Tag: ಮನ್ ಕೀ ಬಾತ್

  • ಯುವಾ ಬ್ರಿಗೇಡ್ ಕೆಲಸವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

    ಯುವಾ ಬ್ರಿಗೇಡ್ ಕೆಲಸವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

    – ಶ್ರೀರಂಗಪಟ್ಟಣದಲ್ಲಿ ಪಾಳು ಬಿದ್ದ ದೇವಸ್ಥಾನಕ್ಕೆ ಕಾಯಕಲ್ಪ

    ಮಂಡ್ಯ: ಗಿಡಗಂಟೆಗಳು ಬೆಳೆದು ಪಾಳುಬಿದ್ದಿದ್ದ ದೇವಸ್ಥಾನವನ್ನು ಜೀರ್ಣಾದ್ಧಾರ ಮಾಡಿದ ಯುವಾ ಬ್ರಿಗೇಡ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

    ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಸಮೀಪ ಕೃಷ್ಣದೇವರಾಯರ ಕಾಲದ ಶಿವನ ದೇವಾಲಯದಲ್ಲಿ ಆರಂಭದಲ್ಲಿ ಪೂಜೆ ಪುನಸ್ಕಾರ ಮಾಡಿಕೊಂಡು ಬರಲಾಗುತ್ತಿತ್ತು. ಆದರೆ 45 ವರ್ಷಗಳಿಂದ ಇಲ್ಲಿ ಪೂಜೆ ಸಲ್ಲಿಸುತ್ತಿದ್ದ ಮರಿಯಪ್ಪ ಎಂಬುವರು ಮೃತಪಟ್ಟ ಬಳಿಕ ಪಾಳುಬಿದ್ದಿತ್ತು. ದೇವಾಲಯದ ಗೋಡೆಗಳು ಶಿಥಿಲಾವಸ್ಥೆ ತಲುಪಿ, ಗಿಡಗಂಟೆಗಳು ಬೆಳೆದು, ವಿಷ ಜಂತುಗಳ ತಾಣವಾಗಿ ಪರಿವರ್ಗನೆಗೊಂಡಿತ್ತು.

    ಇದನ್ನು ಗಮನಿಸಿದ ಶ್ರೀರಂಗಪಟ್ಟಣದ ಯುವ ಬ್ರಿಗೇಡ್‍ನ ಯುವಕರ ತಂಡ ಎರಡು ತಿಂಗಳು ಪ್ರತೀ ಭಾನುವಾರ ಶ್ರಮದಾನ ಮಾಡುವ ಮೂಲಕ ದೇವಾಲಯವನ್ನನು ಸಂಪೂರ್ಣ ಜೀರ್ಣೋದ್ಧಾರ ಮಾಡಿದ್ದರು. ಬಳಿಕ ಹೊಸ ಲಿಂಗ ಪ್ರತಿಷ್ಠಾಪಿಸಿ, ನಿತ್ಯ ಪೂಜೆ ಪುನಸ್ಕಾರ ನೆರವೇರಿಸಿಕೊಂಡು ಬರುತ್ತಿದ್ದಾರೆ. ಈ ಕಾರ್ಯದ ಬಗ್ಗೆ ಇಂದು ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದು, ಯುವಕರನ್ನು ಗುಣಗಾನ ಮಾಡಿದ್ದಾರೆ.

  • ಹಬ್ಬದ ವೇಳೆ ಸೈನಿಕರನ್ನು ನೆನೆದು ಅವರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ

    ಹಬ್ಬದ ವೇಳೆ ಸೈನಿಕರನ್ನು ನೆನೆದು ಅವರಿಗಾಗಿ ದೀಪ ಬೆಳಗಿಸಿ: ಪ್ರಧಾನಿ ಮೋದಿ

    ನವದೆಹಲಿ: ಕೆಚ್ಚೆದೆಯ ಸೈನಿಕರು ಹಾಗೂ ಭದ್ರತಾ ಪಡೆಗಳೊಂದಿಗೆ ಭಾರತ ಯಾವಾಗಲೂ ಇರುತ್ತದೆ. ಕೊರೊನಾ ಸಮಯದಲ್ಲಿ ಹಬ್ಬ ಆಚರಣೆ ಮಾಡುತ್ತಿದ್ದೇವೆ. ಸೈನಿಕರಿಗಾಗಿ ದೀಪ ಬೆಳಗಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನಿಡಿದ್ದಾರೆ.

    ಮನ್ ಕೀ ಬಾತ್‍ನಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದಸರಾ ಹಬ್ಬದ ಶುಭಾಶಯ ತಿಳಿಸುವ ಮೂಲಕ ತಮ್ಮ ಭಾಷಣ ಆರಂಭಿಸಿದರು. ಸೈನಿಕರು ತಮ್ಮ ಕುಟುಂಬಗಳನ್ನು ಬಿಟ್ಟು ದೇಶ ಸೇವೆ ಮಾಡುತ್ತಿದ್ದಾರೆ. ವಿದೇಶಗಳ ಬೆದರಿಕೆಗಳಿಂದ ದೇಶವನ್ನು ಕಾಯುವ ಮೂಲಕ ನಮ್ಮನ್ನು ರಕ್ಷಿಸುತ್ತಿದ್ದಾರೆ. ಹೀಗಾಗಿ ಅವರನ್ನು ನೆನೆದು ಹಬ್ಬದ ಸಂದರ್ಭದಲ್ಲಿ ದೀಪವನ್ನು ಬೆಳಗಿಸಿ ಎಂದು ಕರೆ ನೀಡಿದರು.

    ಈದ್, ದೀಪಾವಳಿ ಸೇರಿದಂತೆ ಹಲವು ಹಬ್ಬಗಳು ಈ ಸಂದರ್ಭದಲ್ಲಿ ಬರುತ್ತವೆ. ಈ ಹಬ್ಬಗಳ ಸಂದರ್ಭದಲ್ಲಿ ಗಡಿ ಕಾಯುತ್ತಿರುವ ಸೈನಿಕರನ್ನು ಸಹ ನಾವು ನೆನೆಯಬೇಕಿದೆ. ಅವರಿಗಾಗಿ ಮನೆಯಲ್ಲಿ ದೀಪ ಬೆಳಗಿಸುವ ಮೂಲಕ ತಾಯಿ ಭಾರತಿಯ ವೀರ ಪುತ್ರರಿಗೆ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿದರು.

    ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಚೀನಾದ ಸುಮಾರು 3,500 ಕಿ.ಮೀ ಉದ್ದದ ಗಡಿಯಲ್ಲಿ ಸೈನ್ಯ ಹಾಗೂ ಶಸ್ತ್ರಾಸ್ತ್ರಗಳನ್ನು ಗಮನಾರ್ಹ ರೀತಿಯಲ್ಲಿ ಬಲಪಡಿಸಲಾಗಿದೆ. ಲಡಾಖ್‍ನಲ್ಲಿ ಉದ್ವಿಗ್ನತೆ ಸರಾಗಗೊಳ್ಳುವ ಯಾವುದೇ ಲಕ್ಷಣಗಳು ತೋರುತ್ತಿಲ್ಲ. ಹಲವು ಹಂತದ ಉನ್ನತ ಮಟ್ಟದ ಮಾತುಕತೆ ನಡೆದರೂ ಫಲಕಾರಿಯಾಗಿಲ್ಲ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.

    ಹಬ್ಬಗಳನ್ನು ಸಂಯಮದಿಂದ ಆಚರಿಸಿ, ಶಾಪಿಂಗ್ ಮಾಡುವಾಗ ವೋಕಲ್ ಫಾರ್ ಲೋಕಲ್ ಮಂತ್ರ ಜಪಿಸಿ, ಸ್ಥಳೀಯ ವ್ಯಾಪಾರಿಗಳೊಂದಿಗೆ ಖರೀದಿಸುವ ಸಂಕಲ್ಪ ಮಾಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು. ಕೊರೊನಾ ವೇಳೆ ಹಬ್ಬಗಳನ್ನು ಎಚ್ಚರದಿಂದ ಆಚರಿಸಿ, ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

  • ಗಾಂಧೀಜಿಯ ಆರ್ಥಿಕ ನೀತಿ ಅನುಸರಿಸಿದ್ರೆ ಆತ್ಮನಿರ್ಭರ ಭಾರತ್ ಅಭಿಯಾನ ಅಗತ್ಯವಿರಲಿಲ್ಲ- ಮೋದಿ

    ಗಾಂಧೀಜಿಯ ಆರ್ಥಿಕ ನೀತಿ ಅನುಸರಿಸಿದ್ರೆ ಆತ್ಮನಿರ್ಭರ ಭಾರತ್ ಅಭಿಯಾನ ಅಗತ್ಯವಿರಲಿಲ್ಲ- ಮೋದಿ

    ನವದೆಹಲಿ: ಮಹಾತ್ಮ ಗಾಂಧಿಯವರ ಆರ್ಥಿಕ ತತ್ತ್ವಶಾಸ್ತ್ರವನ್ನು ಅನುಸರಿಸಿದ್ರೆ, ಇಂದು ಆತ್ಮನಿರ್ಭರ ಭಾರತ್ ಅಭಿಯಾನ ಅಗತ್ಯವಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    69ನೇ ಮನ್ ಕೀ ಬಾತ್‍ನನಲ್ಲಿ ಕೃಷಿ ಮಸೂದೆಯ ಬಗ್ಗೆ ಮಾತನಾಡಿ ರೈತರಿಗೆ ಮತ್ತೊಮ್ಮೆ ಅಭಯ ನೀಡಿದರು. ಮಹಾತ್ಮ ಗಾಂಧಿಯವರ ಆರ್ಥಿಕ ತತ್ತ್ವಶಾಸ್ತ್ರವನ್ನು ಅನುಸರಿಸಿದ್ದರೆ ಭಾರತ ಎಂದೋ ಸ್ವಾವಲಂಬಿಯಾಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.

    ಆತ್ಮನಿರ್ಭರ ಭಾರತದ ನಿರ್ಮಾಣದಲ್ಲಿ ರೈತರ ಪಾತ್ರ ಪ್ರಮುಖ. ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ರೈತರಿಗೆ ಸರ್ಕಾರ ನೀಡಿದೆ ಎಂದು ಕೃಷಿ ಮಸೂದೆಯನ್ನು ಸಮರ್ಥಿಸಿಕೊಂಡರು.

    ನೂತನ ಕೃಷಿ ವಿಧೇಯಕಗಳು ರೈತರ ಪರವಾಗಿದ್ದು, ಇವುಗಳ ಲಾಭವನ್ನು ದೇಶದ ರೈತ ಸಮುದಾಯ ಅರಿಯಬೇಕಿದೆ. ರೈತರು ತಮ್ಮ ಉತ್ಪನ್ನಗಳನ್ನು ತಮಗೆ ಇಷ್ಟಬಂದ ಜಾಗದಲ್ಲಿ, ಇಷ್ಟಬಂದ ಬೆಲೆಗೆ ಮಾರಾಟ ಮಾಡುವ ಸ್ವಾತಂತ್ರ್ಯ ಮತ್ತು ಶಕ್ತಿಯನ್ನು ಪಡೆದಿದ್ದಾರೆ ಎಂದು ಹೇಳಿದರು.

    ಇತ್ತ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿದ್ದರೂ ಕೃಷಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

  • ಚನ್ನಪಟ್ಟಣದ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು

    ಚನ್ನಪಟ್ಟಣದ ಬಗ್ಗೆ ‘ಮನ್ ಕಿ ಬಾತ್’ನಲ್ಲಿ ಮೋದಿ ಮಾತು

    – ಭಾರತವನ್ನ ಸ್ವಾವಲಂಬಿಗಳನ್ನಾಗಿ ಮಾಡೋದು ನಮ್ಮ ಜವಾಬ್ದಾರಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಮನಗರದ ಚನ್ನಪಟ್ಟಣದ ಬಗ್ಗೆ ಮಾತನಾಡಿದ್ದಾರೆ.

    ಇಂದು ಪ್ರಧಾನಿ ಮೋದಿ ಅವರು 68ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ. ಮೊದಲಿಗೆ ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ಮಧ್ಯೆ ತಂತ್ರಜ್ಞಾನಕ್ಕೆ ಹೊಂದಿಕೊಂಡು ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕರನ್ನು ಶ್ಲಾಘಿಸಿದರು. ಈ ವೇಳೆ ಚೀನಾದಿಂದ ಆಟಿಕೆಗಳನ್ನು ಕಡಿಮೆ ಮಾಡಿ ಭಾರತದ ಆಟಿಕೆಗಳನ್ನು ಖರೀದಿಸಬೇಕೆಂದು ಪರೋಕ್ಷವಾಗಿ ತಿಳಿಸಿದರು.

    ಭಾರತವನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ನಮ್ಮ ದೇಶದಲ್ಲಿ ಸ್ಥಳೀಯ ಆಟಿಕೆಗಳ ಶ್ರೀಮಂತ ಸಂಪ್ರದಾಯವಿದೆ. ಉತ್ತಮ ಆಟಿಕೆಗಳನ್ನು ತಯಾರಿಸುವಲ್ಲಿ ಪರಿಣತಿಯನ್ನು ಹೊಂದಿರುವ ಅನೇಕ ಪ್ರತಿಭಾವಂತ ಮತ್ತು ನುರಿತ ಕುಶಲಕರ್ಮಿಗಳು ಇದ್ದಾರೆ. ಭಾರತದ ಕೆಲವು ಭಾಗಗಳಿಂದು ಆಟಿಕೆ ಸಮೂಹಗಳಾಗಿ ಬೆಳೆಯುತ್ತಿದೆ. ಅಂದರೆ ಆಟಿಕೆಗಳ ಕೇಂದ್ರಗಳಾಗಿ ರೂಪುಗೊಳ್ಳುತ್ತಿವೆ. ಹಾಗೆ ರಾಮನಗರದ ಚನ್ನಪಟ್ಟಣ (ಕರ್ನಾಟಕ), ಕೃಷ್ಣದಲ್ಲಿ ಕೊಂಡಪಲ್ಲಿ (ಆಂಧ್ರಪ್ರದೇಶ), ತಮಿಳುನಾಡಿನ ತಂಜಾವೂರು, ಅಸ್ಸಾಂನ ಧುಬ್ರಿ, ಯುಪಿಯಲ್ಲಿ ವಾರಣಾಸಿ ಆಟಿಕೆಗಳ ಕೇಂದ್ರಗಳಾಗಿವೆ. ಇಷ್ಟೇ ಅಲ್ಲ ಇನ್ನೂ ಅನೇಕ ಹೆಸರುಗಳನ್ನು ಭಾರತದಲ್ಲಿ ಎಣಿಸಬಹುದು ಎಂದರು.

    ನಾವು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಆಟಿಕೆಗಳತ್ತ ಗಮನ ಹರಿಸಿದ್ದೇವೆ. ಆಡುವಾಗ ಕಲಿಯುವುದು, ಆಟಿಕೆಗಳು ತಯಾರಿಸುವುದು ಇತ್ಯಾದಿಗಳನ್ನು ಪಠ್ಯಕ್ರಮದ ಒಂದು ಭಾಗವನ್ನಾಗಿ ಮಾಡಲಾಗಿದೆ. ಜಾಗತಿಕೆ ಆಟಿಕೆ ವ್ಯವಹಾರ ಸುಮಾರು 7 ಲಕ್ಷ ಕೋಟಿ ರೂ. ಆಗಿದ್ದು, ಇದರಲ್ಲಿ ಭಾರತದ ಪಾಲು ತುಂಬಾ ಕಡಿಮೆ ಇದೆ. ಹಿಗಾಗಿ ಆಟಿಕೆ ಉದ್ಯಮಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು.

