Tag: ಮಹದಾಯಿ ಹೋರಾಟ

  • ಸಿದ್ದರಾಮಯ್ಯನವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯೋದಿಲ್ಲ – ಸಿಎಂ ವಿರುದ್ಧ ಹರಿಹಾಯ್ದ ಜೋಶಿ

    ಸಿದ್ದರಾಮಯ್ಯನವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯೋದಿಲ್ಲ – ಸಿಎಂ ವಿರುದ್ಧ ಹರಿಹಾಯ್ದ ಜೋಶಿ

    ಹುಬ್ಬಳ್ಳಿ: ನಿಮಗೆ ಮಾನ ಮರ್ಯಾದೆ ಇಲ್ಲ‌‌ ಅಂದ್ರೆ ನನಗೂ ಇಲ್ಲ ಅಂದುಕೊಂಡಿದ್ದಿರಾ? ಸಿದ್ದರಾಮಯ್ಯನವರೇ (Siddaramaiah) ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ ಅಂತ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹರಿಹಾಯ್ದಿದ್ದಾರೆ.

    ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಪ್ರತಿಕ್ರಿಯೆ ನೀಡಿ ಅವರು, ಸಿದ್ದರಾಮಯ್ಯ ಅವರಿಗೆ ಮಹಾದಾಯಿಗೆ (Mhadei River) EC ಸಿಕ್ಕಿದೆ ಅಂತಾನೂ ಗೊತ್ತಿಲ್ಲ. ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಿ, ನೀವು ಏಕವಚನದಲ್ಲಿ ಮಾತನಾಡಿದ್ದಿರಿ ನಿಮ್ಮ ಸಂಸ್ಕೃತಿಗೆ ನಾನು ಇಳಿಯುವದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದ್ದೀರೋ, ನಾನೂ ಹಾಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದೇನೆ. ಆಡಳಿತ ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದ್ರೆ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ರಾಜ್ಯದ ಮುಖ್ಯಮಂತ್ರಿ ಸಂವಿಧಾನದಲ್ಲಿ ಒಂದೇ ಎಂದು ಹೇಳಿದ್ದಾರೆ.

    ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ. ಸಿದ್ದರಾಮಯ್ಯ ಏನು ಫೈಲ್ ನೋಡದೆ ಉಡಾಫೆ ಹೊಡೀತಾರೆ. ಕಾಂಗ್ರೆಸ್ ಎಲ್ಲಾ ಸಂದರ್ಭದಲ್ಲಿ ಕಳಸಾ ಬಂಡೂರಿಗೆ ಅನ್ಯಾಯ ಮಾಡಿದೆ. ಡಿಪಿಆರ್ ಸಹ ಬಿಜೆಪಿ ಮಾಡಿದೆ, ಆದರೆ ಸೋನಿಯಾ ಗಾಂಧಿ ಗೋವಾಗೆ ಹೋಗಿ ಹನಿ‌ ನೀರು ಕೊಡಲ್ಲ ಅಂದ್ರು ಫಾರೆಸ್ಟ್ ಕ್ಲಿಯರ್ ಬೇಕಾಗಿದೆ, ತಾಂತ್ರಿಕ ಸಮಸ್ಯೆಯಿದೆ. ಹುಲಿ‌ ಸಂರಕ್ಷಣೆ ಪ್ರಾಧಿಕಾರದ ಅನುಮತಿ ಬೇಕಾಗಿದೆ. ಆದರೆ ಅದನ್ನು ಕಾಂಗ್ರೆಸ್ ಸರ್ಕಾರ ಮಾಡಿಲ್ಲ, ಇವರಿಗೆ ಎಷ್ಟು ನಾಲಿಗೆ ಇದೆ ಅಂತ ಗೊತ್ತಾಗಿದೆ. ದೇಶದಲ್ಲಿ ಇವತ್ತು ಕಾಂಗ್ರೆಸ್‌ ಯಾವ ಪರಿಸ್ಥಿತಿಗೆ ಬಂದಿದೆ ಅಂದ್ರೆ ಎರಡು ಸೀಟ್‌ ಕೊಡಿ, ಮೂರು ಸೀಟ್‌ ಕೊಡಿ ಅಂತ ತೃಣಮೂಲ ಕಾಂಗ್ರೆಸ್‌ ಬಳಿ ಭಿಕ್ಷೆ ಬೇಡ್ತಿದ್ದೀರಿ. ‌ಮುಂದೆ ಈಗ ಇರುವ ಸ್ಥಾನಗಳೂ ಕಡಿಮೆಯಾಗಲಿದೆ ಎಂದು ಕುಟುಕಿದ್ದಾರೆ.

