Tag: ಮನೆ ಮದ್ದು

  • ಮನೆ ಮದ್ದು | ಮೊಡವೆಯ ಸಮಸ್ಯೆ ಕಾಡ್ತಿದ್ಯಾ? ಇಲ್ಲಿದೆ ಸುಲಭ ಪರಿಹಾರ

    ಮನೆ ಮದ್ದು | ಮೊಡವೆಯ ಸಮಸ್ಯೆ ಕಾಡ್ತಿದ್ಯಾ? ಇಲ್ಲಿದೆ ಸುಲಭ ಪರಿಹಾರ

    ಇಂದಿನ ಯುವಜನ ದೈಹಿಕ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡ್ತಾರೆ. ಅದಕ್ಕಾಗಿ ಟಿವಿ ಜಾಹೀರಾತಿನಲ್ಲಿ ತೋರಿಸುವ, ಬ್ಯೂಟಿ ಪ್ರೊಡಕ್ಟ್‌ಗಳನ್ನ ದುಬಾರಿ ಹಣ ಕೊಟ್ಟು ಖರೀದಿ ಮಾಡ್ತಾರೆ. ಇಂತಹ ರಾಸಾಯನಿಕ ವಸ್ತುಗಳ ಬಳಕೆಯಿಂದಾಗಿ ಮುಖದಲ್ಲಿ ಮೊಡವೆಗಳ ಸಮಸ್ಯೆಗಳು (Pimple Problem) ಹೆಚ್ಚಾಗುತ್ತದೆ. ಕೆಲವರಂತೂ ಈ ಮೊಡವೆಗಳಿಂದ ಮುಕ್ತಿ ಪಡೆಯಲು ಹರಸಾಹಸ ಪಡುತ್ತಾರೆ. ದುಬಾರಿ ಕಾಸ್ಮೆಟಿಕ್ ಖರೀದಿಸಿ ಮುಖಕ್ಕೆ ಹಚ್ಚಿ ಅನೇಕ ಪ್ರಯೋಗಗಳನ್ನು ಮಾಡುತ್ತಾರೆ.

    ಈ ಪಿಂಪಲ್ (Pimple) ಸಮಸ್ಯೆ ಮುಖದ ಸೌಂದರ್ಯವನ್ನೇ ಹಾಳುಮಾಡುತ್ತದೆ ಅನ್ನೋದು ಕೆಲವರ ಅಭಿಪ್ರಾಯ. ಇನ್ನೂ ಕೆಲವರು ಇದೇ ಸಮಸ್ಯೆಯಿಂದ ಕೊರಗುತ್ತಿರುತ್ತಾರೆ. ಈ ಮೊಡವೆಗಳು ಕೆಲವೊಮ್ಮೆ ಹಾರ್ಮೋನ್ ಸಮಸ್ಯೆಯಿಂದ ಅಥವಾ ನಮ್ಮ ಆಹಾರ ಶೈಲಿಯಿಂದ ಬರುತ್ತದೆ. ಆದ್ರೆ ಇದನ್ನು ಹೋಗಲಾಡಿರುವ ಉಪಾಯ ಗೊತ್ತಿದ್ದವರು ಚಿಂತೆ ಮಾಡಬೇಕಿಲ್ಲ, ಕೊರಗುತ್ತಾ ಕೂರಬೇಕಿಲ್ಲ. ಮನೆಯಲ್ಲೇ ಸಿಗುವ ವಸ್ತುಗಳಿಂದ ಸುಲಭವಾಗಿ ಮೊಡವೆ ಸಮಸ್ಯೆಯಿಂದ ಹೊರಬರುವುದು ಹೇಗೆ? ಅನ್ನೋದನ್ನ ತಿಳಿಯಬೇಕಾದ್ರೆ ಮುಂದೆ ಓದಿ…

    ಜೇನು ತುಪ್ಪ (Honey)
    ರೋಗನಿರೋಧಕ ಶಕ್ತಿಯನ್ನು ಹೊಂದಿರುವ ಜೇನುತುಪ್ಪ ಮೊಡವೆ ನಿವಾರಿಸಲು ಸಹಕಾರಿ. ರಾತ್ರಿ ಮಲಗುವ ಮುನ್ನ ಮೊಡವೆ ಇರುವ ಭಾಗಕ್ಕೆ ಜೇನುತುಪ್ಪ ಹಚ್ಚಿ, ಬ್ಯಾಂಡೇಜ್‌ನಿಂದ ಮುಚ್ಚಬೇಕು. ರಾತ್ರಿಯಿಡೀ ಹಾಗೆ ಬಿಟ್ಟು, ಬೆಳಗ್ಗೆ ಎದ್ದ ಕೂಡಲೇ ಬ್ಯಾಂಡೇಜ್ ತೆಗೆದು ಮುಖವನ್ನು ತೊಳೆಯಬೇಕು. ಇದೇ ರೀತಿ ಮೊಡವೆ ಏಳುವ ಜಾಗಗಳಿಗೆ ಮಾಡಿದರೆ ಸುಲಭವಾಗಿ ಈ ಸಮಸ್ಯೆಯಿಂದ ಹೊರಬರಬಹುದು.

    ಐಸ್‌ಕ್ಯೂಬ್ (Ice Cube)
    ಐಸ್‌ಕ್ಯೂಬ್‌ನಿಂದಲೂ ಮುಖದಲ್ಲಿರುವ ಮೊಡವೆಯಿಂದ ನಿವಾರಣೆ ಪಡೆಯಬಹುದು. ಪ್ರತಿದಿನ 2 ರಿಂದ 3 ಬಾರಿ ಐಸ್‌ಕ್ಯೂಬ್‌ನಿಂದ ಮುಖಕ್ಕೆ ಮಸಾಜ್ ಮಾಡುವುದರಿಂದ ನಿಮ್ಮ ಮುಖದಲ್ಲಿರುವ ಮೊಡವೆಗಳು ಮಾಯವಾಗುತ್ತದೆ. ಈ ಐಸ್‌ಕ್ಯೂಬ್‌ಗಳಿಂದ ಮಸಾಜ್ ಮಾಡುವುದರಿಂದ ನಿಮ್ಮ ಚರ್ಮವನ್ನು ಮೃದುಗೊಳಿಸುತ್ತದೆ. ಅಲ್ಲದೇ ಚರ್ಮವನ್ನು ಹೆಚ್ಚು ತೆವವಾಗಿಸುತ್ತದೆ. ಇನ್ನು ಒಂದು ಬೌಲ್‌ನಲ್ಲಿ ನೀರು ತೆಗೆದುಕೊಂಡು ಅದಕ್ಕೇ 7ರಿಂದ 8 ಐಸ್‌ಕ್ಯೂಬ್‌ಗಳನ್ನು ಹಾಕಿ ಮುಖವನ್ನು ಈ ನೀರಿನಲ್ಲಿ 2 ರಿಂದ 3 ನಿಮಿಷ ಇಡಬೇಕು. ಇದೇ ರೀತಿ 2 ರಿಂದ 3 ಬಾರಿ ಮಾಡುವುದರಿಂದ ಮುಖದಲ್ಲಿರುವ ಡೆಡ್ ಸ್ಕಿನ್ ಸೆಲ್ಸ್‌ಗಳನ್ನ ಹೋಗಲಾಡಿಸುತ್ತದೆ.

