Tag: ಮನೆ ನಿರ್ಮಾಣ

  • ಸುವರ್ಣಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆ ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗುವಂತೆ ಆದೇಶ

    ಸುವರ್ಣಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆ ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗುವಂತೆ ಆದೇಶ

    ಬೆಳಗಾವಿ: ಸುವರ್ಣಸೌಧ ಮುಂಭಾಗದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಯನ್ನು ತಕ್ಷಣದಿಂದಲೇ ಕೆಲಸಕ್ಕೆ ಹಾಜರಾಗಲು ನಿರ್ದೇಶನ ನೀಡಲಾಗಿದೆ ಎಂದು ನಗರದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾವಿಗೆ ಒಣಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಹಣೆ ಒದಗಿಸಿಕೊಂಡಿದ್ದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿತ್ತು. ಗುತ್ತಿಗೆದಾರ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಲ್ಲಮ್ಮ ಸುವರ್ಣಸೌಧದಲ್ಲಿ ಶಾವಿಗೆ ಒಣಹಾಕಿದ್ದರು. ಆದರೆ ಶಾವಿಗೆ ಒಣಹಾಕಿದ್ದ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಿರಲಿಲ್ಲ, ಬೇರೆ ಸ್ಥಳಕ್ಕೆ ಕೆಲಸ ಮಾಡಲು ನಿಯೋಜಿಸಲಾಗಿತ್ತಷ್ಟೇ ಎಂದರು.

    ಇದಲ್ಲದೇ ನಾನು ಕೂಡ ಸುವರ್ಣಸೌಧಕ್ಕೆ ಭೇಟಿ ನೀಡಿ ಸಂಬಳ ಕಟ್ ಮಾಡಬಾರದು. ಯಾರನ್ನು ಕೆಲಸದಿಂದ ತೆಗೆದುಹಾಕಬಾರದು ಅಂತಾ ಹೇಳಿದ್ದೆ. ಇನ್ನೂ ಬೇರೆ ಸ್ಥಳಕ್ಕೆ ಕೆಲಸ ಮಾಡಲು ಮಲ್ಲಮ್ಮಗೆ ತಿಳಿಸಲಾಗಿತ್ತು. ಆದರೆ ಬೇರೆ ಸ್ಥಳದಲ್ಲಿ ಕೆಲಸ ಮಾಡೋದಕ್ಕೆ ಮಹಿಳೆಗೆ ದೂರ ಆಗುವುದರಿಂದ ಸಾಕಷ್ಟು ಸಮಸ್ಯೆ ಆಗುತ್ತೆ ಅಂತಾ ಕೆಲ ಮಾಧ್ಯಮದವರು ಗಮನಕ್ಕೆ ತಂದರು. ಹೀಗಾಗಿ ತಕ್ಷಣದಿಂದಲೇ ಸುವರ್ಣ ಸೌಧದಲ್ಲಿ ಕೆಲಸ ಮಾಡಲು ನಿರ್ದೇಶನ ನೀಡಲಾಗಿದೆ. ಇಂದು ಅಥವಾ ನಾಳೆ ಕೆಲಸಕ್ಕೆ ಹಾಜರಾಗಬಹುದು. ಅವರಿಗೆ ಯಾವುದೇ ಸಂಬಳ ಕಟ್ ಮಾಡುವುದಿಲ್ಲ ಎಂದರು.

    ಮನೆ ನಿರ್ಮಾಣ ವಿಚಾರವಾಗಿ ಮಾತನಾಡಿ, ಮೂಲತಃ ಖಾನಾಪೂರದ ತಾಲೂಕಿನ ಮಲ್ಲಮ್ಮಳಿಗೆ ಪತಿ ಮರಣ ಹೊಂದಿದ್ದಾರೆ. ಹೀಗಾಗಿ ಸದ್ಯ ತಮ್ಮ ಸಂಬಂಧಿಕರ ಮನೆಯಾಗಿರುವ ಕೊಂಡಸಕೊಪ್ಪ ಗ್ರಾಮದಲ್ಲಿ ಇದ್ದಾರೆ. ಮಲ್ಲಮ್ಮಗೆ ಮನೆ ಕೊಡೊದಕ್ಕೆ ಬೇಡಿಕೆ ಬಂದಿದೆ. ಈ ಬಗ್ಗೆ ಜಿಪಂ ಸಿಇಓ ಜೊತೆಗೆ ಚರ್ಚೆ ಮಾಡಿದ್ದೇನೆ. ಬಸ್ತವಾಡ ಗ್ರಾಮದಲ್ಲಿ ಜಾಗ ಇದೆ. ಅವರು ಒಪ್ಪಿದರೆ ಜಾಗ ಕೊಡುತ್ತೇವೆ. ಬಸವ ವಸತಿ ಇಲ್ಲವೇ ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಕೊಡುತ್ತೇವೆ ಎಂದರು.

