Tag: ಮಲ್ಪೆ

  • ನಾಪತ್ತೆಯಾದ ಮೀನುಗಾರರನ್ನು ಹುಡುಕಲು ನಾವೇನು ಸಮುದ್ರಕ್ಕೆ ಹಾರ್ಬೇಕಾ- ಸಚಿವ ನಾಡಗೌಡ ಪ್ರಶ್ನೆ

    ನಾಪತ್ತೆಯಾದ ಮೀನುಗಾರರನ್ನು ಹುಡುಕಲು ನಾವೇನು ಸಮುದ್ರಕ್ಕೆ ಹಾರ್ಬೇಕಾ- ಸಚಿವ ನಾಡಗೌಡ ಪ್ರಶ್ನೆ

    ರಾಯಚೂರು: ಉಡುಪಿಯ ಮಲ್ಪೆಯಿಂದ ಹೊರಟಿರುವ ಮೀನುಗಾರರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಅಗತ್ಯ ಕ್ರಮಗಳನ್ನೆಲ್ಲ ತೆಗೆದುಕೊಂಡಿದ್ದೇವೆ. ಆದರೂ ಹೋರಾಟ ಮಾಡುತ್ತಿದ್ದಾರೆ ಮೀನುಗಾರರನ್ನ ಹುಡುಕಲು ನಾವೇನು ಸಮುದ್ರಕ್ಕೆ ಹಾರಬೇಕೇ ಎಂದು ಪಶುಸಂಗೋಪನಾ, ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಪ್ರಶ್ನಿಸಿದ್ದಾರೆ.

    ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ವೆಂಕಟರಾವ್, ನಮ್ಮಲ್ಲಿ ಯಾವ ಫೋರ್ಸ್ ಗಳಿವೆ. ನಮ್ಮಲ್ಲಿರುವ ಜ್ಞಾನದಿಂದ ಅವರನ್ನು ವಾಪಸ್ ಕರೆತರುವ ಪ್ರಯತ್ನವನ್ನು ಅವರು ನಾಪತ್ತೆಯಾದ ಮೊದಲ ದಿನದಿಂದಲೇ ಮಾಡಿದ್ದೇವೆ ಅಂದ್ರು.

    ಮೀನುಗಗಾರರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವುದು ಬಿಟ್ಟರೆ ನಮ್ಮಲ್ಲಿ ಬೇರೆ ದಾರಿಗಳಿಲ್ಲ. ಪ್ರತಿಭಟನೆ ಮಾಡಲಿ. ಅದಕ್ಕೆ ನಾವೇನು ಮಾಡೋಕೆ ಆಗುತ್ತೆ. ನಾವು ತೆರೆದ ಮನಸ್ಸಿನಿಂದ ಎಲ್ಲದಕ್ಕೂ ತಯಾರಿದ್ದೇವೆ. ಹೀಗಾಗಿ ಅಲ್ಲಿಯ ಮುಖಂಡರಾದ್ರು ನೀವು ಈ ರೀತಿ ಮಾಡಿದ್ರೆ ಹುಡುಕಬಹುದು, ಪತ್ತೆ ಮಾಡಬಹುದೆಂದು ಹೇಳಬೇಕು ಅಲ್ವಾ ಎಂದು ಅವರು ಪ್ರಶ್ನಿಸಿದ್ರು. ಇದನ್ನೂ ಓದಿ: ಕಸುಬಿಗಾಗಿ ಕಡಲಿಗಿಳಿದವರು ಕಣ್ಮರೆ- ಇದು ಮಿಸ್ಸಿಂಗ್ ಸೆವೆನ್ ಮಿಸ್ಟರಿ

    ಬರೀ ಪ್ರತಿಭಟನೆ ಮಾಡುತ್ತೇವೆ ಅಂದ್ರೆ ನಾವೇನು ಮಾಡಬೇಕು. ಸಮುದ್ರದಕ್ಕೆ ಎಗರಬೇಕಾ ಎಂದು ಪ್ರಶ್ನಿಸಿದ ಸಚಿವರು, ಅವರು ಸಲಹೆಗಳನ್ನು ನೀಡಲಿ. ಈ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದೇವೆ. ಅವರು ಏನು ಮಾಡಬೇಕು? ನಮ್ಮಿಂದ ಏನ್ ನಿರೀಕ್ಷೆ ಮಾಡ್ತಾರೆ? ಎನ್ನುವುದನ್ನು ಹೇಳಿದ್ರೆ ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ ಎಂದು ಅವರು ತಿಳಿಸಿದ್ರು. ಇದನ್ನೂ ಓದಿ: ಕಡಲ ಮಕ್ಕಳಲ್ಲಿ ಭಯಬೇಡ, 7 ಮೀನುಗಾರರು ಜೀವಂತ ಬರುತ್ತಾರೆ: ಸಚಿವೆ ಜಯಮಾಲಾ

