Tag: ಮಲಪ್ಪುರಂ

  • 3 ವರ್ಷದ ಹಿಂದೆ ಕಾಗೆ ಹೊತ್ತೊಯ್ದ ಚಿನ್ನದ ಬಳೆ ಮರಳಿ ಒಡತಿಯ ಕೈಗೆ

    3 ವರ್ಷದ ಹಿಂದೆ ಕಾಗೆ ಹೊತ್ತೊಯ್ದ ಚಿನ್ನದ ಬಳೆ ಮರಳಿ ಒಡತಿಯ ಕೈಗೆ

    ತಿರುವನಂತಪುರಂ: ಮೂರು ವರ್ಷದ ಹಿಂದೆ ಕಾಗೆ (Crow) ಹೊತ್ತೊಯ್ದಿದ್ದ ಚಿನ್ನದ ಬಳೆ (Gold Bangle) ಮರಳಿ ಒಡತಿಯ ಕೈ ಸೇರಿದ ಘಟನೆ ಕೇರಳದ ಮಲಪ್ಪುರಂನ (Malappuram) ತ್ರಿಕ್ಕಲಂಗೋಡ್‌ನಲ್ಲಿ (Trikkalangode) ನಡೆದಿದೆ.

    ಮೂರು ವರ್ಷದ ಹಿಂದೆ ರುಕ್ಮಿಣಿ ಕೆಲಸ ಮಾಡುವ ವೇಳೆ ಒಂದೂವರೆ ಪವನ್ ತೂಕವಿದ್ದ (12 ಗ್ರಾಂ) ಚಿನ್ನದ ಬಳೆಯನ್ನು ಕೈಯಿಂದ ತೆಗೆದಿಟ್ಟಿದ್ದರು. ಕ್ಷಣಾರ್ಧದಲ್ಲಿ ಕಾಗೆಯೊಂದು ಅವರ ಬಳೆಯನ್ನು ಎಗರಿಸಿತ್ತು. ಬಳೆಗಾಗಿ ಸ್ವಲ್ಪ ದಿನ ಹುಡುಕಾಡಿದ ರುಕ್ಮಿಣಿ ಕುಟುಂಬಸ್ಥರು ಬಳಿಕ ಅದರ ಆಸೆ ಕೈಬಿಟ್ಟಿದ್ದರು. ಇದನ್ನೂ ಓದಿ: ನಿತ್ಯ 1.05 ಕೋಟಿ ಲೀಟರ್ ಹಾಲು – KMF ಇತಿಹಾಸದಲ್ಲೇ ಮೊದಲ ಬಾರಿಗೆ ಅತಿಹೆಚ್ಚು ಸಂಗ್ರಹ

    ಮೂರು ತಿಂಗಳ ಹಿಂದೆ ಅನ್ವರ್ ಸಾದತ್ ಎಂಬವರು ತೆಂಗಿನಕಾಯಿ ಕೀಳಲು ಹೋದ ವೇಳೆ ಮಗಳಿಗಾಗಿ ಮಾವು ಕೀಳಲು ಅನುಮತಿ ಪಡೆದು ಮರ ಹತ್ತಿ ಕೊಂಬೆ ಅಲ್ಲಾಡಿಸಿದಾಗ ಹೊಳೆಯುತ್ತಿರುವ ವಸ್ತೊಂದು ಮರದಿಂದ ಕೆಳಗೆ ಬಿದ್ದಿದೆ. ಅದನ್ನು ಪುತ್ರಿ ಫಾತಿಮಾ ಹುದಾ ಗಮನಿಸಿದ್ದಾಳೆ. ಬಳಿಕ ಅದು ಚಿನ್ನವೇ ಎಂದು ಪರಿಶೀಲಿಸಿದಾಗ ಬಳೆ ತುಂಡಾಗಿದ್ದು, ಅಸಲಿ ಚಿನ್ನವೆಂಬುದು ಖಚಿತವಾಗಿದೆ. ರುಕ್ಮಿಣಿ ಮನೆಯಿಂದ ಕೇವಲ 50 ಮೀಟರ್ ದೂರದಲ್ಲೇ ಈ ಚಿನ್ನದ ಬಳೆ ಪತ್ತೆಯಾಗಿದೆ. ಇದನ್ನೂ ಓದಿ: ಕೆ.ಶಿವನಗೌಡ ನಾಯಕ್ ಕೊರಳಲ್ಲಿ ನವಿಲುಗರಿ ಹಾರ – ವಿವಾದದಲ್ಲಿ ಸಿಲುಕಿದ ಮಾಜಿ ಸಚಿವ

    ಅನ್ವರ್ ಸಾದತ್ ಈ ಚಿನ್ನದ ಬಳೆಯನ್ನು ಊರಿನ ಲೈಬ್ರರಿಗೆ ಕೊಟ್ಟು ಮಾಲೀಕರ ಕೈಸೇರಲಿ ಎಂದು ಪ್ರಾಮಾಣಿಕತೆ ಮೆರೆದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪತಿಯೊಂದಿಗೆ ಲೈಬ್ರರಿಗೆ ತೆರಳಿದ ರುಕ್ಮಿಣಿ ಬಳೆ ತನ್ನದೇ ಎಂದು ಖಚಿತಪಡಿಸಿಕೊಂಡಿದ್ದಾರೆ. ಕಳೆದು ಹೋಗಿದ್ದ ಚಿನ್ನದ ಬಳೆ ನೋಡಿ ಒಡತಿ ರುಕ್ಮಿಣಿ ದಿಲ್ ಖುಷ್ ಆಗಿದ್ದಾರೆ. ಪತ್ತೆ ಹಚ್ಚಿದವರ ಕೈಯಿಂದಲೇ ಬಳೆ ಪಡೆಯಬೇಕು ಎಂಬ ಮನವಿ ಮೇರೆಗೆ ಊರಿನವರು ಅನ್ವರ್ ಸಾದತ್ ಕೈಯಿಂದಲೇ ರುಕ್ಮಿಣಿ ಅವರಿಗೆ ಬಳೆಯನ್ನು ಮರಳಿ ಕೊಡಿಸಿದ್ದಾರೆ. ಬಳೆಯನ್ನು ಪಡೆದ ರುಕ್ಮಿಣಿ ಈ ಬಳೆಯನ್ನು ಮರಳಿ ಪಡೆಯುತ್ತೇನೆ ಎಂದು ಭಾವಿಸಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೆಣ್ಣು ಅಂತ 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಪಾಪಿ ತಂದೆ

  • ಕೇರಳದಲ್ಲಿ ಪಂದ್ಯದ ವೇಳೆಯೇ ಆಫ್ರಿಕನ್ ಫುಟ್ಬಾಲ್ ಆಟಗಾರನ ಮೇಲೆ ಹಲ್ಲೆ – ಜನಾಂಗೀಯ ನಿಂದನೆ ಆರೋಪ

    ಕೇರಳದಲ್ಲಿ ಪಂದ್ಯದ ವೇಳೆಯೇ ಆಫ್ರಿಕನ್ ಫುಟ್ಬಾಲ್ ಆಟಗಾರನ ಮೇಲೆ ಹಲ್ಲೆ – ಜನಾಂಗೀಯ ನಿಂದನೆ ಆರೋಪ

    ತಿರುವನಂತಪುರಂ: ಕೇರಳದ (Kerala) ಮಲಪ್ಪುರಂ (Malappuram) ಜಿಲ್ಲೆಯಲ್ಲಿ ನಡೆದ ಫುಟ್‍ಬಾಲ್ ಪಂದ್ಯಾವಳಿಯ ವೇಳೆ ಆಫ್ರಿಕಾದ ಫುಟ್‍ಬಾಲ್ ಆಟಗಾರನನ್ನು (African footballer) ಪ್ರೇಕ್ಷಕರು ಹಿಂಬಾಲಿಸಿ ಥಳಿಸಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವೈರಲ್ ಆಗಿರುವ ವಿಡಿಯೋದಲ್ಲಿ, ನೀಲಿ ಟೀ ಶರ್ಟ್ ಧರಿಸಿದ್ದ ಆಫ್ರಿಕಾದ, ದೈರ್ರಾಸೌಬ ಹಾಸನ್ ಜೂನಿಯರ್ ಎಂಬ ವ್ಯಕ್ತಿಯನ್ನು ಅರೀಕೋಡ್‍ನ ಮೈದಾನದಲ್ಲಿ ಜನರ ಗುಂಪು ಅಟ್ಟಾಡಿಸಿದ್ದಾರೆ. ಬಳಿಕ ಆಟಗಾರನನ್ನು ಜನರು ಹಿಡಿದು ಥಳಿಸಿರುವುದು ದಾಖಲಾಗಿದೆ. ಜನರ ಗುಂಪು ತನ್ನನ್ನು ಜನಾಂಗೀಯ ನಿಂದನೆ (Racially Abused) ಮಾಡಿ, ಹಲ್ಲೆ ನಡೆಸಿದೆ ಎಂದು ದೈರ್ರಾಸೌಬ ಹಾಸನ್ ಆರೋಪಿಸಿದ್ದಾರೆ. ಇದನ್ನೂ ಓದಿ: ಅಶ್ಲೀಲ, ಅಸಭ್ಯ ಕಂಟೆಂಟ್‌ ಪ್ರಸಾರ; 18 ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರ ನಿರ್ಬಂಧ

    ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಫುಟ್ಬಾಲ್ ಆಟಗಾರನು ತನ್ನ ತಂಡಕ್ಕೆ ಕಾರ್ನರ್ ಕಿಕ್ ಸಿಕ್ಕಿತು ಮತ್ತು ಅವನು ತನ್ನ ಸ್ಥಾನವನ್ನು ಪಡೆದುಕೊಳ್ಳಲು ಮುಂದಾದಾಗ, ಪ್ರೇಕ್ಷಕರು ತನ್ನನ್ನು ಜನಾಂಗೀಯ ನಿಂದನೆ ಮಾಡಿದರು. ಗುಂಪು ತನ್ನ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದೂ ಆರೋಪಿಸಿದ್ದಾರೆ.

    ಸೆವೆನ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಜವಾಹರ್ ಮಾವೂರ್ ಎಂಬ ಫುಟ್ಬಾಲ್ ಕ್ಲಬ್‍ನ್ನು ಹಾಸನ್ ಜೂನಿಯರ್ ಪ್ರತಿನಿಧಿಸುತ್ತಿದ್ದರು. ಸೆವೆನ್ಸ್ ಫುಟ್ಬಾಲ್ ಮಲಪ್ಪುರಂನಲ್ಲಿ ಪ್ರಸಿದ್ಧ ಕ್ರೀಡಾಕೂಟವಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಾಡಹಗಲೇ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

  • ಕಳ್ಳತನದ ಶಂಕೆ ಮೇಲೆ ಬಿಹಾರದ ವ್ಯಕ್ತಿಯ ಕೊಲೆ – 9 ಮಂದಿ ಅರೆಸ್ಟ್

    ಕಳ್ಳತನದ ಶಂಕೆ ಮೇಲೆ ಬಿಹಾರದ ವ್ಯಕ್ತಿಯ ಕೊಲೆ – 9 ಮಂದಿ ಅರೆಸ್ಟ್

    ತಿರುವನಂತಪುರ: ಕಳ್ಳತನದ (Theft) ಶಂಕೆಯ ಮೇಲೆ ಬಿಹಾರ (Bihar) ಮೂಲದ ವ್ಯಕ್ತಿಗೆ ಚಿತ್ರಹಿಂಸೆ ನೀಡಿ ಕೊಂದ 9 ಜನ ಆರೋಪಿಗಳನ್ನು ಕೇರಳ (Kerala) ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳು ಬಿಹಾರ ಮೂಲದ ರಾಜೇಶ್ ಮಂಚಿ (26) ಎಂಬಾತನನ್ನು ಕಳ್ಳ ಎಂದು ಶಂಕಿಸಿ ಆತನಿಗೆ ಮರದ ಕೋಲು ಹಾಗೂ ಪೈಪುಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ. ರಾಜೇಶ್ ಮಂಚಿಯ ಮೃತದೇಹ ಕೀಜಿಸ್ಸೆರಿಯಲ್ಲಿ ಪತ್ತೆಯಾಗಿದೆ ಎಂದು ಮಲಪ್ಪುರಂ (Malappuram) ಎಸ್ಪಿ ಸುಜಿತ್ ದಾಸ್ ತಿಳಿಸಿದ್ದಾರೆ. ಇದನ್ನೂ ಓದಿ: 12 ವಿದ್ಯಾರ್ಥಿನಿಯರಿಗೆ ಕಿರುಕುಳ – ಶಿಕ್ಷಕ ಅರೆಸ್ಟ್

    ರಾಜೇಶ್‌ನ ಎರಡೂ ಕೈಗಳನ್ನು ಕಟ್ಟಿ ಹಾಕಿ ಎರಡು ಗಂಟೆಗಳಿಗೂ ಹೆಚ್ಚಿನ ಕಾಲ ನಿರಂತರವಾಗಿ ಚಿತ್ರಹಿಂಸೆ ನೀಡಿದ್ದು, ಕಳ್ಳತನ ಮಾಡಿರುವ ಬಗ್ಗೆ ಪ್ರಶ್ನಿಸಿದ್ದಾರೆ. ರಾಜೇಶ್‌ಗೆ ಚಿತ್ರಹಿಂಸೆ ನೀಡುತ್ತಿರುವ ವೀಡಿಯೋವನ್ನು ಆರೋಪಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಇದೀಗ ವಿಡಿಯೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಾಜೇಶ್‌ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆತನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಪ್ರಾಥಮಿಕ ತನಿಖೆಯ ಪ್ರಕಾರ, ರಾಜೇಶ್ ಒಬ್ಬ ಕಳ್ಳ ಎಂದು ಬಂಧಿತ ಆರೋಪಿಗಳು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಪೊಲೀಸರು ಆರೋಪಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದು, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕೊಂಡೊಟ್ಟಿ ಎಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದು, ಪ್ರಕರಣದ ತನಿಖೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಭಾರತೀಯ ಸಿಮ್‌ಕಾರ್ಡ್, ಒಟಿಪಿ ಹಂಚಿಕೆ – ಮೂವರು ಅರೆಸ್ಟ್

  • ದೋಣಿ ದುರಂತ- ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

    ದೋಣಿ ದುರಂತ- ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

    ತಿರುವನಂತಪುರಂ: ಪ್ರವಾಸಿ ದೋಣಿ (Tourist Boat) ಮುಳುಗಡೆಯಾಗಿ 22 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಕೇರಳ ಸರ್ಕಾರ (Kerala Government) ಘೋಷಣೆ ಮಾಡಿದೆ.

    ಪ್ರವಾಸಿ ದೋಣಿ ದುರಂತ ಸಂಬಂಧ ಕೇರಳ ಸರ್ಕಾರವು ಸಂಪೂರ್ಣ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರವೇ ಭರಿಸಲಿದೆ. ಪೊಲೀಸ್ ವಿಶೇಷ ತನಿಖಾ ತಂಡವು ಈ ಸಂಬಂಧ ತನಿಖೆ ನಡೆಸಲಿದೆ ಎಂದು ಸಿಎಂಒ ಮಾಹಿತಿ ನೀಡಿದೆ.

    ಇತ್ತ ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ. ಘೋಷಿಸಿದ್ದಾರೆ. ಕೇರಳದ ಮಲಪ್ಪುರಂನಲ್ಲಿ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಪಿಎಂಎನ್‍ಆರ್ ಎಫ್‍ನಿಂದ 2 ಲಕ್ಷ ರೂ.ವನ್ನು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದರು.

    ಏನಿದು ಘಟನೆ?: ಸುಮಾರು 30 ಮಂದಿಯಿದ್ದ ಪ್ರವಾಸಿ ದೋಣಿಯು ಭಾನುವಾರ ಮಲಪ್ಪುರಂನ ತನೂರಿನ ತೂವಲ್ತೀರಂ ಕಡಲತೀರದ ಸಮೀಪ ಸಂಜೆ 7 ಗಂಟೆ ಸುಮಾರಿಗೆ ಮುಳುಗಡೆಯಾಗಿತ್ತು. ಘಟನೆಯಲ್ಲಿ 22 ಮಂದಿ ಸಾವನ್ನಪ್ಪಿದ್ದು, ಸುಮಾರು 7 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇದನ್ನೂ ಓದಿ: ಪ್ರವಾಸಿ ದೋಣಿ ಮುಳುಗಡೆ – ಮಕ್ಕಳು ಸೇರಿದಂತೆ 22 ಮಂದಿ ನೀರುಪಾಲು

    ಈ ಸಂಬಂಧ ಮಲಪ್ಪುರಂ ಪೊಲೀಸರು ಮಾಧ್ಯಮದ ಜೊತೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆಯ ಬಳಿಕ ದುರಂತ ಸಂಬಂಧ ತನಿಖೆ ನಡೆಸುತ್ತೇವೆ. ಹೆಚ್ಚಿನ ಜನ ಹಾಕಿಕೊಂಡು ಹೋಗಿರುವುದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಆದರೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಘಟನೆಯ ಬಳಿಕ ದೋಣಿಯ ಮಾಲೀಕ ನಜಾರ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಿರುವುದಾಗಿ ತಿಳಿಸಿದ್ದಾರೆ.

  • ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು- ಕುಟುಂಬಸ್ಥರ ಆರೋಪವೇನು..?

    ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು- ಕುಟುಂಬಸ್ಥರ ಆರೋಪವೇನು..?

    ತಿರುವನಂತಪುರಂ: ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದವಳನ್ನು ಮಾನ್ಯ(22) ಎಂದು ಗುರುತಿಸಲಾಗಿದೆ. ಈಕೆ ತ್ರಿಕಲಯೂರ್ ಮನೆಯ ಬೆಡ್‍ರೂಂನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಸದ್ಯ ಈಕೆಯನ್ನು ಮದುವೆಯಾಗಬೇಕಾಗಿದ್ದ ಯುವಕ ಅಶ್ವಿನ್(26) ವಿರುದ್ಧ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮಾನ್ಯ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆಯೇ ಆಕೆಯ ಕುಟುಂಬಸ್ಥರು ಕೆಲವೊಂದು ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ಮಾನ್ಯ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿವೆ. ಹೀಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಆರೋಪದಂತೆ ಅರೆಕೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮಾನ್ಯ ಕುಟುಂಬಸ್ಥರು ಆರೋಪ ಮಾಡಿದ ಬೆನ್ನಲ್ಲೇ ತನಿಖೆ ನಡೆಸಿದ ಪೊಲೀಸರಿಗೆ ಅಶ್ವಿನ್ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ‘ಕಾಳಿ’ಗೆ ಅವಮಾನ ಮಾಡಿದ್ದ ನಿರ್ದೇಶಕಿ ಲೀನಾ ಮಣಿಮೇಕಲೈಗೆ ದೆಹಲಿ ಕೋರ್ಟ್ ಸಮನ್ಸ್

    ಕಳೆದ 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಮಾನ್ಯ ಹಾಗೂ ಅಶ್ವಿನ್ ನಿಶ್ಚಿತಾರ್ಥ ನಡೆದಿದ್ದು, ಈ ಮೂದಲೇ ಇಬ್ಬರು ಪ್ರೀತಿಯಲ್ಲಿದ್ದರು. ಅಂದರೆ ಕಳೆದ 8 ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಯಲ್ಲಿ ಬಿದ್ದಿದ್ದರು. ಇತ್ತ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ ಅಶ್ವಿನ್, ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಮಾನ್ಯ ಜೊತೆಗಿನ ಸಂಬಂಧ ಕಡಿದುಕೊಂಡಿದ್ದನು. ಅಂತೆಯೇ ಇದೀಗ ಮದುವೆಯಿಂದ ಕೂಡ ದೂರ ಉಳಿಯುವ ಅಶ್ವಿನ್ ನಿರ್ಧಾರದಿಂದ ಮಾನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯ ಮಾನ್ಯ ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್ ವಾಯ್ಸ್ ಮೆಸೇಜ್ ಬಗ್ಗೆ ಪರಿಶೀಲನೆ ಮಾಡುತ್ತಿದ್ದಾರೆ. ವಿದೇಶದಿಂದ ಅಶ್ವಿನ್ ತವರಿಗೆ ಮರಳುತ್ತಿದ್ದಂತೆಯೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೇರಳ ಆನೆ ಹತ್ಯೆ ಪ್ರಕರಣ: ಬಿಜೆಪಿ ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲು

    ಕೇರಳ ಆನೆ ಹತ್ಯೆ ಪ್ರಕರಣ: ಬಿಜೆಪಿ ಸಂಸದೆ ಮನೇಕಾ ಗಾಂಧಿ ವಿರುದ್ಧ ದೂರು ದಾಖಲು

    ತಿರುವನಂತಪುರಂ: ಕೇರಳದ ರಾಜ್ಯದ ಪಾಲಕ್ಕಡ್ ಜಿಲ್ಲೆಯಲ್ಲಿ ನಡೆದಿದ್ದ ಆನೆ ಹತ್ಯೆ ಪ್ರರಕಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕಿ, ಸಂಸದೆ ಮನೇಕಾ ಗಾಂಧಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

    ಮಲಪ್ಪುರಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಜಿಲ್ಲೆ ಹಾಗೂ ಅಲ್ಲಿನ ನಿವಾಸಿಗಳಿಗೆ ಅಪಮಾನ ಮಾಡುವ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ ಎಂದು ವಕೀಲ ಸುಭಾಷ್ ಚಂದ್ರನ್ ಆರೋಪಿಸಿದ್ದಾರೆ. ಮನೇಕಾ ಗಾಂಧಿ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಇಂತಹ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಹಲವರ ಮೇಲೂ ದೂರು ದಾಖಲಿಸಲಾಗಿದೆ. ಸದ್ಯ ಮನೇಕಾ ಅವರ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಕೋಮು ಸಂಘರ್ಷಕ್ಕೆ ಪ್ರೇರಣೆ), 120 ಬಿ (ಕ್ರಿಮಿನಲ್ ಪಿತೂರಿ) ಅಡಿ ದೂರು ದಾಖಲಿಸಲಾಗಿದೆ.

    ಅನಾನಸ್ ಹಣ್ಣಿನಲ್ಲಿ ಪಟಾಕಿ ಇಟ್ಟು ಆನೆಯ ಸಾವಿಗೆ ಕಾರಣರಾಗಿದ್ದ ಆರೋಪಿಗಳ ವಿರುದ್ಧ ದೇಶದ್ಯಾಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಕೆಲವರು ಧರ್ಮದ ರಂಗು ಬಳಿದು ಜಿಲ್ಲೆಯಲ್ಲಿ ಹೆಚ್ಚಿರುವ ಸಮುದಾಯವೊಂದರ ಜನರಿಂದಲೇ ಇಂತಹ ಕೃತ್ಯ ನಡೆದಿದೆ ಎಂಬರ್ಥ ನೀಡುವ ಪೋಸ್ಟ್ ಗಳನ್ನು ಮಾಡಿದ್ದರು. ಮನೇಕಾ ಗಾಂಧಿ ಅವರು ನಮ್ಮ ಜಿಲ್ಲೆಯ ಜನರ ಸುಳ್ಳು ಆರೋಪಗಳನ್ನು ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಜಿಲ್ಲೆಯ ಜನರ ನಡುವಿನ ಶಾಂತಿಯ ವಾತಾವರಣವನ್ನು ಕದಡುವಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುವುದು ದೂರುದಾರರ ಆರೋಪವಾಗಿದೆ.

