Tag: ಮನುಸ್ಮೃತಿ

  • ನೀವು ಮನುಸ್ಮೃತಿ ಪರವೋ ಸಂವಿಧಾನದ ಪರವೋ? 50% ಮೀಸಲಾತಿ ಗೋಡೆಯನ್ನು ತೆಗೆಯುತ್ತೇವೆ: ರಾಹುಲ್‌ ಗಾಂಧಿ

    ನೀವು ಮನುಸ್ಮೃತಿ ಪರವೋ ಸಂವಿಧಾನದ ಪರವೋ? 50% ಮೀಸಲಾತಿ ಗೋಡೆಯನ್ನು ತೆಗೆಯುತ್ತೇವೆ: ರಾಹುಲ್‌ ಗಾಂಧಿ

    – ಸಂವಿಧಾನ ಚರ್ಚೆಯಲ್ಲಿ ಬಿಜೆಪಿಗೆ ಸವಾಲು
    – ಸಂವಿಧಾನದ ಪುಸ್ತಕದ ಜೊತೆ ಮನುಸ್ಮೃತಿಯನ್ನು ತಂದ ರಾಹುಲ್‌
    – ಬಿಜೆಪಿ ದೇಶದ ಹೆಬ್ಬೆರಳನ್ನು ಕತ್ತರಿಸಿದೆ

    ನವದೆಹಲಿ: ಭಾರತದ ಆಡಳಿತ ವ್ಯವಸ್ಥೆ ಮನುಸ್ಮೃತಿಯನ್ನು (Manusmriti) ಪಾಲಿಸಬೇಕು ಎಂದು ವೀರ್ ಸಾವರ್ಕರ್‌ (Savarkar) ಹೇಳಿದ್ದರು. ಈ‌ ವೀರ್ ಸಾವರ್ಕರ್‌ ಅನುಸರಿಸುವ ಬಿಜೆಪಿ (BJP) ನಾಯಕರು ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಸಂವಿಧಾನದ ಪರವೋ, ಸಾರ್ವಕರ್ ಪಾಲಿಸುವ ಮನುಸ್ಮೃತಿ ಪರವೋ ಎಂಬುದನ್ನು  ಸ್ಪಷ್ಟಪಡಿಸಬೇಕು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಆಗ್ರಹಿಸಿದ್ದಾರೆ.

    ಸಂವಿಧಾನ (Constitution) ಜಾರಿಗೆ ಬಂದು 75 ವರ್ಷವಾದ ಹಿನ್ನಲೆಯಲ್ಲಿ ಲೋಕಸಭೆಯಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಮಾತನಾಡಿದ ಅವರು, ಹಿಂದೆ ಭಾರತ ಹೇಗೆ ನಡೆಯುತ್ತಿತ್ತು? ಈಗಲೂ ಹಾಗೆಯೇ ನಡೆಸಲು ಬಿಜೆಪಿ ನಾಯಕರು ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ಕೀಳುಜಾತಿಯವನು ಎನ್ನುವ ಕಾರಣಕ್ಕೆ ವಿದ್ಯೆಯನ್ನೇ ಕಲಿಸದೇ ದ್ರೋಣಚಾರ್ಯರು ಗುರುದಕ್ಷಣೆಯಾಗಿ ಏಕಲವ್ಯನಿಂದ ಹೆಬ್ಬೆರಳು ಪಡೆದರು. ಹೆಬ್ಬೆರಳು ಕೈಗೆ ಮುಖ್ಯವಾಗಿದೆ, ದ್ರೋಣಾಚಾರ್ಯರು ಹೇಗೆ ಏಕಲವ್ಯನ ಹೆಬ್ಬೆರಳು ಕತ್ತರಿಸಿದರೋ ಹಾಗೇ ನೀವೂ ದೇಶದ ಹೆಬ್ಬೆರಳು ಕತ್ತರಿಸಿದ್ದೀರಿ ಎಂದು ಆರೋಪಿದರು.