    ಹೋರಾಟ ಮಾಡೋದಾದ್ರೆ ಅದಕ್ಕೊಂದು ಅರ್ಥ ಹಾಗೂ ಪರಿಹಾರ ಇರಲೇಬೇಕಲ್ವ. ನಮಗೂ ಅವರ ಬಗ್ಗೆ ಆತಂಕ ಇದೆ. ಹೀಗಾಗಿ ನಾವು ಎಲ್ಲಾ ವಿಧಗಳಿಂದ ಪ್ರಯತ್ನ ಮಾಡಿದ್ದೇವೆ. ಯಾವುದೇ ಕುರುಹುಗಳು ಈವರೆಗೆ ಸಿಕ್ಕಿಲ್ಲ. ಬೋಟ್ ಮುಳುಗಿದ್ರೆ ಡಿಸೇಲ್ ಆದ್ರೂ ಸಮುದ್ರದಲ್ಲಿ ತೇಲಬೇಕಿತ್ತು. ಒಟ್ಟಿನಲ್ಲಿ ನಮಗೆ ಮಾಹಿತಿ ಬಂದ 1 ಗಂಟೆಯಲ್ಲಿ ನಾವು ಅಲರ್ಟ್ ಆಗಿದ್ದೇವೆ. ಹೆಲಿಕಾಪ್ಟರ್ ಗಳನ್ನು ಕಳುಹಿಸಿದ್ದೇವೆ ಎಂದು ಅವರು ಹೇಳಿದ್ರು.

    ಇದೇ ವೇಳೆ ಸಚಿವ ಪುಟ್ಟರಂಗಶೆಟ್ಟಿ ಕಚೇರಿಯಲ್ಲಿ ಹಣ ಪತ್ತೆ ಪ್ರಕರಣ ತನಿಖೆಯಿಂದ ಬಯಲಾಗಿದೆ. ಈ ಹಿಂದೆ ಯಡಿಯೂರಪ್ಪ ಹಿಂಬಾಲಕರ ಬಳಿ ಹಣ ಸಿಕ್ಕಿದೆ ಆಗ ರಾಜೀನಾಮೆಯನ್ನು ಬಿಜೆಪಿ ಕೇಳಬೇಕಿತ್ತು. ವಿಧಾನಸೌಧಕ್ಕೆ ಯಾರು ಯಾರೋ ಬರುತ್ತಾರೆ. ಅಲ್ಲಿ ನಡೆದ ಹಣಕಾಸಿನ ವ್ಯವಹಾರ ತನಿಖೆಯಿಂದ ಗೊತ್ತಾಗಲಿದೆ ಎಂದು ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರೀಯ ಹೆದ್ದಾರಿ 4 ಗಂಟೆ ಬಂದ್- ಉಡುಪಿಯಲ್ಲಿ ಬೀದಿಗಿಳಿದ ಕಡಲ ಮಕ್ಕಳು

    ರಾಷ್ಟ್ರೀಯ ಹೆದ್ದಾರಿ 4 ಗಂಟೆ ಬಂದ್- ಉಡುಪಿಯಲ್ಲಿ ಬೀದಿಗಿಳಿದ ಕಡಲ ಮಕ್ಕಳು

    ಉಡುಪಿ: ಮಲ್ಪೆಯಿಂದ ಹೊರಟ ಮೀನುಗಾರಿಕಾ ಬೋಟ್ ನಾಪತ್ತೆಯಾಗಿ 25 ದಿನಗಳೇ ಕಳೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹುಡುಕಾಟ ನಡೆಸಿದರೂ ರಿಸಲ್ಟ್ ಬಂದಿಲ್ಲ. ಹೀಗಾಗಿ ಕಾದು-ಕಾದು ಸುಸ್ತಾದ ಕರಾವಳಿ ಮೂರು ಜಿಲ್ಲೆಯ ಸುಮಾರು 50 ಸಾವಿರ ಮೀನುಗಾರರು ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಗಂಟೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

    ಕರಾವಳಿ ಜಿಲ್ಲೆ ಉಡುಪಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೀನುಗಾರರು ಇಷ್ಟು ಸಂಖ್ಯೆಯಲ್ಲಿ ಬೀದಿಗಿಳಿದಿದ್ದರು. ಡಿಸೆಂಬರ್ 13ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಇನ್ನೂ ಪತ್ತೆಯಾಗಿಲ್ಲ. ಬೋಟ್ ನಲ್ಲಿದ್ದ 7 ಮೀನುಗಾರರ ಸುಳಿವೂ ಇಲ್ಲ. ನೌಕಾಸೇನೆ- ವಾಯುಸೇನೆ- ಪೊಲೀಸರು- ಕೋಸ್ಟ್ ಗಾರ್ಡ್ , ಮೀನುಗಾರರು ಎಷ್ಟು ಹುಡುಕಾಟ ನಡೆಸಿದರೂ ಪತ್ತೆ ಕಾರ್ಯ ಆಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಮೀನುಗಾರರು ಬೃಹತ್ ಜನಜಾಥಾ ಮಾಡಿದರು. ಸುಮಾರು 50 ಸಾವಿರ ಮೀನುಗಾರರು ಬೀದಿಗಿಳಿದು ಅಸಮಾಧಾನ ವ್ಯಕ್ತಗೊಳಿಸಿದರು. ಮಲ್ಪೆಯಿಂದ ಉಡುಪಿಯ ಅಂಬಲ್ಪಾಡಿಯವರೆಗೆ ಸುಮಾರು 8 ಕಿಲೋಮೀಟರ್ ಪಾದಯಾತ್ರೆ ಮಾಡಿ ಎರಡು ಹೈವೇಗಳನ್ನು ತಡೆದರು. ಇದನ್ನೂ ಓದಿ: ಕಸುಬಿಗಾಗಿ ಕಡಲಿಗಿಳಿದವರು 17 ದಿನದಿಂದ ಕಣ್ಮರೆ- ಇದು ಮಿಸ್ಸಿಂಗ್ ಸೆವೆನ್ ಮಿಸ್ಟರಿ

    ಆಳಸಮುದ್ರ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ, ನಮ್ಮ ನೋವನ್ನು ಇಂದು ವ್ಯಕ್ತ ಮಾಡಿದ್ದೇವೆ. ಸರ್ಕಾರ ಬಗ್ಗದಿದ್ದರೆ ಆಲ್ ಇಂಡಿಯಾ ಫಿಶರ್ ಮೆನ್ ಅಸೋಸಿಯೇಶನ್ ಸಂಪರ್ಕಿಸುವುದಾಗಿ ಎಚ್ಚರಿಕೆ ನೀಡಿದರು.

    ಪ್ರತಿಭಟನೆ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರು ಸಂಪೂರ್ಣ ಸ್ತಬ್ಧವಾಗಿತ್ತು. ಉಡುಪಿಯ ಸುಮಾರು 2 ಸಾವಿರ ಆಳಸಮುದ್ರದ ಬೋಟುಗಳು ಲಂಗರು ಹಾಕಿದ್ದವು. ನಾಡದೋಣಿಗಳು ಕಡಲಿಗಿಳಿಯಲಿಲ್ಲ. ಮಲ್ಪೆ ವ್ಯಾಪ್ತಿಯ ಎಲ್ಲಾ ಅಂಗಡಿಗಳು ಇಂದು ಬಾಗಿಲು ತೆಗೆಯಲೇ ಇಲ್ಲ. ಮೀನುಗಾರರ ಪಾದಯಾತ್ರೆಗೆ ಮಲ್ಪೆ- ತೀರ್ಥಹಳ್ಳಿ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವೇ ಇರಲಿಲ್ಲ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ ಇದ್ದರೂ ಉಡುಪಿ-ದಕ್ಷಿಣ ಕನ್ನಡದ ಬಿಜೆಪಿ ಶಾಸಕರು, ಮಾಜಿ ಸಚಿವರು, ಸಂಸದೆ ಶೋಭಾ ಕರಂದ್ಲಾಜೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ಕಡಲ ಮಕ್ಕಳಲ್ಲಿ ಭಯಬೇಡ, 7 ಮೀನುಗಾರರು ಜೀವಂತ ಬರುತ್ತಾರೆ: ಸಚಿವೆ ಜಯಮಾಲಾ