    ಸಿಟಿ ರವಿ ಮತ್ತು ಶೋಭಾ ಕರಂದ್ಲಾಜೆ ಗೋ ಬ್ಯಾಕ್ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸ್ವಂತ ಬಲ ಮತ್ತು ಅಭಿವೃದ್ಧಿಯಿಂದ ಗೆಲ್ಲೋದಿಲ್ಲ. ಆದ್ದರಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ಷಡ್ಯಂತ್ರಕ್ಕೆ ಜನ ಬಲಿಯಾಗೋದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

  • ಜನವರಿ 31ರ ಒಳಗಡೆ ಮಹದಾಯಿ ವಿವಾದ ಇತ್ಯರ್ಥಗೊಳಿಸಿ: ರಾಜಕೀಯ ಪಕ್ಷಗಳಿಗೆ ಡೆಡ್‍ಲೈನ್

    ಜನವರಿ 31ರ ಒಳಗಡೆ ಮಹದಾಯಿ ವಿವಾದ ಇತ್ಯರ್ಥಗೊಳಿಸಿ: ರಾಜಕೀಯ ಪಕ್ಷಗಳಿಗೆ ಡೆಡ್‍ಲೈನ್

    ಬೆಂಗಳೂರು: ಮಹದಾಯಿ ಸಮಸ್ಯೆ ಬಗೆ ಹರಿಸಲು ರಾಜಕೀಯ ಪಕ್ಷಗಳಿಗೆ ಹೋರಾಟಗಾರರು ಜನವರಿ ತಿಂಗಳ ಕೊನೆಯವರೆಗೆ ಡೆಡ್ ಲೈನ್ ನೀಡಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೋರಾಟಗಾರ ವಿರೇಶ್ ಸೊಬರದಮಠ, ಅಖಂಡ ಕರ್ನಾಟಕದ ಹೋರಾಟವಾಗಬೇಕು. ಉತ್ತರ ಕರ್ನಾಟಕ ಬೇರೆ ಮಾಡಬೇಡಿ, ಅಭಿವೃದ್ಧಿ ಕೆಲ್ಸವಷ್ಟೇ ಮಾಡಿ. ಇಲ್ಲದೇ ಇದ್ದರೆ ನಮಗೆ ಬೇಸರವಾಗಲಿದೆ ಎಂದು ಹೇಳಿದರು.

    ಬಿಜೆಪಿ ಕಚೇರಿ ಮುಂಭಾಗದ ಹೋರಾಟ ಕೈಬಿಟ್ಟಿದ್ದೇವೆ. ಇನ್ನು ನಾಲ್ಕು ದಿನ ಬಿಟ್ಟು ಮರಳಿ ಬಂದು ಮುಂದಿನ ಹೋರಾಟದ ಬಗ್ಗೆ ಚಿಂತನೆ ನಡೆಸುತ್ತೇವೆ. ಕಲಾವಿದರ ಜೊತೆ ಚರ್ಚಿಸಿ ಮುಂದಿನ ನಿರ್ಣಯ ತೆಗೆದುಕೊಳ್ಳಲು ನಾಲ್ಕುದಿನ ಬಿಟ್ಟು ಬರಲಿದ್ದೇವೆ ಎಂದರು. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

    ನೀರು ಬರುವವರೆಗೆ ನಮ್ಮ ಹೋರಾಟ ನಡೆಯಲಿದ್ದು, ಇದು ಯಶಸ್ವಿಯಾಗಲಿದೆ ಅನ್ನೋ ಭರವಸೆ ಇದೆ. ನರಗುಂದಕ್ಕೆ ಸಿನಿ ನಟರಿಗೆ ಬರುವುದಕ್ಕೆ ಆಹ್ವಾನ ನೀಡಿದ್ದೇವೆ. ಒಂದು ವೇಳೆ ಡೆಡ್ ಲೈನ್ ಒಳಗೆ ಇತ್ಯರ್ಥವಾಗದೇ ಇದ್ದಲ್ಲಿ ಮತ್ತೆ ಹೋರಾಟ ನಡೆಯಲಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಗೋವಾ ಪರವೇ ಕೇಸ್ ಗಟ್ಟಿಯಾಗಿದೆ: ಗೋವಾ ವಕೀಲ ಆತ್ಮಾರಾಮ ನಾಡಕರ್ಣಿ

     

     

     

     

     

     

     

