Tag: ಮನು ಭಾಕರ್‌

  • ಖೇಲ್‌ ರತ್ನ ಪ್ರಶಸ್ತಿಗೆ ಶಿಫಾರಸ್ಸುಗೊಳ್ಳದ ಶೂಟರ್ ಮನು ಭಾಕರ್ ಹೆಸರು; ತಂದೆ ಆಕ್ಷೇಪ

    ಖೇಲ್‌ ರತ್ನ ಪ್ರಶಸ್ತಿಗೆ ಶಿಫಾರಸ್ಸುಗೊಳ್ಳದ ಶೂಟರ್ ಮನು ಭಾಕರ್ ಹೆಸರು; ತಂದೆ ಆಕ್ಷೇಪ

    – ಒಲಿಂಪಿಕ್ಸ್‌ನಲ್ಲಿ 2 ಪದಕ ಗೆದ್ದು ಪ್ರಶಸ್ತಿಗಾಗಿ ಭಿಕ್ಷೆ ಬೇಡಿದ್ರೆ ಏನು ಪ್ರಯೋಜನ? ಎಂದು ಬೇಸರ

    ನವದೆಹಲಿ: ಮಹಿಳೆಯರ 10m ಏರ್ ಪಿಸ್ತೂಲ್ ಸ್ಪರ್ಧೆ ಮತ್ತು 10m ಪಿಸ್ತೂಲ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ (Paris Olympics) ಐತಿಹಾಸಿಕ ಸಾಧನೆ ಮಾಡಿದ್ದ ಮನು ಭಾಕರ್ (Manu Bhaker) ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ ಎಂದು ಮೂಲಗಳು ಹೇಳಿವೆ.

    ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾ-ಅಥ್ಲೀಟ್ ಪ್ರವೀಣ್ ಕುಮಾರ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು (Khel Ratna Nominations) ಮನು ಭಾಕರ್ ಅವರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸದ ಹಿನ್ನೆಲೆ ಅವರನ್ನು ಪರಿಗಣಿಸಿಲ್ಲ ಎಂದು ಕ್ರೀಡಾ ಇಲಾಖೆ ಹೇಳಿದೆ. ಇದನ್ನೂ ಓದಿ: ಹಣಕಾಸಿನ ವಂಚನೆ ತಡೆಗೆ ಆರ್‌ಬಿಐ ಅಭಿವೃದ್ಧಿಪಡಿಸಲಿದೆ AI ತಂತ್ರಜ್ಞಾನ! ಇದು ಹೇಗೆ ಕಾರ್ಯನಿರ್ವಹಿಸುತ್ತದೆ?

    ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ವಿ.ರಾಮಸುಬ್ರಮಮ್ ನೇತೃತ್ವದ 12 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ರಾಷ್ಟ್ರೀಯ ಕ್ರೀಡಾ ದಿನಾಚರಣೆಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಹೆಸರು ಶಿಫಾರಸ್ಸು ಮಾಡಲು ಸೂಚಿಸಲಾಗಿತ್ತು.

    ಸಮಿತಿಯ ನಿರ್ಧಾರಕ್ಕೆ ಮನು ಭಾಕರ್ ತಂದೆ ರಾಮಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಪ್ರಶಸ್ತಿಗಾಗಿ ಭಿಕ್ಷೆ ಬೇಡಿದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಪ್ರಶಸ್ತಿಗಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ ಸಮಿತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. ಇದನ್ನೂ ಓದಿ: Pune | ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ – ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

    ಕ್ರಿಕೆಟಿಗರು ಅರ್ಜಿ ಸಲ್ಲಿಸದಿದ್ದರೂ ಮೊಹಮ್ಮದ್ ಶಮಿ ಅವರಿಗೆ ಈ ವರ್ಷದ ಆರಂಭದಲ್ಲಿ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆದರೆ ಒಂದೇ ಒಲಂಪಿಕ್ಸ್ ನಲ್ಲಿ ಎರಡು ಕಂಚು ಗೆದ್ದರೂ ನಮ್ಮನ್ನು ಪರಿಗಣಿಸಿಲ್ಲ. ಪ್ರಶಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿ ನಿರ್ಧರಿಸುತ್ತಿದ್ದಾರೆ, ಮತ್ತು ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ನೀಡದೆ ಮೌನವಾಗಿದ್ದಾರೆ ನನಗೆ ಅರ್ಥವಾಗುತ್ತಿಲ್ಲ, ನೀವು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ರೀತಿ ಇದೇನಾ? ಎಂದು ಕೇಳಿದ್ದಾರೆ. ಇದನ್ನೂ ಓದಿ: Uttar Pradesh | ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌

  • ನೀರಜ್‌ ಚೋಪ್ರಾ – ಮನು ಭಾಕರ್‌ ಮದುವೆ ವದಂತಿ: ಎಲ್ಲವೂ ಆಧಾರ ರಹಿತ ಎಂದ ಮನು ಭಾಕರ್‌

    ನೀರಜ್‌ ಚೋಪ್ರಾ – ಮನು ಭಾಕರ್‌ ಮದುವೆ ವದಂತಿ: ಎಲ್ಲವೂ ಆಧಾರ ರಹಿತ ಎಂದ ಮನು ಭಾಕರ್‌

    ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ ತಾನು ನಿಕಟವಾಗಿದ್ದೇನೆ ಎಂಬ ವದಂತಿಯನ್ನು ಶೂಟಿಂಗ್ ಸ್ಟಾರ್ ಮನು ಭಾಕರ್ ಅಲ್ಲಗಳೆದಿದ್ದಾರೆ. ಕೆಲ ದಿನಗಳ ಹಿಂದೆ ಪ್ಯಾರಿಸ್‌ನಲ್ಲಿ ನೀರಜ್ ಚೋಪ್ರಾ (Neeraj Chopra) ಅವರೊಂದಿಗೆ ಮನು ಭಾಕರ್‌ (Manu Bhaker) ಮಾತನಾಡುತ್ತಿರುವ ದೃಶ್ಯಗಳನ್ನು ಉಲ್ಲೇಖಿಸಿ ಇಬ್ಬರೂ ಅನ್ಯೋನ್ಯವಾಗಿದ್ದಾರೆ. ಇಬ್ಬರೂ ಮದುವೆಯಾಗ್ತಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಡಿತ್ತು. ಇದನ್ನು ಮನು ಭಾಕರ್ ತಂದೆ ನಿರಾಕರಿಸಿದ್ದರು.

    ವದಂತಿ ಶುರುವಾಗಿದ್ದು ಹೇಗೆ..?
    ನೀರಜ್ ಚೋಪ್ರಾ ಆತ್ಮೀಯ ಗೆಳೆಯನಾಗಿದ್ದು, ಈ ರೀತಿಯ ಕ್ರೀಡಾಕೂಟಗಳಲ್ಲಿ ಮಾತ್ರ ಅವರೊಂದಿಗೆ ಮಾತನಾಡಲು ಅವಕಾಶ ಸಿಗುತ್ತದೆ ಎಂದು ಮನು ಭಾಕರ್ ವಿವರಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನ ಸಮಾರೋಪ ಸಮಾರಂಭಕ್ಕೂ ಮುನ್ನ ಇಬ್ಬರೂ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ಮನು ಭಾಕರ್‌ ತಾಯಿಯೂ ನೀರಜ್‌ ಚೋಪ್ರಾ ಜೊತೆ ಕೈ ಹಿಡಿದು ಆತ್ಮೀಯವಾಗಿ ಮಾತನಾಡಿದ ವೀಡಿಯೋ ವೈರಲ್‌ ಆಗಿತ್ತು. ಇದನ್ನೂ ಓದಿ: ವಿನೇಶ್‌ ಫೋಗಟ್‌ ಅರ್ಜಿ ವಜಾ – ಸಿಗಲ್ಲ ಬೆಳ್ಳಿ ಪದಕ