    ಅಗ್ನಿವೀರ್, ಪೇಪರ್ ಲೀಕ್ ಜಾರಿ ಮಾಡುವ ಮೂಲಕ ಭಾರತದ ಯುವಕರ ಹೆಬ್ಬೆರಳು ಕತ್ತರಿಸಿದ್ದೀರಿ. ಅದಾನಿ ಅವರಿಗೆ ಧಾರವಿ ಕೊಟ್ಟು ಅಲ್ಲಿ ಸಣ್ಣ ಪುಟ್ಟ ಉದ್ಯಮ ನಡೆಸುತ್ತಿದ್ದ ಜನರು ಹೆಬ್ಬೆರಳು ಕತ್ತರಿಸಿದ್ದೀರಿ. ಬೆಂಬಲ ಬೆಲೆ ಕೇಳುವ ರೈತರ ಮೇಲೆ ಟಿಯರ್ ಗ್ಯಾಸ್ ಬಳಕೆ ಮಾಡುವ ಮೂಲಕ ರೈತರ ಬೆರಳು ಕತ್ತರಿಸಲಾಗಿದೆ. ಸಂವಿಧಾನದಲ್ಲಿ ಜನರ ಬೆರಳು ಕತ್ತರಿಸಿ ಅವರ ಹಕ್ಕುಗಳನ್ನು ಕಿತ್ತುಕೊಳ್ಳಿ ಎಂದು ಹೇಳಿಲ್ಲ ಆದರೆ ನೀವು ಅವಕಾಶಗಳನ್ನು ಕಿತ್ತುಕೊಂಡಿದ್ದೀರಿ ಎಂದು ದೂರಿದರು.

    ಹತ್ರಾಸ್‌ನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಇತ್ತೀಚೆಗೆ ನಾನು ಆ ಯುವತಿಯ ಕುಟುಂಬವನ್ನು ಭೇಟಿ ಮಾಡಿದೆ. ಅಲ್ಲಿ ಗ್ಯಾಂಗ್ ರೇಪ್ ಮಾಡಿದವರು ಹೊರಗೆ ಸುತ್ತಾಡುತ್ತಿದ್ದಾರೆ. ಯುವತಿಯ ಕುಟುಂಬಸ್ಥರು ಮನೆಯಿಂದ ಹೊರಗೆ ಬಾರದಂತೆ ಮಾಡಲಾಗಿದೆ. ಯುವತಿಯ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಲಿಲ್ಲ. ಅತ್ಯಚಾರಿಗಳನ್ನು ಹೊರಗೆ ಸುತ್ತಲು ಬಿಡಿ ಎಂದು ಸಂವಿಧಾನ ಅಲ್ಲ ಮನುಸ್ಮೃತಿಯಲ್ಲಿ ಬರೆದಿದೆ. ಉತ್ತರ ಪ್ರದೇಶದಲ್ಲಿ ಮನುಸ್ಮೃತಿ ಜಾರಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

