Tag: ಮಯಾಂಕ್ ಅರ್ಗವಾಲ್

  • India vs Srilanka: ಆಡುವ 11ರ ಬಳಗದಲ್ಲಿ ಮಯಾಂಕ್ ಇನ್!

    India vs Srilanka: ಆಡುವ 11ರ ಬಳಗದಲ್ಲಿ ಮಯಾಂಕ್ ಇನ್!

    ಲಂಡನ್: ಬಾಂಗ್ಲಾದೇಶದ ವಿರುದ್ಧ ಗೆಲುವು ಪಡೆದು 2019 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪ್ರವೇಶ ಮಾಡಿರುವ ಟೀಂ ಇಂಡಿಯಾ ಶನಿವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

    ಟೀಂ ಇಂಡಿಯಾ ಸೆಮಿಫೈನಲ್‍ಗೆ ಪ್ರವೇಶ ಪಡೆದಿರುವ ಕಾರಣ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರು ಪ್ರಯೋಗಕ್ಕೆ ಮುಂದಾಗುವ ಸಾಧ್ಯತೆ ಇದ್ದು, ಬಹುಮುಖ್ಯ ಟೂರ್ನಿಯಲ್ಲಿ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಬಾರದು ಎಂದು ಕೆಲ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

    ಇತ್ತ ತಂಡದಲ್ಲಿ ಬದಲಾವಣೆ ನಡೆದರೆ ಮಯಾಂಕ್ ಅಗರ್ವಾಲ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದೆ. ಮಯಾಂಕ್ ಆರಂಭಿಕರಾಗಿ ಕಣಕ್ಕೆ ಇಳಿದರೆ, ರಾಹುಲ್ 4ನೇ ಕ್ರಮಾಂಕದಲ್ಲಿ ರಿಷಬ್ ಪಂತ್ 5ನೇ ಸ್ಥಾನದಲ್ಲಿ ಆಡಲಿದ್ದಾರೆ. ಒಂದೊಮ್ಮೆ ನಾಳಿನ ಪಂದ್ಯದಲ್ಲಿ ಮಯಾಂಕ್ ಆಡುವುದು ಖಚಿತವಾದರೆ ವಿಶ್ವ ಕ್ರಿಕೆಟ್ ಇತಿಹಾಸಲ್ಲಿ ಮಯಾಂಕ್ ವಿಶೇಷ ದಾಖಲೆಯನ್ನು ಬರೆಯಲಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ನೇರವಾಗಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆಯಲಿದ್ದಾರೆ.

    ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅನುಭವಿ ಆಟಗಾರ ರವೀಂದ್ರ ಜಡೇಜಾ ಅವರಿಗೆ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಕೆಲ ಮಾಜಿ ಕ್ರಿಕೆಟರ್ ಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಹ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ತಲಾ ಇಬ್ಬರು ಸ್ಪಿನ್ ಹಾಗೂ ವೇಗದ ಬೌಲರ್ ಗಳೊಂದಿಗೆ ಕಣಕ್ಕೆ ಇಳಿದರೆ ಜಡೇಜಾಗೆ ಅವಕಾಶ ಸಿಗುವ ಸಾಧ್ಯತೆ ಇದೆ.

    ಶ್ರೀಲಂಕಾ ಪಂದ್ಯದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮಧ್ಯಮ ಕ್ರಮಾಂಕ ಬ್ಯಾಟಿಂಗ್ ಮೇಲೆ ಹೆಚ್ಚಿನ ಗಮನ ನೀಡಿದೆ. ಇದುವರೆಗೂ ಟೂರ್ನಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ತಂಡದ ಆಟಗಾರರು ನಿರಾಸೆ ಮೂಡಿಸಿದ್ದಾರೆ. ಸೆಮಿ ಫೈನಲ್ ಪಂದ್ಯ ಸೇರಿದಂತೆ ವಿಶ್ವಕಪ್ ಗೆಲ್ಲುವ ದೃಷ್ಟಿಯಲ್ಲಿ ಟೀಂ ಇಂಡಿಯಾ ಆಟಗಾರರ ಫಾರ್ಮ್ ಬಹುಮುಖ್ಯವಾಗುತ್ತದೆ. ಅಲ್ಲದೇ ಸೆಮಿ ಫೈನಲ್‍ಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಆಡುವ ಅವಕಾಶ ಇದ್ದು, ಜುಲೈ 09 ರಂದು ಮೊದಲ ಸೆಮಿ ಫೈನಲ್ ಪಂದ್ಯ ಹಾಗೂ ಜುಲೈ 11 ರಂದು 2ನೇ ಸೆಮಿ ಫೈನಲ್ ಪಂದ್ಯ ನಡೆಯಲಿದೆ. ಜುಲೈ 14 ರಂದು ಲಾರ್ಡ್ಸ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

  • ವಿಶ್ವಕಪ್ ಟೂರ್ನಿಗೆ ಮಯಾಂಕ್ ಆಯ್ಕೆ – ‘3ಡಿ’ ಕನ್ನಡಕ ನೆನಪಿಸಿದ ನೆಟ್ಟಿಗರು

    ವಿಶ್ವಕಪ್ ಟೂರ್ನಿಗೆ ಮಯಾಂಕ್ ಆಯ್ಕೆ – ‘3ಡಿ’ ಕನ್ನಡಕ ನೆನಪಿಸಿದ ನೆಟ್ಟಿಗರು

    ಮುಂಬೈ: ಟೀಂ ಇಂಡಿಯಾ ಯುವ ಆಟಗಾರ ವಿಜಯ್ ಶಂಕರ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರ ಬಿದ್ದು, ಈ ಸ್ಥಾನದಲ್ಲಿ ಮಯಾಂಕ್ ಆಯ್ಕೆ ಆಗಿರುವುದು ತಿಳಿದ ಸಂಗತಿ. ಆದರೆ ತಂಡಕ್ಕೆ ಮಯಾಂಕ್ ಆಯ್ಕೆ ಆಗುತ್ತಿದಂತೆ ಕ್ರಿಕೆಟ್ ಅಭಿಮಾನಿಗಳು ಅಂಬಟಿ ರಾಯುಡುರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ.

    ವಿಶ್ವಕಪ್ ಆಯ್ಕೆ ವೇಳೆ ವಿಜಯ್ ಶಂಕರ್‍ಗೆ ತಂಡದಲ್ಲಿ ಸ್ಥಾನ ನೀಡಿರುವುದನ್ನು ಸಮರ್ಥಿಸಿದ್ದ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್, ವಿಜಯ್ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‍ನಲ್ಲಿ ತಂಡಕ್ಕೆ ನೆರವಾಗಲಿದ್ದಾರೆ ಎಂದು ತಿಳಿಸಿದ್ದರು. ಈ ಕುರಿತು ವ್ಯಂಗ್ಯವಾಗಿ ಕಮೆಂಟ್ ಮಾಡಿದ್ದ ರಾಯುಡು, ಈ ಬಾರಿ ವಿಶ್ವಕಪ್ ಕ್ರಿಕೆಟ್ ನೋಡಲು 3ಡಿ ಕನ್ನಡಕ ಬುಕ್ ಮಾಡಿದ್ದಾಗಿ ಟ್ವೀಟ್ ಮಾಡಿದ್ದರು. ವಿಶ್ವಕಪ್ ಸ್ಥಾನ ಕಳೆದುಕೊಂಡ ಬೇಸರದಲ್ಲಿ ರಾಯುಡು ಈ ರೀತಿ ಮಾತನಾಡಿದ್ದಾರೆ ಎಂದು ಬಿಸಿಸಿಐನ ಕೆಲ ಹಿರಿಯ ಸದಸ್ಯರು ಪ್ರತಿಕ್ರಿಯೆ ನೀಡಿದ್ದರು.

    ಸದ್ಯ ಟೂರ್ನಿಯಿಂದ ವಿಜಯ್ ಶಂಕರ್ ಹೊರ ಬಿದ್ದ ಪರಿಣಾಮ ರಾಯುಡು ಅವರನ್ನು ಆಯ್ಕೆ ಮಾಡಬಹುದು ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಆಯ್ಕೆ ಸಮಿತಿ ಮಯಾಂಕ್‍ಗೆ ಕರೆ ನೀಡಿತ್ತು. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತಾಪ ಮಾಡಿರುವ ಕೆಲ ಟ್ವಿಟ್ಟರಿಗರು ರಾಯುಡುರ ಕಾಲೆಳೆದಿದ್ದಾರೆ. ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿಯೇ ಅಂಬಟಿ ರಾಯುಡು ಅವರಿಗೆ ಅವಕಾಶ ನೀಡಿಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಯಾಂಕ್ ರೆಕಾರ್ಡ್: 28 ವರ್ಷದ ಮಯಾಂಕ್ ಅರ್ಗವಾಲ್ ಇದುವರೆಗೂ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. 6 ವರ್ಷಗಳ ಹಿಂದೆ ಕರ್ನಾಟಕ ಪರ ಫಸ್ಟ್ ಕ್ಲಾಸ್ ಕ್ರಿಕೆಟ್‍ಗೆ ಜಾರ್ಖಂಡ್ ವಿರುದ್ಧ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಮಯಾಂಕ್ 144 ಎಸೆತಗಳಲ್ಲಿ 90 ರನ್ ಸಿಡಿಸಿದ್ದರು. ಇದುವರೆಗೂ ಫಸ್ಟ್ ಕ್ಲಾಸ್ ಕ್ರಿಕೆಟ್‍ನಲ್ಲಿ 50 ಪಂದ್ಯಗಳನ್ನಾಡಿರುವ ಇವರು 3,964 ರನ್ ಗಳಿಸಿದ್ದು, ಮಹಾರಾಷ್ಟ್ರ ವಿರುದ್ಧ ಅಜೇಯ 304 ರನ್ ಸಿಡಿಸಿದ್ದಾರೆ.

    https://twitter.com/WaizArd20/status/1145666167463268352

    ಐಪಿಎಲ್ ಟೂರ್ನಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಮಯಾಂಕ್, ಡೆಲ್ಲಿ, ಪುಣೆ, ಬೆಂಗಳೂರು, ಪಂಜಾಬ್ ತಂಡಗಳ ಪರ ಆಗಿದ್ದಾರೆ. 2019ರ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪರ ಆಡಿದ್ದ ಮಯಾಂಕ್ 13 ಪಂದ್ಯಗಳಿಂದ 332 ರನ್ ಸಿಡಿಸಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಯಲ್ಲಿ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿರುವ ಮಯಾಂಕ್, ಮೆಲ್ಬೋರ್ನ್ ನಲ್ಲಿ ನಡೆದ ಪಂದ್ಯದಲ್ಲಿ 42 ಎಸೆತಗಳಲ್ಲಿ 76 ರನ್ ಸಿಡಿಸಿ ಮಿಂಚಿದ್ದರು. ಆ ಬಳಿಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ 77 ರನ್ ಗಳಿಸಿದ್ದರು. 2 ಟೆಸ್ಟ್ ಪಂದ್ಯಗಳ 3 ಇನ್ನಿಂಗ್ಸ್ ಗಳಲ್ಲಿ ಆಡಿರುವ ಮಯಾಂಕ್ 195 ರನ್ ಗಳಿಸಿದ್ದಾರೆ.

  • ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಕನ್ನಡಿಗ – ಮಯಾಂಕ್ ಕುರಿತ ಮಾಹಿತಿ ಇಂತಿದೆ

    ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಮತ್ತೊಬ್ಬ ಕನ್ನಡಿಗ – ಮಯಾಂಕ್ ಕುರಿತ ಮಾಹಿತಿ ಇಂತಿದೆ

    ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಭಾರೀ ಹೊಡೆತ ನೀಡಿದ್ದು, ಧವನ್ ಬಳಿಕ ವಿಜಯ್ ಶಂಕರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದಾರೆ. ಸದ್ಯ ಈ ಸ್ಥಾನದಲ್ಲಿ ಆಯ್ಕೆ ಸಮಿತಿ ಕನ್ನಡಿಗ ಮಯಾಂಕ್ ಅರ್ಗವಾಲ್ ಅವರಿಗೆ ಸ್ಥಾನ ನೀಡಿದ್ದು, ಇಂಗ್ಲೆಂಡ್‍ಗೆ ಪ್ರಯಾಣ ಬೆಳೆಸಿದ್ದಾರೆ.

    28 ವರ್ಷದ ಮಯಾಂಕ್ ಅರ್ಗವಾಲ್ ಇದುವರೆಗೂ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. 6 ವರ್ಷಗಳ ಹಿಂದೆ ಕರ್ನಾಟಕ ಪರ ಫಸ್ಟ್ ಕ್ಲಾಸ್ ಕ್ರಿಕೆಟ್‍ಗೆ ಜಾರ್ಖಂಡ್ ವಿರುದ್ಧ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಮಯಾಂಕ್ 144 ಎಸೆತಗಳಲ್ಲಿ 90 ರನ್ ಸಿಡಿಸಿದ್ದರು. ಇದುವರೆಗೂ ಫಸ್ಟ್ ಕ್ಲಾಸ್ ಕ್ರಿಕೆಟ್‍ನಲ್ಲಿ 50 ಪಂದ್ಯಗಳನ್ನಾಡಿರುವ ಇವರು 3,964 ರನ್ ಗಳಿಸಿದ್ದು, ಮಹಾರಾಷ್ಟ್ರ ವಿರುದ್ಧ ಅಜೇಯ 304 ರನ್ ಸಿಡಿಸಿದ್ದಾರೆ.

    ಐಪಿಎಲ್ ಟೂರ್ನಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಮಯಾಂಕ್, ಡೆಲ್ಲಿ, ಪುಣೆ, ಬೆಂಗಳೂರು, ಪಂಜಾಬ್ ತಂಡಗಳ ಪರ ಆಗಿದ್ದಾರೆ. 2019ರ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪರ ಆಡಿದ್ದ ಮಯಾಂಕ್ 13 ಪಂದ್ಯಗಳಿಂದ 332 ರನ್ ಸಿಡಿಸಿದ್ದರು.

    ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಯಲ್ಲಿ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿರುವ ಮಯಾಂಕ್, ಮೆಲ್ಬೋರ್ನ್ ನಲ್ಲಿ ನಡೆದ ಪಂದ್ಯದಲ್ಲಿ 42 ಎಸೆತಗಳಲ್ಲಿ 76 ರನ್ ಸಿಡಿಸಿ ಮಿಂಚಿದ್ದರು. ಆ ಬಳಿಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ 77 ರನ್ ಗಳಿಸಿದ್ದರು. 2 ಟೆಸ್ಟ್ ಪಂದ್ಯಗಳ 3 ಇನ್ನಿಂಗ್ಸ್ ಗಳಲ್ಲಿ  ಆಡಿರುವ ಮಯಾಂಕ್ 195 ರನ್ ಗಳಿಸಿದ್ದಾರೆ.

    ವಿಶ್ವಕಪ್ ಟೂರ್ನಿಯಲ್ಲಿ ರಿಷಬ್ ಪಂತ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದು, ಮಯಾಂಕ್ ಈ ಬಳಗದಲ್ಲಿ ಅವಕಾಶ ಪಡೆಯುತ್ತಾರ ಎಂಬ ಕುತೂಹಲ ಮೂಡಿದೆ. ಮಯಾಂಕ್ ಅವರಿಗೆ ಒಂದೊಮ್ಮೆ ಅವಕಾಶ ಲಭಿಸಿದರೆ ಆರಂಭಿಕರಾಗಿ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದ್ದು, 4ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಆಡುವುದು ಸೂಕ್ತ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.