    ಪಪ್ಪಾಯಿ ಹಣ್ಣು (Papaya)
    ಪಪ್ಪಾಯಿ ಹಣ್ಣು ವಿಟಮಿನ್ ಸಿ ಅಂಶವನ್ನು ಹೊಂದಿದೆ. ಪೂರ್ತಿ ಹಣ್ಣಾಗಿರುವ ಪಪ್ಪಾಯಿಯನ್ನು ಸಣ್ಣಗೆ ತುಂಡು ಮಾಡಿ, ಇದರಿಂದ ಮುಖಕ್ಕೆ ಮಸಾಜ್ ಮಾಡಬೇಕು. ಇದು ಸಹ ಮುಖದಲ್ಲಿರುವ ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ. 5 ನಿಮಿಷಗಳ ಬಳಿಕ ಮುಖವನ್ನು ಉಗುರು ಬೆಚ್ಚ ನೀರಿನಲ್ಲಿ ತೊಳೆಯಿರಿ. ಇದು ನಿಮ್ಮ ಮುಖದಲ್ಲಿರುವ ಮೊಡವೆಯನ್ನು ಸುಲಭವಾಗಿ ನಿವಾರಿಸುತ್ತದೆ.

    ಅಲೋವೆರಾ (Alovera)
    ಇದು ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಗುಣವನ್ನು ಹೊಂದಿದ್ದು, ಉರಿಯೂತ ನಿವಾರಕವಾಗಿದೆ. ಅಲ್ಲದೇ ಮೊಡವೆಯನ್ನು ಪರಿಣಾಮಕಾರಿಯಾಗಿ ಶಮನ ಮಾಡಲು ಅಲೋವೆರಾ ಸಹಾಯ ಮಾಡುತ್ತದೆ. ಅಲೋವೆರಾವು ಹೆಚ್ಚು ನೀರಿನಾಂಶವನ್ನು ಹೊಂದಿರುವುದರಿಂದ ತ್ವಚೆಗೆ ತೇವಾಂಶವನ್ನು ನೀಡಿ, ಉತ್ತಮವಾದ ಮಾಯಿಶ್ಚರೈಸರ್ ಆಗಿ ಕಾರ್ಯ ನಿರ್ವಹಿಸುತ್ತದೆ. ಮುಖವನ್ನು ಚೆನ್ನಾಗಿ ತೊಳೆದು, ಬಳಿಕ ಅಲೋವೆರಾ ಜೆಲ್ ಅಥವಾ ಲೋಳೆಯನ್ನು ತ್ವಚೆಗೆ ಅನ್ವಯಿಸಬೇಕು. 30 ನಿಮಿಷದ ನಂತರ ಪುನಃ ಮುಖವನ್ನು ತೊಳೆಯಿರಿ.

    ತೆಂಗಿನ ಎಣ್ಣೆ (Coconut Oil)
    ಬಹುಪಯೋಗಿ ತೆಂಗಿನ ಎಣ್ಣೆಯು ಸೌಂದರ್ಯ ಹೆಚ್ಚಿಸಲೂ ಬಳಸಲಾಗುತ್ತದೆ. ಆಹಾರದ ತಯಾರಿಕೆಗೂ ತೆಂಗಿನ ಎಣ್ಣೆಯನ್ನು ಉಪಯೋಗಿಸುತ್ತಾರೆ. ತೆಂಗಿನ ಎಣ್ಣೆಯು ಉರಿಯೂತ ನಿವಾರಣೆ ಗುಣ ಮತ್ತು ಬ್ಯಾಕ್ಟೀರಿಯಾ ವಿರೋಧಿ ಸಂಯುಕ್ತಗಳನ್ನು ಹೊಂದಿದೆ. ತೆಂಗಿನ ಎಣ್ಣೆಯು ಮೊಡವೆಗಳನ್ನು ಉಂಟು ಮಾಡುವ ಬ್ಯಾಕ್ಟೀರಿಯಾವನ್ನು ನಾಶಪಡಿಸುತ್ತದೆ. ರಾತ್ರಿ ಮಲಗುವ ಮುನ್ನ ತ್ವಚೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆದಷ್ಟೂ ಬೇಗ ಮೊಡವೆಯನ್ನು ನಿವಾರಣೆ ಮಾಡುತ್ತದೆ. ಅಲ್ಲದೇ ಮೊಡವೆಗೆ ಶಾಶ್ವತ ಪರಿಹಾರವನ್ನು ನೀಡುತ್ತದೆ.

    ಮೊಸರು (Curd)
    ಮೊಸರಿನಲ್ಲಿ ಲ್ಯಾಕ್ಟಿಕ್ ಆಮ್ಲವಿದ್ದು, ಇದು ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುವುದರಿಂದ ಶುಷ್ಕ ತ್ವಚೆಯನ್ನು ಹೊಂದಲು ಸಹಕಾರಿಯಾಗಿದೆ. ಮುಖದ ಭಾಗಕ್ಕೆ ಮೊಸರನ್ನು ಹಚ್ಚಿ, 10 ನಿಮಿಷಗಳ ಕಾಲ ಅಥವಾ ಒಣಗುವವರೆಗೆ ಹಾಗೆಯೇ ಬಿಡಿ, ನಂತರ ತೊಳೆಯಿರಿ. ಅಲ್ಲದೇ ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದಲೂ ಆರೋಗ್ಯಕರ ಚರ್ಮವನ್ನು ಉತ್ತೇಜಿಸಲು ಉತ್ತಮ ಮಾರ್ಗವಾಗಿದೆ.

    ಮೊಡವೆಗಳಿಂದ ನಿವಾರಣೆ ಪಡೆಯಲು ಬೇರೆ ಬೇರೆ ಕಾಸ್ಮೆಟಿಕ್ ಅಥವಾ ಮೆಡಿಸಿನ್‌ಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲೇ ಸಿಗುವ ವಸ್ತುಗಳಿಂದ ಸುಲಭವಾಗಿ ಪರಿಹಾರ ಪಡೆದುಕೊಳ್ಳಬಹುದು. ಈ ಮನೆಮದ್ದುಗಳು ಆರೋಗ್ಯಕ್ಕೆ ಅಡ್ಡಪರಿಣಾಮವನ್ನು ಬೀರದೆ ಶುಷ್ಕ ಹಾಗೂ ಕಾಂತಿಯುತ ತ್ವಚೆಯನ್ನು ಪಡೆಯಲು ಸಹಕರಿಸುತ್ತದೆ.

  • ಕೂದಲು ಉದುರುತ್ತಿದೆಯೇ?  ಹಾಗಿದ್ದರೆ ಈ ಮನೆ ಮದ್ದುಗಳನ್ನು ಒಮ್ಮೆ ಟ್ರೈ ಮಾಡಿ

    ಕೂದಲು ಉದುರುತ್ತಿದೆಯೇ? ಹಾಗಿದ್ದರೆ ಈ ಮನೆ ಮದ್ದುಗಳನ್ನು ಒಮ್ಮೆ ಟ್ರೈ ಮಾಡಿ

    ತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಿನವರಿಗಿದೆ. ಜೀವನಶೈಲಿ, ಪೋಷಕಾಂಶಗಳ ಕೊರತೆ, ಅಲರ್ಜಿ, ಹಾರ್ಮೋನ್ ಅಸಮತೋಲನ ಮತ್ತು ಅನುವಂಶೀಯವಾಗಿಯೂ ಬರಬಹುದು. ಇದಕ್ಕೆ ಕೆಲವು ಮನೆ ಮದ್ದುಗಳನ್ನು ಬಳಸಬಹುದಾಗಿದೆ.