    ಕ್ರೀಡಾಕೂಟಗಳಲ್ಲಿ ಮಾತ್ರ ಭೇಟಿ!:
    ನನಗೆ ಈ ವೀಡಿಯೋಗಳ ಬಗ್ಗೆ ಗೊತ್ತಿಲ್ಲ. 2018 ರಿಂದ ನಾವು ಇಂತಹ ಕ್ರೀಡಾಕೂಡ ನಡೆಯುವ ಸ್ಥಳಗಳಲ್ಲಿ ಭೇಟಿಯಾಗುತ್ತೇವೆ. ಅದನ್ನು ಹೊರತುಪಡಿಸಿ ನಾವು ಎಲ್ಲೂ ಭೇಟಿಯಾಗಲ್ಲ. ಈ ರೀತಿಯ ಪಂದ್ಯಾವಳಿಗಳಲ್ಲಿ ನೋಡಿದಾಗ ನಾವು ಮಾತನಾಡುತ್ತೇವೆ. ಅದನ್ನು ಬಿಟ್ಟರೆ ಈ ವಿಚಾರದಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಮನು ಭಾಕರ್ ಸ್ಪಷ್ಟನೆ ನೀಡಿದ್ದಾರೆ.

    ಇನ್ನೂ ಮದುವೆ ವಯಸ್ಸಾಗಿಲ್ಲ:
    ಇದಕ್ಕೂ ಮುನ್ನ ಮನು ಭಾಕರ್ ಅವರ ತಂದೆ ಕಿಶನ್ ಭಾಕರ್, 22 ವರ್ಷದ ಮನು ಭಾಕರ್ ಗೆ ಇನ್ನೂ ಮದುವೆಯಾಗುವ ವಯಸ್ಸಾಗಿಲ್ಲ. ಮನು ಇನ್ನೂ ತುಂಬಾ ಚಿಕ್ಕವಳು. ಈ ಹಂತದಲ್ಲಿ ಮದುವೆ ಬಗ್ಗೆ ಯೋಚಿಸಿಯೂ ಇಲ್ಲ. ಮನುವಿನ ತಾಯಿ ಕೂಡಾ ನೀರಜ್ ಚೋಪ್ರಾರನ್ನು ಮಗನಂತೆ ಕಾಣುತ್ತಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್‌!

  • ಪದಕ ಗೆದ್ದು ತಾಯ್ನಾಡಿಗೆ ಮರಳಿದ ಮನು ಭಾಕರ್‌ಗೆ ಹೂಮಳೆಯ ಸ್ವಾಗತ

    ಪದಕ ಗೆದ್ದು ತಾಯ್ನಾಡಿಗೆ ಮರಳಿದ ಮನು ಭಾಕರ್‌ಗೆ ಹೂಮಳೆಯ ಸ್ವಾಗತ

    ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕ (Bronze Medals) ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಮನು ಭಾಕರ್‌ಗೆ (Manu Bhaker) ತವರಿನಲ್ಲಿ ಬುಧವಾರ (ಆಗಸ್ಟ್ 7) ಅದ್ಧೂರಿ ಸ್ವಾಗತ ದೊರೆತಿದೆ.

    ಏರ್‌ ಇಂಡಿಯಾ ನೇರ ವಿಮಾನದ (ವಿಮಾನ ಸಂಖ್ಯೆ – AI142) ಮೂಲಕ ಬುಧವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಬಂದ ವಿಮಾನವು ಬೆಳಗ್ಗೆ 9:20ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಯಿತು. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಮನು ಭಾಕರ್‌ಗಾಗಿ ಪೋಷಕರಾದ ರಾಮ್‌ ಕಿಶನ್‌ ಹಾಗೂ ಸುಮೇಧಾ ದಂಪತಿ, ಮನು ಭಾಕರ್‌ ತವರು ರಾಜ್ಯ ಉತ್ತರಾಖಂಡದ ಅಧಿಕಾರಿಗಳು, ಕ್ರೀಡಾಭಿಮಾನಿಗಳು, ಕೋಚ್‌ ಜಸ್ವಾಲ್‌ ರಾಣಾ ಸೇರಿದಂತೆ ನೂರಾರು ಮಂದಿ ಮನು ಸ್ವಾಗತಿಸಲು ಕಾದು ಕುಳಿತಿದ್ದರು. ಮನು ಏರ್‌ಪೋರ್ಟ್‌ನಿಂದ (Delhi Airport) ಹೊರಬರುತ್ತಿದ್ದಂತೆ 200 ರೂ. ಹಾಗೂ 50 ರೂ.ಗಳ ನೋಟುಗಳ ಹಾರ ಹಾಕಿ ಸ್ವಾಗತಿಸಿದರು, ಅವರ ಮೇಲೆ ಹೂಮಳೆ ಸುರಿಸಿದರು. ಹಾಡು, ನೃತ್ಯ, ತಮಟೆ ವಾದ್ಯಗಳೊಂದಿಗೆ ಭಾಕರ್‌ ಆಗಮನವನ್ನ ಅದ್ಧೂರಿಯಾಗಿ ಅಭಿಮಾನಿಗಳು ಸಂಭ್ರಮಿಸಿದರು. ಭಾಕರ್‌ ಹಾಗೂ ರಾಣಾ ಅವರ ಚಿತ್ರಗಳಿದ್ದ ಪೋಸ್ಟರ್‌ ಹಿಡಿದು ಜೈಕಾರ ಕೂಗಿದರು. ಇದೇ ವೇಳೆ ಕೆಲವರು ವಿಶೇಷ ಉಡುಗೊರೆ ನೀಡಿ ಆಟೋಗ್ರಾಫ್‌ ಸಹ ಪಡೆದರು.