    ಮನೇಕಾ ಗಾಂಧಿ ಅವರು ಆನೆಯನ್ನು ಕೊಂದ ಘಟನೆ ಬಗ್ಗೆ ಆಕ್ರೋಶ ಹೊರ ಹಾಕಿ ಕೆಲ ಅಂಕಿ ಅಂಶಗಳ ವಿವರಗಳನ್ನು ನೀಡಿದ್ದರು. ಕೇರಳದಲ್ಲಿ ಮೂರು ದಿನಕ್ಕೊಂದು ಆನೆಯನ್ನು ಹತ್ಯೆ ಮಾಡಲಾಗುತ್ತಿದೆ. ಅದರಲ್ಲೂ ಮಲಪ್ಪುರಂ ಜಿಲ್ಲೆ ಅಪರಾಧಗಳ ಗೂಡಾಗಿದೆ. ಆನೆಗಳ ರಕ್ಷಣೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದರು.

    ಇತ್ತ ಪ್ರಕರಣ ವಿಚಾರಣೆಯನ್ನು ನಡೆಸುತ್ತಿರುವ ಪೊಲೀಸರು ಜೂನ್ 5ರಂದು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಶೀಘ್ರವೇ ಉಳಿದ ಆರೋಪಿಗಳನ್ನು ಕೂಡ ಬಂಧನ ಮಾಡುವುದಾಗಿ ಕೇರಳ ಅರಣ್ಯ ಇಲಾಖೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯ ಬಂಧನ ಮಾಡಿರುವ ವ್ಯಕ್ತಿ ಸ್ಥಳೀಯರಿಗೆ ಸ್ಫೋಟಕ ಪದಾರ್ಥಗಳನ್ನು ಮಾರಾಟ ಮಾಡುತ್ತಾನೆ ಎಂಬ ಮಾಹಿತಿ ಲಭಿಸಿದ್ದು, ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಸ್ಥಳೀಯರು ಇಂತಹ ಪದಾರ್ಥಗಳನ್ನು ಬಳಕೆ ಮಾಡುತ್ತಾರೆ ಎಂಬ ಅಂಶ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಕೇರಳ ಸಿಎಂ ಕೂಡ ಪ್ರಕರಣದ ಸಂಪೂರ್ಣ ತನಿಖೆ ಮಾಡಲು ಆದೇಶ ನೀಡಿರುವ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.

  • ಗರ್ಭಿಣಿ ಆನೆ ಹತ್ಯೆಗೈದ ಪ್ರಕರಣ- ಮೂವರು ಶಂಕಿತರು ವಶಕ್ಕೆ

    ಗರ್ಭಿಣಿ ಆನೆ ಹತ್ಯೆಗೈದ ಪ್ರಕರಣ- ಮೂವರು ಶಂಕಿತರು ವಶಕ್ಕೆ

    ತಿರುವನಂತಪುರಂ: ಪೈನಾಪಲ್‍ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಹತ್ಯೆಗೈದ ಪ್ರಕರಣದ ಸಂಬಂಧ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

    ಶಂಕಿತ ಮೂವರು ಆರೋಪಿಗಳು ಕೇರಳದ ಮಲಪ್ಪುರಂ ಜಿಲ್ಲೆಯ ಮನ್ನಾರ್ಕಡ್ ಅರಣ್ಯ ಪ್ರದೇಶದವರಾಗಿದ್ದಾರೆ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಗರ್ಭಿಣಿ ಆನೆ ಮೃತಪಟ್ಟಿದೆ. ಈ ಸಂಬಂಧ ಅನೇಕರು ನಮಗೆ ದೂರು ನೀಡಿದ್ದಾರೆ. ನಿಮ್ಮ ಕಾಳಜಿ ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ ಎಂದು ಭರವಸೆ ನೀಡುತ್ತೇನೆ. ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.

    ಮೂವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ ಪ್ರಕರಣದ ತನಿಖೆ ನಡೆಸಲಿವೆ. ಜಿಲ್ಲಾ ಪೊಲೀಸ್ ಮುಖ್ಯಸ್ಥ ಮತ್ತು ಜಿಲ್ಲಾ ಅರಣ್ಯ ಅಧಿಕಾರಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದರು. ಆರೋಪಿಗಳನ್ನು ನ್ಯಾಯಕ್ಕೆ ತರಲು ನಾವು ಎಲ್ಲ ಸಿದ್ಧತೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?:
    ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದರು. ನಂತರ ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಗಂಭೀರವಾಗಿ ಗಾಯಗೊಂಡಿತ್ತು. ಗರ್ಭಿಣಿ ಆನೆ ಯಾವೊಬ್ಬ ಗ್ರಾಮಸ್ಥರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಲ್ಲಿ ರಸ್ತೆ ತುಂಬಾ ಓಡಾಡಿತ್ತು. ಬಳಿಕ ವೆಲ್ಲಿಯಾರ್ ನದಿಯಲ್ಲಿ ಮುಳುಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ನೀಲಕಂಠನ್ ಹಾಗೂ ಸುರೇಂದ್ರನ್ ಎಂಬ ಎರಡು ಆನೆಗಳನ್ನು ಕರೆ ತಂದಿದ್ದು, ಅಷ್ಟೊತ್ತಿಗಾಗಲೇ ಸಂಜೆ 4ರ ಸುಮಾರಿಗೆ ಆನೆ ನದಿಯಲ್ಲೇ ಸಾವನ್ನಪ್ಪಿತ್ತು.

    ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿದ್ದರು.

    ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಕೇಂದ್ರ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್, ಕೇರಳದಲ್ಲಿ ಆನೆಯ ಹತ್ಯೆಯ ಪ್ರಕರಣವನ್ನು ಕೇಂದ್ರ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಸೂಚನೆ ನೀಡಲಾಗಿದೆ. ಆಹಾರದಲ್ಲಿ ಪಟಾಕಿ ಇಟ್ಟು ಕೊಲ್ಲುವುದು ಭಾರತೀಯ ಸಂಸ್ಕೃತಿಯಲ್ಲ ಎಂದು ಕಿಡಿಕಾರಿದ್ದರು.

  • ಪ್ರಾಣಿಗಳೊಂದಿಗೆ ಹೇಡಿತನದ ಕೃತ್ಯಕ್ಕೆ ಅಂತ್ಯ ಹಾಡೋಣ- ವಿರಾಟ್ ಕರೆ

    ಪ್ರಾಣಿಗಳೊಂದಿಗೆ ಹೇಡಿತನದ ಕೃತ್ಯಕ್ಕೆ ಅಂತ್ಯ ಹಾಡೋಣ- ವಿರಾಟ್ ಕರೆ

    ಮುಂಬೈ: ಪೈನಾಪಲ್‍ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಕೊಲೆಗೈದ ಹೀನ ಕೃತ್ಯವನ್ನು ಕ್ರೀಡಾಪಟುಗಳು ಖಂಡಿಸಿ, ಅಸಮಾಧಾನ ಹೊರಹಾಕಿದ್ದಾರೆ. ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

    ಆನೆ ಹಾಗೂ ಅದರ ಗರ್ಭದಲ್ಲಿ ಮರಿಯಾನೆ ಇರುವ ಕಾರ್ಟೂನ್ ಫೋಟೋವನ್ನು ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, “ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು, ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ” ಎಂದು ಕರೆ ನೀಡಿದ್ದಾರೆ.

    ಟೀಂ ಇಂಡಿಯಾ ಸ್ಪಿನ್ನರ್ ಹರ್ಭಜನ್ ಸಿಂಗ್, “ಪೈನಾಪಲ್‍ನಲ್ಲಿ ಪಟಾಕಿ ತುಂಬಿ ಗರ್ಭಿಣಿ ಆನೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಮುಗ್ಧ ಆನೆ ಮೇಲೆ ಇಂತಹ ಕ್ರೌರ್ಯ ಎಸೆಗಿದ್ದು ಎಷ್ಟು ಸರಿ” ಎಂದು ಪ್ರಶ್ನಿಸಿದ್ದಾರೆ. ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಟ್ವಿಟ್ ಮಾಡಿ, ಇದು ತುಂಬಾ ದುಃಖಕರ ಘಟನೆ ಎಂದು ಹೇಳಿದ್ದಾರೆ.

    ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ, “ಅವಳು ಮುಗ್ಧ ಗರ್ಭಿಣಿ ಆನೆ. ರಾಕ್ಷಸರೇ ನೀವು ಶಿಕ್ಷೆ ಅನುಭವಿಸುತ್ತೀರಾ ಎಂದು ಭಾವಿಸುತ್ತೇನೆ. ನಾವು ಪ್ರಕೃತಿಯನ್ನು ಮತ್ತೆ ಮತ್ತೆ ವಿಫಲಗೊಳಿಸುತ್ತಲೇ ಇರುತ್ತೇವೆ. ಹಾಗಾಗಿ ನಾವು ಹೆಚ್ಚು ವಿಕಸನಗೊಂಡಿರುವ ಪ್ರಭೇದ ಎನ್ನುವುದನ್ನು ನನಗೆ ತಿಳಿಸಿಕೊಡಿ” ಎಂದು ಟ್ವಿಟ್ ಮಾಡಿದ್ದಾರೆ.

    ಏನಿದು ಪ್ರಕರಣ?:
    ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದರು. ನಂತರ ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಗಂಭೀರವಾಗಿ ಗಾಯಗೊಂಡಿತ್ತು. ಗರ್ಭಿಣಿ ಆನೆ ಯಾವೊಬ್ಬ ಗ್ರಾಮಸ್ಥರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಲ್ಲಿ ರಸ್ತೆ ತುಂಬಾ ಓಡಾಡಿತ್ತು. ಬಳಿಕ ವೆಲ್ಲಿಯಾರ್ ನದಿಯಲ್ಲಿ ಮುಳುಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ನೀಲಕಂಠನ್ ಹಾಗೂ ಸುರೇಂದ್ರನ್ ಎಂಬ ಎರಡು ಆನೆಗಳನ್ನು ಕರೆ ತಂದಿದ್ದು, ಅಷ್ಟೊತ್ತಿಗಾಗಲೇ ಸಂಜೆ 4ರ ಸುಮಾರಿಗೆ ಆನೆ ನದಿಯಲ್ಲೇ ಸಾವನ್ನಪ್ಪಿತ್ತು.

    ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿದ್ದರು.

  • 12 ವರ್ಷದ ಬಾಲಕಿ ಮೇಲೆ 2 ವರ್ಷದಿಂದ 30 ಮಂದಿ ರೇಪ್- ತಂದೆ ಅರೆಸ್ಟ್

    12 ವರ್ಷದ ಬಾಲಕಿ ಮೇಲೆ 2 ವರ್ಷದಿಂದ 30 ಮಂದಿ ರೇಪ್- ತಂದೆ ಅರೆಸ್ಟ್

    ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ 2 ವರ್ಷದಿಂದ 30 ಮಂದಿ ಅತ್ಯಾಚಾರಗೈದ ಪ್ರಕರಣವೊಂದು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಸದ್ಯ ಬಾಲಕಿಯನ್ನು ಆಶ್ರಯ ಮನೆಗೆ ಕಳುಹಿಸಲಾಗಿದೆ. ಹಣಕ್ಕಾಗಿ ಮನೆಯವರೇ ಆಕೆಯ ಮೇಲೆ ಅತ್ಯಾಚಾರ ಮಾಡಿಸಿರುವುದಾಗಿ ತಿಳಿದುಬಂದಿದೆ.