    ಕೂದಲು ಉದುರುವ ಸಮಸ್ಯೆಗೆ ಕಾರಣ:
    * ಅತ್ಯಧಿಕ ಖಾರ, ಉಪ್ಪು, ಉಳಿ ಆಹಾರ ಸೇವನೆ
    * ಕಾಫಿ ಕುಡಿಯುವ ಚಟ
    * ಮದ್ಯಪಾನ
    * ಅತೀಹೆಚ್ಚು ಆಹಾರ ಸೇವನೆ
    * ಧೂಮಪಾನ
    * ಎಣ್ಣೆಯಲ್ಲಿ ಕರಿದ ಪದಾರ್ಥಗಳು
    * ಅಸಿಡಿಟಿ ಆಹಾರಗಳು ಇವುಗಳು ಪಿತ್ತವನ್ನು ಹೆಚ್ಚುಮಾಡುತ್ತದೆ ಇದರಿಂದಾಗಿ ಕೂದಲು ಉದುರುವುದು ಹೆಚ್ಚಾಗುತ್ತದೆ.

    ಮನೆಮದ್ದುಗಳಾವವು:
    * ನಿಂಬೆ ರಸ, ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ ನೆತ್ತಿಗೆ ಚೆನ್ನಾಗಿ ಮಸಾಜ್ ಮಾಡಿ. ಒಂದು ಗಂಟೆಯ ನಂತರ ಕೂದಲನ್ನು ಶಾಂಪೂ ಬಳಸಿ ತೊಳೆಯಿರಿ. ಇದರಿಂದ ತುರಿಕೆ, ತಲೆಹೊಟ್ಟು ಸಮಸ್ಯೆಗಳನ್ನು ನಿವಾರಿಸಬಹುದು.

    * ತೆಂಗಿನೆಣ್ಣೆಯನ್ನು ಬಿಸಿ ಮಾಡಿ, ಉಗುರು ಬೆಚ್ಚಗೆ ಇರುವಾಗ ಮೆಲ್ಲನೆ ಕೈಯಲ್ಲಿ ತೆಗೆದುಕೊಂಡು ತಲೆಕೂದಲಿನ ಬುಡಕ್ಕೆ ಹಚ್ಚಿ ಮೆಲ್ಲನೆ ಮಸಾಜ್ ಮಾಡಿ. ಇದನ್ನೂ ಓದಿ: ಬೇಸಿಗೆಯಲ್ಲಿ ನಿಮ್ಮ ತ್ವಚೆಯ ರಕ್ಷಣೆಗೆ ಇಲ್ಲಿದೆ ಸರಳ ಉಪಾಯ

    * ಆಕರ್ಷಕ ಕೂದಲು ಬೇಕೆಂದರೆ ನಿಮ್ಮ ಊಟದಲ್ಲಿ  ಹಸಿರು ಸೋಪ್ಪು, ತರಕಾರಿಗಳನ್ನು ಹೆಚ್ಚಾಗಿ ಸೇವನೆ ಮಾಡಿ.  ಇದನ್ನೂ ಓದಿ: ನಾಲಿಗೆಗೆ ಕಹಿ ನೀಡುವ ಬೇವು ಆರೋಗ್ಯಕ್ಕೆ ಒಳ್ಳೆಯದು

    * ವಿಟಮಿನ್‍ಗಳಿರುವ ಆಹಾರವನ್ನು ಸೇವಿಸಿ. ಇದನ್ನೂ ಓದಿ: ಸರ್ವ ರೋಗಕ್ಕೂ ದಾಸವಾಳದಲ್ಲಿದೆ ಮದ್ದು

    * ಈರುಳ್ಳಿಯ ರಸ ತೆಗೆದು ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ಸ್ನಾನ ಮಾಡಿದರೆ ತಲೆ ಹೊಟ್ಟು ನಿಧಾನವಾಗಿ ನಿವಾರಣೆಯಾಗುತ್ತದೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಅಲೋವೆರಾ ಎಲೆಗಳಿಂದ ತಲೆ  ಚೆನ್ನಾಗಿ ಉಜ್ಜಿದ ನಂತರ 20 ನಿಮಿಷಗಳ ಕಾಲ ಬಿಡಿ. ಅದರ ನಂತರ ಸಾಮಾನ್ಯ ತಂಪಾದ ನೀರಿನಿಂದ ಕೂದಲನ್ನು ಸ್ವಚ್ಛಗೊಳಿಸಿ. ಇದನ್ನೂ ಓದಿ: ಡಾರ್ಕ್ ಸರ್ಕಲ್‍ಗೆ ಇಲ್ಲಿದೆ ಪರಿಹಾರ

  • ಡಾರ್ಕ್ ಸರ್ಕಲ್‍ಗೆ ಇಲ್ಲಿದೆ ಪರಿಹಾರ

    ಡಾರ್ಕ್ ಸರ್ಕಲ್‍ಗೆ ಇಲ್ಲಿದೆ ಪರಿಹಾರ

    ಹೊಳೆಯುವ ಕಣ್ಣುಗಳ ಕೆಳಗೆ ಕಪ್ಪಾಗಿದ್ದರೆ, ನಿಮ್ಮ ಅಂದಕ್ಕೆ ಕಪ್ಪು ಚುಕ್ಕೆಯಾಗುತ್ತದೆ. ಡಾರ್ಕ್ ಸರ್ಕಲ್ ಸಮಸ್ಯೆ ಪ್ರತಿಯೊಬ್ಬರಿಗೂ ಕಾಡುತ್ತದೆ. ಕಣ್ಣಿನ ಕೆಳಗೆ ಕಪ್ಪಾಗುವುದು ಕೇವಲ ಮಹಿಳೆಯರಲ್ಲೇ ಅಲ್ಲದೇ ಪುರುಷರಲ್ಲು ಹೆಚ್ಚಾಗಿ ಕಂಡು ಬರುತ್ತದೆ. ಈ ಸಮಸ್ಯೆ ಇಲ್ಲಿದೆ ಪರಿಹಾರ

    * ಎಳೆ ಸೌತೆಕಾಯಿಯನ್ನು ಕತ್ತರಿಸಿಕೊಂಡು ನಿಮ್ಮ ಎರಡೂ ಕಣ್ಣುಗಳ ಮೇಲೆ ಇಟ್ಟುಕೊಳ್ಳಿ ನಿಮ್ಮ ಕಣ್ಣುಗಳು ಹೆಚ್ಚು ತಾಜಾತನದಿಂದ ಕೂಡಿರುತ್ತದೆ.  ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಟೊಮೆಟೋ ರಸ, ನಿಂಬೆ ಹಣ್ಣಿನ ರಸವನ್ನು ಚೆನ್ನಾಗಿ ಮಿಶ್ರಣ ಮಾಡಿ. ಕಣ್ಣುಗಳ ಸುತ್ತ ಹಚ್ಚಿ ಸುಮಾರು ಅರ್ಧ ಗಂಟೆಯವರೆಗೆ ಇದನ್ನು ಹಾಗೆ ಬಿಟ್ಟು, ಆಮೇಲೆ ತಂಪಾದ ನೀರಿನಿಂದ ಮುಖ ತೊಳೆದುಕೊಳ್ಳಬೇಕು. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

    * ಹತ್ತಿಯನ್ನು ರೋಸ್ ವಾಟರ್‌ನಲ್ಲಿ ಮುಳುಗಿಸಿ ಕಣ್ಣಿನ ಸುತ್ತ ಇಟ್ಟುಕೊಳ್ಳಿ ಇದರಿಂದ ಬಹುತೇಕ ಕಣ್ಣುಗಳ ಸಮಸ್ಯೆಗಳು ಬಗೆಹರಿಯುತ್ತವೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಆಲೂಗಡ್ಡೆ ರಸವನ್ನು ಹತ್ತಿಯ ಸಹಾಯದಿಂದ ಕಣ್ಣುಗಳ ಮೇಲೆ 10 ನಿಮಿಷಗಳ ಕಾಲ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದನ್ನೂ ಓದಿ: ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