  • ರೈತರು ಬೆಳೆದ ಅನ್ನವನ್ನೇ ನಾವು, ನೀವು ತಿನ್ನೋದು, ಹೋರಾಟಕ್ಕೆ ಬನ್ನಿ: ರೈಗೆ ಪ್ರಥಮ್ ಮನವಿ

    ರೈತರು ಬೆಳೆದ ಅನ್ನವನ್ನೇ ನಾವು, ನೀವು ತಿನ್ನೋದು, ಹೋರಾಟಕ್ಕೆ ಬನ್ನಿ: ರೈಗೆ ಪ್ರಥಮ್ ಮನವಿ

    ಬೆಂಗಳೂರು: ನಿಮ್ಮಪ್ಪ, ನಮ್ಮಪ್ಪ ಎಲ್ಲಾ ತಿನ್ನೋದು ಇದೇ ರೈತರು ಬೆಳೆದ ಅನ್ನವನ್ನ. ನೀವು ಮಹದಾಯಿ ಹೋರಾಟದ ನೇತೃತ್ವ ವಹಿಸಿಕೊಳ್ಳಿ. ಇದು ನನ್ನ ಮನವಿ ಎಂದು ನಟ ನಿರ್ದೇಶಕ ಪ್ರಥಮ್, ನಟ ಪ್ರಕಾಶ್ ರೈ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಹದಾಯಿ ರೈತರ ಪ್ರತಿಭಟನೆಗೆ ಬೆಂಬಲಿಸಿ ಮಾತನಾಡಿದ ಪ್ರಥಮ್, ನನ್ನದು ಪಕ್ಷಾತೀತವಾದ ಹೋರಾಟ, ರೈತರ ಪರವಾದ ಹೋರಾಟವಾಗಿದೆ. ರೈತರು ನ್ಯಾಯ ಕೇಳುವುದು ಅವರ ಹಕ್ಕು, ನೀರು ಕೇಳುವುದು ಅವರ ಜವಾಬ್ದಾರಿ. ಆದರೆ ಮುಗ್ಧ ರೈತರ ಪ್ರತಿಭಟನೆಗೆ ರಾಜಕೀಯ ಬಣ್ಣ ಹಚ್ಚಿದ್ದಾರೆ. ಅದು ಸ್ವಲ್ಪ ಬೇಸರವಾಗಿದೆ ಎಂದು ಹೇಳಿದ್ರು.

    ಸಾಮಾಜಿಕ ವಿಚಾರದಲ್ಲಿ ನೀವು ಬೆಳಕು ಚೆಲ್ಲಿದ್ದೀರಿ. ಗೌರಿ ಲಂಕೇಶ್ ಪ್ರಕರಣದಲ್ಲೂ ಬೆಳಕು ಚೆಲ್ಲಿದ್ದೀರಿ. ನಾವು, ನೀವು, ನಮ್ಮಪ್ಪ ತಿನ್ನೋದು ರೈತರು ಬೆಳೆದ ಅನ್ನವನ್ನು. ಈ ಸಂದರ್ಭದಲ್ಲಿ ರೈತರು ಕಣ್ಣೀರು ಹಾಕುತ್ತಿದ್ದಾರೆ. ನೀವು ಬಂದು ನಾಯಕತ್ವ ವಹಿಸಿಕೊಳ್ಳಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

    ನಾನು ಅವರ ಖಾಸಗಿ ವಿಚಾರ ಮಾತನಾಡುತ್ತಿಲ್ಲ. ಅವರ ಹೇಳಿಕೆಯನ್ನು ವಿರೋಧಿಸುತ್ತೇನೆ ಅಷ್ಟೇ. ನಾನು ಕಾಂಗ್ರೆಸ್-ಬಿಜೆಪಿಯ ಪರ ಅಲ್ಲ, ನಾನು ರೈತ ಪರ. ರಾಜ್ಯದಲ್ಲಿ ಎಲ್ಲರೂ ಪಕ್ಷವನ್ನು ಮರೆತು ಒಟ್ಟೂಗೂಡಿ ಸಮಸ್ಯೆಯನ್ನು ಪರಿಹರಿಸಿ ಎಂದು ಪ್ರಥಮ್ ಹೇಳಿದ್ರು.

    ಸಿನಿಮಾ ನಟರು ರೈತರ ಬೆಂಬಲಕ್ಕೆ ಬಂದಿಲ್ಲ ಎಂಬ ವಿಚಾರಕ್ಕೆ, ದರ್ಶನ್ ಕರುಕ್ಷೇತ್ರ ಸಿನಿಮಾದಲ್ಲಿ, ಸುದೀಪ್ ದಿ ವಿಲನ್ ಮತ್ತು ಬಿಗ್‍ಬಾಸ್ ನಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮಾಹಿತಿ ಕೊಡದೇ ತಕ್ಷಣ ಬರಬೇಕು ಎಂದರೆ ಸಾಧ್ಯವಿಲ್ಲ. ಆದರೆ ಎಲ್ಲರೂ ರೈತರ ಪರ ಇದ್ದಾರೆ. ಶಿವಣ್ಣ ಟಗರು ಆಡಿಯೋ ರಿಲೀಸ್ ಮಾಡಲು ಬಳ್ಳಾರಿಯಲ್ಲಿ ಬ್ಯುಸಿ ಇದ್ದರು. ಆದರೂ ಇಡೀ ಇಂಡಸ್ಟ್ರೀಯನ್ನೇ ಉತ್ತರ ಕನ್ನಡಕ್ಕೆ ಕರೆದುಕೊಂಡು ಹೋಗಿದ್ರು. ಶಿವಣ್ಣ ನಾನು ಯಾರ ಪರನೂ ಅಲ್ಲ. ರೈತರ ಪರ, ರೈತರ ನೀರಿನ ಪರ ಅಂತಾ ಹೇಳಿದ್ದಾರೆ ಎಂದು ಪ್ರಥಮ್ ಹೇಳಿದರು.

