Tag: ಮಳಲಿ ಮಸೀದಿ

  • ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ಮಂಗಳೂರು: ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮಳಲಿ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅವರು, ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟುಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ ಎಂದು ಹೇಳಿದ್ದಾರೆ.

    ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ‘ಪೂಜಾ ಸ್ಥಳ ಕಾಯ್ದೆ 1991’ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆಕ್ಟ್ ಅನ್ನು ಪೊಲೀಸರು ಓದಿಲ್ವೇ?. 2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ. ಸಂಘಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ. ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆಗೆ ಮಾರ್ಚ್ ಮಾಡಲಿ ಎಂದು ಸವಾಲೆಸೆದರು.

    ಇದೀಗ ವಾಜೀದ್ ಹೇಳಿಕೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಬ್ದುಲ್ ವಾಜೀದ್ ಅವರು ಕೋಮು ಭಾವನೆಯನ್ನು ಕೆರಳಿಸುವಂತೆ ಭಾಷಣ ಮಾಡಿದ್ದಾರೆ. ಮಳಲಿ ಮಸೀದಿ ಬಗ್ಗೆ ಪೂರ್ಣ ಪ್ರಕ್ರಿಯೆ ನಡೆಯಬೇಕಿದೆ ಇಂತಹ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಸರಿಯಲ್ಲ. ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿ ಇದೆ ಕೋಮು ಗಲಭೆ ಸೃಷ್ಟಿಸುವಂತಹ ಹೇಳಿಕೆ ಕೂಡ ನೀಡೋ ಹಾಗಿಲ್ಲ. ಆದರೆ ಅವರ ಭಾಷಣ ಹಿಂದೂಗಳನ್ನು ಪ್ರಚೋದಿಸಿದಂತೆ ಇದೆ.

    ಅವರ ಪ್ರಚೋದನಾಕಾರಿ ಭಾಷಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಖಂಡಿಸಿದ್ದಾರೆ. ಹಿಂದೂಗಳ ಆಚಾರ, ವಿಚಾರ ಪೂಜೆ ಪುನಸ್ಕಾರಗಳನ್ನು ಕೆದಕಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹಿಂದೂಗಳ ನಂಬಿಕೆಗೆ ಧಕ್ಕೆ ಬರುವ ಹಾಗೇ ಭಾಷಣ ಮಾಡಿದ್ದಾರೆ. ತಾಂಬೂಲ ಪ್ರಶ್ನೆ ಅಂತಾ ಬರುವವರನ್ನ ಒದ್ದು ಒಳಗಾಗಬೇಕು ಎನ್ನುವ ಅವರ ವಿವಾದಾತ್ಮಕ ಹೇಳಿಕೆಗೆ ಕಾನೂನು ಹೋರಾಟ ಮಾಡಿ ಇವರಿಗೆ ಪಾಠ ಕಲಿಸಬೇಕು.

    ಮಳಲಿ ಮಸೀದಿಯಲ್ಲಿ ಕೂರುಹು ಪತ್ತೆಯ ಬಗ್ಗೆ ಉತ್ಖನನ ಪ್ರಕ್ರಿಯೆ ನಡೆಯುತ್ತಾ ಇದೆ. ಈ ಸಂದರ್ಭದಲ್ಲಿ ಅವರು ಈ ರೀತಿಯ ಭಾಷಣ ಮಾಡಿರುವುದು ಸರಿಯಲ್ಲ ಎಂದು ಹಿಂದೂ ಸಂಘಟನೆಯವರು ಕಿಡಿಕಾರಿದ್ದಾರೆ.

  • ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ: ಮುತಾಲಿಕ್ ಸವಾಲು

    ಅಯೋಧ್ಯೆ ರೀತಿ ಮಳಲಿ ಮಸೀದಿಯನ್ನೂ ವಾಪಾಸ್ ಪಡೆಯುತ್ತೇವೆ: ಮುತಾಲಿಕ್ ಸವಾಲು

    ಮೈಸೂರು: ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ತೆಗೆದು ರಾಮ ಮಂದಿರ ಮರಳಿ ಕಟ್ಟಿದ ರೀತಿಯಲ್ಲಿ ಮಳಲಿ ಮಸೀದಿಯ ಜಾಗದಲ್ಲೂ ಮೂಲ ದೇವಸ್ಥಾನ ನಿರ್ಮಿಸುತ್ತೇವೆ. ತಾಕತ್ ಇದ್ದರೆ ತಡೆಯಿರಿ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

    ಮಳಲಿ ಮಸೀದಿ ಬಿಟ್ಟು ಕೊಡುವುದು ಕನಸಿನ ಮಾತು ಎಂಬ ಎಸ್‍ಡಿಪಿಐ ರಾಜ್ಯಾಧ್ಯಕ್ಷನ ಮಾತಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜ್ಯದ 30 ಸಾವಿರ ಮಸೀದಿಗಳ ಮೂಲದಲ್ಲಿ ದೇವಸ್ಥಾನಗಳಿವೆ. ಅವುಗಳನ್ನು ವಾಪಸ್ ಪಡೆದೇ ತೀರುತ್ತೇವೆ. ಎಸ್‍ಡಿಪಿಐಗೆ ತಾಕತ್ ಇದ್ದರೆ ಅದನ್ನು ತಡೆಯಲಿ. ಇದು ನನ್ನ ಸವಾಲು ಎಂದರು. ಇದನ್ನೂ ಓದಿ: ಮಕ್ಕಳು ಓಡಿ ಹೋಗದಂತೆ ತಡೆಯಲು ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ

    ಮಳಲಿಯ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹು ಪತ್ತೆಯಾಗಿದೆ. ಅದನ್ನು ವಾಪಸ್ ಪಡೆದೇ ಪಡೆಯುತ್ತೇವೆ. ಎಲ್ಲಾ ಮಸೀದಿಗಳನ್ನು ದೇವಾಲಯ ಒಡೆದು ಕಟ್ಟಲಾಗಿದೆ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ಕಟ್ಟಿದ ರೀತಿ ಮಳಲಿ ಮಸೀದಿಯನ್ನು ಪಡೆಯುತ್ತೇವೆ ಎಂದರು.

    ಅನುಭವ ಮಂಟಪದ ಪವಿತ್ರ ಸ್ಥಾನ ಈಗ ಅಪವಿತ್ರವಾಗಿದೆ. ಪೀರ್ ಪಾಷಾ ಬಂಗ್ಲೆಯನ್ನು ಅನುಭವ ಮಂಟಪವಾಗಿ ಮತ್ತೆ ಬದಲಾಯಿಸಬೇಕು. ಈ ನಿಟ್ಟಿನಲ್ಲಿನ ಜೂನ್ 12 ರ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲವಿದೆ ಎಂದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಮಗು ಸೇರಿದಂತೆ 4 ಮಂದಿ ಸಾವು

    HIJAB 2

    ರಾಜ್ಯದಲ್ಲಿ ಮತ್ತೆ ಆರಂಭವಾದ ಹಿಜಾಬ್ ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿ, ಕುರಾನ್ ಶರಿಯಾ ಪ್ರಕಾರ ನಡೆಯಲು ಇದು ಪಾಕಿಸ್ತಾನ ಅಲ್ಲ. ಇದು ಭಾರತ. ಕಾನೂನು ವಿರುದ್ಧ ಹೋದವರನ್ನು ಒದ್ದು ಒಳಗೆ ಹಾಕಿ. ಈ ಮಕ್ಕಳ ಹಿಂದೆ ಮುಲ್ಲಾ ಮೌಲಿಗಳ ಷಡ್ಯಂತ್ರ ಅಡಗಿದೆ ಎಂದು ಕಿಡಿಕಾರಿದರು.

  • ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ? – ಇಂದು ನಡೆಯಲಿದೆ ತಾಂಬೂಲ ಪ್ರಶ್ನೆ

    ಮಂಗಳೂರಿನ ಮಳಲಿಯಲ್ಲಿರುವುದು ದರ್ಗಾವೋ, ದೇಗುಲವೋ? – ಇಂದು ನಡೆಯಲಿದೆ ತಾಂಬೂಲ ಪ್ರಶ್ನೆ

    ಮಂಗಳೂರು: ಕಾಶಿಯ ಜ್ಞಾನವಾಪಿ ಮಸೀದಿಯ ವಿವಾದದ ನಡುವೆ ಇದೀಗ ಮಂಗಳೂರಿನ‌ ಮಳಲಿ ಮದನಿ ದರ್ಗಾದ ವಿವಾದದ ಕಾವು ಹೆಚ್ಚಿದೆ. ಇಲ್ಲಿ ಹಿಂದೂ ದೇವಾಲಯ ಇತ್ತು ಅನ್ನೋ ಕುರುಹುಗಳು ಪತ್ತೆಯಾಗಿದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದು, ಸ್ಥಳ ಇತಿಹಾಸಕ್ಕೆ ತಾಂಬೂಲ ಪ್ರಶ್ನೆಗೂ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.

    ಹಿಂದೂಪರ ಸಂಘಟನೆಗಳ ನೇತ್ರತ್ವದಲ್ಲಿ ವಿವಾದಿತ ‌ಮಳಲಿ ದರ್ಗಾದ ಅನತಿ ದೂರದಲ್ಲೇ ಇಂದು ಬೆಳಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನೆ ನಡೆಯಲಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಸಲಾಗುವುದು. ಇದನ್ನೂ ಓದಿ: ಜ್ಞಾನವಾಪಿ ಕೇಸ್ – ಮೇ 28, 29ಕ್ಕೆ 5 ಸಾವಿರ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಸಭೆ

    ತಳಿರು‌ ತೋರಣಗಳಿಂದ ಭಜನಾ ಮಂದಿರವನ್ನು ಶೃಂಗಾರಗೊಳಿಸಲಾಗಿದ್ದು, ಭಜನಾ ಮಂದಿರದ ಮುಂಭಾಗ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇರಳ ಮೂಲದ ಪೊದುವಾಲ್‌ರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಮಸೀದಿ ಸುತ್ತಮುತ್ತ ದೈವಿ ಶಕ್ತಿ ಇದ್ಯಾ ಎಂಬ ಬಗ್ಗೆ ಪ್ರಶ್ನೆ ಕೇಳಲಾಗುವುದು. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ ದೈವೀ ಶಕ್ತಿ ಪತ್ತೆ ಹಚ್ಚಲಾಗುವುದು ಹಿಂದೂಪರ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

    ತಾಂಬೂಲ ಪ್ರಶ್ನೆ ನಡೆಯಲಿರುವ ಭಜನಾ ಮಂದಿರದ ಸುತ್ತ ಭಾರಿ‌ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ವಿವಾದಿತ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಮೂಲಕ ಕ್ರಮವಹಿಸಲಾಗಿದೆ. ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. 2 ಎಸಿಪಿ, 7 ಇನ್ಸ್‌ಪೆಕ್ಟರ್, 12 ಪಿಎಸ್‌ಐ, 10 ಎಎಸ್‌ಐ, 120 ಸಿವಿಲ್ ಸ್ಟಾಪ್ ಹಾಗೂ 3 ಕೆಎಸ್‌ಆರ್‌ಪಿ ತುಕಡಿ, 3 ಸಿಎಆರ್‌ ತುಕಡಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ವಿವಾದಿತ ದರ್ಗಾದ ಸ್ಥಳದಲ್ಲೂ ಭಾರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ದರ್ಗಾ 500 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ

    ಏನಿದು ವಿವಾದ?
    ಮಂಗಳೂರಿನ ಹೊರವಲಯದ ಮಳಲಿಯ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿರೋ ಹಿನ್ನಲೆಯಲ್ಲಿ ಸಾಕಷ್ಟು ಚರ್ಚೆ ಆರಂಭಗೊಂಡಿದೆ. ಎಪ್ರಿಲ್ 21 ರಂದು ಈ ದರ್ಗಾವನ್ನು ನವೀಕರಣಗೊಳಿಸೋದಕ್ಕಾಗಿ ಎದುರಿನ‌ ಭಾಗವನ್ನು‌ ನೆಲ ಸಮಗೊಳಿಸಲಾಗಿತ್ತು. ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಸ್ಥಾನದಲ್ಲಿರುವಂತಹ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿತ್ತು. ಹೀಗಾಗಿ ಇದು ಜೈನ ಅಥವಾ ಹಿಂದೂ ದೇವಸ್ಥಾನ ಆಗಿರೋ‌ ಸಾಧ್ಯತೆ ಇದೆ ಎಂದು ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲು ಏರಿತ್ತು. ಇದರ ನಡುವೆ ವಿಹೆಚ್‌ಪಿ ಇಂದು ತಾಂಬೂಲ ಪ್ರಶ್ನೆ ಇಡುತ್ತಿದ್ದು, ಈ ಪ್ರಶ್ನೆಯಲ್ಲಿ ಸಿಕ್ಕ ಅಂಶದಂತೆ ಮುಂದುವರಿಯಲು ತೀರ್ಮಾನಿಸಿದೆ.