    22 ವರ್ಷ ವಯಸ್ಸಿನ ಮನು ಭಾಕರ್‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ವಿಶೇಷ ದಾಖಲೆ ಬರೆದರು. ಮಹಿಳೆಯರ ಸಿಂಗಲ್ಸ್‌ನ 10 ಮೀಟರ್ ಏರ್‌ ಪಿಸ್ತೂಲ್ (Air Pistol) ಹಾಗೂ 10 ಮೀಟರ್‌ ಏರ್‌ಪಿಸ್ತೂಲ್‌ ಮಿಶ್ರ ತಂಡಗಳ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆಗೆ ಪಾತ್ರರಾದರು. ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ

    ಶನಿವಾರ ಮತ್ತೆ ಪ್ಯಾರಿಸ್‌ಗೆ ತೆರಳಲಿರುವ ಮನು ಭಾಕರ್‌ ಭಾನುವಾರ (ಆ.11) ನಡೆಯಲಿರುವ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: Paris Olympics| ಭಾರತಕ್ಕೆ ಆಘಾತ – ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ

  • ಒಲಿಂಪಿಕ್ಸ್‌ ಪದಕ ಗೆದ್ದ ಬೆನ್ನಲ್ಲೇ ಮನು ಭಾಕರ್‌ಗೆ ಭರ್ಜರಿ ಆಫರ್‌ – ಬ್ರ್ಯಾಂಡ್‌ ಮೌಲ್ಯ 6 ಪಟ್ಟು ಹೆಚ್ಚಳ

    ಒಲಿಂಪಿಕ್ಸ್‌ ಪದಕ ಗೆದ್ದ ಬೆನ್ನಲ್ಲೇ ಮನು ಭಾಕರ್‌ಗೆ ಭರ್ಜರಿ ಆಫರ್‌ – ಬ್ರ್ಯಾಂಡ್‌ ಮೌಲ್ಯ 6 ಪಟ್ಟು ಹೆಚ್ಚಳ

    ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympic 2024) ಎರಡು ಪದಕ ಗೆದ್ದು ದಾಖಲೆ ಬರೆದಿರುವ ಭಾರತದ ಮನು ಭಾಕರ್‌ಗೆ (Manu Bhaker) ಈಗ ಜಾಹೀರಾತು ಸಂಸ್ಥೆಗಳಿಂದ ಭರ್ಜರಿ ಆಫರ್‌ಗಳು ಬರುತ್ತಿವೆ ಎಂದು ವರದಿಯಾಗಿದೆ.

    ಮನು ಭಾಕರ್‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವಾಗಲೇ ಸುಮಾರು 40 ಜಾಹೀರಾತು ಕಂಪನಿಗಳು (Advertising Companies) ಅವರನ್ನು ಸಂಪರ್ಕಿಸಿವೆ ಕೋಟಿ ಕೋಟಿ ರೂ. ಮೌಲ್ಯದ ಒಂದೆರಡು ಒಪ್ಪಂದಗಳು ಸಹ ಮುಗಿದಿವೆ. ಪ್ಯಾರಿಸ್‌ ಒಲಿಂಪಿಕ್ಸ್‌ಗೂ ಮುನ್ನ ಮನು ಭಾಕರ್‌ ಅವರ ಬ್ರ್ಯಾಂಡ್‌ ಮೌಲ್ಯವು 20-25 ಲಕ್ಷ ರೂ.ನಷ್ಟಿತ್ತು. ಆದರೀಗ 6-7 ಪಟ್ಟು ಮೌಲ್ಯ ಹೆಚ್ಚಾಗಿದೆ ಎಂದು ಹೇಳಲಾಗಿದೆ.