  • ಮೂರು ಪಕ್ಷಗಳಿಗೆ ರಾಜಕೀಯ ಬೇಕಿದೆ, ರೈತರ ಬಗ್ಗೆ ಮೋದಿಗೆ ಕಾಳಜಿ ಇಲ್ಲ: ಚೇತನ್

    ಮೂರು ಪಕ್ಷಗಳಿಗೆ ರಾಜಕೀಯ ಬೇಕಿದೆ, ರೈತರ ಬಗ್ಗೆ ಮೋದಿಗೆ ಕಾಳಜಿ ಇಲ್ಲ: ಚೇತನ್

    ಬೆಂಗಳೂರು: ಮಹದಾಯಿ ಹೋರಾಟವನ್ನು ರಾಜಕೀಯ ಪಕ್ಷಗಳು ಪತ್ರ ರಾಜಕೀಯ ನಡೆಸಲು ಬಳಸಿಕೊಳ್ಳುತ್ತಿದ್ದು, ರಾಜ್ಯದ ಪ್ರಮುಖ ಮೂರು ಪಕ್ಷಗಳು ಸಮಸ್ಯೆಯನ್ನು ಬಗೆಹರಿಸಲು ವಿಫಲವಾಗಿವೆ ಎಂದು ನಟ ಚೇತನ್ ವಾಗ್ದಾಳಿ ನಡೆಸಿದ್ದಾರೆ.

    ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡಿದ ಅವರು, ಮೂರು ಪಕ್ಷಗಳು ಮಹದಾಯಿ ಇತ್ಯರ್ಥ ಮಾಡುವಲ್ಲಿ ವಿಫಲವಾಗಿವೆ. ಇವರಿಗೆ ರೈತರ ಸಮಸ್ಯೆ ಬಗೆಹರಿಸುವ ಚಿಂತೆ ಇಲ್ಲ. ಕೇವಲ ಅಧಿಕಾರದ ಆಸೆ ಇದೆ. ಅದ್ದರಿಂದ ಜನ ಸಾಮಾನ್ಯರ ಹೋರಾಟಕ್ಕೆ ಪರ್ಯಾಯ ಶಕ್ತಿ ಬೇಕಿದೆ ಎಂದರು.

    ಮಹದಾಯಿ ಸಮಸ್ಯೆ ಬರೀ ಪಕ್ಷದ ಸಮಸ್ಯೆ ಮಾತ್ರವಲ್ಲ. ಈ ಸಮಸ್ಯೆ ಕರ್ನಾಟಕದ ಮೂಲಭೂತ ಹಕ್ಕು. ಯಡಿಯೂರಪ್ಪ ಅವರು 15 ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಅವರು ತಮ್ಮ ಮಾತನ್ನು ಉಳಿಸಿಕೊಳ್ಳದೇ ಈಗ ವಚನ ಭ್ರಷ್ಟರಾಗಿದ್ದಾರೆ ಎಂದು ಕಿಡಿಕಾರಿದರು.

    ಇದೇ ವೇಳೆ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ಮೋದಿ ಹಲವು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಆದರೆ ಒಮ್ಮೆಯೂ ಮಹದಾಯಿ ಕುರಿತು ಮಾತನಾಡಿಲ್ಲ. ಕೇವಲ ಬುಲೆಟ್ ರೈಲು, ಸ್ಮಾಟ್ ಸಿಟಿ, ಡಿಜಿಟಲ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಅವರಿಗೆ ರೈತರು, ಜನಸಾಮಾನ್ಯರ ಬಗ್ಗೆ ಕಳಜಿ ಇಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ವಿಚಾರವಾಗಿ ಮಧ್ಯ ಪ್ರವೇಶ ಮಾಡಬೇಕೆಂದು ಎಂದು ಆಗ್ರಹಿಸಿದರು.

    ರಾಜ್ಯಸರ್ಕಾರವು ಕೇವಲ ಪತ್ರ ಬರೆದು ಕೈತೊಳೆದುಕೊಂಡಿದೆ. ಆದರೆ ಸರ್ಕಾರದ ಪ್ರತಿನಿಧಿಗಳನ್ನು ರಾಷ್ಟ್ರಪತಿಗಳ ಬಳಿ ಕಳುಹಿಸಿ ಮನವಿ ಮಾಡಬೇಕು. ರಾಜಕೀಯ ಬಿಟ್ಟು ಕೆಲಸ ಮಾಡಿದರೆ ಈ ವಿಚಾರವನ್ನು ಕೆಲವೇ ನಿಮಿಷಗಳಲ್ಲಿ ಬಗೆಹರಿಸಬಹುದು. ಆದರೆ ಅವರಿಗೆ ಈ ಸಮಸ್ಯೆಯನ್ನು ಪರಿಹರಿಸುವ ಅವಶ್ಯಕತೆ ಇಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಬಿಜೆಪಿಗೆ ತಿರುಗುಬಾಣವಾದ ಮಹದಾಯಿ ವಿವಾದ – ಉಸ್ತುವಾರಿಗಳ ಮೇಲೆ ಶಾ ಗರಂ

