Tag: ಮಲದ ಗುಂಡಿ

  • Chitradurga| ಮಲಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು

    Chitradurga| ಮಲಗುಂಡಿಗಿಳಿದ ಕಾರ್ಮಿಕ ಉಸಿರುಗಟ್ಟಿ ಸಾವು

    – ಕಲ್ಯಾಣ ಮಂಟಪದ ಮಾಲೀಕನ ವಿರುದ್ಧ ದೂರು

    ಚಿತ್ರದುರ್ಗ: ಮಲದ ಗುಂಡಿಗಿಳಿದ (Septic Tank) ಕಾರ್ಮಿಕನೋರ್ವ (Labor) ಉಸಿರುಗಟ್ಟಿ ಸಾವನ್ನಪ್ಪಿರುವ ಅಮಾನವೀಯ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ಪಟ್ಟಣದಲ್ಲಿ ನಡೆದಿದೆ.

    ಚಳ್ಳಕೆರೆ ಪಟ್ಟಣದಲ್ಲಿ ಡಿ.18ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಳ್ಳಕೆರೆಯ ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಮೃತ ಕಾರ್ಮಿಕನೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ| ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ

    ಈ ಸಂಬಂಧ ಡಿ.23ರ ರಾತ್ರಿ ಚಳ್ಳಕೆರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನೀರಿನ ತೊಟ್ಟಿಯಲ್ಲಿ ಮುಳುಗಿ ಕಾರ್ಮಿಕ ಸಾವೆಂದು ತಿಳಿಸಲಾಗಿತ್ತು. ಈ ವೇಳೆ ಸಫಾಯಿ ಕರ್ಮಚಾರಿಗಳ ಸೇವಾ ಸಮಿತಿಯಿಂದ ಡಿಸಿ ಕಚೇರಿಗೆ ದೂರು ಸಲ್ಲಿಸಿ, ತನಿಖೆಗೆ ಆಗ್ರಹಿಸಿದ ಪರಿಣಾಮ ನಗರಸಭೆ ಕಂದಾಯ ನಿರೀಕ್ಷಕ ಗುರುಪ್ರಸಾದ್ ಸ್ಥಳ ಪರಿಶೀಲನೆ ನಡೆಸಿದ ವೇಳೆ ಈ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ

    ಕಲ್ಯಾಣ ಮಂಟಪದ ಮಾಲೀಕ ಗುರುವೀರ ನಾಯಕ್ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಗೆ ನಗರಸಭೆ ಅಧಿಕಾರಿ ದೂರು ಸಲ್ಲಿಸಿದ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ತನಿಖೆ ಚುರುಕಾಗಿದೆ. ಇದನ್ನೂ ಓದಿ: ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್‌ ಗಿಫ್ಟ್‌ – ʼಮೈಸೂರ್‌ಪಾಕ್‌ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

  • ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಕೋಲಾರದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅಮಾನವೀಯ ಘಟನೆ

    ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಕೋಲಾರದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅಮಾನವೀಯ ಘಟನೆ

    ಕೋಲಾರ: ಶಾಲಾ ಪ್ರಾಂಶುಪಾಲರು, ಶಿಕ್ಷಕರ ಎದುರಲ್ಲೇ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿ, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್‌ ಮಾಡಿಸಿದ್ದಾರೆ.

    ಅಮಾನವೀಯ ಕೃತ್ಯದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಯಲ್ಲಿ ಸುಮಾರು 250 ಮಕ್ಕಳಿದ್ದಾರೆ. ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.

    ಎಲ್ಲಾ ಮಕ್ಕಳೂ ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಅದು ಮಲದ ಗುಂಡಿ ಅಲ್ಲ ಸ್ವಚ್ಛತಾ ಅಂದೋಲನ ಅಂಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ ಎಂದು ಪ್ರಾಂಶುಪಾಲೆ ಭಾರತಮ್ಮ ಸಮಜಾಯಿಷಿ ನೀಡಿದ್ದಾರೆ. ಆದರೆ ಅದು ಮಲದ ಗುಂಡಿ ಎಂಬುದು ಶಿಕ್ಷಕರ ಮಾತು. ಚೇಂಬರ್‌ನೊಳಗಾದರೂ ನಮ್ಮ ಮಕ್ಕಳನ್ನು ಏಕೆ ಇಳಿಸಬೇಕು ಎಂದು ಪೋಷಕರು ಪ್ರಶ್ನಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.