    ಪ್ರತಿಭಟನೆಯ ಕೊನೆಗೆ ಆಗಮಿಸಿ ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವೆ ಜಯಮಾಲಾ ಅವರ ಮಾತಿಗೆ ಮೀನುಗಾರರು ಆಕ್ರೋಶಗೊಂಡರು. ರೈತರಿಗಿಂತ ಹೆಚ್ಚು ಪರಿಹಾರ ಮೊಗವೀರರಿಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿದೆ ಎಂದಾಗ ಆಕ್ಷೇಪ ವ್ಯಕ್ತಪಡಿಸಿದರು. ಪರಿಹಾರ ಬೇಡ, ಏಳು ಮೀನುಗಾರರನ್ನು ಹುಡುಕಿಕೊಡಿ ಎಂದು ಒತ್ತಡ ಹಾಕಿದರು.

    ಸುಮಾರು ನಾಲ್ಕು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿದ್ದರಿಂದ ಪೊಲೀಸರು ಡೈವರ್ಶನ್ ಗೆ ಹರಸಾಹಸಪಟ್ಟರು. ಕೆಎಸ್‍ಆರ್ ಪಿ, ಡಿಎಆರ್, ಕ್ಷಿಪ್ರ ಕಾರ್ಯಾಚರಣಾ ತುಕಡಿ, ಡ್ರೋನ್ ಕ್ಯಾಮೆರಾ ಬಳಸಿ ಪರಿಸ್ಥಿತಿ ಕೈಮೀರದಂತೆ ಎಚ್ಚರ ವಹಿಸಿರುವದಾಗಿ ಎಸ್ ಪಿ ಲಕ್ಷ್ಮಣ ನಿಂಬರ್ಗಿ ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಮತ್ತಷ್ಟು ಶ್ರಮವಹಿಸಿ ಕಣ್ಮರೆಯಾದವರ ಹುಡುಕಾಟ ನಡೆಸದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾಗಿ ಮೀನುಗಾರರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಾಪತ್ತೆಯಾದ ಮೀನುಗಾರರ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ- ಶೋಭಾ ಕರಂದ್ಲಾಜೆ ಗಂಭೀರ ಆರೋಪ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಡಲ ಮಕ್ಕಳಲ್ಲಿ ಭಯಬೇಡ, 7 ಮೀನುಗಾರರು ಜೀವಂತ ಬರುತ್ತಾರೆ: ಸಚಿವೆ ಜಯಮಾಲಾ

    ಕಡಲ ಮಕ್ಕಳಲ್ಲಿ ಭಯಬೇಡ, 7 ಮೀನುಗಾರರು ಜೀವಂತ ಬರುತ್ತಾರೆ: ಸಚಿವೆ ಜಯಮಾಲಾ

    ಉಡುಪಿ: ಇಲ್ಲಿನ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಡಿಸೆಂಬರ್ 15 ರಿಂದ ನಾಪತ್ತೆಯಾಗಿರುವ ಏಳು ಮೀನುಗಾರರು ವಾಪಾಸ್ ಬರುತ್ತಾರೆ ಎಂಬ ನಂಬಿಕೆ ಇದೆ. ಅವರನ್ನು ಅಪಹರಿಸಿ ಒತ್ತೆ ಇಟ್ಟಿರುವ ಬಗ್ಗೆಯೂ ನಮಗೆ ಗುಮಾನಿ ಇದೆ. ಸರಕಾರದ ಮಟ್ಟದಲ್ಲಿ ಎಲ್ಲಾ ಶೋಧಕಾರ್ಯ ಮಾಡಿದ್ದೇವೆ ಎಂದು ಉಡುಪಿ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೀನುಗಾರರು ಸುರಕ್ಷಿತವಾಗಿ ವಾಪಾಸ್ ಬರುತ್ತಾರೆ ಎಂಬ ನಂಬಿಕೆಯಿದೆ. ಅಪಹರಿಸಿ ಒತ್ತೆ ಇಟ್ಟಿರುವ ಬಗ್ಗೆಯೂ ನಮಗೆ ಗುಮಾನಿ ಇದೆ. ಈ ಹಿಂದೆಯೂ ಒತ್ತೆ ಇಟ್ಟಿರುವ ಘಟನೆ ನಡೆದಿದೆ. ಕೇಂದ್ರ- ರಾಜ್ಯ ಸರ್ಕಾರ ಮೀನುಗಾರರ ಕುಟುಂಬದ ಜೊತೆಗಿದೆ. ನೌಕಾಸೇನೆ, ವಾಯುಸೇನೆ ಅಧಿಕಾರಿಗಳು, ಕೋಸ್ಟ್ ಗಾರ್ಡ್ ನಿರಂತರ ಹುಡುಕಾಟ ಮಾಡಿದ್ದಾರೆ. ಕೊಸ್ಟ್ ಗಾರ್ಡ್ ಇಲಾಖೆ ಕೂಡಾ ಕಾರ್ಯಾಚರಣೆ ಮಾಡುತ್ತಿದೆ ಎಂದು ಜಯಮಾಲಾ ಹೇಳಿದರು. ಇದನ್ನೂ ಓದಿ: ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ – ಭಾನುವಾರ ಬಂದರುಗಳು ಬಂದ್!