    * ಮಲಗುವ ಮೊದಲು ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಚರ್ಮ ಹೊಳಿಪಿನಿಂದ ಕೂಡಿರುತ್ತದೆ. ಇದನ್ನೂ ಓದಿ: ಮಜ್ಜಿಗೆಯಲ್ಲಿದೆ ಮದ್ದಿನ ಗುಣ- ಪ್ರತಿನಿತ್ಯ ಒಂದು ಲೋಟ ಮಜ್ಜಿಗೆ ಕುಡಿದು ನೋಡಿ

    * ಕ್ಯಾರೆಟ್, ಬಿಟ್ರೂಟ್‍ಗಳಂತಹ ಹಸಿ ತರಕಾರಿಗಳನ್ನು ಹೆಚ್ಚು ಸೇವಿಸಿ. ವಿಟಮಿನ್ ಮತ್ತು ಮಿನರಲ್ಸ್‍ಗಳಿಂದ ಕೂಡಿದ ತರಕಾರಿಗಳು ದೇಹವನ್ನೂ ಕೂಡ ಆರೋಗ್ಯಯುತವಾಗಿಡುತ್ತದೆ. ಇದನ್ನೂ ಓದಿ: ಅಂದಕಷ್ಟೇ ಅಲ್ಲ ಉತ್ತಮ ಆರೋಗ್ಯಕ್ಕೂ ಧರಿಸಿ ಕಾಲ್ಗೆಜ್ಜೆ

  • ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

    ಬಾಯಿ ದುರ್ವಾಸನೆ ಬರುತ್ತಿದ್ಯಾ? ಹಾಗಿದ್ರೆ ಈ ಮನೆ ಮದ್ದು ಬಳಕೆ ಮಾಡಿ

    ಹೆಚ್ಚಿನವರಿಗೆ ಬಾಯಿ ದುರ್ವಾಸನೆ ಸಮಸ್ಯೆ ಕಾಡುತ್ತದೆ. ಬಾಯಿ ದುರ್ನಾತದಿಂದ ಜನರೊಂದಿಗೆ ಬೆರೆಯಲು ನಮಗೆ ಮುಜುಗರವಾಗುತ್ತದೆ. ಇಂತಹ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತದೆ. ನಿಮ್ಮ ಮನೆಯಲ್ಲಿಯೇ ದೊರೆಯುವ ಅನೇಕ ಪದಾರ್ಥಗಳಿಂದ ನಿಮ್ಮ ಬಾಯಿಯ ದುರ್ವಾಸನೆಯನ್ನು ನೈಸರ್ಗಿಕವಾಗಿ ತೊಲಗಿಸಬಹುದು.

    * ಲವಂಗ ಬಾಯಿಯ ದುರ್ವಾಸನೆಯನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ಆಗಾಗ್ಗೆ 3 ರಿಂದ 4 ಲವಂಗವನ್ನು ನಿಧಾನವಾಗಿ ಜಗಿಯಿರಿ.ನಿಮ್ಮ ಬಾಯಿಯ ದುರ್ವಾಸನೆ, ಹಲ್ಲು ನೋವು ಹಾಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು

    * ಊಟದ ಬಳಿಕ ಒಂದು ಚಮಚ ಜೀರಿಗೆ ಸೇವನೆ ಮಾಡಿದರೆ ಅದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ. ಇದನ್ನೂ ಓದಿ: 

    * ನೀವು ಹೆಚ್ಚಾಗಿ ನೀರು ಸೇವನೆ ಮಾಡಬೇಕು. ಬ್ಯಾಕ್ಟೀರಿಯಾವನ್ನು ಹೊರಹಾಕಿ ನಿಮ್ಮ ದೇಹವನ್ನು ರಿಫ್ರೆಶ್ ಮಾಡುತ್ತದೆ. ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣಿನ ರಸ, ಸಕ್ಕರೆ, ಉಪ್ಪನ್ನು ಮಿಶ್ರಣ ಮಾಡಿ ಸೇವನೆ ಮಾಡಿ.  ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ಜೇನುತುಪ್ಪ ಮತ್ತು ದಾಲ್ಚಿನ್ನಿಯ ಮಿಶ್ರಣವು ನಿಮ್ಮ ಬಾಯಿಯ ದುರ್ವಾಸನೆಯನ್ನು ಸಂಪೂರ್ಣವಾಗಿ ಹೋಗಲಾಡಿಸುತ್ತದೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು

    * ನೀರಿಗೆ ಒಂದು ಚಮಚ ಮೆಂತೆ ಕಾಳುಗಳನ್ನು ಹಾಕಿ. ಇದನ್ನು ಸೋಸಿಕೊಂಡ ಬಳಿಕ ನೀರನ್ನು ದಿನದಲ್ಲಿ ಒಂದು ಸಲ ಕುಡಿಯಿರಿ. ಇದನ್ನೂ ಓದಿ: ಮಜ್ಜಿಗೆಯಲ್ಲಿದೆ ಮದ್ದಿನ ಗುಣ- ಪ್ರತಿನಿತ್ಯ ಒಂದು ಲೋಟ ಮಜ್ಜಿಗೆ ಕುಡಿದು ನೋಡಿ

    * ಒಂದು ಲೋಟ ನೀರಿಗೆ ಸ್ವಲ್ಪ ಅರಿಶಿನ ಹಾಕಿ ಕುಡಿದರೆ ಬಾಯಿ ದುರ್ವಾಸನೆ ಬೀರುವುದಿಲ್ಲ. ಇದನ್ನೂ ಓದಿ: ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು

    * ಆಗಾಗ್ಗೆ ದಾಲ್ಚಿನ್ನಿ ಸಣ್ಣ ತುಂಡನ್ನು ಬಾಯಿಯಲ್ಲಿ ಜಗಿಯುತ್ತಾ ಇರಿ ಇದನ್ನೂ ಓದಿ:  ಒಡೆದ ಹಿಮ್ಮಡಿಯ ಆರೈಕೆಗೆ ಏನು ಮಾಡಬೇಕು ಗೊತ್ತಾ?

    * ಬೆಚ್ಚಗಿನ ನೀರಿನಲ್ಲಿ ಉಪ್ಪು ಬೆರಸಿ ಬಾಯಿ ಮುಕ್ಕಳಿಸಿ. ಇದು ಕೆಟ್ಟ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ತಡೆಯುತ್ತದೆ

  • ಕಾಂತಿಯುತ ತ್ವಚೆಗಾಗಿ ಸಾಸಿವೆ ಫೇಸ್ ಪ್ಯಾಕ್ ಒಮ್ಮೆ ಟ್ರೈ ಮಾಡಿ

    ಕಾಂತಿಯುತ ತ್ವಚೆಗಾಗಿ ಸಾಸಿವೆ ಫೇಸ್ ಪ್ಯಾಕ್ ಒಮ್ಮೆ ಟ್ರೈ ಮಾಡಿ

    ಹಿಳೆಯರು ಸೌಂದರ್ಯಪ್ರಿಯರು ಟ್ಯಾನಿಂಗ್, ಸನ್ ಬರ್ನ್, ಒಣ ಚರ್ಮದಿಂದ ಮುಕ್ತಿ ಪಡೆದು ಮೃದು ಮತ್ತು ಹೊಳೆಯುವ ಚರ್ಮವನ್ನು ಪಡೆಯಲು ಜನರು ವಿವಿಧ ಸೌಂದರ್ಯ ವರ್ಧಕಗಳನ್ನು ಬಳಸುತ್ತಾರೆ. ಆದರೆ ಮನೆಯಲ್ಲಿಯೇ ಕೆಲವು ಫೇಸ್ ಪ್ಯಾಕ್‍ಗಳನ್ನು ತಯಾರಿಸಿ ಮುಖಕ್ಕೆ ಹಚ್ಚಿ ತ್ವಚೆಯನ್ನು ಹೊಳೆಯುವಂತೆ ಮಾಡಬಹುದಾಗಿದೆ.

