Tag: ಮಸ್ಲಿಂ

  • ಅನ್ಯಕೋಮಿನ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ

    ಅನ್ಯಕೋಮಿನ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ

    ಶಿವಮೊಗ್ಗ: ಮುಸ್ಲಿಂ (Muslim) ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ (Hindu) ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ (Attack) ನಡೆಸಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ (Bhadravathi) ನಡೆದಿದೆ.

    ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು. ಇದನ್ನೂ ಓದಿ: ಸೀರೆ ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವು

    CRIME

    ಡ್ರಾಪ್ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಝಂಡಾಕಟ್ಟೆ ಬಳಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನನ್ನು ಅಡ್ಡ ಹಾಕಿದೆ. ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದು, ಆತ ಹೆಸರು ಹೇಳುತ್ತಿದ್ದ ಹಾಗೆಯೇ ನಮ್ಮ ಯುವತಿಯನ್ನು ನೀನು ಬೈಕ್‌ನಲ್ಲಿ ಏಕೆ ಕೂರಿಸಿಕೊಂಡು ಬಂದೆ ಎಂದು ಪ್ರಶ್ನಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ರೈಲಿನಲ್ಲೇ ನರಳಿ ನರಳಿ ಪ್ರಾಣಬಿಟ್ಟ ಮೂರ್ಛೆ ರೋಗಿ

    ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದು ಯುವಕನ ಇಬ್ಬರು ಸ್ನೇಹಿತರ ಮೇಲೆಯೂ ಗುಂಪು ಹಲ್ಲೆ ನಡೆಸಿದೆ. ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದಾರೆ. ಗಲಾಟೆ ಬಿಡಿಸಿದ ಸ್ಥಳೀಯರಿಗೂ ಮುಸ್ಲಿಂ ಯುವಕರ ಗುಂಪು ಬೆದರಿಕೆ ಹಾಕಿದೆ ಎನ್ನಲಾಗಿದೆ. ಘಟನೆ ಕುರಿತು ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶವಸಂಸ್ಕಾರದ ವೇಳೆ ಕೊಲೆ ಶಂಕೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯೇ ಮಾಸ್ಟರ್‌ಮೈಂಡ್

  • ಬೆಳಗಾವಿ, ಮಸ್ಕಿ, ಬಸವಕಲ್ಯಾಣಕ್ಕೆ ಏ.17 ರಂದು ಉಪ ಚುನಾವಣೆ

    ಬೆಳಗಾವಿ, ಮಸ್ಕಿ, ಬಸವಕಲ್ಯಾಣಕ್ಕೆ ಏ.17 ರಂದು ಉಪ ಚುನಾವಣೆ

    ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 17 ರಂದು ಉಪಚುನಾವಣೆ ನಡೆಯಲಿದೆ.

    ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಮತದಾನ ಮೇ 2 ರಂದು ನಡೆಯಲಿದೆ. ಮಾರ್ಚ್‌ 30 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಏಪ್ರಿಲ್‌ 4 ನಾಮಪತ್ರ ಹಿಂತೆಗೆತಕ್ಕೆ ಕೊನೆಯ ದಿನವಾಗಿದೆ.

    ಬೆಳಗಾವಿ ಲೋಕಸಭಾ ಸದಸ್ಯರಾಗಿದ್ದ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿ ಕೊರೊನಾದಿಂದ ಮೃತಪಟ್ಟಿದ್ದರಿಂದ ಕ್ಷೇತ್ರ ತೆರವಾಗಿತ್ತು.

    ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಅವರು ಕೋವಿಡ್‌ ಹಾಗೂ ಬಹುಅಂಗಾಂಗ ವೈಫಲ್ಯದಿಂದ 2020ರ ಸೆಪ್ಟೆಂಬರ್‌ 24 ರಂದು ನಿಧನರಾಗಿದ್ದರು.

    ಮಸ್ಕಿಗೆ ಯಾಕೆ?
    ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕ ಪ್ರತಾಪಗೌಡ ಪಾಟೀಲ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಹೈಕೋರ್ಟ್‌ನಲ್ಲಿ  ಪ್ರತಾಪಗೌಡ ಬಿಜೆಪಿಗೆ ಸೇರ್ಪಡೆಯಾಗುವ ಮೊದಲೇ ತಕರಾರು ಅರ್ಜಿ ಸಲ್ಲಿಸಿದ್ದರು.

    ಕಾಂಗ್ರೆಸ್‌ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 218 ಮತಗಳ ಅಂತರದಿಂದ ಗೆದ್ದಿದ್ದಾರೆ. ಪ್ರತಾಪಗೌಡ ಪಾಟೀಲ ಅವರ ಪುತ್ರಿ ಅಮೆರಿಕದಲ್ಲಿದ್ದರೂ ಅವರ ಹೆಸರಿನಲ್ಲಿ ಮತ್ತು ಮರಣ ಹೊಂದಿದವರ ಹೆಸರಿನಲ್ಲಿ ಮತದಾನವಾಗಿವೆ. ಒಬ್ಬ ಮತದಾರನ ಹೆಸರಿನಲ್ಲಿ ಹಲವು ಮತಗಳನ್ನು ಹಾಕಲಾಗಿದೆ. ಈ ಫಲಿತಾಂಶ ರದ್ದುಪಡಿಸಬೇಕು ಎಂದು ಆರೋಪಿಸಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಬಸನಗೌಡ ತುರ್ವಿಹಾಳ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಾಪಸ್‌ ಪಡೆದ ಹಿನ್ನೆಲೆಯಲ್ಲಿ ಈಗ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ.

  • ಹನುಮನನ್ನು ಲಗ್ನ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ

    ಹನುಮನನ್ನು ಲಗ್ನ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ

    ಲಕ್ನೋ: ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

    ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್‍ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ.

    ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ.

    ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ.

    ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.