    ಬೆಳಕಿಗೆ ಬಂದಿದ್ದು ಹೇಗೆ?
    ಶಾಲೆಯಲ್ಲಿ ಕೌನ್ಸಿಲಿಂಗ್ ನಡೆದ ವೇಳೆ ಬಾಲಕಿಯ ಮೇಲೆ ನಡೆದ ಕೃತ್ಯ ಬಯಲಾಗಿದೆ. ಮನೆಯಲ್ಲಿ ಏನು ಮಾಡುತ್ತೀಯಾ ಎಂದು ಕೇಳಿದಾಗ ಬಾಲಕಿ ತನ್ನ ಮೇಲೆ ಅತ್ಯಾಚಾರವಾದ ಘಟನೆಯನ್ನು ವಿವರಿಸಿದ್ದಾಳೆ. ಬಾಲಕಿಯ ಮಾತುಗಳನ್ನು ಕೇಳುತ್ತಿದ್ದ ಕೌನ್ಸಿಲರ್ ಗಳೇ ಒಂದು ಬಾರಿ ದಂಗಾಗಿದ್ದಾರೆ. ತನ್ನ ಕುಟುಂಬವನ್ನು ನಿಭಾಯಿಸಲು ಬಾಲಕಿ ಇಷ್ಟು ಚಿಕ್ಕ ವಯಸ್ಸಿನಲ್ಲಿ ಇಂತಹ ಕೆಲಸ ಮಾಡಿರುವುದು ಕೌನ್ಸಿಲರ್ ಗಳಿಗೇ ಅಚ್ಚರಿ ಮೂಡಿಸಿದೆ.

    ಆಕೆಯ ಕುಟುಂಬಕ್ಕೆ ಹಣದ ಅವಶ್ಯಕತೆ ಇತ್ತು. ಹೀಗಾಗಿ ಆಕೆ ಮೊದಲು ತನ್ನ ತಂದೆಯ ಗೆಳೆಯನಿಂದಲೇ ಅತ್ಯಾಚಾರಕ್ಕೆ ಒಳಗಾದಳು. ಆತ ಆಕೆಯ ಮೇಲೆ ಅತ್ಯಾಚಾರ ಮಾಡಿ ನಂತರ ಬಾಲಕಿಯ ತಂದೆಗೆ ಹಣದ ಅವಶ್ಯಕತೆ ಇದ್ದಾಗ ಹಣ ಕೊಡುತ್ತಿದ್ದನು. ಇಷ್ಟು ಮಾತ್ರವಲ್ಲದೇ ಬಾಲಕಿಯ ತಾಯಿಯನ್ನು ಕೂಡ ತಂದೆ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದನು.

    ಸದ್ಯ ಬಾಲಕಿಯ ಹೇಳಿಕೆಗಳನ್ನು ಕೌನ್ಸಿಲರ್ಸ್ ರೆಕಾರ್ಡ್ ಮಾಡಿಕೊಂಡಿದ್ದು, ರೇಪ್ ಮಾಡಿರುವುದು ನಿಜನಾ ಎಂದು ತಿಳಿಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

    ಪ್ರಕರಣ ಸಂಬಂಧ ಐಪಿಸಿ ಮತ್ತು ಪೋಕ್ಸೋ ಆ್ಯಕ್ಟ್ 354(ಮಾನ ಭಂಗ ಆರೋಪ) ಹಾಗೂ 376(ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತಂದೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ ಬಾಲಕಿಯ ತಾಯಿ ಮಾತ್ರ ಇವೆಲ್ಲವನ್ನೂ ಅಲ್ಲಗೆಳೆದಿದ್ದು, ನಮ್ಮ ವಿರುದ್ಧ ಪಿತೂರಿ ಮಾಡಲಾಗುತ್ತಿದೆ. ಹೀಗಾಗಹಿ ಮಗಳನ್ನು ನಮಗೆ ವಾಪಸ್ ಕೊಡಿ ಎಂದು ಹೇಳಿದ್ದಾರೆ.

  • ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿ

    ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿ

    -ಒಟ್ಟಿಗೆ ಸಮಾಧಿ ಮಾಡಿ ಕಣ್ಣೀರಿಟ್ಟ ಪೋಷಕರು

    ತಿರುವನಂತಪುರಂ: ಪರಸ್ಪರ ತಬ್ಬಿಕೊಂಡೇ ಮಲಗುತ್ತಿದ್ದ ಅಕ್ಕ-ತಂಗಿ ಭೂಕುಸಿತಕ್ಕೆ ಬಲಿಯಾದ ಮನಕಲಕುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

    ಮಲಪ್ಪುರಂ ಜಿಲ್ಲೆಯ ನಿಲಾಂಬೂರು ಪಟ್ಟಣದಿಂದ 25 ಕಿ.ಮೀ ದೂರದಲ್ಲಿರುವ ಪುಟ್ಟ ಕವಲಪ್ಪರ ಗ್ರಾಮದ ಅನಘಾ (4) ಮತ್ತು ಅಲೀನಾ(8) ಮೃತ ಸಹೋದರಿಯರು. ಮುತಪ್ಪನ್ ಕುನ್ನು ಬೆಟ್ಟದಲ್ಲಿ ಗುರುವಾರ ಸಂಭವಿಸಿದ್ದ ಭೂಕುಸಿತದಲ್ಲಿ ಮೃತಪಟ್ಟಿದ್ದ ಸಹೋದರಿಯರ ಮೃತದೇಹವು ಸೋಮವಾರ ಸಿಕ್ಕಿದ್ದು, ಅಂದೇ ಇಬ್ಬರನ್ನು ಒಂದೇ ಜಾಗದಲ್ಲಿ ಸಮಾಧಿ ಮಾಡಿ ಪೋಷಕರು ಕಣ್ಣೀರಿಟ್ಟಿದ್ದಾರೆ.

    ಪುಟ್ಟ ಕವಲಪ್ಪರ ಗ್ರಾಮದ ವಿಕ್ಟರ್ ಹಾಗೂ ಥಾಮಸ್ ಸಹೋದರರ ಮನೆಯು ಕವಲಪ್ಪರ ಗ್ರಾಮದ ಮುತಪ್ಪಂಕ್ ಬೆಟ್ಟದ ಅತ್ಯಂತ ಮೇಲ್ಭಾಗದಲ್ಲಿತ್ತು. ಈ ಇಬ್ಬರಲ್ಲಿ ಒಬ್ಬರು ಬಡಗಿ ಮತ್ತು ಮತ್ತೊಬ್ಬರು ಪೇಂಟಿಂಗ್ ಕೆಲಸ ಮಾಡಿ, ಜೀವನ ನಡೆಸುತ್ತಿದ್ದರು. ವಿಕ್ಟರ್ ಹಾಗೂ ಥಾಮಸ್ ಅವರಿಗೆ ಐವರು ಮಕ್ಕಳಿದ್ದು, ಪತ್ನಿಯರ ಜೊತೆಗೆ ಪುಟ್ಟ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಕಾಣಿಸಿಕೊಂಡ ಮಳೆ ಅವರ ಬದುಕನ್ನೇ ಕಿತ್ತುಕೊಂಡಿದೆ.

    ವಿಕ್ಟರ್ ಹಾಗೂ ಥಾಮಸ್ ಅವರ ಮಕ್ಕಳಾದ ಅನಘಾ ಮತ್ತು ಅಲೀನಾ ಒಟ್ಟಾಗಿ ಇರುತ್ತಿದ್ದರು. ಮಲಗುವಾಗಲೂ ಅಷ್ಟೇ ಒಂದೇ ಚಾಪೆಯ ಮೇಲೆ ಪರಸ್ಪರ ತಬ್ಬಿಕೊಂಡು ಮಲಗುತ್ತಿದ್ದರು. ಆದರೆ ಗುರುವಾರ ರಾತ್ರಿ ಕವಲಪ್ಪರಾದ ಮುತಪ್ಪಂಕ್ ಬೆಟ್ಟದಲ್ಲಿ ಭೂಕುಸಿತ ಉಂಟಾಗಿ ಸುಮಾರು 40 ಮನೆಗಳು ನಾಶವಾದವು. ಈ ವೇಳೆ ವಿಕ್ಟೋರ್ ಹಾಗೂ ಥಾಮಸ್ ಅವರ ಮನೆ ಭೂಕುಸಿತಕ್ಕೆ ಒಳಗಾಗಿ ಮಣ್ಣಿನ ಅಡಿ ಸಿಲುಕ್ಕಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಅವರು ಪತ್ನಿಯರು ಹಾಗೂ ಮೂವರು ಮಕ್ಕಳನ್ನು ಕರೆದುಕೊಂಡು ಮನೆಯಿಂದ ಆಚೆಗೆ ಬಂದಿದ್ದರು. ಆದರೆ ಅನಘಾ ಮತ್ತು ಅಲೀನಾ ಮನೆಯಲ್ಲಿಯೇ ಉಳಿದಿದ್ದರಿಂದ ಮಣ್ಣಿನ ಅಡಿ ಸಿಕ್ಕು ಮೃತಪಟ್ಟಿದ್ದರು.

    ಮನೆಯಿಂದ ಹೊರಗೆ ಬಂದಿದ್ದ ವಿಕ್ಟರ್ ಇಬ್ಬರು ಹುಡುಗಿಯರನ್ನು ಹುಡುಕಲು ಇತರರೊಂದಿಗೆ ಮರಳಿದ್ದರು. ಮನೆ ಸಂಪೂರ್ಣವಾಗಿ ನೆಲ ಸಮವಾಗಿತ್ತು. ಇದನ್ನು ನೋಡಿದ ಅವರು ಸುಮಾರು ಗಂಟೆಗಳ ಕಾಲ ಮಣ್ಣು ಅಗೆದರು. ಆದರೆ ಮಕ್ಕಳು ಸಿಗಲಿಲ್ಲ ಎಂದು ಕವಲಪ್ಪರ ನಿವಾಸಿ ಅಯ್ಯಪ್ಪನ್ ಹೇಳಿದ್ದಾರೆ.

    ಮಲಪ್ಪುರಂ ಜಿಲ್ಲೆಯ ಭೂತಾನಂನ ಸೇಂಟ್ ಮೇರಿಸ್ ಚರ್ಚ್ ನಲ್ಲಿ ಸೋಮವಾರ ಜನಸಮೂಹ ಜಮಾಯಿಸಿತ್ತು. ಪೋಷಕರು ಕಣ್ಣೀರಿಡುತ್ತಾ ಅನಘಾ ಹಾಗೂ ಅಲೀನಾ ಮೃತ ದೇಹವನ್ನು ಪ್ರತ್ಯೇಕ ಪೆಟ್ಟಿಗೆಯಲ್ಲಿ ಇಟ್ಟು ಸಮಾಧಿ ಮಾಡಿದರು. ಈ ವೇಳೆ ಅಲ್ಲಿ ನೆರೆದಿದ್ದ ಜನರು ಪುಟ್ಟ ಮಕ್ಕಳನ್ನು ನೆನೆದು ಕಣ್ಣೀರಿಟ್ಟರು.

    ಗುರುವಾರ ಸಂಭವಿಸಿದ ಗುಟ್ಟ ಕುಸಿತದಲ್ಲಿ ಸಾವನ್ನಪ್ಪಿದವರ ಪೈಕಿ ಇಬ್ಬರು ಬಾಲಕಿಯರು ಸೇರಿದಂತೆ 14 ಜನರ ಮೃತ ದೇಹಗಳು 55ಕ್ಕೂ ಹೆಚ್ಚು ಜನರ ಮೃತ ದೇಹಗಳು ಅವಶೇಷಗಳ ಅಡಿಯಲ್ಲಿವೆ ಎಂದು ಹೇಳಲಾಗುತ್ತಿದೆ.