Tag: ಮಲಬಾರ್ ಗೋಲ್ಡ್

  • ಉಡುಪಿ ಮಲಬಾರ್  ಗೋಲ್ಡ್‌ನಿಂದ 18 ಲಕ್ಷ ರೂ. ಫುಡ್ ಕಿಟ್ ವಿತರಣೆ

    ಉಡುಪಿ ಮಲಬಾರ್  ಗೋಲ್ಡ್‌ನಿಂದ 18 ಲಕ್ಷ ರೂ. ಫುಡ್ ಕಿಟ್ ವಿತರಣೆ

    ಉಡುಪಿ: ಕೊರೊನಾ ಎರಡನೇ ಅಲೆಯ ಸಂದರ್ಭ ಉಡುಪಿಯ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಸಂಸ್ಥೆ 18 ಲಕ್ಷ ರೂಪಾಯಿ ವೆಚ್ಚದ ಕಿಟ್ ಗಳನ್ನು ಸಾರ್ವಜನಿಕರಿಗೆ ಹಂಚಿ ಮಾನವೀಯತೆ ಮೆರೆದಿದೆ.

    ಉಡುಪಿಯ ಜ್ಯುವೆಲ್ಲರಿ ಮಳಿಗೆ ಮಲಬಾರ್ ಗೋಲ್ಡ್ ಚಾರಿಟೇಬಲ್ ಟ್ರಸ್ಟ್ ನ ಸಾಮಾಜಿಕ ಸೇವೆ ಮುಂದುವರಿದಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 25 ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾನುಗಳನ್ನು ವಿತರಣೆ ಮಾಡಲಾಯಿತು. ಮಲಬಾರ್ ಗೋಲ್ಡ್ ಸಿಬ್ಬಂದಿಗಳು, ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರು ಕಿಟ್ ಗಳನ್ನು ವಿತರಣೆ ಮಾಡಿದರು.

    ಉಪ್ಪೂರು ಪಂಚಾಯತ್ ವ್ಯಾಪ್ತಿಯ ಆರ್ಥಿಕವಾಗಿ ಸಂಕಷ್ಟದಲ್ಲಿರುವ, ಕೂಲಿಕಾರ್ಮಿಕ ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಯ್ತು. ಈ ಸಂದರ್ಭದಲ್ಲಿ, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಇರ್ಷಾದ್, ನಿತಿನ್ ಶೇಟ್, ತಸ್ಲೀಮ್, ಫಯಾಜ್ ಉಪಸ್ಥಿತರಿದ್ದರು. ಕಳೆದ ಒಂದು ತಿಂಗಳಲ್ಲಿ ಮಲಬಾರ್ ಗೋಲ್ಡ್ 18 ಲಕ್ಷ ರುಪಾಯಿ ವೆಚ್ಚದ, 3000 ಫುಡ್ ಕಿಟ್ ವಿತರಣೆ ಮಾಡಿದೆ. ಜಿಲ್ಲೆಯ 80 ಕ್ಕೂ ಹೆಚ್ಚು ಗ್ರಾಮಗಳಿಗೆ ಟ್ರಸ್ಟ್ ದಿನಸಿಯನ್ನು ಒದಗಿಸಿದೆ.

    ಮಲಬಾರ್ ಗೋಲ್ಡ್ ಉಡುಪಿ ಇದರ ಸ್ಟೋರ್ ಹೆಡ್ ಹಫೀಜ್ ರೆಹಮಾನ್ ಮಾತನಾಡಿ, ನಮ್ಮ ಸಂಸ್ಥೆ ಆರಂಭದ ದಿನಗಳಿಂದಲೂ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದೆ. ಕೊರೊನಾ ಸಂದರ್ಭದಲ್ಲಿ ಬಹಳಷ್ಟು ಜನ ಇಕ್ಕಟ್ಟಿಗೆ ಸಿಲುಕಿದ್ದಾರೆ. ಆರ್ಥಿಕವಾಗಿ ಬಹಳ ಹಿಂದುಳಿದ ಜನಗಳನ್ನು ಗುರುತಿಸಿ ಅವರ ದೈನಂದಿನ ಜೀವನಕ್ಕೆ ಬಳಕೆಯಾಗುವ ವಸ್ತುಗಳನ್ನು ಕೊಡುತ್ತಿದ್ದೇವೆ. ಸಂಕಷ್ಟದ ಕಾಲದಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲದಿದ್ದರೆ ದೇವರು ಮೆಚ್ಚುವುದಿಲ್ಲ. ದಿನಸಿ ಕಿಟ್ ಗಳ ಜೊತೆ ಅನಾರೋಗ್ಯ ಪೀಡಿತರಿಗೆ ಹೆಲ್ತ್ ಕಿಟ್ ಗಳನ್ನು ಕೂಡ ಕೊಟ್ಟಿದ್ದೇವೆ ಎಂದರು.

  • ಜ್ಞಾನದೀವಿಗೆ ಸರ್ಕಾರಿ ಮಕ್ಕಳ ದಾರಿದೀಪ- ಮಲಬಾರ್ ಗೋಲ್ಡ್ ಸಾಮಾಜಿಕ ಕಾಳಜಿಗೆ ಉಡುಪಿ ಡಿಸಿ ಮೆಚ್ಚುಗೆ

    ಜ್ಞಾನದೀವಿಗೆ ಸರ್ಕಾರಿ ಮಕ್ಕಳ ದಾರಿದೀಪ- ಮಲಬಾರ್ ಗೋಲ್ಡ್ ಸಾಮಾಜಿಕ ಕಾಳಜಿಗೆ ಉಡುಪಿ ಡಿಸಿ ಮೆಚ್ಚುಗೆ

    ಉಡುಪಿ: ಮೊಬೈಲ್, ಟಿವಿ ಇಲ್ಲದ ಸಾಕಷ್ಟು ಕುಟುಂಬಗಳು ಉಡುಪಿ ಜಿಲ್ಲೆಯಲ್ಲಿವೆ. ಸಂಕಷ್ಟದ ಸಂದರ್ಭದಲ್ಲಿ ಪಬ್ಲಿಕ್ ಟಿವಿ ಮತ್ತು ರೋಟರಿ ಸಂಸ್ಥೆ ಸಹಯೋಗದ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಮಲಬಾರ್ ಗೋಲ್ಡ್ ಸಂಸ್ಥೆ ಕೈಜೋಡಿಸಿರುವುದು ನಮಗೆ ಸಂತಸ ಮತ್ತು ಹೆಮ್ಮೆಯ ವಿಷಯ ಎಂದು ಡಿಸಿ ಜಿ. ಜಗದೀಶ್ ಸಂತಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿ ಸುದ್ದಿವಾಹಿನಿ ಮತ್ತು ರೋಟರಿ ಇಂಟರ್ ನ್ಯಾಷನಲ್ ಸಹಯೋಗದ ಜ್ಞಾನ ದೀವಿಗೆ ಉಚಿತ ಟ್ಯಾಬ್ ವಿತರಣಾ ಅಭಿಯಾನಕ್ಕೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆ ಕೈಜೋಡಿಸಿದೆ. ಉಡುಪಿ ಜಿಲ್ಲೆಯ ಎರಡು ಸರ್ಕಾರಿ ಶಾಲೆಗಳಿಗೆ 100 ಟ್ಯಾಬ್ ಗಳನ್ನು ವಿತರಣೆ ಮಾಡಿದೆ.

    ಕುಂದಾಪುರ ತಾಲೂಕು, ಸಿದ್ದಾಪುರ ಸರ್ಕಾರಿ ಶಾಲೆಯ 100 ಮಕ್ಕಳಿಗೆ, ಸರ್ಕಾರಿ ಪ್ರೌಢಶಾಲೆ ಹೆಬ್ರಿಯ 100 ಮಕ್ಕಳಿಗೆ ಉಪಯೋಗವಾಗುವ ಟ್ಯೂಬ್ ಗಳನ್ನು ಮಲಬಾರ್ ಗೋಲ್ಡ್ ಸಂಸ್ಥೆ ನೀಡಿದೆ. 3,45,000 ರೂಪಾಯಿ ಮೊತ್ತದ ಟ್ಯೂಬ್ ಗಳನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಣೆ ಮಾಡಲಾಯಿತು. ಮಲಬಾರ್ ಗೋಲ್ಡ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ಭಾಗವಹಿಸಿ ಮಾತನಾಡಿದರು.

    ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಅವರ ಸಮಾಜಮುಖಿ ಕಾರ್ಯ ಶ್ಲಾಘನೀಯ. ಮಕ್ಕಳ ಶಿಕ್ಷಣಕ್ಕೆ ದೇಣಿಗೆ ದೊಡ್ಡ ಮಟ್ಟದ ನೀಡಿದ್ದು, ತಂತ್ರಜ್ಞಾನ ಕೈಗೆಟುಕದ ಮಕ್ಕಳಿಗೆ ಬಹಳ ಉಪಯೋಗ ಆಗಲಿದೆ. ಹಳ್ಳಿಯ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ, ಮಕ್ಕಳ ಏಳಿಗೆಗಾಗಿ ಕೈಗೊಂಡ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಟ್ಯಾಬ್ ಗಳು ಪೂರಕವಾಗಲಿ. ಸಮಾಜದಲ್ಲಿ ಯಾರಿಗೆಲ್ಲಾ ಕೊಡುಗೆ ನೀಡಲು ಸಾಧ್ಯವೋ ಅವರು ಈ ಅಭಿಯಾನಕ್ಕೆ ಕೈಜೋಡಿಸಬೇಕು. ವಿದ್ಯಾದಾನ ಕೆಲಸ ಬಹಳ ಪುಣ್ಯದ ಕಾರ್ಯ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

    ಕೊರೊನಾ ಕಾಲದಲ್ಲಿ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಿದ್ದಾರೆ. ಹಳ್ಳಿಯ ಸರ್ಕಾರಿ ಬಡಮಕ್ಕಳಿಗೆ ಆನ್‍ಲೈನ್ ತರಗತಿಗಳು ಕೈಗೆಟುಕಲಿಲ್ಲ. ನಮ್ಮ ಲಾಭಾಂಶದ ಐದು ಶೇಕಡಾವನ್ನು ಸಾಮಾಜಿಕ ಚಟುವಟಿಕೆಗಳಿಗೆ ನಾವು ಆರಂಭದಿಂದಲೂ ನೀಡುತ್ತಾ ಬಂದಿದ್ದೇವೆ. ಶೈಕ್ಷಣಿಕ , ವೈದ್ಯಕೀಯ, ಪರಿಸರ, ಹೆಣ್ಣುಮಕ್ಕಳಿಗೆ ಚಿನ್ನ ಕೊಟ್ಟು ಮದುವೆ ಮಾಡಿಸುವ ಕೆಲಸದಲ್ಲಿ ಮಲಬಾರ್ ಗೋಲ್ಡ್ ತೊಡಗಿಸಿಕೊಂಡಿದೆ. ಈವರೆಗೆ ಮಲಬಾರ್ ಗೋಲ್ಡ್ ಸಂಸ್ಥೆ ಭಾರತದಲ್ಲಿ 130 ಕೋಟಿ ರೂಪಾಯಿಯಷ್ಟು ಸಹಾಯ ಮಾಡಿದ್ದೇವೆ. ಮುಂದೆಯೂ ಸಮಾಜಮುಖಿ ಕಾರ್ಯ ವಿಸ್ತರಿಸುತ್ತೇವೆ ಎಂದು ಸಂಸ್ಥೆಯ ಉಡುಪಿ ಹೆಡ್ ಹಫೀಜ್ ರೆಹಮಾನ್ ಹೇಳಿದರು.

    ಡಿಡಿಪಿಐ ಹೆಚ್‍ಎನ್ ನಾಗೂರ, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಉಡುಪಿಯ ಅಧ್ಯಕ್ಷೆ ರಾಧಿಕಾ ಲಕ್ಷ್ಮೀನಾರಾಯಣ ಈ ಸಂದರ್ಭದಲ್ಲಿ ಮಾತನಾಡಿದರು. ಟ್ಯಾಬ್ ಪಡೆದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸುವುದಾಗಿ ಭರವಸೆ ಕೊಟ್ಟರು. ವಿದ್ಯಾರ್ಥಿಗಳಿಗೆ ಸಂಸ್ಥೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಲಬಾರ್ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.