Tag: ಮನೇಕಾ ಗಾಂಧಿ

  • ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್‌ ರೇವಣ್ಣ? – ಸಿಎಂಗೆ ಮನೇಕಾ ಪತ್ರ

    ದಂತಚೋರರ ಬೆನ್ನಿಗೆ ನಿಂತ್ರಾ ಪ್ರಜ್ವಲ್‌ ರೇವಣ್ಣ? – ಸಿಎಂಗೆ ಮನೇಕಾ ಪತ್ರ

    ಹಾಸನ : ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಸಿಎಂ ಬೊಮ್ಮಾಯಿ ಅವರಿಗೆ ಸಂಸದೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.

    ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಹಾಸನದ ವೀರಾಪುರ ಗ್ರಾಮದಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗ ಕೊಂದು ಹೂತಿದ್ದ ಆರೋಪಿಗಳು ಆನೆ ದಂತ ಮಾರಾಟ ಮಾಡುವಾಗ ಬೆಂಗಳೂರಿನಲ್ಲಿ ಸಿಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

    ಹಾಸನ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. ಆದರೆ ಕೇಸ್‌ನಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್‌ಎಫ್‌ಒ ಪ್ರಯತ್ನ ಮಾಡಿದ್ದಾರೆ. ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಭ್ರಷ್ಟಾಚಾರ  ಎಸಗಿದ್ದಾರೆ.  ಇದನ್ನೂ ಓದಿ: ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

    ಪದೇ ಪದೇ ಕೇಸ್ ಅನ್ನು ವರ್ಗಾಯಿಸಲು ಸಿಕೆ ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಪ್ರಜ್ವಲ್‌ ರೇವಣ್ಣ ಒತ್ತಡ ಹಾಕಿದ್ದಾರೆ. ಸಿಕ್ಕಿ ಬಿದ್ದ ಆರೋಪಿಗಳು ತನ್ನ ಪಕ್ಷದ ಬೆಂಬಲಿಗರು ಎಂಬ ಕಾರಣಕ್ಕೆ ಪ್ರಜ್ವಲ್ ರೇವಣ್ಣ ಒತ್ತಡ ಹಾಕಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಸಿಎಂ ಮಧ್ಯಪ್ರವೇಶ ಮಾಡಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಜುಲೈ 18 ರಂದು ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.

    ಕಳೆದ ಎರಡು ತಿಂಗಳ ಹಿಂದೆ ಕಾಡಾನೆ ಕೊಂದು ಜಮೀನಿನಲ್ಲಿ ಹೂತು ಹಾಕಿ ಬೆಂಗಳೂರಿನಲ್ಲಿ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ವೀರಾಪುರ ಗ್ರಾಮದ ಚಂದ್ರೇಗೌಡ, ತಮ್ಮಯ್ಯ, ಪಾಪಯ್ಯ ಅವರನ್ನು ಪೊಲೀಸರು ಬಂಧಿಸಿದ್ದರು. ಕರೆಂಟ್ ಶಾಕ್ ಕೊಟ್ಟು ಒಂಟಿ ಸಲಗವನ್ನು ಕೊಂದಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಅಲ್ಲಿನ ಸ್ಥಳೀಯ ಇಬ್ಬರ ಕೈವಾಡವೂ ಇದೆ. ಆದರೆ ಆನೆ ದಂತಗಳನ್ನು ಮಾರಾಟ ಮಾಡಿದವರ ಬಂಧನ ಆಗಿದೆ. ಜಮೀನಿನಲ್ಲಿ ಕೊಂದು ಹೂತು ಹಾಕಿರುವ ಪ್ರಮುಖ ಆರೋಪಿ ಪಕ್ಷದ ಕಾರ್ಯಕರ್ತನಾಗಿರುವ ಕಾರಣ ಆತನ ರಕ್ಷಣೆಗೆ ಹಾಗೂ ಸಂಪೂರ್ಣ ಕೇಸ್ ಮುಚ್ಚಿ ಹಾಕಲು ಪ್ರಜ್ವಲ್ ರೇವಣ್ಣ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಕೇರಳ ಆನೆ ಹತ್ಯೆ ಪ್ರಕರಣ: ಬಿಜೆಪಿ ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲು

    ಕೇರಳ ಆನೆ ಹತ್ಯೆ ಪ್ರಕರಣ: ಬಿಜೆಪಿ ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲು

    ತಿರುವನಂತಪುರಂ: ಕೇರಳದ ರಾಜ್ಯದ ಪಾಲಕ್ಕಡ್ ಜಿಲ್ಲೆಯಲ್ಲಿ ನಡೆದಿದ್ದ ಆನೆ ಹತ್ಯೆ ಪ್ರರಕಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕಿ, ಸಂಸದೆ ಮನೇಕಾ ಗಾಂಧಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

    ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಜಿಲ್ಲೆ ಹಾಗೂ ಅಲ್ಲಿನ ನಿವಾಸಿಗಳಿಗೆ ಅಪಮಾನ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ ಎಂದು ವಕೀಲ ಸುಭಾಷ್ ಚಂದ್ರನ್ ಆರೋಪಿಸಿದ್ದಾರೆ. ಮನೇಕಾ ಗಾಂಧಿ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಇಂತಹ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಹಲವರ ಮೇಲೂ ದೂರು ದಾಖಲಿಸಲಾಗಿದೆ. ಸದ್ಯ ಮನೇಕಾ ಅವರ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಕೋಮು ಸಂಘರ್ಷಕ್ಕೆ ಪ್ರೇರಣೆ), 120 ಬಿ (ಕ್ರಿಮಿನಲ್ ಪಿತೂರಿ) ಅಡಿ ದೂರು ದಾಖಲಿಸಲಾಗಿದೆ.

    ಅನಾನಸ್ ಹಣ್ಣಿನಲ್ಲಿ ಪಟಾಕಿ ಇಟ್ಟು ಆನೆಯ ಸಾವಿಗೆ ಕಾರಣರಾಗಿದ್ದ ಆರೋಪಿಗಳ ವಿರುದ್ಧ ದೇಶದ್ಯಾಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಕೆಲವರು ಧರ್ಮದ ರಂಗು ಬಳಿದು ಜಿಲ್ಲೆಯಲ್ಲಿ ಹೆಚ್ಚಿರುವ ಸಮುದಾಯವೊಂದರ ಜನರಿಂದಲೇ ಇಂತಹ ಕೃತ್ಯ ನಡೆದಿದೆ ಎಂಬರ್ಥ ನೀಡುವ ಪೋಸ್ಟ್ ಗಳನ್ನು ಮಾಡಿದ್ದರು. ಮನೇಕಾ ಗಾಂಧಿ ಅವರು ನಮ್ಮ ಜಿಲ್ಲೆಯ ಜನರ ಸುಳ್ಳು ಆರೋಪಗಳನ್ನು ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಜಿಲ್ಲೆಯ ಜನರ ನಡುವಿನ ಶಾಂತಿಯ ವಾತಾವರಣವನ್ನು ಕದಡುವಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುವುದು ದೂರುದಾರರ ಆರೋಪವಾಗಿದೆ.

    ಮನೇಕಾ ಗಾಂಧಿ ಅವರು ಆನೆಯನ್ನು ಕೊಂದ ಘಟನೆ ಬಗ್ಗೆ ಆಕ್ರೋಶ ಹೊರ ಹಾಕಿ ಕೆಲ ಅಂಕಿ ಅಂಶಗಳ ವಿವರಗಳನ್ನು ನೀಡಿದ್ದರು. ಕೇರಳದಲ್ಲಿ ಮೂರು ದಿನಕ್ಕೊಂದು ಆನೆಯನ್ನು ಹತ್ಯೆ ಮಾಡಲಾಗುತ್ತಿದೆ. ಅದರಲ್ಲೂ ಮಲಪ್ಪುರಂ ಜಿಲ್ಲೆ ಅಪರಾಧಗಳ ಗೂಡಾಗಿದೆ. ಆನೆಗಳ ರಕ್ಷಣೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು.

    ಇತ್ತ ಪ್ರಕರಣ ವಿಚಾರಣೆಯನ್ನು ನಡೆಸುತ್ತಿರುವ ಪೊಲೀಸರು ಜೂನ್ 5ರಂದು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಶೀಘ್ರವೇ ಉಳಿದ ಆರೋಪಿಗಳನ್ನು ಕೂಡ ಬಂಧನ ಮಾಡುವುದಾಗಿ ಕೇರಳ ಅರಣ್ಯ ಇಲಾಖೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಬಂಧನ ಮಾಡಿರುವ ವ್ಯಕ್ತಿ ಸ್ಥಳೀಯರಿಗೆ ಸ್ಫೋಟಕ ಪದಾರ್ಥಗಳನ್ನು ಮಾರಾಟ ಮಾಡುತ್ತಾನೆ ಎಂಬ ಮಾಹಿತಿ ಲಭಿಸಿದ್ದು, ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಸ್ಥಳೀಯರು ಇಂತಹ ಪದಾರ್ಥಗಳನ್ನು ಬಳಕೆ ಮಾಡುತ್ತಾರೆ ಎಂಬ ಅಂಶ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಕೇರಳ ಸಿಎಂ ಕೂಡ ಪ್ರಕರಣದ ಸಂಪೂರ್ಣ ತನಿಖೆ ಮಾಡಲು ಆದೇಶ ನೀಡಿರುವ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

  • ತೆಲಂಗಾಣ ಎನ್‍ಕೌಂಟರ್: ಕೇಜ್ರಿವಾಲ್, ಶಶಿ ತರೂರ್, ಮನೇಕಾ ಗಾಂಧಿ ಅಪಸ್ವರ

    ತೆಲಂಗಾಣ ಎನ್‍ಕೌಂಟರ್: ಕೇಜ್ರಿವಾಲ್, ಶಶಿ ತರೂರ್, ಮನೇಕಾ ಗಾಂಧಿ ಅಪಸ್ವರ

    ನವದೆಹಲಿ: ಪಶುವೈದೈ ದಿಶಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿರುವ ಪ್ರಕರಣ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹಾಗೂ ಬಿಜೆಪಿ ನಾಯಕಿ ಮನೇಕಾ ಗಾಂಧಿ ಅಪಸ್ವರ ವ್ಯಕ್ತಪಡಿಸಿದ್ದಾರೆ.

    ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್ ಅವರು, ಸಾಮಾನ್ಯವಾಗಿ ಅತ್ಯಾಚಾರ ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತವೆ. ಉನ್ನಾವೋ ಅಥವಾ ಹೈದರಾಬಾದ್ ಪ್ರಕರಣವಾದರೂ ಜನ ಸಾಮಾನ್ಯರು ಆರೋಪಿಗಳ ವಿರುದ್ಧ ಕೋಪವನ್ನು ಹೊಂದಿರುತ್ತಾರೆ. ಆದ್ದರಿಂದ ಎನ್‍ಕೌಂಟರ್ ಕುರಿತು ಅವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದಿದ್ದಾರೆ.

    ಕ್ರಿಮಿನಲ್ ಪ್ರಕರಣಗಳಲ್ಲಿ ಜನರು ನ್ಯಾಯಾಂಗ ವ್ಯವಸ್ಥೆ ಮೇಲೆ ಇರುವ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದು, ದೇಶದ ಎಲ್ಲಾ ಸರ್ಕಾರಗಳು ಕೂಡ ಈ ಬಗ್ಗೆ ಕ್ರಮಕೈಗೊಳ್ಳಬೇಕಿದೆ. ಆ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸುವ ಕಾರ್ಯವನ್ನು ಮಾಡಬೇಕಿದೆ ಎಂದರು.

    ಇತ್ತ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಮನೇಕಾ ಗಾಂಧಿ ಅವರು, ಪ್ರಕರಣ ದೇಶದ ಎದುರು ಭಯಾನಕ ಅಂಶವನ್ನು ಮುಂದಿಟ್ಟಿದೆ. ನೀವು ಬೇಕೆಂದ ಮಾತ್ರಕ್ಕೆ ಜನರನ್ನು ಕೊಲೆ ಮಾಡಲು ಆಗುವುದಿಲ್ಲ. ಕಾನೂನುನನ್ನು ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ, ಆರೋಪಿಗಳನ್ನು ನ್ಯಾಯಾಲಯ ಗಲ್ಲಿಗೇರಿಸಬೇಕಿತ್ತು ಎಂದಿದ್ದಾರೆ.

    ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿಕ್ರಿಯೆ ನೀಡಿ, ತೆಲಂಗಾಣ ಪೊಲೀಸರು ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭದಲ್ಲಿ ಎನ್‍ಕೌಂಟರ್ ಮಾಡಿರುವುದಾಗಿ ಹೇಳಿದ್ದಾರೆ. ಘಟನೆ ಕುರಿತು ಸಂಪೂರ್ಣ ಮಾಹಿತಿ ಲಭ್ಯವಾರುವವರೆಗೂ ಯಾವುದೇ ಖಂಡನೆಯನ್ನು ಮಾಡುವುದು ಸರಿಯಲ್ಲ. ಆದರೆ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸರು ಆರೋಪಿಗಳನ್ನು ಹತ್ಯೆ ಮಾಡುವುದು ಕಾನೂನಿನ ಸಮ್ಮತವಲ್ಲ ಎಂದಿದ್ದಾರೆ. ತೆಲಂಗಾಣ ಪೊಲೀಸರ ಕ್ರಮವನ್ನು ಪ್ರಶ್ನಿಸಿ ಪತ್ರಕರ್ತರೊಬ್ಬರು ಮಾಡಿರುವ ಟ್ವೀಟ್‍ಗೆ ಶಶಿ ತರೂರ್ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ.

  • ಪುತ್ರನನ್ನ ಸಂಪುಟದಿಂದ ಕೈ ಬಿಟ್ಟಿದ್ಯಾಕೆ ಪ್ರಶ್ನೆಗೆ ಉತ್ತರಿಸದ ಮನೇಕಾ ಗಾಂಧಿ

    ಪುತ್ರನನ್ನ ಸಂಪುಟದಿಂದ ಕೈ ಬಿಟ್ಟಿದ್ಯಾಕೆ ಪ್ರಶ್ನೆಗೆ ಉತ್ತರಿಸದ ಮನೇಕಾ ಗಾಂಧಿ

    ಲಕ್ನೋ: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರನ್ನು ಈ ಬಾರಿ ನೂತನ ಮೋದಿ ಸಂಪುಟದಿಂದ ಕೈ ಬಿಡಲಾಗಿದೆ. ಈ ಸಂಬಂಧ ಸಂಪುಟದಿಂದ ಕೈ ಬಿಟ್ಟಿದ್ಯಾಕೆ ಪ್ರಶ್ನೆಗೆ ಉತ್ತರಿಸದೇ ಅವರು ನಡೆದಿದ್ದಾರೆ.

    ಈ ಬಾರಿ ಸುಲ್ತಾನಪುರ ಕ್ಷೇತ್ರದಿಂದ ಗೆಲುವು ದಾಖಲಿಸಿರುವ ಮನೇಕಾ ಗಾಂಧಿ ಅಲ್ಲಿಯ ಜನತೆಗೆ ಧನ್ಯವಾದ ತಿಳಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಮನೇಕಾ ಗಾಂಧಿ, ನನ್ನನ್ನು ಸಂಪುಟದಿಂದ ಕೈ ಬಿಟ್ಟಿದ್ಯಾಕೆ ಪ್ರಶ್ನೆಗೆ ಸುಲ್ತಾನಪುರ ಕ್ಷೇತ್ರದ ಜನತೆ ಉತ್ತರ ನೀಡಲಿದ್ದಾರೆ. ಈ ಬಾರಿ ಪುತ್ರ ವರುಣ್ ಗಾಂಧಿ ಸಹ ಸೇರ್ಪಡೆಯಾಗಿಲ್ಲ ಎಂಬ ಪ್ರಶ್ನೆ ಕೇಳುತ್ತಿದ್ದಂತೆ, ಸರಿ ಇವಾಗ ನಾವಿನ್ನು ಹೊರಡುತ್ತೇವೆ ಎಂದು ಹೇಳಿ ಹೋಗಿದ್ದಾರೆ.

    ಕ್ಷೇತ್ರದ ಪ್ರತಿಯೊಂದು ಗ್ರಾಮಗಳನ್ನು ಅಭಿವೃದ್ಧಿಯತ್ತ ಮುಂದಿನ ದಿನಗಳಲ್ಲಿ ಗಮನ ಹರಿಸುತ್ತೇನೆ. ಸಮಾಜದ ಪ್ರತಿಯೊಂದು ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಭೇದ ಭಾವ ಮಾಡದೇ ಕೆಲಸ ಮಾಡುತ್ತೇನೆ. ಅತಿ ಹೆಚ್ಚು ಮತಗಳಿಂದ ಗೆಲುವು ದಾಖಲಿಸಿದ ಮತ್ತು ಸಚಿವರಾಗಿರುವರಿಗೆ ತಾತ್ಕಾಲಿಕ ಸ್ಪೀಕರ್ ಸ್ಥಾನ ನೀಡುವ ಸಾಧ್ಯತೆಗಳಿರುತ್ತವೆ ಎಂದು ಸ್ಪಷ್ಟಪಡಿಸಿದರು.

    ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ನಿಮ್ಮ ಗ್ರಾಮಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಕುರಿತು ಪತ್ರಗಳನ್ನು ಬರೆದು ನೀಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು. 2014ರಲ್ಲಿ ಫಿಲಿಭಿತ್ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮನೇಕಾ ಗಾಂಧಿ ಈ ಬಾರಿ ಸುಲ್ತಾನಪುರದಿಂದ ಸ್ಪರ್ಧೆ ಮಾಡಿ ಗೆಲುವು ದಾಖಲಿಸಿದ್ದಾರೆ.

    ಸುಲ್ತಾನಪುರದಿಂದ ಕಣಕ್ಕಿಳಿದಿದ್ದ ಬಹುಜನ ಸಮಾಜವಾದಿ ಪಾರ್ಟಿಯ ಚಂದ್ರ ಭದ್ರ ಸಿಂಗ್ ಸೋನು ವಿರುದ್ಧ 14 ಸಾವಿರ ಮತಗಳ ಅಂತರದಲ್ಲಿ ಮನೇಕಾ ಗಾಂಧಿ ಗೆಲುವು ದಾಖಲಿಸಿದ್ದಾರೆ. ಬಿಎಸ್‍ಪಿಯ ಸೋನು ಕೆಲವು ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮನೇಕಾ ಗಾಂಧಿ ಅವರಿಗೆ ಭಾರೀ ಸ್ಪರ್ಧೆಯನ್ನು ನೀಡಿದ್ದರು.

  • ಮುಸ್ಲಿಮರು ನನಗೆ ವೋಟ್ ಹಾಕದೇ ಇದ್ರೂ ಕೆಲಸ ತೆಗೆದುಕೊಳ್ಳಿ: ವರುಣ್ ಗಾಂಧಿ

    ಮುಸ್ಲಿಮರು ನನಗೆ ವೋಟ್ ಹಾಕದೇ ಇದ್ರೂ ಕೆಲಸ ತೆಗೆದುಕೊಳ್ಳಿ: ವರುಣ್ ಗಾಂಧಿ

    ಲಕ್ನೋ: ನಮ್ಮ ಕೆಲಸಕ್ಕೆ ಪ್ರತಿಯಾಗಿ ನೀವು (ಮುಸ್ಲಿಮರು) ನಮಗೆ ಮತ ನೀಡಬೇಕೆಂದು ಕೇಂದ್ರ ಸಚಿವೆ ಮನೇಕಾ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಅವರ ಪುತ್ರ, ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಮುಸ್ಲಿಂ ಮತದಾರರ ಮನವೊಲಿಸಲು ಮುಂದಾಗಿದ್ದಾರೆ.

    ಉತ್ತರ ಪ್ರದೇಶದ ಪಿಲಿಭಿತ್‍ನಲ್ಲಿ ಪ್ರಚಾರದ ವೇಳೆ ಮಾತನಾಡಿದ ವರುಣ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ಯಾವುದೇ ಧರ್ಮ, ಜಾತಿ ಇಲ್ಲ. ಮುಸ್ಲಿಮರು ನನಗೆ ಮತ ಹಾಕಿ ಗೆಲ್ಲಿಸುವಂತೆ ಮನವಿ ಮಾಡಿಕೊಳ್ಳುತ್ತಿರುವೆ ಎಂದರು.

    ಮುಸ್ಲಿಮರು ನನಗೆ ಮತ ಹಾಕಿದರೆ ಭಾರೀ ಅಂತರದಿಂದ ಗೆಲುವು ಸಾಧಿಸುತ್ತೇನೆ. ಇದು ನನಗೆ ಬಹಳ ಖುಷಿ ತಂದು ಕೊಡುತ್ತದೆ. ಒಂದು ವೇಳೆ ಮತ ಹಾಕದಿದ್ದರೂ ಪರವಾಗಿಲ್ಲ. ನನ್ನಿಂದ ಕೆಲಸವನ್ನು ತೆಗೆದುಕೊಳ್ಳಬಹುದು. ನನ್ನ ಚಹಾದಲ್ಲಿ ನಿಮ್ಮ ಬಳಿ ಇರುವ ಸಕ್ಕರೆ ಸೇರಿದರೆ ಮತ್ತಷ್ಟು ಸಿಹಿಯಾಗುತ್ತದೆ. ನಾನೇನಾದರೂ ತಪ್ಪು ಹೇಳಿದ್ನಾ? ಮುಸ್ಲಿಮರು ನನ್ನ ಚಹಾದಲ್ಲಿ ಸಕ್ಕರೆ ಹಾಕುತ್ತೀರಾ ಎಂದು ಸಮಾವೇಶದಲ್ಲಿ ಸೇರಿದ್ದ ಮುಸ್ಲಿಂ ಮತದಾರರನ್ನು ಪ್ರಶ್ನಿಸಿದರು.

    ಮನೇಕಾ ಗಾಂಧಿ ಹೇಳಿದ್ದೇನು?:
    ಈ ಮೊದಲು ಸುಲ್ತಾನಪುರದ ಬಿಜೆಪಿ ಅಭ್ಯರ್ಥಿಯಾಗಿರುವ, ಕೇಂದ್ರ ಸಚಿವೆ ಮನೇಕಾ ಗಾಂಧಿ, ಮುಸ್ಲಿಮರ ಮತಗಳ ಹೊರತಾಗಿ ನಾನು ಜಯ ಸಾಧಿಸುತ್ತೇನೆ. ಮುಸ್ಲಿಂ ಸಮುದಾಯದ ಮತ ಪಡೆಯದೇ ಜಯ ಸಾಧಿಸಲು ನನಗೆ ಇಷ್ಟವಿಲ್ಲ. ಗೆದ್ದ ಮೇಲೆ ಕೆಲಸ ಕೇಳಿಕೊಂಡು ಮುಸ್ಲಿಮರು ಬಂದಾಗ ನಾನು ನೂರು ಬಾರಿ ಯೋಚಿಸಿ ಉದ್ಯೋಗ ನೀಡೋದು ಬೇಡ ಎಂದು ನಿರ್ಧರಿಸಬೇಕಾಗುತ್ತದೆ. ಮತದ ಬದಲಾಗಿ ಉದ್ಯೋಗ ನೀಡೋದು ವ್ಯವಹಾರ ಎಂದು ಮುಸ್ಲಿಮರು ತಿಳಿದುಕೊಳ್ಳಬೇಕಿದೆ. ನಾವೇನು ಮಹಾತ್ಮ ಗಾಂಧೀಜಿಯ ಕುಟುಂಬಸ್ಥರು ಅಲ್ಲ. ಕೇವಲ ಕೊಡುವುದು ಗೊತ್ತಿಲ್ಲ. ನಮ್ಮ ಕೆಲಸಕ್ಕೆ ಪ್ರತಿಯಾಗಿ ನೀವು ನಮಗೆ ಮತ ನೀಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು.

  • ಮುಸ್ಲಿಮರಿಗೆ ಉದ್ಯೋಗ ಬೇಕಾದ್ರೆ ಮತ ನೀಡಿ: ಮನೇಕಾ ಗಾಂಧಿ ಹೇಳಿಕೆಗೆ ನೋಟಿಸ್

    ಮುಸ್ಲಿಮರಿಗೆ ಉದ್ಯೋಗ ಬೇಕಾದ್ರೆ ಮತ ನೀಡಿ: ಮನೇಕಾ ಗಾಂಧಿ ಹೇಳಿಕೆಗೆ ನೋಟಿಸ್

    ಲಕ್ನೋ: ನಾನು ಈಗಾಗಲೇ ಚುನಾವಣೆಯನ್ನು ಗೆದ್ದಿದ್ದೇನೆ. ಹಾಗಾಗಿ ಉದ್ಯೋಗ ಬೇಕಾದರೆ ಮುಸ್ಲಿಮರು ನನಗೆ ಮತ ನೀಡಿ ಎಂದು ಕೇಂದ್ರ ಸಚಿವೆ, ಸುಲ್ತಾನಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನೇಕಾ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಚುನಾವಣಾ ಆಯೋಗ ಸ್ಪಷ್ಟನೆ ಕೇಳಿದ್ದು, ಮೂರು ದಿನಗಳಲ್ಲಿ ಉತ್ತರಿಸಬೇಕೆಂದು ಸೂಚಿಸಿದೆ.

    ಅತ್ಯಧಿಕ ಮುಸ್ಲಿಂ ಸಮುದಾಯದ ಜನರು ವಾಸವಾಗಿರುವ ಗೌರಬಾರಿಕ್ ಗ್ರಾಮದಲ್ಲಿ ಮಾತನಾಡಿದ ಮನೇಕಾ ಗಾಂಧಿ, ಚುನಾವಣೆಯಲ್ಲಿ ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯಿಂದ ಗೆಲ್ಲುತ್ತಿದ್ದೇನೆ. ಆದ್ರೆ ಮುಸ್ಲಿಮರ ಮತಗಳ ಹೊರತಾಗಿ ನಾನು ಜಯ ಸಾಧಿಸುತ್ತೇನೆ. ಮುಸ್ಲಿಂ ಸಮುದಾಯದ ಮತ ಪಡೆಯದೇ ಜಯ ಸಾಧಿಸಲು ನನಗೆ ಇಷ್ಟವಿಲ್ಲ. ಗೆದ್ದ ಮೇಲೆ ಕೆಲಸ ಕೇಳಿಕೊಂಡು ಮುಸ್ಲಿಮರು ಬಂದಾಗ ನಾನು ನೂರು ಬಾರಿ ಯೋಚಿಸಿ ಉದ್ಯೋಗ ನೀಡೋದು ಬೇಡ ಎಂದು ನಿರ್ಧರಿಸಬೇಕಾಗುತ್ತದೆ. ಮತದ ಬದಲಾಗಿ ಉದ್ಯೋಗ ನೀಡೋದು ವ್ಯವಹಾರ ಎಂದು ಮುಸ್ಲಿಮರು ತಿಳಿದುಕೊಳ್ಳಬೇಕಿದೆ. ನಾವೇನು ಮಹಾತ್ಮ ಗಾಂಧೀಜಿಯ ಕುಟುಂಬಸ್ಥರು ಅಲ್ಲ. ಕೇವಲ ಕೊಡುವುದು ಗೊತ್ತಿಲ್ಲ. ನಮ್ಮ ಕೆಲಸಕ್ಕೆ ಪ್ರತಿಯಾಗಿ ನೀವು ನಮಗೆ ಮತ ನೀಡಬೇಕೆಂದು ಹೇಳಿದ್ದಾರೆ.

    ಕಳೆದ ಬಾರಿ ಗೆಲುವು ಸಾಧಿಸಿದ ಪೀಲಿಬೀತ್ ಕ್ಷೇತ್ರದ ಜನರಿಗೆ ಫೋನ್ ಮಾಡಿ ನನ್ನ ಕಾರ್ಯ ವೈಖರಿಯ ಬಗ್ಗೆ ವಿಚಾರಿಸಿ. ಅಲ್ಲಿ ಕೆಲಸ ಮಾಡಿಲ್ಲ ಎಂದು ಹೇಳಿದರೆ ನನಗೆ ಮತ ಹಾಕಬೇಡಿ. ಚುನಾವಣೆಯಲ್ಲಿ ನಾನು ಗೆಲ್ಲುತ್ತಿದ್ದು, ನಿಮ್ಮ ಅಗತ್ಯ ನನಗಿಲ್ಲ. ಇದೀಗ ನಿಮಗೆ ನನ್ನ ಅಗತ್ಯವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಮನೇಕಾ ಗಾಂಧಿ ಅವರ ಹೇಳಿಕೆಯನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಈಗಾಗಲೇ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳಲ್ಲಿ ನಿಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಬೇಕೆಂದು ಸೂಚಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮುಸ್ಲಿಂ ಕಾಂಗ್ರೆಸ್, ಮನೇಕಾರ ಹೇಳಿಕೆ ಖಂಡಿಸಿ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ. ಈ ರೀತಿ ದುರಾಲೋಚನೆಯ ಹೇಳಿಕೆಯಿಂದ ಸಮುದಾಯಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಮನೇಕಾ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದೆ.

  • ಮಹಾರಾಷ್ಟ್ರ ಅರಣ್ಯ ಸಚಿವರನ್ನು ಮಂತ್ರಿಗಿರಿಯಿಂದ ಕೈಬಿಡಿ – ಮನೇಕಾ ಗಾಂಧಿ ಒತ್ತಾಯ

    ಮಹಾರಾಷ್ಟ್ರ ಅರಣ್ಯ ಸಚಿವರನ್ನು ಮಂತ್ರಿಗಿರಿಯಿಂದ ಕೈಬಿಡಿ – ಮನೇಕಾ ಗಾಂಧಿ ಒತ್ತಾಯ

    ನವದೆಹಲಿ: ಅವನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಅರಣ್ಯ ಸಚಿವ ಸುಧೀರ್ ಮುಂಗತಿವಾರ್ ಅವರನ್ನು ಮಂತ್ರಿಗಿರಿಯಿಂದ ವಜಾ ಮಾಡುವಂತೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಒತ್ತಾಯಿಸಿದ್ದಾರೆ.

    ಈ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇ0ದ್ರ ಫಡ್ನವೀಸ್ ಅವರಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ. ವನ್ಯ ಜೀವಿಗಳನ್ನು ರಕ್ಷಿಸುವ ಸ್ಥಾನದಲ್ಲಿದ್ದು, ಅವನಿ ಹತ್ಯೆಗೆ ಅವಕಾಶ ನೀಡಿರುವುದು ದುರಂತ. ಹೀಗಾಗಿ ಸಚಿವ ಸುಧೀರ್ ಮುಂಗತಿವಾರ್ ಅವರನ್ನು ಅರಣ್ಯ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

    ಅರಣ್ಯ ಅಧಿಕಾರಿಗಳು ಪ್ರಾಣಿಗಳನ್ನು ರಕ್ಷಿಸಲು ಇರುವುದೇ ಹೊರತು, ಹತ್ಯೆ ಮಾಡಲು ಸೂಚಿಸಲು ಅಲ್ಲ. ಮಕ್ಕಳ ಅಭಿವೃದ್ಧಿ, ಏಳಿಗೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಶ್ರಮಿಸುತ್ತದೆ. ಅದರಂತೆ ಅರಣ್ಯ ಇಲಾಖೆ ವನ್ಯ ಜೀವಿಗಳ ಸಂರಕ್ಷಣೆಗೆ ಶ್ರಮಿಸಬೇಕು ಎಂದು ಕಿಡಿಕಾರಿದ್ದಾರೆ.

    ಏನಿದು ಪ್ರಕರಣ?:
    ಕಳೆದ ಎರಡು ವರ್ಷಗಳಿಂದ 14 ಮಂದಿಯನ್ನು ತಿಂದು ಹಾಕಿದ್ದ ಹೆಣ್ಣು ಹುಲಿ ಅವನಿಯನ್ನು ನವೆಂಬರ್ 2ರಂದು ಮಹಾರಾಷ್ಟ್ರದ ಯಾವತ್ಮಲ್ ನಲ್ಲಿ ಹತ್ಯೆ ಮಾಡಲಾಗಿತ್ತು. ಆದರೆ ಸೆಪ್ಟಂಬರ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಅವನಿ ಹೆಣ್ಣು ಹುಲಿಯನ್ನು ಕಂಡಲ್ಲಿ ಗುಂಡು ಹಾರಿಸುವಂತೆ ಅನುಮತಿ ನೀಡಿತ್ತು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಅವನಿ ಹತ್ಯೆ ಬಳಿಕ ಅದರ ಜೊತೆಗಿದ್ದ ಎರಡು ಹುಲಿ ಮರಿಗಳನ್ನು ರಕ್ಷಿಸಲಾಗಿದೆ.

    2012 ರಲ್ಲಿ ಯವತ್ಮಾಲ್ ಕಾಡಿನಲ್ಲಿ ಅವನಿ ಹೆಣ್ಣು ಹುಲಿ ಮೊದಲಿಗೆ ಕಾಣಿಸಿಕೊಂಡಿತ್ತು. 14 ಮಂದಿಯನ್ನು ಕೊಂದಿದ್ದ ದೇಹಗಳು ಕೂಡ ಕಾಡಿನಲ್ಲಿ ಪತ್ತೆಯಾಗಿತ್ತು. ಅದರಲ್ಲಿ 5 ಮಂದಿಯ ಸಾವಿಗೆ ಈ ಹುಲಿಯೇ ಕಾರಣ ಎಂಬುದು ಸಾಕ್ಷ್ಯಾಧಾರಗಳಿಂದ ತಿಳಿದು ಬಂದಿದೆ. ಸಮೀಕ್ಷೆಗಳ ಪ್ರಕಾರ ಕೆಲ ವರ್ಷಗಳಿಂದ ಆ ಅರಣ್ಯ ಪ್ರದೇಶದಲ್ಲಿ ಅವನಿ ಬಿಟ್ಟರೆ ಗಂಡು ಹುಲಿಯೊಂದು ವಾಸವಾಗಿರುವುದು ತಿಳಿದುಬಂದಿದೆ. ಮೃತಪಟ್ಟವರಲ್ಲಿ ಒಬ್ಬರ ದೇಹದಲ್ಲಿ ಮಾತ್ರ ಆ ಹುಲಿಯ ಡಿಎನ್‍ಎ ಪತ್ತೆಯಾಗಿದೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ – ಪೋಸ್ಕೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಚಿಂತನೆ

    ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ – ಪೋಸ್ಕೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಚಿಂತನೆ

    ನವದೆಹಲಿ: ದೇಶ್ಯಾದ್ಯಂತ ಹೆಚ್ಚುತ್ತಿರುವ ಅಪ್ರಾಪ್ತ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಮೇಲಿನ ಆಕ್ರೋಶಕ್ಕೆ ಕಿವಿಗೊಟ್ಟಿರುವ ಕೇಂದ್ರ ಸರ್ಕಾರ 12 ವರ್ಷಗಳ ಕೆಳಗಿನ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಲು ಚಿಂತನೆ ನಡೆಸಿದೆ.

    ಈ ಕ್ರಮಕ್ಕೆ ಪೂರಕವಾಗಿ ಈಗಾಗಲೇ ಜಾರಿಯಲ್ಲಿರುವ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರಲು ತೀರ್ಮಾನಿಸಿದ್ದು, ಈ ಕುರಿತು ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

    ಸುಪ್ರೀಂ ಕೋರ್ಟ್‍ಗೆ ವಕೀಲ ಶ್ರೀವಾಸ್ತವ ಎಂಬವರು ಸಾರ್ವಜನಿಕ ಹಿತಾಸಕ್ತಿ ಆರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯಲ್ಲಿ 12 ವರ್ಷಗಳ ಕೆಳಗಿನ ಅಪ್ರಾಪ್ತ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಗರಿಷ್ಠ ಶಿಕ್ಷೆಯನ್ನು ವಿಧಿಸುವಂತೆ ಮನವಿ ಮಾಡಿದ್ದರು.

    ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಏಪ್ರಿಲ್ 27 ಕ್ಕೆ ವಿಚಾರಣೆಯನ್ನು ಮುಂದೂಡಿತು.

    ಕಳೆದ ಕೆಲ ದಿನಗಳ ಹಿಂದೆ ಜಮ್ಮು ಕಾಶ್ಮೀರದ ಅಪ್ರಾಪ್ತ ಬಾಲಕಿ ಆಸಿಫಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಬಳಿಕ ಕೇಂದ್ರ ಸಚಿವೆ ಮನೇಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರುವ ಕಾನೂನಿನ ಕುರಿತು ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಬಳಿ ಮಾಹಿತಿ ನೀಡಲು ಸೂಚಿಸಿದ್ದರು.

    ದೇಶದಲ್ಲಿ ಆಸಿಫಾ ಹಾಗೂ ಅಪ್ರಾಪ್ತ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ತಮಗೆ ತೀವ್ರ ನೋವುಂಟು ಮಾಡಿದೆ. ಇಂತಹ ಪ್ರಕರಣಗಳನ್ನು ತಡೆಯಲು ಪೋಸ್ಕೋ ಕಾಯ್ದೆಯಲ್ಲಿ ತಿದ್ದುಪಡಿ ತರುವ ಕುರಿತು ಚಿಂತನೆ ನಡೆಸುವ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದರು.

  • ಬೆಳಗಾವಿಯ ಅನಧಿಕೃತ ಕಸಾಯಿಖಾನೆಗೆ ಸಚಿವೆ ಮನೇಕಾ ಗಾಂಧಿ ಭೇಟಿ

    ಬೆಳಗಾವಿಯ ಅನಧಿಕೃತ ಕಸಾಯಿಖಾನೆಗೆ ಸಚಿವೆ ಮನೇಕಾ ಗಾಂಧಿ ಭೇಟಿ

    ಬೆಳಗಾವಿ: ನಗರದಲ್ಲಿನ ಅನಧಿಕೃತ ಕಸಾಯಿಖಾನೆಗಳಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವೆ ಮನೇಕಾ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಹಲವಾರು ವರ್ಷಗಳಿಂದ ಅನಧಿಕೃತ ಕಸಾಯಿಖಾನೆಗಳು ನಡೆಯುತ್ತಿವೆ. ಈ ಕುರಿತು ಸ್ಥಳೀಯರು ಅಕ್ಟೋಬರ್ ನಲ್ಲಿ ದೂರು ದಾಖಲಿಸಿದ್ದರು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

    ತಮಗೆ ದೊರಕಿರುವ ಮೂಲಗಳ ಮಾಹಿತಿ ಪ್ರಕಾರ ಗೋವುಗಳ ಕಳ್ಳ ಸಾಗಾಣೆ ಮಾಡಲಾಗುತ್ತಿದೆ. ಆಕ್ರಮ ಬಾಂಗ್ಲಾ ವಲಸಿಗರು ಅಲ್ಲದೇ ಪರಿಸರ ನಾಶ ಮಾಡುವಂತಹ ಎಲ್ಲಾ ಆಕ್ರಮಗಳು ಇಲ್ಲಿ ನಡೆಯುತ್ತಿವೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದನ್ನು ತಡೆಯಲು ಯತ್ನಿಸದ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ಸೂಚನೆ ನೀಡುವುದಾಗಿ ತಿಳಿಸಿದರು. ಅಲ್ಲದೇ ಸ್ಥಳದಲ್ಲೇ ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು.

    ಇದೇ ವೇಳೆ ಆಕ್ರಮ ಕಸಾಯಿ ಖಾನೆ ನಡೆಯುತ್ತಿರುವುದರ ಹಿಂದೆ ಪೊಲೀಸರು ಹಾಗೂ ಸ್ಥಳೀಯ ಶಾಸಕರ ಕೈವಾಡವಿದೆ. ಅಲ್ಲದೇ ಬೆಳಗಾವಿ ಅಟೋ ನಗರದಲ್ಲಿ ಸರಿ ಸುಮಾರು 11 ಕ್ಕೂ ಹೆಚ್ಚು ಅನಧಿಕೃತ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರು ಸುಮ್ಮನಿದ್ದಾರೆ ಎಂದು ಆರೋಪಿಸಿದರು.

    ಈ ವೇಳೆ ಕೇಂದ್ರ ಸಚಿವರಿಗೆ ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದರಾದ ಸುರೇಶ ಅಂಗಡಿ ಹಾಗೂ ಪ್ರಹ್ಲಾದ್ ಜೋಷಿ ಸಾಥ್ ನೀಡಿದರು. ಅಲ್ಲದೇ ಅನಧಿಕೃತ ಕಸಾಯಿಖಾನೆಯ ಪ್ರವೇಶ ದ್ವಾರದ ಬಳಿ ಕೆಲ ನಿಮಿಷ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ನಂತರ ನಗರ ಪೊಲೀಸ್ ಆಯುಕ್ತ ಡಿಸಿ ರಾಜಪ್ಪ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಘಟನೆ ಕುರಿತು ಮಾಹಿತಿ ನೀಡಿದರು.

    ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಅನಧಿಕೃತ ಕಸಾಯಿ ಕಾರ್ಖಾನೆಗಳು ನಡೆಯುತ್ತಿದ್ದು, ಆಕ್ರಮವಾಗಿ ಗೋವುಗಳ ಮಾರಣ ಹೊಮ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಕುರಿತು ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆಕ್ರಮದ ಕುರಿತು ಮಾಹಿತಿ ಪಡೆದ ಪೊಲೀಸರು ಘಟಕಗಳನ್ನು ಸೀಜ್ ಮಾಡಿದ್ದರು. ಆದರೆ ಕಸಾಯಿಖಾನೆ ಮಾಲೀಕರು ಮತ್ತೊಂದು ದ್ವಾರದಿಂದ ವ್ಯವಹಾರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಪ್ರಸ್ತುತ ಕಸಾಯಿಖಾನೆ ಮಾಲೀಕರು ತಲೆ ಮರೆಸಿಕೊಂಡಿದ್ದು ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 9ರ ಬಾಲಕಿಯ ಖಡಕ್ ಪ್ರಶ್ನೆಯಿಂದ ಕಂಪೆನಿಯ ಜ್ಯೂಸ್ ಪ್ಯಾಕೇಜಿಂಗ್‍ನಲ್ಲಿ ಬದಲಾವಣೆ!

    9ರ ಬಾಲಕಿಯ ಖಡಕ್ ಪ್ರಶ್ನೆಯಿಂದ ಕಂಪೆನಿಯ ಜ್ಯೂಸ್ ಪ್ಯಾಕೇಜಿಂಗ್‍ನಲ್ಲಿ ಬದಲಾವಣೆ!

     

    ನವದೆಹಲಿ: 9 ವರ್ಷದ ಬಾಲಕಿಯೊಬ್ಬಳು ಜ್ಯೂಸ್ ಪ್ಯಾಕೆಟ್ ಮೇಲಿನ ಚಿತ್ರ ಹಾಗೂ ಅದರ ಮೇಲಿನ ಬರಹದ ಬಗ್ಗೆ ತಕರಾರು ತೆಗೆದು ಪತ್ರ ಬರೆದಿದ್ದು, ಕಂಪೆನಿನ ಜ್ಯೂಸ್ ಪ್ಯಾಕೇಜಿಂಗ್‍ನಲ್ಲಿ ಬದಲಾವಣೆ ತರುವಂತೆ ಮಾಡಿದ್ದಾಳೆ.

    ಗುವಾಹಟಿ 9 ವರ್ಷದ ಬಾಲಕಿ ಡಾಬರ್ ಕಂಪೆನಿಯ ರಿಯಲ್ ಫ್ರೂಟ್ ಜ್ಯೂಸ್ ಪ್ಯಾಕೆಟ್ ಮೇಲಿನ ಚಿತ್ರವನ್ನು ತೋರಿಸಿ, ಈ ಜ್ಯೂಸ್ ಹುಡುಗರು ಮಾತ್ರ ಸೇವಿಸುವಂಥದ್ದಾ ಎಂದು ತನ್ನ ತಂದೆ ಮೃಗಾಂಕಾ ಮಂಜುಮ್ದಾರ್ ಅವರಿಗೆ ಕೇಳಿದ್ದಳು. ಜ್ಯೂಸ್ ಪ್ಯಾಕೆಟ್ ಮೇಲೆ ಶಾಲಾ ಸಮವಸ್ತ್ರದಲ್ಲಿರುವ ಹುಡುಗನ ಫೋಟೋವಿದ್ದು, ನಿಮ್ಮ ಮಗುವಿಗೆ ಒಳ್ಳೆಯದಾಗಿರುವುದು ಅವನಿಗೆ ಖುಷಿಯನ್ನೂ ತರಬೇಕು ಎಂದು ಬರೆಯಲಾಗಿತ್ತು.

    ಈ ಬಗ್ಗೆ ಬಾಲಕಿಯ ತಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿಗೆ ಪತ್ರ ಬರೆದಿದ್ದರು. ಈ ಜ್ಯೂಸ್ ಹುಡುಗರು ಮಾತ್ರ ಸೇವಿಸುವಂಥದ್ದಾ ಎಂದು ನನ್ನ ಮಗಳು ಕೇಳಿದಳು. ಯಾಕೆ ಅಂದಿದ್ದಕ್ಕೆ ಜ್ಯೂಸ್ ಮೇಲೆ, ನಿಮ್ಮ ಮಗುವಿಗೆ ಒಳ್ಳೆಯದಾಗಿರುವುದು ಅವನಿಗೆ ಖುಷಿಯನ್ನೂ ತರಬೇಕು ಎಂದು ಬರೆದಿದೆ. ‘ಅವನು` ಎಂದರೆ ಕೇವಲ ಹುಡುಗರು ಮಾತ್ರ ಕುಡಿಯಬೇಕಾ? ಇದು ಹುಡುಗಿಯರು ಸೇವಿಸಬಾರದಾ? ಯಾಕೆ ಹೀಗಿದೆ? ಅಂದಳು ಅಂತ ಮಂಜುಮ್ದಾರ್ ಪತ್ರದಲ್ಲಿ ತಿಳಿಸಿದ್ದರು.

    ಈ ಬಗ್ಗೆ ಡಾಬರ್ ಕಂಪೆನಿ ಹೇಳಿಕೆ ಪ್ರತಿಕ್ರಿಯಿಸಿದ್ದು ಲಿಂಗ ತಾರತಮ್ಯದ ಆರೋಪವನ್ನು ತಳ್ಳಿಹಾಕಿದೆ. ಪ್ಯಾಕ್ ಮೇಲಿರುವ ಅವನು ಎಂಬ ಪದ ಲಿಂಗ ನಿರ್ದಿಷ್ಟವಾಗಿಲ್ಲ. ಅದನ್ನು ಸಾಮಾನ್ಯ ಅರ್ಥದಲ್ಲಿ ಬಳಸಲಾಗಿದೆ. ಯಾವುದೇ ನಿರ್ದಿಷ್ಟ ಲಿಂಗವನ್ನು ಉದ್ದೇಶಿಸಿ ಹೇಳಿಲ್ಲ ಎಂದು ಡಾಬರ್ ಕಂಪೆನಿಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಆದರೂ ಮುಂದೆ ಈ ರೀತಿಯ ಅಪಾರ್ಥಗಳಾಗಬಾರದು ಎಂಬ ಉದ್ದೇಶದಿಂದ ಜ್ಯೂಸ್‍ನ ಪ್ಯಾಕೇಜಿಂಗನ್ನು ಬದಲಾಯಿಸಲು ನಿರ್ಧರಿಸಿದ್ದಾರೆ.

    ಈ ಬಗ್ಗೆ ಹೇಳಿಕೆ ನೀಡಿರೋ ಸಚಿವೆ ಮನೇಕಾ ಗಾಂಧಿ, ಇದರಿಂದ ಒಂದು ಸಂದೇಶ ರವಾನಿಸಲು ಹಾಗೂ ಮುಂದೆಂದೂ ಈ ರೀತಿ ಆಗಬಾರದು ಎಂಬ ಉದ್ದೇಶದಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾಗಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