Tag: ಮಲ್ಲಿಕಾರ್ಜುನ್ ಖರ್ಗೆ

  • ನಿರುದ್ಯೋಗ ಹೆಚ್ಚಾಗಲು ಕಾರಣ ಕೇಂದ್ರ ಸರ್ಕಾರ: ರಾಹುಲ್ ಗಾಂಧಿ

    ನಿರುದ್ಯೋಗ ಹೆಚ್ಚಾಗಲು ಕಾರಣ ಕೇಂದ್ರ ಸರ್ಕಾರ: ರಾಹುಲ್ ಗಾಂಧಿ

    ನವದೆಹಲಿ: ದೇಶದಲ್ಲಿರುವ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ. ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

    ರಾಹುಲ್ ಗಾಂಧಿ ಟ್ವೀಟ್‍ನಲ್ಲಿ ಏನಿದೆ?: ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ.  ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆ. ಸಾಲ ಹಾಗೂ ನಿರುದ್ಯೋಗದಿಂದ 2018 ಮತ್ತು 2020ರ ನಡುವೆ ಸುಮಾರು 25 ಸಾವಿರ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಧ್ಯಮವೊಂದರ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಕೈಸೆ ಅಚ್ಚೆ ದಿನ್ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

    ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್‍ನಲ್ಲಿ ಏನಿದೆ?: ನಿರುದ್ಯೋಗದಿಂದ ಶೇಕಡಾ 24 ರಷ್ಟು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಶೇಕಡಾ 84 ರಷ್ಟು ಕುಟುಂಬಗಳಲ್ಲಿ ಆದಾಯ ಕುಸಿತವಾಗಿದೆ. ಆದಾಗ್ಯೂ ಮೋದಿ ಮತ್ತು ಅವರ ಸಚಿವರು ಇಂತಹ ಕಷ್ಟದ ಕಾಲವನ್ನು ಅಮೃತ ಕಾಲ ಎಂದು ಹೇಳುತ್ತಾರೆ. ಇದು ಅಂಧ ರಾಜನೊಂದಿಗೆ ಅಂಧಕಾಲದ ಭಾರತ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.  ನಿರುದ್ಯೋಗ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್  ವಾಗ್ಧಾಳಿ   ನಡೆಸಿದೆ.

  • ಮೇಕೆದಾಟು ಪಾದಯಾತ್ರೆ ಬಿಸಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೂ ಕೊರೊನಾ ದೃಢ

    ಮೇಕೆದಾಟು ಪಾದಯಾತ್ರೆ ಬಿಸಿ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೂ ಕೊರೊನಾ ದೃಢ

    ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ

    ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರಿಗೆ ಒಬ್ಬಬ್ಬರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು, ಮಾಜಿ, ಹಾಲಿ ಶಾಸಕಕರಿಗೆ ಕೊರೊನಾ ಪಾಸಿಟಿವ್ ಕಂಡುಬರುತ್ತಿದೆ. ಪಾದಯಾತ್ರೆ ವೇಳೆ ಕರ್ತವ್ಯದಲ್ಲಿ ತೊಡಗಿಕೊಂಡಿದ್ದ 90 ಪೊಲೀಸರಿಗೂ ಸೋಂಕು ದೃಢಪಟ್ಟಿದೆ.

    ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಲ್ಲಿ ಮೂರು ದಿನಗಳ ಕಾಲ ಸಕ್ರಿಯವಾಗಿ ಭಾಗವಹಿಸಿದ್ದ ರಮೇಶ್ ಕುಮಾರ್, ಪ್ರಿಯಾಂಕ್ ಖರ್ಗೆ ಅವರಿಗೆ ಸೋಂಕು ತಗುಲಿದ್ದು, ಅವರೊಟ್ಟಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವರಲ್ಲಿ ಆತಂಕ ಮನೆಮಾಡಿದೆ. ಸದ್ಯ ಸೋಂಕು ದೃಢಪಟ್ಟ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಹೋಂ ಐಸೋಲೇಷನ್‍ಲ್ಲಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್

    priyank kharge

    ಈಗಾಗಲೇ ಅವರ ತಂದೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿತ್ತು. ಇನ್ನೊಂದೆಡೆ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಸೇಡಂ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್‍ಗೂ ಸಹ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಪಾಯಾತ್ರೆಯಲ್ಲಿ ಭಾಗವಹಸಿದ್ದ ಹಲವರಿಗೆ ಸೋಂಕು ತಗುಲಿರುವ ಶಂಖೆ ವ್ಯಕ್ತವಾಗಿದೆ. ಇದನ್ನೂ ಓದಿ: ಪಾದಯಾತ್ರೆಯಲ್ಲಿ ಒಬ್ಬರಾದರೂ ಪೊಲೀಸರು ಕೆಲಸ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ

  • ಕೋವಿಡ್ ಬಗ್ಗೆ ಏನಾದ್ರೂ ಮಾತನಾಡಿದ್ರೆ ತಪ್ಪಾಗುತ್ತದೆ: ಖರ್ಗೆ

    ಕೋವಿಡ್ ಬಗ್ಗೆ ಏನಾದ್ರೂ ಮಾತನಾಡಿದ್ರೆ ತಪ್ಪಾಗುತ್ತದೆ: ಖರ್ಗೆ

    ಕಲಬುರಗಿ: ಕೋವಿಡ್ ಇದೀಗ ಕಾಂಟ್ರವರ್ಸಿ ವಿಚಾರವಾಗಿದೆ. ಏನಾದರೂ ಮಾತಾಡಿದರೆ ತಪ್ಪಾಗುತ್ತದೆ. ಸಡನ್ ಆಗಿ ಲಾಕ್‌ಡೌನ್ ಮಾಡಿದರೆ ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ ಬಿಳಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಸೆಮಿ ಲಾಕ್‌ಡೌನ್ ಹಾಗೂ ವಿಕೆಂಡ್ ಕರ್ಫ್ಯೂಗೆ ಪರೋಕ್ಷವಾಗಿ ವಿರೋಧವನ್ನು ವ್ಯಕ್ತಪಡಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಹಿಂದಿನ ಬಾರಿ ಸಡನ್ ಆಗಿ ಲಾಕ್‌ಡೌನ್ ಮಾಡಿದಾಗ ಸಾಕಷ್ಟು ತೊಂದರೆಯಾಗಿತ್ತು. ಜೊತೆಗೆ ಲಾಕ್‌ಡೌನ್‌ನಿಂದ ಬೀದಿಗೆ ಬಿದ್ದಿದ್ದ ಜನರಿಗೆ ಕೇಂದ್ರ ಸರ್ಕಾರ ಯಾವ ನೆರವನ್ನು ನೀಡಿರಲಿಲ್ಲ. ಕಾರ್ಮಿಕರ ನಿಧಿ ಹಣ ಕಾರ್ಮಿಕರಿಗೂ ಸಹ ನೀಡದೇ ಇರುವುದು ದುರಂತವಾಗಿದೆ. ಈಗಲೂ ಹೀಗೆ ಮಾಡಿದರೆ ದೇಶದ ರಾಜ್ಯದ ಆರ್ಥಿಕತೆಗೆ ದೊಡ್ಡ ಹೊಡೆತ ಬಿಳಲಿದೆ ಎಂದು ಹೇಳಿದರು.

    ಈ ಹಿಂದೆ ಕೇಂದ್ರದ ಎಡಬಿಡಂಗಿ ನಿರ್ಧಾರಗಳಿಂದ ವಿಶ್ವದಲ್ಲಿ ದೇಶದ ಆರ್ಥಿಕ ಗುಣಮಟ್ಟ ಪಾತಾಳಕ್ಕೆ ಕುಸಿದಿತ್ತು. ಮತ್ತೊಮ್ಮೆ ಇದೇ ರೀತಿ ಆದರೆ ಬಡ, ಮಧ್ಯಮ ವರ್ಗದ ಜನರು ಎಲ್ಲವನ್ನು ಕಳೆದುಕೊಂಡು ಬೀದಿಗೆ ಬೀಳಲಿದ್ದಾರೆ. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಲಾಕ್‌ಡೌನ್ ಮಾಡೋದು ಸರಿಯಲ್ಲ. ಎಲ್ಲದರ ಬಗ್ಗೆ ಚಿಂತನೆ ನಡೆಸಿ ಲಾಕ್‌ಡೌನ್ ಜಾರಿ ಮಾಡಬೇಕು. ಯಾವ ಯಾವ ವಲಯಗಳಿಗೆ ರಿಯಾಯಿತಿ ಕೊಡಬೇಕು ಎನ್ನುವುದನ್ನು ನಿರ್ಧರಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಕೋವಿಡ್-19 ಮುಂದಿನ ಎರಡು ವಾರ ನಿರ್ಣಾಯಕ – ಭಾರತಕ್ಕೆ WHO ತಜ್ಞರ ಎಚ್ಚರಿಕೆ

    ಕೋವಿಡ್‌ನಿಂದ ಮೃತಪಟ್ಟವರ ಕುರಿತು ಕೇಂದ್ರ ಸರ್ಕಾರ ಬೋಗಸ್ ರಿಪೋರ್ಟ್ ನೀಡಿದೆ. ಕೋವಿಡ್ ವಿಚಾರವಾಗಿ ಕೇಂದ್ರ ಸರ್ಕಾರ ಸಿಂಪತಿ ಕ್ರಿಯೆಟ್ ಮಾಡಿ ಭರ್ಜರಿ ಪ್ರಚಾರ ಪಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ಕೋವಿಡ್‌ನಿಂದ ಮೃತರಾದರೆ ಅವರನ್ನು ಸುಡಲು ಕಟ್ಟಿಗೆ ಸಿಗುತ್ತಿಲ್ಲ. ಹುಳೋಕೆ ಜಮೀನು ಸಿಗುತ್ತಿಲ್ಲ. ರಾಶಿ ರಾಶಿ ಹೆಣಗಳನ್ನು ಗಂಗಾ ನದಿಯಲ್ಲಿ ಬಿಸಾಕಿದ್ದು ಇದಕ್ಕೆ ಸಾಕ್ಷಿ ಎಂದ ಅವರು, ಕಾರ್ಮಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ವಿಶೇಷ ಪ್ಯಾಕೇಜ್ ಘೋಷಿಸಿದ ನಂತರ ಲಾಕ್‌ಡೌನ್ ಮಾಡಿ ಏನಾದರು ಮಾಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

    ಸಭೆ ಸಮಾರಂಭ ಹೋರಾಟಗಳಿಗೆ ಬ್ರೇಕ್ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಯ ನೇತೃತ್ವವನ್ನು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಹಿಸಿದ್ದಾರೆ. ಸೆಮಿಲಾಕ್‌ಡೌನ್ ಹಾಗೂ ವೀಕೆಂಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಾದಯಾತ್ರೆ ಮಾಡೋದು ಬಿಡುವುದು ರಾಜ್ಯ ಮುಖಂಡರು ನಿರ್ಧರಿಸುತ್ತಾರೆ. ಪಾದಯಾತ್ರೆಯಲ್ಲಿ ಮಾರ್ಪಾಡು ಮಾಡುವ ಬಗ್ಗೆ ಅವರನ್ನ ಕೇಳಿ ಎಂದರು.