    * ಎರಡು ಚಮಚ ಸಾಸಿವೆಯನ್ನು ಮೊದಲಿಗೆ ಪುಡಿ ಮಾಡಿಕೊಳ್ಳಿ. ನಂತರ ಪುಡಿಗೆ ಒಂದು ಚಮಚ ಅಲೋವೆರಾ ಜೆಲ್ ಅನ್ನು ಹಾಕಿ ನಂತರ ಎರಡನ್ನು ಹೊಂದಿಕೊಳ್ಳುವವರೆಗೆ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮುಖಕ್ಕೆ ಹಾಗೂ ಕುತ್ತಿಗೆಗೆ ಹಚ್ಚಿಕೊಳ್ಳಿ. ಇಪ್ಪತ್ತು ನಿಮಿಷಗಳ ಕಾಲ ಹಾಗೆ ಬಿಡಿ ನಂತರ ಮುಖವನ್ನು ಶುದ್ಧ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

    * ಸಾಸಿವೆ ಪೌಡರ್ ಗೆ 1  ಚಮಚ ಮೊಸರನ್ನು ಮಿಶ್ರಣ ಮಾಡಿ. ನಂತರ ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ ಹಾಗೂ ಒಣಗಲು ಬಿಡಿ. ಒಣಗಿದ ನಂತರ ಸ್ಕ್ರಬ್ ಮಾಡಿ, 5 ನಿಮಿಷಗಳ ನಂತರ ನೀರಿನಿಂದ ತೊಳೆಯಿರಿ. ಇದು ಟ್ಯಾನಾದ ಚರ್ಮವನ್ನು ಹಾಗೂ ಮೃತ ಚರ್ಮವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

    * ಸಾಸಿವೆ ಪುಡಿಗೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ. ಕೆಲವು ಚಮಚ ನೀರು ಸೇರಿಸಿ ದಪ್ಪ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿಕೊಳ್ಳಿ. ಇದನ್ನು 15 ನಿಮಿಷಗಳ ಕಾಲ ಬಿಡಿ. ನಂತರ ಅದನ್ನು ನೀರಿನಿಂದ ತೊಳಿಯಿರಿ. ಇದು ಚರ್ಮದ ಶುಷ್ಕತೆಯನ್ನು ತೆಗೆದುಹಾಕುತ್ತದೆ ಮತ್ತು ಚರ್ಮವನ್ನು ಮೃದುವಾಗಿಸುತ್ತದೆ. ಹಾಗೂ ಈ ಪ್ಯಾಕ್ ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚುಸುತ್ತದೆ.

    * ಎರಡು ಚಮಚ ಸಾಸಿವೆ ಬೀಜಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ಅದರಲ್ಲಿ ಎರಡು ಚಮಚ ಕಡಳೆ ಹಿಟ್ಟು ಬೆರೆಸಿ ಎರಡು ಚಮಚ ಹಾಲು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಈ ಪೇಸ್ಟ್ ಅನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ ಮತ್ತು ಇಪ್ಪತ್ತು ನಿಮಿಷಗಳ ಕಾಲ ಹಾಗೆ ಬಿಡಿ. ಇದರ ನಂತರ, ನೀರಿನಿಂದ ಮುಖವನ್ನು ತೊಳೆಯಬೇಕು.

    ಮನೆಯಲ್ಲಿ ಇರುವ ಸಾಸಿವೆ ಬೀಜಗಳನ್ನು ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಂಡರೆ ಸಾಕು. ಇದು ಟ್ಯಾನಿಂಗ್ ಹಾಗೂ ಶುಷ್ಕತೆಯಂತಹ ಸಮಸ್ಯೆಯನ್ನು ಪರಿಹರಿಸುವುದರ ಜೊತೆಗೆ ನಿಮಗೆ ಬೇಕಾದ ಹೊಳಪನ್ನು ನೀಡುತ್ತದೆ.

  • ದೇಹದ ತೂಕ ಇಳಿಸಬೇಕಾ? ಈ ಸಲಹೆ ಪಾಲಿಸಿ

    ದೇಹದ ತೂಕ ಇಳಿಸಬೇಕಾ? ಈ ಸಲಹೆ ಪಾಲಿಸಿ

    ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ. ಆದರೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದು ಸುಲಭದ ಮಾತಲ್ಲ ಎನ್ನುವುದು ತಿಳಿದಿರುವ ವಿಚಾರವಾಗಿದೆ.

    ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಬಹಳ ಕಷ್ಟ. ನೀವು ಹೊಟ್ಟೆಯ ಕೊಬ್ಬನ್ನು ಕರಗಿಸಲು ಹಲವಾರು ಪ್ರಯತ್ನಗಳನ್ನು ಮಾಡಿರುತ್ತೀರಿ, ಕೆಲವು ಜೀವನಶೈಲಿ ಕೂಡ ಹೊಟ್ಟೆಯ ಬೊಜ್ಜನ್ನು ಕರಗಿಸಲು ಸಹಾಯ ಮಾಡುತ್ತವೆ. ಮನೆಯಲ್ಲಿರುವ ಕೆಲವು ಪದಾರ್ಥ ಮತ್ತು ಕೆಲವು ಪ್ರತಿನಿತ್ಯ ರೂಢಿಯನ್ನು ಬೆಳಸಿಕೊಳ್ಳುವ ಮೂಲಕವಾಗಿ ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡಬಹುದಾಗಿದೆ.

    * ಸರಿಯಾದ ಸಮಯಕ್ಕೆ ಊಟ, ತಿಂಡಿ ತಿನ್ನುವ ಅಭ್ಯಾಸವನ್ನು ಇಟ್ಟುಕೊಳ್ಳುವುದು ಉತ್ತಮವಾಗಿದೆ. ಸಂಜೆ 7 ರ ಮೊದಲು ಆಹಾರ ಸೇವಿಸುವುದು ಉತ್ತಮವಾಗಿದೆ. ಅಲ್ಲದೇ ಊಟವಾದ ಸುಮಾರು 1 ರಿಂದ 2 ಗಂಟೆಗಳ ನಂತರ ಮಲಗುವುದು ಒಳ್ಳೆಯ ಅಭ್ಯಾಸವಾಗಿದೆ.

    * ಅಡುಗೆ ಮನೆಯಲ್ಲಿಯೇ ಹೊಟ್ಟೆಯ ಬೊಜ್ಜನ್ನು ಕರಗಿಸಲು ಬೇಕಾಗುವ ಹಲವಾರು ವಸ್ತುಗಳಿವೆ. ಮೆಂತ್ಯೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯದ ಪುಡಿಯನ್ನು ನೀರಿನೊಂದಿಗೆ ಸೇವಿಸುವುದು ಹೊಟ್ಟೆಯ ಬೊಜ್ಜನ್ನು ಕರಗಿಸಲು ರಾಮಬಾಣವಾಗುತ್ತದೆ.

    *ಮೆಂತ್ಯೆ ಬೀಜಗಳನ್ನು ರಾತ್ರಿಯಿಡೀ ನೆನೆಸಿ ಮತ್ತು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು. ಮೆಂತ್ಯೆಯಲ್ಲಿನ ಕೆಲ ಪದಾರ್ಥಗಳು ಹೊಟ್ಟೆಯಲ್ಲಿನ ಬೊಜ್ಜನ್ನು ಕರಗಿಸುತ್ತದೆ ಹಾಗೂ ದೇಹದ ತೂಕ ಕಡಿಮೆ ಮಾಡುತ್ತದೆ.

    * ಹುಣಸೇ ಹಣ್ಣನ್ನು ಸೇವಿಸುವುದು ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ರುಚಿಯನ್ನು ಹೆಚ್ಚಿಸುವುದರ ಜೊತೆಗೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನಿಮ್ಮ ದೇಹದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

    * ಒಣ ಶುಂಠಿಯ ಪುಡಿಯನ್ನು ಸೇವಿಸುವುದು ಉತ್ತಮ. ಏಕೆಂದರೆ ಅದು ಕೊಬ್ಬನ್ನು ಕರಗಿಸಲು ಉಪಯುಕ್ತವಾದ ಥರ್ಮೋಜೆನಿಕ್ ಏಜೆಂಟ್‍ಗಳನ್ನು ಹೊಂದಿದೆ. ಬಿಸಿ ನೀರಿನಲ್ಲಿ ಒಣಗಿದ ಶುಂಠಿಯನ್ನು ಸೇವಿಸುವುದರಿಂದ ಹೆಚ್ಚುವರಿ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.

    * ನಿಮಗೆ ನೀರು ಕುಡಿಯಬೇಕು ಎನಿಸಿದಾಗೆಲ್ಲ ಬೆಚ್ಚಗಿನ ನೀರನ್ನು ಕುಡಿಯಿರಿ. ಜೀರ್ಣಕ್ರೀಯೆಯನ್ನು ಸುಧಾರಿಸುತ್ತದೆ.

    * ನೀವು ಪ್ರತಿನಿತ್ಯ ಒಂದೇ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವ ಅಭ್ಯಾಸವನ್ನು ರೂಢಿಮಾಡಿಕೊಳ್ಳಿ.

  • ಬೆಳಗ್ಗೆ ಎದ್ದು ಬೆಚ್ಚಗಿನ ನೀರು ಕುಡಿಯಿರಿ- ಆರೋಗ್ಯ ಕಾಪಾಡಿಕೊಳ್ಳಿ

    ಬೆಳಗ್ಗೆ ಎದ್ದು ಬೆಚ್ಚಗಿನ ನೀರು ಕುಡಿಯಿರಿ- ಆರೋಗ್ಯ ಕಾಪಾಡಿಕೊಳ್ಳಿ

    ಬೆಳಗ್ಗೆ ಎದ್ದು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ಹಲವರು ಇಟ್ಟುಕೊಂಡಿರುತ್ತಾರೆ. ಬೆಳಗ್ಗೆ ನೀರು ಕುಡಿಯುವುದರಿಂದ ಹಲವು ರೋಗಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಬೆಡ್ ಕಾಫಿ ಕುಡಿಯುವುದರಿಂದ ಆರೋಗ್ಯ ಹಾನಿಯಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.

    * ಪ್ರತಿದಿನ ಬೆಳಗ್ಗೆ ಹಾಸಿಗೆಯಿಂದ ಎದ್ದ ತಕ್ಷಣವೇ ಒಂದು ಲೋಟ ಬೆಚ್ಚನೆಯ ನೀರು ಕುಡಿಯುವ ಅಭ್ಯಾಸವಿದ್ದರೆ ಒಳ್ಳೆಯದು ಎಂದು ವೈದ್ಯರು, ಹಿರಿಯರು ಹೇಳುತ್ತಾರೆ.

    * ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲದೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳ ಬುಹುದಾಗಿದೆ.

    * ನೀರನ್ನು ಹೆಚ್ಚಾಗಿ ನಾವು ಸೇವಿಸುವುದರಿಂದ ದೇಹದ ಮೈಕಾಂತಿ ಹೆಚ್ಚಾಗುತ್ತದೆ.

    * ಬಿಸಿ ನೀರು ಕುಡಿಯುವುದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ.

    * ಪ್ರತಿದಿನ ಒಂದು ಲೋಟ ಬಿಸಿ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡರೆ ನಮ್ಮ ಜೀರ್ಣಕ್ರಿಯೆಗೂ ಸಹ ತುಂಬಾ ಸಹಾಯಕವಾಗುತ್ತದೆ.

    * ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬೆಚ್ಚಗಿನ ನೀರು ಕುಡಿಯುವುದರಿಂದ ನಿಮಗೆ ಹೊಟ್ಟೆ ನೋವು ಸಹ ಇದ್ದರೆ ನಿವಾರಣೆಯಾಗುತ್ತದೆ.

    * ನೀರು ಸೇವನೆಯಿಂದ ರಕ್ತ ಪರಿಚಲನೆಗೆ ತುಂಬಾ ಸಹಾಯಕವಾಗಿದ್ದು, ಚರ್ಮವನ್ನು ಹೊಳೆಯುವಂತೆ ಮಾಡುವಂತಹ ಶಕ್ತಿ ಈ ಒಂದು ಲೋಟ ಬಿಸಿ ನೀರಿಗಿದೆ. ಅದಕ್ಕಾಗಿ ಇದನ್ನು ಅಭ್ಯಾಸ ಮಾಡಿಕೊಳ್ಳುವುದು ಉತ್ತಮವಾಗಿದೆ.

    * ಬೆಳಗ್ಗೆ ಎದ್ದ ತಕ್ಷಣ ಬೆಡ್ ಕಾಫಿ ಕುಡಿಯುವ ಬದಲು ಖಾಲಿ ಹೊಟ್ಟೆಯಲ್ಲಿ ಬಿಸಿ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ ಬಹಳ ವೇಗವಾಗಿ ತಮ್ಮ ದೈಹಿಕ ತೂಕಕ್ಕೆ ಸಂಬಂಧಪಟ್ಟಂತೆ ಒಳ್ಳೆಯ ಫಲಿತಾಂಶಗಳನ್ನು ಕಾಣಬಹುದು.

    * ನಿಮ್ಮ ತಲೆ ಕೂದಲು ಪ್ರತಿದಿನ ಉದುರುತ್ತಿದ್ದರೆ, ನಿಮ್ಮ ದೇಹದ ಚರ್ಮ ಕಾಂತಿ ಕಳೆದುಕೊಂಡಿದ್ದರೆ, ಅದಕ್ಕೆ ಮುಖ್ಯ ಕಾರಣ ದೇಹದಲ್ಲಿ ನೀರಿನ ಅಂಶ ಕಡಿಮೆ ಇರುವುದಾಗಿದೆ. ಹೀಗಾಗಿ ನೀವು ಬೆಳಗ್ಗೆ ನೀರು ಕುಡಿಯುವ ಅಭ್ಯಾಸವನ್ನು ಬೆಳಸಿಕೊಳ್ಳಿ.

