Tag: ಮನು ಸಿಂಘ್ವಿ

  • ಕೇಜ್ರಿವಾಲ್ ಬಂಧನದ ಅಡಿಪಾಯವೇ ದೋಷ ಪೂರಿತ, ಕೂಡಲೇ ಬಿಡುಗಡೆ ಮಾಡಿ – ಹೈಕೋರ್ಟ್ ಮುಂದೆ ಸಿಂಘ್ವಿ ವಾದ

    ಕೇಜ್ರಿವಾಲ್ ಬಂಧನದ ಅಡಿಪಾಯವೇ ದೋಷ ಪೂರಿತ, ಕೂಡಲೇ ಬಿಡುಗಡೆ ಮಾಡಿ – ಹೈಕೋರ್ಟ್ ಮುಂದೆ ಸಿಂಘ್ವಿ ವಾದ

    ನವದೆಹಲಿ: ಚುನಾವಣೆ ಹೊತ್ತಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಲಾಗಿದೆ. ಬಂಧನದ ಈ ಸಮಯ ನ್ಯಾಯ ಸಮ್ಮತ ಚುನಾವಣೆಯನ್ನು ಸೃಷ್ಟಿಸುವುದಿಲ್ಲ. ಈ ಬಂಧನದ ಅಡಿಪಾಯವೇ ದೋಷ ಪೂರಿತ ಎಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ (Abhishek Singhvi) ವಾದಿಸಿದ್ದಾರೆ.

    ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಸಿಂಘ್ವಿ, ನನ್ನ ಕಕ್ಷಿದಾರರ ಬಂಧನದ ಬುನಾದಿ ದೋಷಪೂರಿತವಾಗಿರುವ ಕಾರಣ ಅವರನ್ನು ಬಿಡುಗಡೆ ಮಾಡಬೇಕು. ಇದು ನನ್ನ ಪ್ರಾರ್ಥನೆ. ಇದು ಕ್ರಿಮಿನಲ್ ವಿಷಯವಾಗಿದ್ದರೂ ಕಾನೂನು ಮತ್ತು ಮೂಲಭೂತ ರಚನೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ಮುನಿಯಪ್ಪ ಅಳಿಯನಿಗೆ ಕೋಲಾರ ಟಿಕೆಟ್ ಕೊಟ್ಟರೆ ರಾಜೀನಾಮೆ – ‘ಕೈ’ ಎಂಎಲ್‌ಸಿ, ಶಾಸಕರಿಂದ ಬೆದರಿಕೆ

    ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಒಬ್ಬ ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಲಾಗಿದೆ. ವಿಚಾರಣೆಯಲ್ಲಿ ಯಾವುದೇ ವಸ್ತು ವಿಷಯವಿಲ್ಲ. ಬಂಧನದ ಉದ್ದೇಶವು ನಾನ್-ಲೆವೆಲ್ ಪ್ಲೇಯಿಂಗ್ ಫೀಲ್ಡ್ ಅನ್ನು ರಚಿಸುವುದಾಗಿದೆ. ಈ ಮೂಲಕ ಸಂವಿಧಾನದ ಮೂಲಭೂತ ರಚನೆಯನ್ನು ಹೊಡೆಯುತ್ತಿದ್ದಾರೆ. ಸೆಕ್ಷನ್ 19ರ ಅಡಿಯಲ್ಲಿ ಬಂಧನದ ಮಿತಿಯನ್ನು ಇರಿಸಲಾಗಿದೆ. ಇದಕ್ಕೆ ಕಾರಣ ಸೆಕ್ಷನ್ 45ರ ಅಡಿಯಲ್ಲಿ ಜಾಮೀನು ಪಡೆಯುವುದು ತುಂಬಾ ಕಷ್ಟಕರವಾಗಿದೆ ಎಂದು ಸಿಂಘ್ವಿ ಹೇಳಿದರು. ಇದನ್ನೂ ಓದಿ: ಕೋರ್ಟ್ ಆವರಣದಲ್ಲಿ ಪ್ರತಿಭಟನೆ ಗಂಡಾಂತರ ಆಹ್ವಾನಿಸಿದಂತೆ: ಆಪ್‌ಗೆ ದೆಹಲಿ ಹೈಕೋರ್ಟ್ ಎಚ್ಚರಿಕೆ

    ಕೇಜ್ರಿವಾಲ್ ಪರ ವಾದ ಮಂಡಿಸಿದ ಮತ್ತೊರ್ವ ಹಿರಿಯ ವಕೀಲ ಅಮಿತ್ ದೇಸಾಯಿ, ಪ್ರಕರಣದಲ್ಲಿ ಸೆಕ್ಷನ್ 19 ಅನ್ನು ಸರಿಯಾಗಿ ಪಾಲಿಸಿಲ್ಲ. ಇದು ಪ್ರಾಥಮಿಕ ಅಂಶವಾಗಿದೆ. ಬಂಧನದ ಸಮಯದಲ್ಲಿ ಅರ್ಜಿದಾರರು ಸೆಕ್ಷನ್ 3ರ ಅಡಿಯಲ್ಲಿ ಸೂಚಿಸಲಾದ ಚಟುವಟಿಕೆಗಳನ್ನು ಮಾಡುವಲ್ಲಿ ತಪ್ಪಿತಸ್ಥರು ಎಂದು ಸ್ಥಾಪಿಸಲು ಡಿಒಇ (Department Of Expenditure) ವಿಫಲವಾಗಿದೆ. ಯಾವುದೇ ವಿಚಾರಣೆಯಿಲ್ಲದೆ ಅರ್ಜಿದಾರರನ್ನು ಬಂಧಿಸಲಾಗಿದೆ. ಇದು ರಾಜಕೀಯ ಸೇಡನ್ನು ಪ್ರತಿಬಿಂಬಿಸುತ್ತದೆ ಎಂದು ವಾದಿಸಿದರು. ಇದನ್ನೂ ಓದಿ: ಜೆಪಿ ನಡ್ಡಾ ಭೇಟಿ ಮಾಡಿ ಚರ್ಚಿಸಿದ ನಟಿ ಕಂಗನಾ

    ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಸಲ್ಲಿಸಲು ಕಾಲಾವಕಾಶ ನೀಡುವಂತೆ ಇ.ಡಿ ಹೈಕೋರ್ಟ್‌ಗೆ ಮನವಿ ಮಾಡಿತು. ಏಜೆನ್ಸಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಅರ್ಜಿ ಮಂಗಳವಾರವಷ್ಟೇ ಲಭ್ಯವಾಗಿದೆ. ಇ.ಡಿ ನಿಲುವನ್ನು ದಾಖಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೇಳಿದರು. ಮಧ್ಯಂತರ ಪರಿಹಾರಕ್ಕೂ ಸ್ಪಂದಿಸಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ:  ಅಬಕಾರಿ ನೀತಿ ಹಗರಣದ ಹಣ ಎಲ್ಲಿದೆ? – ಕೇಜ್ರಿವಾಲ್ ಬಹಿರಂಗಪಡಿಸ್ತಾರೆ – ಸುನೀತಾ ಕೇಜ್ರಿವಾಲ್

  • ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    – ಸರ್ಕಾರಕ್ಕೆ ಪ್ರತಿಪಕ್ಷಗಳಿಂದ ಸವಾಲು

    ನವದೆಹಲಿ: ಇನ್ನುಮುಂದೆ ಲೋಕಸಭೆ, ರಾಜ್ಯಸಭೆ ಅಧಿವೇಶನಗಳಲ್ಲಿ ಜುಮ್ಲಾಜೀವಿ, ಬಾಲ ಬುದ್ಧಿ, ಕೋವಿಡ್ ಸ್ಪ್ರೆಡರ್‌, ನಾಚಿಕೆಗೇಡು, ದ್ರೋಹ, ಭ್ರಷ್ಟ, ಅಸಮರ್ಥ, ಸರ್ವಾಧಿಕಾರಿ ಅಂತಹ ಅಸಂಸದೀಯ ಪದಗಳನ್ನು ಬಳಸುವಂತಿಲ್ಲ ಎಂದು ಲೋಕಸಭೆಯ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಕಿರು ಪುಸ್ತಕದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

    ಇದೇ ಜುಲೈ 18ರಿಂದ ಪ್ರಾರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುಂಚಿತವಾಗಿ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್

    ಲೋಕಸಭೆಯಲ್ಲಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 380ರ ಪ್ರಕಾರ, ಕಲಾಪದ ಸಂದರ್ಭದಲ್ಲಿ ಅಸಂಸದೀಯ ಪದಗಳನ್ನು ಬಳಸಿದರೆ ಸ್ಪೀಕರ್, ಅವರನ್ನು ಕಲಾಪದಿಂದ ಹೊರ ಹಾಕುತ್ತಾರೆ. ಈ ಬಗ್ಗೆ ಬಿಡುಗಡೆಯಾಗಿರುವ ಟಿಪ್ಪಣಿಯಲ್ಲಿ ಸೇರಿಸಲಾಗಿದೆ. ರಾಜ್ಯಸಭಾ ಅಧ್ಯಕ್ಷರು ಅಥವಾ ಲೋಕಸಭಾ ಸ್ಪೀಕರ್ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡುವ ಮಾತುಗಳನ್ನು ಗಮನಿಸುತ್ತಾರೆ. ಕೆಲವೊಮ್ಮೆ ಸಭಾಪತಿಯವರು ಅಸಂಸದೀಯ ಪದಗಳನ್ನು ಕಡತದಿಂದ ತೆಗೆದು ಹಾಕುತ್ತಾರೆ. ಆದರೆ ಸಭಾಪತಿಗೆ ಯಾವುದೇ ಪದಗಳ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಲಾಗಿದೆ.