  • ನಾನು ಸೋತ್ರು ಪರವಾಗಿಲ್ಲ, ನಮ್ಮ MLC ಅಭ್ಯರ್ಥಿಯನ್ನು ಗೆಲ್ಲಿಸಿ ಸೇಡು ತೀರಿಸಿಕೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

    ನಾನು ಸೋತ್ರು ಪರವಾಗಿಲ್ಲ, ನಮ್ಮ MLC ಅಭ್ಯರ್ಥಿಯನ್ನು ಗೆಲ್ಲಿಸಿ ಸೇಡು ತೀರಿಸಿಕೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

    -ನನ್ನನ್ನು ಯಾದಗಿರಿ, ಗುರುಮಿಠಕಲ್ ಜನ ಕೈಬಿಟ್ರು RSS ಜೊತೆ ಸೇರಿ ಕುತಂತ್ರ ಮಾಡಿ ನನ್ನನ್ನು ಸೋಲಿಸಿದ್ರು

    ಯಾದಗಿರಿ: ನಮ್ಮನ್ನು ಯಾದಗಿರಿ ಮತ್ತು ಗುರುಮಿಠಕಲ್ ಜನ ಕೈಬಿಟ್ಟರು, RSS ಜೊತೆ ಸೇರಿ ಕುತಂತ್ರ ಮಾಡಿ ನನ್ನನ್ನು ಸೋಲಿಸಿದರು. ನಾನು ಸೋತ್ರು ಪರವಾಗಿಲ್ಲ ನಮ್ಮ MLC ಅಭ್ಯರ್ಥಿಯನ್ನು ಗೆಲ್ಲಿಸಿ ಸೇಡು ತೀರಿಸಿಕೊಳ್ಳಬೇಕು ಅಂತ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

    ವಿಧಾನ ಪರಿಷತ್ ಚುನಾವಣೆ ಸಮಾವೇಶವನ್ನುದ್ದೇಶಿ ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಹೇಳಲು ಏನು ಇಲ್ಲ, ನಾವು ಮಾಡಿದ ಕೆಲಸವನ್ನು ಮುಂದುವರೆಸಿಕೊಂಡು ಹೋಗುವ ಶಕ್ತಿಯೂ ಇಲ್ಲ. ಹಲವಾರು ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಕೆಲವೇ ಭಾಗಕ್ಕೆ ಹಣ ಕೊಡುತ್ತಿದ್ದಾರೆ. ಹಾಗಾದರೆ ಈ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ? ಮನುಷ್ಯ ಆರೋಗ್ಯವಾಗಿರಬೇಕಾದರೆ ಮನುಷ್ಯನ ದೇಹದ ಎಲ್ಲಾ ಅಂಗಗಳು ಎಲ್ಲಾ ಸರಿ ಇರಬೇಕು. ಎಲ್ಲಾ ಕಡೆ ಸಮನಾದ ಅನುದಾನ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

    ಕೇಂದ್ರ ಸಚಿವನ ಮಗ ರೈತರ ಮೇಲೆ ಜೀಪ್ ನಿಂದ ಗುದ್ದಿ ಸಾಯಿಸಿದ ಇದನ್ನು ಯಾರಾದರೂ ಕೇಳಿದ್ರಾ?. ರೈತರ ಹತ್ತಿರ ಹೋಗಿ ಮಾತನಾಡಿಲ್ಲ, ಕಾನೂನು ಬಹಳ ಒಳ್ಳೆಯದಿದೆ, ಅವರನ್ನ ಮನವೋಲಿಸಲಾಗಲಿಲ್ಲ, ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್ ಎಲೆಕ್ಷನ್‍ನಿಂದ ಕೃಷಿ ಕಾಯ್ದೆ ವಾಪಸ್ ತೆಗೆದುಕೊಂಡಿದ್ದಾರೆ. 700 ಮಂದಿ ರೈತರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡರು ಅವರ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಅವರ ವಿಧ್ಯಾಭ್ಯಾಸಕ್ಕೆ ಯಾರು ಹೊಣೆ ಎಂದು ಆಢಳಿತ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

  • ಕಲಬುರಗಿ ಪಾಲಿಕೆ ಚುನಾವಣೆ ಜೆಡಿಎಸ್‍ಗೆ ಮೇಯರ್ ಸ್ಥಾನ ಕೊಡುವವರಿಗೆ ನಮ್ಮ ಬೆಂಬಲ: ನಾಸಿರ್ ಹುಸೇನ್

    ಕಲಬುರಗಿ ಪಾಲಿಕೆ ಚುನಾವಣೆ ಜೆಡಿಎಸ್‍ಗೆ ಮೇಯರ್ ಸ್ಥಾನ ಕೊಡುವವರಿಗೆ ನಮ್ಮ ಬೆಂಬಲ: ನಾಸಿರ್ ಹುಸೇನ್

    ಕಲಬುರಗಿ: ಅಚ್ಚರಿಯ ಫಲಿತಾಂಶದೊಂದಿಗೆ ಅತಂತ್ರ ಸ್ಥಿತಿಯಲ್ಲಿರುವ ಕಲಬುರಗಿ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಕಗ್ಗಂಟು ಹಾಗೇಯೇ ಮುಂದುವರೆದಿದೆ. ತಮ್ಮ ಪಕ್ಷಕ್ಕೆ ಯಾರು ಮೇಯರ್ ಸ್ಥಾನ ಕೊಡುತ್ತಾರೋ ಆ ಪಕ್ಷಕ್ಕೆ ನಮ್ಮ ಬೆಂಬಲ ನೀಡುವುದಾಗಿ ಜನತಾ ದಳದ ಅಲ್ಪಸಂಖ್ಯಾತರ ರಾಜ್ಯ ಉಪಾಧ್ಯಕ್ಷರಾದ ಉಸ್ತಾದ್ ನಾಸೀರ್ ಹುಸೇನ್ ಅವರು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಈ ಯಾವುದೇ ಪಕ್ಷಗಳು ಆಹ್ವಾನಕ್ಕೆ ಬಂದರು ಸ್ವಾಗತ, ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಬಿಟ್ರೆ ಕಾಂಗ್ರೆಸ್‍ನ ಯಾವ ನಾಯಕರು ಜೆಡಿಎಸ್‍ಗೆ ಸಂಪರ್ಕ ಮಾಡಿಲ್ಲ, ಆದರೆ ಬಿಜೆಪಿಯಿಂದ ಸಾಕಷ್ಟು ನಾಯಕರು ನಮ್ಮ ಸಂಪರ್ಕ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಸಹ ಮೇಯರ್ ಪಟ್ಟ ನಮ್ಮ ಪಕ್ಷಕ್ಕೆ ಯಾವ ಪಕ್ಷ ನೀಡುತ್ತದೆಯೋ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳೋಣ ಎಂದಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಲಬುರಗಿ ಮೇಯರ್ ಚುನಾವಣೆ- ಜೆಡಿಎಸ್ ಮುಂದೆ ಮಂಡಿಯೂರಲು ಕಾಂಗ್ರೆಸ್ ಸಜ್ಜಾಗಿದ್ಯಾ?

    ಚುನಾವಣೆಯ ಫಲಿತಾಂಶದ ಬಳಿಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಜೆಡಿಎಸ್ ಪಕ್ಷದ ನಾಲ್ವರು ಸದಸ್ಯರು ಕಲಬುರಗಿ ನಗರಕ್ಕೆ ಬಂದಿದ್ದಾರೆ. ನಿನ್ನೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ನಮ್ಮ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುವುದು ನಿಶ್ಚಿತ ಹಾಗೂ ಜೆಡಿಎಸ್ ಪಕ್ಷ ನಮಗೆ ಬೆಂಬಲಿಸುವ ಆತ್ಮವಿಶ್ವಾಸನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್‍ನ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕೂಡ ನಮ್ಮ ಪಕ್ಷವೇ ಪಾಲಿಕೆಯಲ್ಲಿ ಅಧಿಕಾರ ನಡೆಸಲಿದೆ ಎಂದು ಹೇಳಿದ್ದು, ಎರಡು ಪಕ್ಷಗಳು ತಮ್ಮ ತಮ್ಮ ಪಕ್ಷದವರೇ ಮೇಯರ್ ಆಗುವುದಾಗಿ ಹೇಳಿಕೆ ನೀಡುತ್ತಿದ್ದಾರೆ.

    ನಾಸೀರ್ ಹುಸೇನ್ ಅವರು ನೀಡಿದ ಹೇಳಿಕೆ ನೋಡಿದರೆ ಪಾಲಿಕೆಯಲ್ಲಿ ಮೂರು ಪಕ್ಷಗಳ ಪೈಕಿ ಯಾರು ಮೇಯರ್ ಆಗುವರು ಎಂಬುದು ಕಲಬುರಗಿ ನಗರದ ಜನತೆಯಲ್ಲಿ ಮೂಡಿದ ಪ್ರಶ್ನೆಯಾಗಿದೆ. ಒಟ್ಟಿನಲ್ಲಿ ಮುಂದಿನ ವಾರವೇ ಮೇಯರ್ ಯಾರು ಎಂಬುದು ಸ್ಪಷ್ಟವಾಗಲಿದೆ. ಇದನ್ನೂ ಓದಿ: ಅತಂತ್ರವಾದರೂ ಬಿಜೆಪಿಗೆ ಅಧಿಕಾರ – ಕಲಬುರಗಿಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?