  • ಖರ್ಜೂರದಲ್ಲಿದೆ ಮನೆಮದ್ದಿನ ಗುಣ

    ಖರ್ಜೂರದಲ್ಲಿದೆ ಮನೆಮದ್ದಿನ ಗುಣ

    ಡ್ರೈ ಫ್ರೂಟ್ಸ್ ಎಂದರೆಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಚಿಕ್ಕ ಮಕ್ಕಳಿಂದ ದೊಡ್ಡವರವರೆಗೂ ಡ್ರೈ ಫ್ರೂಟ್ಸ್‍ಅನ್ನು ಇಷ್ಟ ಪಟ್ಟು ತಿನ್ನುತ್ತಾರೆ. ಖರ್ಜೂರ ಮರುಭೂಮಿಯ ಬೆಳೆಯಾದರೂ ಹಲವಾರು ಪೋಷಕಾಂಶಗಳನ್ನು ಹೊಂದಿರುವ ಅದ್ಭುತ ಆಹಾರವಾಗಿದೆ.  ಇದನ್ನೂ ಓದಿ: ಗಂಡ ಹೆಂಡತಿ ಮಧ್ಯೆಯೇ ಅಸಮಾಧಾನ ಇರುತ್ತೆ, ಅಂಥಾದ್ರಲ್ಲಿ ಇಷ್ಟು ದೊಡ್ಡ ಪಕ್ಷದಲ್ಲಿ ಅಸಮಾಧಾನ ಸಾಮಾನ್ಯ – ಸುಧಾಕರ್

    * ಒಣಗಿದ ಖರ್ಜೂರಗಳಲ್ಲಿ ಕಂಡುಬರುವ ರಂಜಕ, ಪೋಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಮುಂತಾದ ಖನಿಜಗಳು ನಮ್ಮ ಎಲುಬುಗಳನ್ನು ಬಲಪಡಿಸುತ್ತವೆ.

    * ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಖರ್ಜೂರ ಸೇವನೆ ಉತ್ತಮ. ಪ್ರತಿನಿತ್ಯ ಖರ್ಜೂರ ಸೇವನೆಯನ್ನು ರೂಢಿಯಲ್ಲಿಟ್ಟುಕೊಂಡರೆ ಆರೋಗ್ಯವೂ ಸುಧಾರಿಸುತ್ತದೆ. ಜೊತೆಗೆ ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ಇದನ್ನೂ ಓದಿ: ರಾಮಲಿಂಗಾ ರೆಡ್ಡಿಯಿಂದ ಸಾವಿರಾರು ಮಂದಿಗೆ ಫುಡ್ ಕಿಟ್ ವಿತರಣೆ

    * ಖರ್ಜೂರಗಳನ್ನು ನಿಯಮಿತವಾಗಿ ಸೇವಿಸುವ ಜನರು ಉತ್ತಮ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಹೊಂದಬಹುದಾಗಿದೆ. ಖರ್ಜೂರಗಳಲ್ಲಿ ಕರಗುವ ನಾರಿನಂಶ ಅಧಿಕವಾಗಿದೆ.


    * ಒಂದು ಲೋಟ ಹಾಲಿಗೆ ಖರ್ಜೂರದ ಪೇಸ್ಟ್ ಅಥವಾ ಖರ್ಜೂರದ ಚೂರನ್ನು ಹಾಕಿಕೊಂಡು ಸೇವನೆ ಮಾಡುವುದರಿಂದ ತೂಕ ಹೆಚ್ಚಿಸಿಕೊಳ್ಳಬಹುದು.

    * ಖರ್ಜೂರ ತೂಕ ನಷ್ಟಕ್ಕೆ ಸಹಾ ಸಹಾಯ ಮಾಡುತ್ತದೆ. ಕರಗುವ ನಾರಿನಂಶವಿದೆ, ಆದರೆ ಈ ನಾರಿನಂಶ ನಿಮಗೆ ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಭಾವನೆ ಮೂಡಿಸುತ್ತವೆ ಹಾಗೂ ಅನಗತ್ಯ ಆಹಾರ ಸೇವನೆಯಿಂದ ತಡೆಯುತ್ತದೆ.

    * ಖರ್ಜೂರ ತಿನ್ನುವುದರಿಂದ ಕ್ಯಾನ್ಸರ್ ರಕ್ತ ಕಣಗಳು ಹರಡುವುದನ್ನು ತಡೆಗಟ್ಟಬಹುದಾಗಿದೆ.

    * ಖರ್ಜೂರದಲ್ಲಿ ಕಬ್ಬಿಣದಂಶ ಇರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಬಹುದು.

  • ಏಲಕ್ಕಿ ಸೇವನೆಯಿಂದ ಸಿಗಲಿದೆ ಹಲವು ಪ್ರಯೋಜನ

    ಏಲಕ್ಕಿ ಸೇವನೆಯಿಂದ ಸಿಗಲಿದೆ ಹಲವು ಪ್ರಯೋಜನ

    ಲಕ್ಕಿ ಅಡುಗೆ ಮನೆಯಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಸುವಾಸೆಭರಿತವಾದ ಏಲಕ್ಕಿ ಅಡುಗೆಗೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಸಮಯ ಸಿಕ್ಕಾಗ ಏಲಕ್ಕಿ ಪುಡಿಯನ್ನು ಮಾಡಿಟ್ಟುಕೊಂಡು ನಿಯಮಿತವಾಗಿ ಸೇವಿಸುತ್ತಾ ಬಂದರೆ ಕೆಲವು ಉತ್ತಮ ಅಂಶಗಳನ್ನು ನಾವು ಪಡೆದುಕೊಳ್ಳ ಬಹುದು. ಕೆಲವು ಅನಾರೋಗ್ಯ ಸಮಸ್ಯೆಗಳಿಂದ ದೂರ ಇರಬಹುದಾಗಿದೆ.

    * ಏಲಕ್ಕಿ ಸೇವೆನೆಯಿಂದ ಚರ್ಮದ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು

    * ಕಲವರಿಗೆ ಬಾಯಲ್ಲಿ ಹುಣ್ಣು ಆಗುತ್ತದೆ ಅಂತವರು ಏಲಕ್ಕಿ ಪುಡಿಗೆ ಜೇನುತುಪ್ಪ ಸೇರಿಸಿ ಸೇವಿಸಬೇಕು.

    * ರಕ್ತಹೀನತೆ ಇದ್ದಲ್ಲಿ, ಒಂದು ಚಿಟಿಕೆ ಏಲಕ್ಕಿ ಒಪುಡಿ ಮತ್ತು ಒಂದು ಚಮಚ ಅರಿಶಿಣ ಪುಡಿಯನ್ನು ಒಂದು ಲೋಟ ಹಾಲಿನೊಂದಿಗೆ ಸೇರಿಸಿ ರಾತ್ರಿ ಮಲಗುವ ಮುನ್ನ ಸೇವಿಸಿದರೆ ರಕ್ತ ಹೀನತೆ ನಿವಾರಣೆಯಾಗುತ್ತದೆ.

    * ಆ್ಯಸಿಡಿಟಿ ಇದ್ದವರು ಒಂಡೆರದು ಏಲಕ್ಕಿಯನ್ನು ಪುಡಿ ಮಾಡಿ ಬಿಸಿನೀರಿಲ್ಲಿ ಹಾಕಿ ಕುದಿಸಿ ನಂತರ ಕುಡಿದರೆ ಆ್ಯಸಿಡಿಟಿ ಸಮಸ್ಯೆ ನಿವಾರಣೆಯಾಗುತ್ತದೆ.

    * ನಿಯಮಿತವಾಗಿ ಏಲಕ್ಕಿ ಸೇವಿಸದರೆ ರೋಗ ನೀರೋಧಕ ಶಕ್ತಿ ವೃದ್ಧಿಯಾಗುತ್ತದೆ.

    * ಪಿತ್ತ, ಕಫ, ದಂತ ರೋಗ ಮತ್ತಯ ಬಾಯಿ ವಾಸನೆ ನಿವಾರಣೆಗೆ ಏಲಕ್ಕಿ ಸೇವನೆ ಉತ್ತಮ ಪರಿಹಾರವಾಗಿದೆ.