    ಸರ್ವಾಧಿಕಾರಿ, ಶಕುನಿ, ತಾನಾಶಾಹಿ, ಜೈಚಂದ್, ವಿನಾಶ್ ಪುರುಷ್, ಖಲಿಸ್ತಾನಿ, ಖೂನ್ ಸೆ ಖೇತಿ, ದೋಹ್ರಾ ಚರಿತ್ರ, ನಿಕಮ್ಮ, ನೌಟಂಕಿ, ಢಿಂಢೋರ ಪೀಟ್ನಾ, ಬೆಹ್ರಿ ಸರ್ಕಾರ್ ಮುಂತಾದ ಪದಗಳನ್ನೂ ಅಸಂಸದೀಯ ಎಂದು ಗುರುತಿಸಲಾಗಿದ್ದು, ಇಂತಹ ಪದಗಳನ್ನು ಬಳಸಿದರೂ ಕಡತದಿಂದ ತೆಗೆದುಹಾಕಲಾಗುತ್ತದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಪುಸ್ತಕದಲ್ಲಿ ಅಸಂಸದೀಯ ಎಂದು ಗುರುತಿಸಲಾದ ಪದಗಳಲ್ಲಿ ರಕ್ತಪಾತ, ರಕ್ತಸಿಕ್ತ, ದ್ರೋಹ, ವಂಚನೆ, ಚಮ್ಚಾ, ಚಮ್ಚಾಗಿರಿ, ಚೇಲಾಸ್, ಬಾಲಿಶ, ಹೇಡಿ, ಕ್ರಿಮಿನಲ್, ಮೊಸಳೆ ಕಣ್ಣೀರು ಸೇರಿದೆ. ಇವುಗಳ ಹೊರತಾಗಿ ಅವಮಾನ, ಕತ್ತೆ, ನಾಟಕ, ಕಣ್ಣೊರೆಸುವ ತಂತ್ರ, ಗೂಂಡಾಗಿರಿ, ಅಸಮರ್ಥ, ಸುಳ್ಳು, ಗದ್ದಾರ್, ಗಿರ್ಗಿಟ್, ಗಢಿಯಾಲಿ ಆಂಸು, ಅಪಮಾನ್, ಅಸತ್ಯ, ಅಹಂಕಾರ್, ಕಾಲಾ ದಿನ್, ಕಾಲಾ ಬಜಾರ್, ದಂಗ, ದಲಾಲ್, ದಾದಾಗಿರಿ, ಬೆಚಾರ, ಬಾಯ್‌ಕಟ್. ಲಾಲಿಪಾಪ್, ಸಂವೇದನಾಹೀನ್, ಲೈಂಗಿಕ ಕಿರುಕುಳ ಪದಗಳನ್ನೂ ಅಸಂಸದೀಯ ಎಂದು ಪರಿಗಣಿಸಲಾಗುವುದು ಎಂದು ಲೋಕಸಭಾ ಸೆಕ್ರಟೇರಿಯನ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

    ಈ ಕ್ರಮಕ್ಕೆ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಹಾಗೂ ಸಂಸದ ಡೆರಕ್ ನಾವು ಈ ಪದಗಳನ್ನು ಬಳಸುತ್ತೇವೆ, ಬೇಕಿದ್ದರೆ ಅಮಾನತು ಮಾಡಿ ಎಂದು ತಿರುಗೇಟು ನೀಡಿದ್ದಾರೆ.

    ಈ ಕುರಿತಂತೆ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಟ್ವೀಟ್ ಮಾಡಿದ್ದು, ನಿಮ್ಮ ಟೀಕೆಗಳು ಸೃಜನಶೀಲವಾಗಿರಬೇಕು. ಇಲ್ಲದಿದ್ದರೆ ಸಂಸತ್ತಿನ ಅಧಿವೇಶನ ಪ್ರಯೋಜನವಾಗದು. ಜುಮ್ಲಾಜೀವಿ ಅನ್ನು ಜುಮ್ಲಾಜೀವಿ ಅನ್ನದೇ ಮತ್ತೆ ಇನ್ನೇನು ಹೇಳಬೇಕು? ಇಂತಹ ಪದಗಳನ್ನು ನಿಷೇಧಿಸುವುದು ಅನಿವಾರ್ಯವೇ ಎಂದು ಪ್ರಶ್ನಿಸಿದ್ದಾರೆ.

    ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಸಹ ಟ್ವೀಟ್ ಮಾಡಿದ್ದು, ಬಿಜೆಪಿ ಭಾರತವನ್ನು ಹೇಗೆ ನಾಶಪಡಿಸುತ್ತದೆ ಎಂಬುದು ಗೊತ್ತಾಗುತ್ತಿದೆ. ಅದಕ್ಕಾಗಿ ಪ್ರತಿ ಪಕ್ಷಗಳು ಬಳಸುವ ಪದಗಳನ್ನು ಆಯ್ಕೆ ಮಾಡಿ ನಿಷೇಧಿಸಿದೆ. ಇದು ನಾಚಿಗೇಡಿನ ಸಂಗತಿ. ದುರ್ಬಳಕೆ, ದ್ರೋಹ, ಭ್ರಷ್ಟ, ಬೂಟಾಟಿಕೆ, ಅಸಮರ್ಥ ಎಂಬ ಪದಗಳನ್ನು ನಾನು ಬಳಸುತ್ತೇನೆ, ನನ್ನನ್ನೂ ಬೇಕಿದ್ದರೆ ಅಮಾನತು ಮಾಡಿ. ಆದರೆ ನಾನು ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]