  • ವಾಟ್ಸಪ್ ಗ್ರೂಪಿನಿಂದ ಬಡವರಿಗೆ ಮನೆ ನಿರ್ಮಾಣ

    ವಾಟ್ಸಪ್ ಗ್ರೂಪಿನಿಂದ ಬಡವರಿಗೆ ಮನೆ ನಿರ್ಮಾಣ

    ಮಂಗಳೂರು: ಸಾಮಾಜಿಕ ಜಾಲತಾಣವನ್ನು ಬಳಸಿ ಕ್ರೈಂ ಮಾಡುವ ಜನರ ಮಧ್ಯೆ ಬೆಳ್ತಂಗಡಿಯ ಒಂದು ವಾಟ್ಸಪ್ ಗ್ರೂಪ್ ಸಂಘಟನೆ ಸದ್ದಿಲ್ಲದೆ ಸಮಾಜ ಸೇವೆ ಕಾರ್ಯ ಮಾಡುತ್ತಿದೆ.

    ವೀರ ಕೇಸರಿ ಎಂಬ ವಾಟ್ಸಪ್ ಗ್ರೂಪಿನ ಸದಸ್ಯರು ಕಳೆದ ಮೂರೂವರೆ ವರ್ಷದಲ್ಲಿ 42 ಲಕ್ಷ ರೂ. ಹಣವನ್ನು ಸಂಗ್ರಹಿಸಿ ಬಡವರಿಗೆ ನೀಡಿದೆ. 40ನೇ ತಿಂಗಳ 100ನೇ ಯೋಜನೆಯನ್ನು ಈ ವಾಟ್ಸಪ್ ಗುಂಪಿನ ಸದಸ್ಯರು ಸೇರಿ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಅರ್ಥಪೂರ್ಣಗೊಳಿಸಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಎಂಬಲ್ಲಿ ಸೂರು ಇಲ್ಲದ ಕುಟುಂಬಕ್ಕೆ ಮನೆ ಕಟ್ಟಿ ನೀಡಿದ್ದಾರೆ. ಈ 100ನೇ ಯೋಜನೆಯನ್ನು ಅದ್ಧೂರಿಯಿಂದ ಮಾಡಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಯುವ ಉದ್ಯಮಿ ಅಶ್ವಥ್ ಬಳಂಜ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಮನೆ ಹಸ್ತಾಂತರಿಸಿದ್ದಾರೆ.

    ಮಧ್ಯಮ ಕುಟುಂಬದ ಜನರೇ ಈ ವಾಟ್ಸಪ್ ಗುಂಪಿನ ಸದಸ್ಯರಾಗಿದ್ದು, ತಾವು ದುಡಿದ ಹಣದಲ್ಲಿ ಒಂದು ಭಾಗವನ್ನು ಸಮಾಜದ ಬಡಬಗ್ಗರಿಗೆ ನೆರವಾಗಿ ಮಾದರಿಯಾಗಿದ್ದಾರೆ.

  • ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಪರಿಹಾರ ಕಾರ್ಯ ನಿಂತಿಲ್ಲ: ಸಿಎಂ ಬಿಎಸ್‍ವೈ

    ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಪರಿಹಾರ ಕಾರ್ಯ ನಿಂತಿಲ್ಲ: ಸಿಎಂ ಬಿಎಸ್‍ವೈ

    ಬೆಳಗಾವಿ: ಪ್ರವಾಹದಿಂದ ಉಂಟಾಗಿರುವ ನಷ್ಟದಿಂದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ನಿಭಾಯಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ವಿರೋಧಿ ಪಕ್ಷಗಳ ಆರೋಪಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಉತ್ತರಿಸಿದ್ದು, ಜನರ ಸಂಕಷ್ಟವನ್ನು ನಿವಾರಿಸುವ ಬಗ್ಗೆ ಕ್ರಮಕೈಗೊಂಡಿದ್ದೇವೆ. ಈಗಾಗಲೇ ಮೂರುವರೆ ಸಾವಿರ ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಕೇಂದ್ರ ಸರ್ಕಾರದಿಂದ ಅನುದಾನ ಲಭಿಸಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಎಸ್‍ವೈ ಅವರು, ಇಂದು ನಾನು ಜಿಲ್ಲೆಯಲ್ಲಿ ಮಾಧ್ಯಮಗಳ ಎದುರೇ ಸಭೆ ನಡೆಸಿದ್ದು, ಯಾವ ಕ್ರಮಗಳನ್ನು ಕೈಗೊಂಡಿದ್ದೇವೆ ಎಂಬ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿ ಇದೆ. ಈಗಾಗಲೇ ರಾಜ್ಯ ಸರ್ಕಾರ ಮೂರುವರೆ ಸಾವಿರ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚು ಹಣವನ್ನು ನಾವು ಬಿಡುಗಡೆ ಮಾಡುತ್ತೇವೆ, ಇದು ನಮ್ಮ ಕರ್ತವ್ಯವಾಗಿದೆ. ಹೆಚ್ಚಿನ ಹಾನಿಯಾದ ಕುರಿತು ವರದಿಯನ್ನ ಮಾಡುತ್ತಿದ್ದೇವೆ. ಹಂತ ಹಂತವಾಗಿ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ ಎಂದರು.

    ಈಗಾಗಲೇ ಕೇಂದ್ರದಲ್ಲಿ ಮನವಿ ಸಲ್ಲಿಕೆ ಮಾಡಿದ್ದು, ಕೇಂದ್ರದಿಂದ ಬರುವ ಹಣವನ್ನು ಬೆಳೆ ನಷ್ಟ ಪರಿಹಾರ ಸೇರಿದಂತೆ, ವಿವಿಧ ಭಾಗಗಳಲ್ಲಿ ಹಾನಿಯಾಗಿರುವ ರಸ್ತೆ ಸೇರಿದಂತೆ ಬೃಹತ್ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತೇವೆ. ಅತಿವೃಷ್ಟಿಗೆ ಸಿಕ್ಕಿರುವ ರೈತರಿಗೆ ನ್ಯಾಯ ನೀಡುವುದು ನಮ್ಮ ಕರ್ತವ್ಯ. ನಾನು ರೈತನ ಮಗನೇ ಎಂದರು.

    ಈಗಾಗಲೇ ಮನೆ ನೆರೆಯಿಂದ ಮನೆ ಕಳೆದುಕೊಂಡವರಿಗೆ ಮನೆಯ ಫೌಂಡೇಷನ್ ಹಾಕಿಕೊಳ್ಳುವರಿಗೆ 1 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ. ಹತ್ತು ಸಾವಿರ ರೂ. ಚೆಕ್‍ಗಳನ್ನು ಬಹುತೇಕರಿಗೆ ನೀಡಿದ್ದೇವೆ. ಪ್ರಧಾನಿ ಮೋದಿ ಹೊರ ದೇಶದಲ್ಲಿರುವುದರಿಂದ ಇದುವರೆಗೂ ಸಭೆ ನಡೆಸಲಾಗಲಿಲ್ಲ. ನೆರೆ ಸಮಸ್ಯೆ ಅನುಭವಿಸಿದ ಯಾವುದೇ ರಾಜ್ಯಕ್ಕೂ ಹಣ ಬಿಡುಗಡೆ ಮಾಡಿಲ್ಲ. ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರವೇ ಹಣ ಬಿಡುಗಡೆಯಾಗಲಿದೆ ಎಂದರು.

    ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕಿತ್ತು, ಸಿಎಂ ಅವರಿಗೆ ತಾಕತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದು ತಾಕತ್ತಿನ ಪ್ರಶ್ನೆ ಅಲ್ಲ, ಶಾಂತ ರೀತಿಯಿಂದ ಕೇಂದ್ರದಿಂದ ಅನುದಾನ ಪಡೆದುಕೊಳ್ಳುವುದಾಗಿದೆ. ಕಾಂಗ್ರೆಸ್ ಪಕ್ಷದವರು ಹೇಗೆ ಡರ್ಟಿ ಪಾಲಿಟಿಕ್ಸ್ ಮಾಡ್ತಿದ್ದಾರಾ ಎಂಬುದನ್ನ ನನ್ನ ಬಾಯಿಂದ ಹೇಳಲು ನಾನು ಸಿದ್ಧವಾಗಿಲ್ಲ. ವಿರೋಧ ಪಕ್ಷದವರು ಅವರ ಕೆಲಸ ಮಾಡುತ್ತಾರೆ ಅದಕ್ಕೆ ನಾನು ವಿರೋಧ ಮಾಡುವುದಿಲ್ಲ. ಮೂರು ದಿನ ಅಧಿವೇಶನ ಕರೆದಿದ್ದೇವೆ ಅಲ್ಲಿ ಈ ಚರ್ಚೆಯಾಗಲಿ. ಕೇಂದ್ರಕ್ಕೆ ಯಾವುದೇ ನಿಯೋಗ ಕರೆದುಕೊಂಡು ಹೋಗುವ ಅಗತ್ಯವಿಲ್ಲ. 2-3 ದಿನಗಳಲ್ಲಿ ಕೇಂದ್ರದಿಂದ ಹಣ ಬಿಡುಗಡೆಯಾಗುತ್ತದೆ ಎಂದರು.

    ಸರ್ಕಾರ ಮತ್ತು ಪಕ್ಷದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ವಿಚಾರವಾಗಿ ಉತ್ತರಿಸಿದ ಅವರು, ಬೆಳಗ್ಗೆ ರಾಜ್ಯಾಧ್ಯಕ್ಷರು ನಮ್ಮ ಮನೆಗೆ ಬಂದು ಉಪಾಹಾರ ಸೇವಿಸಿ ಹೋಗಿದ್ದಾರೆ. ಮುಸುಕಿನ ಗುದ್ದಾಟ ನಡೆಯುತ್ತಿರುವುದು ಯಾವ ಪಕ್ಷದಲ್ಲಿ ಎಂದು ನಮ್ಮ ಬಾಯಿಂದ ಹೇಳಿಸಬೇಡಿ ಎಂದರು.

    ನೆರೆ ಸಮಸ್ಯೆಯನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಪ್ರತಿಕ್ರಮವನ್ನು ಜನರ ಕಣ್ಣ ಮುಂದಿಡುತ್ತೇವೆ. ಬೆಳೆ ನಾಶವಾಗಿದ್ದರೆ ಹೆಕ್ಟರ್ ಗೆ ಆರೂವರೆ ಸಾವಿರ, ನೀರಾವರಿ ಜಮೀನಿನಲ್ಲಿ ಬೆಳೆ ಹಾನಿಯಾದರೆ ಹೆಕ್ಟರ್ ಗೆ ಹನ್ನೆರಡು ಸಾವಿರ ನೀಡುತ್ತೇವೆ. ಪ್ರತಿ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಹಣವನ್ನು ನೀಡುತ್ತಿದ್ದು, ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಅಲ್ಲದೇ ಮಳೆಯಿಂದ ಶಾಲಾ ಕಟ್ಟಡಕ್ಕೆ ಹಾನಿಯಾಗಿದ್ದಾರೆ ಹೊಸ ಕಟ್ಟಡ ನಿರ್ಮಾಣ ಮಾಡಲು 5 ರೂ. ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಕೆಇಬಿ ಇಲಾಖೆಗೂ ಕೂಡ ಜಿಲ್ಲೆಯಲ್ಲಿ ನಡೆಯಬೇಕಾದ ಕ್ರಮಗಳನ್ನು ಶೀಘ್ರ ಪೂರ್ಣಗೊಳಿಸಲು ಆದೇಶ ನೀಡಿದ್ದೇನೆ ಎಂದು ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಉತ್ತರಿಸಿದರು.

  • ಕೊಡಗಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿ, ನೆರೆ ಸಂತ್ರಸ್ತರಿಗೆ ಸೂರು

    ಕೊಡಗಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿ, ನೆರೆ ಸಂತ್ರಸ್ತರಿಗೆ ಸೂರು

    ಮಡಿಕೇರಿ: ನದಿ ತೀರದಲ್ಲಿ ಮನೆಗಳನ್ನು ಕಳೆದುಕೊಂಡಿರುವ ಹಾಗೂ ಹಾನಿಗೊಳಗಾದ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತ ವಿನೂತನ ಚಿಂತನೆ ನಡೆಸಿದ್ದು, ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಕಾಫಿ ತೋಟ ಮಾಡಿಕೊಂಡಿರುವ ಜಾಗವನ್ನು ತೆರವು ಗೊಳಿಸಿ ಸಂತ್ರಸ್ತರಿಗೆ ಶಾಶ್ವತ ಸೂರು ಕಟ್ಟಿಕೊಡಲು ತೀರ್ಮಾನಿಸಿದೆ.

    ಕೊಡಗು ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಇಗಾಗಲೇ ಜಾಗ ಪರಿಶೀಲನೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಕಾಡು ಹಾಗೂ ಕುಂಬಾರಗುಂಡಿ ಭಾಗದ ನದಿ ತೀರದ ಮನೆಗಳು ಪ್ರವಾಹಕ್ಕೆ ಸಿಲುಕಿ ಹಾನಿಯಾಗಿ ನೂರಾರು ಮನೆಗಳು ಕುಸಿದಿವೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಶಾಶ್ವತ ಸೂರು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಡಳಿತ ತ್ವರಿತಗತಿಯಲ್ಲಿ ನೆಲ್ಯಹುದಿಕೇರಿಯಲ್ಲಿ ಪೈಸಾರಿ ಜಾಗಗಳನ್ನು ಗುರುತಿಸಿದೆ.

    ಅನೇಕ ವರ್ಷಗಳಿಂದ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಾಫಿ ತೋಟ ಮಾಡಿಕೊಂಡಿರುವ ಜಾಗವನ್ನು ತೆರವು ಗೊಳಿಸಿ ಸಂತ್ರಸ್ತರಿಗೆ ಸರಕಾರದ ವತಿಯಿಂದ ಶಾಶ್ವತ ಸೂರು ಕಲ್ಪಿಸಲು ನಿರ್ಧರಿಸಲಾಗಿದೆ. ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಸುಮಾರು 50 ಎಕರೆಯಷ್ಟು ಪೈಸಾರಿ ಜಾಗ ಒತ್ತುವರಿಯಾಗಿರುವುದು ಕುಂಡುಬಂದಿದ್ದು, ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರಿ ಸರ್ಕಾರ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸುವುದಾಗಿ ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್ ಹಾಗೂ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

    ಸಿದ್ದಾಪುರ ಸಮೀಪದಲ್ಲೂ ಸಂತ್ರಸ್ತರಿಗಾಗಿ ಮನೆ ನಿರ್ಮಿಸಲು ಜಾಗವನ್ನು ಪರಿಶೀಲಿಸಲಾಗಿದ್ದು, ಕರಡಿಗೋಡು ಸೇರಿದಂತೆ ವಿವಿಧ ಗ್ರಾಮಗಳ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಸರ್ಕಾರಿ ಜಾಗ ಒತ್ತುವರಿ ಮಾಡಿ ಅಕ್ರಮವಾಗಿ ತೋಟಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ತೋಟಗಳನ್ನು ತೆರವು ಮಾಡಿ ಲೇಔಟ್ ನಿರ್ಮಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಈ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಸಂತ್ರಸ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದಷ್ಟು ಬೇಗ ಕಾಮಗಾರಿ ಪ್ರಾರಂಭಿಸಿ, ಸಂತ್ರಸ್ತರಿಗೆ ಸೂರು ಕಲ್ಪಿಸಲಿ ಎಂದು ನಾಗರಿಕರು ಮನವಿ ಮಾಡಿದ್ದಾರೆ.