    * ನಿತ್ಯವೂ ಏಲಕ್ಕಿ ನೀರನ್ನು ಕುಡಿಯುವ ಮೂಲಕ ಖಿನ್ನತೆಯ ವಿರುದ್ಧ ಹೋರಾಡುವ ಶಕ್ತಿ ಹೆಚ್ಚುತ್ತದೆ. ಖಿನ್ನತೆಯಿಂದ ಬಳಲುವ ರೋಗಿಗಳಿಗೆ ಬಹಳ ಹಿಂದಿನಿಂದಲೇ ಆಯುರ್ವೇದ ಏಲಕ್ಕಿ ನೀರನ್ನು ಕುಡಿಯುವ ಚಿಕಿತ್ಸೆಯನ್ನು ಒದಗಿಸಿದೆ.

  • ಕೆಮ್ಮಿಗೆ ಇದೆ ಪವರ್‌ಫುಲ್ ಮನೆಮದ್ದು

    ಕೆಮ್ಮಿಗೆ ಇದೆ ಪವರ್‌ಫುಲ್ ಮನೆಮದ್ದು

    ಸಾಮಾನ್ಯವಾಗಿ ವಾತಾವರಣದಲ್ಲ ಆಗುವ ಏರುಪೇರಿನಿಂದಾಗಿ, ಕೆಮ್ಮು ಮತ್ತು ಶೀತ ಬರುವುದು ಸಹಜವಾಗಿದೆ. ಕೆಮ್ಮು ಎಂದು ಮಾತ್ರೆಗಳ ಮೊರೆ ಹೋಗುವ ಮೊದಲು ನೈಸರ್ಗಿಕ ಚಿಕಿತ್ಸೆಯೇ ಉತ್ತಮವಾಗಿದೆ. ಹೀಗಾಗಿ ಈ ಮನೆಮದ್ದುಗಳನ್ನು ಒಮ್ಮೆ ಉಪಯೋಗಿಸಿ.

    * ಟೀ ಸ್ಪೂನ್ ಜೇನುತುಪ್ಪ, ಟೀ ಸ್ಪೂನ್ ಆಲಿವ್ ಆಯಿಲ್ ಮತ್ತು 3 ನಿಂಬೆ ಹಣ್ಣಿನ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಕಡಿಮೆ ಉರಿಯಲ್ಲಿ ಬಿಸಿ ಮಾಡಿ. ಕೆಳಗಿಳಿಸಿ. ಅದನ್ನು ತಣ್ಣಗಾಗಲು ಬಿಡಿ. ಗಾಳಿಯಾಡದ ಪಾತ್ರೆಯಲ್ಲಿ ಸಂಗ್ರಹಿಸಿ. ಕೆಮ್ಮು ಬಂದಾಗ ಈ ಸಿರಪ್ ಸೇವನೆ ಸಹಾಯ ಮಾಡುತ್ತದೆ. ನಿಂಬೆ ಮತ್ತು ಜೇನುತುಪ್ಪವು ಗಂಟಲಿನ ಸೋಂಕನ್ನು ಶಮನಗೊಳಿಸುತ್ತದೆ ಮತ್ತು ಜೇನುತುಪ್ಪವು ಕೆಮ್ಮಿನಿಂದ ಪರಿಹಾರವನ್ನು ನೀಡುತ್ತದೆ. ಜೇನುತುಪ್ಪದಿಂದ ಉತ್ತಮ ನಿದ್ರೆ ಸಹ ಬರುತ್ತದೆ. ಆಲಿವ್ ಎಣ್ಣೆ ಗಂಟಲಿನಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

    * ಸ್ವಲ್ಪ ಜೇನುತುಪ್ಪದೊಂದಿಗೆ ನಿಂಬೆ ರಸವನ್ನು ಮಿಶ್ರಣ ಮಾಡಿ. ಒಂದು ಚಿಟಿಕೆ ಕೇನ್ ಪೆಪ್ಪರ್ ಸೇರಿಸಿ. ಕೆಮ್ಮು ನಿವಾರಣೆಗೆ ಇದನ್ನು ನುಂಗಿ. ಜೇನುತುಪ್ಪವು ಗಂಟಲು ನೋವಿಗೆ ಚಿಕಿತ್ಸೆ ನೀಡುತ್ತದೆ . ಕೆಲವು ಸಂಶೋಧನೆಗಳ ಪ್ರಕಾರ, ಜೇನುತುಪ್ಪವು ಕೆಮ್ಮನ್ನು ನಿವಾರಿಸುತ್ತದೆ ಮತ್ತು ನಿಂಬೆ ಉರಿಯೂತವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

    * ನಿಮ್ಮ ಗಂಟಲು ತೆರವುಗೊಳಿಸಲು ಪ್ರತಿದಿನ ಎರಡು ಬಾರಿ ಅರ್ಧ ಟೀ ಚಮಚ ಅರಿಶಿನದೊಂದಿಗೆ ಒಂದು ಲೋಟ ಹಾಲು ಕುಡಿಯಬೇಕು ಆಗ ಕೆಮ್ಮೆ ಕಡಿಮೆಯಾಗುತ್ತದೆ.

    * ಅರ್ಧ ಗ್ಲಾಸ್ ನೀರಿಗೆ ಟೀ ಸ್ಪೂನ್ ಜೇನುತುಪ್ಪ, 1 ಟೀ ಸ್ಪೂನ್ ದಾಲ್ಚಿನ್ನಿ ಪುಡಿ ಸೇರಿಸಿ, ಚೆನ್ನಾಗಿ ಮಿಶ್ರಮಾಡಿ ಪ್ರತಿ ದಿನ ಬೆಳಿಗ್ಗೆ ಎರಡು ಬಾರಿ ಈ ಮಿಶ್ರಣವನ್ನು ಸೇವಿಸಬೇಕು.

    * ಅರ್ಧ ಟೀ ಚಮಚ ಶುಂಠಿ ಪುಡಿ. ಒಂದು ಚಿಟಕಿ ದಾಲ್ಚಿನ್ನಿ. 1-2 ಲವಂಗವನ್ನು ನೀರಿಗೆ ಹಾಕಿ ಮಸಾಲೆ ಟೀ ಮಾಡಿ ಕುಡಿಯುವುದರಿಂದ ಕಫ್ ನಿಧಾನವಾಗಿ ಕಡಿಮೆಯಾಗುತ್ತದೆ.

    * ಈರುಳ್ಳಿಯ ರಸವನ್ನು ಬಿಸಿ ಮಾಡಿಕೊಂಡು ಇದಕ್ಕೆ, ಬೆಳ್ಳುಳ್ಳಿಯ ಒ0ದೆರಡು ದಳವನ್ನು ಜಜ್ಜಿ ಸೇರಿಸಿಕೊಂಡು ಈ ಮಿಶ್ರಣವನ್ನು ಒಂದು ದೊಡ್ಡ ಗ್ಲಾಸ್‍ನಷ್ಟು ಉಗುರು ಬೆಚ್ಚಗಿನ ಬಿಸಿನೀರಿಗೆ ಸೇರಿಸಿ ಹಾಗೂ ಒಂದು ಟೇಬಲ್ ಚಮಚದಷ್ಟು ಜೇನುತುಪ್ಪವನ್ನು ಸೇರಿಸಿ ಕುಡಿಯುತ್ತಾ ಬಂದರೆ ಕೆಮ್ಮಿನ ಸಮಸ್ಯೆ ಕೂಡಲೇ ಕಡಿಮೆಯಾಗುತ್ತಾ ಬರುತ್ತದೆ.