Tag: ಮಲ್ಲತ್ತಹಳ್ಳಿ

  • ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

    ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

    ಬೆಂಗಳೂರು: ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳತನ (Theft) ಮಾಡಿರುವ ಘಟನೆ ಜ್ಞಾನಭಾರತಿಯ (Jnana Bharathi) ಮಲ್ಲತ್ತಹಳ್ಳಿಯಲ್ಲಿ (Mallattahalli) ನಡೆದಿದೆ.ಇದನ್ನೂ ಓದಿ: `ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ

    ಟೆಕ್ಕಿ ನಟೇಶ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಕಳೆದ ಶುಕ್ರವಾರ ನಟೇಶ್ ಅವರು ಮೈಸೂರಿಗೆ ತೆರಳಿದ್ದರು. ಬಳಿಕ ಶನಿವಾರ ವಾಪಸ್ ಬಂದು ನೋಡಿದಾಗ ಮನೆಯಲ್ಲಿದ್ದ 1 ಕೆ.ಜಿ ಚಿನ್ನ ಹಾಗೂ 4 ಲಕ್ಷ ರೂ. ನಗದು ಸೇರಿ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದು ಕಂಡುಬಂದಿದೆ.

    ಸದ್ಯ ಈ ಸಂಬಂಧ ನಟೇಶ್ ಅವರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.ಇದನ್ನೂ ಓದಿ: `I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್

  • ವಾಹನ ಹರಿದು ಯುವಕ ಸ್ಥಳದಲ್ಲೇ ಸಾವು

    ಬೆಂಗಳೂರು: ನಗರದ ಮಲ್ಲತ್ತಹಳ್ಳಿ ಬಳಿ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನೆಡೆದಿದೆ.

    26 ವರ್ಷದ ನವೀನ್ ಮೃತ ದುರ್ಧೈವಿ ಬೈಕ್ ಸವಾರನಾಗಿದ್ದು, ಇವರು ಕೆಂಗೇರಿ ಉಪನಗರದ ನಿವಾಸಿಯಾಗಿದ್ದಾರೆ.

    ಕಾಮಾಕ್ಷಿಪಾಳ್ಯದ ಕಡೆಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಬೈಕ್ ಪಕ್ಕದ ಡಿವೈಡರ್‍ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಸವಾರ ಮತ್ತೊಂದು ಬದಿಗೆ ಹಾರಿ ಬಿದಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ಅಪರಿಚಿತ ವಾಹನವೊಂದು ನವೀನ್ ಮೇಲೆ ಹರಿದಿದೆ. ಪರಿಣಾಮ ನವೀನ್‍ಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಸದ್ಯ ಮೃತ ನವೀನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಶವಗಾರಕ್ಕೆ ರವಾನೆ ಮಾಡಲಾಗಿದೆ.

    ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.