  • ಕಲಬುರಗಿ ಪಾಲಿಕೆ ಮೈತ್ರಿ ವಿಚಾರವಾಗಿ ಖರ್ಗೆ ನನಗೆ ಕಾಲ್ ಮಾಡಿದ್ರು: ಎಚ್‍ಡಿಡಿ

    ಕಲಬುರಗಿ ಪಾಲಿಕೆ ಮೈತ್ರಿ ವಿಚಾರವಾಗಿ ಖರ್ಗೆ ನನಗೆ ಕಾಲ್ ಮಾಡಿದ್ರು: ಎಚ್‍ಡಿಡಿ

    ಬೆಂಗಳೂರು: ಪಾಲಿಕೆ ಚುನಾವಣೆಯ ಫಲಿತಾಂಶದ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತಾಡಿದ್ದಾರೆ. ಕುಮಾರಸ್ವಾಮಿ ಬಳಿಯೂ ಮಾತನಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

    ಜೆ.ಪಿ.ಭವನದಲ್ಲಿ ಮಾತನಾಡಿದ ಅವರು, ಖರ್ಗೆ ಮಾತನಾಡಿರುವುದು ಸತ್ಯ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರ ಜೊತೆ ಸಿಎಂ ಮಾತುಕತೆ

    ಬಿಜೆಪಿಯವರು ಯಾರೂ ನನ್ನ ಜೊತೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ ದೇವೇಗೌಡರು, ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ ಮಾತಾಡಿದ್ದಾರೆ ಅನ್ನಿಸುತ್ತೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತನಾಡುತ್ತಾರೆ ನೋಡೋಣ. ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಬಿಜೆಪಿಯ ಯಾವ ನಾಯಕರೂ ಮಾತನಾಡಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.

    ಕಲಬುರಗಿಯಲ್ಲಿ ನಾಲ್ಕು ಸೀಟ್ ಬಂದಿವೆ. ನಾಲ್ಕು ಸೀಟ್ ಬರುತ್ತವೆ ಎಂದು ನಾನು ಅಂದುಕೊಂಡಿರಲಿಲ್ಲ. ಹೆಚ್‍ಡಿಕೆ ಹೋಗಿ ಪ್ರಚಾರ ಮಾಡಿದ್ದರು. ಎಲ್ಲಿಯೂ ಇಲ್ಲವೇ ಇಲ್ಲ ಅನ್ನುವ ಸ್ಥಿತಿ ಇಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ನಮ್ಮ ಸ್ಥಿತಿ ಚೆನ್ನಾಗಿ ಇರಲಿಲ್ಲ. ಅಲ್ಲಿ ಬಿಜೆಪಿ ಸ್ವೀಪ್ ಮಾಡಿದೆ, ಕಾಂಗ್ರೆಸ್ ಬಗ್ಗೆ ಮಾತಾಡಲು ಹೋಗಲ್ಲ. ಹುಬ್ಬಳ್ಳಿ ಧಾರವಾಡದಲ್ಲಿ ಮೂರ್ನಾಲ್ಕು ಸೀಟ್ ನಿರೀಕ್ಷೆ ಮಾಡಿದ್ದೇವು, ಒಂದು ಸೀಟ್ ಬಂದಿದೆ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕೆಲ ಕಡೆ ಪೈಪೋಟಿ ಕೊಟ್ಟಿದ್ದೇವೆ ಎಂದರು.

    ಸ್ಥಳೀಯ ಸಂಸ್ಥೆ ಫಲಿತಾಂಶದ ಬಗ್ಗೆ ಯಾರೂ ನಿರಾಶೆಯಾಗಬೇಕಿಲ್ಲ, ನಾವು ಹೆಚ್ಚಿನ ಸದಸ್ಯತ್ವ ನೋಂದಣಿ ಬಗ್ಗೆ ಗಮನ ಕೊಡುತ್ತೇವೆ. ಪಕ್ಷ ಕಟ್ಟುವ ಕಡೆ ಹೆಚ್ಚು ಗಮನ ಕೊಡುತ್ತೇವೆ. ನಾನು ಮತ್ತು ಪಕ್ಷದ ಎಲ್ಲ ನಾಯಕರು ಒಳಗೊಂಡಂತೆ ಪಕ್ಷ ಕಟ್ಟುವ ಕೆಲಸಕ್ಕೆ ಆದ್ಯತೆ ಕೊಡುತ್ತೇವೆ. ಒಟ್ಟಾಗಿ ಐಕ್ಯತೆಯಿಂದ ಪಕ್ಷ ಸಂಘಟನೆ ಮಾಡುತ್ತೇವೆ. ಸೋಲು- ಗೆಲುವು ಎಂದು ನೋಡಿ ಕುಳಿತುಕೊಳ್ಳಲು ಆಗುವುದಿಲ್ಲ. ಸೋಲು-ಗೆಲುವು, ಸಿಹಿ-ಕಹಿ ನೋಡಿದ್ದೇವೆ ಎಂದರು.

  • ಮಲ್ಲಿಕಾರ್ಜುನ್ ಖರ್ಗೆಗೆ ಟಿಕೆಟ್ ಘೋಷಿಸಿದ ಹೈಕಮಾಂಡ್

    ಮಲ್ಲಿಕಾರ್ಜುನ್ ಖರ್ಗೆಗೆ ಟಿಕೆಟ್ ಘೋಷಿಸಿದ ಹೈಕಮಾಂಡ್

    ನವದೆಹಲಿ: ಜೂನ್ 19ರಂದು ನಡೆಯಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

    ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆ ಯಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಸಾಕಷ್ಟು ಪೈಪೋಟಿ ಶುರುವಾಗಿತ್ತು. ಕಾಂಗ್ರೆಸ್ ನಾಯಕರಾದ ಬಿ.ಕೆ ಹರಿಪ್ರಸಾದ್ ಮತ್ತು ರಾಜೀವ್ ಗೌಡ ಅವರಿಂದ ಎರಡು ಸ್ಥಾನಗಳು ತೆರವಾಗಿತ್ತು. ಈ ಬಾರಿ ಸಂಖ್ಯೆಗಳ ಕೊರತೆಯಿಂದ ಒಂದು ಸ್ಥಾನವನ್ನು ಮಾತ್ರ ಸುಲಭವಾಗಿ ಗೆಲ್ಲಬಹುದಾಗಿದೆ.

    ಈ ಒಂದು ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಮತ್ತು ರಾಜೀವ್‍ಗೌಡ ಮರು ಆಯ್ಕೆ ಬಯಸಿದ್ದರು. ಲೋಕಸಭಾ ಟಿಕೆಟ್ ವಂಚಿತ ಮಾಜಿ ಸಂಸದ ಮುದ್ದಹನುಮೇಗೌಡರು ಕೂಡಾ ಟಿಕೆಟ್‍ಗಾಗಿ ಪ್ರಯತ್ನ ಮಾಡಿದ್ದರು.

    ಲೋಕಸಭೆ ಚುನಾವಣೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ಆಯ್ಕೆಯಾಗುವ ಇಂಗಿತವನ್ನು ಹೈಕಮಾಂಡ್ ಮುಂದೆ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಅವರು ನಿರಂತರ ಪ್ರಯತ್ನ ಕೂಡ ಮಾಡುತ್ತಿದ್ದರು. ರಾಜ್ಯಸಭೆಯಲ್ಲಿ ಬಿಜೆಪಿ ವಿರುದ್ಧ ಗಟ್ಟಿ ಧ್ವನಿಯ ಅವಶ್ಯಕತೆ ಹಿನ್ನೆಲೆ ಎಐಸಿಸಿ ರಾಜ್ಯದ ವರದಿಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು ಗೆಲುವು ಬಹುತೇಕ ಖಚಿತವಾಗಿದೆ.

    ಬಿಜೆಪಿಗೆ ಎರಡು ಸ್ಥಾನ ದೊರೆಯಲಿದ್ದು ಬಾಕಿ ಉಳಿದ ಮತ್ತೊಂದು ಸ್ಥಾನಕ್ಕೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಜೆಡಿಎಲ್‍ಪಿ ಸಭೆ ನಡೆದಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುನ್ನು ಕಂಡಿದ್ದ ಹೆಚ್‍ಡಿಡಿ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.

    2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಪ್ರತಿಪಕ್ಷ ಸ್ಥಾನ ಪಡೆಯಲು ಬೇಕಾದಷ್ಟು ಸ್ಥಾನವನ್ನು ಕಾಂಗ್ರೆಸ್ ಗೆದ್ದುಕೊಂಡಿರಲಿಲ್ಲ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.

  • ಕಾಂಗ್ರೆಸ್ ಲೋಕಸಭಾ ನಾಯಕರಾಗಿ ಅಧೀರ್ ರಂಜನ್ ಚೌಧರಿ ಆಯ್ಕೆ

    ಕಾಂಗ್ರೆಸ್ ಲೋಕಸಭಾ ನಾಯಕರಾಗಿ ಅಧೀರ್ ರಂಜನ್ ಚೌಧರಿ ಆಯ್ಕೆ

    ನವದೆಹಲಿ: ಕಾಂಗ್ರೆಸ್‍ನ ಲೋಕಸಭಾ ನಾಯಕರಾಗಿ ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಅಧೀರ್ ರಂಜನ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ.

    ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯೆಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ.

    ಸಭೆಯಲ್ಲಿ ನಿರ್ಧಾರವಾಗುತ್ತಿದ್ದಂತೆ ಲೋಕಸಭೆಗೆ ಈ ಕುರಿತು ಪತ್ರ ಬರೆಯಲಾಗಿದ್ದು, ಹೆಚ್ಚು ಸ್ಥಾನ ಗಳಿಸಿರುವ ಅತಿ ದೊಡ್ಡ ಪಕ್ಷದ ವಿರೋಧ ಪಕ್ಷದ ನಾಯಕರಾಗಿ ಹಾಗೂ ಪ್ರಮುಖ ಆಯ್ಕೆ ಸಮಿತಿಗಳ ಪ್ರತಿನಿಧಿಯಾಗಿ ಚೌಧರಿ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

    ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನಿಸಿರುವ ‘ಒಂದೇ ದೇಶ ಒಂದೇ ಚುನಾವಣೆ’ ಎಂಬ ವಿಷಯದ ಕುರಿತು ಚರ್ಚಿಸಲು ಕರೆದಿರುವ ಸಭೆಯ ಬಗ್ಗೆಯು ಕಾಂಗ್ರೆಸ್ ಗಮನಹರಿಸಿದ್ದು, ಕಾಂಗ್ರೆಸ್ ಈ ನಿರ್ಧಾರವನ್ನು ಪ್ರಾಯೋಗಿಕವಾಗಿ, ವ್ಯವಸ್ಥೆಯ ದೃಷ್ಟಿಯಿಂದ ಹಾಗೂ ಕಾನೂನಾತ್ಮಕವಾಗಿ ವಿರೋಧಿಸಿದೆ.

    ಈವರೆಗೆ ಕಾಂಗ್ರೆಸ್‍ನ ಲೋಕಸಭಾ ನಾಯಕರಾಗಿ ಕಾರ್ಯನಿರ್ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರಿಂದ ಲೋಕಸಭಾ ನಾಯಕರ ಆಯ್ಕೆ ಪ್ರಶ್ನೆ ಉದ್ಭವಿಸಿತ್ತು. ಆದರೆ, ಈ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನೇ ಆಯ್ಕೆ ಮಾಡಬೇಕೆಂದುಕೊಂಡಿದ್ದರಿಂದ ಇದೂವರೆಗೆ ಮೃದು ಧೋರಣೆ ತಳೆಯಲಾಗಿತ್ತು.

    ಆದರೆ, ರಾಹುಲ್ ಗಾಂಧಿ ಅವರು ಲೋಕಸಭಾ ನಾಯಕನ ಸ್ಥಾನ ವಹಿಸಿಕೊಳ್ಳುವುದಿರಲಿ, ಚುನಾವಣೆಯಲ್ಲಿ ಪಕ್ಷ ಕಳಪೆ ಸಾಧನೆ ಮಾಡಿದ್ದರಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಪಕ್ಷದ ಹಿರಿಯ ನಾಯಕರು ರಾಹುಲ್ ಗಾಂಧಿ ಅವರ ರಾಜೀನಾಮೆಯನ್ನು ಅಂಗೀಕರಿಸಲಿಲ್ಲ. ಲೋಕಸಭಾ ಅಧಿವೇಶನ ಪ್ರಾರಂಭವಾದ ಹಿನ್ನೆಲೆ ಅನಿವಾರ್ಯವಾಗಿ ಆಯ್ಕೆ ಮಾಡಲೇಬೇಕಾದ ಸಂದರ್ಭ ಎದುರಾಗಿದ್ದರಿಂದ ಚೌಧರಿ ಅವರನ್ನು ನೇಮಿಸಲಾಗಿದೆ.

    ಅಧಿರ್ ಚೌಧರಿ ಅವರೊಂದಿಗೆ ಕೇರಳ ಮುಖಂಡ ಕೆ.ಸುರೇಶ್, ಪಕ್ಷದ ವಕ್ತಾರ ಮನೀಶ್ ತಿವಾರಿ ಮತ್ತು ತಿರುವನಂತಪುರದ ಶಾಸಕ ಶಶಿ ತರೂರ್ ಲೋಕಸಭಾ ನಾಯಕನ ಸ್ಥಾನದ ರೇಸ್‍ನಲ್ಲಿದ್ದರು. ಚೌಧರಿ ಅವರು 5 ಬಾರಿ ಸಂಸದರಾಗಿ ಆಯ್ಕೆಯಾಗಿದ್ದು, ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ.

    ಇಂದಿನ ಕಾಂಗ್ರೆಸ್ ಸಭೆಯಲ್ಲಿ ಲೋಕಸಭಾ ಸ್ಪೀಕರ್ ಆಗಿ ರಾಜಸ್ಥಾನ ಶಾಸಕ ಓಂ ಬಿರ್ಲಾ ಅವರನ್ನು ಆಯ್ಕೆ ಮಾಡಿರುವ ಕುರಿತು ಸಹ ಚರ್ಚೆ ನಡೆದಿದ್ದು, ಎನ್‍ಡಿಎ ಆಯ್ಕೆಯನ್ನು ವಿರೋಧಿಸುವುದು ಬೇಡ ಎಂದು ನಿರ್ಧರಿಸಲಾಗಿತ್ತು.

  • ಬಾಬುರಾವ್ ಚವ್ಹಾಣ್‍ಗೆ ಲಂಬಾಣಿ ಮಂದಿ ಕ್ಲಾಸ್ – ಕಲಬುರಗಿಯಲ್ಲಿ ಖರ್ಗೆಗೆ ಕಷ್ಟ!

    ಬಾಬುರಾವ್ ಚವ್ಹಾಣ್‍ಗೆ ಲಂಬಾಣಿ ಮಂದಿ ಕ್ಲಾಸ್ – ಕಲಬುರಗಿಯಲ್ಲಿ ಖರ್ಗೆಗೆ ಕಷ್ಟ!

    ಕಲಬುರಗಿ: ಜಿಲ್ಲೆಯ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋದ ಲಂಬಾಣಿ ನಾಯಕರಿಗೆ ಲಂಬಾಣಿ ಜನರೇ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.

    ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ವಿರುದ್ಧ ಪ್ರಚಾರ ಮಾಡಲು ಹೋದವರಿಗೆ ಲಂಬಾಣಿ ಜನರು ತರಾಟೆ ತೆಗೆದುಕೊಂಡಿದ್ದರು. ಮಾಜಿ ಸಚಿವ ಬಾಬುರಾವ್ ಚವ್ಹಾಣ್ ಮತ್ತು ಸುಭಾಷ್ ರಾಠೋಡ್ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ ಪರ ಪ್ರಚಾರ ಮಾಡಲು ಹೋಗಿದ್ದರು. ಈ ವೇಳೆ ಸಮುದಾಯದ ಜನ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಕೆಲ ದಿನಗಳ ಹಿಂದಷ್ಟೇ ಬಾಬುರಾವ್ ಚವ್ಹಾಣ್ ಮತ್ತು ಸುಭಾಷ್ ರಾಠೋಡ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲಂಬಾಣಿ ಸಮಾಜದ ಡಾ.ಉಮೇಶ್ ಜಾಧವ್ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಸಮಾಜದ ವ್ಯಕ್ತಿಗೆ ಬೆಂಬಲಿಸುವುದನ್ನು ಬಿಟ್ಟು ವಿರುದ್ಧವಾಗಿ ಪ್ರಚಾರಕ್ಕೆ ಮುಂದಾಗಿದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ ಸಂಕಷ್ಟವಾಗುವ ಸಾಧ್ಯತೆ ಇದೆ.

  • ಖರ್ಗೆ ಎಂಬ ಪರ್ವತದಿಂದ್ಲೇ ಕಾಂಗ್ರೆಸ್ ನಾಶವಾಗುತ್ತೆ- ಉಮೇಶ್ ಜಾಧವ್

    ಖರ್ಗೆ ಎಂಬ ಪರ್ವತದಿಂದ್ಲೇ ಕಾಂಗ್ರೆಸ್ ನಾಶವಾಗುತ್ತೆ- ಉಮೇಶ್ ಜಾಧವ್

    ಯಾದಗಿರಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಂಬ ಪರ್ವತದಿಂದಲೇ ಕಾಂಗ್ರೆಸ್ ನಾಶವಾಗುತ್ತದೆ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹೇಳಿದ್ದಾರೆ.

    ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶ್ವರ ಖಂಡ್ರೆಯವರು ಮಲ್ಲಿಕಾರ್ಜುನ ಖರ್ಗೆಯನ್ನು ಪರ್ವತ ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿದ ಜಾಧವ್, ಮಲ್ಲಿಕಾರ್ಜುನ ಖರ್ಗೆ ಹಳೆ ಪರ್ವತ ಅದು ತಾನೇ ಬೀಳುತ್ತದೆ. ಖರ್ಗೆ ಎಂಬ ಪರ್ವತ ತಂದು ಕಾಂಗ್ರೆಸ್ ತಾನೆ ನಾಶವಾಗುತ್ತದೆ ಎಂದು ಹೇಳಿದ್ದಾರೆ.

    ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್-ಜೆಡಡಿಎಸ್ ಸರ್ಕಾರ ಪತನವಾಗಲಿದೆ. ಬಿ.ಎಸ್ ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆ. ಇದು ನೂರಕ್ಕೂ ನೂರರಷ್ಟು ಸತ್ಯ. ನನ್ನನ್ನು ಕಾಂಗ್ರೆಸ್ ನವರೆ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿ ಟಿಕೆಟ್ ಪೈನಲ್ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಭೇಟಿ ಮಾಡಿದ್ದೇನೆ. ನನಗೆ ಮತ್ತು ಮೋದಿಗೆ ದೇವರು ಒಳ್ಳೆಯದು ಮಾಡಲಿ ಎಂದು ದೇವರ ದರ್ಶನ ಮಾಡಿದ್ದೇನೆ ಎಂದು ತಿಳಿಸಿದ್ರು.

    ನನಗೆ ಕ್ಷೇತ್ರದ ಎಲ್ಲ ಕಡೆ ಬೆಂಬಲ ಸಿಗುತ್ತಿದೆ. ನನ್ನ ರಾಜೀನಾಮೆ ವಿಚಾರದಲ್ಲಿ ಕೆಲವರು ಸುಮ್ಮನೆ ಗೊಂದಲ ಸೃಷ್ಟಿ ಮಾಡಿದ್ದಾರೆ. ಕಾನೂನಿನಲ್ಲಿ ತೊಡಕು ಇಲ್ಲ ನನ್ನ ರಾಜೀನಾಮೆಯನ್ನು ಸ್ಪೀಕರ್ ಅವರು ವಿಶೇಷವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಸ್ಪೀಕರ್ ಮತ್ತೆ ನನಗೆ ಪತ್ರ ಬರೆದಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಯಾರ ಕೈಗೊಂಬೆಯಾಗಿಲ್ಲ. ಸ್ಪೀಕರ್ ಅವರು ಈ ತಿಂಗಳ 24ಕ್ಕೆ ನನ್ನನ್ನು ವಿಚಾರಣೆ ಕರೆದಿದ್ದು 25ರ ಒಳಗೆ ರಾಜೀನಾಮೆ ಅಂಗಿಕಾರ ಆಗುತ್ತದೆ ಅಂದ್ರು.

    ಸದ್ಯ ಕಾಂಗ್ರೆಸ್ ನಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಹೀಗಾಗಿ ಕಾಂಗ್ರೆಸ್ ಮುಖಂಡರು ಪಕ್ಷ ಬಿಟ್ಟು ಬಿಜೆಪಿ ಸೇರುತ್ತಿದ್ದಾರೆ. ನಾನು ಸಚಿವ ಆಗಬೇಕೆಂದು ಚಿಂಚೋಳಿ ಕ್ಷೇತ್ರದ ಜನರ ಆಸೆ ಇತ್ತು. ಈ ಮೈತ್ರಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುವುದಕ್ಕೆ ನಮ್ಮ ಕ್ಷೇತ್ರದ ಜನ ಬೇಸರಗೊಂಡಿದ್ದಾರೆ ಎಂದು ಅವರು ಹೇಳಿದ್ರು.