Tag: ಮಫ್ತಿ

  • ಶಿವಣ್ಣ, ಧ್ರುವ ಸರ್ಜಾ ಒಟ್ಟಾಗಿ  ಮಫ್ತಿ ವೀಕ್ಷಿಸಿ, ಕೇಕ್ ಕಟ್ ಮಾಡಿದ್ರು

    ಶಿವಣ್ಣ, ಧ್ರುವ ಸರ್ಜಾ ಒಟ್ಟಾಗಿ ಮಫ್ತಿ ವೀಕ್ಷಿಸಿ, ಕೇಕ್ ಕಟ್ ಮಾಡಿದ್ರು

    ಬೆಂಗಳೂರು: ಮಫ್ತಿ ಸಿನಿಮಾವನ್ನು ಬೆಂಗಳೂರಿನ ಸಂತೋಷ್ ಥಿಯೇಟರ್ ನಲ್ಲಿ ಶಿವರಾಜ್‍ಕುಮಾರ್ ಮತ್ತು ಧ್ರುವ ಸರ್ಜಾ ಒಟ್ಟಿಗೆ ನೋಡಿದ್ದಾರೆ. ಭರ್ಜರಿ ಸಿನಿಮಾದ 80ನೇ ದಿನದ ಸಂಭ್ರಮಕ್ಕಾಗಿ ಧ್ರುವ ಸರ್ಜಾ ನರ್ತಕಿ ಚಿತ್ರಮಂದಿರಕ್ಕೆ ಬಂದಿದ್ದರು. ಇದೇ ಸಮಯದಲ್ಲಿ ಶಿವರಾಜ್‍ಕುಮಾರ್ ಜೊತೆ ಸೇರಿ ಧ್ರುವ ಸರ್ಜಾ ಮಫ್ತಿ ಸಿನಿಮಾವನ್ನು ನೋಡಿದ್ದಾರೆ.

    ಅಭಿಮಾನಿಗಳು ತಂದ ಕೇಕ್ ಕಟ್ ಮಾಡಿ ಇಬ್ಬರೂ ನಟರು ಸಂಭ್ರಮಿಸಿದ್ದಾರೆ. ಈ ಎಂಗ್ ಆಂಡ್ ಎರ್ನಜಿಟಿಕ್ ಸ್ಟಾರ್ ಗಳನ್ನ ಒಟ್ಟಿಗೆ ನೋಡಿ ಅಭಿಮಾನಿಗಳು ಪುಳಕಿತರಾಗಿದ್ದಾರೆ.

    ಧ್ರುವ ಸರ್ಜಾ ನಟ ಶಿವರಾಜ್ ಕುಮಾರ್ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು ಹಾಗೂ ಧ್ರುವ ಸರ್ಜಾರ ಕೋರಿಕೆಗೆ ಶಿವಣ್ಣ ಓಗೊಟ್ಟು ಕೇಕ್ ಕಟ್ ಮಾಡಿದರು. ಈ ಸಂದರ್ಭದಲ್ಲಿ ಅಭಿಮಾನಿಗಳ ನಡುವೆ ನೂಕುನುಗ್ಗಲಾಯಿತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

     

  • ವರ್ಷಾಂತ್ಯಕ್ಕೆ ಸಾಲು ಸಾಲು ಸಿನಿಮಾ- ಪ್ರೇಕ್ಷಕರನ್ನು ಮನರಂಜಿಸಲು ಮಫ್ತಿ, ಗೌಡ್ರು ಹೋಟೆಲ್ ರೆಡಿ!

    ವರ್ಷಾಂತ್ಯಕ್ಕೆ ಸಾಲು ಸಾಲು ಸಿನಿಮಾ- ಪ್ರೇಕ್ಷಕರನ್ನು ಮನರಂಜಿಸಲು ಮಫ್ತಿ, ಗೌಡ್ರು ಹೋಟೆಲ್ ರೆಡಿ!

    ಬೆಂಗಳೂರು: ವರ್ಷದ ಕೊನೆಯಲ್ಲಿ ಸ್ಯಾಂಡಲ್‍ವುಡ್‍ನಲ್ಲಿ ಸಾಲು ಸಾಲು ಸಿನಿಮಾಗಳು ಪ್ರೇಕ್ಷಕರನ್ನ ಮೋಡಿ ಮಾಡಲು ಬರುತ್ತಿವೆ. ಅದರಲ್ಲೂ ಈ ವಾರ ತೆರೆಕಾಣುತ್ತಿರುವ ಎರಡು ಸಿನಿಮಾಗಳಿಗಾಗಿ ಪ್ರೇಕ್ಷಕರು ಕಾದು ಕುಳಿತ್ತಿದ್ದರು.

    2017ರ ಕೊನೆಯ ತಿಂಗಳಲ್ಲಿ ಸ್ಯಾಂಡಲ್‍ವುಡ್ ಮಸ್ತ್ ಮನೋರಂಜನೆ ನೀಡಲು ಸಜ್ಜಾಗಿದ್ದು, ಈ ವಾರ `ಮಫ್ತಿ’, `ಗೌಡ್ರು ಹೋಟೆಲ್’, `ಮಂತ್ರಂ’, `ಡ್ರೀಮ್ ಗರ್ಲ್’ ಸಿನಿಮಾಗಳು ತೆರೆಕಂಡಿವೆ.

    ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಮಫ್ತಿ ರಾಜ್ಯಾದ್ಯಂತ ಸುಮಾರು 400ಕ್ಕೂ ಹೆಚ್ಚು ಥಿಯೇಟರ್‍ಗಳಲ್ಲಿ ಪ್ರದರ್ಶನಗೊಳ್ತಿದೆ. ಸೆಂಚುರಿ ಸ್ಟಾರ್ ಶಿವಣ್ಣ ಮತ್ತು ಶ್ರೀಮುರುಳಿ ಅಭಿನಯಿಸಿರುವ ಚಿತ್ರದ ಟ್ರೇಲರ್ ಈಗಾಗಲೇ ಯೂಟ್ಯೂಬ್‍ನಲ್ಲಿ ಹವಾ ಎಬ್ಬಿಸಿದೆ. ಮಫ್ತಿ ಮೂಲಕ ನರ್ತನ್ ತಮ್ಮ ಮೊದಲ ಸಿನಿಮಾದಲ್ಲೇ ನಿರ್ದೇಶನದ ಕೌಶಲ್ಯ ತೋರಿಸಿದ್ದಾರೆ. ಖ್ಯಾತ ನಿರ್ಮಾಪಕ ಜೋಡಿ ಜಯಣ್ಣ, ಭೋಗೇಂದ್ರ ನಿರ್ಮಾಣದೊಂದಿಗೆ ಕುಂದಾಪುರದ ಸಕಲಕಲಾವಲ್ಲಭ ರವಿ ಬಸ್ರೂರ್ ಅವರ ಸಂಗೀತದಲ್ಲಿ ಚಿತ್ರ ಮೂಡಿಬಂದಿದೆ.

    ಮತ್ತೊಂದು ಸಿನಿಮಾ `ಗೌಡ್ರು ಹೋಟೆಲ್’ ತೆರೆ ಕಂಡಿದ್ದು, ಮಾಲಿವುಡ್‍ನಲ್ಲಿ ಸೂಪರ್ ಹಿಟ್ ಆಗಿದ್ದ `ಉಸ್ತಾದ್ ಹೋಟೆಲ್’ ಸಿನಿಮಾವನ್ನು ಕನ್ನಡಕ್ಕೆ `ಗೌಡ್ರು ಹೋಟೆಲ್’ ಹೆಸರಿನಲ್ಲಿ ಖ್ಯಾತ ನಿರ್ದೇಶಕ ಪಿ.ಕುಮಾರ್ ತಂದಿದ್ದಾರೆ. ಎಮಿನೆಂಟ್ ಮೂವೀ ಮೇಕರ್ಸ್ ನಿರ್ಮಾಣದಲ್ಲಿ `ಗೌಡ್ರು ಹೋಟೆಲ್’ ಅದ್ಧೂರಿಯಾಗಿ ನಿರ್ಮಾಣವಾಗಿದೆ. ಕಾಲಿವುಡ್‍ನ ಖ್ಯಾತ ಸಂಗೀತ ನಿರ್ದೇಶಕ ಯುವನ್ ಶಂಕರ್ ಹಾಡುಗಳಿಗೆ ತಂತಿ ಮೀಟಿದ್ದಾರೆ. ಈ ಸಿನಿಮಾ ಒಂದು ತಾತ-ಮೊಮ್ಮಗನ ಬಾಂಧವ್ಯದ ಕಥೆಯಾಗಿದ್ದು, ಪ್ರಕಾಶ್ ರೈ ತಾತನಾಗಿ, ಲಂಡನ್‍ನಲ್ಲಿ ಎಂಜಿನಿಯರಿಂಗ್ ಮುಗಿಸಿರುವ ರಚನ್ ಚಂದ್ರ ಮೊಮ್ಮಗನಾಗಿ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಮೊಮ್ಮಗನಾಗಿ ಕ್ಯಾಮೆರಾ ಎದುರಿಸಿದ್ದು, ರಚನ್‍ಗೆ ಜೋಡಿಯಾಗಿ ನಟಿ ವೇದಿಕಾ ಸಾಥ್ ನೀಡಿದ್ದಾರೆ.

    ಮೂರನೇ ಸಿನಿಮಾ `ಡ್ರೀಮ್ ಗರ್ಲ್’. ರಿಂಗ್ ರೋಡ್ ಶುಭ ಸಿನಿಮಾದ ನಂತರ ಪಟ್ರೆ ಅಜಿತ್ ನಾಯಕನಾಗಿ ಅಭಿನಯಿಸುತ್ತಿರುವ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಅಮೃತಾ ರಾವ್ ಮತ್ತು ದೀಪಿಕಾ ದಾಸ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಲಕ್ಷಣ್ ನಾಯಕ್ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಗಂಧರ್ವ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಡ್ರೀಮ್ ಗರ್ಲ್’ ಲವ್ ಸಸ್ಪೆನ್ಸ್ ಕಥಾಹಂದರ ಹೊಂದಿದೆ.

    ನಾಲ್ಕನೇ ಸಿನಿಮಾ `ಮಂತ್ರಂ’. ಟ್ರೇಲರ್‍ನಿಂದಲೇ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದ ಸಿನಿಮಾ ಇದಾಗಿದ್ದು, ನೈಜ ಘಟನೆಯ ಆಧಾರವಿಟ್ಟುಕೊಂಡು ಕಥೆಯನ್ನು ಎಣೆಯಲಾಗಿದೆ. ಎಸ್.ಎಸ್. ಸಜ್ಜನ್ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಮಣಿಶೆಟ್ಟಿ ಹಾಗೂ ಪಲ್ಲವಿ ಸಿನಿಮಾದಲ್ಲಿ ನಾಯಕ ನಾಯಕಿಯಾಗಿ ಅಭಿನಯಿಸಿದ್ದಾರೆ. ರಷೀದ್ ಖಾನ್ ಸಂಗೀತ ನಿರ್ದೇಶನ ಮಾಡಿದ್ದು, ರಾಜಶೇಖರ್ ಛಾಯಾಗ್ರಹಣ ಮಾಡಿದ್ದಾರೆ.

     

     

  • ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

    ಪದ್ಮಾವತಿ ಪರ ಬ್ಯಾಟ್ ಬೀಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ

    ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ನಟನೆ ಅದ್ಭುತ ಅನ್ನಿಸುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಳ್ಳೆ ಸಿನಿಮಾ ಮಾಡಿರುತ್ತಾರೆ ಎನ್ನುವ ನಂಬಿಕೆ ಇದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ನಿರ್ಧಾರ ಮಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪದ್ಮಾವತಿ ಪರವಾಗಿ ಬ್ಯಾಟ್ ಬೀಸಿದ್ದಾರೆ.

    ಮಫ್ತಿ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಣ್ಣ, ಚಿತ್ರ ಕಲಾವಿದರನ್ನು ಯಾವತ್ತು ಟಾರ್ಗೆಟ್ ಮಾಡಬಾರದು. ಈ ರೀತಿ ಮಾಡೋದು ಅಭಿವ್ಯಕ್ತಿ ಸ್ವಾತಂತ್ರ್ಯಕೆ ಧಕ್ಕೆ ತಂದಂತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮಫ್ತಿ ಸಿನಿಮಾದಲ್ಲಿ ಶಿವರಾಜ್‍ಕುಮಾರ್ ಮತ್ತು ಶ್ರೀ ಮುರುಳಿ ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಿದ್ದು, ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ. ಈಗಾಗಲೇ ಟ್ರೇಲರ್ ಮೂಲಕ ಚಂದನವನದಲ್ಲಿ ಸಖತ್ ಸೌಂಡ್ ಮಾಡಿದ್ದು, ಇಬ್ಬರೂ ನಟರೂ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳವ ಮೂಲಕ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದ್ದಾರೆ.

    ನವ ನಿರ್ದೇಶಕ ನರ್ತನ್ ಪರಿಕಲ್ಪನೆಯಲ್ಲಿ ಟ್ರೇಲರ್ ಅದ್ಧೂರಿಯಾಗಿ ಮೂಡಿಬಂದಿದೆ. ಶಿವಣ್ಣನವರ ಲುಕ್, ರವಿ ಬಸ್ರೂರ್ ರವರ ಹಿನ್ನೆಲೆ ಸಂಗೀತ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ರಥಾವರ ಚಿತ್ರದ ನಂತರ ಶ್ರೀಮುರುಳಿ ನಟಿಸುತ್ತಿರುವ ಚಿತ್ರ ಇದಾಗಿದ್ದು, ಶ್ರೀ ಮುರುಳಿಗೆ ಜೋಡಿಯಾಗಿ ಶಾನ್ವಿ ಶ್ರೀವಾಸ್ತವ ಕಾಣಿಸಿಕೊಂಡಿದ್ದಾರೆ. ಸಿನಿಮಾ ಡಿಸೆಂಬರ್ 01ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

     

     

  • ಭಯಾನಕ ಭೂಗತ ಲೋಕದ ಕಥೆ ಹೇಳುವ `ಮಫ್ತಿ’ ಟ್ರೇಲರ್ ಔಟ್

    ಭಯಾನಕ ಭೂಗತ ಲೋಕದ ಕಥೆ ಹೇಳುವ `ಮಫ್ತಿ’ ಟ್ರೇಲರ್ ಔಟ್

    ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮತ್ತು ರೋರಿಂಗ್ ಸ್ಟಾರ್ ಶ್ರೀ ಮುರುಳಿ ನಟನೆಯ `ಮಫ್ತಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

    ಈ ಚಿತ್ರದಲ್ಲಿ ಇಬ್ಬರು ನಟರು ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಭೂಗತ ಲೋಕದ ಕ್ರೌರ್ಯ, ದ್ವೇಷದ ಕಥೆಯನ್ನು ಸಿನಿಮಾ ಒಳಗೊಂಡಿದೆ. ಈ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ರಹಸ್ಯವನ್ನು ಚಿತ್ರತಂಡ ಚಿತ್ರದ ಟ್ರೇಲರ್ ನಲ್ಲಿ ಎಲ್ಲಿಯೂ ಬಿಟ್ಟುಕೊಟ್ಟಿಲ್ಲ.

    ಚಿತ್ರದಲ್ಲಿ ಸಾಕಷ್ಟು ಪಂಚಿಂಗ್ ಡೈಲಾಗ್ ಗಳಿದ್ದು, ಶಿವಣ್ಣ ಹಾಗೂ ಮುರಳಿ ಭೂಗತ ಲೋಕದ ವೈರಿಗಳ ಅಥವಾ ಸ್ನೇಹಿತರ ಎಂಬುದರ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಚಿತ್ರದಲ್ಲಿ ಖಳನಾಯಕನಾಗಿ ವಸಿಷ್ಟ ಸಿಂಹ ಕೂಡ ಬಣ್ಣ ಹಚ್ಚಿದ್ದಾರೆ.

    ನವ ನಿರ್ದೇಶಕ ನರ್ತನ್ ಪರಿಕಲ್ಪನೆಯಲ್ಲಿ ಟ್ರೇಲರ್ ಅದ್ಧೂರಿಯಾಗಿ ಮೂಡಿಬಂದಿದೆ. ಶಿವಣ್ಣನವರ ಲುಕ್, ರವಿ ಬಸ್ರೂರ್ ರವರ ಹಿನ್ನೆಲೆ ಸಂಗೀತ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ರಥಾವರ ಚಿತ್ರದ ನಂತರ ಶ್ರೀಮುರುಳಿ ನಟಿಸುತ್ತಿರುವ ಚಿತ್ರ ಇದಾಗಿದ್ದು, ಶ್ರೀ ಮುರುಳಿಗೆ ಜೋಡಿಯಾಗಿ ಶಾನ್ವಿ ಶ್ರೀವಾಸ್ತವ ಕಾಣಿಸಿಕೊಳ್ಳಲಿದ್ದಾರೆ. ಮಫ್ತಿ ಚಿತ್ರ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಇದೇ ತಿಂಗಳು ಡಿಸೆಂಬರ್ 01 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.