    ಜಾತಿ, ಧರ್ಮ, ಸ್ಥಳ ಹೆಸರಿನ ಮೇಲೆ ತಾರತಮ್ಯ ಮಾಡಬಾರದು ಎಂದು ಸಂವಿಧಾನ ಹೇಳಿದೆ. ಆದರೆ ನೀವು ಹೋದ ಕಡೆ ಧರ್ಮಗಳ ನಡುವೆ ಜಗಳ ಹಚ್ಚುತ್ತಿದ್ದೀರಿ. ದ್ವೇಷ ಬೆಳೆಸುತ್ತಿದ್ದೀರಿ, ದಲಿತ ಕುಟುಂಬಗಳನ್ನು ಮನೆಯಲ್ಲಿ ಕೂಡಿ ಹಾಕಿದ್ದೀರಿ. ಇದು ಯಾವ ಸಂವಿಧಾನದಲ್ಲಿ ಬರೆದಿದೆ? ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆ ಇಲ್ಲ. ಇದಕ್ಕಾಗಿ ನಾವು ಜಾತಿ ಜನಗಣತಿ ಮಾಡಲು ನಿರ್ಧರಿಸಿದ್ದೇವೆ. ಬಳಿಕ ಭಾರತದಲ್ಲಿ ಹೊಸ ರೀತಿಯ ಅಭಿವೃದ್ಧಿಯಾಗಲಿದೆ ಹೊಸ ರೀತಿಯ ರಾಜಕೀಯ ಶುರುವಾಗಲಿದೆ 50% ಮೀಸಲಾತಿ ಗೋಡೆಯನ್ನು ಒಡೆದು ಹಾಕಲಿದ್ದೇವೆ ನೀವು ಏನ್ ಮಾಡಬೇಕು ಮಾಡಿ ಎಂದು ಸವಾಲು ಹಾಕಿದರು.

  • ರೈತರ ಬಗ್ಗೆ ಕಾಳಜೀ ಇದೆ ಅಂತಾರೆ, ರಸ್ತೆಗೆ ಬಂದ್ರೆ ಹುಷಾರ್ ಅಂತ ಎಚ್ಚರಿಕೆ ಕೊಡ್ತಾರೆ: ಖರ್ಗೆ ಕಿಡಿ

    ರೈತರ ಬಗ್ಗೆ ಕಾಳಜೀ ಇದೆ ಅಂತಾರೆ, ರಸ್ತೆಗೆ ಬಂದ್ರೆ ಹುಷಾರ್ ಅಂತ ಎಚ್ಚರಿಕೆ ಕೊಡ್ತಾರೆ: ಖರ್ಗೆ ಕಿಡಿ

    – RSS ಮನುಸ್ಮೃತಿಯನ್ನ ಪ್ರತಿಪಾದಿಸುತ್ತಿದೆ
    – ಅಜಯ್ ಮಿಶ್ರಾ ಸಚಿವ ಸ್ಥಾನದಿಂದ ಕೆಳಗಿಳಿಯಲಿ

    ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಾಲ್ಕು ಜನ ರೈತರ ಮೇಲೆ ಗಾಡಿ ಹರಿಸಿ ಕೊಂದಿದ್ದಾರೆ. ಆದರೆ ಕೆಲ ನಾಯಕರು ನಾವು ರೈತರ ಪರ ಅಂತಾರೆ, ಮತ್ತೆ ರೈತರು ರಸ್ತೆ ಮೇಲೆ ಬಂದ್ರೆ ಪಾಠ ಕಲಿಸ್ತೇವೆ ಅಂತ ಯೋಗಿ, ಖಟ್ಟರ್ ರಂತಹ ನಾಯಕರು ರೈತರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಬಗ್ಗೆ ಕಾಳಜೀ ಇದೆ ಅಂತಾರೆ. ಮುಖ್ಯಂಮತ್ರಿಗಳು ಇಂತಹ ಹೇಳಿಕೆ ನೀಡುತ್ತಾರೆ. ರಸ್ತೆಗೆ ಬಂದರೆ ಹುಷಾರು ಎಂದು ಎಚ್ಚರಿಕೆ ನೀಡಿದ್ದಾರೆ, ಒಬ್ಬ ಸಿಎಂ ಮತ್ತು ಗೃಹ ಖಾತೆ ಸಚಿವರು ಇಂತಹ ಬೇದರಿಕೆ ಹಾಕಬಹುದಾ? ಸ್ವತಃ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ? ಲಖೀಂಪುರ್ ಘಟನೆ ದೇಶದಲ್ಲೇ ಅಲ್ಲೋಲ, ಕಲ್ಲೋಲ ಉಂಟು ಮಾಡುವ ಘಟನೆಯಾಗಿದ್ದು, ರೈತರ ಮೇಲೆ ಯಾವ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಶೇಷವಾಗಿ ಯುಪಿ ಹಾಗೂ ಹರಿಯಾಣ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ ಎಂಬುದಕ್ಕೆ ಇದು ಉದಾಹರಣೆ ಎಂದು ಕಿಡಿಕಾರಿದರು.  ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಕೇಂದ್ರ ಸಚಿವರ ಮಗ ಚಳವಳಿ ಮಾಡುತ್ತಿದ್ದ ರೈತರಿಗೆ ನಿಮಗೆಲ್ಲಾ ಪಾಠ ಕಲಿಸುತ್ತಿದ್ದೆ ಎಂದು ಮೊದಲು ವಾರ್ನ್ ಮಾಡಿದ್ದ. ಆನಂತರ ಗಾಡಿ ತಗೆದುಕೊಂಡು ಹೋಗಿ ಗುದ್ದಿದ್ದಾನೆ ಆದರೂ ಕೇಂದ್ರ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವರ ಮಗನನ್ನು ಯಾಕೆ ಅರೆಸ್ಟ್ ಮಾಡ್ತಿಲ್ಲ? ಸಾಂತ್ವಾನ ಹೇಳಲು ಹೋಗುವವರನ್ನು ಅರೆಸ್ಟ್ ಮಾಡಿ ಗೃಹ ಬಂಧನದಲ್ಲಿ ಇಡಲಾಗುತ್ತಿದೆ. ಬೇರೆ ಪಕ್ಷದ ನಾಯಕರು ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ, ಅಲ್ಲಿನ ಸಿಎಂಗೆ ಭೇಟಿ ಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರಿಗೆ ಮಾತ್ರ ಅವಕಾಶ ನೀಡದೇ ಬಂಧಿಸಲಾಗುತ್ತಿದೆ. ಅಜಯ್ ಮಿಶ್ರಾರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಕಾರಿನಲ್ಲಿ ಮಂತ್ರಿ ಮಗ ಇದ್ದ. ಅಲ್ಲಿನ ರೈತರೇ ಇದನ್ನು ಹೇಳಿದ್ದಾರೆ. ಆದರೆ ನನ್ನ ಮಗ ಅಲ್ಲಿರಲಿಲ್ಲ ಅಂತ ವಾದಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಈ ಘಟನೆ ಬಗ್ಗೆ ಉಳಿದವರು ಬೇರೆ ರೀತಿ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲ ಹೇಗಾಯ್ತು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸುಪ್ರೀಂಕೋರ್ಟ್ ಸಿಟ್ಟಿಂಗ್ ಜಡ್ಜ್ ಇಂದ ಈ ಘಟನೆ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ. ನಂತರ ಬಗ್ಗೆ ಮಾತನಾಡಿ ಆರ್‌ಎಸ್‌ಎಸ್‌ ಮನುಸ್ಮೃತಿಯನ್ನು ಪ್ರತಿಪಾದಿಸುತ್ತಿದೆ. ಗೋಲ್ವಾಲ್ಕರ್ ಯಾರು, ಅದರ ಪ್ರತಿಪಾದಕ. ಆರ್‌ಎಸ್‌ಎಸ್‌ ಏನು ಪ್ರತಿಪಾದಿಸುತ್ತದೆ. ಮನುಸ್ಮೃತಿ ಏನು ಪ್ರತಿಪಾದಿಸುತ್ತದೆ ಎಂದು ಪ್ರಶ್ನಿಸಿ ಕಲಬುರಗಿಯಲ್ಲಿ ನನ್ನ ಸೋಲಿಗೆ ಆರ್‌ಎಸ್‌ಎಸ್‌ ಕೂಡ ಒಂದು ಕಾರಣ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಲಖೀಂಪುರ್ ಭೇಟಿಗೆ ಅವಕಾಶವಿಲ್ಲವೆಂದ ಯೋಗಿ ಸರ್ಕಾರ

  • ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ: ನಟ ಚೇತನ್

    ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ: ನಟ ಚೇತನ್

    -ಇತಿಹಾಸ ಹೊಂದಿರುವ ಹೆಮ್ಮೆಯ ಕನ್ನಡಿಗ ಟಿಪ್ಪು

    ಕೋಲಾರ: ಸಮಾಜದಲ್ಲಿ ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ ಎಂದು ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕ್ರಮದಲ್ಲಿ ನಟ ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ.