  • ಕೊಡಗು ಸಂತ್ರಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ: ಹರ್ಷಿಕಾ ಪೂಣಚ್ಚ

    ಕೊಡಗು ಸಂತ್ರಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ: ಹರ್ಷಿಕಾ ಪೂಣಚ್ಚ

    ಕೊಡಗು: ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.

    ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

    ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ ವಿತರಣೆ ಮಾಡುವುದಾಗಿ ಹೇಳಿತ್ತು. ಆದರೆ ಇದುವರೆಗೂ ಮನೆ ಹಂಚಿಕೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇದೇ ವೇಳೆ ಕೊಡಗಿಗೆ ಸುಸಜ್ಜಿತವಾದ ಒಂದು ಆಸ್ಪತ್ರೆ ಬೇಕು ಎಂದು ಕೊಡಗಿನ ಜನತೆ ಆರಂಭಿಸಿದ ಟ್ವಿಟ್ಟರ್ ಅಭಿಯಾನದ ಬಗ್ಗೆ ಮಾತನಾಡಿ, ಅಪಘಾತ ಅಥವಾ ತುರ್ತು ಸಂದರ್ಭವಿದ್ದರೆ ರೋಗಿಗಳನ್ನು ನಾವು 100-200 ಕಿ.ಮೀ. ಕರೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಇತ್ತೀಚೆಗೆ ನನ್ನ ತಂದೆ ಕೂಡ ಅನಾರೋಗ್ಯಕ್ಕೀಡಾಗಿದ್ದರು. ಆ ಸಮಯದಲ್ಲಿ ನಮ್ಮ ಜಿಲ್ಲೆಯಲ್ಲಿ ಸರಿಯಾದ ಆಸ್ಪತ್ರೆ ಇಲ್ಲದ ಕಾರಣ ಅನಿವಾರ್ಯವಾಗಿ ನಾವು ಬೆಂಗಳೂರಿಗೆ ಕರೆದೊಯ್ಯಬೇಕಾಯಿತು. ಕೊಡಗು ಜಿಲ್ಲೆಯಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದರೆ ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗುತ್ತದೆ ಎಂದು ಹೇಳಿದರು.

    https://twitter.com/actressharshika/status/1139493122834964480

    ಶಿವಣ್ಣ ನಂತರ ಅಭಿಯಾನ ಬೆಂಬಲಿಸಿ ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಹೇಳಿದರು.

  • ಸರ್ಕಾರಕ್ಕೆ ಹಣ ನೀಡಲ್ಲ, ನಕ್ಷೆಯಂತೆ ಕೊಡಗು ಸಂತ್ರಸ್ತರಿಗೆ ಮನೆ : ಸುಧಾಮೂರ್ತಿ

    ಸರ್ಕಾರಕ್ಕೆ ಹಣ ನೀಡಲ್ಲ, ನಕ್ಷೆಯಂತೆ ಕೊಡಗು ಸಂತ್ರಸ್ತರಿಗೆ ಮನೆ : ಸುಧಾಮೂರ್ತಿ

    ಮಂಡ್ಯ: ಸರ್ಕಾರ ನೀಡಿದ ನಕ್ಷೆಯಂತೆ ಕೊಡಗು ಸಂತ್ರಸ್ತರಿಗೆ ನಮ್ಮ ತಂಡ ಮನೆ ಕಟ್ಟಿಕೊಡಲಿದೆ. ಅದಕ್ಕಾಗಿ ನಮ್ಮ ಸಂಸ್ಥೆ ಈಗಾಗಲೇ 25 ಕೋಟಿ ರೂ. ತೆಗೆದಿರಿಸಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಹೇಳಿದ್ದಾರೆ.

