Tag: ಮಹಾಬಲಿಪುರಂ

  • ಮಹಾಬಲಿಪುರಂನಲ್ಲಿ ಬೀಡು ಬಿಟ್ಟ ಸುದೀಪ್: ಸಾಹಸ ಸನ್ನಿವೇಶದಲ್ಲಿ ಕಿಚ್ಚ

    ಮಹಾಬಲಿಪುರಂನಲ್ಲಿ ಬೀಡು ಬಿಟ್ಟ ಸುದೀಪ್: ಸಾಹಸ ಸನ್ನಿವೇಶದಲ್ಲಿ ಕಿಚ್ಚ

    ಸುದೀಪ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮಹಾಬಲಿಪುರಂನಲ್ಲಿ (Mahabalipuram) ನಡೆಯುತ್ತಿದೆ. ಸಿನಿಮಾದ ಪ್ರಮುಖ ಸಾಹಸ ದೃಶ್ಯವನ್ನು ಚಿತ್ರೀಕರಣ ಮಾಡಲಾಗುತ್ತಿದ್ದು, ಈ ಸನ್ನಿವೇಶದ ಶೂಟಿಂಗ್ ನಲ್ಲಿ ಕಿಚ್ಚ ಭಾಗಿಯಾಗಿದ್ದಾರೆ. ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದ್ದು, ಇದಾದ ನಂತರ ಕಿಚ್ಚ ಯಾವ ಸಿನಿಮಾಗೆ ಕಾಲ್ ಶೀಟ್ ಕೊಟ್ಟಿದ್ದಾರೆ ಎನ್ನುವ ಕುತೂಹಲ ಮೂಡಿದೆ.

    ‘ಮ್ಯಾಕ್ಸ್’ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ತಮಿಳು ನಾಡಿನ (Tamil Nadu) ಮಹಾಬಲಿಪುರಂನಲ್ಲಿ ನಡೆಯುತ್ತಿದೆ. ಕಿಚ್ಚ ಸುದೀಪ್ ಸೇರಿದಂತೆ ಹಲವು ಕಲಾವಿದರು ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಈ ಮಾಹಿತಿಯನ್ನೂ ಸ್ವತಃ ಕಲಾವಿದರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮೊನ್ನೆಯಷ್ಟೇ ಸುದೀಪ್ (Sudeep) ಮ್ಯಾಕ್ಸ್ ಚಿತ್ರದ ಬಗ್ಗೆ ಹೊಸ ಅಪ್ ಡೇಟ್ ನೀಡಿದ್ದರು. 15 ದಿನಗಳ ಕಾಲ ಶೂಟಿಂಗ್ ಮುಗಿಸಿದರೆ, ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗತ್ತೆ. ನಂತರ ಮೇ ತಿಂಗಳಿನಲ್ಲಿ ಚಿತ್ರ ರಿಲೀಸ್ (Release) ಆಗಬಹುದು ಅಂದಿದ್ದರು.

     

    ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಲೇ ಇರುತ್ತಾರೆ. ಅದಕ್ಕೆ ಈ ಹಿಂದೆಯೂ ಪ್ರತಿಕ್ರಿಯೆ ನೀಡಿದ್ದರು ಸುದೀಪ್,  ‘ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ (Shooting) ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ’ ಅನ್ನೋದು ಸುದೀಪ್ ಅವರ ಪ್ರಶ್ನೆಯಾಗಿತ್ತು. ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದರು.

  • 50ನೇ ಸಿನಿಮಾವರೆಗೂ ಸುದೀಪ್ ಕಾಲ್ ಶೀಟ್ ಸೋಲ್ಡ್ ಔಟ್

    50ನೇ ಸಿನಿಮಾವರೆಗೂ ಸುದೀಪ್ ಕಾಲ್ ಶೀಟ್ ಸೋಲ್ಡ್ ಔಟ್

    ಕಿಚ್ಚ ಸುದೀಪ್ (Sudeep) ಸದ್ಯ 46ನೇ ಸಿನಿಮಾದ (Cinema) ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಮೂಲಗಳ ಪ್ರಕಾರ ಅವರ ತಮ್ಮ 50ನೇ ಸಿನಿಮಾವರೆಗೂ ಕಾಲ್ ಶೀಟ್ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಂದಕಿಶೋರ್, ಅನೂಪ್ ಭಂಡಾರಿ ಸೇರಿದಂತೆ ಹಲವು ನಿರ್ದೇಶಕರ ಚಿತ್ರಗಳಲ್ಲಿ ಅವರು ನಟಿಸಲಿದ್ದಾರೆ. ಅಲ್ಲಿಗೆ ಸುದೀಪ್ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ನಟರ ಸಾಲಿಗೆ ಸೇರ್ಪಡೆಗೊಂಡಿದ್ದಾರೆ.

    ಸದ್ಯ ಸುದೀಪ್ ಚೆನ್ನೈನಲ್ಲಿ (Chennai) ಬೀಡುಬಿಟ್ಟಿದ್ದಾರೆ. ಅವರ ನಟನೆಯ ಕೆ-46 ಸಿನಿಮಾದ ಶೂಟಿಂಗ್ ಮಹಾಬಲಿಪುರಂನಲ್ಲಿ (Mahabalipuram)ನಡೆಯುತ್ತಿದೆ. ಈ ಸಿನಿಮಾದ ಶೂಟಿಂಗ್ ಗಾಗಿ ಬೃಹತ್ ಪ್ರಮಾಣದ ಸೆಟ್ ಗಳನ್ನು ಹಾಕಲಾಗಿದೆ. ಒಂದೇ ಹಂತದಲ್ಲೇ ಈ ಸಿನಿಮಾದ ಚಿತ್ರೀಕರಣ ಮಾಡಲು ಸಿದ್ದತೆ ಮಾಡಿಕೊಂಡಿದೆ ಚಿತ್ರತಂಡ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ

    ಕಾಲಿವುಡ್ ನ ಖ್ಯಾತ ನಿರ್ಮಾಣ ಸಂಸ್ಥೆ ‘ವಿ ಕ್ರಿಯೇಷನ್’ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಕಲೈಪುಲಿ ಎಸ್ ಧಾನು ಚಿತ್ರದ ನಿರ್ಮಾಪಕರು. ಸಿನಿಮಾದ ವಿಶೇಷವೆಂದರೆ ಮೊದಲು ಚಿತ್ರವನ್ನು ಕನ್ನಡದಲ್ಲೇ ಶೂಟ್ ಮಾಡಿ, ನಂತರ ತಮಿಳಿಗೆ ಡಬ್ ಮಾಡುತ್ತಾರಂತೆ ನಿರ್ದೇಶಕರು. ಹಾಗಾಗಿ ತಂತ್ರಜ್ಞರ ಯಾದಿಯಲ್ಲಿ ಬಹುತೇಕ ಕನ್ನಡಿಗರೇ ಇದ್ದಾರೆ.

     

    ಸತತ ಚಿತ್ರೀಕರಣದ ನಂತರ ಸಣ್ಣದೊಂದು ಬ್ರೇಕ್ ತೆಗೆದುಕೊಂಡು, ಸೆಪ್ಟಂಬರ್ 2ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಸುದೀಪ್. ಅಭಿಮಾನಿಗಳ ಜೊತೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಮತ್ತೆ ಚಿತ್ರೀಕರಣಕ್ಕೆ ವಾಪಸ್ಸಾಗಲಿದ್ದಾರೆ. ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಈಗಿನಿಂದಲೇ ಅಭಿಮಾನಿಗಳು ಕೂಡ ಸಿದ್ದತೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಿಚ್ಚ 46’ ಚಿತ್ರಕ್ಕೆ 65 ದಿನಗಳ ನಿರಂತರ ಚಿತ್ರೀಕರಣ: 5 ಭಾಷೆಗಳಲ್ಲಿ ಸಿನಿಮಾ

    ‘ಕಿಚ್ಚ 46’ ಚಿತ್ರಕ್ಕೆ 65 ದಿನಗಳ ನಿರಂತರ ಚಿತ್ರೀಕರಣ: 5 ಭಾಷೆಗಳಲ್ಲಿ ಸಿನಿಮಾ

    ವಿವಾದದ ಕಾರಣದಿಂದ ಬೇಸತ್ತಿದ್ದ ಕಿಚ್ಚನ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸುದೀಪ್ ಅವರ ಹೊಸ ಸಿನಿಮಾದ ಶೂಟಿಂಗ್ ನಾಳೆಯಿಂದ ಶುರುವಾಗಲಿದ್ದು, ಚೆನ್ನೈನಲ್ಲಿ ಸುದೀಪ್ ಬೀಡು ಬಿಡಲಿದ್ದಾರೆ. ನಿರಂತರ ಚಿತ್ರೀಕರಣಕ್ಕೆ ನಿರ್ದೇಶಕರು ಪ್ಲ್ಯಾನ್ ಮಾಡಿದ್ದು, ಚೆನ್ನೈ ಮತ್ತು ಸುತ್ತಮುತ್ತ ಶೂಟಿಂಗ್ ನಡೆಯಲಿದೆ ಎಂದು ಹೇಳಲಾಗುತ್ತಿದೆ.

    ಕಿಚ್ಚ 46 (Kichcha 46) ಸಿನಿಮಾದ ಶೂಟಿಂಗ್ ಶುರುವಾಗುವುದಕ್ಕೂ ಮುನ್ನ ಸುದೀಪ್ ತಿರುಪತಿಗೆ (Thirupathi Thimmappa) ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹಲವು ದಿನಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಕಿಚ್ಚ, ದೇವರ ದರ್ಶನ ಪಡೆದುಕೊಂಡು ನಿರಾಳರಾಗಿದ್ದಾರೆ. ಅಲ್ಲದೇ, ಹೊಸ ಸಿನಿಮಾದ ಚಿತ್ರೀಕರಣ ನಿರಾತಂಕವಾಗಿ ನಡೆಯಲಿ ಎಂದು ಬೇಡಿಕೊಂಡಿದ್ದಾರೆ. ಇದನ್ನೂ ಓದಿ:ಓ ಮೈ ಗಾಡ್: ಅಕ್ಷಯ್ ಕುಮಾರ್ ಶಿವನಾಗೋದು ಬೇಡ ಅಂದಿತಾ ಸೆನ್ಸಾರ್ ಮಂಡಳಿ?

    ʼವಿಕ್ರಾಂತ್ ರೋಣ’ (Vikrant Rona) ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಬಿಜೆಪಿ ಕ್ಷೇತ್ರದ ಪರ ಪ್ರಚಾರಕ್ಕೆ ಕಣಕ್ಕೆ ಇಳಿದರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.

     

    ಒಟ್ಟು 65 ದಿನಗಳ ಸುದೀರ್ಘ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ನಡೆಯಲಿದ್ದು, ಐದು ಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ(Mahabalipuram) ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ. ಸಿನಿಮಾದ ಮೊದಲ ಝಲಕ್ ಸಂಚಲನ ಮೂಡಿಸಿದೆ. ನಾನು ಮನುಷ್ಯನಲ್ಲ ರಾಕ್ಷಸ ಎನ್ನುವ ಕಿಚ್ಚನ ಖಡಕ್ ಡೈಲಾಗ್ ಫ್ಯಾನ್ಸ್ ಕಿಕ್ ಕೊಟ್ಟಿತ್ತು. ಈಗ ಸಿನಿಮಾ ಚಿತ್ರೀಕರಣಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಜಯ್ ಕಾರ್ತಿಕೇಯ ಅವರು ‘K 46ʼ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೇ ಸಾಗರವೇ ನಿನಗೆ ನನ್ನ ವಂದನೆ: ಸ್ವರಚಿತ ಕವನ ಹಂಚಿಕೊಂಡ ಮೋದಿ

    ಹೇ ಸಾಗರವೇ ನಿನಗೆ ನನ್ನ ವಂದನೆ: ಸ್ವರಚಿತ ಕವನ ಹಂಚಿಕೊಂಡ ಮೋದಿ

    ನವದೆಹಲಿ: ‘ಹೇ ಸಾಗರವೇ ನಿನಗೆ ನನ್ನ ವಂದನೆ’ ಎಂಬ ಸ್ವರಚಿತ ಕವನನ್ನು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಭಾರತ ಮತ್ತು ಚೀನಾ ನಡುವಿನ ಅನೌಪಚಾರಿಕ ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮಿಳುನಾಡಿನ ದೇಗುಲ ನಗರಿ ಮಹಾಬಲಿಪುರಂನಲ್ಲಿ ಶುಕ್ರವಾರ ಹಾಗೂ ಶನಿವಾರ ವಾಸ್ತವ್ಯ ಹೂಡಿದ್ದರು. ಮೊದಲ ದಿನ ತಮಿಳುನಾಡಿನ ಸಾಂಪ್ರದಾಯಿಕ ಧಿರಿಸು ಬಿಳಿ ಪಂಚೆ, ಬಿಳಿ ಅಂಗಿ, ಶಲ್ಯ ಧರಿಸಿದ್ದ ಮೋದಿ, ಚೀನಾ ಅಧ್ಯಕ್ಷ ಜಿನ್‍ಪಿಂಗ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಆರಾಮವಾಗಿ ಸುತ್ತಾಡುತ್ತಾ ಪಲ್ಲವರ ಕಾಲದ ದೇಗುಲಗಳ ಪರಿಚಯ ಮಾಡಿಕೊಟ್ಟರು. ಮಹಾಭಾರತದ ಅರ್ಜುನ ತಪಸ್ಸು ಮಾಡಿದ್ದ ಸ್ಥಳ, ಒಂದೇ ಕಲ್ಲಿನಲ್ಲಿ ಕೆತ್ತಿದ ಪಂಚರಥ, ಹೀಗೆ ಹಲವು ಸ್ಥಳಗಳ ಮಹಿಮೆಯನ್ನು ವಿವರಿಸಿದ್ದರು.

    ಪ್ರಧಾನಿ ಮೋದಿ ಶನಿವಾರ ಬೆಳಗ್ಗೆ ತಮ್ಮ ವಾಯು ವಿಹಾರದ ಸಮಯದಲ್ಲಿ ಮಾಮಲ್ಲಪುರಂ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಬಂಡೆಯ ಮೇಲೆ ಕುಳಿತು ಸಮುದ್ರ ಅಲೆಗಳ ಆಟ, ಅಲ್ಲಿನ ಸೊಬಗನ್ನು ಸವಿದಿದ್ದರು. ಈ ಸನ್ನಿವೇಶವನ್ನು ಮೋದಿ ಕವನದ ಮೂಲಕ ವಿವರಿಸಿದ್ದಾರೆ.

    ಪ್ರಧಾನಿ ಮೋದಿ ತಮ್ಮ ಮಾತೃ ಭಾಷೆ ಗುಜರಾತಿಯಲ್ಲಿ ಕವನ ಬರೆಯಲು ಇಷ್ಟಪಡುತ್ತಾರೆ. ಜೊತೆಗೆ ಮನದ ಮಾತನ್ನು ಕವನ ರೂಪದಲ್ಲಿ ಹಿಂದಿ ಭಾಷೆಯಲ್ಲಿಯೂ ಬರೆಯುತ್ತಾರೆ. 2018ರಲ್ಲಿ ಅವರು ‘ರಾಮತಾ ರಾಮ್ ಅಕೇಲ್’ ಶೀರ್ಷಿಕೆ ಅಡಿ ಗುಜರಾತಿ ಭಾಷೆಯ ಕವನವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

    ಮಾಮಲ್ಲಪುರಂ ಸಮುದ್ರ ಬಂಡೆಯ ಮೇಲೆ ಕುಳಿತು ಸ್ವಲ್ಪ ಕಾಲ ಪ್ರಧಾನಿ ಕಳೆದ ಮೋದಿ, ಬೀಚ್‍ನಲ್ಲಿ ಹೆಜ್ಜೆ ಹಾಕಿದ್ದರು. ಈ ವೇಳೆ ಅಲ್ಲಿಯೇ ಬಿದ್ದಿದ್ದ ಪ್ಲಾಸ್ಟಿಕ್ ಕಸವನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯವನ್ನು ಮಾಡಿದ್ದರು. ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್, ಸಂಗ್ರಹಿಸಲಾದ ಕಸವನ್ನು ಹೋಟೆಲ್‍ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಢ ದೇಹ, ಆರೋಗ್ಯವನ್ನು ಪಡೆಯೋಣ ಎಂದು ಕರೆಕೊಟ್ಟಿದ್ದರು.

    ಆದರೆ ಈ ಕುರಿತು ವ್ಯಂಗ್ಯವಾಡಿದ್ದ ತಮಿಳುನಾಡು ಕಾಂಗ್ರೆಸ್, ಇದೊಂದು ಮೋದಿ ನಾಟಕ. ಭಾರತ ಮತ್ತು ಚೀನಾ ಅನೌಪಚಾರಿಕ ಶೃಂಗಸಭೆ ಉದ್ದೇಶದಿಂದ ಬೀಚ್‍ನಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛಗೊಳಿಸಲಾಗಿತ್ತು ಎಂದಿತ್ತು. ಆದಾಗ್ಯೂ ಹೆಚ್ಚಿನ ಸಂಖ್ಯೆಯಲ್ಲಿ ನೆಟ್ಟಿಗರು ಪ್ರಧಾನಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಇಂದು ಮೋದಿ, ಜಿನ್‍ಪಿಂಗ್ ಮಾತುಕತೆ – ಮಹಾಬಲಿಪುರಂನಲ್ಲೇ ಭೇಟಿ ಯಾಕೆ? ಅಂಥ ವಿಶೇಷತೆ ಏನಿದೆ?

    ಇಂದು ಮೋದಿ, ಜಿನ್‍ಪಿಂಗ್ ಮಾತುಕತೆ – ಮಹಾಬಲಿಪುರಂನಲ್ಲೇ ಭೇಟಿ ಯಾಕೆ? ಅಂಥ ವಿಶೇಷತೆ ಏನಿದೆ?

    ಚೆನ್ನೈ: ಉಗ್ರ ಹಫೀಜ್ ಸಯೀದ್, ಕಾಶ್ಮೀರ ವಿಷಯ ಸೇರಿದಂತೆ ಭಾರತದ ವಿರುದ್ಧವಾಗಿ ಬಹಿರಂಗವಾಗಿ ಪಾಕಿಸ್ತಾನದ ಬೆಂಬಲಕ್ಕೆ ನಿಂತಿರುವ ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ 2 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ.

    ಇಂದು ಮಧ್ಯಾಹ್ನ ಜಿನ್‍ಪಿಂಗ್ ಆಗಮಿಸಲಿರುವ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣ ಸಿಂಗಾರಗೊಂಡಿದೆ. ಎಷ್ಟರ ಮಟ್ಟಿಗೆ ಅಂದರೆ ಭಾರತ-ಚೀನಾ ಸಂಸ್ಕೃತಿ ಸಂಬಂಧ ಸಾರುವ ಚಿತ್ತಾರಗಳು ಗೋಡೆ, ರಸ್ತೆ ಮೇಲೆ ಕಂಗೊಳಿಸುತ್ತಿವೆ. ಮೀನಾಂಬಕ್ಕಂ ಪೊಲೀಸ್ ಠಾಣೆ ಬಳಿಯಿರುವ ಹಳೇ ಕಟ್ಟಡವನ್ನು ಉದ್ಯಾನವನವಾಗಿ ಪರಿವರ್ತಿಸಲಾಗಿದೆ. ವಿಮಾನ ನಿಲ್ದಾಣದಿಂದ ಮಹಾಬಲಿಪುರಂ ಅಥವಾ ಮಾಮಲ್ಲಪುರಂಗೆ ಬರಲಿರುವ ಜಿನ್‍ಪಿಂಗ್ ಜೊತೆ ಪ್ರಧಾನಿ ಮೋದಿ ಅನೌಪಚಾರಿಕವಾಗಿ ಚರ್ಚೆ ನಡೆಸಲಿದ್ದಾರೆ.

    ಇಂದು ಮಧ್ಯಾಹ್ನ 2 ಗಂಟೆಯ ಅಂದಾಜಿಗೆ ಚೀನಾ ಅಧ್ಯಕ್ಷ ಷಿ ಜಿನ್‍ಪಿಂಗ್ ಆಗಮಿಸಲಿದ್ದು, ಐತಿಹಾಸಿಕ ಮಹಾಬಲಿಪುರಂ ದೇವಾಲಯ, 4 ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಮಾಡಲಿದ್ದಾರೆ. ಕರಾವಳಿ ರಸ್ತೆಯ ಪ್ರತಿ 50-100 ಮೀಟರ್ ಗೂ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಅನೌಪಚಾರಿಕ ಶೃಂಗಸಭೆ ವೇಳೆ ದ್ವಿಪಕ್ಷೀಯ ಸಂಬಂಧ ವೃದ್ಧಿ ಬಗ್ಗೆ ಚರ್ಚೆ ನಡೆಸಲಿದ್ದು, ಜಾಗತಿಕ, ಪ್ರಾದೇಶಿಕ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತ ಮತ್ತು ಚೀನಾ ನಡುವೆ ಯಾವುದೇ ಒಪ್ಪಂದ ನಡೆಯುವುದಿಲ್ಲ.

    ಒಂದು ವೇಳೆ ಜಿನ್‍ಪಿಂಗ್ ಏನಾದರೂ ಕಾಶ್ಮೀರ ವಿಷಯ ಪ್ರಸ್ತಾಪಿಸಿದರೆ ವಿಶೇಷ ಸ್ಥಾನಮಾನ ರದ್ದುಗೊಳಿಸಲು ಇರುವ ಕಾರಣಗಳ ಬಗ್ಗೆ ಮೋದಿ ತಿಳಿಸಿ ಹೇಳಿದ್ದಾರೆ. ಲಡಾಖನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ರಚನೆ, ಅರುಣಾಚಲ ಪ್ರದೇಶದ ಜೊತೆಗಿನ ಗಡಿ ವಿವಾದದ ಬಗ್ಗೆಯೂ ಮೋದಿ ವಿವರಣೆ ನೀಡಿ ವಿಶ್ವಾಸ ವೃದ್ಧಿ ಕ್ರಮಗಳ ಪ್ರಸ್ತಾಪ ಇರಿಸುವ ಸಾಧ್ಯತೆ ಇದೆ.

    ಮಹಾಬಲಿಪುರಂ ಯಾಕೆ?
    ದೆಹಲಿ, ಮುಂಬೈ, ಬೆಂಗಳೂರು ಕೊನೇ ಪಕ್ಷ ಚೆನ್ನೈ ನಗರದಲ್ಲಾದರೂ ಭೇಟಿಯಾಗಬಹುದಿತ್ತಲ್ಲ. ಅದನ್ನು ಬಿಟ್ಟು ಮಹಾಬಲಿಪುರಂ ನಗರವನ್ನೇ ಚೀನಾದ ಅಧ್ಯಕ್ಷ ಷಿ ಜಿನ್‍ಪಿಂಗ್ ಆಯ್ಕೆ ಮಾಡಿಕೊಂಡಿದ್ದು ಯಾಕೆ ಎನ್ನುವ ಪ್ರಶ್ನೆಗೆ ಇತಿಹಾಸ ಉತ್ತರ ನೀಡುತ್ತದೆ.

    ಚೀನಾ- ಭಾರತದ ನಡುವೆ 2 ಸಾವಿರ ವರ್ಷಗಳ ಸಂಬಂಧ ಇದ್ದು ಚೀನಾ, ಆಗ್ನೇಯ ಏಷ್ಯಾದ ದೇಶಗಳ ರಫ್ತು-ಆಮದು ಹೆಬ್ಬಾಗಿಲು ಮಹಾಬಲಿಪುರಂ. ಪಲ್ಲವರ ಕಾಲದಲ್ಲಿ ಚೀನಾ ಜೊತೆ ರಕ್ಷಣೆ, ವ್ಯಾಪಾರದ ನಂಟು ಉತ್ತಮವಾಗಿತ್ತು. ಚೀನಾ ಜೊತೆ ಸಂಪರ್ಕ ಸಾಧಿಸಿದ್ದಕ್ಕೆ ಚೀನಾ ಲಿಪಿಯ ನಾಣ್ಯ, ಶಾಸನಗಳು ಪತ್ತೆಯಾಗಿವೆ. ಭಾರತ-ಚೀನಾ ನಡುವೆ ರೇಷ್ಮೆ, ಸಾಂಬಾರ ಪದಾರ್ಥಗಳ ವ್ಯಾಪಾರದ ವಹಿವಾಟು ಹೆಚ್ಚಾಗಿ ನಡೆಯುತಿತ್ತು. ಪಲ್ಲವರ ಕಾಲದಲ್ಲಿ ಕಾಂಚೀಪುರ ರೇಷ್ಮೆ ಉದ್ದಿಮೆಗೆ ಬೇಕಾದ ಕಚ್ಚಾವಸ್ತು ಚೀನಾದಿಂದ ಆಮದು ಆಗುತಿತ್ತು. ಚೀನೀ ಯಾತ್ರಿಕ ಹ್ಯೂಯೆನ್‍ತ್ಸಾಂಗ್ 7ನೇ ಶತಮಾನದಲ್ಲಿ ಕಾಂಚೀಪುರಕ್ಕೆ ಭೇಟಿ ನೀಡಿದ ಬಳಿಕ ಸಂಬಂಧ ಮತ್ತಷ್ಟು ಗಟ್ಟಿಯಾಯಿತು ಮತ್ತು ಈ ಅವಧಿಯಲ್ಲಿ ಚೀನಾಗೆ ಬೌದ್ಧಧರ್ಮವು ಪಸರಿಸಿತ್ತು ಎಂದು ಇತಿಹಾಸ ಹೇಳುತ್ತದೆ.

    ಮಹಾಬಲಿಪುರಂನಲ್ಲಿ ಅಂಥದ್ದೇನಿದೆ?
    ಮಹಾಬಲಿಪುರಂನ ಪ್ರಾಚೀನ ಹೆಸರು ಮಾಮಲ್ಲಪುರಂ ಆಗಿದ್ದು 7-9ನೇ ಶತಮಾನದಲ್ಲಿ ಪಲ್ಲವರ ಕಾಲದ ಪ್ರಮುಖ ಬಂದರು ನಗರಿ ಇದಾಗಿದೆ. ಚೆನ್ನೈನಿಂದ 50 ಕಿ.ಮೀ. ದೂರದಲ್ಲಿ ಬಂಗಾಳಕೊಲ್ಲಿ ಅಭಿಮುಖವಾಗಿರುವ ಮಾಮಲ್ಲಪುರಂ ಬಂದರು ಜೊತೆಗೆ ವಾಸ್ತುಶಿಲ್ಪ ಶ್ರೀಮಂತಿಕೆ ಹೊಂದಿದೆ. ಪಂಚರಥ, ಕೃಷ್ಣನ ಬೆಣ್ಣೆಮುದ್ದೆ ಬಂಡೆ, ಅರ್ಜುನ ತಪಸ್ಸಿನ ಶಿಲಾಕೆತ್ತನೆ, ತೀರ ಪ್ರದೇಶದಲ್ಲಿ ದೇವಾಲಯವಿದೆ. ಈ ಐತಿಹಾಸಿಕ ತಾಣ, ದೇವಾಲಯಗಳನ್ನು ಜಿನ್‍ಪಿಂಗ್-ಮೋದಿ ವೀಕ್ಷಿಸಲಿದ್ದಾರೆ. ಅದರಲ್ಲೂ ತೀರ ಪ್ರದೇಶದ ದೇವಾಲಯ ದಕ್ಷಿಣ ಭಾರತದ ಪುರಾತನ ದೇವಾಲಯವಾಗಿದ್ದು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದೆ. ಯೂರೋಪ್‍ನ ಪ್ರವಾಸಿಗ ಮಾರ್ಕೋಪೋಲೋ ಇಲ್ಲಿಗೆ ಭೇಟಿ ನೀಡಿದ್ದ.