    ಪ್ರತಿಭಟನೆ ಕೈಬಿಡಿ:
    ಮೀನುಗಾರರು ನಾಳಿನ ಪ್ರತಿಭಟನೆ ಕೈಬಿಡಲಿ ಎಂದು ಮನವಿ ಮಾಡಿದ ಸಚಿವೆ, ಮೀನುಗಾರರ ನೋವು ನಮ್ಮ ನೋವೆಂದು ಭಾವಿಸಿದ್ದೇವೆ. ಗೃಹಸಚಿವರು ಉಡುಪಿಗೆ ಬಂದು ಸಭೆ ನಡೆಸುತ್ತಾರೆ. ಮೀನುಗಾರಿಕಾ ಸಚಿವರೂ ಉಡುಪಿಗೆ ಬರುತ್ತಾರೆ. ಭಯೋತ್ಪಾದಕ ಕೃತ್ಯ ಆಗಿದ್ದರೂ ಬಿಡಿಸಿಕೊಂಡು ತರುತ್ತೇವೆ. ಮೀನುಗಾರರು ಜೀವಂತ ಬಂದರೆ ಸಾಕು. ನಾನೂ ಕೂಡ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಸುಬಿಗಾಗಿ ಕಡಲಿಗಿಳಿದವರು 17 ದಿನದಿಂದ ಕಣ್ಮರೆ- ಇದು ಮಿಸ್ಸಿಂಗ್ ಸೆವೆನ್ ಮಿಸ್ಟರಿ

    ಡಿಸೆಂಬರ್13 ರಂದು ತೆರಳಿದ್ದ ಬೋಟ್ ಮಹಾರಾಷ್ಟ್ರ- ಗೋವಾ ಗಡಿಯಲ್ಲಿ ನಾಪತ್ತೆಯಾಗಿತ್ತು. ಬೋಟ್ ನಲ್ಲಿ ಉಡುಪಿಯ ಇಬ್ಬರು, ಉತ್ತರ ಕನ್ನಡದ ಐದು ಮೀನುಗಾರರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಲ್ಪೆ : ಆಳ ಸಮುದ್ರಕ್ಕೆ ತೆರಳಿದ್ದ 8 ಮೀನುಗಾರರು ನಾಪತ್ತೆ

    ಮಲ್ಪೆ : ಆಳ ಸಮುದ್ರಕ್ಕೆ ತೆರಳಿದ್ದ 8 ಮೀನುಗಾರರು ನಾಪತ್ತೆ

    ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ 8 ಮಂದಿ ಮೀನುಗಾರರು ನಾಪತ್ತೆಯಾಗಿದ್ದು, ಕರಾವಳಿ ಕಾವಲು ಪಡೆ ಮೀನುಗಾರರ ಸಂಪರ್ಕಕ್ಕೆ ಪ್ರಯತ್ನ ನಡೆಸುತ್ತಿದೆ.

    ಚಂದ್ರ ಶೇಖರ, ದಾಮೋದರ, ಲಕ್ಷ್ಮಣ್, ಸತೀಶ್, ರವಿ, ಹರೀಶ್, ರಮೇಶ್, ಜೋಗಯ್ಯ ಮೀನುಗಾರರು ಬೋಟ್ ಸಮೇತ ನಾಪತ್ತೆಯಾಗಿದ್ದಾರೆ.

    ಸುವರ್ಣ ತ್ರಿಭುಜ ಎಂಬ ಹೆಸರಿನ ಬೋಟ್ ಮೂಲಕ ಡಿ.13 ರಂದು ರಾತ್ರಿ 11 ಗಂಟೆಗೆ ಮೀನುಗಾರಿಕೆಗೆ ತೆರಳಿದ್ದ ಇವರು, ಡಿ.15 ರ ರಾತ್ರಿ ಒಂದು ಗಂಟೆಯವರೆಗೆ ಸಂಪರ್ಕದಲ್ಲಿದ್ದವರು. ಆದರೆ ಆ ಬಳಿಕ ಬೋಟ್‍ನಲ್ಲಿದ್ದ ಜಿಪಿಎಸ್ ಸಂಪರ್ಕವೂ ಕಳೆದುಕೊಂಡಿದೆ.

    ಸದ್ಯ ನಾಪತ್ತೆ ಆಗಿರುವ ಮೀನುಗಾರರ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕರಾವಳಿ ಕಾವಲು ಪಡೆಯಿಂದ ಮೀನುಗಾರರ ಸಂಪರ್ಕಕ್ಕೆ ಯತ್ನ ನಡೆಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನವಶಕ್ತಿ ವೈಭವ ನೃತ್ಯದ ವೇಳೆ ಆವೇಶಗೊಂಡ ಯುವತಿಯರು – ವಿಡಿಯೋ ವೈರಲ್

    ನವಶಕ್ತಿ ವೈಭವ ನೃತ್ಯದ ವೇಳೆ ಆವೇಶಗೊಂಡ ಯುವತಿಯರು – ವಿಡಿಯೋ ವೈರಲ್

    ಉಡುಪಿ: ನವಶಕ್ತಿ ವೈಭವ ನೃತ್ಯ ಪ್ರದರ್ಶನದ ವೇಳೆ ಯುವತಿಯರು ಆವೇಶಗೊಂಡ ಘಟನೆ ಉಡುಪಿಯ ಮಲ್ಪೆ ಪಡುಕೆರೆಯಲ್ಲಿ ನಡೆದಿದೆ.

    ಇಲ್ಲಿನ ಪಡುಕರೆಯಲ್ಲಿನ ಭಜನಾ ಮಂದಿರವೊಂದರ 25 ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಸದ್ಯ ಯುವತಿಯರು ಆವೇಶಗೊಂಡು ನಂತರ ಸಾರ್ವಜನಿಕರ ಸಹಾಯದಿಂದ ನಿರ್ಗಮಿಸಿದ ವಿಡಿಯೋ ಮೊಬೈಲ್ ಗಳಲ್ಲಿ ವೈರಲ್ ಆಗಿದೆ.

    ಸ್ಥಳೀಯ ಮಹಿಳಾ ಮಂಡಳಿಯ ಮಹಿಳೆಯರನ್ನು ಬಳಸಿಕೊಂಡು ನವಶಕ್ತಿ ವೈಭವ ನೃತ್ಯ ರೂಪಕ ಪ್ರದರ್ಶಿಲಾಗುತ್ತಿತ್ತು. ಮಹಿಷಾಸುರ, ಚಂಡ ಮುಂಡರು ಮುಂತಾದ ರಾಕ್ಷಸರನ್ನು, ದುಷ್ಟ ಅಸುರರನ್ನು ಸಂಹರಿಸುವ ದೃಶ್ಯದ ವೇಳೆ ಈ ಘಟನೆ ನಡೆದಿದೆ.

    ಚೆಂಡೆ, ವಾದ್ಯ, ಸೇರಿದಂತೆ ಸಂಗೀತ ವಿಪರೀತವಾದಾದ ವೇಳೆ ಇಬ್ಬರು ಯುವತಿಯರು ಇದ್ದಕ್ಕಿದ್ದಂತೆ ಆವೇಶ ಬಂದವರಂತೆ ಬಿದ್ದಿದ್ದಾರೆ. ನಂತರ ಇನ್ನೊಬ್ಬ ನೃತ್ಯಗಾರ್ತಿ ಆವೇಶ ಬಂದಂತೆ ಕುಣಿದಿದ್ದಾರೆ. ಇದರಿಂದ ಸಹಕಲಾವಿದರು ಭಯಗೊಂಡಿದ್ದಾರೆ. ಪ್ರದರ್ಶನಕ್ಕೆ ಅಡ್ಡಿ ಆಗದಂತೆ ಇಬ್ಬರೂ ಕಲಾವಿದರನ್ನು ಕರೆದೊಯ್ಯಲಾಯ್ತು.

    ಒಬ್ಬರು ಆವೇಶಭರಿತರಾದ್ರೆ ಪಕ್ಕದಲ್ಲಿರುವವರೆಲ್ಲಾ ಹಾಗೆ ವರ್ತಿಸೋದನ್ನು ಸಮೂಹ ಸನ್ನಿ ಅಂತ ಕರೆಯುತ್ತಾರೆ. ಇದೇ ರೀತಿಯಲ್ಲಿ ವ್ಯಾಪಿಸಿ ಇನ್ನೊಬ್ಬ ಅಸುರನ ಸಂಹರಿಸುವ ವೇಳೆ ಮತ್ತೋರ್ವ ಯುವತಿಯೂ ಅವೇಶಭರಿತವಾಗಿ ನರ್ತಿಸಲು ಆರಂಭಿಸಿದ್ದಾಳೆ. ಇದರಿಂದ ಅಲ್ಲಿ ನೆರೆದವರೆಲ್ಲಾ ಕೆಲಕಾಲ ಆತಂಕಗೊಂಡರು. ಸದ್ಯ ಈ ಎರಡೂ ವಿಡಿಯೋಗಳು ವೈರಲ್ ಆಗಿವೆ.

    ಒಬ್ಬ ನೃತ್ಯಗಾರ್ತಿಗೆ ಫಿಟ್ಸ್ ಬಂದಿದೆ, ಮತ್ತೊಬ್ಬಾಕೆಗೆ ಆವೇಶ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

    https://www.facebook.com/UnitedTulunadu/videos/1822374257787277/

  • ಮೀನುಗಾರರ ಬೋಟ್‍ನಲ್ಲಿ ಅಡುಗೆ ಮಾಡುವಾಗ ಬೆಂಕಿ ಅವಘಡ

    ಮೀನುಗಾರರ ಬೋಟ್‍ನಲ್ಲಿ ಅಡುಗೆ ಮಾಡುವಾಗ ಬೆಂಕಿ ಅವಘಡ

    ಉಡುಪಿ: ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಬೋಟ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

    ಹಿಮಾಲಯ ಎಂಬ ಹೆಸರಿನ ಪರ್ಸಿನ್ ಬೋಟು ಬೆಂಕಿಗಾಹುತಿಯಾಗಿದೆ. ಅನ್ವರ್ ಸಾಹೇಬ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ಇದಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ.

    ಬೋಟ್ ವೆಚ್ಚ ಹಾಗೂ ಒಳಗಿದ್ದ ಸಾಮಾಗ್ರಿಗಳು ಸೇರಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೋಟ್‍ನಲ್ಲಿದ್ದ ಮೀನುಗಾರರು ಅಡುಗೆ ಮಾಡುವ ಸಂದರ್ಭದಲ್ಲಿ ಬೆಂಕಿ ಹೊತ್ತಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

    ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಒಂದೇ ಕಡೆ ಸಿಕ್ತು ಮೂರು ಹೆಬ್ಬಾವು- ಭಾರೀ ಹಾವುಗಳ ಮಿಲನ

    ಒಂದೇ ಕಡೆ ಸಿಕ್ತು ಮೂರು ಹೆಬ್ಬಾವು- ಭಾರೀ ಹಾವುಗಳ ಮಿಲನ

    ಉಡುಪಿ: ಒಂದು ಹೆಬ್ಬಾವನ್ನು ಕಂಡರೆ ಜನ ಬೆಚ್ಚಿ ಬೀಳುತ್ತಾರೆ. ಎರಡೆರಡು ಹೆಬ್ಬಾವೆಲ್ಲಾದರೂ ಕಾಣ ಸಿಕ್ಕಿದ್ರೆ ಎದ್ದು ಬಿದ್ದು ಜನ ಓಡಿ ಹೋಗುತ್ತಾರೆ. ಆದ್ರೆ ಉಡುಪಿಯಲ್ಲಿ ಮೂರು ಹೆಬ್ಬಾವು ಒಂದೇ ಕಡೆ ಕಾಣಿಸಿಕೊಂಡಿದ್ದು ಸುತ್ತಮುತ್ತಲ ಜನ ದಂಗಾಗಿದ್ದಾರೆ.

    ಉಡುಪಿಯ ಮಲ್ಪೆ ಸಮೀಪದ ಪಂದುಬೆಟ್ಟು ಎಂಬಲ್ಲಿ ಹೈರುನ್ನಿಸ್ಸಾ ಎಂಬವರು ಸೌದೆ ಕೂಡಿಡಲು ಒಂದು ಕೊಟ್ಟಿಗೆ ಕಟ್ಟಿಕೊಂಡಿದ್ದಾರೆ. ಒಲೆ ಉರಿಸಲು ಸೌದೆ ತರಲು ಹೋದ ಅವರಿಗೆ ದೊಡ್ಡ ಗಾತ್ರದ ಹೆಬ್ಬಾವೊಂದು ಸುತ್ತಿಕೊಂಡು ಮಲಗಿರುವುದು ಕಂಡಿದೆ. ಹಾವು ಕಂಡು ಭಯಗೊಂಡ ಅವರು ಸುತ್ತಮುತ್ತಲ ಮನೆಯವರಿಗೆ ಹೇಳಿದ್ದಾರೆ.

    ಕೆಲ ಯುವಕರು ಬಂದು ಹಾವು ಹಿಡಿಯಲು ಪ್ರಯತ್ನಿಸಿದರು. ಒಂದು ಹಾವನ್ನು ಹಿಡಿಯುವಷ್ಟರಲ್ಲಿ ಮತ್ತೊಂದು ಹಾವು ಕಾಣಿಸಿಕೊಂಡಿದೆ. ಆಗ ಸ್ಥಳೀಯ ಯುವಕರು ಉರಗ ತಜ್ಞ ಗುರುರಾಜ್ ಅವರಿಗೆ ಫೋನ್ ಮಾಡಿದ್ದಾರೆ. ಗುರುರಾಜ್ ಹಾವು ಹಿಡಿಯುವ ಹತ್ಯಾರ್ ಹಿಡಿದು ಬಂದು ತಪ್ಪಿಸಿಕೊಂಡು ಹೋಗಿದ್ದ ಮೊದಲ ಮತ್ತು ಎರಡನೇ ಹಾವನ್ನು ಹಿಡಿದಿದ್ದಾರೆ. ಅಷ್ಟೊತ್ತಿಗೆ ಮತ್ತೊಂದು ಹೆಬ್ಬಾವು ಬಿಲದೊಳಗೆ ಅವಿತು ಕುಳಿತಿರುವುದು ಕಾಣಿಸಿದೆ. ಬಿಲವನ್ನು ಮೇಲ್ಬಾಗದಿಂದ ತೆರೆದಾಗ ಹಾವು ಭೂಮಿಯೊಳಗೆ ಹೋಗಲು ಪ್ರಯತ್ನಿಸಿದೆ. ಚಾಕ ಚಕ್ಯತೆಯಿಂದ ಹಿಡಿದ ಗುರುರಾಜ್ ಸನಿಲ್ ಎಲ್ಲಾ ಮೂರು ಹಾವನ್ನು ಹೊರತಂದು ಸಾರ್ವಜನಿಕರ ಆತಂಕ ದೂರ ಮಾಡಿದ್ದಾರೆ.

    ಡಿಸೆಂಬರ್ ನಿಂದ ಫೆಬ್ರವರಿ ತಿಂಗಳವರೆಗೆ ಹಾವುಗಳದ್ದು ಮಿಲನಕಾಲ. ಒಂದಕ್ಕಿಂತ ಹೆಚ್ಚು ಹೆಬ್ಬಾವುಗಳು ಹೆಣ್ಣು ಹೆಬ್ಬಾವಿನ ಜೊತೆ ಮಿಲನ ಕ್ರಿಯೆಯಲ್ಲಿ ತೊಡಗಿಕೊಳ್ಳುತ್ತದೆ. ಹೆಚ್ಚು ಹೆಬ್ಬಾವುಗಳು ಒಂದೆಡೆ ಕಾಣಿಸಿಕೊಂಡರೆ ಸಾರ್ವಜನಿಕರು ಭಯಪಡಬೇಡಿ ಅಂತ ಉರಗತಜ್ಞ ಗುರುರಾಜ್ ಹೇಳಿದ್ದಾರೆ. ಹೆಬ್ಬಾವುಗಳನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ಬಿಡಲಾಗುವುದು ಅಂತ ಅರಣ್ಯಾಧಿಕಾರಿಗಳು ಹೇಳಿದ್ದಾರೆ.

    https://youtu.be/nEBFCQO2hQE