    22 ವರ್ಷ ವಯಸ್ಸಿನಲ್ಲಿ ಮನು ಭಾಕರ್‌ ಅವರಿಗೆ ಸದ್ಯ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಒಲಿದಿದ್ದು, 3ನೇ ಪದಕ ಕೊಂಚದಲ್ಲೇ ಕೈತಪ್ಪಿದೆ. ಹೀಗಿರುವಾಗಲೇ ಕಳೆದ 2-3 ದಿನಗಳಲ್ಲಿ ಸುಮಾರು 40 ಬ್ರ್ಯಾಂಡ್‌ ಕಂಪನಿಗಳು ಅವರನ್ನ ಸಂಪರ್ಕಿಸಿ ಅನುಮೋದನೆ ಕೇಳಿವೆ. ಒಂದೆರಡು ಕಂಪನಿಗಳ ಒಪ್ಪಂದಗಳು ಮುಕ್ತಾಯಗೊಂಡಿದ್ದು, ಉಳಿದ ಕಂಪನಿಗಳು ಅವರ ದೀರ್ಘಾವಧಿ ಹಾಗೂ ಅಲ್ಪಾವಧಿ ಕಾಂಟ್ರ್ಯಾಕ್ಟ್‌ಗೆ ಅನುಮೋದನೆ ಪಡೆಯಲು ಕಾಯುತ್ತಿವೆ ಎಂದು ಸ್ಫೋರ್ಟ್ಸ್‌ & ಎಂಟರ್‌ಟೈನ್‌ಮೆಂಟ್ ಕಂಪನಿ ತಿಳಿಸಿರುವುದಾಗಿ ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: Paris Olympics | ಭಾರತಕ್ಕೆ ಮೂರನೇ ಪದಕ- ಕಂಚು ಗೆದ್ದ ಸ್ವಪ್ನಿಲ್

    ಈ ಹಿಂದೆಯು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಬಳಿಕ ನೀರಜ್‌ ಚೋಪ್ರಾ ಅವರ ಬ್ರ್ಯಾಂಡ್‌ ಮೌಲ್ಯ ಹೆಚ್ಚಾಗಿತ್ತು. ಅದೇ ರೀತಿ ಮನು ಭಾಕರ್‌ ಪ್ರಸಕ್ತ ವರ್ಷದಲ್ಲಿ ದೇಶದ ಬ್ರ್ಯಾಂಡ್‌ ಆಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಮೋದಿ ಕರೆ – ಗಣ್ಯರಿಂದ ಅಭಿನಂದನೆಗಳ ಮಹಾಪೂರ

    ಕೈ ತಪ್ಪಿದ ಹ್ಯಾಟ್ರಿಕ್‌ ಸಾಧನೆ:
    ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದು ದಾಖಲೆ ಬರೆದಿದ್ದ ಭಾರತದ ಮನು ಭಾಕರ್ ಅವರಿಗೆ ಮೂರನೇ ಪದಕ ಜಸ್ಟ್‌ ಮಿಸ್‌ ಆಯಿತು. 25 ಮೀ ಸ್ಫೋರ್ಟ್ಸ್‌ ಪಿಸ್ತೂಲ್ ವಿಭಾಗದ ಫೈನಲ್‌ನಲ್ಲಿ 8 ಸ್ಪರ್ಧಿಗಳಿದ್ದರು. ಉತ್ತಮ ಪ್ರದರ್ಶನ ನೀಡಿದ ಮನು ಭಾಕರ್‌ ಅಂತಿಮವಾಗಿ 4ನೇ ಸ್ಥಾನ ಪಡೆದರು. 3ನೇ ಸ್ಪರ್ಧಿಯೊಂದಿಗೆ ಜಂಟಿಯಾಗಿ 28 ಅಂಕ ಪಡೆದರೂ ಹಂಗೇರಿ ಸ್ಪರ್ಧಿ ಈ ಹಿಂದಿನ ಸುತ್ತಿನಲ್ಲಿ ಮುನ್ನಡೆಯಲ್ಲಿದ್ದ ಕಾರಣ ಮನು ಭಾಕರ್‌ ಅವರ 3ನೇ ಪದಕ ಗೆಲ್ಲುವ ಕನಸು ಭಗ್ನಗೊಂಡಿತು. 22 ವರ್ಷದ ಮನು ಭಾಕರ್‌ ಈ ಒಲಿಂಪಿಕ್ಸ್‌ನಲ್ಲಿ ಮನು 10 ಮೀ ಏರ್ ಪಿಸ್ತೂಲ್ ಮತ್ತು 10 ಮೀ ಏರ್ ಪಿಸ್ತೂಲ್‌ ಮಿಶ್ರ (ಸರಬ್ಜೋತ್‌ಸಿಂಗ್‌ ಜೊತೆಗೂಡಿ) ತಂಡ ವಿಭಾಗಗಳಲ್ಲಿ ಕಂಚಿನ ಪದಕಗಳನ್ನು ಗೆದ್ದಿದ್ದರು.  ಇದನ್ನೂ ಓದಿ: IPL 2025: ಮುಂದಿನ ಐಪಿಎಲ್‌ನಲ್ಲೂ ಮಹಿ ಕಣಕ್ಕಿಳಿಯೋದು ಫಿಕ್ಸ್‌?

  • ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ

    ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ

    – ನಮ್ಮ ಅಥ್ಲೀಟ್‌ಗಳಿಂದ ಭಾರತದ ಚೈತನ್ಯ ಬೆಳಗುತ್ತಿದೆ

    ಪ್ಯಾರಿಸ್/ಬೆಂಗಳೂರು: ಒಲಿಂಪಿಕ್ಸ್‌ನಲ್ಲಿ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

    ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಈ ಕುರಿತು ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ಎಕ್ಸ್‌ನಲ್ಲಿ ಮೋದಿ ಸಂದೇಶ:
    ನಾವು ಹೆಮ್ಮೆ ಪಡುವುದನ್ನು ಮುಂದುವರಿಸಿದ ನಮ್ಮ ಶೂಟರ್‌ಗಳಿಗೆ ಅಭಿನಂದನೆಗಳು. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸರಬ್ಜೋತ್ ಸಿಂಗ್ ಹಾಗೂ ಮನು ಭಾಕರ್ ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ. ಮನು ಅವರಿಗೆ, ಇದು ಅವರ ಸತತ ಎರಡನೇ ಒಲಿಂಪಿಕ್ ಪದಕವಾಗಿದ್ದು, ಅವರ ಸ್ಥಿರ ಶ್ರೇಷ್ಠತೆ ಮತ್ತು ಸಮರ್ಪಣೆಯನ್ನು ಪ್ರದರ್ಶಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಸಂದೇಶ:
    ನಮ್ಮ ಅಥ್ಲೀಟ್‌ಗಳಿಂದ ಭಾರತದ ಚೈತನ್ಯ ಬೆಳಗುತ್ತಿದೆ. ಒಲಿಂಪಿಕ್ಸ್‌ನಲ್ಲಿ 10 ಮೀ. ಏರ್ ಪಿಸ್ತೂಲ್‌ನಲ್ಲಿಕಂಚಿನ ಪದಕ ಬಾಚಿಕೊಂಡ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಇಡೀ ಭಾರತ ಈ ಸ್ಫೂರ್ತಿದಾಯಕ ಪ್ರದರ್ಶನ ಮತ್ತು ಸಾಧನೆಯನ್ನು ಸಂಭ್ರಮಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    ಮಹಿಳೆಯರ 10 ಮೀಟರ್ ಏರ್‌ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದ ಪದಕಗಳ ಖಾತೆ ತೆರೆದ ಮನು ಭಾಕರ್, ಈಗ ಮಿಶ್ರ ವಿಭಾಗದಲ್ಲೂ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  • ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ – ಶೂಟಿಂಗ್‌ನಲ್ಲಿ ಭಾರತಕ್ಕೆ ಕಂಚು

    ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ – ಶೂಟಿಂಗ್‌ನಲ್ಲಿ ಭಾರತಕ್ಕೆ ಕಂಚು

    ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಮನು ಭಾಕರ್‌ (Manu Bhaker) ಮತ್ತು ಸರಬ್ಜೋತ್ ಸಿಂಗ್‌ (Sarabjot Singh)  ಕಂಚಿನ ಪದಕ ಗೆದ್ದಿದ್ದಾರೆ.

    ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್‌ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್‌ ಪದಕಕ್ಕೆ ಮುತ್ತಿಟ್ಟಿದ್ದಾರೆ.  ಈ ಮೂಲಕ ಒಂದೇ ಒಲಿಂಪಿಕ್ಸ್‌ (Olympics Games)  ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ  ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

    ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2 ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.

  • ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಮೋದಿ ಕರೆ – ಗಣ್ಯರಿಂದ ಅಭಿನಂದನೆಗಳ ಮಹಾಪೂರ

    ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮನು ಭಾಕರ್‌ಗೆ ಮೋದಿ ಕರೆ – ಗಣ್ಯರಿಂದ ಅಭಿನಂದನೆಗಳ ಮಹಾಪೂರ

    – ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಯ್ತು: ಮನು
    – ಮೊದಲ ಪದಕದ ಗೆಲುವನ್ನು ದೇಶಕ್ಕೆ ಅರ್ಪಿಸಿದ ಶೂಟರ್‌

    ಪ್ಯಾರಿಸ್‌: 2024ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತಕ್ಕಾಗಿ ಮೊದಲ ಪದಕ ತಂದುಕೊಟ್ಟ ಮಹಿಳಾ ಶೂಟರ್‌ ಮನು ಭಾಕರ್‌ಗೆ (Manu Bhaker) ಪ್ರಧಾನಿ ಮೋದಿ (Narendra Modi) ಅವರು ಖುದ್ದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಇದು, ಐತಿಹಾಸಿಕ ಪದಕವಾಗಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) ಮೊದಲ, ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಇದು ನಂಬಲಸಾಧ್ಯವಾದ ಸಾಧನೆ ಎಂದೂ ಎಕ್ಸ್‌ ಖಾತೆಯಲ್ಲಿ ಶ್ಲಾಘಿಸಿದ್ದಾರೆ.

    ಅಷ್ಟೇ ಅಲ್ಲದೇ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ, ಕೇಂದ್ರ ಸಚಿವರಾದ ಅಮಿತ್‌ ಶಾ, ಕಿರಣ್‌ ರಿಜಿಜು, ಟೀಂ ಇಂಡಿಯಾ ಮುಖ್ಯಕೋಚ್‌ ಗೌತಮ್‌ ಗಂಭೀರ್‌, ಮಾಜಿ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌, ಮಿತಾಲಿ ರಾಜ್‌, ವೀರೇಂದ್ರ ಸೆಹ್ವಾಗ್‌, ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಉದ್ಯಮಿ ಆನಂದ್‌ ಮಹಿಂದ್ರಾ, ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

    ಈ ಹಿಂದೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮನು ಭಾಕರ್‌ ಅವರಿಗೆ ಸ್ಪರ್ಧೆಯ ವೇಳೆ ಪಿಸ್ತೂಲ್ ಕೈಕೊಟ್ಟಿದ್ದ ಪರಿಣಾಮ 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಪ್ರಸಕ್ತ ಟೂರ್ನಿಯಲ್ಲಿ ಫೈನಲ್‌ ತಲುಪುವ ಮೂಲಕ ವಿಶೇಷ ಸಾಧನೆ ಮಾಡಿದ್ದ ಮನು ಭಾಕರ್‌ ಭಾನುವಾರ ಪದಕ ಗೆದ್ದುಕೊಂಡಿದ್ದಾರೆ.

    ಭಾನುವಾರ ನಡೆದ ಮಹಿಳೆಯರ ಏರ್‌ಪಿಸ್ತೂಲ್‌ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್‌ ಯೇಜಿ 241.3 ಅಂಕ ಪಡೆದರೆ, 22 ಶಾಟ್‌ ಗಳ ಬಳಿಕ ಮನು ಭಾಕರ್‌ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಶೂಟಿಂಗ್‌ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್‌ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ.