    ಕನ್ನಡ ಚಿತ್ರರಂಗ ನಿರಂತರವಾಗಿ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸುತ್ತದೆ. ಕೇವಲ ಯಾವುದೇ ಒಂದು ಸ್ಥಳಕ್ಕೆ ಭೇಟಿ ನೀಡಿ ಮೆರವಣಿಗೆ ಮಾಡಿದರೆ ಸಮಸ್ಯೆ ಬಗೆ ಹರಿಯುವುದಿಲ್ಲ. ನಿರಂತರವಾಗಿ ಸಮಸ್ಯೆ ಬಗೆ ಹರಿಯುವವರೆಗೆ ನಾವು ಹೋರಾಟಗಾರರ ಪರ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

    ಹೆಗ್ಡೆಗೆ ತಿರುಗೇಟು: ಕೇಂದ್ರ ಸಚಿವರೊಬ್ಬರು ಕೆಲಸಕ್ಕೆ ಬಾರದ ವಿಷಗಳ ಕುರಿತು ಮಾತನಾಡುತ್ತಾರೆ. ಆದರೆ ರೈತರ ಪರವಾಗಿ ಧ್ವನಿ ಎತ್ತಲಿ. ಅದನ್ನು ಬಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ಟಾಂಗ್ ನೀಡಿದರು. ಇದನ್ನೂ ಓದಿ: Exclusive ಮಹದಾಯಿ ಪ್ರತಿಭಟನೆ, ಅನಂತ್‍ ಕುಮಾರ್ ಭಾಷಣ: ಬಿಜೆಪಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

    https://www.youtube.com/watch?v=hzIeun7Lix8

     

     

  • 2 ವರ್ಷವಾದ್ರೂ ರೈತರ ಹೋರಾಟಕ್ಕೆ ಬೆಲೆಯಿಲ್ಲ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ `ಮಾಡು ಇಲ್ಲವೇ ಮಡಿ’ ಹೋರಾಟ

    2 ವರ್ಷವಾದ್ರೂ ರೈತರ ಹೋರಾಟಕ್ಕೆ ಬೆಲೆಯಿಲ್ಲ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ `ಮಾಡು ಇಲ್ಲವೇ ಮಡಿ’ ಹೋರಾಟ

    ಗದಗ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ ರೈತರ ಹೋರಾಟ 2 ವರ್ಷ ಪೂರೈಸಿದ ಹಿನ್ನಲೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ “ಮಾಡು ಇಲ್ಲವೇ ಮಡಿ” ಹೋರಾಟ ಆರಂಭವಾಗಿದೆ.

    ಹೋರಾಟ ಸಮಿತಿ ಅಧ್ಯಕ್ಷ ವೀರೇಶ ಸೊಬರದಮಠ ಅವರು ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಉಪವಾಸ ಸತ್ಯಾಗ್ರಹವನ್ನು ಹಿಂಪಡೆದುಕೊಳ್ಳುವಂತೆ ನರಗುಂದ ತಾಲೂಕ ಅಧಿಕಾರಿಗಳಾದ ತಹಶೀಲ್ದಾರ್, ಪುರಸಭೆ ಮುಖ್ಯಾಧಿಕಾರಿ, ಡಿ.ವೈ.ಎಸ್.ಪಿ, ಸಿಪಿಐ ಸೇರಿದಂತೆ ಅನೇಕ ಅಧಿಕಾರಿಗಳು ರಾತ್ರಿ ವೇಳೆ ಹೋರಾಟ ವೇದಿಕೆ ಬಳಿ ಆಗಮಿಸಿ ಮನವೊಲಿಸಿ ಮನವಿ ಮಾಡಿಕೊಂಡ್ರು. ಆದ್ರೆ ಇದಕ್ಕೆ ರೈತ ಹೋರಾಟ ಮುಖಂಡ ವಿರೇಶ್ ಸೊಬರದಮಠ ಹಿಂದೆ ಸರಿಯಲಿಲ್ಲ.

    ಹೋರಾಟ ಯಶಸ್ವಿಯಾಗೊವರೆಗೂ ಉಪವಾಸ ಸತ್ಯಾಗ್ರಹ ಮಾಡಲು ತಿರ್ಮಾನ ತೆಗೆದುಕೊಂಡಿದ್ದೆನೆ. ಕಠಿಣ ನಿರ್ಧಾರ ಮೂಲಕ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ ಮಾಡ್ತೆನೆ. ಪ್ರಾಣ ಹೊದ್ರೂ ಚಿಂತೆ ಇಲ್ಲ ಉಪವಾಸ ಹಿಂಪಡೆಯುವುದಿಲ್ಲ. ಯೋಜನೆ ಇತ್ಯರ್ಥವಾಗಲಿ, ಇಲ್ಲವೇ ಪ್ರಾಣ ಹೋಗಲಿ ಎಂದು ಹೋರಾಟದ ಮುಖಂಡ ಸೊಬರದಮಠ ಹೇಳಿದರು.

    ಹೋರಾಟ ಮುಖಂಡರ ದೃಢ ನಿರ್ಧಾರದಿಂದ ಅಲ್ಲಿ ನೆರೆದಿದ್ದ ಅನೇಕ ಹೋರಾಟಗಾರರು ಕಣ್ಣಿರಿಟ್ಟರು. ಉಪವಾಸ ಕೈ ಬಿಡುವಂತೆ ಅವರೂ ಮನವೊಲಿಸಿದ್ರೂ ಸೊಬರದಮಠ ಉಪವಾಸದಿಂದ ಹಿಂದೆ ಸರಿಯದೆ ಹಠಹಿಡಿದು ಕುಳಿತಿದ್ದಾರೆ.

    ಆರೋಗ್ಯದಲ್ಲಿ ವ್ಯಥೆಯುಂಟಾದ್ರೆ ನೋಡಿಕೊಳ್ಳಲು ಆರೋಗ್ಯ ಅಧಿಕಾರಿ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೇರಿಕೊಂಡು ನೀರು ಕೊಟ್ಟು ಜನ್ರ ಪ್ರಾಣ ಉಳಿಸುತ್ತಾ ಅಥವಾ ಹೋರಾಟಗಾರರ ಪ್ರಾಣ ತೆಗೆದುಕೊಳ್ಳುತ್ತವಯಾ ಎಂದು ಕಾದು ನೋಡಬೇಕಿದೆ.

     

  • ಕಳಸಾ ಬಂಡೂರಿ ಹೋರಾಟಕ್ಕೆ 2 ವರ್ಷ: ಅಮರಣಾಂತ ಉಪವಾಸಕ್ಕೆ ಕುಳಿತ್ರು ರೈತರು

    ಕಳಸಾ ಬಂಡೂರಿ ಹೋರಾಟಕ್ಕೆ 2 ವರ್ಷ: ಅಮರಣಾಂತ ಉಪವಾಸಕ್ಕೆ ಕುಳಿತ್ರು ರೈತರು

    ಗದಗ: ಕಳಸಾ ಬಂಡೂರಿ, ಮಹದಾಯಿ ಹೋರಾಟ ಬರೋಬ್ಬರಿ ಎರಡು ವರ್ಷ ಪೂರೈಸಿದೆ. ಆದರೂ ಉತ್ತರ ಕರ್ನಾಟಕ ಭಾಗಕ್ಕೆ ನೀರು ಸಿಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಮಹದಾಯಿ ಹೋರಾಟಗಾರರು ಮಾಡು ಇಲ್ಲವೇ ಮಡಿ ಎನ್ನುವ ತೀರ್ಮಾನವನ್ನು ತೆಗೆದುಕೊಂಡು ಅಮರಣಾಂತ ಉಪವಾಸಕ್ಕೆ ಧುಮುಕಿದ್ದಾರೆ.

    ಹೌದು. ಭಾನುವಾರ ನರಗುಂದ ಪಟ್ಟಣದ ಬಾಬಾಸಾಹೇಬ್ ವೃತ್ತದಿಂದ ಹೋರಾಟ ವೇದಿಕೆಯವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿಯೊಬ್ಬರು ಮಹಾತ್ಮಗಾಂಧಿ ವೇಷ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ನಂತರ ಹೋರಾಟ ವೇದಿಕೆಯಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ರೈತಗೀತೆಗೆ ಹಸಿರು ಶಾಲು ಬೀಸುವ ಮೂಲಕ ಧ್ವನಿಗೂಡಿಸಿದ್ದು ವಿಶೇಷವಾಗಿತ್ತು.

    ಸುತ್ತಲಿನ ಸಾವಿರಾರು ಗ್ರಾಮಸ್ಥರು ಆಗಮಿಸಿ ಸಮಾವೇಶವನ್ನು ಬೆಂಬಲಿಸಿದರು. ನಾಡಿನ ಹಲವು ಸಂಘಟನೆ, ಹೋರಾಟಗಾರರು ಪಾಲ್ಗೊಂಡಿದ್ದರು. ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿ ಆಗುವವರೆಗೂ ಉಪವಾಸ ಸತ್ಯಾಗ್ರಹಕ್ಕೆ ನಿರ್ಣಯ ಮಂಡಿಸಲಾಯಿತು. ಇನ್ನು ಉಪವಾಸದಿಂದ ಸಾವನ್ನಪ್ಪಿದ್ರೆ ಮಹದಾಯಿ ತೀರದಲ್ಲಿ ಅಂತ್ಯಕ್ರಿಯೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು. ಈ ನಿರ್ಣಯ ನೆರೆದ ಸಾವಿರಾರು ರೈತರಲ್ಲಿ ಮತ್ತಷ್ಟು ಆಕ್ರೋಶದ ಕಿಡಿ ಹೊತ್ತಿಸಿತು.

    ಉತ್ತರ ಕರ್ನಾಟಕದ 4 ಜಿಲ್ಲೆ 11 ತಾಲೂಕಿಗೆ ವರವಾಗಬೇಕಿದ್ದ ಯೋಜನೆ ನೆನೆಗುದಿಗೆ ಬಿದ್ದು ಹಲವು ದಶಕವಾಯಿತು. ಎರಡು ವರ್ಷದ ಈ ಹೋರಾಟದಲ್ಲಿ ನೇತೃತ್ವ ವಹಿಸಿದ ವಿರೇಶ್ ಸೊಬರದಮಠ ಸನ್ಯಾಸ ಧೀಕ್ಷೆ ಸ್ವೀಕರಿಸುವ ಮೂಲಕ ಸರ್ಕಾರಗಳ ವಿರುದ್ಧ ಸಾತ್ವಿಕ ಆಕ್ರೋಶ ಹೊರಹಾಕಿದ್ರು. ಇದೀಗ ಮತ್ತೆ ಮಾಡು ಇಲ್ಲವೇ ಮಡಿ ಹೋರಾಟದ ಮೂಲಕ ಸೊಬರದಮಠ ಸರ್ಕಾರಗಳ ವಿರುದ್ಧ ಕಣಕಹಳೆ ಮೊಳಗಿಸಿದ್ದಾರೆ.

    ಈ ವೇಳೆ ಶಾಸಕ ಪುಟ್ಟಣ್ಣಯ್ಯ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಿಡಿಕಾರಿದರು. ಏಳು ವರ್ಷದ ನರಗುಂದದ ಬಾಲಕಿ ಶ್ರೇಯಾ ಹಾದಿಮನಿ ಹೋರಾಟ ವೇದಿಕೆಯಲ್ಲಿ ಕಣ್ಣೀರಿಟ್ಟಳು. ಹೋರಾಟ ವೇದಿಕೆಯಲ್ಲಿ ದುಃಖಿತಳಾದ ಶ್ರೇಯಾಗೆ ಹೋರಾಟಗಾರರು ಸಂತೈಸಿದರು. ನರಗುಂದ ಹೋರಾಟದಲ್ಲಿ ಮಹದಾಯಿ, ಕಳಸಾ ಬಂಡೂರಿ ಯೋಜನೆಗಾಗಿ ಸರ್ಕಾರಗಳ ವಿರುದ್ಧ ಬಾಲಕಿ ವಾಗ್ದಾಳಿ ನಡೆಸಿದಳು.

     

     

  • 5 ಏಟು ತಿಂದಿದ್ರೆ 500, 14 ಏಟು ತಿಂದವನಿಗೆ 1400 ರೂ: ಲಾಠಿ ಏಟು ತಿಂದಿದ್ದ ಯಮನೂರ ಗ್ರಾಮಸ್ಥರಿಗೆ ಸರ್ಕಾರದ ಪರಿಹಾರ

    5 ಏಟು ತಿಂದಿದ್ರೆ 500, 14 ಏಟು ತಿಂದವನಿಗೆ 1400 ರೂ: ಲಾಠಿ ಏಟು ತಿಂದಿದ್ದ ಯಮನೂರ ಗ್ರಾಮಸ್ಥರಿಗೆ ಸರ್ಕಾರದ ಪರಿಹಾರ

    ಧಾರವಾಡ: ಕಳೆದ ವರ್ಷ ಜುಲೈನಲ್ಲಿ ಕಳಸಾ ಬಂಡೂರಿ ಯೋಜನೆಗಾಗಿ ಬೀದಿಗಿಳಿದಿದ್ದ ರೈತರ ಮೇಲೆ ಪೊಲೀಸರು ಅಮಾನವೀಯವಾಗಿ ಲಾಠಿ ಬೀಸಿದ್ರು. ಧಾರವಾಡದ ನವಲಗುಂದದ ಯಮನೂರ ಗ್ರಾಮಸ್ಥರ ಮೇಲೆ ಯಮನಂತೆ ಎರಗಿದ್ದ ಪೊಲೀಸರು ಮಹಿಳೆಯರು, ಮಕ್ಕಳು ಎನ್ನದೇ ಲಾಠಿ ಬೀಸಿದ್ರು. ಈಗ ಲಾಠಿ ಏಟು ತಿಂದ ರೈತರಿಗೆ ಸರ್ಕಾರ ಪರಿಹಾರವೇನೋ ಕೊಟ್ಟಿದೆ. ಆದರೆ ಇಲ್ಲಿಯ ಜನರು ತಿಂದ ಲಾಠಿ ಏಟಿಗೆ ಸರ್ಕಾರ 100 ರೂಪಾಯಿ ಬೆಲೆ ಕಟ್ಟಿದೆಯೇ ಎಂಬ ಅನುಮಾನ ಮೂಡಿದೆ

    ಕಳೆದ ವರ್ಷ ಜುಲೈನಲ್ಲಿ ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಧಾರವಾಡ ಜಿಲ್ಲೆಯಲ್ಲಿ ನಡೆದ ಹೋರಾಟದ ವೇಳೆ, ಪೊಲೀಸರು ನವಲಗುಂದ ತಾಲೂಕಿನ ಯಮನೂರ ಗ್ರಾಮಸ್ಥರ ಮೇಲೆ ನಡೆಸಿದ ದೌರ್ಜನ್ಯ ಎಲ್ಲರಿಗೂ ಗೊತ್ತಿರುವ ವಿಚಾರ. ಈ ಘಟನೆಯಲ್ಲಿ ಗ್ರಾಮದ ಎಷ್ಟೋ ಜನರು ಲಾಠಿ ಏಟಿನಿಂದ ಬಳಲಿ ಹೋಗಿದ್ದರು. ಮಹದಾಯಿ ನೀರಿಗಾಗಿ ನಡೆದಿದ್ದ ಈ ಹೋರಾಟದ ವೇಳೆ ಮಹಿಳೆಯರು, ವೃದ್ಧರು ಎನ್ನದೇ ಪೊಲೀಸರು ಲಾಠಿಯಿಂದ ಬಡಿದಿದ್ದರು. ಘಟನೆ ನಂತರ ಎಷ್ಟೋ ಜನಾ ಏಳೊಕೂ ಆಗದೇ ಮನೆಯಲ್ಲೇ ಚಿಕಿತ್ಸೆ ಮಾಡಿಸಿದ್ದರು. ಅದಕ್ಕೆ ಸರ್ಕಾರ ಈಗ ಬೆಲೆ ಕಟ್ಟಿದೆ. ಗ್ರಾಮದಲ್ಲಿ 165 ಜನರಿಗೆ ಲಾಠಿ ಏಟು ಬಿದ್ದಿತ್ತು. ಅವರಿಗೆ ಸರ್ಕಾರ 500, 1 ಸಾವಿರ, 2 ಸಾವಿರ ಹಾಗೂ 3 ಸಾವಿರ ರೂ. ಪರಿಹಾರ ನೀಡಿದೆ. ಇನ್ನು ಪ್ರತಿ ಏಟಿಗೆ ನೂರು ರೂಪಾಯಿಯಂತೆ ಬೆಲೆ ಕಟ್ಟಿರುವ ಸರ್ಕಾರ, 5 ಏಟು ತಿಂದವನಿಗೆ 500 ರೂಪಾಯಿ ಹಾಗೂ 14 ಏಟು ತಿಂದವನಿಗೆ 1400 ರೂಪಾಯಿ ಚೆಕ್ ನೀಡಿದೆ.

    ಗ್ರಾಮದ ಇಬ್ಬರಿಗೆ ಮಾತ್ರ 10 ಸಾವಿರ ರೂ. ಹಾಗೂ ಓರ್ವ ವೃದ್ಧರಿಗೆ 25 ಸಾವಿರ ರೂ. ಪರಿಹಾರ ನೀಡಿದ್ದು ಬಿಟ್ಟರೆ ಉಳಿದವರಿಗೆಲ್ಲಾ ಬಿಡಿಗಾಸಿನ ಚೆಕ್ ನೀಡಿದೆ. ಶಿವಾನಂದ ಎಂಬವರ ಮನೆಯೊಂದರಲ್ಲೇ 3 ಜನರಿಗೆ ಲಾಠಿ ಏಟು ಕೊಟ್ಟಿದ್ದರು. ಅದರಲ್ಲಿ ಶಿವಪ್ಪ ಚುಳುಕಿ ಹಾಗೂ ಅವರ ತಂದೆ ಜೈಲು ಸೇರಿದ್ದರು. ಆದರೆ ಜೈಲಿನಿಂದ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಿದ್ದೇ 30 ರಿಂದ 40 ಸಾವಿರ ರೂ. ಬಿಲ್ ಆಗಿದೆ. ಆದರೆ ಅವರ ಮನೆಗೆ 2700 ರೂ. ಚೆಕ್ ಮಾತ್ರ ಬಂದಿದೆ. ಹೀಗಾಗಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸುವ ಗ್ರಾಮಸ್ಥರು, ಪೊಲೀಸರ ಲಾಠಿ ಏಟು ಇನ್ನೂ ಮಾಸಿಲ್ಲ ಅಂತಾರೆ.

    ಸರ್ಕಾರ ನ್ಯಾಯಯುತವಾಗಿ ಪರಿಹಾರ ನೀಡಬೇಕಿತ್ತು. ಅದನ್ನ ಬಿಟ್ಟು ಲಾಠಿ ಏಟಿಗೆ ಬೆಲೆ ಕಟ್ಟಿದೆ ಎಂಬುದು ಇಲ್ಲಿನ ಜನರ ಆಕ್ರೋಶವಾಗಿದೆ. ಇನ್ನು ಕೆಲವರು ಜೈಲಿಗೆ ಹೋದ ಕಾರಣ ಅವರ ಹೊಲದಲ್ಲಿದ್ದ ಬೆಳೆ ಕೂಡ ನಾಶವಾಗಿತ್ತು. ಅದು ಕೂಡ ರೈತರಿಗೆ ನಷ್ಟ ಉಂಟು ಮಾಡಿತ್ತು.