    ನಮ್ಮ ಹಬ್ಬಗಳು ಮತ್ತು ಪರಿಸರದ ನಡುವೆ ಬಲವಾದ ಬಂಧವಿದೆ. ನಮ್ಮ ಪರಿಸರದ ರಕ್ಷಣೆಗೆ ಸಂಬಂಧಿಸಿದ ಅನೇಕ ಹಬ್ಬಗಳು ನಮ್ಮಲ್ಲಿವೆ. ಓಣಂ ಹಬ್ಬವನ್ನು ಸಹ ಸಂತೋಷದಿಂದ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಹಬ್ಬವು ಚಿಂಗಂ ತಿಂಗಳಲ್ಲಿ ಬರುತ್ತದೆ. ಈ ಅವಧಿಯಲ್ಲಿ, ಜನರು ಹೊಸದನ್ನು ಖರೀದಿಸುತ್ತಾರೆ. ಮನೆಗಳನ್ನು ಅಲಂಕರಿಸುತ್ತಾರೆ, ಪೂಕಲಂ ತಯಾರಿಸುತ್ತಾರೆ, ಓಣಂ-ಸಾದಿಯಾವನ್ನು ಆನಂದಿಸುತ್ತಾರೆ. ವೈವಿಧ್ಯಮಯ ಆಟಗಳು, ಸ್ಪರ್ಧೆಗಳು ಸಹ ನಡೆಯುತ್ತವೆ. ಇದು ಹಬ್ಬಗಳ ಸಮಯ. ಆದರೆ ಅದೇ ಸಮಯದಲ್ಲಿ ಕೊರೊನಾ ಪರಿಸ್ಥಿತಿಯಿಂದಾಗಿ ಜನರಲ್ಲಿ ಶಿಸ್ತಿನ ಪ್ರಜ್ಞೆಯೂ ಇದೆ ಎಂದು ಮೋದಿ ಹೇಳಿದರು.

    ಈ ತಿಂಗಳ ಆರಂಭದಲ್ಲಿ ಅಪ್ಲಿಕೇಶನ್ ಸಂಶೋಧನಾ ಸವಾಲನ್ನು ದೇಶದ ಯುವಕರ ಮುಂದೆ ಇಡಲಾಗಿತ್ತು. ಆತ್ಮನಿರ್ಭರ್ ಭಾರತ್ ಆ್ಯಪ್ ಇನ್ನೋವೇಶನ್ ಚಾಲೆಂಜ್‍ನ ಅಡಿಯಲ್ಲಿ kutuki kids ಹೆಸರಿನ ಕಲಿಕಾ ಆಪ್ಯ ಒಂದು ಸಿದ್ಧವಾಗಿದೆ. ಇದರ ಮೂಲಕ ಗಣಿತ, ವಿಜ್ಞಾನದ ಅನೇಕ ವಿಷಯಗಳನ್ನು ಹಾಡು ಮತ್ತು ಕತೆಗಳ ಮೂಲಕ ಮಕ್ಕಳು ಸುಲಭವಾಗಿ ಕಲಿಯಬಹುದು ಎಂದು ತಿಳಿಸಿದರು.

    ನಾವು ದೇಶದಲ್ಲಿ ತಯಾರಾದ ಹಲವು ವಿಭಿನ್ನ ಅಪ್ಲಿಕೇಶನ್‍ಗಳನ್ನು ಹೊಂದಿದ್ದೇವೆ. ಮತ್ತೊಂದು ಆ್ಯಪ್ ಇದೆ. ಅದರ ಹೆಸರು ಸ್ಟಪ್ ಸೆಟ್ ಗೋ. ಇದೊಂದು ಫಿಟ್‍ನೆಸ್ ಆ್ಯಪ್ ಆಗಿದ್ದು, ನೀವು ಎಷ್ಟು ದೂರ ಹೋಗಿದ್ದೀರಿ ಮತ್ತು ಎಷ್ಟು ಕ್ಯಾಲರಿ ಬರ್ನ್ ಮಾಡಿದ್ದೀರಿ ಎಂಬ ಮಾಹಿತಿಯನ್ನು ನೀಡುತ್ತದೆ. ಈ ಮೂಲಕ ನೀವು ಫಿಟ್ ಆಗಿರಲು ಉತ್ಸಾಹ ತುಂಬುತ್ತದೆ. ಅದೇ ರೀತಿ ಭಾರತೀಯರಲ್ಲಿ ‘ಚಿಂಗಾರಿ ಆ್ಯಪ್’ ಪ್ರಖ್ಯಾತವಾಗಿದೆ ಎಂದರು.

    ಕೋವಿಡ್ 19 ಸಮಯದಲ್ಲಿ ನಮ್ಮ ರೈತರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇನ್ನೂ ರಾಷ್ಟ್ರದ ಭದ್ರತಾ ಕಾರ್ಯಾಚರಣೆಯಲ್ಲಿ ಶ್ವಾನಗಳ ಪಾತ್ರವನ್ನು ಪ್ರಮುಖವಾಗಿದೆ ಎಂದು ಶ್ಲಾಘಿಸಿದರು.

  • ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

    ಗುಡ್ಡಗಾಡಿನಲ್ಲಿ 16 ಕೆರೆ- ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಮೆಚ್ಚುಗೆ

    ಬೆಂಗಳೂರು: ಸ್ವಂತ ಕೆಲಸದೊಂದಿಗೆ ಗುಡ್ಡಗಾಡು ಪ್ರದೇಶದಲ್ಲಿ 16 ಕೆರೆಗಳನ್ನು ನಿರ್ಮಿಸಿದ ಮಂಡ್ಯ ಜಿಲ್ಲೆಯ ಕಾಮೇಗೌಡರ ಸಾಮಾಜಿಕ ಕಳಕಳಿಯನ್ನು ಪ್ರಧಾನಿ ನರೇಂದ್ರ ಮೋದಿ ಹಾಡಿಹೊಗಳಿದ್ದಾರೆ.

    ಪ್ರಧಾನಿ ಮೋದಿ ಇಂದಿನ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ, ರಾಜ್ಯೋತ್ಸವ ಪುರಷ್ಕೃತ ಕಾಮೇಗೌಡ ಅವರನ್ನು ಶ್ಲಾಘಿಸಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸಮದೊಡ್ಡಿ ಗ್ರಾಮದ ಕುರಿಗಾಹಿ 83 ವರ್ಷದ ಕಾಮೇಗೌಡ ಅವರು 16 ಕೆರೆಗಳನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಎರಡು ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ.

    ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕ್ಯಾಮೆಗೌಡ ಅವರು ಶಾಲೆಯ ಮೆಟ್ಟಿಲು ಏರಿದವರಲ್ಲ. ಆದರೆ ತಮಗಿರುವ ಪರಿಸರ ಕಾಳಜಿಯಿಂದ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸವನ್ನು ಗುರುತಿಸಿದ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಪ್ರಧಾನಿ ಮೋದಿ ಕ್ಯಾಮೇಗೌಡರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ದೇಶಕ್ಕೆ ಪರಿಚಯಿಸಿದ್ದಾರೆ.

    ಕೆರೆ ನಿರ್ಮಾಣಕ್ಕೆ ಕೈ ಹಾಕಿದ್ಯಾಕೆ?:
    ಕುರಿಗಾಹಿಯಾಗಿರುವ ಕ್ಯಾಮೇಗೌಡ ಅವರು ಸುಮಾರು 13 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದರು. ಆಗ ವಿಪರೀತ ದಾಹವಾಗಿ ನೀರಿಗಾಗಿ ಪರದಾಟಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿಪಡೆದಿದ್ದರು. ನಾನು ದಾಹ ತೀರಿಸಿಕೊಂಡೆ ಆದ್ರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

    ಕ್ಯಾಮೇಗೌಡರು ಗುಡ್ಡದಲ್ಲಿ ಕೆರೆ ತೋಡುತ್ತಿದ್ದನ್ನ ಕಂಡು ಅನೇಕರು ಗೇಲಿ ಮಾಡಿದ್ದರು. ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದೆ ತಮ್ಮ ಕೆಲಸವನ್ನು ಮುಂದುವರಿಸಿದ ಕ್ಯಾಮೇಗೌಡರು ಸದ್ಯ 16 ಕೆರೆಗಳನ್ನು ನಿರ್ಮಿಸಿ ಪ್ರಧಾನಿ ಮೋದಿ, ದೇಶದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕ್ಯಾಮೇಗೌಡರು ತೋಡಿದ ಕೆರೆಗಳಲ್ಲಿ ಕಡು ಬೇಸಿಗೆಯಲ್ಲಿ ಕೂಡ ನೀರು ತುಂಬಿರುತ್ತದೆ. ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಸಹ ಅವರು ತೋಡಿದ ಕೆರೆಗಳಲ್ಲಿ ನೀರು ಸಾಕಷ್ಟು ಇರುತ್ತದೆ. ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೆ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಈ ಹಿಂದೆ ಹೇಳಿದ್ದರು.

    ಸಂಸದ ಪಿಸಿ ಮೋಹನ್ ಟ್ವೀಟ್ ಮಾಡಿ, ಮಂಡ್ಯ ಜಿಲ್ಲೆಯ ಮಲವಳ್ಳಿ ತಾಲೂಕಿನ ದಾಸನಡೋಡ್ಡಿ ಗ್ರಾಮದ ಕಾಮೇಗೌಡ ಅವರು ಇಡೀ ಬೆಟ್ಟದ ಪ್ರದೇಶವನ್ನು ಹಸಿರೀಕರಣಗೊಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅಸಾಮಾನ್ಯ ವ್ಯಕ್ತಿತ್ವವನ್ನು ಹೊಂದಿದ್ದರೂ ಅವರು ಸಾಮಾನ್ಯ ಕೃಷಿಕರಾಗಿ ಪರಿಸರ ಕಾಳಜಿ ಮೆರೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

     

  • ಕೊರೊನಾ ಸಂಕಷ್ಟ ಬಾರದಿದ್ರೆ ಜೀವನದ ಬೆಲೆ ಅರಿವಾಗ್ತಿರಲಿಲ್ಲ: ಪ್ರಧಾನಿ ಮೋದಿ

    ಕೊರೊನಾ ಸಂಕಷ್ಟ ಬಾರದಿದ್ರೆ ಜೀವನದ ಬೆಲೆ ಅರಿವಾಗ್ತಿರಲಿಲ್ಲ: ಪ್ರಧಾನಿ ಮೋದಿ

    – ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ
    – ಕರ್ನಾಟಕ ಅಳಿಗುಳಿ ಬಗ್ಗೆ ಮೋದಿ ಮಾತು
    – ರಾಜ್ಯದ ಕಾಮೇಗೌಡರ ಬಗ್ಗೆ ಮೆಚ್ಚುಗೆ

    ನವದೆಹಲಿ: ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ. ಒಂದು ಕೊರೊನಾ ಸೋಲಿಸುವುದು ಮತ್ತೊಂದು ಆರ್ಥಿಕತೆ ಸುಧಾರಿಸುವುದು. ಹೀಗಾಗಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಎಂದು ಪ್ರಧಾನಿ ಮೋದಿ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು.

    ‘ಮನ್ ಕೀ ಬಾತ್’ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ 2020 ಸರಿ ಇಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಒಮ್ಮಲೇ ಎಲ್ಲ ಸಮಸ್ಯೆಗಳು ಎದುರಾಗುತ್ತಿದೆ. ಭೂಕಂಪಗಳು, ಸೈಕ್ಲೋನ್, ಕೊರೊನಾ ಸಾಲು ಸಾಲು ಸಮಸ್ಯೆ ಬರುತ್ತಿದೆ. ಹೀಗಾಗಿ ಈ ವರ್ಷ ಸರಿಯಾಗಿಲ್ಲ ಎನಿಸುತ್ತಿದೆ. ಆದರೆ ಹೀಗೆ ಭಾವಿಸಬಾರದು, ಸಮಸ್ಯೆಗಳು ಬರುತ್ತವೆ, ನಾವು ಅದನ್ನು ಎದುರಿಸಬೇಕು. ಹಿಂದೆಯೂ ಸಾಕಷ್ಟು ಸಮಸ್ಯೆಗಳನ್ನು ಭಾರತ ಎದುರಿಸಿದೆ. ದೇಶ ಇದನೆಲ್ಲ ಎದುರಿಸಿ ಮುಂದುವರಿಯುತ್ತಲೇ ಇದೆ. ಇದೇ ಭಾವನೆಯಲ್ಲಿ ಮುಂದುವರಿಬೇಕು. ಎಲ್ಲ ರೀತಿಯ ಅಪಾಯಗಳನ್ನು ಎದುರಿಸಿ ಗಟ್ಟಿಯಾಗಿ ನಿಲ್ಲುವುದು ಭಾರತ ಇತಿಹಾಸ. ನನಗೆ ದೇಶದ 13 ಕೋಟಿ ಜನರ ಮೇಲೆ ಅಚಲ ವಿಶ್ವಾಸವಿದೆ ಎಂದು ದೇಶದ ಜನರಿಗೆ ಧೈರ್ಯ ತುಂಬಿದರು.

    ಭಾರತಕ್ಕೆ ಗೆಳೆತನವನ್ನು ನಿಭಾಯಿಸಲು ಬರುತ್ತೆ. ಕಣ್ಣಲ್ಲಿ ಕಣ್ಣಿಟ್ಟು ಉತ್ತರ ಕೊಡುವ ಶಕ್ತಿಯೂ ಇದೆ. ಭಾರತದ ನೆಲದ ಮೇಲೆ ಕಣ್ಣಿಟ್ಟರೆ ಉತ್ತರ ಕೊಡದೆ ಬಿಡಲ್ಲ. ಶತ್ರುಗಳಿಗೆ ಸೂಕ್ತ ಪಾಠವನ್ನು ನಮ್ಮ ಸೈನಿಕರು ನೀಡುತ್ತಾರೆ. ಯೋಧರ ತ್ಯಾಗ ಮತ್ತು ಬಲಿದಾನವನ್ನು ಈ ದೇಶ ಮರೆಯುವುದಿಲ್ಲ. ಪುತ್ರರನ್ನು ಕಳೆದುಕೊಂಡ ಪೋಷಕರು ತಮ್ಮ ಇತರೇ ಮಕ್ಕಳು ಮೊಮ್ಮಕ್ಕಳನ್ನು ಸೇನೆಗೆ ಕಳುಹಿಸುವ ಸಂಕಲ್ಪ ಮಾಡಿದ್ದಾರೆ ಎಂದು ಲಡಾಕ್‍ನ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆ ಬಗ್ಗೆ ಮಾತನಾಡಿದರು.

    ಭಾರತೀಯ ಸೇನೆಯಲ್ಲಿ ಸ್ವಾವಲಂಬನೆ ಸಾಧಿಸುವ ಪ್ರಯತ್ನ ಮಾಡುತ್ತಿದೆ. ಆದರೆ ಜನರ ಭಾಗವಹಿಸುವಿಕೆ ಇಲ್ಲದೇ ಅಭಿಯಾನವೊಂದು ಯಶಸ್ವಿಯಾಗದು. ಜನರು ದೇಶಿಯ ಉತ್ಪನ್ನಗಳನ್ನು ಖರೀದಿಸಬೇಕು. ಇದು ಒಂದು ರೀತಿಯ ದೇಶದ ಸೇವೆಯಾಗಲಿದೆ. ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಬ್ದಾರಿಗಳಿವೆ. ಒಂದು ಕೊರೊನಾ ಸೋಲಿಸುವುದು ಮತ್ತೊಂದು ಆರ್ಥಿಕತೆ ಸುಧಾರಿಸುವುದು. ಹೀಗಾಗಿ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸಿದಿದ್ದರೆ ನೀವೂ ಇತರಿಗೆ ಕಂಟಕವಾಗಲಿದ್ದೀರಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಓಡಾಡುವುದು ಉತ್ತಮ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

    ಕೊರೊನಾ ಸಂಕಷ್ಟ ಬಾರದಿದ್ದರೇ ಜೀವನದ ಬೆಲೆ ಅರಿವಾಗುತ್ತಿರಲಿಲ್ಲ. ಅಲ್ಲದೇ ಜೀವನ ಯಾಕೆ, ಏನು, ಹೇಗೆ ಅನ್ನೊ ಕಲ್ಪನೆಯೇ ನಮಗೆ ನೆನಪಿಗೆ ಬರುತ್ತಿರಲಿಲ್ಲ. ಈಗ ಜನರು ಕೊರೊನಾದಿಂದ ಜೀವನ ಪ್ರತಿ ಕ್ಷಣ ಖುಷಿಯಾಗಿದ್ದಾರೆ. ಕರ್ನಾಟಕ ಅಳಿಗುಳಿ ಮನೆ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸಾಂಪ್ರದಾಯಿಕ ಆಟ ಆಡುತ್ತಿದ್ದದ್ದಾರೆ. ಲಾಕ್‍ಡೌನ್‍ನಿಂದಾಗಿ ಸಣ್ಣ ಪುಟ್ಟ ಖುಷಿ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ. ಈ ರೀತಿಯ ದೇಶಿಯ ಆಟಗಳನ್ನು ಅಭಿವೃದ್ಧಿ ಪಡಿಸುವ ಪ್ರಯತ್ನ ಮಾಡುತ್ತೇವೆ. ಮಕ್ಕಳು ಮನೆಯಲ್ಲಿರುವ ಅಜ್ಜ ಅಜ್ಜಿಯ ಜೊತೆ ಬೆರೆಯಿರಿ. ಅವರ ಹಳೆ ನೆನೆಪುಗಳನ್ನು ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿ. ಅವರ ಸಂದರ್ಶನವನ್ನು ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ. ಇದು ನಮ್ಮ ಪುರಾತನ ಸಂಸ್ಕೃತಿ ಬಗ್ಗೆ ತಿಳಿಯಲು ಸಹಾಯವಾಗಲಿದೆ ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು.

    ಕರ್ನಾಟಕ ಮೂಲದ ಕಾಮೇಗೌಡ ಒಬ್ಬ ಸಾಮಾನ್ಯ ರೈತ. 80 ವರ್ಷದ ಕಾಮೇಗೌಡ 16 ಕೆರೆಗಳನ್ನು ತೊಡಿದಿದ್ದಾರೆ. ಇದು ಹಲವು ಜನರ ಬದುಕಿಗೆ ದಾರಿ ಮಾಡಿಕೊಟ್ಟಿದೆ. ಸ್ವತಃ ಕೆಲಸದ ಜೊತೆಗೆ ಸಾಮಾಜಿಕ ಸೇವೆ ಮಾಡುವ ಇಚ್ಛೆ ಕಾಮೇಗೌಡ ಹೊಂದಿದ್ದಾರೆ ಎಂದರು. ಹೀಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶದ ವರ್ತಮಾನದ ಸ್ಥಿತಿಗತಿಗಳ ಬಗ್ಗೆ ಮಾತನಾಡಿದರು. ಅಲ್ಲದೇ ಈ ಎಲ್ಲಾ ಸಂಕಷ್ಟಗಳನ್ನು ಮೀರಿ ಭಾರತ ಜಯ ಸಾಧಿಸಲಿದೆ ಎಂದು ಜನರಲ್ಲಿ  ಭರವಸೆ ವ್ಯಕ್ತಪಡಿಸಿದರು.

  • ಕೊರೊನಾ ಸಂಕಷ್ಟ- ಜನಸಾಮಾನ್ಯರ ಸಲಹೆ ಕೇಳಿದ ಪ್ರಧಾನಿ ಮೋದಿ

    ಕೊರೊನಾ ಸಂಕಷ್ಟ- ಜನಸಾಮಾನ್ಯರ ಸಲಹೆ ಕೇಳಿದ ಪ್ರಧಾನಿ ಮೋದಿ

    ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ಮೂರು ಲಕ್ಷ ದಾಟಿದ್ದು, ಈ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಾರ್ವಜನಿಕರು ಸಲಹೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್ ಮೂಲಕ ಮನವಿ ಮಾಡಿರುವ ಅವರು, ಜನರ ಉತ್ತಮ ಸಲಹೆಗಳನ್ನು ಜೂನ್ 28ರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ. ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಚರ್ಚಿಸಲು ಸಾಕಷ್ಟು ವಿಚಾರಗಳು ನಿಮ್ಮ ಬಳಿ ಇದೆ. ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ, 130 ಕೋಟಿ ಜನರ ಅಭಿಪ್ರಾಯ ನನಗೆ ಮತ್ತಷ್ಟು ಬಲ ತಂದು ಕೊಡಲಿದೆ ಹಾಗೂ ಹೆಚ್ಚು ಅಂಶಗಳನ್ನು ವಿಸ್ತಾರವಾಗಿ ಹಾಗೂ ವಿವಿಧ ವಿಚಾರಧಾರೆಗಳನ್ನು ಹೊಂದಲು ಸಹಕಾರಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.

    ಇದಕ್ಕಾಗಿ ಎರಡು ವಾರಗಳ ಕಾಲಾವಕಾಶವಿದ್ದು, ಟಾಲ್ ಫ್ರೀ ಸಂಖ್ಯೆ 1800-11-7800 ಗೆ ಕರೆಮಾಡಿ ಅಥಾವ NAMO ಮತ್ತು Mygov ಆ್ಯಪ್ ನಲ್ಲಿ ತಮ್ಮ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಕೋರಿದ್ದಾರೆ.

    ಕಳೆದ ತಿಂಗಳ ಮನ್ ಕೀ ಬಾತ್ ನಲ್ಲಿ ಕೊರೊನಾ ಸಂಕಷ್ಟ ಕಾಲದಲ್ಲಿ ತಮ್ಮ ತೊಂದರೆಗಳ ನಡುವೆ ಜನರಿಗೆ ಸಹಾಯ ಮಾಡಿದ್ದ ಹಲವರ ಬಗ್ಗೆ ಮೋದಿ ಮಾತನಾಡಿದ್ದರು. ಅಲ್ಲದೆ ಕೊರೊನಾ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಮನವಿ ಮಾಡಿದ್ದರು.

  • ಪ್ರಧಾನಿ ಮೋದಿ ಮನಗೆದ್ದ ನಾಸಿಕ್ ರೈತನ ಕೊರೊನಾ ನಿಯಂತ್ರಣ ಕ್ರಮ

    ಪ್ರಧಾನಿ ಮೋದಿ ಮನಗೆದ್ದ ನಾಸಿಕ್ ರೈತನ ಕೊರೊನಾ ನಿಯಂತ್ರಣ ಕ್ರಮ

    – ಕೊರೊನಾ ನಿಯಂತ್ರಣಕ್ಕೆ ಸಂಶೋಧನೆಗಳು ಅಗತ್ಯ
    – ಸೇವಾ ಮನೋಭಾವ ಬೆಳೆಸಿಕೊಳ್ಳಲು ಮೋದಿ ಕರೆ

    ನವದೆಹಲಿ: ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ. ಈ ವಿಚಾರವನ್ನು ‘ಮನ್ ಕೀ ಬಾತ್’ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಚೇತರಿಕೆ, ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಮೋದಿ ಮಾತನಾಡಿದ್ದಾರೆ.

    ಕಳೆದ ಬಾರಿ ನಾನು ನಿಮ್ಮೊಂದಿಗೆ ಮನ್ ಕೀ ಬಾತ್‍ನಲ್ಲಿ ಮಾತನಾಡಿದಾಗ, ಪ್ರಯಾಣಿಕರ ರೈಲು, ಬಸ್‍ಗಳು, ವಿಮಾನಯಾನ ಸೇವೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಶ್ರಮಿಕ್ ವಿಶೇಷ ರೈಲುಗಳು, ಇತರ ವಿಶೇಷ ರೈಲುಗಳು ಮತ್ತು ವಿಮಾನಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪುನರಾರಂಭಗೊಂಡಿವೆ ಎಂದು ತಿಳಿಸಿದರು.

    ಆರ್ಥಿಕತೆಯ ಪ್ರಮುಖ ಭಾಗವು ಈಗ ಸಕ್ರಿಯವಾಗಿದೆ. ಜನರು ಆರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಉಳಿಯಲು ಪ್ರಯತ್ನಿಸಬೇಕು. ನಾವು ಈಗ ಹೆಚ್ಚು ಜಾಗರೂಕರಾಗಿರಬೇಕಿದೆ. ಎಲ್ಲರ ಬೆಂಬಲವಿದ್ದರೆ ಕೊರೊನಾ ವಿರುದ್ಧ ಹೋರಾಟ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

    ನನ್ನ ಹೃದಯವನ್ನು ಮುಟ್ಟಿದ ಇನ್ನೊಂದು ವಿಷಯವೆಂದರೆ ಈ ಬಿಕ್ಕಟ್ಟಿನ ಕ್ಷಣದಲ್ಲಿ ಸಂಶೋಧನೆ ನಡೆಸಿರುವುದು. ಹಳ್ಳಿಗಳು ಮತ್ತು ನಗರಗಳಿಂದ, ಸಣ್ಣ ಪ್ರಮಾಣದ ವ್ಯಾಪಾರಿಗಳಿಂದ ಹಿಡಿದು ಸ್ಟಾರ್ಟ್‍ಅಪ್‍ಗಳವರೆಗೆ ಅನೇಕರು ಕೊರೊನಾ ವಿರುದ್ಧ ಹೋರಾಡುವ ಹೊಸ ಮಾರ್ಗಗಳನ್ನು ರೂಪಿಸಿದ್ದಾರೆ. ನಾಸಿಕ್ ರೈತ ರಾಜೇಂದ್ರ ಎಂಬವರು ತಮ್ಮ ಗ್ರಾಮದಲ್ಲಿ ಕೊರೊನಾ ನಿಯಂತ್ರಿಸಲು ತಮ್ಮ ಟ್ರ್ಯಾಕ್ಟರ್ ನಿಂದ ಸ್ಯಾನಿಟೈಜರ್ ಸಿಂಪಡಣೆ ಮಾಡುತ್ತಿದ್ದಾರೆ. ಇಂತಹ ಹೊಸ ಹೊಸ ಸಂಶೋಧನೆಗಳಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ಸಹಾಯಕವಾಗಲಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿದೆ ಎಂದು ಹೇಳಿದರು.

    ನಾವು ಇತರ ದೇಶಗಳನ್ನು ನೋಡಿದಾಗ ಭಾರತೀಯರ ಸಾಧನೆ ಎಷ್ಟು ದೊಡ್ಡದಾಗಿದೆ ಎಂದು ನಮಗೆ ಅರ್ಥವಾಗುತ್ತದೆ. ನಮ್ಮ ದೇಶದ ಜನಸಂಖ್ಯೆಯು ಇತರ ದೇಶಗಳಿಗಿಂತ ಹಲವು ಪಟ್ಟು ಹೆಚ್ಚಾಗಿದೆ. ಆದರೂ ಕೊರೊನಾ ವೈರಸ್ ಇತರ ದೇಶಗಳಂತೆ ವೇಗವಾಗಿ ಹರಡಲಿಲ್ಲ ಹಾಗೂ ಸಾವು ಕೂಡ ಹೆಚ್ಚಾಗಲಿಲ್ಲ. ಪ್ರಸ್ತುತ ದಿನಗಳಲ್ಲಿ ಸಾವಿನ ಪ್ರಮಾಣವೂ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದರು.

    ರೈಲ್ವೆ ಸಿಬ್ಬಂದಿ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಕೇಂದ್ರವಾಗಲಿ, ರಾಜ್ಯವಾಗಲಿ, ಸ್ಥಳೀಯ ಸ್ವರಾಜ್ ಸಂಸ್ಥೆಗಳಾಗಲಿ ಎಲ್ಲರೂ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ರೈಲ್ವೆ ನೌಕರರು ಕೊರೊನಾ ವಿರುದ್ಧ ಹೋರಾಟದಲ್ಲಿ ಎಲ್ಲ ರೀತಿ ಸಿದ್ಧರಾಗಿದ್ದಾರೆ. ಅವರು ಕೂಡ ಕೊರೊನಾ ವಾರಿಯರ್ಸ್ ಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸಲೂನ್ ನಡೆಸುತ್ತಿರುವ ತಮಿಳುನಾಡಿನ ಸಿ ಮೋಹನ್ ಎಂಬವರು ಮಗಳ ಮದುವೆಗಾಗಿ 5 ಲಕ್ಷ ರೂ. ಕೂಡಿಟ್ಟಿದ್ದರು. ಆದರೆ ಆ ಹಣವನ್ನು ಸಂಕಷ್ಟದಲ್ಲಿರುವ ಜನರಿಗಾಗಿ ನೀಡಿದ್ದಾರೆ. ಪಂಜಾಬ್‍ನ ಪಠಾಣ್‍ಕೋಟ್‍ನ ಅಂಗವಿಕಲ ರಾಜು ಎಂಬವರು ಇತರರ ಸಹಾಯದಿಂದ 3,000ಕ್ಕೂ ಹೆಚ್ಚು ಮಾಸ್ಕ್ ಗಳನ್ನು ತಯಾರಿಸಿದ್ದಾರೆ. ಅವುಗಳನ್ನು ಮಾರಿ 100 ಬಡ ಕುಟುಂಬಗಳಿಗೆ ರೇಷನ್ ವಿತರಿಸಿದ್ದಾರೆ. ಇಂತಹ ಸೇವಾ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕಿದೆ. ಸೇವಾ ಮನೋಭಾವದಿಂದ ಮಾನಸಿಕ ನೆಮ್ಮದಿ, ಆರೋಗ್ಯ ವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು.

    ಭಾರತದ ಪೂರ್ವ ಭಾಗವು ಚಂಡಮಾರುತದಿಂದ ಉಂಟಾಗುವ ನೈಸರ್ಗಿಕ ವಿಪತ್ತನ್ನು ಎದುರಿಸುತ್ತಿದ್ದರೆ ದೇಶದ ಅನೇಕ ಭಾಗಗಳು ಮಿಡತೆಗಳ ದಾಳಿಗೆ ಒಳಗಾಗುತ್ತಿವೆ. ಇದರಿಂದ ಮತ್ತಷ್ಟು ತೊಂದರೆ ಉಂಟಾಗಿದೆ ಎಂದು ಹೇಳಿದರು.

    ನಿಧಾನವಾಗಿ ರೈಲು ಪ್ರಾರಂಭವಾಗಲಿದ್ದು, ದೇಶದ ಆರ್ಥಿಕತೆ ಚಟುವಟಿಕೆ ಚೇತರಿಕೆ ಸಿಗಲಿದೆ. ದೇಶದ ವಿವಿಧ ಪ್ರದೇಶದಲ್ಲಿ ‘ಮೇಕ್ ಇನ್ ಇಂಡಿಯಾ’ ಯಶಸ್ವಿಯಾಗುತ್ತಿದೆ. ಕೊರೊನಾ ಬಿಕ್ಕಟ್ಟು ಮುಕ್ತಾಯದ ವೇಳೆ ಭಾರತದ ಆಮದು ಪ್ರಮಾಣ ಕಡಿಮೆಯಾಗಲಿದ್ದು, ರಫ್ತು ಹೆಚ್ಚಾಗುವ ಸಾಧ್ಯತೆ ಇದೆ. ದೇಶದಲ್ಲಿ ಬಿದಿರಿನಿಂದ ತಯಾರಿಸಿದ ವಸ್ತುಗಳಿಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

    ವಿಶ್ವ ಯೋಗ ದಿನವನ್ನು ಮುಂದಿನ ತಿಂಗಳು ಆಚರಿಸಲಾಗುತ್ತದೆ. ಯೋಗದಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಎಲ್ಲವರೂ ಯೋಗಾಸನವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನೀರು ಸಂರಕ್ಷಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕೆರೆ, ಇಂಗು ಗುಂಡಿ ನಿರ್ಮಾಣ ನಡೆಯಬೇಕು ಎಂದು ತಿಳಿಸಿದರು.

  • ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್-ದೇಶದ ಜನರಿಗೆ ಲಾಕ್‍ಡೌನ್ ಸಿಹಿಯೋ? ಕಹಿಯೋ?

    ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್-ದೇಶದ ಜನರಿಗೆ ಲಾಕ್‍ಡೌನ್ ಸಿಹಿಯೋ? ಕಹಿಯೋ?

    ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಇಡೀ ದೇಶವನ್ನುದ್ದೇಶಿಸಿ ಮನ್ ಕೀ ಬಾತ್ ನಲ್ಲಿ ಮಾತನಾಡಲಿದ್ದಾರೆ. ಕಳೆದ ತಿಂಗಳ ಮನ್ ಕೀ ಬಾತ್ ನಲ್ಲಿ ಲಾಕ್‍ಡೌನ್ ಹೇರಿಕೆ ಕ್ಷಮೆ ಕೇಳಿದ್ದ ಅವರು ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

    ಕಟ್ಟುನಿಟ್ಟಿನ ಲಾಕ್‍ಡೌನ್ ನಡುವೆಯೂ ಮಾರಕ ಕೊರೊನಾ ವೈರಸ್ ಆರ್ಭಟ ಭಾರತದಲ್ಲಿ ಮುಂದುವರಿದಿದೆ. ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಮೇ 3ರವರೆಗೂ ಲಾಕ್‍ಡೌನ್ ವಿಸ್ತರಿಸಿದ್ದಾರೆ. ಕೊರೊನಾ ಬಿಕ್ಕಟ್ಟಿನ ನಡುವೆ ಆಗ್ಗಾಗ ಜನರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮಾತಾಡುತ್ತಿದ್ದಾರೆ. ಜನತಾ ಕರ್ಪ್ಯೂ ಸಂದರ್ಭದಲ್ಲಿ ಸೇರಿದಂತೆ ಹಲವು ಬಾರಿ ದೇಶವನ್ನುದ್ದೇಶಿಸಿ ಪ್ರಧಾನಿ ಮಾತಾಡಿದ್ದಾರೆ. ಈ ಅದೇ ಮಾದರಿಯಲ್ಲೇ ಕೊರೊನಾ ವೈರಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮನ್ ಕಿ ಬಾತ್ ಮೂಲಕ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೊರೊನಾ ಬಿಕ್ಕಟ್ಟು ಆರಂಭವಾದ ಬಳಿಕ ಎರಡನೇ ಬಾರಿ ಮನ್ ಕಿ ಬಾತ್ ಇದಾಗಿದ್ದು, ದೇಶದ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ದೇಶದಲ್ಲಿ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನ ಕುರಿತು ಮಾತನಾಡಲಿದ್ದಾರೆ.

    ಕೊರೊನಾ ನಿಯಂತ್ರಿಸುವ ಸಲುವಾಗಿ ದೇಶದಲ್ಲಿ ಎರಡು ಹಂತಗಳಲ್ಲಿ ಲಾಕ್‍ಡೌನ್ ಹೇರಲಾಗಿದ್ದು, ಒಟ್ಟು 34 ದಿನಗಳು ದೇಶ ಲಾಕ್‍ಡೌನ್ ನಲ್ಲಿದೆ. ಇಷ್ಟು ದಿನಗಳು ಜನರು ಪಟ್ಟಿರುವ ಕಷ್ಟದ ಬಗ್ಗೆ ಮೋದಿ ಬೆಳಕು ಚೆಲ್ಲಬಹುದು. ಕಳೆದ ಬಾರಿ ಅವರು ಲಾಕ್‍ಡೌನ್ ನಿರ್ಧಾರಕ್ಕೆ ದೇಶದ ಜನರನ್ನ ಕ್ಷಮೆ ಕೇಳಿದ್ದರು.

    ಈ ನಡುವೆ ದೇಶದ ಜನರಿಗೆ ಲಾಕ್‍ಡೌನ್ ಭವಿಷ್ಯದ ಬಗ್ಗೆ ಚಿಂತೆ ಶುರುವಾಗಿದೆ. ಇನ್ನೊಂದು ಅವಧಿಗೆ ಲಾಕ್‍ಡೌನ್ ಮುಂದುವರಿದರೆ ಹೇಗಪ್ಪಾ ಬದುಕು ಎನ್ನುವ ಆತಂಕದಲ್ಲಿದ್ದಾರೆ. ಹೀಗಾಗೀ ಇಂದಿನ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಲಾಕ್‍ಡೌನ್ ಭವಿಷ್ಯದ ಬಗ್ಗೆ ಮೋದಿ ಮಾತನಾಡಬಹುದು ಎನ್ನಲಾಗುತ್ತಿದೆ. ಲಾಕ್‍ಡೌನ್ ಭವಿಷ್ಯದ ಬಗ್ಗೆ ಇಂದು ಯಾವುದೇ ನಿರ್ಧಾರ ಕೈಗೊಳ್ಳದೆ ಇದ್ರು , ನಾಳೆ ಎಲ್ಲ ಸಿಎಂಗಳ ಜೊತೆ ಪ್ರಧಾನಿ ಮಾತುಕತೆ ನಡೆಸಲಿದ್ದು ಬಳಿಕ ನಿರ್ಧಾರ ಹೊರಹಾಕಬಹುದು. ಈ ಬಗ್ಗೆ ಕೆಲವು ಸುಳಿವು ನೀಡುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

    ಕೊರೊನಾ ವಾರಿಯರ್ಸ್ ವೈದ್ಯರು, ವೈದ್ಯಕೀಯ ಸಹಾಯಕರು, ಪೊಲೀಸರ ಕಷ್ಟಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದರ ಜೊತೆಗೆ ಅವರೊಂದಿಗೆ ಸಹಕರಿಸುಂತೆ ಮನವಿ ಮಾಡುವ ಸಾಧ್ಯತೆ ಇದೆ. ಕೊರೊನಾ ವಾರಿಯರ್ಸ್ ಅನುಭವದ ಜೊತೆಗೆ ಕೊರೊನಾ ಗೆದ್ದು ಬಂದವರ ಅನುಭವವನ್ನು ಮೋದಿ ಕೇಳಿ ಜನರೊಂದಿಗೆ ಹಂಚಿಕೊಳ್ಳಬಹುದು. ಒಟ್ಟಾರೆ ಇಂದಿನ ಮೋದಿ ಮನ್ ಕಿ ಬಾತ್ ಗೆ ದೇಶದ ಜನರು ಕಾತುರದಿಂದ ಕಾಯುತ್ತಿದ್ದು, ರಿಲೀಫ್ ಸಿಗಬಹದಾ ಎಂಬ ಆಸೆಯಲ್ಲಿರೊದಂತು ಸತ್ಯ

  • ಕೇದಾರನಾಥದಲ್ಲಿ ಧ್ಯಾನ ಮಾಡಿದ್ದು ರಾಜಕೀಯ ಲಾಭಕ್ಕಲ್ಲ- ಮೋದಿ

    ಕೇದಾರನಾಥದಲ್ಲಿ ಧ್ಯಾನ ಮಾಡಿದ್ದು ರಾಜಕೀಯ ಲಾಭಕ್ಕಲ್ಲ- ಮೋದಿ

    – ಮನ್ ಕೀ ಬಾತ್‍ನಲ್ಲಿ ಪ್ರಧಾನಿ ಸ್ಪಷ್ಟನೆ

    ನವದೆಹಲಿ: ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ಮೋದಿ ದಿಢೀರನೇ ಕೇದಾರನಾಥಕ್ಕೆ ತೆರಳಿ ಒಂದು ದಿನ ಧ್ಯಾನಕ್ಕೆ ಕುಳಿತರು. ಈ ವೇಳೆ ವಿರೋಧ ಪಕ್ಷಗಳು ಹಾಗೂ ಇತರರು ರಾಜಕೀಯ ಲಾಭಕ್ಕಾಗಿ ಧ್ಯಾನ ಮಾಡುತ್ತಿದ್ದು, ಇದೆಲ್ಲ ಡೋಂಗಿ ಎಂದೆಲ್ಲ ಟೀಕಿಸಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹೊಸ ಸರ್ಕಾರದ ರಚನೆಯಾದ ನಂತರ ಇಂದು ತಮ್ಮ ಮೊದಲ ‘ಮನ್ ಕೀ ಬಾತ್’ನಲ್ಲಿ ಉತ್ತರಿಸಿದ್ದಾರೆ.

    ಲೋಕಸಭಾ ಚುನಾವಣೆಯ ನಂತರ ಕೇದಾರನಾಥಕ್ಕೆ ಪ್ರವಾಸ ಮಾಡಿ ಧ್ಯಾನಕ್ಕೆ ಕುಳಿತಿದ್ದು, ರಾಜಕೀಯ ಲಾಭಕ್ಕಾಗಿ ಅಲ್ಲ. ಬದಲಿಗೆ ಅದು ನನ್ನ ಅಂತರಂಗವನ್ನು ಅರಿಯಲು ದೊರೆತ ಒಂದು ಅವಕಾಶ ಎಂದು ವಿವಾದದ ಕುರಿತು ಸ್ಪಷ್ಟಪಡಿಸಿದ್ದಾರೆ.

    ಹಲವರು ಇದನ್ನು ರಾಜಕೀಯದ ದೃಷ್ಟಿಯಿಂದ ನೋಡಿದ್ದಾರೆ. ಆದರೆ ನನಗಿದು ನನ್ನ ಅಂತರಂಗವನ್ನರಿಯಲು ದೊರೆತ ಅವಕಾಶ. ಅಲ್ಲದೆ, ಕೊನೆಯ ಬಾರಿ ಮನ್ ಕೀ ಬಾತ್ ಕಾರ್ಯಕ್ರಮವನ್ನು ಮಾಡಿದ್ದರ ಬೇಸರವನ್ನು ಹಾಗೂ ಆ ಸ್ಥಾನವನ್ನು ಕೇದಾರನಾಥ ಪ್ರವಾಸ ತುಂಬಿತು ಎಂದು ಮೋದಿ ವ್ಯಾಖ್ಯಾನಿಸಿದ್ದಾರೆ.

    ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವುದು ಹಾಗೂ ಪುಸ್ತಕ ಓದುವುದರ ಕುರಿತು ಕೇಳುಗರಿಗೆ ನೆನಪಿದ್ದಾರೆ. ಇದೇ ವೇಳೆ ತಮ್ಮ ‘ಕೇದಾರನಾಥ ಪ್ರವಾಸ’ ಮತ್ತು ಲೋಕಸಭಾ ಚುನಾವಣೆಗೂ ಮುನ್ನ ಹಿಂದಿನ ಸರ್ಕಾರದ ಅವಧಿಯಲ್ಲಿ(ಫೆಬ್ರವರಿ) ನಡೆದ ಕೊನೆಯ ‘ಮನ್ ಕೀ ಬಾತ್’ನ್ನು ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂಬ ಆರೋಪವನ್ನು ಅಲ್ಲಗಳೆದಿದ್ದಾರೆ.

    ಮತದಾನದ ನಂತರ ‘ಮನ್ ಕೀ ಬಾತ್’ಗೆ ಹಿಂದಿರುಗುವುದಾಗಿ ನೀಡಿದ್ದ ನನ್ನ ಭರವಸೆಗೆ ರಾಜಕೀಯದ ಅರ್ಥ ನೀಡಿ ಟೀಕಿಸಿದ್ದರು. ಅಲ್ಲದೆ, ‘ಅತಿಯಾದ ಆತ್ಮ ವಿಶ್ವಾಸ’ ಎಂದು ಅಲ್ಲಗಳೆದಿದ್ದರು. ಆದರೆ, ನಿಮ್ಮ ವಿಶ್ವಾಸದಿಂದ ನಾನು ಮರಳಿ ಬರಲು ನೆರವಾಯಿತು. ನೀವು ಆಹ್ವಾನಿಸದ ಹೊರತು ನನ್ನೊಬ್ಬನಿಂದಲೇ ಮರಳಿ ಬರಲು ಸಾಧ್ಯವಾಗುತ್ತಿರಲಿಲ್ಲ ಎಂದು ಭಾವನಾತ್ಮಕವಾಗಿ ನುಡಿದಿದ್ದಾರೆ.

    ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವಲ್ಲಿ ಮತದಾನದ ಮಹತ್ವವನ್ನು ವಿವರಿಸುವಾಗ ತುರ್ತು ಪರಿಸ್ಥಿತಿಯ ಉದಾಹರಣೆ ನೀಡಿದ್ದು, 1977ರಲ್ಲಿ ಹೇರಿದ ತುರ್ತು ಪರಿಸ್ಥಿತಿ ವೇಳೆ ಮೂಲಭೂತ ಹಕ್ಕುಗಳನ್ನು ಹೇಗೆ ಕಸಿದುಕೊಂಡಿದ್ದರು ಎಂದು ವಿವರಿಸಿದರು. ಅಲ್ಲದೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎಲ್ಲ ನಾಗರಿಕರಿಗೂ ಏನೋ ಕಳೆದುಕೊಂಡಂತೆ ಭಾಸವಾಗುತ್ತಿತ್ತು ಎಂದು ಮೋದಿ ವಿವರಿಸಿದ್ದಾರೆ.

    ಪ್ರಜಾಪ್ರಭುತ್ವವೆಂದರೆ ಪ್ರತಿಯೊಬ್ಬ ಮತದಾರನಿಗೂ ಗೌರವ ಸಲ್ಲಿಸುವುದು. ಲೋಕಸಭಾ ಚುನಾವಣೆ ಮುಗಿಯುವ ಹೊತ್ತಿನಲ್ಲಿ ದೂರದ ಹಿಮಾಚಲ ಪ್ರದೇಶದಲ್ಲಿ ವಾಸಿಸುವ ಒಂಟಿ ಮಹಿಳೆಗೆ ಮತಗಟ್ಟೆ ಸ್ಥಾಪಿಸಲು ಚುನಾವಣಾಧಿಕಾರಿಗಳು ಎರಡು ದಿನಗಳ ಕಾಲ ಪ್ರಯಾಣಿಸಿ, ಹೇಗೆ ಕಷ್ಟಪಟ್ಟರು ಎಂಬುದನ್ನು ಇದೇ ವೇಳೆ ವಿವರಿಸಿದರು.

    ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಕ್ಕೆ ಸಂತಸವಾಗಿದೆ. ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಇದೇ ವೇಳೆ ಯುವಕರಿಗೆ ಹಾಗೂ ಕೇಳುಗರಿಗೆ ಕರೆ ನೀಡಿದರು. ಇತ್ತೀಚೆಗೆ ಪ್ರೇಮ್‍ಚಂದ್ ಅವರ ಜನಪ್ರಿಯ ಕಥೆಗಳ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದರು. ಈ ಪುಸ್ತಕ ಓದುತ್ತಿದ್ದಾಗ ಯುವಕನಾಗಿದ್ದಾಗ ನಾನು ಅನುಭವಿಸಿದ ಸಾಮಾಜಿಕ ಸವಾಲುಗಳು ನೆನಪಾದವು ಎಂದು ತಿಳಿಸಿದರು.

    ತಿಂಗಳುಗಳ ನಂತರ ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಹೊಸ ಸರ್ಕಾರ ರಚನೆಯಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ‘ಮನ್ ಕೀ ಬಾತ್’ ಇದಾಗಿದೆ.