Tag: ಮಲೆ ಮಹದೇಶ್ವರ ದೇವಾಲಯ

  • ಮಲೆ ಮಹದೇಶ್ವರ ಹುಂಡಿ ಎಣಿಕೆ: ಬರೋಬ್ಬರಿ 1.32 ಕೋಟಿ ರೂ. ಸಂಗ್ರಹ

    ಮಲೆ ಮಹದೇಶ್ವರ ಹುಂಡಿ ಎಣಿಕೆ: ಬರೋಬ್ಬರಿ 1.32 ಕೋಟಿ ರೂ. ಸಂಗ್ರಹ

    ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಬಾರಿ ಬರೊಬ್ಬರಿ 1.32 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

    ಅಕ್ಟೋಬರ್ ತಿಂಗಳ ಕೊನೆಯ ದಿನವಾದ ಬುಧವಾರ ಎಣಿಕೆ ಕಾರ್ಯವನ್ನು ಆರಂಭಿಸಲಾಗಿತ್ತು. ಈ ವೇಳೆ ಒಟ್ಟು 1,32,83,620 ರೂ. ಸಂಗ್ರಹವಾಗಿದೆ. ಅಲ್ಲದೇ 45 ಗ್ರಾಂ ಚಿನ್ನ ಹಾಗೂ 1 ಕೆಜಿ 5 ಗ್ರಾಂ ಬೆಳ್ಳಿಯ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ.

    ಹುಂಡಿ ಎಣಿಕೆ ಕಾರ್ಯವನ್ನು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ.ರೂಪಾ ಹಾಗೂ ಸಾಲೂರು ಮಠದ ಗುರುಸ್ವಾಮಿ ಸಮ್ಮುಖದಲ್ಲಿ ನೆರವೇರಿತ್ತು. ಎಸ್‍ಬಿಐ ಶಾಖೆಯ ಬ್ಯಾಂಕ್ ಸಿಬ್ಬಂದಿ ಹಾಗೂ ಸಿಸಿಟಿವಿಯ ಕಣ್ಗಾವಲಿನಲ್ಲಿ ಬುಧವಾರ ತಡರಾತ್ರಿಯವರೆಗೂ ಎಣಿಕೆ ಕಾರ್ಯ ನಡೆದಿತ್ತು.

    ಮಲೆ ಮಹದೇಶ್ವರ ದೇವಾಲಯವು ರಾಜ್ಯದಲ್ಲಿಯೇ ಮುಜರಾಯಿ ಇಲಾಖೆಗೆ ಅತಿ ಹೆಚ್ಚು ಆದಾಯ ತರುವ ದೇವಸ್ಥಾನಗಳ ಪೈಕಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ರತಿ ತಿಂಗಳ ಕೊನೆಯ ದಿನದಂದು ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಇದನ್ನೂ ಓದಿ: ಚಾಮುಂಡಿ ದೇವಸ್ಥಾನದಲ್ಲಿ ಕೋಟಿ ದಾಟಿದ ಹುಂಡಿ ಹಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ- ಭಕ್ತರಿಂದ ಹರಿದುಬಂದ ಕಾಣಿಕೆ ಇಷ್ಟು

    ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ- ಭಕ್ತರಿಂದ ಹರಿದುಬಂದ ಕಾಣಿಕೆ ಇಷ್ಟು

    ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 1 ಕೋಟಿ 11 ಲಕ್ಷದ 25 ಸಾವಿರದ 636 ರುಪಾಯಿ ನಗದು ಕಾಣಿಕೆಯಾಗಿ ದೊರತಿದೆ.

    ಇದರ ಜೊತೆಗೆ 25 ಗ್ರಾಂ ಚಿನ್ನ ಮತ್ತು 1 ಕೆ.ಜಿ 382 ಗ್ರಾಂ ಬೆಳ್ಳಿ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ. ಜನವರಿ 31ರ ತಡರಾತ್ರಿವರೆಗೂ ನಡೆದ ಹುಂಡಿ ಏಣಿಕೆ ಕಾರ್ಯದಲ್ಲಿ ಇಷ್ಟೊಂದು ಕಾಣಿಕೆ ಭಕ್ತರಿಂದ ಬಂದಿದೆ.

    ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ ರೂಪ ಅಧ್ಯಕ್ಷತೆಯಲ್ಲಿ, ಸಾಲೂರು ಮಠದ ಗುರುಸ್ವಾಮಿ ಸಮ್ಮಖದಲ್ಲಿ ಮತ್ತು ಎಸ್‍ಬಿಐ ಬ್ಯಾಂಕ್ ಸಿಬ್ಬಂದಿಗಳು ಸಿಸಿ ಕ್ಯಾಮಾರಾದ ಕಣ್ಗಾವಲಿನಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಸಿದರು.

    ಹುಂಡಿ ಎಣಿಕೆ ಕಾರ್ಯ ಪ್ರತಿ ತಿಂಗಳ ಕೊನೆಯ ದಿನದಂದು ನಡೆಯುತ್ತದೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಆದಾಯ ತರುವ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ 2ನೇ ಸ್ಥಾನವನ್ನ ಮಲೆ ಮಹದೇಶ್ವರ ದೇವಾಲಯದ ಪಡೆದುಕೊಂಡಿದೆ.