    ಅಂಬೇಡ್ಕರ್ ಸೇವಾ ಸಮಿತಿ 2ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಒಳತಿಗಾಗಿ ಯಾರು ಅನ್ಯಾಯವನ್ನು ಪ್ರಶ್ನಿಸುತ್ತಾರೋ ಅವರಿಗೆ ದೇಶ ದ್ರೋಹದ ಪಟ್ಟ ಕಟ್ಟುತ್ತಾರೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದವರನ್ನ ಕೊಲ್ಲುವುದು, ಬಂಧಿಸುವ ಸ್ಥಿತಿ ಇದೆ. ಸಾಹಿತಿ ಎಂ.ಎಂ ಕಲಬುರ್ಗಿ ಎಂತಹ ವ್ಯಕ್ತಿಗಳು ಅನ್ಯಾಯದ ವಿರುದ್ಧ ಹೋದಾಗ ಧಾರ್ಮಿಕ ವಾದಿಗಳು ಹತ್ಯೆಗೈದಿದ್ದಾರೆ. ಆದರೆ ಅನ್ಯಾಯದ ವಿರುದ್ಧ ಹೋರಾಡಲು ಅಂಬೇಡ್ಕರ್ ಸಂವಿಧಾನ ರಚಿಸಿದರು. ಹೀಗಾಗಿ ಬುದ್ಧ ಹಾಗೂ ಅಂಬೇಡ್ಕರ್ ಅವರ ಸಿದ್ಧಾಂತಗಳು ನಮ್ಮ ದೇಶದ ಹೆಮ್ಮೆ ಎಂದು ಹೇಳಿದರು.

    ಸಂವಿಧಾನ ವಿರೋಧಿಗಳು ಧರ್ಮಗಳನ್ನ ಒಡೆಯುತ್ತಿದ್ದಾರೆ. 300 ವರ್ಷಗಳ ಇತಿಹಾಸ ಹೊಂದಿರುವ ಹೆಮ್ಮೆಯ ಕನ್ನಡಿಗ ಟಿಪ್ಪು ಸುಲ್ತಾನ. ಅಂತಹ ಟಿಪ್ಪು ದೇಶ ರಕ್ಷಣೆ ಮಾಡಿ, ಮಠ ಮಾನ್ಯಗಳನ್ನ ರಕ್ಷಣೆ ಮಾಡಿದ್ದಾರೆ. ಆದ್ರೆ ಇಂದು ಅವರನ್ನು ದೇಶದ್ರೋಹಿಯಂತೆ ಬಿಂಬಿಸುತ್ತಿದ್ದಾರೆ. ಟಿಪ್ಪುವಿಗೆ ದೇಶದ್ರೋಹದ ಪಟ್ಟ ಕಟ್ಟುವವರು ನಿಜಕ್ಕೂ ಇತಿಹಾಸವನ್ನೂ ಅರಿತಿಲ್ಲ ಎಂದು ಕಿಡಿಕಾರಿದರು.

    ಹಾಗೆಯೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾಹಿತಿ ಭಗವಾನ್ ಅವರು ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಸಮಾನತೆ ಇದೆ, ಆದ್ರೆ ಮನುಸ್ಮೃತಿಯಲ್ಲಿ ಸಮಾನತೆ ಇಲ್ಲ. ಮನುಸ್ಮೃತಿ ಇರುವುದು ಬ್ರಾಹ್ಮಣರು ಶೂದ್ರರ ಮೇಲೆ ದಾಸ್ಯ ಹೇರಲು ಮಾತ್ರ ಇದೆ. ಆದರೆ ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಬದಿಗೆ ಸರಿಸಿ ಸಂವಿಧಾನವನ್ನು ತಂದರು ಎಂದು ಸಾಹಿತಿ ಭಗವಾನ್ ತಿಳಿಸಿದರು.

    ಸಂವಿಧಾನವನ್ನ ಯಾರೂ ಓದಿ ಅರ್ಥ ಮಾಡಿಕೊಂಡಿಲ್ಲ, ಸಂವಿಧಾನದಲ್ಲಿ ಸಮಾನತೆ ಇದೆ ದಾಸ್ಯ ಇಲ್ಲ. ಬ್ರಾಹ್ಮಣರು ಬಿಟ್ಟು ಉಳಿದವರೆಲ್ಲಾ ಗುಲಾಮರು ಎಂಬುದು ಮನುಸ್ಮೃತಿ. ಆದ್ದರಿಂದ ಸಂವಿಧಾನವನ್ನ ತೆಗೆಯಲು ಹೊರಟಿದ್ದಾರೆ ಎಂದರು. ಬಳಿಕ ಬ್ರಿಟಿಷರು ಬಂದ ಮೇಲೆ ನಮಗೆಲ್ಲಾ ಶಿಕ್ಷಣ ಸಿಕ್ಕಿತು. ಅಲ್ಲಿಯವರೆಗೂ ಎಲ್ಲರೂ ಹೆಬ್ಬಟ್ಟುಗಳೆ ಆಗಿದ್ದರು. ಕೆಲಸಕ್ಕೆ ಬಾರದ ತುಳಿಯುವ, ಕಡಿಯುವ ಇಲ್ಲಸಲ್ಲದ ದೇವರುಗಳನ್ನ ತಂದು ನಮ್ಮ ಮೇಲೆ ಹೇರಿದ್ದಾರೆ. ಇದರಿಂದ ನಾವು ಹೊರಗೆ ಬರಬೇಕು, ಸಂವಿಧಾನವನ್ನು ಅಧ್ಯಯನ ಮಾಡಿ ಅರಿವು ಪಡೆಯಬೇಕು ಎಂದು ಕಿವಿ ಮಾತನ್ನು ಹೇಳಿದರು.

  • ಶೂದ್ರ ಅಂದ್ರೆ ಸೂಳೆಮಕ್ಕಳು ಎಂದರ್ಥ ಅಂತ ಮನುಸ್ಮೃತಿಯಲ್ಲಿದೆ – ಕೆ. ಎಸ್ ಭಗವಾನ್

    ಶೂದ್ರ ಅಂದ್ರೆ ಸೂಳೆಮಕ್ಕಳು ಎಂದರ್ಥ ಅಂತ ಮನುಸ್ಮೃತಿಯಲ್ಲಿದೆ – ಕೆ. ಎಸ್ ಭಗವಾನ್

    ಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ ಕೆ.ಎಸ್ ಭಗವಾನ್ ಮನುಸ್ಮೃತಿ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿ ರಾಮ ಹಾಗೂ ರಾಮ ಮಂದಿರ ನಿರ್ಮಾಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಕೆ.ಎಸ್ ಭಗವಾನ್, ಹಿಂದೂ ಧರ್ಮ ಉಳಿಬೇಕು ಅಂದ್ರೆ ಮೊದಲು ಶೂದ್ರ ಎಂಬ ಪದವನ್ನು ಮನುಸ್ಮೃತಿಯಿಂದ ತೆಗೆದು ಹಾಕಬೇಕು. ಶೂದ್ರ ಅಂದ್ರೆ ಬರೀ ಗುಲಾಮ ಅಂತಷ್ಟೇ ಅರ್ಥವಲ್ಲ. ಮನುಸ್ಮೃತಿಯಲ್ಲಿ ಶೂದ್ರ ಎಂದರೆ ಸೂಳೆಮಕ್ಕಳು ಎಂದರ್ಥ. ಅಂತಹ ಅಸಭ್ಯ ಪದ ನಮಗೆ ಬೇಕಾ? ಅದು ನಮಗೆ ಗೌರವ ತರುತ್ತಿದೆಯಾ? ಅಂತಹ ಮನುಸ್ಮೃತಿಯನ್ನು ಬಿಜೆಪಿಯವರು ತರುತ್ತೇನೆ ಅಂತಾರೆ, ಅದನ್ನು ಒಪ್ಪಿಕೊಳ್ತೀರಾ ಎಂದು ಪ್ರಶ್ನಿಸಿದ್ದಾರೆ.

    ಕಳೆದ ಎರಡು ವರ್ಷಗಳಿಂದ ನಾನು ವಾಲ್ಮೀಕಿ ರಾಮಾಯಣ ಅಧ್ಯಯನ ಮಾಡಿ `ರಾಮ ಮಂದಿರ ಏಕೆ ಬೇಡ’ ಎಂಬ ಪುಸ್ತಕವನ್ನು ಬರೆದಿದ್ದೇನೆ. ಅದನ್ನು ಓದಿದರೇ, ರಾಮ ಜನಸಾಮಾನ್ಯರಿಗೆ ವಿರುದ್ಧವಾಗಿದ್ದ ಎಂಬುದು ನಮಗೆ ಗೊತ್ತಾಗುತ್ತೆ. ರಾಮ ಚತುರ್ವರ್ಣದ ಪ್ರತಿನಿಧಿಯಾಗಿ ಅದನ್ನು ಉದ್ಧಾರ ಮಾಡಲು ರಾಮಾಯಣದಲ್ಲಿ ಗುರುತಿಸಿಕೊಂಡ. ಅವನು ನಿಜವಾದ ಮನುಷ್ಯನಲ್ಲ, ದೇವರಂತೂ ಅಲ್ಲವೇ ಅಲ್ಲ. ರಾಮನನ್ನು ದೇವರು ಎಂದು ವಾಲ್ಮೀಕಿ ರಾಮಾಯಣದಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ದೇವರು ಅಂತಾ ಯಾರಿಗೆ ಅನುಕೂಲವಾಯ್ತೋ, ಅಂತ ಪುರೋಹಿತರು ರಾಮ, ಕೃಷ್ಣನನ್ನು ದೇವರೆಂದು ಮಾಡಿಕೊಂಡಿದ್ದಾರೆ ಎಂದು ರಾಮನ ವಿರುದ್ಧ ಕಿಡಿಕಾರಿದರು.

    ಈ ದೇಶದಲ್ಲಿ ಶೇ.95 ರಷ್ಟು ಶೂದ್ರರಿದ್ದಾರೆ. ಅವರನ್ನೆಲ್ಲಾ ನೀವು ಗುಲಾಮರು, ಸೂಳೆಮಕ್ಕಳು ಎಂದರೆ ಒಪ್ಪುತ್ತೀರಾ? ಮನುಸ್ಮೃತಿಯ 8ನೇ ಅಧ್ಯಾಯ 415ನೇ ಶ್ಲೋಕದಲ್ಲಿ ಈ ವಿಚಾರವಿದೆ. ಜನರು ಇದನ್ನೆಲ್ಲ ತಿಳಿಯಬೇಕು ಎಂದು ಹೇಳುತ್ತಿದ್ದೇನೆ. ನನಗೆ ಗುಂಡಿಕ್ಕಿದರೂ ಇದನ್ನೆಲ್ಲ ತಿಳಿಸಿಯೇ ತಿಳಿಸುತ್ತೇನೆ. ನಾನು ಹೇಳುವುದು ವಿವಾದವಾದರು ಪರವಾಗಿಲ್ಲ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv