Tag: ಮಹಾತ್ಮ ಗಾಂಧಿ

  • ಮಹಾತ್ಮ ಗಾಂಧಿ ಮೊಮ್ಮಗ ನಿಧನ

    ಮಹಾತ್ಮ ಗಾಂಧಿ ಮೊಮ್ಮಗ ನಿಧನ

    ಮುಂಬೈ: ಮಹಾತ್ಮ ಗಾಂಧಿಯವರ (Mahatma Gandhi) ಮೊಮ್ಮಗ ಅರುಣ್ ಗಾಂಧಿ (Arun Gandhi) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ (Maharashtra) ಕೊಲ್ಲಾಪುರದಲ್ಲಿ ನಿಧನರಾದರು.

    ಲೇಖಕ ಹಾಗೂ ಸಾಮಾಜಿಕ ರಾಜಕೀಯ ಹೋರಾಟಗಾರರಾದ ಅರುಣ್ ಗಾಂಧಿ (89) ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಮಂಗಳವಾರ ಮೃತಪಟ್ಟಿದ್ದು, ಅಂತ್ಯಕ್ರಿಯೆಯನ್ನು ಕೊಲ್ಲಾಪುರದಲ್ಲಿ ನಡೆಸಲಾಯಿತು ಎಂದು ಅವರ ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಪ್ರಣಾಳಿಕೆಯಲ್ಲಿ ಪಂಚರತ್ನ ಯೋಜನೆ ನಕಲು ಮಾಡಿದ್ದಾರೆ: ಕುಮಾರಸ್ವಾಮಿ

    1934ರಂದು ದಕ್ಷಿಣ ಆಫ್ರಿಕಾದ ಡರ್ಬನ್‍ನಲ್ಲಿ ಮಣಿಲಾಲ್ ಗಾಂಧಿ ಹಾಗೂ ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ ಅವರು ಹೋರಾಟಗಾರರಾಗಿ ತಮ್ಮ ತಾತ ಅಂದರೇ ಮಹಾತ್ಮ ಗಾಂಧಿ ಅವರ ಹೆಜ್ಜೆಯನ್ನೇ ಅನುಸರಿಸುತ್ತಿದ್ದರು. ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಭಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

  • ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್

    ಮೋದಿ ವಿರುದ್ಧ ವಿವಾದಿತ ಹೇಳಿಕೆ – ಸತ್ಯವೇ ನನ್ನ ದೇವರು ಎಂದ ರಾಹುಲ್

    ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಹಿನ್ನೆಲೆ ಕೋರ್ಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಗಾ ಸತ್ಯವೇ ನನ್ನ ದೇವರು ಎನ್ನುತ್ತ ಮಹಾತ್ಮ ಗಾಂಧೀಜಿಯವರ ಸಾಲುಗಳನ್ನು ನೆನಪಿಸಿಕೊಂಡಿದ್ದಾರೆ.

    ನನ್ನ ಧರ್ಮ ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು. ಅದನ್ನು ಪಡೆಯುವ ಸಾಧನ ಅಹಿಂಸೆ ಎಂಬ ಬಾಪೂಜಿಯವರ ಸಾಲನ್ನು ರಾಹುಲ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

    2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

    ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

    ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು. ಇದನ್ನೂ ಓದಿ: ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು

  • ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

    ನವದೆಹಲಿ: ಪಾಕಿಸ್ತಾನದ (Pakistan) ಶಾಲೆಗಳಲ್ಲಿನ 8 ಮತ್ತು 9 ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳಲ್ಲಿ ಭಾರತ (India) ವಿರೋಧಿ ಹಾಗೂ ಹಿಂದೂ ವಿರೋಧಿ ವಿಷಯಗಳು ತುಂಬಿವೆ ಎಂದು ವರದಿಯಾಗಿದೆ.

    ತನ್ನ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಿರುವ ಪಠ್ಯಪುಸ್ತಕಗಳಲ್ಲಿ ಭಾರತದ ವಿರುದ್ಧ ತಪ್ಪು ಮಾಹಿತಿಗಳನ್ನು ಮಕ್ಕಳಿಗೆ ಕಲಿಸುತ್ತಿದೆ ಎಂದು ತಿಳಿದು ಬಂದಿದೆ.

    ನ್ಯಾಷನಲ್ ಬುಕ್ ಫೌಂಡೇಶನ್ 8 ಮತ್ತು 9 ನೇ ತರಗತಿಯ ಪಠ್ಯಪುಸ್ತಕಗಳನ್ನು ಪ್ರಕಟಿಸಿದೆ. ಪುಸ್ತಕದಲ್ಲಿ ಬ್ರಿಟಿಷರ (British) ಕಾಲದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ರಚನೆಗೆ ಅನೇಕ ಭಾರತೀಯರು ಕೈ ಜೋಡಿಸಿದರು. ಧರ್ಮದಲ್ಲಿ ಸಂಪೂರ್ಣವಾಗಿ ಹಿಂದೂವಾಗಿದ್ದರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಡೀ ಭಾರತದ ಧ್ವನಿಗಿಂತ ಹೆಚ್ಚು ಹಿಂದೂ ಧ್ವನಿಯ ರಾಜಕೀಯ ಪಕ್ಷವಾಯಿತು ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ

    ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧಿ (Mahatma Gandhi)ಅವರನ್ನು ಕೇವಲ “ಹಿಂದೂ ನಾಯಕ” ಎಂದು ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಪಠ್ಯ ಪುಸ್ತಕದಲ್ಲಿ “ಮುಸ್ಲಿಮರನ್ನು ಕಡೆಗಣಿಸುವ” ಆರೋಪವನ್ನು ಹೊರಿಸಲಾಗಿದೆ. ಗಾಂಧಿ ಮತ್ತು ಅವರ ಯುವ ಬೆಂಬಲಿಗರು ಕಾಂಗ್ರೆಸ್‍ನ ಉಸ್ತುವಾರಿಯನ್ನು ವಹಿಸಿಕೊಂಡರು. ಮುಸ್ಲಿಂ ಹಕ್ಕುಗಳನ್ನು ಕಡೆಗಣಿಸಿ ದ್ವೇಷ, ಅಸೂಯೆ ಮತ್ತು ಸಂಕುಚಿತ ಮನೋಭಾವವನ್ನು ಸೃಷ್ಟಿಸಿದರು ಎಂದು ಪಠ್ಯದಲ್ಲಿ ಉಲ್ಲೇಖಿಸಲಾಗಿದೆ.

    ಮುಸ್ಲಿಂ (Muslim) ಹಕ್ಕುಗಳ ಹೋರಾಟದಲ್ಲಿ ಹಿಂದೂಗಳನ್ನು (Hindu) ನಂಬಲು ಸಾಧ್ಯವಾಗದಿರುವ ಬಗ್ಗೆ ಪುಸ್ತಕದಲ್ಲಿ ಹಲವಾರು ನಿದರ್ಶನಗಳಿವೆ. ಬಂಗಾಳದ ವಿಭಜನೆಯು ಮುಸ್ಲಿಮರಿಗೆ ಆ ಅರಿವನ್ನು ತಂದಿತು. ಹಿಂದೂ ಬಹುಸಂಖ್ಯಾತರಿಂದ ಯಾವುದೇ ನ್ಯಾಯೋಚಿತ ಮಾರ್ಗವನ್ನು ನಿರೀಕ್ಷಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಮತದಾನ ಯೋಜನೆಯನ್ನು ರೂಪಿಸಿದರು ಎಂದು ಹೇಳಲಾಗಿದೆ.

    ಮುಸ್ಲಿಮರು ಹಿಂದೂಗಳನ್ನು ಅಥವಾ ಬ್ರಿಟಿಷರನ್ನು ನಂಬಲು ಸಾಧ್ಯವಿಲ್ಲ. ಇದು ಅರಿವಾದ ಬಳಿಕ ಖಿಲಾಫತ್ ಚಳುವಳಿಯು (Khilafat Movement) ಭಾರತದ ಮುಸ್ಲಿಮರಿಗೆ ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ತಂದಿತು. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವೆಂದು ಹೇಳಿಕೊಂಡಿತು. ಆದರೆ ವಿಭಜನೆಯ ಪ್ರಶ್ನೆಯಲ್ಲಿ ಅದು ಮತೀಯ ಹಿಂದೂ ಸಂಘಟನೆಯಂತೆ ವರ್ತಿಸಿತು ಎಂದು ಬರೆಯಲಾಗಿದೆ.

    ಪಾಕಿಸ್ತಾನದ ಹುಟ್ಟಿನ ಬಗ್ಗೆ ಮಾತನಾಡುವ ಪ್ರತಿಯೊಂದು ಅಧ್ಯಾಯದಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಬಹುಪಾಲು ಭಾಗವಾಗಿದ್ದ ಮುಸ್ಲಿಮರನ್ನು ಹಿಂದೂಗಳಿಂದ ಪ್ರತ್ಯೇಕ ಭಾಗವಾಗಿ ಉಲ್ಲೇಖಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

    ಮುಖ್ಯವಾಗಿ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಭಾಗವಹಿಸುವಿಕೆ ಕೂಡ “ಮುಸ್ಲಿಂ ರಾಷ್ಟ್ರೀಯತೆ” ಸಲುವಾಗಿ ಎಂದು ಪದೇ ಪದೇ ಪುಸ್ತಕದಲ್ಲಿ ಒತ್ತಿ ಹೇಳಲಾಗಿದೆ. ಪ್ರಶ್ನೋತ್ತರ ವಿಭಾಗದಲ್ಲಿಯೂ ಸಹ ಪುಸ್ತಕವು ವಿದ್ಯಾರ್ಥಿಗಳಿಗೆ “ಭಾರತದಲ್ಲಿ ಮುಸ್ಲಿಂ ರಾಷ್ಟ್ರೀಯತೆಯ ಕಾರಣವನ್ನು ಬೆಂಬಲಿಸಲು ಅಧ್ಯಾಯದಲ್ಲಿ ಉಲ್ಲೇಖಿಸಲಾದ ಎಲ್ಲಾ ನಾಯಕರು ನಿರ್ವಹಿಸಿದ ಪಾತ್ರವನ್ನು ಚರ್ಚಿಸಲು” ಹೇಳಲಾಗಿದೆ.

    9 ನೇ ತರಗತಿಯ ಅಧ್ಯಾಯಗಳಲ್ಲಿ ನ್ಯಾಷನಲ್ ಕಾಂಗ್ರೆಸ್ ಉರ್ದುವನ್ನು ಹಿಂದಿಗೆ ಬದಲಿಸಲು ಕ್ರಮ ಕೈಗೊಂಡಿತು. ಮತ್ತು ಅಧಿಕೃತ ಗೀತೆಯಾಗಿ `ಒಂದೇ ಮಾತರಂ’ ಅನ್ನು ಪರಿಚಯಿಸಲು ಪ್ರಯತ್ನಿಸಿತು. ಈ ಹಾಡು ಮುಸ್ಲಿಂ ವಿರೋಧಿ ಹಿನ್ನೆಲೆಯನ್ನು ಹೊಂದಿತ್ತು ಮತ್ತು ದ್ವೇಷವನ್ನು ಕೆರಳಿಸಿತು. ಪಾಕಿಸ್ತಾನದಲ್ಲಿ ವಿಭಜನೆಯ ನಂತರ ಹಿಂದೂಗಳು ಮತ್ತು ಮುಸ್ಲಿಮರಿಗೆ ಪ್ರತ್ಯೇಕ ಗುಣಮಟ್ಟದ ಆಹಾರ ನೀಡಲಾಯಿತು. ಭಾರತದ ಸರ್ಕಾರ ಸಾಮೂಹಿಕ ಹಿಂಸಾಚಾರವನ್ನು ನಡೆಸಿತು. ನೀರಾವರಿ ವಿಚಾರದಲ್ಲೂ ಪಾಕ್ ಗೆ ಭಾರತದಿಂದ ಅನ್ಯಾಯವಾಗಿದೆ ಎಂದು ಪಠ್ಯದಲ್ಲಿ ತಿಳಿಸಿದೆ. ಇದನ್ನೂ ಓದಿ: 1,487 ಗ್ರಾಂ ಚಿನ್ನ ಸಾಗಾಟ ಮಾಡ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

  • ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪುಂಸಕ- ಹೆಚ್‍ಡಿಕೆ ವಿರುದ್ಧ ಸಿಟಿ ರವಿ ವಾಗ್ದಾಳಿ

    ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪುಂಸಕ- ಹೆಚ್‍ಡಿಕೆ ವಿರುದ್ಧ ಸಿಟಿ ರವಿ ವಾಗ್ದಾಳಿ

    ನವದೆಹಲಿ: ಗಾಂಧಿಯನ್ನು ಹತ್ಯೆ ಮಾಡಿದ್ದು ಬ್ರಾಹ್ಮಣ ಸಮುದಾಯದ ನಾಥೂರಾಮ್ ಗೂಡ್ಸೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಮಹಾತ್ಮ ಗಾಂಧಿ ಮೇಲೆ ಜನರು ನಂಬಿಕೆ ಇಟ್ಟಿದ್ದರು, ಆದರೂ ದೇಶ ವಿಭಜನೆಯಾಯಿತು. ಟಿಪ್ಪು ಸುಲ್ತಾನ್ (Tippu Sultan) ಜಾತಿ ಉಲ್ಲೇಖಿಸಿ ಅವನು ಮಾಡಿದ ಮಾರಣಹೋಮದ ಬಗ್ಗೆ ಅವರು ಮಾತನಾಡುತ್ತಾರಾ? ಸತ್ಯವನ್ನು ಹೇಳಲು ಧೈರ್ಯ ಇಲ್ಲದವನು ರಾಜಕೀಯ ನಪಂಸಕ ಎಂದು ಸಿ.ಟಿ ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

    ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಸರ್ವಾಂತರ್ಯಾಮಿ, ಸರ್ವಜ್ಞರಾಗಿದ್ದಾರೆ ಅವರಿಗೆ ಎಲ್ಲವೂ ಗೊತ್ತಿದೆ. ಈಗ ಯಾವುದರ ಬಗ್ಗೆ ಚರ್ಚೆಯಾಗಬೇಕು? ಜಾತಿಯ ಬಗ್ಗೆ ಚರ್ಚೆಯಾಗಬೇಕೊ ಅಥವಾ ಅಭಿವೃದ್ಧಿ ಬಗ್ಗೆಯೂ ದೇವೇಗೌಡ (HD Devegowda) ರು ಮೊದಲ ಬಾರಿ ಮಂತ್ರಿಯಾಗಿದ್ದು, ರಾಮಕೃಷ್ಣ ಹೆಗಡೆ ಕಾಲದಲ್ಲಿ ರಾಮಕೃಷ್ಣ ಹೆಗಡೆ ಯಾವ ಜಾತಿ? ಜಾತಿ ರಾಜಕಾರಣ ಮಾಡುವವರು ಜಾತ್ಯತೀತರು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡವರು ಕೋಮುವಾದಿಗಳ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಸಿವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಜಮೀರ್

    ಕೆಆರ್‍ಎಸ್‍ (KRS Dam) ಗೆ ಹಾರಿ ಶಿಕ್ಷಕ ಆತ್ಮಹತ್ಯೆ ಆರೋಪದ ಬಗ್ಗೆ ಮಾತನಾಡಿ, ಯಾರೋ ಎಲ್ಲೂ ಹೋಗಿ ಸತ್ತರೆ ಯಾರು ಜವಬ್ದಾರಿ? ಹೊಳೆನರಿಸಿಪುರದಲ್ಲಿ ರೈಲ್ವೆ ಟ್ರ್ಯಾಕ್‍ಗೆ ಬಿದ್ದು ಇಬ್ಬರು ಸತ್ತರೆ ಅದಕ್ಕೆ ಹೊಣೆ ಯಾರು? ಸತ್ಯಹರಿಶ್ಚಂದ್ರ ಥರ ಇರೋರು ಬೇರೆಯವರ ಮೇಲೆ ಆರೋಪ ಮಾಡಬಹುದು. ಜಂತಕಲ್ ಮೈನಿಂಗ್ ಕೇಸ್ (Janthakal mining case) ಯಾರ ಮೇಲೆ ಇದೆ ಯಾರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ನಾನು ಜಾಮೀನಿನ ಮೇಲೆ ಆಚೆ ಇಲ್ಲ ಇಂದು ತಿರುಗೇಟು ನೀಡಿದರು. ಹೆಚ್‍ಡಿಕೆಗೆ ಪುರೋಹಿತರು ಅಡ್ಡಗಟ್ಟಿದ ವಿಚಾರವಾಗಿ ಮಾತನಾಡಿ ಆಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎಂದರು.

    ಬಿಜೆಪಿಯಲ್ಲಿ ಯಡಿಯೂರಪ್ಪ (BS Yediyurappa) ಕಡೆಗಣನೆ ಹೆಚ್‍ಡಿಕೆ ಆರೋಪದ ಬಗ್ಗೆ ಮಾತನಾಡಿ, ಯಡಿಯೂರಪ್ಪ ಜೊತೆ ಯಾವಾಗಲೂ ಕುಮಾರಸ್ವಾಮಿ ನಿಂತಿಲ್ಲ, ಅವರ ಜೊತೆ ನಿಂತಿದ್ದರೆ ಅವರ ಬಗ್ಗೆ ಮಾತನಾಡಲು ನೈತಿಕತೆ ಇರುತ್ತಿತ್ತು. ಸಿಂಪತಿಗೂ ಕೂಡ ಸರಕಾರ ಮಾಡಲು ಬಿಡಲಿಲ್ಲ ಕಾಂಗ್ರೆಸ್ (Congress) ನವರ ಜೊತೆ ಸೇರಿ ಸಿಎಂ ಆದವರು ಹೆಚ್‍ಡಿಕೆ, ಬಿಎಸ್ ವೈ ಆನಂದದಿಂದ ಪಕ್ಷದಲ್ಲಿ ಇದ್ದಾರೆ ಅವರು ಆನಂದದಿಂದ ಇರೋದನ್ನು ನೋಡಿ ಇವರಿಗೆ ಸಂಕಟ ಅವರು ಬೆಳಸಿದ ಪಕ್ಷ ಬಿಜೆಪಿ, ಬಿಜೆಪಿಯಿಂದ ಬೆಳೆದ ನಾಯಕ ಬಿಎಸ್‍ವೈ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

    ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

    ಅಹಮದಾಬಾದ್: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ಅನ್ನು ವಿಸರ್ಜಿಸುವ ಮಹಾತ್ಮ ಗಾಂಧಿಯವರ (Mahatma Gandhi) ಕನಸನ್ನು ನನಸಾಗಿಸುವ ಸಮಯ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಗುಜರಾತ್‌ನಲ್ಲಿ (Gujarat) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಪೋರಬಂದರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ ಎಂದು ಹೇಳಿದರು.

    ಭಾರತಕ್ಕೆ ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಗಾಂಧಿ ಸೂಚಿಸಿದ್ದರು. ಅಧಿಕಾರದ ಲಾಲಸೆಗೆ ಅದನ್ನು ಮುಂದುವರಿಸಲಾಯಿತು. ಆದರೆ ಕಾಂಗ್ರೆಸ್ ಎಂದೂ ಜನಪರ ಕೆಲಸ ಮಾಡಲಿಲ್ಲ. ಕಾಂಗ್ರೆಸ್‌ಗಿಂತ ಭಿನ್ನವಾಗಿ ಬಿಜೆಪಿ ಯಾವಾಗಲೂ ತನ್ನ ಭರವಸೆಗಳನ್ನು ಈಡೇರಿಸುತ್ತ ಬಂದಿದೆ ಎಂದರು. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

    ಬಿಜೆಪಿಗೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಬಾಪು ಅವರ ಕಾಂಗ್ರೆಸ್ ಅನ್ನು ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ ಎಂದು ಅವರು ಹೇಳಿದರು.

    ಯೋಗಿ ಆದಿತ್ಯನಾಥ್ ಅವರು ಪಕ್ಷದ ಅಭ್ಯರ್ಥಿ ಬಾಬುಭಾಯಿ ಬೋಖಿರಿಯಾ ಪರ ಗುಜರಾತ್‌ನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಗುಜರಾತ್‌ನ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    Live Tv
    [brid partner=56869869 player=32851 video=960834 autoplay=true]

  • ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ: ಗಾಂಧಿ ಮರಿ ಮೊಮ್ಮಗನ ಸ್ಫೋಟಕ ಹೇಳಿಕೆ

    ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ: ಗಾಂಧಿ ಮರಿ ಮೊಮ್ಮಗನ ಸ್ಫೋಟಕ ಹೇಳಿಕೆ

    ಮುಂಬೈ: ವಿನಾಯಕ ದಾಮೋದರ್ ಸಾವರ್ಕರ್ (Savarkar) ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆಯೊಂದನ್ನು ನೀಡಿದ ಬಳಿಕ ರಾಜಕೀಯ ವಾತಾವರಣ ಬಿಸಿಯಾಗಿದೆ. ರಾಹುಲ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾದರೆ, ಶಿವಸೇನೆ ಕೂಡಾ ಅವರ ಹೇಳಿಕೆಯನ್ನು ಒಪ್ಪುವುದಿಲ್ಲ, ಇದು ಪಕ್ಷದಲ್ಲಿ ವಿಭಜನೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

    ಈ ನಡುವೆ ಮಹಾತ್ಮ ಗಾಂಧಿಯವರ (Mahatma Gandhi) ಮರಿಮೊಮ್ಮಗ ತುಷಾರ್ ಗಾಂಧಿ (Tushar Gandhi) ಸಾವರ್ಕರ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೇ ನಾಥೂರಾಂ ಗೋಡ್ಸೆ (Nathuram Godse) ಅವರಿಗೆ ಬಾಪು ಅವರನ್ನು ಕೊಲ್ಲಲು ಸಮರ್ಥ ಬಂದೂಕನ್ನು ಪಡೆಯಲು ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಬಳಿಕ ಇದೀಗ ತುಷಾರ್ ಅವರ ಹೇಳಿಕೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ.

    ಟೀಟ್‌ನಲ್ಲೇನಿದೆ?
    ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದಲ್ಲದೇ, ಬಾಪು ಅವರನ್ನು ಕೊಲ್ಲಲು ನಾಥೂರಾಂ ಗೋಡ್ಸೆಗೆ ಸಮರ್ಥ ಬಂದೂಕನ್ನು ಹುಡುಕಲು ಸಹಾಯ ಮಾಡಿದ್ದರು. ಬಾಪು ಹತ್ಯೆಗೂ 2 ದಿನಗಳ ಮೊದಲು ಗೋಡ್ಸೆ ಬಳಿ ಪ್ರಬಲವಾದ ಯಾವುದೇ ಶಸ್ತ್ರಗಳಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ – ಮುತಾಲಿಕ್

    ಟ್ವೀಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ತುಷಾರ್ ಗಾಂಧಿ ತಮ್ಮ ಹೇಳಿಕೆಯನ್ನು ವಿವರಿಸಿದ್ದಾರೆ. ನಾನು ಯಾವುದೇ ಆರೋಪ ಮಾಡುತ್ತಿಲ್ಲ. ಇತಿಹಾಸದಲ್ಲಿ ದಾಖಲಾಗಿರುವುದನ್ನು ಹೇಳುತ್ತಿದ್ದೇನೆ. ಪೊಲೀಸ್ ಎಫ್‌ಐಆರ್ ಪ್ರಕಾರ ನಾಥೂರಾಂ ಗೋಡ್ಸೆ ಮತ್ತು ವಿನಾಯಕ ಆಪ್ಟೆ ಸಾವರ್ಕರ್ ಅವರು 1948 ರ ಜನವರಿ 26, 27 ರಂದು ಭೇಟಿಯಾಗಿದ್ದರು. ಅವರ ಭೇಟಿಯಾಗುವವರೆಗೂ ಗೋಡ್ಸೆ ಬಳಿ ಬಂದೂಕು ಇರಲಿಲ್ಲ. ಅವರು ಬಂದೂಕು ಹುಡುಕುತ್ತಾ ಮುಂಬೈನಾದ್ಯಂತ ಸುತ್ತಾಡಿದ್ದಾರೆ. ಆದರೆ ಈ ಭೇಟಿಯ ಬಳಿಕ ಅವರು ನೇರವಾಗಿ ದೆಹಲಿಗೆ ಹೋಗಿ, ಅಲ್ಲಿಂದ ಗ್ವಾಲಿಯರ್‌ಗೆ ಹೋದರು. ಅಲ್ಲಿ ಅವರಿಗೆ ಒಳ್ಳೆಯ ಪಿಸ್ತೂಲ್ ಸಿಕ್ಕಿದೆ. ಇದೆಲ್ಲವೂ ಬಾಪು ಹತ್ಯೆಯ 2 ದಿನಗಳ ಮೊದಲು ನಡೆದಿದೆ. ಇದು ಆರೋಪ ಅಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

    Live Tv
    [brid partner=56869869 player=32851 video=960834 autoplay=true]

  • ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

    ನವದೆಹಲಿ: ಕಾಂಗ್ರೆಸ್ (Congress) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ರಾಜ್‍ಘಾಟ್‍ನಲ್ಲಿ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

    ನವದೆಹಲಿಯಲ್ಲಿ (New Delhi) ಇಂದು ನಡೆಯುವ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು, 24 ವರ್ಷಗಳಲ್ಲೇ ಮೊದಲ ಬಾರಿಗೆ ಗಾಂಧಿಯೇತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಭಾರತ್ ಜೋಡೋ (Bharat Jodo Yatra) ಪಾದಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.

    ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದರು.

    ಗಾಂದಿ ಕುಟುಂಬಕ್ಕೆ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ಕ್ಯಾಬಿನೆಟ್ ಸಚಿವ- ಕಾರ್ಮಿಕ ಮತ್ತು ಉದ್ಯೋಗ, ರೈಲ್ವೆ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಗಳಲ್ಲಿ ವಿವಿಧ ಖಾತೆಗಳನ್ನು ಹೊಂದಿದ್ದಲ್ಲದೇ ಮತ್ತು ಕರ್ನಾಟಕ ಕಾಂಗ್ರೆಸ್‍ನ ಅಧ್ಯಕ್ಷರೂ ಮತ್ತು ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟಾದರೂ ಮನೋಧರ್ಮ ಮತ್ತು ಸ್ವಭಾವದಿಂದ ಸಮಚಿತ್ತರಾಗಿರುವ ಖರ್ಗೆ ಅವರು, ಯಾವುದೇ ರಾಜಕೀಯ ವಿವಾದಕ್ಕೀಡಾಗಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಮಹಾತ್ಮ ಗಾಂಧಿ ಮರಿ ಮೊಮ್ಮಗ ಸಲ್ಲಿಸಿದ್ದ ಅರ್ಜಿ ವಜಾ

    ಮಹಾತ್ಮ ಗಾಂಧಿ ಮರಿ ಮೊಮ್ಮಗ ಸಲ್ಲಿಸಿದ್ದ ಅರ್ಜಿ ವಜಾ

    ಅಹಮದಾಬಾದ್: ಸಬರಮತಿ ಆಶ್ರಮದ ಸುತ್ತ ನಡೆಯಲಿರುವ ಪುನರ್ ಅಭಿವೃದ್ಧಿ ಕಾರ್ಯಗಳಿಗೆ ತಡೆ ನೀಡುವಂತೆ ಕೋರಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದೆ. ಆಶ್ರಮಕ್ಕೆ ಯಾವುದೇ ಧಕ್ಕೆಗಳಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಕೋರ್ಟ್ ಅರ್ಜಿ ವಜಾ ಮಾಡಿದೆ.

    ಸಬರಮತಿ ಆಶ್ರಮದ ಸುತ್ತ 55 ಎಕರೆ ಭೂಮಿಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಆಶ್ರಮಕ್ಕೆ ಧಕ್ಕೆಯಾಗಲಿದೆ ಮತ್ತು ತನ್ನ ಮೂಲ ಸಂಸ್ಕೃತಿಯನ್ನು ಕಳೆದುಕೊಳ್ಳಲಿದೆ. ಹೀಗಾಗಿ ಕಾಮಗಾರಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ : KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಜೆ ಶಾಸ್ತ್ರಿ ಅವರನ್ನೊಳಗೊಂಡ ಪೀಠವು, ಈ ಯೋಜನೆಯು ಮಹಾತ್ಮ ಗಾಂಧಿಯವರ ಆಲೋಚನೆಗಳು ಮತ್ತು ತತ್ವಶಾಸ್ತ್ರವನ್ನು ಉತ್ತೇಜಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೇ ಗಾಂಧಿ ಆಶ್ರಮವು ಎಲ್ಲಾ ವಯೋಮಾನದ ಮನುಕುಲಕ್ಕೆ ಕಲಿಕೆಯ ಸ್ಥಳವಾಗಿದೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್‌ – ಜೆಡಿಎಸ್‌ ನಾಯಕನ ನಗರ ಸಭೆ ಸದಸ್ಯತ್ವ ರದ್ದು

    court order law

    ವಿವಾರಣೆ ವೇಳೆ ಅಸ್ತಿತ್ವದಲ್ಲಿರುವ ಗಾಂಧಿ ಆಶ್ರಮಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಮತ್ತು ಆಶ್ರಮದ ಮೂಲ ಸ್ವರೂಪ ಬದಲಾವಣೆ ಮಾಡುವುದಿಲ್ಲ, ಆಶ್ರಮದ ಸುತ್ತಮುತ್ತಲಿನ 55 ಎಕರೆ ಭೂಮಿಯನ್ನು ಮಾತ್ರ ಮರು ಅಭಿವೃದ್ಧಿಪಡಿಸುತ್ತದೆ ಎಂದು ಅಡ್ವೊಕೇಟ್ ಜನರಲ್ ಕಮಲ್ ತ್ರಿವೇದಿ ಸಲ್ಲಿಸಿದ ಸಲ್ಲಿಕೆಯನ್ನು ಕೋರ್ಟ್ ಪರಿಗಣಿಸಿದೆ.

    ಈ ಅರ್ಜಿಯನ್ನು ಈ ಮೊದಲು ಸುಪ್ರೀಂಕೋರ್ಟ್‍ಗೆ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠವು ವಿವರವಾದ ವಿಚಾರಣೆಯ ನಂತರ ತೆಗೆದುಕೊಳ್ಳಬೇಕಾದ ಹೊಸ ನಿರ್ಧಾರಕ್ಕಾಗಿ ವಿಷಯವನ್ನು ಪಟ್ಟಿ ಮಾಡಲು ಮತ್ತೆ ಹೈಕೋರ್ಟ್‍ಗೆ ವರ್ಗಾಯಿಸಿತು.

    Live Tv
    [brid partner=56869869 player=32851 video=960834 autoplay=true]

  • ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ

    ನ್ಯೂಯಾರ್ಕ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ – ಎರಡು ವಾರಗಳಲ್ಲಿ 2ನೇ ಬಾರಿಗೆ ಕೃತ್ಯ

    ವಾಷಿಂಗ್ಟನ್: ನ್ಯೂಯಾರ್ಕ್‍ನ ದೇವಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಈ ತಿಂಗಳು ಎರಡನೇ ಬಾರಿಗೆ ಧ್ವಂಸಗೊಳಿಸಲಾಗಿದೆ.

    ಆಗಸ್ಟ್ 16ರ ಮುಂಜಾನೆ ಈ ಘಟನೆ ನಡೆದಿದ್ದು, ಯುನೈಟೆಡ್ ಸ್ಟೇಟ್ ನಲ್ಲಿ ಗಾಂಧಿ ಪ್ರತಿಮೆಗಳ ಮೇಲೆ ನಡೆಯುತ್ತಿರುವ ದಾಳಿಗಳಲ್ಲಿ ಇದು ಇತ್ತೀಚಿನದ್ದಾಗಿದೆ. 6 ಮಂದಿ ಸೇರಿಕೊಂಡು ಶ್ರೀ ತುಳಸಿ ಮಂದಿರದಲ್ಲಿರುವ ಗಾಂಧಿ ಪ್ರತಿಮೆಯನ್ನು ಸುತ್ತಿಗೆಯಿಂದ ಹೊಡೆದು ಧ್ವಂಸಗೊಳಿಸಿದ್ದಾರೆ. ಇದರ ಸುತ್ತಲೂ ಹಾಗೂ ರಸ್ತೆ ಮೇಲೆ ಪ್ರಚೋದನಕಾರಿ ಪದಗಳನ್ನು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ ಆಗಸ್ಟ್ 3 ರಂದು ಕೂಡ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಹೊಡೆದು ಹಾಕಿ, ಧ್ವಂಸಗೊಳಿಸಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಶಂಕಿತ 25 ರಿಂದ 30 ವರ್ಷ ವಯಸ್ಸಿನ ವ್ಯಕ್ತಿಗಳ ವೀಡಿಯೋವನ್ನು ಪೊಲೀಸರು ಇದೀಗ ಬಿಡುಗಡೆಗೊಳಿಸಿದ್ದಾರೆ. ವೀಡಿಯೋದಲ್ಲಿ ಆರೋಪಿಗಳು ಬಿಳಿ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಪರಾರಿಯಾಗಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್‌ ಜೋಶಿ‌

    ಈ ಘಟನೆಯನ್ನು ನ್ಯೂಯಾರ್ಕ್ ಸ್ಟೇಟ್ ಅಸೆಂಬ್ಲಿ ಸದಸ್ಯೆ ಜೆನ್ನಿಫರ್ ರಾಜ್‍ಕುಮಾರ್ ಖಂಡಿಸಿದ್ದು, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ, ಕಾನೂನುಬದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ತುಳಸಿ ಮಂದಿರದಲ್ಲಿರುವ ಗಾಂಧಿ ಪ್ರತಿಮೆಯನ್ನು ಎರಡನೇ ಬಾರಿ ಧ್ವಂಸಗೊಳಿಸಲಾಗಿದ್ದು, ಈ ಬಾರಿ ಸಂಪೂರ್ಣವಾಗಿ ಪ್ರತಿಮೆ ಧ್ವಂಸಗೊಂಡಿದೆ. ಇದನ್ನೂ ಓದಿ: ಫಿನ್‌ಲ್ಯಾಂಡ್ ಪ್ರಧಾನಿಯ ಖಾಸಗಿ ವೀಡಿಯೋ ಲೀಕ್ – ಮುಚ್ಚಿಡಲು ಏನೂ ಇಲ್ಲವೆಂದ ಮರಿನ್

    Live Tv
    [brid partner=56869869 player=32851 video=960834 autoplay=true]

  • ಕೆನಡಾ ಬಳಿಕ ಪಂಜಾಬ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

    ಕೆನಡಾ ಬಳಿಕ ಪಂಜಾಬ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

    ಚಂಡೀಗಢ: ಸಾರ್ವಜನಿಕ ಉದ್ಯಾನವನದಲ್ಲಿ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ಪಂಜಾಬ್‍ನ ರಮ್ಮನ್ ಮಂಡಿಯಲ್ಲಿ ನಡೆದಿದೆ.

    ಗಾಂಧೀಜಿ ಪ್ರತಿಮೆಯನ್ನು ರಾಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸಲಾಗಿತ್ತು. ಅದನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದಾದ ಬಳಿಕ ಪ್ರತಿಮೆಯ ಮುಖವನ್ನು ತೆಗೆದುಕೊಂಡು ಹೋಗಿದ್ದಾರೆ.

    ಸ್ಟೇಷನ್ ಹೌಸ್ ಆಫೀಸರ್ ಹರ್ಜೋತ್ ಸಿಂಗ್ ಮಾನ್ ಮಾತನಾಡಿ, ಘಟನೆ ಸಂಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ರಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಅಪರಾಧಿಗಳನ್ನು ಪತ್ತೆಹಚ್ಚಲು ಘಟನೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

    ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸಿಂಗ್ಲಾ ಮಾತನಾಡಿ, ಘಟನೆಯ ಹಿಂದಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: 50ರಲ್ಲಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುವೆ: ಏಕನಾಥ್ ಶಿಂಧೆ

    ಇತ್ತೀಚೆಗಷ್ಟೇ ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯ ಮೇಲೆ ದುಷ್ಕರ್ಮಿಗಳು ಕೆಟ್ಟದಾಗಿ ಬರೆದು, ವಿಷ್ಣು ದೇವಾಲಯದ ಕೆಲವು ಪ್ರತಿಮೆಗಳನ್ನು ವಿರೂಪಗೊಳಿಸಿದ್ದರು. ಇದನ್ನೂ ಓದಿ: ಕೆನಡಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ ದುಷ್ಕರ್ಮಿಗಳು

    Live Tv
    [brid partner=56869869 player=32851 video=960834 autoplay=true]