    ಮನು ಭಾಕರ್‌ ಫಸ್ಟ್‌ ರಿಯಾಕ್ಷನ್‌ ಏನು?
    ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ ಬಳಿಕ ಮಾತನಾಡಿದ ಮನು ಭಾಕರ್, ನಾನು ಭಗವದ್ಗೀತೆ ಓದಿದ್ದು, ಪದಕ ಗೆಲ್ಲಲು ನೆರವಾಯಿತು ಎಂದು ಹೇಳಿದ್ದಾರೆ. ನಾನು ಸಾಕಷ್ಟು ಬಾರಿ ಭಗವದ್ಗೀತೆ ಓದಿದ್ದೇನೆ. ಅದರಲ್ಲಿ ಭಗವಂತ ಶ್ರೀಕೃಷ್ಣನು, ನಿನ್ನ ಕೆಲಸವನ್ನು ನೀನು ಮಾಡು, ಅದರಿಂದ ಬರುವ ಫಲಿತಾಂಶದ ಬಗ್ಗೆ ಆಲೋಚಿಸಬೇಡʼ ಎನ್ನುವ ಮಾತು ನನಗೆ ಸ್ಫೂರ್ತಿಯಾಯಿತು ಎಂದು ಭಾಕರ್‌ ಹೇಳಿದ್ದಾರೆ.

    ಅಲ್ಲದೇ ಈ ಪದಕದ ಗೆಲುವು ನನಗಷ್ಟೇ ಅಲ್ಲ ನನ್ನನ್ನು ಬೆಂಬಲಿಸಿದ ಪ್ರತಿಯೊಬ್ಬರ ಕನಸು ನನಸಾಗಿದೆ. ಎನ್‌ಆರ್‌ಎಐ, ಎಸ್‌ಎಐ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ತರಬೇತುದಾರ ಜಸ್ಪಾಲ್ ರಾಣಾ ಸರ್, ಹರಿಯಾಣ ಸರ್ಕಾರ ಎಲ್ಲರಿಗೂ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಅವರ ಅಸಾಧಾರಣ ಬೆಂಬಲ ಮತ್ತು ಪ್ರೀತಿಗಾಗಿ ನನಗಿಂದು ಗೆಲುವು ಸಿಕ್ಕಿದೆ. ಈ ವಿಜಯವನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 10 ಮೀಟರ್‌ ಏರ್‌ ಪಿಸ್ತೂಲ್‌ (Women’s Air Rifle final) ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಮನು ಭಾಕರ್‌ (Manu Bhaker) ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದನ್ನೂ ಓದಿ: Paris Olympics 2024 | ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?

    ಶನಿವಾರ ಫೈನಲ್‌ ಪ್ರವೇಶಿಸಿದ್ದ 22 ವರ್ಷ ವಯಸ್ಸಿನ ಮನು ಭಾಕರ್‌ ಮೂರನೇ ದಿನವಾದ ಭಾನುವಾರ (ಜು.28) ಅಂತಿಮ ಸುತ್ತಿನಲ್ಲಿ 3ನೇ ಸ್ಥಾನ ಪಡೆದುಕೊಂಡರು. ಈ ಮೂಲಕ ಶೂಟಿಂಗ್‌ನಲ್ಲಿ ಭಾರತದ ಪರ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 2004ರಲ್ಲಿ ಅಥೆನ್ಸ್‌ನಲ್ಲಿ ನಡೆದ 10 ಮೀಟರ್‌ ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಸುಮಾ ಶಿರೂರ್‌ ಕೊನೆಯ ಬಾರಿಗೆ ಫೈನಲ್‌ ತಲುಪಿದ್ದರು. ಇದು ಈವರೆಗಿನ ಸಾಧನೆಯಾಗಿತ್ತು. ಇದನ್ನೂ ಓದಿ: Paris Olympics 2024: ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

    ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್‌ ಯೇಜಿ 241.3 ಅಂಕ ಪಡೆದರೆ, 22 ಶಾಟ್‌ ಗಳ ಬಳಿಕ ಮನು ಭಾಕರ್‌ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಇದರೊಂದಿಗೆ ಶೂಟಿಂಗ್‌ ವಿಭಾಗದಲ್ಲಿ 12 ವರ್ಷಗಳ ಒಲಿಂಪಿಕ್ಸ್‌ ಪದಕದ ಬರವನ್ನು ನೀಗಿಸಿದರು. ಸದ್ಯ ಒಂದು ಕಂಚಿನ ಪದಕದೊಂದಿಗೆ ಪದಕ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