    ಮಂಡ್ಯದ ಮೇಲುಕೋಟೆಯಲ್ಲಿ ಮಾತನಾಡಿದ ಅವರು, ದಸರಾ ಉದ್ಘಾಟನೆ ವೇಳೆ ಕೊಡಗು ಸಂತ್ರಸ್ತರಿಗೆ ನೆರವು ನೀಡಿ ಎಂದು ಸರ್ಕಾರ ನಮ್ಮನ್ನ ಕೇಳಿರಲಿಲ್ಲ. ಮನುಷ್ಯನ ದೇಹದಲ್ಲಿ ಒಂದು ಭಾಗಕ್ಕೆ ನೋವಾದರೆ ಇನ್ನೊಂದು ಭಾಗಕ್ಕೆ ನೋವಾದ ಹಾಗೆಯೇ. ಕೊಡಗು ನಮ್ಮ ಕರ್ನಾಟಕದ ಒಂದು ಭಾಗ. ಕೊಡಗಿಗೆ ಕಷ್ಟ ಬಂದಾಗ ನಮ್ಮ ಸಂಸ್ಥೆಯೇ ಸಹಾಯ ಮಾಡುವ ನೀಡುವ ತೀರ್ಮಾನ ಮಾಡಿತ್ತು ಎಂದರು.

    ಇದೇ ವೇಳೆ ಕೊಡುಗೆ ಪ್ರವಾಹಕ್ಕೆ ನೆರವು ನೀಡಿ ಎಂದು ಯಾವ ಮಂತ್ರಿಯಾಗಲೀ ಕೇಳಿರಲಿಲ್ಲ. ಕನ್ನಡಿಗರಿಗಾಗಿ ಏನಾದರು ಮಾಡಬೇಕೆಂದು 25 ಕೋಟಿ ರೂ. ನೀಡುವ ತೀರ್ಮಾನ ನಮ್ಮ ಸಂಸ್ಥೆ ಮಾಡಿತ್ತು. ನಮ್ಮ ಸಂಸ್ಥೆಯ ಮೂಲಕ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಯೋಚನೆ ಮಾಡಿದ್ದೇವು. ಬಳಿಕ ಈ ಬಗ್ಗೆ ಸರ್ಕಾರಕ್ಕೆ ಸಂತ್ರಸ್ತರಿಗೆ ಮನೆಕಟ್ಟಿಕೊಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾಗಿ ಹೇಳಿದರು.

    ಈ ಹಿಂದೆಯೂ ಕೂಡ ಉತ್ತರ ಕರ್ನಾಟಕದ ಪ್ರವಾಹ ಹಾಗೂ ಆಂಧ್ರಪ್ರದೇಶದ ಪ್ರವಾಹದ ವೇಳೆ ನಮ್ಮ ಸಂಸ್ಥೆಯಿಂದ ಮನೆ ನಿರ್ಮಾಣ ಮಾಡಲಾಗಿತ್ತು. ಆದರೆ ಆ ವೇಳೆ ನಾವು ಕೆಲ ಸಮಸ್ಯೆಗಳನ್ನು ಎದುರಿಸಿದ್ದೇವೆ. ಅದ್ದರಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಸರ್ಕಾರ ಮನೆ ನಿರ್ಮಾಣಕ್ಕೆ ಸರಿಯಾದ ಜಾಗ ತೋರಿಸಬೇಕು, ವಿದ್ಯುತ್ ಹಾಗೂ ಲೇಬರ್ ಕ್ಯಾಂಪಿಗೆ ಜಾಗ ನೀಡಬೇಕೆಂದು ಮನವಿ ಮಾಡಿದ್ದೇವೆ. ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರವೇ ನೀಡಿದ ನಕ್ಷೆಯಂತೆ ನಮ್ಮ ತಂಡ ಮನೆಗಳನ್ನ ಕಟ್ಟಿಕೊಡಲಿದೆ. ನಾವು ಸರ್ಕಾರಕ್ಕೆ ಹಣ ನೀಡುವುದಿಲ್ಲ. ನಾವೇ ಮನೆ ಕಟ್ಟಿಸಿಕೊಡುತ್ತೇವೆ. ಸರ್ಕಾರ ಜಾಗ ತೋರಿಸಿದ ಮರುದಿನವೇ ನಮ್ಮ ತಂಡ ಕೆಲಸ ಶುರುಮಾಡಲಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv