Tag: ಮನೋಹರ್ ಪರಿಕ್ಕರ್

  • ಮಹದಾಯಿ ವಿವಾದಕ್ಕೆ ಸ್ಫೋಟಕ ತಿರುವು- ಪರಿಕ್ಕರ್ ವಿರುದ್ಧವೇ ಬಿಎಸ್‍ವೈ ದೂರು

    ಮಹದಾಯಿ ವಿವಾದಕ್ಕೆ ಸ್ಫೋಟಕ ತಿರುವು- ಪರಿಕ್ಕರ್ ವಿರುದ್ಧವೇ ಬಿಎಸ್‍ವೈ ದೂರು

    ಬೆಂಗಳೂರು: ಮಹದಾಯಿ ವಿವಾದ ಇದೀಗ ಮತ್ತೊಂದು ಸ್ಫೋಟಕ ತಿರುವು ಪಡೆದುಕೊಂಡಿದ್ದು, ಗೋವಾ ಬಿಜೆಪಿ ಇಬ್ಬಗೆ ನೀತಿ ವಿರುದ್ಧ ಕರ್ನಾಟಕ ಬಿಜೆಪಿಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

    ಮಹದಾಯಿ ಕುರಿತು ಮಾತುಕತೆಗೆ ಒಪ್ಪಿ ಬರೆದಿರುವ ಪತ್ರದ ಬಗ್ಗೆ ಗೋವಾ ಬಿಜೆಪಿ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಇತ್ತ ಮಹದಾಯಿ ಭಾಗದ ರೈತರು ತಮ್ಮ ಹೋರಾಟ ತೀವ್ರಗೊಳಿಸಿದ್ದಾರೆ. ಗೋವಾ ಬಿಜೆಪಿಯ ಇಬ್ಬಗೆ ನೀತಿಯಿಂದ ಕರ್ನಾಟಕದಲ್ಲಿ ನಮ್ಮ ಇಮೇಜ್‍ಗೆ ಧಕ್ಕೆ ಆಗಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

    ಒಟ್ಟಿನಲ್ಲಿ ಮಹದಾಯಿ ವಿವಾದದ ಕುರಿತು ಮಾತುಕತೆ ಸಂಬಂಧ ಗೋವಾ ಸಿಎಂ ಮನೋಹರ್ ಪರಿಕ್ಕರ್‍ಗೆ ಸ್ಪಷ್ಟ ನಿರ್ದೇಶನ ನೀಡಿ ಅಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಆದರೆ ಅಮಿತ್ ಶಾ ಅವರು ಗೋವಾ-ಕರ್ನಾಟಕ ಬಿಜೆಪಿ ನಡುವೆ ಸಂಧಾನದ ಭರವಸೆ ನೀಡಿಲ್ಲ ಎಂದು ವರದಿಯಾಗಿದೆ.

  • ಇಂದಿನಿಂದ ಮಹದಾಯಿ ನೀರಿನ ಚಿಂತೆಯನ್ನು ಬಿಟ್ಟು ಬಿಡಿ: ಬಿಎಸ್‍ವೈ

    ಇಂದಿನಿಂದ ಮಹದಾಯಿ ನೀರಿನ ಚಿಂತೆಯನ್ನು ಬಿಟ್ಟು ಬಿಡಿ: ಬಿಎಸ್‍ವೈ

    ಹುಬ್ಬಳ್ಳಿ: ಬೇರೆಯವರ ಮಾತಿಗೆ ನೀವು ಯಾರು ಕಿವಿಗೊಡಬೇಡಿ. ಕುಡಿಯಲು ನಾವು ಮಹದಾಯಿ ನೀರನ್ನು ತಂದೇ ತರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

    ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಹಲವು ಪ್ರಯತ್ನಗಳ ಫಲವಾಗಿ ಅಮಿತ್ ಶಾ ನೇತೃತ್ವದಲ್ಲಿ ಬುಧವಾರ ರಾಜ್ಯ ಬಿಜೆಪಿ ನಾಯಕರು ಮತ್ತು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಮಾತುಕತೆ ನಡೆಸಿದ್ದೇವೆ. ಕುಡಿಯುವ ನೀರನ್ನು ತರುವ ಜವಾಬ್ದಾರಿಯನ್ನು ನಾನು, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ ತೆಗೆದುಕೊಳ್ಳುತ್ತೇವೆ. ಇಂದಿನಿಂದ ನೀರಿನ ಚಿಂತೆಯನ್ನು ಬಿಟ್ಟು ಬಿಡಿ ಎಂದು ಹೇಳಿದರು.

    ಪರಿಕ್ಕರ್ ಬರೆದ ಪತ್ರವನ್ನು ಇಟ್ಟುಕೊಂಡು ಯಾರೋ ಆಗದವರು ಹೀಗೆ ಮಾಡಿದ್ದಾರೆ. ನೀರನ್ನು ನಾನು ತಂದೆ ತರುವೆ. ಬೇರೆಯವರ ಮಾತಿಗೆ ಕಿವಿ ಗೊಡಬೇಡಿ. ನಾನು ಇಂದು ಹೇಳಿದ ಮಾತಿನಂತೆ ನೀರು ತಂದೆ ತರುವೆ. ಉತ್ತರ ಕರ್ನಾಟಕದ ಎಲ್ಲ ಕೆರೆಗಳ ನೀರು ತುಂಬಿಸುವ ಜವಾಬ್ದಾರಿ ನಮ್ಮದು ಎಂದು ಬಿಎಸ್‍ವೈ ಭರವಸೆ ನೀಡಿದರು. ಇದನ್ನೂ ಓದಿ: ಮಾತುಕತೆಗಷ್ಟೇ ಒಪ್ಪಿಗೆ, ನಮ್ಮ ಹಕ್ಕುಗಳಿಗೆ ತೊಂದರೆ ಆಗಬಾರದು ಪರಿಕ್ಕರ್ ಬರೆದ ಪತ್ರದಲ್ಲಿ ಏನಿದೆ?

