Tag: ಮರಾಠ ಸಮುದಾಯ

  • ಮರಾಠ ಮೀಸಲಾತಿ ಹೋರಾಟಕ್ಕೆ ಜಯ – ಬೇಡಿಕೆಗಳಿಗೆ ಮಹಾರಾಷ್ಟ್ರ ಸರ್ಕಾರ ಅಸ್ತು

    ಮರಾಠ ಮೀಸಲಾತಿ ಹೋರಾಟಕ್ಕೆ ಜಯ – ಬೇಡಿಕೆಗಳಿಗೆ ಮಹಾರಾಷ್ಟ್ರ ಸರ್ಕಾರ ಅಸ್ತು

    – ನವಿ ಮುಂಬೈ ಪ್ರವೇಶಿಸುವ ಮುನ್ನವೇ ಪ್ರತಿಭಟನೆ ಸುಖಾಂತ್ಯ

    ಮುಂಬೈ: ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ (Maratha Quota) ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಮುಕ್ತಾಯಗೊಂಡಿದೆ. ಏಕನಾಥ್‌ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮರಾಠ ಸಮಯದಾಯದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ (Manoj Jarange Patil) ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.

    ಹಿಂದುಳಿದ ವರ್ಗಗಳ ಅಡಿಯಲ್ಲಿ ಮರಾಠ ಸಮಯದಾಯಕ್ಕೆ (Maratha Community) ಶಿಕ್ಷಣ ಮತ್ತು ಉದ್ಯೋಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಶನಿವಾರ ಮಹಾರಾಷ್ಟ್ರ ಸರ್ಕಾರವು (Maharashtra Government) ನಮ್ಮ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿ ಪಾಟೀಲ್‌ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. ಮುಖ್ಯಮಂತ್ರಿಗಳ ಕೈಯಿಂದ ತಂಪು ಪಾನೀಯ (ಜ್ಯೂಸ್‌) ಕುಡಿಯುವ ಮೂಲಕ ಉಪವಾಸ ಅಂತ್ಯಗೊಳಿಸಿದರು. ಇದನ್ನೂ ಓದಿ: ಮದುವೆಯಾಗಿ 12 ವರ್ಷ- ಇಬ್ಬರು ಮಕ್ಕಳನ್ನು ಬಿಟ್ಟು ಗೃಹಿಣಿ ಆತ್ಮಹತ್ಯೆ

    ಈ ವೇಳೆ ಮಾತನಾಡಿ, ಸಿಎಂ ಏಕನಾಥ್‌ ಶಿಂಧೆ (Eknath Shinde) ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ನಮ್ಮ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ನಮ್ಮ ಪ್ರತಿಭಟನೆ ಮುಗಿದಿದೆ ಎಂದು ತಿಳಿಸಿದ್ದಾರೆ.

    ಬೇಡಿಕೆಗಳಿಗೆ ಸರ್ಕಾರ ಅಸ್ತು:
    ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರ ಪ್ರವೇಶಿಸಲು ಸಜ್ಜಾಗಿತ್ತು. ಅಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು, ಪ್ರತಿಭಟನೆ ಸುಖಾಂತ್ಯ ಕಂಡಿದೆ. ನಂತರ ಮಹಾರಾಷ್ಟ್ರ ಸರ್ಕಾರವು ಜಾತಿ ಮೀಸಲಾತಿ ಕುರಿತು ಸರ್ಕಾರಿ ನಿರ್ಣಯ (GR) ಹೊರಡಿಸಿದ್ದು, ಸಚಿವರಾದ ದೀಪಕ್ ಕೇಸರ್ಕರ್ ಮತ್ತು ಮಂಗಲ್ ಪ್ರಭಾತ್ ಲೋಧಾ ಅವರು ಮನೋಜ್ ಜಾರಂಗೆ ಪಾಟೀಲ್ ಅವರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಪತ್ರ ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವರು, ಮರಾಠ ಮೀಸಲಾತಿಗಾಗಿ ಮನೋಜ್‌ ಜಾರಂಗೆ ನೇತೃತ್ವದಲ್ಲಿ ನಡೆಯುತ್ತಿದ್ದ ಚಳವಳಿಗೆ ಇಂದು ಪರಿಹಾರ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ. ಪರಿಹಾರ ಸಿಕ್ಕಿರುವುದರಿಂದ ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರೀ ಕುತೂಹಲ ಹುಟ್ಟಿಸಿತು ವಸುಂಧರಾ ರಾಜೇ, ರಾಜಸ್ಥಾನ ಸಿಎಂ ಭೇಟಿ

    ಹೋರಾಟಗಾರರ ಮೇಲಿನ ಕೇಸ್‌ ರದ್ದಿಗೆ ಒಪ್ಪಿಗೆ:
    ಮೂಲಗಳ ಪ್ರಕಾರ, ದಾಖಲಾತಿ ಹೊಂದಿರುವವರಿಗೆ ತಕ್ಷಣದಿಂದಲೇ ಜಾತಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಜೊತೆಗೆ ಮೀಸಲಾತಿ ಹೋರಾಟದ ಸಂದರ್ಭದಲ್ಲಿ, ಹೋರಾಟಗಾರರ ವಿರುದ್ಧ ದಾಖಲಾದ ಪ್ರಕರಣಗಳನ್ನು ತಕ್ಷಣದಿಂದಲೇ ಅಂತ್ಯಗೊಳಿಸಲು ಸರ್ಕಾರ ಒಪ್ಪಿರುವುದಾಗಿ ತಿಳಿದುಬಂದಿದೆ.

    ಮೀಸಲಾತಿ ದಶಕಗಳ ಹೋರಾಟ: 
    ಮಹಾರಾಷ್ಟ್ರ ಜನಸಂಖ್ಯೆಯಲ್ಲಿ 33% ಒಳಗೊಂಡಿರುವ ಮರಾಠ ಸಮುದಾಯವು ದಶಕಗಳಿಂದ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಗಾಗಿ ಒತ್ತಾಯಿಸುತ್ತಿದೆ. 2019ರಲ್ಲಿ ರಾಜ್ಯ ಸರ್ಕಾರ ಮರಾಠ ಸಮುದಾಯಕ್ಕೆ 16% ಮೀಸಲಾತಿ ನೀಡಿತು. ಆದ್ರೆ 2021ರಲ್ಲಿ ಸುಪ್ರೀಂ ಕೋರ್ಟ್‌ ಶೇ.50 ಮೀಸಲಾತಿಯನ್ನು ಉಲ್ಲೇಖಿಸಿ ಶೇ.16ರ ಕೋಟಾವನ್ನು ರದ್ದುಗೊಳಿಸಿತು. ಅಂದಿನಿಂದ ಪ್ರತಿಭಟನೆಗಳು ಶುರುವಾಗಿವೆ ಎಂಬುದಾಗಿ ಮೀಸಲಾತಿ ಹೋರಾಟಗಾರರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು ಎಂಬುದೇ ನಮ್ಮ ಗುರಿಯಾಗಿರಬೇಕು – ಸ್ಟಾಲಿನ್‌ ಕರೆ

  • ಬೆಳಗಾವಿಯಲ್ಲಿ ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ

    ಬೆಳಗಾವಿಯಲ್ಲಿ ಮರಾಠಾರ ಸಹಕಾರ ಇಲ್ಲದೇ ಯಾವ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ: ರಮೇಶ್ ಜಾರಕಿಹೊಳಿ

    ಬೆಳಗಾವಿ: ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ (Maratha Community) ಸಹಕಾರ ಇಲ್ಲದೇ ಯಾವುದೇ ಪಕ್ಷವೂ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದರು.

    ಗೋಕಾಕ್‌ನಲ್ಲಿ ಕ್ಷತ್ರಿಯ ಮರಾಠಾ ಸಮಾವೇಶದಲ್ಲಿ ಮಾತನಾಡಿದ ಅವರು, ಗೋಕಾಕ್‌ನಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶದಲ್ಲಿ ತಮ್ಮ ವಿರುದ್ಧ ಮಾತನಾಡಿದ ನಾಯಕರಿಗೆ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದರು. ಚುನಾವಣೆಯಲ್ಲಿ (Assembly Election) ಎಷ್ಟೇ ಒಗ್ಗಟ್ಟಾಗಿದ್ದರೂ ಸಾಕಾಗುವುದಿಲ್ಲ. ಪಕ್ಷದ ಪ್ರಮುಖ ನಾಯಕ ಇರುವುದರಿಂದ ಒಂದೇ ಹಾದಿಯಲ್ಲಿ ಮಾತನಾಡಲು ಬರಲ್ಲ. ನಾವು ಬೇಡಿಕೊಳ್ಳುತ್ತಾ ಅಡ್ಡಾಡೋದಕ್ಕಿಂತ ನಮ್ಮಲ್ಲೇ ಬರಬೇಕು ಎಂದರೆ ಒಗ್ಗಟ್ಟಾಗಬೇಕು. ಚುನಾವಣೆಯಲ್ಲಿ ಒಗ್ಗಟ್ಟಾಗಿ, ಮುಗಿದಮೇಲೆ ಮನೆಯಲ್ಲಿದ್ದರೆ ಏನೂ ಪ್ರಯೋಜನವಿಲ್ಲ ಎಂದರು. ಇದನ್ನೂ ಓದಿ: ರಾಜ್ಯ ರಾಜಕಾರಣದ ಮೇಲೆ ಆಸಕ್ತಿ ಇಲ್ಲ: ಡಿಕೆ ಸುರೇಶ್

    ಬೆಳಗಾವಿ ಜಿಲ್ಲೆಯ 18 ಕ್ಷೇತ್ರದಲ್ಲಿ 10 ಕ್ಷೇತ್ರ ಮರಾಠ ಸಮುದಾಯ ಇಲ್ಲದೇ ಗೆಲ್ಲಲು ಸಾಧ್ಯವಿಲ್ಲ. ಯಾವುದೇ ಪಕ್ಷ ಇರಲಿ ಗೆಲ್ಲಲು ಸಾಧ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಇದನ್ನೂ ಓದಿ: ಮಗನ ಗೆಲುವಿಗಾಗಿ ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ‌. ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿಯ ಮರಾಠಿ ಮೋಹ – ಕಿಚ್ಚು ಹೊತ್ತಿಸಿದ ಮರಾಠ ಅಭಿವೃದ್ಧಿ ನಿಗಮ

    ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿಯ ಮರಾಠಿ ಮೋಹ – ಕಿಚ್ಚು ಹೊತ್ತಿಸಿದ ಮರಾಠ ಅಭಿವೃದ್ಧಿ ನಿಗಮ

    – ಬಿಎಸ್‍ವೈ ಸರ್ಕಾರದಿಂದ ಮರಾಠ ಸಮುದಾಯದ ಓಲೈಕೆ ಏಕೆ?

    ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ.

    ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ ಸಲುವಾಗಿ ನಿನ್ನೆಯಷ್ಟೇ ಮರಾಠ ಅಭಿವೃದ್ಧಿ ನಿಗಮ ರಚಿಸಿ, ಅದಕ್ಕೂ 50 ಕೋಟಿ ಮೀಸಲಿರಿಸಿದೆ. ಮರಾಠ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚೌಹಾಣ್ ಬಹಿರಂಗವಾಗಿ ಘೋಷಿಸಿದ್ದಾರೆ.

    ಈ ಮೂಲಕ ಸಮುದಾಯಗಳ ಓಲೈಕೆ ಪಾಲಿಟಿಕ್ಸ್ ನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ. ಕಾರಣ ಬಸವ ಕಲ್ಯಾಣದಲ್ಲಿ ಮರಾಠ ಸಮುದಾಯದ 40 ಸಾವಿರ ಮತಗಳು ಇವೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕೂಡ ಯಾರೇ ಗೆಲ್ಲಬೇಕಿದ್ರೂ ಮರಾಠ ಸಮುದಾಯದ ಬೆಂಬಲ ಬೇಕೇಬೇಕು. ಅಲ್ಲಿ ಅಂದಾಜು 6 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಈ ಮತಗಳನ್ನು ಗುರಿಯಾಗಿಸಿಕೊಂಡೇ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಅಸ್ತ್ರವನ್ನು ಬಿಎಸ್‍ವೈ ಸರ್ಕಾರ ಪ್ರಯೋಗಿಸಿದೆ. ಇದನ್ನೂ ಓದಿ: ದುರ್ದೈವದಿಂದ KSRTC, BMTC ನೌಕರರ ಸಂಬಳ ನೀಡಲು ಆಗಿಲ್ಲ: ಲಕ್ಷ್ಮಣ ಸವದಿ

    ಕೇವಲ ಮತಕ್ಕಾಗಿ ನಾಡದ್ರೋಹಿಗಳು ಎನಿಸಿಕೊಂಡ ಮರಾಠ ಸಮುದಾಯವನ್ನು ಈ ರೀತಿ ಓಲೈಸುವುದು ಎಷ್ಟು ಸರಿ ಅನ್ನೋದು ಕನ್ನಡ ಪರ ಹೋರಾಟಗಾರರ ಪ್ರಶ್ನೆ. ಸರ್ಕಾರ ಕೂಡಲೇ ಅಭಿವೃದ್ಧಿ ನಿಗಮ ರಚನೆಯ ಆದೇಶವನ್ನು ಹಿಂಪಡೆಯಬೇಕು. ಇಲ್ಲದೇ ಇದ್ರೇ ನಾಡಿದ್ದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರರು ಎಚ್ಚರಿಸ್ತಿದ್ದಾರೆ.

    ಬೆಳಗಾವಿ- ಮರಾಠ ಸಮುದಾಯದ ಓಲೈಕೆ ಏಕೆ?
    ಬೆಳಗಾವಿಯ 17 ಲಕ್ಷ ಮತಗಳ ಪೈಕಿ 6.5 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಮರಾಠ ಸಮುದಾಯದ ಬೆಂಬಲ ಗಿಟ್ಟಿಸಿದ್ದ ಬಿಜೆಪಿಯ ಸುರೇಶ್ ಅಂಗಡಿ ಈಗಿಲ್ಲ. ಸುರೇಶ್ ಅಂಗಡಿ ಅನುಪಸ್ಥಿತಿಯಲ್ಲಿ ಮರಾಠ ವೋಟ್ ಬ್ಯಾಂಕ್ ಛಿದ್ರವಾಗುವ ಭೀತಿ ಬಿಜೆಪಿಗೆ ಕಾಡುತ್ತಿದೆ. ಮಹಾರಾಷ್ಟ್ರದ ರಾಜಕೀಯ ಉಪ ಲೋಕಸಮರದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಜೊತೆ ಶಿವಸೇನೆ ಇರುವ ಕಾರಣ, ಮರಾಠ ಮತಗಳು ಕೈಗೆ ಹೋಗುವ ಸಂಭವ ಹೆಚ್ಚು ಎನ್ನಲಾಗಿದೆ. ಹೀಗಾಗಿಯೇ ಮರಾಠ ಸಮುದಾಯದ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ನಿಗಮ ರಚಿಸಿದೆ ಎಂದು ಹೇಳಲಾಗುತ್ತಿದೆ.

    ಬಸವಕಲ್ಯಾಣ- ಮರಾಠ ಸಮುದಾಯದ ಓಲೈಕೆ ಏಕೆ?
    ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ 2.40 ಲಕ್ಷ ಮತಗಳನ್ನು ಹೊಂದಿದೆ. ಇದರಲ್ಲಿ ಮರಾಠ ಸಮುದಾಯದ ಅಂದಾಜು 45,000 ಮತಗಳಿವೆ. ಇಲ್ಲಿ ಯಾರೇ ಗೆಲ್ಲಬೇಕಿದ್ದರೂ ಮರಾಠ ಮತಗಳು ಬೇಕೇಬೇಕು. ಬಸವಕಲ್ಯಾಣದ ಮೇಲೆಯೂ ‘ಮಹಾ’ ಪಾಲಿಟಿಕ್ಸ್ ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚು. ಹೀಗಾಗಿಯೇ, ಸಮುದಾಯದ ಓಲೈಕೆಗಾಗಿ ಮರಾಠ ಅಭಿವೃದ್ಧಿ ನಿಗಮದ ಅಸ್ತ್ರ ಪ್ರಯೋಗಿಸಿದೆ ಎಂಬುವುದು ರಾಜಕೀಯ ಅಂಗಳದ ಮಾತು.

    ವಿರೋಧ ಏಕೆ?: ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ ಕಡಿಮೆ ಅನುದಾನ ನೀಡಲಾಗಿದೆ. ಈ ವರ್ಷ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಈ ಮೊದಲು ವಾರ್ಷಿಕ 5 ಕೋಟಿ ರೂ. ನೀಡಲಾಗಗುತ್ತಿತ್ತು. 2 ಕೋಟಿ ಎಲ್ಲಿ?50 ಕೋಟಿ ಎಲ್ಲಿ? ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ ಎಂದು ಕನ್ನಡ ಪರ ಹೋರಾಟಗಾರರು ಪ್ರಶ್ನೆ ಮಾಡುತ್ತಿದ್ದಾರೆ.

    ಪ್ರತಿ ವರ್ಷ ನ.1ರಂದು ಮರಾಠಿಗರಿಂದ ಕರಾಳ ದಿನ ಆಚರಣೆ ಮಾಡುತ್ತಾರೆ. ಹೀಗಿದ್ದರೂ ಮರಾಠಿ ಸಮುದಾಯದ ಮೇಲೆ ಸರ್ಕಾರಕ್ಕೆ ಪ್ರೀತಿ ಏಕೆ?. ಹೀಗಾಗಿಯೇ ಕನ್ನಡ ಪರ ಹೋರಾಟಗಾರರಿಂದ ಮರಾಠ ನಿಗಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಬೊಕ್ಕಸದಲ್ಲಿ ದುಡ್ಡಿಲ್ಲ ಎಂಬ ನೆಪ ಹೆಳಿ, ವಿವಿಧ ಪ್ರಶಸ್ತಿಗಳು, ಪಿಹೆಚ್‍ಡಿ, ಎಂಫಿಲ್ ಮಾಡೋರ ವಿದ್ಯಾರ್ಥಿ ವೇತನಕ್ಕೂ ಕತ್ತರಿ ಹಾಕಿರೋದು ಕನ್ನಡ ಪರ ಹೋರಾಟಗಾರರನ್ನು ಸಿಟ್ಟಿಗೆಬ್ಬಿಸಿದೆ.