕ್ಷೆಯ ಎಲ್ಲ ಪ್ರಕ್ರಿಯೆಯ ವಿಡಿಯೋವನ್ನು ಸೆರೆ ಹಿಡಿಯುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ನೀವು ಬದಲಾಗದಿದ್ದರೆ ಮುಂದೆ ಎಲ್ಲವೂ ಬದಲಾಗುತ್ತೆ: ಸಂಸದರಿಗೆ ಮೋದಿ ಎಚ್ಚರಿಕೆ

    ಏನಿದು ಘಟನೆ?
    ಶನಿವಾರ ಪರಮಕುಡಿ-ಕೀಳತೂವಲ್ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಮಣಿಕಂದನ್ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ. ಅವರು ನಿಲ್ಲಿಸದ ಕಾರಣ, ಅಧಿಕಾರಿಯೊಬ್ಬರು ಆತನ ವಾಹನವನ್ನು ಹಿಂಬಾಲಿಸಿಕೊಂಡು ಹೋಗಿ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಸಂಜೆ ಆತನನ್ನು ಬಿಡುಗಡೆ ಮಾಡಿದ್ದರು. ಪೊಲೀಸ್ ಕಸ್ಟಡಿಯಿಂದ ಬಂದ ಮರುದಿನವೇ ಮಣಿಕಂದನ್ ಮೃತಪಟ್ಟಿದ್ದು ಅನುಮಾನಕ್ಕೆ ಕಾರಣವಾಗಿದೆ.