    ನಾವು ಅಮಿತ್ ಶಾ ಸಮ್ಮುಖದಲ್ಲಿ ಒಂದು ಗಂಟೆ ಚರ್ಚೆ ಮಾಡಿದ್ದು ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ. ನಮ್ಮೆಲ್ಲರ ಜವಾಬ್ದಾರಿಯನ್ನು ಪೂರ್ಣ ಮಾಡುತ್ತೇವೆ ಎನ್ನುವ ಭರವಸೆ ನೀಡುತ್ತೇವೆ. ನ್ಯಾಯಾಧಿಕರದಲ್ಲಿ ಸಮರ್ಪಕವಾದ ಮಾಹಿತಿ ಸಲ್ಲಿಸಿ ಅರ್ಜಿ ಹಾಕಿ ಮಹದಾಯಿ ನೀರನ್ನು ತರುತ್ತೇವೆ ಎಂದು ಯಡಿಯೂರಪ್ಪ ಆಶ್ವಾಸನೆ ನೀಡಿದರು.

    https://www.youtube.com/watch?v=TZ9qqTLPXD0

    https://www.youtube.com/watch?v=IgAGJ9tffNg

    https://www.youtube.com/watch?v=k8H4IP59_Sk

    https://www.youtube.com/watch?v=c5Mb4OAwpa8

     

  • ಮಾತುಕತೆಗಷ್ಟೇ ಒಪ್ಪಿಗೆ, ನಮ್ಮ ಹಕ್ಕುಗಳಿಗೆ ತೊಂದರೆ ಆಗಬಾರದು: ಪರಿಕ್ಕರ್

    ಮಾತುಕತೆಗಷ್ಟೇ ಒಪ್ಪಿಗೆ, ನಮ್ಮ ಹಕ್ಕುಗಳಿಗೆ ತೊಂದರೆ ಆಗಬಾರದು: ಪರಿಕ್ಕರ್

    ಬೆಂಗಳೂರು: ಮಹದಾಯಿ ವಿವಾದ ನ್ಯಾಯಾಧಿಕರಣದಲ್ಲೇ ಇತ್ಯರ್ಥವಾಗಬೇಕು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

    ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಬಳಸಿಕೊಳ್ಳುವುದಕ್ಕೆ ಗೋವಾದ ತಾತ್ವಿಕ ವಿರೋಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಗೋವಾ ಪ್ರಜೆಗಳು ಹೆದರುವ ಅಗತ್ಯವಿಲ್ಲ: ಪರಿಕ್ಕರ್

    ಪತ್ರದಲ್ಲಿ ಏನಿದೆ?
    ಮಾನ್ಯ ಯಡಿಯೂರಪ್ಪನವರೇ,

    ಡಿಸೆಂಬರ್ 20 ರಂದು ನೀವು ಬರೆದ ಪತ್ರ ನನಗೆ ತಲುಪಿದೆ. ತಾವು ಉತ್ತರ ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಮಹದಾಯಿಯಿಂದ 7.56 ಟಿಎಂಸಿಯಷ್ಟು ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಬಳಸಿಕೊಳ್ಳುವ ಸಂಬಂಧ ಪತ್ರ ಬರೆದಿದ್ದೀರಿ. ಈ ವಿವಾದ ನ್ಯಾಯಾಧೀಕರಣದ ಮುಂದೆ ಇರುವುದು ನಿಮಗೆ ಗೊತ್ತೇ ಇದೆ. ಕುಡಿಯುವ ನೀರು ವಿವಾದ ಕೂಡಾ ನ್ಯಾಯಾಧಿಕರಣದ ಮುಂದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಬಳಸಿಕೊಳ್ಳುವುದಕ್ಕೆ ಗೋವಾದ ತಾತ್ವಿಕ ವಿರೋಧ ಇಲ್ಲ.

    ಈ ಸಂಬಂಧ ನ್ಯಾಯಾಧಿಕರಣ ತೀರ್ಮಾನದಂತೆ ದ್ವಿಪಕ್ಷೀಯ ಮಾತುಕತೆಗೆ ನಾವು ಸಿದ್ಧರಿದ್ದೇವೆ. ಮಾನವೀಯ ಆಧಾರದ ಮೇಲೆ ಕುಡಿಯುವ ನೀರು ಕೇಳುತ್ತಿರುವುದು ಗೋವಾಕ್ಕೆ ಅರ್ಥವಾಗುತ್ತದೆ. ಬರ ಪೀಡಿತ ಪ್ರದೇಶಗಳಿಗೆ ಮಾನವೀಯ ಆಧಾರದ ಮೇಲೆ ನೀರು ಒದಗಿಸುವ ಸಂಬಂಧ ಸೌಹಾರ್ದ ಮಾತುಕತೆಗೆ ಸಿದ್ಧರಿದ್ದೇವೆ.

    ಆದರೆ ನಾವು ನ್ಯಾಯಾಧಿಕರಣದ ಎದುರು ಎತ್ತಿರುವ ನಮ್ಮ ಹಿತಾಸಕ್ತಿ ಮತ್ತು ನಮ್ಮ ವಿರೋಧಗಳಿಗೆ ಧಕ್ಕೆಯಾಗದಂತೆ ಪೂರ್ವಾಗ್ರಹವಿಲ್ಲದೇ ಈ ಮಾತುಕತೆಗೆ ಸಿದ್ಧರಿದ್ದೇವೆ.

    ಧನ್ಯವಾದಗಳು.

  • ಮಹದಾಯಿ ವಿಚಾರದಲ್ಲಿ ಗೋವಾ ಪ್ರಜೆಗಳು ಹೆದರುವ ಅಗತ್ಯವಿಲ್ಲ: ಪರಿಕ್ಕರ್

    ಮಹದಾಯಿ ವಿಚಾರದಲ್ಲಿ ಗೋವಾ ಪ್ರಜೆಗಳು ಹೆದರುವ ಅಗತ್ಯವಿಲ್ಲ: ಪರಿಕ್ಕರ್

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹದಾಯಿ ಸಂಧಾನ ಸಭೆ ಯಶಸ್ವಿಯಾಗಿದೆ ಎನ್ನುವುದರ ಬಗ್ಗೆ ಈಗ ಅನುಮಾನ ಎದ್ದಿದೆ.

    ವಿವಾದದ ಬಗ್ಗೆ ಚರ್ಚಿಸಿದ್ದೇನೆ, ಭರವಸೆ ನೀಡಿಲ್ಲ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಮರಾಠಿ ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರಿಂದ ಜಲ ವಿವಾದ ಅಂತ್ಯಗೊಳ್ಳುವ ಸಾಧ್ಯತೆ ಕ್ಷೀಣವಾಗಿದೆ.

    ಮಹದಾಯಿ ಕುರಿತು ಹಿಂದಿನ ನಿಲುವಿಗೆ ಈಗಲೂ ಬದ್ಧವಾಗಿದ್ದು, ನ್ಯಾಯಾಧೀಕರಣದ ಮೂಲಕವೇ ವಿವಾದ ಇತ್ಯರ್ಥವಾಗಬೇಕು. ಈ ವಿವಾದವನ್ನು ನ್ಯಾಯಾಧೀಕರಣಕ್ಕೆ ತೆಗೆದುಕೊಂಡು ಹೋಗಿದ್ದೇ ನಾವು. ನಾವೇ ನ್ಯಾಯಾಧಿಕರಣಕ್ಕೆ ಹೋಗಿದ್ದರಿಂದ ಅಲ್ಲೇ ಇತ್ಯರ್ಥವಾಗಲಿ. ಮಹದಾಯಿ ವಿಷಯದಲ್ಲಿ ಗೋವಾ ಪ್ರಜೆಗಳು ಆತಂಕಗೊಳ್ಳಬೇಕಾಗಿಲ್ಲ ಎಂದು ಸಂದರ್ಶನದಲ್ಲಿ ಗೋವಾ ಪ್ರಜೆಗಳಿಗೆ ಪರಿಕ್ಕರ್ ಅಭಯ ನೀಡಿದ್ದಾರೆ.

    ಪರಿಕ್ಕರ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಬೆನ್ನಲ್ಲೇ, ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಳೇಕರ್ ಟ್ವೀಟ್ ಮಾಡಿ, ಮಹದಾಯಿ ನಮ್ಮ ತಾಯಿ, ನಾವು ನಮ್ಮ ತಾಯಿಯ ರಕ್ಷಣೆಗೆ ಬದ್ಧ. ಒಂದೊಂದು ಹನಿ ನೀರನ್ನೂ ರಕ್ಷಿಸುತ್ತೇವೆ ಎಂದು ಹೇಳಿದ್ದಾರೆ.

    ಗೋವಾ ಜಲಸಂಪನ್ಮೂಲ ಇಲಾಖೆ ಈ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಗೋವಾ ಅಭಿವೃದ್ಧಿಯೇ ನಮ್ಮ ಗುರಿ. ಅದಕ್ಕೆ ನಾವು ಕಟಿಬದ್ಧ ಎಂದು ಬಿಜೆಪಿ ಸರ್ಕಾರದ ಮಿತ್ರಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿ ಮುಖಂಡರೂ ಆಗಿರುವ ವಿನೋದ್ ಪಾಳೇಕರ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

    ಮನೋಹರ್ ಪರಿಕ್ಕರ್ ಮತ್ತು ಗೋವಾ ಜಲಸಂಪನ್ಮೂಲ ಸಚಿವರ ಈ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಬಿಎಸ್ ಯಡಿಯೂರಪ್ಪ ಯಾವ ರೀತಿಯ ಹೇಳಿಕೆ ನೀಡಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

    ಬುಧವಾರ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಕೇಂದ್ರ ಸಚಿವರಾದ ಅನಂತ್ ಕುಮಾರ್, ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್, ಮುರಳೀಧರ್ ರಾವ್, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ಭಾಗವಹಿಸಿದ್ದರು.

    ಸುಮಾರು ಅರ್ಧಗಂಟೆಗಳ ಕಾಲ ನಡೆದ ಸಭೆಯಲ್ಲಿ ಮಹದಾಯಿ ವಿವಾದ ಕುರಿತಂತೆ ರಾಜ್ಯ ನಾಯಕರು ಗೋವಾ ಸಿಎಂ ಮನೋಹರ್ ಪರಿಕ್ಕರ್ ಗೆ ಮನವರಿಕೆ ಮಾಡಿಕೊಟ್ಟಿದ್ದರು. ಚುನಾವಣಾ ದೃಷ್ಟಯಿಂದಲೂ ಈ ವಿವಾದ ಎಷ್ಟು ಮಹತ್ವದ್ದು ಎಂಬುದನ್ನು ಪರಿಕ್ಕರ್ ವಿವರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಾತುಕತೆ ವೇಳೆ ಅಮಿತ್ ಶಾ ಕೂಡಾ ನೀರು ನೀಡುವಂತೆ ಪರಿಕ್ಕರ್ ಗೆ ಮನವೊಲಿಸುವ ಯತ್ನ ಮಾಡಿದರು ಎನ್ನಲಾಗಿದೆ.

    ಈ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಇಂದು ನಡೆದ ಸಭೆ ಬಹುತೇಕ ಫಲಪ್ರದವಾಗಿದ್ದು, ಅಮಿತ್ ಶಾ ಸಂಧಾನಕ್ಕೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದರು.

     

     

  • ಮಹದಾಯಿ ವಿವಾದಕ್ಕೆ ಇಂದು ಬೀಳುತ್ತಾ ಬ್ರೇಕ್-ನೀರು ಹರಿಸಿದ್ರೆ ಗೋವಾ ಮೇಲಾಗುವ ಪರಿಣಾಮವೇನು?

    ಮಹದಾಯಿ ವಿವಾದಕ್ಕೆ ಇಂದು ಬೀಳುತ್ತಾ ಬ್ರೇಕ್-ನೀರು ಹರಿಸಿದ್ರೆ ಗೋವಾ ಮೇಲಾಗುವ ಪರಿಣಾಮವೇನು?

    ಬೆಂಗಳೂರು: ಎಲೆಕ್ಷನ್ ಹತ್ತಿರವಿರುವ ಹೊತ್ತಿನಲ್ಲಿ ಮುಂಬೈ ಕರ್ನಾಟಕದ ಮಂದಿಗೆ ಮಹಾ ಸಿಹಿ ಸುದ್ದಿ ಸಿಗ್ತಿದೆ. ಹುಬ್ಬಳ್ಳಿ ಭಾಗದ ಜನರ ದಶಕಗಳ ಹೋರಾಟಕ್ಕೆ ಇದೀಗ ಬೆಲೆ ಸಿಗುತ್ತಿದೆ. ಎಷ್ಟೇ ಪ್ರಯತ್ನಪಟ್ಟರೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಗದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿರುವಂತೆ ಕಾಣುತ್ತಿದೆ.

    ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಹುತೇಕ ಇತ್ಯರ್ಥವಾಗುವ ಮುನ್ಸೂಚನೆ ಸಿಕ್ಕಿದ್ದು, ಇಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿ ನಾಯಕರು ಮಹದಾಯಿ ನದಿ ವಿವಾದ ಸಂಬಂಧ ಮಹತ್ವದ ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಒಂದು ವೇಳೆ ಗೋವಾದಿಂದ ಮಹದಾಯಿ ನೀರು ಬಂದರೂ ಅದಕ್ಕೆ ಕರ್ನಾಟಕ ಭಾರೀ ಮೊತ್ತವನ್ನು ವ್ಯಯಿಸಬೇಕಾಗುತ್ತದೆ. ಮಹದಾಯಿ ನದಿ ಶುದ್ಧೀಕರಣಕ್ಕಾಗಿ ಗೋವಾ ಸರ್ಕಾರ 800 ಕೋಟಿ ರೂಪಾಯಿ ಸುರಿದಿದೆ. ಒಂದು ವೇಳೆ ಅಗತ್ಯವಿರುವ 7 ಟಿಎಂಸಿ ನೀರು ಬೇಕಾದರೂ ಕರ್ನಾಟಕದಿಂದ ಗೋವಾ ಪಾಲುಬಯಸುವ ಲಕ್ಷಣಗಳಿವೆ. 2 ವರ್ಷಗಳಲ್ಲಿ ಗೋವಾದಲ್ಲಿ ಆರ್ಥಿಕತೆಯ ಭಾಗವಾಗಿರೋ ಮೀನುಗಾರಿಕೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯೆತೆಗಳಿವೆ. ಮಹದಾಯಿ ನದಿ ವಿಚಾರದಲ್ಲಿ ಗೋವಾದಲ್ಲಿ ವಿದ್ಯಾರ್ಥಿಗಳು, ನಾಗರಿಕ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಇಂತಹ ಸಮಯದಲ್ಲಿ ತನ್ನ ಅತೀ ದೊಡ್ಡ ನದಿ ಮಹದಾಯಿ ನದಿಯ ನೀರನ್ನು ಕರ್ನಾಟಕಕ್ಕೆ ಹರಿಸುತ್ತಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

    ಬುಧವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ 4 ದಶಕಗಳ ಸಮಸ್ಯೆ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಗೋವಾ ಸಿಎಂ ಮನೋಹರ್ ಪರಿಕ್ಕರ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಸಭೆ ಬಳಿಕ ಮಾತಾಡಿದ ಯಡಿಯೂರಪ್ಪ, ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಗೋವಾ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಅಂತಾ ಹೇಳಿದ್ದಾರೆ.

    ಇಂದು ನಡೆಯುವ ಹುಬ್ಬಳ್ಳಿ ಪರಿವರ್ತನಾ ಸಮಾವೇಶದೊಳಗೆ ಅವರು ಅಂತಿಮ ತೀರ್ಮಾನ ಕೈಗೊಳ್ಳುತ್ತಾರಾ ಅಥವಾ ಅಲ್ಲಿಯೇ ಘೋಷಣೆ ಮಾಡುತ್ತಾರಾ ಎಂಬುದು ತಿಳಿಯಬೇಕಿದೆ. ಆದರೆ ಅಮಿತ್ ಶಾ ಮನೆಯಿಂದ ಮೊದಲು ಹೊರಗೆ ಬಂದಿದ್ದು ಪರಿಕ್ಕರ್. ಎಲ್ಲೋ ಒಂದು ಕಡೆ ಪರಿಕ್ಕರ್ ಪೂರ್ಣ ಪ್ರಮಾಣದ ಒಪ್ಪಿಗೆ ಸೂಚಿಸಿಲ್ವಾ..? ಹೈಕಮಾಂಡ್ ಬಲವಂತಕ್ಕೆ ಒಪ್ಪಿಕೊಂಡ್ರಾ ಅನ್ನೋ ಪ್ರಶ್ನೆಗಳು ಉದ್ಭವಿಸುತ್ತವೆ.

  • ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಮಹದಾಯಿ ವಿವಾದ ಇತ್ಯರ್ಥ?

    ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಮಹದಾಯಿ ವಿವಾದ ಇತ್ಯರ್ಥ?

    ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹದಾಯಿ ಸಂಧಾನ ಸಭೆ ಬಹುತೇಕ ಯಶಸ್ವಿಯಾಗಿದ್ದು, ಗುರುವಾರ ಹುಬ್ಬಳ್ಳಿಯಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಯಲ್ಲಿ ಅಧಿಕೃತವಾಗಿ ಬಿಜೆಪಿಯ ನಿರ್ಧಾರ ಪ್ರಕಟವಾಗಲಿದೆ.

    ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಕೇಂದ್ರ ಸಚಿವರಾದ ಅನಂತ್ ಕುಮಾರ್, ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಪ್ರಕಾಶ್ ಜಾವಡೇಕರ್, ಪಿಯೂಶ್ ಗೋಯಲ್, ಮುರಳೀಧರ್ ರಾವ್, ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ಭಾಗವಹಿಸಿದ್ದರು.

    ಸುಮಾರು ಅರ್ಧಗಂಟೆಗಳ ಕಾಲ ನಡೆದ ಸಭೆಯಲ್ಲಿ ಮಹದಾಯಿ ವಿವಾದ ಕುರಿತಂತೆ ರಾಜ್ಯ ನಾಯಕರು ಗೋವಾ ಸಿಎಂ ಮನೋಹರ್ ಪರಿಕ್ಕರ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಚುನಾವಣಾ ದೃಷ್ಟಯಿಂದಲೂ ಈ ವಿವಾದ ಎಷ್ಟು ಮಹತ್ವದ್ದು ಎಂಬುದನ್ನು ಪರಿಕ್ಕರ್ ವಿವರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಾತುಕತೆ ವೇಳೆ ಅಮಿತ್ ಶಾ ಕೂಡಾ ನೀರು ನೀಡುವಂತೆ ಪರಿಕ್ಕರ್ ಗೆ ಮನವೊಲಿಸುವ ಯತ್ನ ಮಾಡಿದರು ಎನ್ನಲಾಗಿದೆ.

    ಮಾತುಕತೆ ಒಪ್ಪಿರುವ ಪರಿಕ್ಕರ್ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಗಳನ್ನು ನಾಳೆಯೊಳಗೆ ತಿಳಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ನಾಳೆ ಹುಬ್ಬಳ್ಳಿಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಲಿರುವ ಪರಿವರ್ತನಾ ಯಾತ್ರೆಯಲ್ಲಿ ಅಧಿಕೃತ ಘೋಷಣೆ ಮಾಡಲು ತೀರ್ಮಾನಿಸಲಾಗಿದೆ.

    ಈ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‍ವೈ, ಇಂದು ನಡೆದ ಸಭೆ ಬಹುತೇಕ ಫಲಪ್ರದವಾಗಿದ್ದು, ಅಮಿತ್ ಶಾ ಸಂಧಾನಕ್ಕೆ ಗೋವಾ ಸಿಎಂ ಮನೋಹರ್ ಪರಿಕ್ಕರ್ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

    ಸಭೆಯಲ್ಲಿ ಕಳಸ ಬಂಡೂರಿ ವಿಚಾರದಲ್ಲಿ ಮಹತ್ವಪೂರ್ಣ ಮಾತುಕತೆ ನಡೆಸಿದ್ದೇವೆ. ಹಲವಾರು ವಿಷಯಗಳ ಬಗ್ಗೆ ಗೋವಾ ಸಿಎಂ ಜೊತೆ ಮುಕ್ತವಾಗಿ ಮಾತನಾಡಿದ್ದೇವೆ. ಮಹದಾಯಿ ನಿರ್ಣಯದ ಬಗ್ಗೆ ಹುಬ್ಬಳ್ಳಿ ಪರಿವರ್ತನಾ  ರ‍್ಯಾಲಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದೇವೆ ಎಂದು ತಿಳಿಸಿದರು.

    ಸಭೆ ಒಳಗಿನ ಮಾಹಿತಿ ಬಹಿರಂಗ ಪಡಿಸದ ಯಡಿಯೂರಪ್ಪ ಕೇವಲ ಪರಿಕ್ಕರ್ ಸಕಾರಾತ್ಮಕ ವಾಗಿ ಸ್ಮಂದಿಸಿದ್ದಾರೆ ಎಂದು ಹೇಳಿದರು. ಒಟ್ಟಿನಲ್ಲಿ ಸಭೆಯ ಒಳಗಿನ ಗೌಪ್ಯತೆಯನ್ನು ಕಾಪಾಡಿಕೊಂಡಿರುವ ಬಿಜೆಪಿ ಗುರುವಾರ ಅಧಿಕೃತವಾಗಿ ತನ್ನ ನಿರ್ಧಾರವನ್ನು ಪರಿವರ್ತನಾ ಸಭೆಯಲ್ಲಿ ತಿಳಿಸಲಿದೆ.

    https://www.youtube.com/watch?v=QDNG04rghcI

     

  • ವಯಸ್ಕರ ಚಿತ್ರ ನೋಡಿದ ಅನುಭವವನ್ನು ಮಕ್ಕಳೊಂದಿಗೆ ಹಂಚಿಕೊಂಡ ಗೋವಾ ಸಿಎಂ

    ವಯಸ್ಕರ ಚಿತ್ರ ನೋಡಿದ ಅನುಭವವನ್ನು ಮಕ್ಕಳೊಂದಿಗೆ ಹಂಚಿಕೊಂಡ ಗೋವಾ ಸಿಎಂ

    ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ತಾವು ಮೊದಲ ಬಾರಿಗೆ ವಯಸ್ಕರ ಚಿತ್ರವನ್ನು ನೋಡಿದ ಅನುಭವವನ್ನು ಮಕ್ಕಳ ದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಹಂಚಿಕೊಂಡಿದ್ದಾರೆ.

    ಪರಿಕ್ಕರ್ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳೊಂದಿಗೆ ಸಂವಾದದಲ್ಲಿ ತೊಡಗಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ನೀವು ಯುವಕರಾಗಿದ್ದಾಗ ಯಾವ ತರಹದ ಸಿನಿಮಾಗಳನ್ನು ನೋಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾನೆ. ಅದಕ್ಕೆ ಪರಿಕ್ಕರ್, ನಾನು ಯುವಕನಿದ್ದಾಗ ಕೇವಲ ಸಿನಿಮಾಗಳಲ್ಲ, ಅದರ ಜೊತೆಗೆ ವಯಸ್ಕರ ಚಿತ್ರಗಳನ್ನು ನೋಡುತ್ತಿದ್ದೆವು. ಅಂದು ನಾವು ಏನು ವಯಸ್ಕರ ಚಿತ್ರಗಳು ಎಂದು ಕರೆಯಲ್ಪಡುತ್ತಿದ್ದ ಆ ಚಿತ್ರಗಳ ಹೆಚ್ಚಿನ ದೃಶ್ಯಗಳು ಈಗ ಟಿವಿಯಲ್ಲಿ ಪ್ರಸಾರಗೊಳ್ಳುತ್ತಿದೆ ಎಂದು ಉತ್ತರಿಸಿದ್ದಾರೆ.

    ನಾನು ಯುವಕನಾಗಿದ್ದಾಗ ಪಾಪ್ಯೂಲರ್ ಅಡಲ್ಟ್ ಮೂವಿ ಬಂದಿತ್ತು. ನಾನು ಮತ್ತು ನನ್ನ ಸಹೋದರ ಇಬ್ಬರೂ ಸಿನಿಮಾ ನೋಡಲು ಥಿಯೇಟರ್ ಗೆ ಹೋಗಿದ್ದೆವು. ಸಿನಿಮಾದಲ್ಲಿ ಇಂಟರ್ ವೆಲ್ ನಲ್ಲಿ ಥಿಯೇಟರ್ ಲೈಟ್ ಗಳೆಲ್ಲಾ ಹಚ್ಚಲಾಯಿತು. ನೋಡಿದರೆ ನಮ್ಮ ನೆರೆ ಮನೆಯ ವ್ಯಕ್ತಿಯೊಬ್ಬ ನಮ್ಮ ಪಕ್ಕದಲ್ಲಿಯೇ ಕುಳಿತಿದ್ದ. ಆ ವ್ಯಕ್ತಿ ಪ್ರತಿದಿನ ನನ್ನ ತಾಯಿಯ ಜೊತೆ ಮಾತನಾಡುತ್ತಿದ್ದರಿಂದ ಅವರಿಗೆ ನಮ್ಮಿಬ್ಬರ ಪರಿಚಯವಿತ್ತು. ಆ ಕ್ಷಣದಲ್ಲಿ ಭಯಗೊಂಡ ನಾನು ನಾವು ಸತ್ತೆ ಹೋದೆವು ಎಂದು ಹೇಳಿದೆ ಅಂತಾ ಪರಿಕ್ಕರ್ ತಿಳಿಸಿದರು.

    ಥಿಯೇಟರ್ ನಲ್ಲಿ ನೆರೆಮನೆಯ ವ್ಯಕ್ತಿಯನ್ನು ನೋಡುತ್ತಲೇ ನಾವಿಬ್ಬರು ಸಿನಿಮಾವನ್ನು ಅರ್ಧಕ್ಕೆ ಬಿಟ್ಟು ಓಡಿ ಬಂದೆವು. ಮನೆಗೆ ಹೋಗುವ ದಾರಿ ಮಧ್ಯೆಯೇ ಈ ಸಮಸ್ಯೆಯನ್ನು ಬಗಹರಿಸುವ ಪ್ಲಾನ್ ಮಾಡಿಕೊಂಡು ಹೊರಟೆವು. ಮನೆಗೆ ಹೋದ ಮೇಲೆ ತಾಯಿಯ ಜೊತೆ, ನಾವು ಇವತ್ತು ಸಿನಿಮಾಗೆ ಹೋಗಿದ್ದೆವು. ಆದರೆ ನಮಗೆ ಅದು ಯಾವ ಸಿನಿಮಾ ಎಂದು ಗೊತ್ತಿರಲಿಲ್ಲ. ಅಲ್ಲಿಗೆ ಹೋದ ಮೇಲೆ ಅದು ಕೆಟ್ಟ ಸಿನಿಮಾ ಎಂದು ಗೊತ್ತಾಯಿತು. ಕೂಡಲೇ ಚಿತ್ರ ನೋಡುವುದನ್ನು ಬಿಟ್ಟು ಅರ್ಧಕ್ಕೆ ಚಿತ್ರ ಮಂದಿರದಿಂದ ಹೊರ ಬಂದೆವು. ಮತ್ತೆ ನಿಧಾನವಾಗಿ ನಮ್ಮ ನೆರೆಮನೆಯ ವ್ಯಕ್ತಿಯೂ ಆ ಸಿನಿಮಾವನ್ನು ನೋಡಲು ಬಂದಿದ್ದ ಎನ್ನುವುದನ್ನು ಎಂದು ತಿಳಿಸಿದೆವು ಎಂದರು.

    ಮರುದಿನ ಆ ವ್ಯಕ್ತಿ ನಮ್ಮ ತಾಯಿಯನ್ನು ಕರೆದು ನಿಮ್ಮ ಮಕ್ಕಳಿಬ್ಬರು ಥಿಯೇಟರ್ ಗೆ ಬಂದಿದ್ದರು ಎಂದು ಹೇಳಿದರು. ಕೂಡಲೇ ನಮ್ಮ ತಾಯಿ ನನ್ನ ಮಕ್ಕಳು ಯಾವ ಸಿನಿಮಾಗೆ ಹೋಗಿದ್ದರು ಎಂದು ನನಗೆ ಗೊತ್ತಿದೆ. ಆದರೆ ನೀವ್ಯಾಕೆ ಅಂತಹ ಸಿನಿಮಾ ನೋಡಲು ಹೋಗಿದ್ರಿ ಎಂದು ಮರು ಪ್ರಶ್ನೆ ಮಾಡಿದರು. ನಾವು ಮೊದಲೇ ಎಲ್ಲವನ್ನು ಪ್ಲಾನ್ ಮಾಡಿದ್ದರಿಂದ ನಾವು ಬಚಾವ್ ಆಗಿದ್ದೆವು ಎಂದು ಹೇಳಿ ಪರಿಕ್ಕರ್ ನಕ್ಕರು.

     

  • ಹೈಕಮಾಂಡ್‍ಗೆ ಶಾಕ್: ಗೋವಾ ಹಿರಿಯ ಶಾಸಕ ವಿಶ್ವಜಿತ್ ರಾಣೆ ಕಾಂಗ್ರೆಸ್‍ಗೆ ಗುಡ್‍ಬೈ

    ಹೈಕಮಾಂಡ್‍ಗೆ ಶಾಕ್: ಗೋವಾ ಹಿರಿಯ ಶಾಸಕ ವಿಶ್ವಜಿತ್ ರಾಣೆ ಕಾಂಗ್ರೆಸ್‍ಗೆ ಗುಡ್‍ಬೈ

    ಪಣಜಿ: ಚುನಾವಣೆ ಫಲಿತಾಂಶದಲ್ಲಿ ಅತ್ಯಧಿಕ ಸ್ಥಾನಗಳಿಸಿದರೂ ಗೋವಾದಲ್ಲಿ ಸರ್ಕಾರ ನಡೆಸಲು ಅನುಮತಿ ನೀಡದ್ದಕ್ಕೆ ರಾಜ್ಯಪಾಲರ ನಡೆಯನ್ನು ಟೀಕಿಸಿದ್ದ ಕಾಂಗ್ರೆಸ್‍ಗೆ ಈಗ ಶಾಕಿಂಗ್ ಎನ್ನುವಂತೆ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಯಲ್ಲಿ ಕೈ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ.

    ಕಾಂಗ್ರೆಸ್‍ನ ಹಿರಿಯ ನಾಯಕ ಪ್ರತಾಪ್ ಸಿಂಗ್ ರಾಣೆ ಅವರ ಮಗ ವಿಶ್ವಜಿತ್ ರಾಣೆ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಮನೋಹರ್ ಪರಿಕ್ಕರ್ ಅವರ ವಿಶ್ವಾಸ ಮತಯಾಚನೆ ವೇಳೆ ಗೈರಾಗಿದ್ದ ರಾಣೆ ಸಂಜೆ ವೇಳೆ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಪಕ್ಷದ ಕ್ರಮವನ್ನು ಟೀಕಿಸಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದ ರಾಣೆ ಕ್ರಮ ತೆಗೆದುಕೊಳ್ಳದೇ ಇದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

    ಕಾಂಗ್ರೆಸ್ ಕಾರ್ಯವೈಖರಿಯ ಬಗ್ಗೆ ಬೇಸತ್ತು ಹೋಗಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಮುಂದುವರಿಯುವುದಿಲ್ಲ. ಹೊಸದಾಗಿ ಚುನಾವಣೆ ಎದುರಿಸುತ್ತೇನೆ ಎಂದು ವಿಶ್ವಜಿತ್ ರಾಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಪಕ್ಷೇತರ ಅಭ್ಯರ್ಥಿಯಾಗಿ ರಾಣೆ ಚುನಾವಣೆಗೆ ನಿಲ್ಲುತ್ತಾರೋ ಅಥವಾ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೋ ಎನ್ನುವ ಬಗ್ಗೆ ಇದೂವರೆಗೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ ಸಿಎಂ ಮನೋಹರ್ ಪರಿಕ್ಕರ್ ಕಾಂಗ್ರೆಸ್ ಶಾಸಕರೊಬ್ಬರು ನನಗೆ ಮೆಸೇಜ್ ಮಾಡಿದ್ದಾರೆ. ಅವರು ಪಕ್ಷದ ಹಿರಿಯ ನಾಯಕರಿಂದ ಬೇಸತ್ತು ಹೋಗಿದ್ದಾರೆ. ಶೀಘ್ರವೇ ಆ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬುಧವಾರ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಹೀಗಾಗಿ ರಾಣೆ ಅವರ ಬಗ್ಗೆ ಮನೋಹರ್ ಪರಿಕ್ಕರ್ ಹೇಳಿದ್ದಾರಾ ಅಥವಾ ಬೇರೆ ಶಾಸಕರ ಬಗ್ಗೆ ಹೇಳಿದ್ದಾರಾ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

    ಮೂರು ಬಾರಿ ಶಾಸಕ: ವಾಲ್‍ಪಾಯ್ ಕ್ಷೇತ್ರದಿಂದ 2007ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ 2012, 2017ರಲ್ಲಿ ಕಾಂಗ್ರೆಸ್ ನಿಂದ ನಿಂತು ವಿಶ್ವಜಿತ್ ರಾಣೆ ಗೆದ್ದಿದ್ದರು. ಕೊನೆಯ ಚುನಾವಣೆಯಲ್ಲಿ 13493 ಮತಗಳನ್ನು ಪಡೆಯುವ ಮೂಲಕ 5,678 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದರು.

    ಅಧಿಕಾರಕ್ಕೆ ಬಿಜೆಪಿ: ಇಂದು ನಡೆದ ಬಹುಮತ ಸಾಬೀತು ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆದ್ದಿದ್ದಾರೆ. 22 ಮಂದಿ ಶಾಸಕರು ಮನೋಹರ್ ಪರಿಕ್ಕರ್ ಅವರನ್ನು ಬೆಂಬಲಿಸುವ ಮೂಲಕ ಗೋವಾದಲ್ಲಿ ಅಧಿಕೃತವಾಗಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಿದೆ.

    ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನವನ್ನು ಗೆದ್ದಿದ್ದರೆ ಬಿಜೆಪಿ 13 ಸ್ಥಾನವನ್ನು ಗೆದ್ದುಕೊಂಡಿತ್ತು. ಸರಳ ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದ್ದು, ಇಷ್ಟು ಸೀಟ್‍ಗಳು ಯಾವುದೇ ಪಕ್ಷಕ್ಕೆ ಸಿಗದ ಹಿನ್ನೆಲೆಯಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿತ್ತು. ಈಗ ಎಂಜಿಪಿ, ಜಿಎಫ್‍ಪಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸಿಕೊಂಡಿದೆ. ಇಬ್ಬರು ಪಕ್ಷೇತರರು ಮತ್ತು ಓರ್ವ ಎನ್‍ಸಿಪಿ ಶಾಸಕರ ಬೆಂಬಲ ಸೂಚಿಸಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಏರಿದೆ.

  • ಗೋವಾದಲ್ಲಿ ಇಂದಿನಿಂದ ಪರಿಕ್ಕರ್ ಆಡಳಿತ

    ಗೋವಾದಲ್ಲಿ ಇಂದಿನಿಂದ ಪರಿಕ್ಕರ್ ಆಡಳಿತ

    ಪಣಜಿ: ಬಹುಮತ ಸಾಬೀತು ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗೆದ್ದಿದ್ದಾರೆ. 22 ಮಂದಿ ಶಾಸಕರು ಮನೋಹರ್ ಪರಿಕ್ಕರ್ ಅವರನ್ನು ಬೆಂಬಲಿಸುವ ಮೂಲಕ ಗೋವಾದಲ್ಲಿ ಅಧಿಕೃತವಾಗಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಿದೆ.

    ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನವನ್ನು ಗೆದ್ದಿದ್ದರೆ ಬಿಜೆಪಿ 13 ಸ್ಥಾನವನ್ನು ಗೆದ್ದುಕೊಂಡಿತ್ತು. ಸರಳ ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದ್ದು, ಇಷ್ಟು ಸೀಟ್‍ಗಳು ಯಾವುದೇ ಪಕ್ಷಕ್ಕೆ ಸಿಗದ ಹಿನ್ನೆಲೆಯಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿತ್ತು.

    ಈಗ ಎಂಜಿಪಿ, ಜಿಎಫ್‍ಪಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸಿಕೊಂಡಿದೆ. ಇಬ್ಬರು ಪಕ್ಷೇತರರು ಮತ್ತು ಓರ್ವ ಎನ್‍ಸಿಪಿ ಶಾಸಕರ ಬೆಂಬಲ ಸೂಚಿಸಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಏರಿದೆ.

    ಅತೀ ದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆಗೆ ಆಹ್ವಾನ ನೀಡಿರಲಿಲ್ಲ ಎಂದು ರಾಜ್ಯಪಾಲರ ನಡೆಯನ್ನು ದೂರಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಕದ ತಟ್ಟಿತ್ತು. ಸುಪ್ರೀಂ ಕಾಂಗ್ರೆಸ್ ಅರ್ಜಿಯನ್ನು ಮಾನ್ಯ ಮಾಡದೇ 48 ಗಂಟೆಯ ಒಳಗಡೆ ಬಹುಮತ ಸಾಬೀತುಪಡಿಸುವಂತೆ ಮಂಗಳವಾರ ಬಿಜೆಪಿಗೆ ಸೂಚಿಸಿತ್ತು.

    ಇದನ್ನೂ ಓದಿ: ನಾಲ್ಕನೇಯ ಬಾರಿ ಗೋವಾ ಸಿಎಂ ಆದ ಪರಿಕ್ಕರ್: ಪ್ರಮಾಣವಚನದ ವೇಳೆ ಸಣ್ಣ ಎಡವಟ್ಟು

  • ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ

    ಪಂಜಾಬ್‍ನಲ್ಲಿಂದು ಅಮರಿಂದರ್ ಅಧಿಕಾರ ಗ್ರಹಣ – ಗೋವಾದಲ್ಲಿ ಪರಿಕ್ಕರ್‍ಗೆ ಮತ ಪರೀಕ್ಷೆ

    – ಉತ್ತರಪ್ರದೇಶ ಸಿಎಂ ಆಯ್ಕೆ ಇನ್ನೂ ವಿಳಂಬ

    ನವದೆಹಲಿ: 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಮುಳುಗಿ ಹೋಗುತ್ತಿರುವ ಹಡಗಿಗೆ ಆಸರೆಯಂತಿರುವ ಪಂಜಾಬ್‍ನಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಮರಿಂದರ್ ಸಿಂಗ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‍ನಲ್ಲಿ ಮಾತ್ರ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದೆ. ರಾಜಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಿಪಿ ಬಡ್ನೋರ್ ಪ್ರಮಾಣವಚನ ಬೋಧಿಸಲಿದ್ದಾರೆ. ನವಜೋತ್ ಸಿಂಗ್ ಸಿಧು, ಮನ್‍ಪ್ರೀತ್ ಸಿಂಗ್ ಬಾದಲ್ ಸೇರಿ ಒಟ್ಟು 9 ಮಂದಿ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. 117 ಸದಸ್ಯ ಬಲದ ವಿಧಾನಸಭೆಯಲ್ಲಿ ಅತೀ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ 77 ಶಾಸಕರನ್ನು ಹೊಂದಿದೆ. ಆಮ್ ಆದ್ಮಿ ಪಾರ್ಟಿ 20, ಶಿರೋಮಣಿ ಅಕಾಲಿದಳ ಮತ್ತು ಬಿಜೆಪಿ ಮೈತ್ರಿಕೂಟ 15 ಶಾಸಕರನ್ನು ಹೊಂದಿದೆ.

    ಮಂಗಳವಾರವಷ್ಟೇ ಗೋವಾದಲ್ಲಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ಹಣೆಬರಹ ಇವತ್ತು ನಿರ್ಧಾರವಾಗಲಿದೆ. ವಿಧಾನಸಭೆಯಲ್ಲಿ ನೂತನ ಸಿಎಂ ಮನೋಹರ್ ಪರಿಕ್ಕರ್ ಇಂದು ಬಹುಮತ ಸಾಬೀತುಪಡಿಸಬೇಕಿದೆ. 40 ಸದಸ್ಯ ಬಲದ ಸದನದಲ್ಲಿ ಕಾಂಗ್ರೆಸ್ 17, ಬಿಜೆಪಿ 13, ಮಹಾರಾಷ್ಟ್ರವಾದಿ ಗೋಮಂತಕ್ ಪಾರ್ಟಿ(ಎಂಜಿಪಿ), ಗೋವಾ ಫಾವರ್ಡ್(ಜಿಎಫ್‍ಪಿ) ಪಾರ್ಟಿ ತಲಾ ಮೂವರು ಶಾಸಕರನ್ನು ಹೊಂದಿದೆ. ಮೂವರು ಪಕ್ಷೇತರ ಮತ್ತು ಓರ್ವ ಎನ್‍ಸಿಪಿ ಶಾಸಕರಿದ್ದಾರೆ. ಇವರಲ್ಲಿ ಎಂಜಿಪಿ, ಜಿಎಫ್‍ಪಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸಿಕೊಂಡಿದೆ. ಇಬ್ಬರು ಪಕ್ಷೇತರರೂ ಬೆಂಬಲ ಸೂಚಿಸಿದ್ದಾರೆ. ಅಲ್ಲಿಗೆ ಅಗತ್ಯ ಸರಳ ಬಹುಮತದ ಸಂಖ್ಯೆ 21ನ್ನು ದಾಟುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. 8 ಮಂದಿ ಸಚಿವರಲ್ಲಿ ಎಂಜಿಪಿಯ ಇಬ್ಬರು, ಜಿಎಫ್‍ಪಿಯ ಮೂವರು ಮತ್ತು ಸ್ವತಂತ್ರ ಶಾಸಕರು ಸೇರಿದ್ದಾರೆ. ಈ ಮೂಲಕ ಯಾವುದೇ ಕಾರಣಕ್ಕೂ ಸರ್ಕಾರ ಬೀಳದಂತೆ ನೋಡಿಕೊಳ್ಳುವ ಕಸರತ್ತನ್ನು ಬಿಜೆಪಿ ಮಾಡಿಕೊಂಡಿದೆ.

    ಈ ನಡುವೆ ಅತೀ ದೊಡ್ಡ ಪಕ್ಷವಾಗಿದ್ದರೂ ಸರ್ಕಾರ ರಚನೆಗೆ ಆಹ್ವಾನ ನೀಡಿರಲಿಲ್ಲ ಎಂದು ರಾಜ್ಯಪಾಲರ ವಿರುದ್ಧ ದೂರಿದ್ದ ಕಾಂಗ್ರೆಸ್ ಸುಪ್ರೀಂಕೋರ್ಟ್ ಕದ ತಟ್ಟಿತ್ತು. ಈ ಹಿನ್ನೆಲೆಯಲ್ಲಿ ಗುರುವಾರವೇ ಬಹುಮತ ಸಾಬೀತುಪಡಿಸುವಂತೆ ನ್ಯಾಯಾಲಯ ಬಿಜೆಪಿಗೆ ಸೂಚಿಸಿತ್ತು.

    ಸೀಟು ಗಳಿಕೆಯಲ್ಲಿ ಎರಡನೇ ಸ್ಥಾನದಲ್ಲಿದ್ದರೂ ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚನೆ ಮಾಡಿದೆ. ಆದ್ರೆ ಕಂಡುಕೇಳರಿಯದ ಜಯದ ಬಳಿಕವೂ ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ವಿಳಂಬವಾಗಿದೆ. ನಾಲ್ಕು ದಶಕಗಳ ಬಳಿಕ ಸಿಕ್ಕಿರುವ ಪ್ರಚಂಡ ಬಹುಮತದ ಹಿನ್ನೆಲೆಯಲ್ಲಿ ಸರ್ವ ಸಮುದಾಯಗಳನ್ನು ಓಲೈಸಬಲ್ಲ ಸಮರ್ಥ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸುವುದೇ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ನೂತನ ಮುಖ್ಯಮಂತ್ರಿಯನ್ನು ಅಂತಿಮಗೊಳಿಸುವ ಹೊಣೆ ಹೊತ್ತಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಭೂಪೇಂದರ್ ಯಾದವ್ ಶನಿವಾರದಷ್ಟೊತ್ತಿಗೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

    ರಾಜ್ಯದಲ್ಲಿ ಕಟ್ಟಕಡೆಯ ಬಿಜೆಪಿ ಸಿಎಂ ಆಗಿರುವ ರಾಜನಾಥ್ ಸಿಂಗ್‍ರ ಹೆಸರು ಮುಂಚೂಣಿಯಲ್ಲಿದೆಯಾದರೂ ಅದರ ಬಗ್ಗೆ ಚರ್ಚೆಯೇ ಅಪ್ರಯೋಜಕ ಎಂದು ಮಾಧ್ಯಮಗಳಿಗೆ ತಿರುಗೇಟು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಕುರಿತ ಚರ್ಚೆ ನಡೆಸದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ. ಮೂಲಗಳ ಪ್ರಕಾರ ನಾಳೆ ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡುವ ಸಾಧ್ಯತೆ ಇದೆ. ಪ್ರಚಂಡ ಫಲಿತಾಂಶದ ನಂತರ ರಾಜ್ಯಕ್ಕೆ ಪ್ರಧಾನಿ ನೀಡುತ್ತಿರುವ ಮೊಟ್ಟ ಮೊದಲ ಭೇಟಿ ಇದಾಗಲಿದೆ. ಉತ್ತರಪ್ರದೇಶ ಜೊತೆಗೆ ಉತ್ತರಾಖಂಡ್‍ನಲ್ಲೂ ಅದ್ಭುತ ಬಹುಮತ ಸಿಕ್ಕಿದ್ದರೂ ಮುಖ್ಯಮಂತ್ರಿ ಯಾರೆಂಬುದು ಇನ್ನೂ ಖಾತ್ರಿಯಾಗಿಲ್ಲ.