Tag: ಮಳೆ ಮುನ್ಸೂಚನೆ

  • ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

    ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ.ಇದನ್ನೂ ಓದಿ: ಖಾಸಗಿ ಆಸ್ಪತ್ರೆಯ ಉದ್ಘಾಟನೆ ವೇಳೆ 10 ನಿಮಿಷ ಲಿಫ್ಟ್‌ನಲ್ಲಿ ಸಿಲುಕಿದ ರಾಮಲಿಂಗಾ ರೆಡ್ಡಿ

    ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಸೇರಿ ಹಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಆ.16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ತಿಳಿಸಿದೆ.

    ಕಳೆದ 2-3 ದಿನಗಳಿಂದ ಬೆಂಗಳೂರಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು (ಆ.11) ಕೂಡ ಮಧ್ಯಾಹ್ನದ ವೇಳೆಗೆ ಮಳೆ ಅಬ್ಬರಿಸುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳ ಕಾಲ ಇದೇ ಸ್ಥಿತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.ಇದನ್ನೂ ಓದಿ: ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ – ಓರ್ವ ಸಾವು, 29 ಮಂದಿಗೆ ಗಾಯ

     

  • ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಕಳೆದ ಒಂದು ವಾರದಿಂದ ಅಬ್ಬರಿಸುತ್ತಿದ್ದ ಮಳೆ ಇದೀಗ ಕೊಂಚ ಬಿಡುವು ನೀಡಿದೆ. ಇಂದಿನಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ತಗ್ಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

    ಇನ್ನೂ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇಂದಿನಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.

    ಇನ್ನೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಬೆಳಗಾವಿ ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

  • ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ

    ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಐಎಸ್ಐ ಮುಖ್ಯಸ್ಥನನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರನಾಗಿ ನೇಮಿಸಿದ ಪಾಕ್‌

    ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

    ಇನ್ನೂ ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಹವೆ ಹೆಚ್ಚಳವಾಗಲಿದೆ. ಭಾರತದ ಹಲವು ರಾಜ್ಯಗಳಿಗೆ ಅಧಿಕ ತಾಪಮಾನದ ಬಿಸಿ ತಟ್ಟಲಿದ್ದು, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಉಷ್ಣ ಹವೆಯಿದ್ದರೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಇದನ್ನೂ ಓದಿ: ನೆಲಮಂಗಲ| ಗ್ಯಾಸ್‌ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು